📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಮಳೆ ಬರುತ್ತದೆ ಎಂದಾಗ ರಜೆ ಇಲ್ಲ… ರಜೆ ಕೊಟ್ಟ ದಿನ ಮಳೆಯೇ ಇಲ್ಲ!ಹವಾಮಾನ ಮುನ್ಸೂಚನೆನಾ? ಖಚಿತ ಭವಿಷ್ಯವಾಣಿಯಾ? ಮಳೆ–ರಜೆ ಗೊಂದಲಕ್ಕೆ ಕಾರಣವೇನು?

    ಮಳೆಯ ಎಚ್ಚರಿಕೆ… ಆದರೆ ಆಕಾಶ ಮಾತ್ರ ಕ್ಲಿಯರ್! ಶಾಲೆಗಳಿಗೆ ರಜೆ ಏಕೆ?

    ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ… ಆದರೆ ರಜೆ ದಿನವೇ ಮಳೆಯ ಸುಳಿವೇ ಇಲ್ಲ! ಹೀಗಾಗಿ ಪೋಷಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಸಹಜವಾಗಿಯೇ ಪ್ರಶ್ನೆ ಮೂಡಿದೆ — “ಮಳೆ ಬರುತ್ತದೆ ಎಂದಾಗ ರಜೆ ಇಲ್ಲ… ರಜೆ ಕೊಟ್ಟಾಗ ಮಳೆಯೇ ಇಲ್ಲವೇ?”ಹವಾಮಾನ ಮುನ್ಸೂಚನೆ (Rain prediction) ಸುಳ್ಳಾದಾಗ ಬೇಸರ ಮತ್ತು ತೊಂದರೆ ಆಗುವುದು ಸಹಜ. 

    ಆದರೆ ಹವಾಮಾನ ಮುನ್ಸೂಚನೆ ಎಂದರೆ ಪ್ರತಿ ನಿಮಿಷದ ಹವಾಮಾನವನ್ನು 100% ಖಚಿತವಾಗಿ ಹೇಳುವ ವ್ಯವಸ್ಥೆಯಲ್ಲ. ಉಪಗ್ರಹ, ರಾಡಾರ್ ಮತ್ತು ಹವಾಮಾನ ಮಾದರಿಗಳ ಆಧಾರದ ಮೇಲೆ ಮಳೆ ಬೀಳುವ ಸಾಧ್ಯತೆ, ತೀವ್ರತೆ ಮತ್ತು ಅಪಾಯದ ಮಟ್ಟವನ್ನುಅಂದಾಜಿಸಲಾಗುತ್ತದೆ. ಕೆಲವೊಮ್ಮೆ ಕೆಲವೇ ಕಿಲೋಮೀಟರ್‌ಗಳ ಅಂತರದಲ್ಲೇ ಮಳೆಯ ಪರಿಸ್ಥಿತಿ ಸಂಪೂರ್ಣ ಬದಲಾಗಬಹುದು. ಹೀಗಾಗಿ ಮುನ್ಸೂಚನೆ ನೀಡಿದ ಪ್ರದೇಶದಲ್ಲಿ ತಕ್ಷಣ ಮಳೆ ಬೀಳದೇ ಇರಬಹುದು.

    ಇಂತಹ ಸಂದರ್ಭದಲ್ಲಿ ಜಿಲ್ಲಾಡಳಿತದ ನಿರ್ಧಾರವನ್ನು ಮಾತ್ರ ದೂಷಿಸುವುದು ಸರಿಯಲ್ಲ. IMDಯ ಮುನ್ಸೂಚನೆಗಳು ಮತ್ತು ವಿಪತ್ತು ನಿರ್ವಹಣಾ ವ್ಯವಸ್ಥೆಯ ಎಚ್ಚರಿಕೆಗಳನ್ನು ಆಧರಿಸಿ, ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಧಿಕಾರಿಗಳು ಮುನ್ನೆಚ್ಚರಿಕೆಯಾಗಿ ರಜೆ ಘೋಷಿಸುತ್ತಾರೆ. ಮಳೆ ಬರದಿದ್ದರೆ “ರಜೆ ಏಕೆ?” ಎಂಬ ಪ್ರಶ್ನೆ, ರಜೆ ನೀಡದೇ ಭಾರೀ ಮಳೆ ಅಥವಾ ಅನಾಹುತ ಸಂಭವಿಸಿದರೆ “ಮುನ್ನೆಚ್ಚರಿಕೆ ಏಕೆ ಇರಲಿಲ್ಲ?” ಎಂಬ ಮತ್ತೊಂದು ಪ್ರಶ್ನೆ ಎದುರಾಗುತ್ತದೆ.

