📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಮರಣದಂಡನೆ ಶಿಕ್ಷೆಗೆ ಈಡಾದ  ತಮಿಳುನಾಡು   ಪೊಲೀಸರು

ಅತ್ಯಂತ ಅಪರೂಪದಲ್ಲಿಯೇ ಅಪರೂಪದ ಘಟನೆ ಇದು. ನ್ಯಾಯಾಲಯದಲ್ಲಿ ನ್ಯಾಯವು ಇನ್ನೂ ಇದೆ, ಅನ್ನೋದನ್ನು ಸಾಬೀತು ಪಡಿಸುವಂತಹ ಆದೇಶವು ಕೇಳ ನ್ಯಾಯಾಲಯದಿಂದ ಬಂದಿದೆ.

ಅದು ಅಂತಿಂತಹ ಪ್ರಕರಣವಲ್ಲ, ಲಾಕಪ್ ಡೆತ್ ಪ್ರಕರಣ. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳು ಸೇರಿದಂತೆ ಒಂಬತ್ತು ಪೊಲೀಸರ ತಪ್ಪು ಸಾಬೀತಾಗಿದ್ದು, ಅವರಿಗೆ ನ್ಯಾಯಾಲಯವು ಮರಣದಂಡನೆಯ ಶಿಕ್ಷೆಯನ್ನು ವಿಧಿಸಿದೆ.

ಇದು ಪಕ್ಕದ ತಮಿಳುನಾಡು ರಾಜ್ಯದ ಮಧುರೈ ಸಮೀಪದ ತೂತುಕುಡಿ ಜಿಲ್ಲೆಯಲ್ಲಿ ನಡೆದಂತಹ ಪ್ರಕರಣ ಒಂದಕ್ಕೆ ಸಂಬಂಧಿಸಿದಂತೆ, ಇಂತಹದೊಂದು ಜಬರ್ದಸ್ತ್ ಆದೇಶವು ನ್ಯಾಯಾಲಯದಿಂದ ಬಂದಿದೆ.

2020 ಜೂನ್ 19 ತೂತುಕುಡಿ ಜಿಲ್ಲೆಯ ಸತಮ್ ಕುಳಂ ಪೋಲಿಸ್ ಠಾಣೆಯಲ್ಲಿ ನಡೆದಂತಹ ಭೀಕರವಾದಂತಹ ಘಟನೆಇದು. ಇಡೀ ದೇಶದಲ್ಲಿ ಕರೋನ ಮಹಾಮಾರಿಯು ತನ್ನ ಅಟ್ಟಹಾಸ ಮೆರೆಯುತ್ತಿರುವಂತಹ ಸಮಯವದು. ಇಲ್ಲಿನ ಮೊಬೈಲ್ ಅಂಗಡಿ ಒಂದರ ಮಾಲೀಕ ಜಯರಾಜ್ ಹಾಗೂ ಅವರ ಮಗ  ಬೆನಿಕ್ಸ್  ತಮ್ಮ ಅಂಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಮಯದಲ್ಲಿ, ಅವರಿಬ್ಬರನ್ನು ಪೊಲೀಸರು ಕರೆದೊಯ್ಯುತ್ತಾರೆ.

ಹಾಗೆ ಬಂಧಿಸಿ ಕರೆದೊಯ್ದ ಜಯರಾಜ್ ಹಾಗೂ ಬೆನಿಕ್ಸ್ ಇಬ್ಬರೂ ಜೀವಂತವಾಗಿ ಹೊರಗೆ ಬರುವುದಿಲ್ಲ. ಅವರಿಬ್ಬರೂ ಪೊಲೀಸ್ ಠಾಣೆಯಲ್ಲಿಯೇ  ಲಾಕಪ್ ಡೆತ್ ಆಗುತ್ತಾರೆ. ಪೊಲೀಸರ ವಿಪರೀತ ಚಿತ್ರಹಿಂಸೆಯಿಂದಾಗಿ ಪೊಲೀಸರ ಬಂದಿಯಾಗಿರುವಾಗಲೇ ಇಬ್ಬರೂ ಕೊಲೆಯಾಗುತ್ತಾರೆ. ಕಾನೂನು ಪಾಲಕರೇ, ಅಲ್ಲಿ ತಂದೆ ಮಗ ಇಬ್ಬರನ್ನು ಕೊಂದು ಹಾಕಿದ್ದರು.

