📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಮಕ್ಕಳಿಗೆ ಪ್ರಕೃತಿ ಮತ್ತು ಸಕಲ ಜೀವಿಗಳನ್ನು ಪ್ರೀತಿಸುವುದನ್ನು ಕಲಿಸಿ

ಮಂಗಳೂರು: ಮಾನವ ಕುಲವು ಪ್ರಕೃತಿಯ ಜೊತೆಗೆ ಹೆಚ್ಚಿನ ವಿನಯ, ಕರುಣೆ ಮತ್ತು ಪೂಜ್ಯಭಾವನೆಯಿಂದ ಬದುಕಬೇಕು ಎಂದು ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿ (ಅಮ್ಮ) ಕರೆ ನೀಡಿದರು. ಮಂಗಳೂರಿನ ಬೋಳೂರಿನಲ್ಲಿರುವ ಮಾತಾ ಅಮೃತಾನಂದಮಯಿ ಮಠದಲ್ಲಿ ನಡೆದಿರುವ ಬ್ರಹ್ಮಸ್ಥಾನ ಮಹೋತ್ಸವದಲ್ಲಿ ಭಕ್ತರನ್ನುದ್ದೇಶಿಸಿ ಮಾತನಾಡಿದ ಅಮ್ಮ, ಮನುಷ್ಯನು ಸಹಮಾನವರೊಂದಿಗೆ ಸಹಕಾರದಿಂದ, ಪ್ರಕೃತಿಯೊಂದಿಗೆ ಸೌಹಾರ್ದತೆಯಿಂದ ಮತ್ತು ಈಶ್ವರನ ಜೊತೆಗೆ ಸಂಪರ್ಕವಿರಿಸಿಕೊಂಡು ಬದುಕುವುದನ್ನು ಕಲಿಯಬೇಕು ಎಂದು ಹೇಳಿದರು. ಸಾಂಕ್ರಾಮಿಕ ರೋಗಗಳು, ನೈಸರ್ಗಿಕ ವಿಕೋಪಗಳು ಮತ್ತು ಹವಾಮಾನ ವೈಪರೀತ್ಯಗಳು ಪ್ರಕೃತಿಯೊಂದಿಗಿನ ನಮ್ಮ ಸಂಬಂಧವನ್ನು ಮರುಚಿಂತನೆ ಮಾಡಲು ಮಾನವಕುಲಕ್ಕೆ ನೀಡುತ್ತಿರುವ ಎಚ್ಚರಿಕೆಯ ಕರೆಗಳಾಗಿವೆ ಎಂದು ಅವರು ತಿಳಿಸಿದರು.

ಜನರು, ಸಮುದಾಯಗಳು ಮತ್ತು ರಾಷ್ಟ್ರಗಳ ನಡುವಿನ ಸಂಘರ್ಷಗಳಲ್ಲಿ ಸಂಧಾನ ಹಾಗೂ ರಾಜಿ ಸೂತ್ರಗಳು ಕೆಲಸ ಮಾಡಬಹುದು, ಆದರೆ ಪ್ರಕೃತಿಯೊಂದಿಗೆ ಇವುಗಳು ನಡೆಯುವುದಿಲ್ಲ ಎಂದು ಅಮ್ಮ ನುಡಿದರು. “ಪ್ರಕೃತಿಯನ್ನು ಸಮೀಪಿಸಲು ಇರುವ ಏಕೈಕ ಪರಿಣಾಮಕಾರಿ ಮಾರ್ಗವೆಂದರೆ, ಅಹಂಕಾರವನ್ನು ತೊರೆದು, ತಲೆಬಾಗಿ, ವಿನಯ, ಸ್ನೇಹ ಮತ್ತು ಪೂಜ್ಯಭಾವನೆಯಿಂದ ತುಂಬಿದ ಹೃದಯದೊಂದಿಗೆ ಆಕೆಯನ್ನು ಆರಾಧಿಸುವುದಾಗಿದೆ” ಎಂದು ಅವರು ಹೇಳಿದರು. ಮಾನವರು ಈ ಭೂಮಿ, ಅದರ ನೈಸರ್ಗಿಕ ಸಂಪನ್ಮೂಲಗಳು ಮತ್ತು ಸಮೃದ್ಧಿಯನ್ನು ಸಹಜೀವಿಗಳು ಹಾಗೂ ಇತರ ಪ್ರಾಣಿ-ಪಕ್ಷಿಗಳೊಂದಿಗೆ ಸಾಮೂಹಿಕವಾಗಿ ಹಂಚಿಕೊಂಡು ಬದುಕಬೇಕು ಎಂಬ ಜಾಗೃತಿಯೇ ನಿಜವಾದ ಸಹಬಾಳ್ವೆಗೆ ಅಡಿಪಾಯವಾಗಿದೆ ಎಂದು ಅಮ್ಮ ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಕೇಂದ್ರ ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಲ್ಹಾದ್ ಜೋಶಿ ಅವರು , ಅಮ್ಮನವರ ಕಾರ್ಯಗಳು ಕೇವಲ ಆಧ್ಯಾತ್ಮಿಕತೆಗೆ ಸೀಮಿತವಾಗಿರದೆ, ಸಾಮಾಜಿಕ ಜೀವನದ ಹಲವು ಕ್ಷೇತ್ರಗಳನ್ನು ಸ್ಪರ್ಶಿಸಿವೆ ಎಂದು ಶ್ಲಾಘಿಸಿದರು. ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್ ಮಾತನಾಡಿ, ಆಧ್ಯಾತ್ಮಿಕ ಶಕ್ತಿಗೆ ಶಾಶ್ವತ ಮೌಲ್ಯವಿದ್ದು, ಸಾರ್ವಜನಿಕ ಜೀವನದಲ್ಲಿ ಇರುವವರು ಸಮಾಜ ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಇದು ಸಹಾಯ ಮಾಡುತ್ತದೆ ಎಂದರು. ಕಾರ್ಯಕ್ರಮದಲ್ಲಿ ಸ್ವಾಮಿ ಜಿತಕಾಮಾನಂದ, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ,ಉಡುಪಿಯ ಶಾಸಕರಾದ ಯಶಪಾಲ್ ಸುವರ್ಣ,
ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, , ಕರ್ನಾಟಕ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಿತೇಶ್ ಕುಮಾರ್, ಕಿಶೋರ್ ಆಳ್ವ, ಪ್ರಕಾಶ್ ಪೈ ಪೆರಾಜೆ,ವೇದಪ್ರಕಾಶ್ ಶ್ರೀಯಾನ್, ಗೌರವಾಧ್ಯಕ್ಷರುಗಳಾದ ಡಾ ಜೀವರಾಜ್ ಸೊರಕೆ, ಸಿ ಎ ವಾಮನ್ ಕಾಮತ್, ಶ್ರುತಿ ಹೆಗ್ಡೆ,ಡಾ ವಸಂತ ಕುಮಾರ್‍ಪ್ ಪೆರ್ಲ, ಸ್ವಾಗತ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ಡಾ ವೈ ಸನತ್ ಹೆಗ್ಡೆ ಸಭೆನ್ನುದ್ದೇಶಿಸಿ ತನ್ನ ಅಮ್ಮನ ಅನುಯಾಯಿಯಾಗಿ ಜೀವನದಲ್ಲಿ ಕಂಡುಬಂದ ಸಕಾರಾತ್ಮಕ. ಅಉಭವಗಳನ್ನು ಹಂಚಿಕೊಂಡರು.
ಸೇವಾ‍ಸಮಿತಿಯ ಅಧ್ಯಕ್ಷ ಸುರೇಶ್ ಅಮೀನ್ ಸ್ವಾಗತಿಸಿದರು.
ಡಾ ಅಶೋಕ್ ಶೆಣೈ ಮತ್ತು ಡಾ ನಂದಿತಾ ಶೆಣೈ ನಿರೂಪಣೆ ಮಾಡಿದರು.

COMMENTS

Login with Gmail to comment

ಇನ್ನಷ್ಟು ಸುದ್ದಿ

ಸದ್ಯದಲ್ಲೇ ಬರುತ್ತೆ ತಣ್ಣೀರ್ಬಾವಿ ಬೀಚ್‌ಗೆ shortcut ಮಾರ್ಗ!30 ನಿಮಿಷ ಕಡಿಮೆ ಪ್ರಯಾಣ..!
ಸಿಲಿಂಡರ್ ಪಡೆಯಲು ಹೊಸ ಶರತ್ತುಗಳು – ಈಗಲೇ ತಿಳಿದುಕೊಳ್ಳಿ, …
🚢 “ಹಾರ್ಮುಝ್‌ನಿಂದ ಮಂಗಳೂರುವರೆಗೆ – 46,000 MT ಎಲ್‌ಪಿಜಿ ಯಮಹಾಯಾತ್ರೆ!