    ಮುನ್ಸೂಚನೆ ತಪ್ಪಾಗಲು ಕಾರಣಗಳು

    • ವೇಗದ ಹವಾಮಾನ ಬದಲಾವಣೆ: ಗಾಳಿಯ ದಿಕ್ಕು ಮತ್ತು ಒತ್ತಡ ಕ್ಷಣಕ್ಷಣಕ್ಕೂ ಬದಲಾಗಬಹುದು.
    • ಸ್ಥಳೀಯ ಮೇಘಸ್ಫೋಟ: ಒಂದು ನಿರ್ದಿಷ್ಟ ಪ್ರದೇಶದಲ್ಲಿ ಮಾತ್ರ ಇದ್ದಕ್ಕಿದ್ದಂತೆ ಮಳೆಯಾಗಬಹುದು.
    • ಶೇಕಡಾವಾರು ಲೆಕ್ಕಾಚಾರ (PoP): ಉದಾಹರಣೆಗೆ “40% ಮಳೆ” ಎಂದರೆ ಇಡೀ ಊರಿನಲ್ಲಿ 40% ಭಾಗಕ್ಕೆ ಮಾತ್ರ ಮಳೆಯಾಗಬಹುದು ಎಂದೂ ಅರ್ಥ ಇರುತ್ತದೆ.
    • ಭೌಗೋಳಿಕ ಏರುಪೇರು: ಬೆಟ್ಟಗಳು, ಕಾಡುಗಳು ಮತ್ತು ಕಟ್ಟಡಗಳು ಮೋಡಗಳ ಚಲನೆಯನ್ನು ಬದಲಾಯಿಸುತ್ತವೆ. 

    ಹವಾಮಾನ ಯಾರ ಮಾತಿಗೂ ಕೇಳುವುದಿಲ್ಲ… ಮುನ್ಸೂಚನೆ ಬದಲಾಗಬಹುದು, ಮೋಡಗಳು ದಿಕ್ಕು ಬದಲಿಸಬಹುದು. ಆದರೆ ಮಕ್ಕಳ ಸುರಕ್ಷತೆಯಲ್ಲಿ ‘ರಿಸ್ಕ್’ ತೆಗೆದುಕೊಳ್ಳಲು ಸಾಧ್ಯವಿಲ್ಲ. ಅದಕ್ಕಾಗಿಯೇ ಕೆಲವೊಮ್ಮೆ ಮಳೆಯಿಲ್ಲದ ದಿನವೂ ರಜೆ ಘೋಷಿಸುವ ಅನಿವಾರ್ಯತೆ ಎದುರಾಗುತ್ತದೆ ಅಷ್ಟೆ…