ಈ ಪ್ರಕರಣವು ಇಡೀ ದೇಶದಲ್ಲಿ ದೊಡ್ಡ ಸುದ್ದಿಯನ್ನಾಗಿ ಮಾಡಿತ್ತು ಅವತ್ತು. ಈ ಪ್ರಕರಣದ ಪರವಾಗಿ ಮತ್ತು ಪೊಲೀಸರ ವಿರುದ್ಧ ಸಾರ್ವಜನಿಕವಾಗಿ ಆಕ್ರೋಶವು ಮುಗಿಲು ಮುಟ್ಟಿದ್ದವು. ಪರಿಣಾಮ, ಈ ಬಗ್ಗೆ ಉನ್ನತ ತನಿಖೆಯು   ಪ್ರಾರಂಭವಾಗುತ್ತದೆ. ಆ ಉನ್ನತ ತನಿಖೆಯಲ್ಲಿ  ಪೊಲೀಸರ ತಪ್ಪು ಸ್ಪಷ್ಟವಾಗಿ ಕಾಣಿಸುತ್ತದೆ. ಅವರ ತಪ್ಪುಗಳು ಸಾಬೀತಾಗುತ್ತವೆ. ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್, ಇಬ್ಬರು ಸಬ್ ಇನ್ಸ್ಪೆಕ್ಟರ್, ಉಳಿದ ಪೊಲೀಸ್ ಕಾನ್ಸ್ಟೇಬಲ್ ಗಳು ತಂದೆ ಹಾಗೂ ಮಗನನ್ನು ಬೆತ್ತಲೆ ಗೊಳಿಸಿ ಥಳಿಸಿ ಕೊಂದಿದ್ದಾರೆ ಎನ್ನುವುದು ತನಿಖೆಯಲ್ಲಿ ಸಾಬೀತಾಗುತ್ತದೆ. ಈ ಪ್ರಕರಣಕ್ಕೆ  ಸಂಬಂಧಿಸಿದಂತೆ ಸುಮಾರು ನೂರಕ್ಕೂ ಹೆಚ್ಚು ಸಾಕ್ಷಿಗಳು, ಪೊಲೀಸರ ವಿರುದ್ಧವೇ  ಸ್ಪಷ್ಟವಾಗಿ ಸಾಕ್ಷಿ ಹೇಳಿದ್ದರು. ಇದರಲ್ಲಿ ಅದೇ ಪೊಲೀಸ್ ಠಾಣೆಯ ಮಹಿಳಾ ಕಾನ್ಸ್ಟೇಬಲ್ ಒಬ್ಬರು, ಪೊಲೀಸರ ವಿರುದ್ಧವೇ ಸಾಕ್ಷ್ಯ ನೋಡಿದ್ದರು.

