📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಮರಣದಂಡನೆ ಶಿಕ್ಷೆಗೆ ಈಡಾದ  ತಮಿಳುನಾಡು   ಪೊಲೀಸರು

ಅತ್ಯಂತ ಅಪರೂಪದಲ್ಲಿಯೇ ಅಪರೂಪದ ಘಟನೆ ಇದು. ನ್ಯಾಯಾಲಯದಲ್ಲಿ ನ್ಯಾಯವು ಇನ್ನೂ ಇದೆ, ಅನ್ನೋದನ್ನು ಸಾಬೀತು ಪಡಿಸುವಂತಹ ಆದೇಶವು ಕೇಳ ನ್ಯಾಯಾಲಯದಿಂದ ಬಂದಿದೆ.

ಅದು ಅಂತಿಂತಹ ಪ್ರಕರಣವಲ್ಲ, ಲಾಕಪ್ ಡೆತ್ ಪ್ರಕರಣ. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳು ಸೇರಿದಂತೆ ಒಂಬತ್ತು ಪೊಲೀಸರ ತಪ್ಪು ಸಾಬೀತಾಗಿದ್ದು, ಅವರಿಗೆ ನ್ಯಾಯಾಲಯವು ಮರಣದಂಡನೆಯ ಶಿಕ್ಷೆಯನ್ನು ವಿಧಿಸಿದೆ.

ಇದು ಪಕ್ಕದ ತಮಿಳುನಾಡು ರಾಜ್ಯದ ಮಧುರೈ ಸಮೀಪದ ತೂತುಕುಡಿ ಜಿಲ್ಲೆಯಲ್ಲಿ ನಡೆದಂತಹ ಪ್ರಕರಣ ಒಂದಕ್ಕೆ ಸಂಬಂಧಿಸಿದಂತೆ, ಇಂತಹದೊಂದು ಜಬರ್ದಸ್ತ್ ಆದೇಶವು ನ್ಯಾಯಾಲಯದಿಂದ ಬಂದಿದೆ.

2020 ಜೂನ್ 19 ತೂತುಕುಡಿ ಜಿಲ್ಲೆಯ ಸತಮ್ ಕುಳಂ ಪೋಲಿಸ್ ಠಾಣೆಯಲ್ಲಿ ನಡೆದಂತಹ ಭೀಕರವಾದಂತಹ ಘಟನೆಇದು. ಇಡೀ ದೇಶದಲ್ಲಿ ಕರೋನ ಮಹಾಮಾರಿಯು ತನ್ನ ಅಟ್ಟಹಾಸ ಮೆರೆಯುತ್ತಿರುವಂತಹ ಸಮಯವದು. ಇಲ್ಲಿನ ಮೊಬೈಲ್ ಅಂಗಡಿ ಒಂದರ ಮಾಲೀಕ ಜಯರಾಜ್ ಹಾಗೂ ಅವರ ಮಗ  ಬೆನಿಕ್ಸ್  ತಮ್ಮ ಅಂಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಮಯದಲ್ಲಿ, ಅವರಿಬ್ಬರನ್ನು ಪೊಲೀಸರು ಕರೆದೊಯ್ಯುತ್ತಾರೆ.

ಹಾಗೆ ಬಂಧಿಸಿ ಕರೆದೊಯ್ದ ಜಯರಾಜ್ ಹಾಗೂ ಬೆನಿಕ್ಸ್ ಇಬ್ಬರೂ ಜೀವಂತವಾಗಿ ಹೊರಗೆ ಬರುವುದಿಲ್ಲ. ಅವರಿಬ್ಬರೂ ಪೊಲೀಸ್ ಠಾಣೆಯಲ್ಲಿಯೇ  ಲಾಕಪ್ ಡೆತ್ ಆಗುತ್ತಾರೆ. ಪೊಲೀಸರ ವಿಪರೀತ ಚಿತ್ರಹಿಂಸೆಯಿಂದಾಗಿ ಪೊಲೀಸರ ಬಂದಿಯಾಗಿರುವಾಗಲೇ ಇಬ್ಬರೂ ಕೊಲೆಯಾಗುತ್ತಾರೆ. ಕಾನೂನು ಪಾಲಕರೇ, ಅಲ್ಲಿ ತಂದೆ ಮಗ ಇಬ್ಬರನ್ನು ಕೊಂದು ಹಾಕಿದ್ದರು.