ಕಾಂಗ್ರೆಸ್ ಮೇಲಿನ ಕೋಪ ತಣ್ಣಗಾಗಿಲ್ಲ….. ಜನಪರ ಯೋಜನೆ ಮುಂದುವರೆಸಲು ಸ್ಟಾಲಿನ್ ಮನವಿ
ಪಂಚ ಗ್ಯಾರಂಟಿ ಯೋಜನೆಯಿಂದ ಕರ್ನಾಟಕ ಸಾಲದ ಸುಳಿಗೆ……..
ರಾಜ್ಯಮಟ್ಟದಲ್ಲಿ ಸದ್ದು ಮಾಡಿದ ತೆರಿಗೆ ವಂಚನೆ ಪ್ರಕರಣದ ನಂತರವೂ ಅಧಿಕಾರಿಗಳು ಪಾಠ ಕಲಿತಿಲ್ಲವೇ….!?
ಮೇ 20ರ ಬಸ್ ಸ್ಟ್ರೈಕ್‌ಗೆ ಹೈಕೋರ್ಟ್ ಬ್ರೇಕ್..! KSRTC-BMTC ಬಸ್‌ಗಳು ನಿಲ್ಲೋದಿಲ್ಲ! ಹೈಕೋರ್ಟ್ ಮಹತ್ವದ ಆದೇಶ..
ಅಮಾವಾಸ್ಯೆ ಬೈಲ್ ಪೊಲೀಸ್ ಠಾಣೆಯಲ್ಲಿ ಜೀವ ಬೆದರಿಕೆ ಹಾಗೂ ನಿಂದನೆಯ ಪ್ರಕರಣ ದಾಖಲು
ಕಾಂಗೋದಲ್ಲಿ ಎಬೋಲಾ ಅಟ್ಟಹಾಸ:ಜಗತ್ತಿಗೆ ಮತ್ತೆ ಸಾಂಕ್ರಾಮಿಕ ಭೀತಿಯ ಗಂಟೆ..!
“ಧುರಂಧರ್” ನಟ ರಣವೀರ್ ಸಿಂಗ್‌ ವಿರುದ್ಧ ಇಡೀ ಬಾಲಿವುಡ್ ಒಕ್ಕೂಟವೇ ತಿರುಗಿಬಿದ್ದಿದ್ದೇಕೆ? shocking ₹45 ಕೋಟಿ ವಿವಾದದ ಅಸಲಿ ಕಥೆ ಇಲ್ಲಿದೆ!
ಪ್ರಮೋದ್ ಮಧ್ವರಾಜ್ ಅವರಿಗೆ ಕೊನೆಗೂ ಸಿಕ್ಕಿತು ಗೌರವ
ಶಾಮ್ ಇನ್ಸ್ಟಿಟ್ಯೂಶನ್ ಪ್ರಸ್ತುತ ಪಡಿಸಿದ “ಕಜ್ಜ” ತುಳು ಸಿನಿಮಾದ ಆಡಿಯೋ, ಟೇಲರ್ ಬಿಡುಗಡೆ
MRPL ವಿರುದ್ಧ ಜನಹೋರಾಟದ ಎಚ್ಚರಿಕೆ – ಮೇ 1ರಿಂದ ಅನಿರ್ದಿಷ್ಟ ಧರಣಿಗೆ ಸಮಿತಿ ಸಜ್ಜು..
ಬೀದಿ ನಾಯಿಗಳ ಹಾವಳಿ ಮಾನವ ಜೀವ ರಕ್ಷಣೆಗೆ ಮೊದಲ ಆದ್ಯತೆ — ಸುಪ್ರೀಂ ಕೋರ್ಟ್‌ನ ಕಠಿಣ ನಿಲುವು
🎬 ಜೈಲರ್ 2 ಸೆಟ್‌ನಲ್ಲಿ ವಿದ್ಯುತ್ ಅವಘಡ…28 ವರ್ಷದ ಕಾರ್ತಿಕೇಯನ್ ವಿದ್ಯುತ್ ಶಾಕ್‌ಗೆ ಬಲಿ..
