📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಮರಣದಂಡನೆ ಶಿಕ್ಷೆಗೆ ಈಡಾದ  ತಮಿಳುನಾಡು   ಪೊಲೀಸರು

ಅತ್ಯಂತ ಅಪರೂಪದಲ್ಲಿಯೇ ಅಪರೂಪದ ಘಟನೆ ಇದು. ನ್ಯಾಯಾಲಯದಲ್ಲಿ ನ್ಯಾಯವು ಇನ್ನೂ ಇದೆ, ಅನ್ನೋದನ್ನು ಸಾಬೀತು ಪಡಿಸುವಂತಹ ಆದೇಶವು ಕೇಳ ನ್ಯಾಯಾಲಯದಿಂದ ಬಂದಿದೆ.

ಅದು ಅಂತಿಂತಹ ಪ್ರಕರಣವಲ್ಲ, ಲಾಕಪ್ ಡೆತ್ ಪ್ರಕರಣ. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳು ಸೇರಿದಂತೆ ಒಂಬತ್ತು ಪೊಲೀಸರ ತಪ್ಪು ಸಾಬೀತಾಗಿದ್ದು, ಅವರಿಗೆ ನ್ಯಾಯಾಲಯವು ಮರಣದಂಡನೆಯ ಶಿಕ್ಷೆಯನ್ನು ವಿಧಿಸಿದೆ.

ಇದು ಪಕ್ಕದ ತಮಿಳುನಾಡು ರಾಜ್ಯದ ಮಧುರೈ ಸಮೀಪದ ತೂತುಕುಡಿ ಜಿಲ್ಲೆಯಲ್ಲಿ ನಡೆದಂತಹ ಪ್ರಕರಣ ಒಂದಕ್ಕೆ ಸಂಬಂಧಿಸಿದಂತೆ, ಇಂತಹದೊಂದು ಜಬರ್ದಸ್ತ್ ಆದೇಶವು ನ್ಯಾಯಾಲಯದಿಂದ ಬಂದಿದೆ.

2020 ಜೂನ್ 19 ತೂತುಕುಡಿ ಜಿಲ್ಲೆಯ ಸತಮ್ ಕುಳಂ ಪೋಲಿಸ್ ಠಾಣೆಯಲ್ಲಿ ನಡೆದಂತಹ ಭೀಕರವಾದಂತಹ ಘಟನೆಇದು. ಇಡೀ ದೇಶದಲ್ಲಿ ಕರೋನ ಮಹಾಮಾರಿಯು ತನ್ನ ಅಟ್ಟಹಾಸ ಮೆರೆಯುತ್ತಿರುವಂತಹ ಸಮಯವದು. ಇಲ್ಲಿನ ಮೊಬೈಲ್ ಅಂಗಡಿ ಒಂದರ ಮಾಲೀಕ ಜಯರಾಜ್ ಹಾಗೂ ಅವರ ಮಗ  ಬೆನಿಕ್ಸ್  ತಮ್ಮ ಅಂಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಮಯದಲ್ಲಿ, ಅವರಿಬ್ಬರನ್ನು ಪೊಲೀಸರು ಕರೆದೊಯ್ಯುತ್ತಾರೆ.

ಹಾಗೆ ಬಂಧಿಸಿ ಕರೆದೊಯ್ದ ಜಯರಾಜ್ ಹಾಗೂ ಬೆನಿಕ್ಸ್ ಇಬ್ಬರೂ ಜೀವಂತವಾಗಿ ಹೊರಗೆ ಬರುವುದಿಲ್ಲ. ಅವರಿಬ್ಬರೂ ಪೊಲೀಸ್ ಠಾಣೆಯಲ್ಲಿಯೇ  ಲಾಕಪ್ ಡೆತ್ ಆಗುತ್ತಾರೆ. ಪೊಲೀಸರ ವಿಪರೀತ ಚಿತ್ರಹಿಂಸೆಯಿಂದಾಗಿ ಪೊಲೀಸರ ಬಂದಿಯಾಗಿರುವಾಗಲೇ ಇಬ್ಬರೂ ಕೊಲೆಯಾಗುತ್ತಾರೆ. ಕಾನೂನು ಪಾಲಕರೇ, ಅಲ್ಲಿ ತಂದೆ ಮಗ ಇಬ್ಬರನ್ನು ಕೊಂದು ಹಾಕಿದ್ದರು.