ಈ ಪ್ರಕರಣವು ಇಡೀ ದೇಶದಲ್ಲಿ ದೊಡ್ಡ ಸುದ್ದಿಯನ್ನಾಗಿ ಮಾಡಿತ್ತು ಅವತ್ತು. ಈ ಪ್ರಕರಣದ ಪರವಾಗಿ ಮತ್ತು ಪೊಲೀಸರ ವಿರುದ್ಧ ಸಾರ್ವಜನಿಕವಾಗಿ ಆಕ್ರೋಶವು ಮುಗಿಲು ಮುಟ್ಟಿದ್ದವು. ಪರಿಣಾಮ, ಈ ಬಗ್ಗೆ ಉನ್ನತ ತನಿಖೆಯು   ಪ್ರಾರಂಭವಾಗುತ್ತದೆ. ಆ ಉನ್ನತ ತನಿಖೆಯಲ್ಲಿ  ಪೊಲೀಸರ ತಪ್ಪು ಸ್ಪಷ್ಟವಾಗಿ ಕಾಣಿಸುತ್ತದೆ. ಅವರ ತಪ್ಪುಗಳು ಸಾಬೀತಾಗುತ್ತವೆ. ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್, ಇಬ್ಬರು ಸಬ್ ಇನ್ಸ್ಪೆಕ್ಟರ್, ಉಳಿದ ಪೊಲೀಸ್ ಕಾನ್ಸ್ಟೇಬಲ್ ಗಳು ತಂದೆ ಹಾಗೂ ಮಗನನ್ನು ಬೆತ್ತಲೆ ಗೊಳಿಸಿ ಥಳಿಸಿ ಕೊಂದಿದ್ದಾರೆ ಎನ್ನುವುದು ತನಿಖೆಯಲ್ಲಿ ಸಾಬೀತಾಗುತ್ತದೆ. ಈ ಪ್ರಕರಣಕ್ಕೆ  ಸಂಬಂಧಿಸಿದಂತೆ ಸುಮಾರು ನೂರಕ್ಕೂ ಹೆಚ್ಚು ಸಾಕ್ಷಿಗಳು, ಪೊಲೀಸರ ವಿರುದ್ಧವೇ  ಸ್ಪಷ್ಟವಾಗಿ ಸಾಕ್ಷಿ ಹೇಳಿದ್ದರು. ಇದರಲ್ಲಿ ಅದೇ ಪೊಲೀಸ್ ಠಾಣೆಯ ಮಹಿಳಾ ಕಾನ್ಸ್ಟೇಬಲ್ ಒಬ್ಬರು, ಪೊಲೀಸರ ವಿರುದ್ಧವೇ ಸಾಕ್ಷ್ಯ ನೋಡಿದ್ದರು.

ಈ ಪ್ರಕರಣವು ಹತ್ತರಲಿ ಹನೊಂದಾಗಬಹುದು ಎಂಬ ಅನುಮಾನಗಳ ನಡುವೆ ನ್ಯಾಯದ ಚಿಲುಮೆ ಚಿಮ್ಮಿರುವುದು ಸಾರ್ವಜನಿಕವಾಗಿ ಸಂತೋಷಕ್ಕೆ ಕಾರಣವಾಗಿದೆ.  ಜಿಲ್ಲಾ ನ್ಯಾಯಾಲಯದಿಂದ ಮರಣದಂಡನೆ ಶಿಕ್ಷೆಗೆ ಒಳಗಾದ ಮೂವರು ಪೊಲೀಸ್ ಅಧಿಕಾರಿಗಳು ಆರು ಪೊಲೀಸ್ ಕಾನ್ಸ್ಟೇಬಲ್ಸ್, ಮೇಲಿನ ನ್ಯಾಯಾಲಯದ ಮೊರೆ ಹೋಗುತ್ತಾರೆ ಅನ್ನುವದರಲ್ಲಿ ಯಾವ ಅನುಮಾನವೂ ಇಲ್ಲ. ಇದು ಹೈ ಕೋರ್ಟ್ಗೆ ಹೋಗಲಿದೆ ಅನ್ನುವುದರಲ್ಲಿ ಎರಡು ಮಾತಿಲ್ಲ.  ಆರೋಪಿತರಿಗೆ ತಮ್ಮ ವಾದ ಮಂಡನೆಗೆ ಇನ್ನೂ ಅವಕಾಶಗಳಿರುವ ಕಾರಣ, ಸದ್ಯಕ್ಕೆ ಮರಣದಂಡನೆ ಶಿಕ್ಷೆಯು ಜಾರಿಯಾಗುವುದಿಲ್ಲ.