ಐಸಿಸಿ ಟ್ವೆಂಟಿ-20 ವಿಶ್ವಕಪ್ ಮೂಡಿಗೇರಿಸಿಕೊಂಡ ಭಾರತ
ಒಂದೇ ಫ್ಲಾಟ್ ಇಬ್ಬಿಬ್ಬಿರ ಹೆಸರಲ್ಲಿ ..!ಡಬಲ್ ಡಾಕ್ಯುಮೆಂಟ್ ದಂಧೆ ಬಯಲು –ಕೋಟಿ ಕೋಟಿ ವಂಚನೆ ಮಾಡಿ ಆರೋಪಿ ಪರಾರಿ! ರಿಯಲ್ ಎಸ್ಟೇಟ್ ಶಾಕ್….
ಬ್ಯಾಂಕುಗಳ ಮೇಲೆ ಭೀಕರ ದಾಳಿಯ ಮುನ್ಸೂಚನೆ ನೀಡಿದ ಇರಾನ್- ಮಿನಿಮಮ್ 1000 ಮೀಟರ್ ದೂರವಿರಿ
717 ಮದ್ಯದಂಗಡಿಗಳಿಗೆ ವಿಜಯ್ ಬ್ರೇಕ್‌! ತಮಿಳುನಾಡು ಖಜಾನೆಗೆ ಸಾವಿರಾರು ಕೋಟಿ ಶಾಕ್!
BRICS ನ ಡಿಜಿಟಲ್ ಕರೆನ್ಸಿ ವಿಶ್ವ ಆರ್ಥಿಕತೆಯನ್ನೇ ಬೆರಗಾಗಿಸುತ್ತಾ..?
Anticipatory Bail ಗೆ ಹೊಸ ರಕ್ಷಣೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಆಕ್ಷೇಪ
ಪ್ರಧಾನಿ ಮೋದಿ ನೆದರ್ಲ್ಯಾಂಡ್ ಭೇಟಿ ಭಾರತ ಸಹಕಾರದ ಸೇತುವೆ ಕಟ್ಟುವ ದ್ವಿಪಕ್ಷೀಯ ಸಂಬಂಧಗಳ ವಿಸ್ತರಣೆ…
“ಗ್ಯಾರಂಟಿ “ಹಣದ ಮೇಲೆ ಆಯೋಗದ ಕಣ್ಣು: ಸಿಎಂ ಸಿಡಿಮಿಡಿ ..ರಾಜಕೀಯ ಕಿಡಿ!
ಸುಬ್ರಹ್ಮಣ್ಯದಲ್ಲಿ ಭಟ್ಟರಿಗೆ ದಕ್ಷಿಣೆ ಕೊಡುವoತಿಲ್ಲ- ಸಿಟ್ಟಿಗೆಳುತ್ತಿರುವ ಪುರೋಹಿತರು
“ಪ್ರೇಮ ಕಥೆ ತಿರುವು: ಗಂಡನ ಜೀವವೇ ಟಾರ್ಗೆಟ್!”ಬ್ಯಾಂಕ್ ಅಧಿಕಾರಿ ಪತ್ನಿ taxi ಚಾಲಕನೊಂದಿಗೆ ಸೇರಿ killing plan
ಟಾಟಾ ಸನ್ಸ್ IPOಗೆ ಒತ್ತಾಯ: ಟ್ರಸ್ಟಿಗಳಲ್ಲಿ ಭಿನ್ನಾಭಿಪ್ರಾಯ ಹೆಚ್ಚಳ…!
ದ.ಕ ಜಿಲ್ಲಾಡಳಿತದಿಂದ ಮಂಗಳಮುಖಿಯರಲ್ಲದವರಿಗೂ ಗುರುತಿನ ಚೀಟಿ ವಿತರಣೆ – ಗಂಭೀರ ಆರೋಪ
ಅಕ್ರಮ ಡಿಸೇಲ್ ದಾಸ್ತಾನು ಪ್ರಕರಣ: 4,175 ಲೀಟರ್ ಡಿಸೇಲ್ ಕಂದಾಯ ಇಲಾಖೆಯಿಂದ ಹರಾಜು – ₹2.35 ಲಕ್ಷಕ್ಕೆ ಮಾರಾಟ!
ಯುಎಇಯಿಂದ ಯುರೋಪ್ ತನಕ ಮೋದಿ ಐತಿಹಾಸಿಕ ವಿದೇಶ ಪ್ರವಾಸ…ಡಿಪ್ಲೊಮಸಿ – ತೈಲದಿಂದ ತಂತ್ರಜ್ಞಾನವರೆಗೆ ಇದು ಭಾರತದ ಭವಿಷ್ಯದ ತಂತ್ರಾತ್ಮಕ ನಡೆ ?!