    ##ಮಳೆ #ಹವಾಮಾನಮುನ್ಸೂಚನೆ #ಭಾರೀಮಳೆ #ಶಾಲೆರಜೆ #ಜಿಲ್ಲಾಡಳಿತ #IMD #ವಿಪತ್ತು ನಿರ್ವಹಣೆ

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಪೆಟ್ರೋಲ್ ಡೀಸೆಲ್ ದರ ಏರಿಕೆ ತಡೆಯಲು ಕೇಂದ್ರದ ಮಹತ್ವದ ಕ್ರಮ 
    ಕಾರ್ಕಳದ ವಂಚನೆ ಪ್ರಕರಣ, ದೂರುದಾರನ ಮೇಲೂ ಶಂಕೆ
    ₹119 ಕೋಟಿ ವ್ಯತ್ಯಾಸ ಸಣ್ಣ ವಿಷಯನಾ….ಏನಿದು ತಲೈವಾ..!
    ಕೋರ್ಟ್ ವಿಡಿಯೊ ವೈರಲ್‌ಗೆ ಬ್ರೇಕ್: ಸುಪ್ರೀಂ ಕೋರ್ಟ್ ಆದೇಶದ ಬಗ್ಗೆ ಜನಾಭಿಪ್ರಾಯ ಏನು?
    ಕುಡಿತದ ಅಮಲಿನಲ್ಲಿ ಹೆತ್ತ ತಾಯಿಯನ್ನೇ ಕೊಂದ ಮಗಳು, ಮೊಮ್ಮಗ: ಕೆಂಗೇರಿಯಲ್ಲಿ ಕರುಳು ಹರಿಯುವ ಕೃತ್ಯ!
    ಡಿಜಿಟಲ್ ದಿಗ್ಗಜರಿಗೆ ₹2 ಕೋಟಿ ಲೀಗಲ್ ನೋಟಿಸ್ ಶಾಕ್!ಯೂಟ್ಯೂಬ್ ಸ್ಟಾರ್ vs ಟಿವಿ ಸ್ಟಾರ್ ನಡುವಿನ ಕಾನೂನು ಸಮರ!
     “ಮೀನುಗಾರರ ಡೀಸೆಲ್ & ಸಿಲಿಂಡರ್ ಸಮಸ್ಯೆಗೆ ಸರ್ಕಾರದ ತುರ್ತು ಹಸ್ತಕ್ಷೇಪ -ಇಂಧನ ಭರವಸೆ: ಮಂಗಳೂರು ಬಂದರಿನಲ್ಲಿ ತುರ್ತು ಕ್ರಮ”-
    ಮದರಸಾದಲ್ಲಿ ದೌರ್ಜನ್ಯ ಮತ್ತು ಬಲವಂತದ ಕೂಲಿ ಆರೋಪ-24 ಮಕ್ಕಳ ರಕ್ಷಣೆ
    30 ವರ್ಷದ ಕನಸು ಸಾಕಾರ: ಮಾಣಿಲ–ಪೆರ್ಲ ಸಂಪರ್ಕಕ್ಕೆ ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್!
    “ಮಂಜಿನ ನಡುವೆ ಕ್ಷಣಾರ್ಧದಲ್ಲಿ ಮಾಯವಾದ ಮಗಳು”ಶ್ರೀನಂದಾ ಶವವಾಗಿ ಪತ್ತೆ…!
    ಕೌಶಾಂಬಿಯಲ್ಲಿ ಭೀಕರ LPG ಟ್ಯಾಂಕರ್ ದುರಂತ: ಸಿಸಿಟಿವಿಯಲ್ಲಿ ಸೆರೆಯಾದ ಜೀವಭಯದ ಕ್ಷಣಗಳು – ಮೃತರ ಸಂಖ್ಯೆ 4ಕ್ಕೆ ಏರಿಕೆ
    ಹೈ ಪ್ರೋಫೈಲ್ ಕೇಸ್ ಬಿಹಾರದಿಂದ UPವರೆಗೆ CID ಚೇಸ್… ಕೊನೆಗೂ ಸಿಕ್ಕಿದ ಸುಪಾರಿ ಕಿಲ್ಲರ್ಸ್!ಸಿನಿಮಾ ಸ್ಟೈಲ್ ಮರ್ಡರ್ ಮಿಸ್ಟರಿ: ಹೈಟೆಕ್ ಪ್ಲಾನ್ ಮಾಡಿದ ಹಂತಕರು… 
    ಸುಮಂತ್ ನಿಗೂಢ ಸಾವು ಪ್ರಕರಣ: ತನಿಖೆಗೆ ಹೊಸ ತಿರುವು—ಕುಟುಂಬಸ್ಥರ ಬ್ರೈನ್ ಮ್ಯಾಪಿಂಗ್, ಮಂಪರು ಪರೀಕ್ಷೆ!