ಈ ಪ್ರಕರಣವು ಹತ್ತರಲಿ ಹನೊಂದಾಗಬಹುದು ಎಂಬ ಅನುಮಾನಗಳ ನಡುವೆ ನ್ಯಾಯದ ಚಿಲುಮೆ ಚಿಮ್ಮಿರುವುದು ಸಾರ್ವಜನಿಕವಾಗಿ ಸಂತೋಷಕ್ಕೆ ಕಾರಣವಾಗಿದೆ.  ಜಿಲ್ಲಾ ನ್ಯಾಯಾಲಯದಿಂದ ಮರಣದಂಡನೆ ಶಿಕ್ಷೆಗೆ ಒಳಗಾದ ಮೂವರು ಪೊಲೀಸ್ ಅಧಿಕಾರಿಗಳು ಆರು ಪೊಲೀಸ್ ಕಾನ್ಸ್ಟೇಬಲ್ಸ್, ಮೇಲಿನ ನ್ಯಾಯಾಲಯದ ಮೊರೆ ಹೋಗುತ್ತಾರೆ ಅನ್ನುವದರಲ್ಲಿ ಯಾವ ಅನುಮಾನವೂ ಇಲ್ಲ. ಇದು ಹೈ ಕೋರ್ಟ್ಗೆ ಹೋಗಲಿದೆ ಅನ್ನುವುದರಲ್ಲಿ ಎರಡು ಮಾತಿಲ್ಲ.  ಆರೋಪಿತರಿಗೆ ತಮ್ಮ ವಾದ ಮಂಡನೆಗೆ ಇನ್ನೂ ಅವಕಾಶಗಳಿರುವ ಕಾರಣ, ಸದ್ಯಕ್ಕೆ ಮರಣದಂಡನೆ ಶಿಕ್ಷೆಯು ಜಾರಿಯಾಗುವುದಿಲ್ಲ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಬರ್ಗಿ ಅಣೆಕಟ್ಟಿನಲ್ಲಿ ಭೀಕರ ದುರಂತ-ಕರುಳು ಹಿಂಡುವ ದೃಶ್ಯ ಅಮ್ಮ-ಮಗು ಅಪ್ಪಿಕೊಂಡೇ ಜಲಸಮಾದಿ ಸಂತೋಷದ ಪ್ರವಾಸದಿಂದ ಶೋಕದ ಸಾಗರಕ್ಕೆ
ವಿಶ್ವದ ನಂಬರ್ ವನ್ ಜನನಾಯಕನಾದ ಪ್ರಧಾನಿ ಮೋದಿ
ಕಾರ್ಕಳದ ವೈದ್ಯಕೀಯ ವಿದ್ಯಾರ್ಥಿನಿ ಭೀಕರ  ಅಪಘಾತಕ್ಕೆ ಬಲಿ
ತಪ್ಪುಅರ್ಥಕ್ಕೆಕ್ಷಮೆ, ಹೊಸರೂಪದಲ್ಲಿಮತ್ತೆ ‘ಸರ್ಸೆಸೆರಗು’”-ಪ್ರೇಮ್
ತಮಿಳುನಾಡು ರಾಜಕೀಯದಲ್ಲಿ ದಿನಕ್ಕೊಂದು ಟ್ವಿಸ್ಟ್ -TVK wave ಎಷ್ಟು ದೂರ ಸಾಗುತ್ತದೆ?
ಬೆಂಗಳೂರಿನಲ್ಲಿ₹2,384 ಕೋಟಿ GSTದಂಧೆ ಭೇದಿಸಿದ ಇಲಾಖೆ.. ಭರ್ಜರಿ ದಾಳಿ! ಭಾರೀ GST ಸ್ಕ್ಯಾಂ .. ಹಲವರು ಬಲೆಗೆ ಬೀಳುವ ಸಾಧ್ಯತೆ!…
ಮತ್ತೆ ಹೊತ್ತಿ ಉರಿದ ಮಧ್ಯಪ್ರಾಚ್ಯ: ಇಸ್ರೇಲ್ ಪ್ರಧಾನಿ ನೆತನ್ಯಾಹು ಹೇಳಿಕೆ ಬೆನ್ನಲ್ಲೇ ಲೆಬನಾನ್ ಮತ್ತು ಗಾಜಾದಲ್ಲಿ ಹೆಚ್ಚಿದ ಭೀಕರ ಯುದ್ಧದ ತೀವ್ರತೆ.
ಸಂಸದ ಸಂಜಯ್ ಅರೋರ ಬಂಧನ…. ಉಳಿದ ಮೂರು ಸಂಸದರನ್ನು ಸೆಳೆಯಲು ಈ ಅನೈತಿಕ ಮಾರ್ಗ ಎಂದು ಎಎಪಿ.
ಹಾರ್ಮುಜ್ ಬಳಿ ಹಡಗುಗಳ ಹಿಂತಿರುಗುವ ಸರಣಿ!ಜಾಗತಿಕ ತೈಲ ಸರಬರಾಜಿಗೆ ಶಾಕ್ ⚠️
ಮೋದಿ ನೇತೃತ್ವದಲ್ಲಿ ಇತಿಹಾಸಕ್ಕೆ ಮರಳಿದ ರಾಜರಾಜಚೋಳರ ಹೆಮ್ಮೆ — ಆನೈಮಂಗಲಂ ತಾಮ್ರಶಾಸನಗಳು! 1000 ವರ್ಷದ ಇತಿಹಾಸ 100 ವರ್ಷಗಳ ಬಳಿಕ ಚೋಳರ ಕಾಲದ ಅಪರೂಪದ ದಾಖಲೆ ನೆದರ್‌ಲ್ಯಾಂಡ್ಸ್‌ನಿಂದ ಭಾರತಕ್ಕೆ ವಾಪಸ್….
ಹಿರಿಯಡ್ಕದ ಬಾರಿನಲ್ಲಿ ಸರಿ ಕುಡಿದು ಗುಂಡಾಗಿರಿ, ಬಿಯರ್ ಬಾಟಲಿಯಿಂದ ಹಲ್ಲೆ