COMMENTS

Login with Gmail to comment

ಇನ್ನಷ್ಟು ಸುದ್ದಿ

ವಿಶ್ವಸಂಸ್ಥೆಗೆ ಜೀವ ಬಂತು ನೋಡಿ…
ಸುಳ್ಯ:  ಕರ್ತವ್ಯದಲ್ಲಿದ್ದ ಉಪನ್ಯಾಸಕ ಕುಸಿದು ಬಿದ್ದು ಸಾವು
ಗ್ಯಾಸ್ ಅಭಾವ ಮತ್ತು ಬೆಲೆ ಏರಿಕೆ, ಸುಳ್ಳು ಎನ್ನುತ್ತಿದೆ-HPCL
ಮಂತ್ರಾಲಯದ ಮಠದ ಹೆಸರಲ್ಲಿ 3 ಲಕ್ಷ ಆಸೆ ತೋರಿಸಿ ವಂಚನೆ..!
ಸರ್ಕಾರಿ ಸ್ವಾಮ್ಯದ ಬೇಲಿ ಕಂಬ ಕಿತ್ತಾಕಲು DYFI ಕುಮ್ಮಕ್ಕು….!
ಪರಸ್ತ್ರೀ ಹುಂಡಿಗೆ  ಒಂದುವರೆ ಕೋಟಿ ಅಪಾರ್ಟ್ಮೆಂಟ್, ಮಾಜಿ ಶಾಸಕನ ರಂಗಿನಾಟ 
ಗೃಹ ಸಚಿವರಾದ ಜಿ ಪರಮೇಶ್ವರ್ ರವರ ಒಡೆತನದ ಸಂಸ್ಥೆಯಲ್ಲಿ ನಡೆದಿದೆ ಎಂಬ ವಿಡಿಯೋ ವೈರಲ್….!
ಉಡುಪಿಯಲ್ಲಿ ಆಡಳಿತ ನಡೆಸುತ್ತಿರುವುದು ಜನವಿರೋಧಿ ಜಿಲ್ಲಾಡಳಿತವೇ?
ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಮತ್ತು ನಗರ ಸಭೆ ಎರಡೂ ಕಮಾಯಿಗೆ ಕುಳಿತು ಕೊಂಡಿದೆಯಾ?
ತೈಲ ಟ್ಯಾಂಕರ್ ಮೇಲೆ ಇರಾನ್ ಆತ್ಮಹತ್ಯಾ ದೋಣಿ ದಾಳಿ – ಭಾರತೀಯ ನಾವಿಕ ಸಾವು
ಎಲ್ಲರಿಗೂ ಯುಗಾದಿ ಹಬ್ಬ… ಆದರೆ ಈ ಗ್ರಾಮಗಳಲ್ಲಿ ಭಯ ಮೌನ…ಹಬ್ಬ ಇಲ್ಲ…!ಒಂದು ವಿಚಿತ್ರ ಕಥೆ!
ವಿಶ್ವ ಸಂಸ್ಥೆಯು ಯಾವ ಪುರುಷಾರ್ಥಕ್ಕೆ? ಬಲವರ್ಧನೆಯ  ಅಗತ್ಯತೆ
ಗೃಹಲಕ್ಷ್ಮಿ ಹಣ ಉಳಿಸಿ ದೇವಿಗೆ ₹17 ಲಕ್ಷ ದೇಣಿಗೆ!
ಕಿಡ್ನಿ ಕಾಯಿಲೆಯ ಬಗ್ಗೆ ಎಚ್ಚರಿಕೆ ಅಗತ್ಯ- ಡಾಕ್ಟರ್ ಅಶೋಕ್ ಭಟ್
ಯುದ್ಧ: ಯಾವುದೇ ಜಾಗತಿಕ ನಾಯಕರ ಮಾತುಕತೆ ಫಲಪ್ರದವಾಗದೇ?!