ಈ ಪ್ರಕರಣವು ಇಡೀ ದೇಶದಲ್ಲಿ ದೊಡ್ಡ ಸುದ್ದಿಯನ್ನಾಗಿ ಮಾಡಿತ್ತು ಅವತ್ತು. ಈ ಪ್ರಕರಣದ ಪರವಾಗಿ ಮತ್ತು ಪೊಲೀಸರ ವಿರುದ್ಧ ಸಾರ್ವಜನಿಕವಾಗಿ ಆಕ್ರೋಶವು ಮುಗಿಲು ಮುಟ್ಟಿದ್ದವು. ಪರಿಣಾಮ, ಈ ಬಗ್ಗೆ ಉನ್ನತ ತನಿಖೆಯು   ಪ್ರಾರಂಭವಾಗುತ್ತದೆ. ಆ ಉನ್ನತ ತನಿಖೆಯಲ್ಲಿ  ಪೊಲೀಸರ ತಪ್ಪು ಸ್ಪಷ್ಟವಾಗಿ ಕಾಣಿಸುತ್ತದೆ. ಅವರ ತಪ್ಪುಗಳು ಸಾಬೀತಾಗುತ್ತವೆ. ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್, ಇಬ್ಬರು ಸಬ್ ಇನ್ಸ್ಪೆಕ್ಟರ್, ಉಳಿದ ಪೊಲೀಸ್ ಕಾನ್ಸ್ಟೇಬಲ್ ಗಳು ತಂದೆ ಹಾಗೂ ಮಗನನ್ನು ಬೆತ್ತಲೆ ಗೊಳಿಸಿ ಥಳಿಸಿ ಕೊಂದಿದ್ದಾರೆ ಎನ್ನುವುದು ತನಿಖೆಯಲ್ಲಿ ಸಾಬೀತಾಗುತ್ತದೆ. ಈ ಪ್ರಕರಣಕ್ಕೆ  ಸಂಬಂಧಿಸಿದಂತೆ ಸುಮಾರು ನೂರಕ್ಕೂ ಹೆಚ್ಚು ಸಾಕ್ಷಿಗಳು, ಪೊಲೀಸರ ವಿರುದ್ಧವೇ  ಸ್ಪಷ್ಟವಾಗಿ ಸಾಕ್ಷಿ ಹೇಳಿದ್ದರು. ಇದರಲ್ಲಿ ಅದೇ ಪೊಲೀಸ್ ಠಾಣೆಯ ಮಹಿಳಾ ಕಾನ್ಸ್ಟೇಬಲ್ ಒಬ್ಬರು, ಪೊಲೀಸರ ವಿರುದ್ಧವೇ ಸಾಕ್ಷ್ಯ ನೋಡಿದ್ದರು.