    ವೆಟ್-ವೆಲ್‌ಗಳ ಕಳಪೆ ನಿರ್ವಹಣೆಚರಂಡಿ-ಬಾವಿಗಳಿಗೆ ಡ್ರೈನೇಜ್ ನೀರು..
    “ಡಾಲರ್ ಐಡಿ” ಹೆಸರಿನಲ್ಲಿ ಶೇರ್ ಮಾರ್ಕೆಟಿಂಗ್ ವಂಚನೆ – 30.90 ಲಕ್ಷ ರೂ. ವಂಚನೆ- ನಾಲ್ವರ ಮೇಲೆ ಪ್ರಕರಣ ದಾಖಲು
    ಕೇರಳ ಸರ್ಕಾರ ರಚನೆಯ ಕಗ್ಗಂಟು.. ಸಿಎಂ ಅಭ್ಯರ್ಥಿ ಆಯ್ಕೆಗೆ ಕಸರತ್ತು… ಕಾಂಗ್ರೆಸ್ ದುರ್ಬಲತೆಗೆ ಸಾಕ್ಷಿ
    ಅಂಡಮಾನ್ ಸಮುದ್ರದಲ್ಲಿ ಸಿಕ್ಕಿದ ಖಜಾನೆ! ಭಾರತದ ಇಂಧನ ಭವಿಷ್ಯ ಬದಲಾಗುತ್ತಿದೆಯೇ?
    ದೇವಳದ ಗೋಲ್ಮಾಲ್ ತಡೆಗೆ ಉಪ-ಮುಖ್ಯಮಂತ್ರಿ ಬುಲಾವ್!
    ಪಡ್ಡೆ ರೌಡಿಗಳ ಅಟ್ಟಹಾಸಕ್ಕೆ ಕಡಿವಾಣ ಬೀಳುವುದು ಯಾವಾಗ ಗ್ರಹಸಚಿವರೆ?
    ಸಾರ್ವಜನಿಕ ಸ್ಥಳದಲ್ಲಿ ಕೈಕೈ ಮಿಲಾಯಿಸಿ ಜಗಳ ಮಾಡಿದ್ರೇ ಹುಷಾರ್…!
    ಶಾಮ್ ಇನ್ಸ್ಟಿಟ್ಯೂಶನ್ ಪ್ರಸ್ತುತ ಪಡಿಸಿದ “ಕಜ್ಜ” ತುಳು ಸಿನಿಮಾದ ಆಡಿಯೋ, ಟೇಲರ್ ಬಿಡುಗಡೆ
    ಇಂದು ಮಂಗಳೂರಲ್ಲಿ ತಲೆಮೇಲೆ ಸುತ್ತು ಹೊಡೆದಂತೆ ಬಾರಿ ಶಬ್ದದೊಂದಿಗೆ ಹೆಲಿಕಾಪ್ಟರ್‌..!ಆಶ್ಚರ್ಯ ಮತ್ತು ಆತಂಕದ ಹಿಂದಿದೆ ಭದ್ರತಾ ‘ಮೆಗಾ ಡ್ರಿಲ್’ ..!ಅಸಲಿ ಕಾರಣವೇನು
    ಕಾಂಚನಾ ಟೆಕ್ಸ್‌ಟೈಲ್ಸ್ ಮ್ಯಾನೇಜರ್ ದಿನೇಶ್ ರಾಜ್ ಕೊಲೆ ಆರೋಪಿ 11 ವರ್ಷ ಬಳಿಕ ಅರೆಸ್ಟ್..!
    ಪಹಲ್ಗಾಂಮ್ ದಾಳಿಯ ಒಂದು ವರ್ಷ: ಇನ್ನೂ ಮುಗಿಯದ ನೋವು, ಮರೆಯಲಾಗದ ನೆನಪುಗಳು
    ಲಖನೌ ಅಗ್ನಿ ದುರಂತದ ಕೊನೆ ಕ್ಷಣದ ಫೋನ್ ಕರೆಗಳು …”ಅಪ್ಪಾ,ಪ್ಲೀಸ್ ನನ್ನನ್ನು ಉಳಿಸು…” – “ನನ್ನ ಮಗನ ಬಳಿ ಹೋಗಲು ಬಿಡಿ…”
    ವಿಶ್ವಸಂಸ್ಥೆಗೆ ಜೀವ ಬಂತು ನೋಡಿ…
    ಡೆಲಿವರಿ ಬಾಯ್ ಗೆ “₹500 ಟಿಪ್… !” video viral ಅಸಲಿ ಕಥೆ ಏನು..!?
    ಮಾರ್ಚ್ 17 :ಮಂಗಳೂರಿನಲ್ಲಿ ವಿಶ್ವ ಗ್ರಾಹಕರ ದಿನಾಚರಣೆ-ಗ್ರಾಹಕರ ಹಕ್ಕುಗಳ ಜಾಗೃತಿ ಕಾರ್ಯಕ್ರಮ
    ಮಂಗಳೂರು, ಮೈಸೂರಿಗೂ ‘Amazon Now’ 2,800 ಕೋಟಿ ಹೂಡಿಕೆ-
    ಏಪ್ರಿಲ್ 1, 2026ರಿಂದಲೇ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