ಕೊನೆಕ್ಷಣದ ಹೃದಯ ಕಲುಕುವ ಹರೀಶ್ ರಾಣಾ – ದಯಾಮರಣvedio
“ಮಂಗಳೂರಲ್ಲಿ ಡ್ರೈ ಡೇ ಘೋಷಣೆ -ಎರಡು ದಿನ ಬಾರ್‌ಗಳಿಗೆ ಲಾಕ್ ..!” ದಕ್ಷಿಣ ಕನ್ನಡದಲ್ಲಿ ಕಟ್ಟುನಿಟ್ಟಿನ ಆದೇಶ
ಮಹಿಳಾ ದಿನಾಚರಣೆಯಲ್ಲಿ ಮಹಿಳಾ ಸಂಪನ್ಮೂಲ ಕೇಂದ್ರ ಉದ್ಘಾಟನೆ, ಜಾಗೃತಿ ಕಾರ್ಯಕ್ರಮ
ಮಂಗಳೂರು ನೀರಿನ ಸಂಕಷ್ಟ:ಮಳೆಯಿಲ್ಲದೆ ಮುಂದಿನ 1–2 ತಿಂಗಳು ಗಂಭೀರ ನೀರಿನ ಕೊರತೆ ಸಂಭವ ಸಾಧ್ಯತೆ.
ವಿದ್ಯಾರ್ಥಿಯೊಬ್ಬ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ..
“ಬರ್ಕಾಸ್ತು ಘಟಕಕ್ಕೆ ‘ಬೋಗಸ್ ನಾಯಕತ್ವ’ – ಕರವೇ ಮಹಿಳಾ ಘಟಕದಲ್ಲಿ ಭಿನ್ನಮತ ಸ್ಫೋಟ!”
ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿ ಗಡಿಪಾರು ಆದೇಶ….
🚨 “ಮಂಗಳೂರು ಜಿಲ್ಲಾಕಾರಾಗೃಹದಲ್ಲಿ ಗಲಾಟೆ: ಜೈಲು ಅಧೀಕ್ಷಕರ ಮೇಲೆಯೇ ಕೈದಿಗಳ ಹಲ್ಲೆಯತ್ನ!”
ಆನ್ಲೈನ್ ಶೇರಿಂಗ್ ಹಗರಣ: ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲು.
ನಾಟಕ ಕಲಾವಿದೆ ಸೌಮ್ಯ ಶೆಟ್ಟಿ ಬಂಧನ
ಮೂಡಿಗೆರೆ ತಾಲ್ಲೂಕಿನಲ್ಲಿ ಭಾರಿ ಗಾಳಿ-ಮಳೆ ಅಬ್ಬರ
ತಪ್ಪುಅರ್ಥಕ್ಕೆಕ್ಷಮೆ, ಹೊಸರೂಪದಲ್ಲಿಮತ್ತೆ ‘ಸರ್ಸೆಸೆರಗು’”-ಪ್ರೇಮ್
“ಗ್ಯಾರಂಟಿ “ಹಣದ ಮೇಲೆ ಆಯೋಗದ ಕಣ್ಣು: ಸಿಎಂ ಸಿಡಿಮಿಡಿ ..ರಾಜಕೀಯ ಕಿಡಿ!
ವಿವಾಹಿತ ದಂಪತಿಗಳಿಗೆ ಜಂಟಿ ITR ವ್ಯವಸ್ಥೆ ತರಲು- ಸಂಸತ್ತಿನಲ್ಲಿ Raghav Chadha ಆಗ್ರಹ.