ಬೆಂಗಳೂರು ಟು ಮುಂಬೈ  ಐದೇ ಘಂಟೆ ಪ್ರಯಾಣ- ಎಕ್ಸ್ಪ್ರೆಸ್ ಹೈವೇಗೆ ಅಸ್ತು
ನಾಸಿಕ್‌ನ Tata Consultancy Services ಕಚೇರಿಯಲ್ಲಿ ಗಂಭೀರ ಆರೋಪಗಳ ನಡುವೆ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ — ಸುರಕ್ಷತೆಗೆ ಮೊದಲ ಆದ್ಯತೆ.
ಹಳಿಯಾಳದಲ್ಲಿ ನೀರಿನ ಹಾಹಾಕಾರ… ಮಾರ್ಚ್ 16ರಂದು ಬೃಹತ್ ಪ್ರತಿಭಟನೆ 
ನಿರ್ಮಾಣ ಹಂತ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು-  ಶಣೈ ಮೇಲೆ ಕೇಸು
ಕಾಂಗ್ರೆಸ್‌ಗೆ ಹೊಸ ತಲೆನೋವು? ಅಹಿಂದ ಸಂಘಟನೆಯಿಂದ ‘ಪಕ್ಷ ವಿಭಜನೆ’ ಎಚ್ಚರಿಕೆ!
ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ
ಮಂಗಳೂರು ಸಿಟಿ ಪೊಲೀಸರ ಭರ್ಜರಿ ಬೇಟೆ – ನಿಷೇಧಿತ ಎಂಡಿಎಂ, ಗಾಂಜಾ ಮರಾಟಗಾರರ ಬಂಧನ
ಜಾಗತಿಕ ಸಂಘರ್ಷದ ಮಧ್ಯೆ ಭಾರತ–ಯುಎಇ ಬಿಗ್ ಡೀಲ್! ತಂತ್ರಜ್ಞಾನ, ಇಂಧನ ಮತ್ತು ಭದ್ರತೆಯಲ್ಲಿ ಐತಿಹಾಸಿಕ ಒಗ್ಗಟ್ಟು.
ಮಸೀದಿ ಹುಂಡಿಗೂ ಲಗ್ಗೆ ಇಟ್ಟ ಕಳ್ಳರು….!
ಅಮಿತ್ ಶಾ- “UCC ಜಾರಿಗೆ ತಂದು ನಾಲ್ಕು ಮದುವೆ ಪದ್ಧತಿ ನಿಷೇಧ” — ಪಶ್ಚಿಮ ಬಂಗಾಳದಲ್ಲಿ ದೊಡ್ಡ ಘೋಷಣೆ
Golden Hour ಉಳಿಸುವತ್ತ ಗ್ರಾಮದಿಂದ ನಗರವರೆಗೆ – ಕರ್ನಾಟಕ ಹೆಲ್ತ್ ಸಿಸ್ಟಮ್ ಮಹತ್ವದ ಹೆಜ್ಜೆ
ಮನೆಯವರಿಂದಲೇ 16 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು! ಪೊಲೀಸರಿಗೆ ದೂರು 🚨
ಸ್ಮಾರ್ಟ್ ಲಾಕ್ ಇದ್ದ ಸುರಕ್ಷಿತ ಮನೆಯಲ್ಲೇ ಯುವತಿಯ ರೇಪ್ ಅಂಡ್ ಮರ್ಡರ್…!ನಗರವನ್ನು ಬೆಚ್ಚಿಬೀಳಿಸಿದ ಘಟನೆ”
ಗೃಹ ಸಚಿವರಾದ ಜಿ ಪರಮೇಶ್ವರ್ ರವರ ಒಡೆತನದ ಸಂಸ್ಥೆಯಲ್ಲಿ ನಡೆದಿದೆ ಎಂಬ ವಿಡಿಯೋ ವೈರಲ್….!
ಇಂದು ಮಾಜಿ ಸಚಿವರಿಂದ ಸೌಹಾರ್ದ ಇಫ್ತಾರ್ ಕೂಟ 
ದಾವಣಗೆರೆ & ಬಾಗಲಕೋಟೆ ಬೈಎಲೆಕ್ಷನ್ ಬಿಗ್ ಬ್ಲಾಸ್ಟ್!
ವಂಚಕನ ಬೆನ್ನಿಗೆ ನಿಂತರೆ, ಕೊರಳಿಗೆ ಉರುಳಾದೀತು!
ಕರ್ನಾಟಕದಲ್ಲಿ ತಾಪಮಾನ ಅಪಾಯ ಮಟ್ಟಕ್ಕೆ!ಆಸ್ಪತ್ರೆಗಳಲ್ಲಿ ವಿಶೇಷ ಹೀಟ್ ಸ್ಟ್ರೋಕ್ ರೂಮ್‌ಗಳು-ಆರೋಗ್ಯ ಇಲಾಖೆ ತುರ್ತು ಕ್ರಮ ಜಾರಿ
ಹಳೆಯ ಬಟ್ಟೆಗೂ ಹಣ ಸಿಗುತ್ತಾ?! ಬೆಂಗಳೂರಿನ ಈ ಸ್ಟಾರ್ಟ್‌ಅಪ್ ನಿಜಕ್ಕೂ ಶಾಕ್ ಕೊಡುತ್ತಿದೆ!