📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಮಣಿಪಾಲ ಜೆಇಇ ಮೇನ್ಸ್ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ಪ್ರಯತ್ನ….

2026ರ ಏಪ್ರಿಲ್ 5 ರಂದು ಮಣಿಪಾಲದ ಜೆಇಇ ಮೇನ್ಸ್ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ಚಟುವಟಿಕೆ ನಡೆಸಲು ಯತ್ನಿಸಿದ ಪ್ರಕರಣ ವರದಿಯಾಗಿದೆ. ಈ ಕುರಿತು ಜವಹಾರ್ ನವೋದಯ ವಿದ್ಯಾಲಯ, ಹೆಬ್ರಿ, ಕಾರ್ಕಳ ತಾಲ್ಲೂಕಿನ ಸಹಾಯಕ ಪ್ರಾಂಶುಪಾಲರಾದ ವಿ.ಕೆ. ಮನೋಹರ್ ಕುಮಾರ್ (53) ಅವರು ದೂರು ನೀಡಿದ್ದಾರೆ. ಅವರು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ವತಿಯಿಂದ ನಡೆದ ಪರೀಕ್ಷೆಗೆ ಪರಿವೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಈ ಪರೀಕ್ಷೆ ಮಣಿಪಾಲದ ಟಿ.ಎಂ.ಎ ಪೈ ಪಾಲಿಟೆಕ್ನಿಕ್ ಕಾಲೇಜಿನ ION Digital Zone IDZ Milk Dairy ಕೇಂದ್ರದಲ್ಲಿ ನಡೆಯಿತು. ಪರೀಕ್ಷಾ ಕೇಂದ್ರದ ವೆನ್ಯೂ ಕಮಾಂಡಿಂಗ್ ಅಧಿಕಾರಿ ಮನೋಜ್ ಕುಮಾರ್ ಆಗಿದ್ದು, ಅಡ್ಮಿನ್ ಮ್ಯಾನೇಜರ್ ಮಹೇಶ್ ನಾಯ್ಕ್ ಆಗಿದ್ದರು. ಪರೀಕ್ಷೆಯನ್ನು ಎರಡು ಅವಧಿಗಳಲ್ಲಿ ನಡೆಸಲಾಗಿದ್ದು, ಬೆಳಿಗ್ಗೆ ಸುಮಾರು 149 ವಿದ್ಯಾರ್ಥಿಗಳು ಹಾಗೂ ಮಧ್ಯಾಹ್ನ 133 ವಿದ್ಯಾರ್ಥಿಗಳು ಹಾಜರಿದ್ದರು. ಮಧ್ಯಾಹ್ನ ಅವಧಿಯ ಪರೀಕ್ಷೆ 3:00 ಗಂಟೆಗೆ ಪ್ರಾರಂಭವಾಯಿತು.

ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಆಧಾರ್ ಕಾರ್ಡ್ ಅಥವಾ ಪಾನ್ ಕಾರ್ಡ್ ಮತ್ತು ಅಡ್ಮಿಟ್ ಕಾರ್ಡ್ ಕಡ್ಡಾಯವಾಗಿತ್ತು.

ಮಧ್ಯಾಹ್ನ ಅವಧಿಯಲ್ಲಿ ಉತ್ತರಾಖಂಡದ ವಿದ್ಯಾರ್ಥಿಯಾದ ಅರೀದಮಾನ್ ಸಿಂಗ್ ಸಾಂಗ್ ಎಂಬಾತ ಲ್ಯಾಬ್ Aಯ ಸಿಸ್ಟಮ್ C-018ರಲ್ಲಿ ಪರೀಕ್ಷೆ ಬರೆಯುತ್ತಿದ್ದಾಗ ಅನುಮಾನಾಸ್ಪದ ಚಟುವಟಿಕೆಯಲ್ಲಿ ತೊಡಗಿದ್ದಾನೆ ಎಂದು ತಿಳಿದುಬಂದಿದೆ. ಆತನು ಪರೀಕ್ಷಾ ಹಾಲ್‌ನಲ್ಲಿ ಮೊಬೈಲ್ ಫೋನ್ ಬಳಸಿಕೊಂಡು ಕಂಪ್ಯೂಟರ್ ಸಿಸ್ಟಮ್‌ನಲ್ಲಿದ್ದ ಪ್ರಶ್ನೆ ಪತ್ರಿಕೆಯ ಫೋಟೋಗಳನ್ನು ತೆಗೆದು, ಅವನ್ನು ಹೊರಗೆ ಕಳುಹಿಸಲು ಪ್ರಯತ್ನಿಸಿದ್ದಾನೆ ಎಂಬ ಆರೋಪವಿದೆ.

ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 49/2026 ಅಡಿಯಲ್ಲಿ ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ಕಾಯ್ದೆ 2024ರ ಕಲಂ 03, 04 ಮತ್ತು 10ರಡಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

##JEE2026 #ExamMalpractice #ManipalNews #EducationIntegrity #NTAExams #ExamSecurity #BreakingNews #IndiaEducation

COMMENTS

Login with Gmail to comment

ಇನ್ನಷ್ಟು ಸುದ್ದಿ

ಅಕ್ರಮವಾಗಿ ಲಕ್ಷಾಂತರ ಮೌಲ್ಯದ ಎತ್ತುಗಳನ್ನು ವಧೆಗೆ….!
ಹುಬ್ಬಳ್ಳಿ ಲವ್ ಜಿಹಾದ್..!?ಮೂರು ವರ್ಷದ ಸಂಬಂಧ, friendship, ಫ್ಯಾಮಿಲಿ closeness-ಕ್ಷಣದಲ್ಲೇ ಬಾರಿ ಸಂಘರ್ಷ..!
ಕೊನೆಗೂ ಸೋತ ಖಾಕಿ….!!!
ಟೀಕೆಗಳು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿನ ಸೌಂದರ್ಯ – ಖಾದರ್
ಮಂಗಳೂರು ಶಾಕ್ ! ನೇತ್ರಾವತಿ ತೀರದ ನದಿಯಲ್ಲಿ ತೇಲಿ ಬಂದ ರಾಶಿ ರಾಶಿ ಆಧಾರ್ ಕಾರ್ಡ್‌ಗಳು !!!ಹೊಣೆ ಯಾರು?
ಸಾರ್ವಜನಿಕರಲ್ಲಿ ವಿನಂತಿ …!
ನಾಗಪ್ರತಿಷ್ಠಾ ಮಂಟಪದ ಎದುರು ನಡೆದಾಡಲು ಸ್ಥಳವಿಲ್ಲದಷ್ಟು ಭಕ್ತಾದಿಗಳು …
ಏರ್ ಇಂಡಿಯಾ ವಿಮಾನ ಸೇವೆ ಸ್ಥಗಿತ…40,000ಕ್ಕೂ ಹೆಚ್ಚು ಟೆಲ್ ಅವೀವ್‌ ಭಾರತೀಯರ ಪ್ರಯಾಣ ಅತಂತ್ರ…!
“ಮಂಜಿನ ನಡುವೆ ಕ್ಷಣಾರ್ಧದಲ್ಲಿ ಮಾಯವಾದ ಮಗಳು”ಶ್ರೀನಂದಾ ಶವವಾಗಿ ಪತ್ತೆ…!
ಗ್ಯಾಸ್ ಪೈಪ್‍ಲೈನ್ ಸೋರಿಕೆ: ಅಣಕು ಪ್ರದರ್ಶನ
ಕುಂದಾಪುರದಲ್ಲಿ ಯುವತಿ ಆತ್ಮಹತ್ಯೆಗೆ ಪ್ರಿಯಕರನ ಕುಮ್ಮಕ್ಕು
ಟ್ರಂಪ್-“Strait of Hormuz ತಕ್ಷಣ ತೆರೆಯಿರಿ…! “ ಇರಾನ್-“ಕೀ ಗಳನ್ನು ಕಳೆದುಕೊಂಡಿದ್ದೇವೆ…!”