ಈ ಪ್ರಕರಣವು ಹತ್ತರಲಿ ಹನೊಂದಾಗಬಹುದು ಎಂಬ ಅನುಮಾನಗಳ ನಡುವೆ ನ್ಯಾಯದ ಚಿಲುಮೆ ಚಿಮ್ಮಿರುವುದು ಸಾರ್ವಜನಿಕವಾಗಿ ಸಂತೋಷಕ್ಕೆ ಕಾರಣವಾಗಿದೆ.  ಜಿಲ್ಲಾ ನ್ಯಾಯಾಲಯದಿಂದ ಮರಣದಂಡನೆ ಶಿಕ್ಷೆಗೆ ಒಳಗಾದ ಮೂವರು ಪೊಲೀಸ್ ಅಧಿಕಾರಿಗಳು ಆರು ಪೊಲೀಸ್ ಕಾನ್ಸ್ಟೇಬಲ್ಸ್, ಮೇಲಿನ ನ್ಯಾಯಾಲಯದ ಮೊರೆ ಹೋಗುತ್ತಾರೆ ಅನ್ನುವದರಲ್ಲಿ ಯಾವ ಅನುಮಾನವೂ ಇಲ್ಲ. ಇದು ಹೈ ಕೋರ್ಟ್ಗೆ ಹೋಗಲಿದೆ ಅನ್ನುವುದರಲ್ಲಿ ಎರಡು ಮಾತಿಲ್ಲ.  ಆರೋಪಿತರಿಗೆ ತಮ್ಮ ವಾದ ಮಂಡನೆಗೆ ಇನ್ನೂ ಅವಕಾಶಗಳಿರುವ ಕಾರಣ, ಸದ್ಯಕ್ಕೆ ಮರಣದಂಡನೆ ಶಿಕ್ಷೆಯು ಜಾರಿಯಾಗುವುದಿಲ್ಲ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಎಚ್ಚರ… ನಿಮ್ಮಸುತ್ತಮುತ್ತ ಏನು ನಡೆಯುತ್ತಿದೆ ಗೊತ್ತಿರಲಿ! 🚨Be Aware… Stay Alert… Save Youth!
ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಹೆಸರಲ್ಲಿ ನಡಿತಿರೋದೇನು?
ಕರಾವಳಿಯಲ್ಲಿ ಮತ್ತೆ ಸೈಬರ್ ವಂಚಕರ ಅಟ್ಟಹಾಸ: 3 ಪ್ರಕರಣಗಳಲ್ಲಿ ₹12 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡ ಜನ!
ಮಾರ್ಚ್ 17 :ಮಂಗಳೂರಿನಲ್ಲಿ ವಿಶ್ವ ಗ್ರಾಹಕರ ದಿನಾಚರಣೆ-ಗ್ರಾಹಕರ ಹಕ್ಕುಗಳ ಜಾಗೃತಿ ಕಾರ್ಯಕ್ರಮ
ಉಡುಪಿಯಲ್ಲಿ ಟ್ರೇಡಿಂಗ್ ಹೆಸರಲ್ಲಿ ಲಕ್ಷಗಟ್ಟಲೆ ಧೋಕಾ….
ಹೆಣ್ಣು ಎಂಬ ಕನಿಕರ, ಸಿಗದ ಹಾಗೆ ಮಾಡಿದ ಮಾಯಾಂಗನೇ…
ದವಳ ಕೋ- ಆಪರೇಟಿವ್ನ ಈ ಸಾಲಿನ ವ್ಯವಹಾರ ಎರಡುನೂರು ಕೋಟಿ
ವರದಕ್ಷಿಣ ಪ್ರಕರಣ:5.5 ತಿಂಗಳ ಮಗುವಿಗೂ ದೈಹಿಕ ಹಿಂಸೆ….!
ಅಮೇರಿಕಾ ಅಧ್ಯಕ್ಷರ ಮೇಲೆ ಎರಡನೆಯ ಬಾರಿ ಗುಂಡಿನ ದಾಳಿ
ಕರ್ನಾಟಕ CM ಬದಲಾವಣೆ ರಾಜಕೀಯ ಕೌಂಟ್‌ಡೌನ್ ಶುರುವಾಗಿದೆ! ತೆರೆಮರೆಯಲ್ಲಿ ಏನೋ ನಡೀತಿದೆ… 
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್‌ನಿಂದ ಬಂದ ಪ್ರಯಾಣಿಕನ ಬ್ಯಾಗ್‌ನಲ್ಲಿ 47 ಜೀವಂತ ಅಪರೂಪದ ಪ್ರಾಣಿಗಳು ಪತ್ತೆ! 
ಜೂನ್ 22ರವರೆಗೆ ಭಾರತದಲ್ಲಿ ಟೆಲಿಗ್ರಾಂ ಬ್ಯಾನ್…!ಅಪ್ಲಿಕೇಶನ್ ಬ್ಯಾನ್ ಅಲ್ಲ, ವ್ಯವಸ್ಥೆ ಸರಿಪಡಿಸಿ! ಸರ್ಕಾರಕ್ಕೆ ನಿಸರ್ಗ ಅಧಿಕಾರಿಯ ಸಲಹೆ
ನೀವು Fit…ಆದ್ರೆ ನಿಮ್ಮ ಹೃದಯ ?ಮನೆಯಲ್ಲಿಯೇ 5 ನಿಮಿಷದಲ್ಲಿ ಪರೀಕ್ಷಿಸಿಕೊಳ್ಳಿ ನಿಮ್ಮ ಹೃದಯದ ಆರೋಗ್ಯ!
“ಬೆಡ್‌ರೂಮ್ ರಾಜಕೀಯ”ಪಪ್ಪು ಯಾದವ್ ಹೇಳಿಕೆ ಸ್ಫೋಟಕ ಚರ್ಚೆ…!ಪಪ್ಪು ತಪ್ಪಾಗ್ ಮಾತಾಡಿದ್ದು ತಪ್ಪು 
ಡಿಕೆಶಿ ಸೈಲೆಂಟ್ ಆಪರೇಷನ್ ಮಿಸ್ ಫೈರ್ ಆಗಿದ್ದೆಲ್ಲಿ?ರಾಷ್ಟ್ರ ರಾಜಧಾನಿಯಲ್ಲಿ ಕರ್ನಾಟಕ ಕಾಂಗ್ರೆಸ್ ಹೈ-ವೋಲ್ಟೇಜ್ ಹರಟೆ…!
ವಿದೇಶಿಗರ ಮೇಲೆ ನಿಗಾ ಇಟ್ಟ ಕೇಂದ್ರ ಗೃಹ ಇಲಾಖೆ! ನಿಯಮ ಮೀರಿದರೆ ಕಠಿಣ ಕ್ರಮ ಗ್ಯಾರಂಟಿ! 
Trump ಮಾತಿಗೆ Iran ಸಂಸತ್ ಸ್ಪೀಕರ್‌ನ ಕಠಿಣ ಸಂದೇಶ ವಿಶ್ವದ ಗಮನ ಸೆಳೆದಿದೆ!
ಇತಿಹಾಸ ಸೃಷ್ಟಿಸಿದ ಈಶಾಂಕ್ ಸಮುದ್ರವನ್ನೇ ಸವಾಲಾಗಿ ತೆಗೆದುಕೊಂಡ 7 ವರ್ಷದ ಹೀರೋ ..!
🚨 ಬೈಂದೂರಿನಲ್ಲಿ ಭಯಾನಕ ದಾಳಿ! ಕತ್ತಿಯಿಂದ ಹಲ್ಲೆ – ಆರೋಪಿ ಬಂಧನ
ದಾವೂದ್ ಇಬ್ರಾಹಿಂನ ಆಪ್ತ. ಸಲೀಂ ಡೋಲಾ ಬಂದನ ವಿದೇಶದಲ್ಲಿ ಅಡಗಿದ್ದರೂ ಕಾನೂನಿನಿಂದ ತಪ್ಪಿಸಿಕೊಳ್ಳಲಾಗಲಿಲ್ಲ
₹168 ಕೋಟಿ ಆದಾಯದೊಂದಿಗೆ ಕುಕ್ಕೆ ಸುಬ್ರಹ್ಮಣ್ಯ 15ನೇ ವರ್ಷವೂ ಅಗ್ರಸ್ಥಾನದಲ್ಲಿ… ಕೋಟಿ ಕೋಟಿ ಕಾಣಿಕೆ – ಭಕ್ತಿಯ ಮಹಾಪ್ರವಾಹ ಕುಕ್ಕೆ ದೇವಾಲಯ…
ಕನಕಪುರ ಬಂಡೆ ಬಿಜೆಪಿಗೆ ಎಂಬ ಬೋಗಸ್ ಸುದ್ದಿ
ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿ ಗಡಿಪಾರು ಆದೇಶ….
‘₹1ಕ್ಕೆ ಫ್ಯಾಷನ್’ ಜಾಹೀರಾತು ವೈರಲ್… ಮಾಲಾಡ್ ಮಾಲ್‌ನಲ್ಲಿ ನಿಯಂತ್ರಣ ತಪ್ಪಿದ ಜನಸಾಗರ-ಸ್ಟ್ಯಾಂಪೀಡ್ ಭೀತಿ ಮೂಡಿಸಿದ ಜನಸಂದಣಿ!
“ಶಾಲಾ ಬಸ್‌ನಲ್ಲಿ ಪ್ರಯಾಣಿಸುವ ಪ್ರತಿಯೊಂದು ಮಗುವಿನ ಸುರಕ್ಷತೆಗೆ ಶಾಲೆಯೇ ಹೊಣೆ!”
ರಾಜಕೀಯದಲ್ಲಿ ಅನುಭವ ಎಷ್ಟು ಮುಖ್ಯ?…  ತಮಿಳುನಾಡು ರಾಜಕಾರಣ ತೋರಿಸುತ್ತಿದೆ ನೋಡಿ
ಒಂದು ಸಹಿ… ಲಕ್ಷಾಂತರ ರೂ. ಹೊಣೆಗಾರಿಕೆಯ ಶಾಕ್!ಸಹಕಾರ ಸಂಸ್ಥೆಯಲ್ಲಿ ನಡೆದ ಅಕ್ರಮದ ಸತ್ಯ ಬಯಲು..
ಮುಖವಾಡ ಧರಿಸಿದವರನ್ನು ನಂಬುವ ಮುನ್ನ ನೂರು ಬಾರಿ ಯೋಚಿಸಿ…!
KGF, ಕಾಂತಾರ ಬ್ಯಾನರ್‌ನಲ್ಲಿ ಕಾಲಿವುಡ್ ‘ಜೈ ಭೀಮ್’..!ಹೊಂಬಾಳೆ ಜೊತೆ ಕೈಜೋಡಿಸಿದ ಸೂರ್ಯ, ಬಾಕ್ಸ್ ಆಫೀಸ್ ಧೂಳೀಪಟ ಖಚಿತ!
*ಬೈಕಂಪಾಡಿ ಹೆದ್ದಾರಿ ಡಕಾಯಿತಿ, 23 ಲಕ್ಷ ಮೌಲ್ಯದ ಸೊತ್ತು ದರೋಡೆ ಪ್ರಕರಣ: 3 ಆರೋಪಿಗಳು ಸೆರೆ.