ಸ್ಟೇಟ್ ಬ್ಯಾಂಕ್ ಮೀನು ಮಾರುಕಟ್ಟೆಗೆ ಭೇಟಿ ನೀಡಿದ ಡಾ. ನಾಗಲಕ್ಷ್ಮಿ ಚೌಧರಿ – ಮಹಿಳಾ ಮೀನುಗಾರರ ಸಮಸ್ಯೆ ಆಲಿಕೆ
ಹತ್ತು ವರ್ಷದಿಂದ ಪೊಲೀಸರಿಗೆ ಬೇಕಾದ ಆರೋಪಿಯನ್ನು ಕೊನೆಗೂ ಬಂಧಿಸಿದ ಪೊಲೀಸರು
ಇದು IPLನಲ್ಲಿ ಹೊಸ ಹೀರೋ ಹುಟ್ಟಿದಂತೇ…ಆದ್ರೆ ಕ್ರಿಕೆಟ್ ಅಲ್ಲ, ಬಾಕ್ಸಿಂಗ್‌ನಲ್ಲಿ! 🥊🔥
ಅಗತ್ಯ ಮಾಹಿತಿ ಇಲ್ಲಿದೆ ಓದಿ..!“ಎಲ್‌ಪಿಜಿ ಬುಕಿಂಗ್‌ಗೆ ಹೊಸ ನಂಬರ್‌ಗಳು: ಆತಂಕ ಬೇಡ, ಸರಬರಾಜು ಶೀಘ್ರ ಸಾಮಾನ್ಯಕ್ಕೆ!”
ಮಹಿಳಾ ದಿನಾಚರಣೆಯಲ್ಲಿ ಮಹಿಳಾ ಸಂಪನ್ಮೂಲ ಕೇಂದ್ರ ಉದ್ಘಾಟನೆ, ಜಾಗೃತಿ ಕಾರ್ಯಕ್ರಮ
BRICS ನ ಡಿಜಿಟಲ್ ಕರೆನ್ಸಿ ವಿಶ್ವ ಆರ್ಥಿಕತೆಯನ್ನೇ ಬೆರಗಾಗಿಸುತ್ತಾ..?
ರಾಜಕೀಯ ಸುದ್ದಿ ಅಂದರೆ ಬೋರ್ ಅಂತ ಅನ್ನಿಸುವರಿಗೆ ಇದು ಒಂದು ಪಕ್ಕಾ ಎಂಟರ್‌ಟೈನ್‌ಮೆಂಟ್ ಎಪಿಸೋಡ್!!!
ಅಸ್ಸಾಂನಲ್ಲಿ ಮತದಾನದ ಹಿನ್ನೆಲೆ ಹಿಂಸಾಚಾರ: 30ಕ್ಕೂ ಹೆಚ್ಚು ಮಂದಿ ಗಾಯ, 7 ಜನರ ಬಂಧನ
ಹಳಿಯಾಳದಲ್ಲಿ ನೀರಿನ ಹಾಹಾಕಾರ… ಮಾರ್ಚ್ 16ರಂದು ಬೃಹತ್ ಪ್ರತಿಭಟನೆ 
ಮಂಗಳೂರು -ವೆನ್ಲಾಕ್ ಮಾಸ್ಟರ್ ಪ್ಲ್ಯಾನ್…!
ಯುದ್ಧ: ಯಾವುದೇ ಜಾಗತಿಕ ನಾಯಕರ ಮಾತುಕತೆ ಫಲಪ್ರದವಾಗದೇ?!
ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ದಯಾ ಮರಣಕ್ಕೆ ಅನುಮತಿ
ಇರಾನ್ ಬಿಕ್ಕಟ್ಟು ವೀಸಾ ವಿಸ್ತರಿಸಲು ವಿದೇಶಿ ಪ್ರಜೆಗಳು ಹತ್ತಿರದ FRRO ಅನ್ನು ಸಂಪರ್ಕಿಸಲು ಭಾರತ ಸಲಹೆ
ಸುಳ್ಯ:  ಕರ್ತವ್ಯದಲ್ಲಿದ್ದ ಉಪನ್ಯಾಸಕ ಕುಸಿದು ಬಿದ್ದು ಸಾವು
ರಸ್ತೆಯ ವಿಚಾರಕ್ಕೆ ನೆರೆಹೊರೆಯರ ನಡುವೆ ಬಾರಿ ಗಲಾಟೆ !
ಮಂಗಳೂರು ಬೆಂಗಳೂರು ಮಧ್ಯೆ ಇನ್ನು ತಡರಾತ್ರಿಯೂ ವಿಮಾನ ಯಾನ
ಅಮೇರಿಕಾಕ್ಕೆ ಅಷ್ಟು ಧೈರ್ಯದಿಂದ ಎಲ್ಲಿಂದ ಬಂತು?
🚨 “ಮಂಗಳೂರು ಜಿಲ್ಲಾಕಾರಾಗೃಹದಲ್ಲಿ ಗಲಾಟೆ: ಜೈಲು ಅಧೀಕ್ಷಕರ ಮೇಲೆಯೇ ಕೈದಿಗಳ ಹಲ್ಲೆಯತ್ನ!”