📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಮಹಿಳಾ ಕ್ರೀಡಾಪಟುಗಳ ಹೋರಾಟಕ್ಕೆ ಹೊಸ ತಿರುವು ಕೊಟ್ಟ ದೆಹಲಿ ಹೈಕೋರ್ಟ್!

ಭಾರತದ ಖ್ಯಾತ ಕುಸ್ತಿಪಟು Vinesh Phogat ಅವರಿಗೆ ದೆಹಲಿ ಹೈಕೋರ್ಟ್ ಮಹತ್ವದ ರಿಲೀಫ್ ನೀಡಿದ್ದು, ಭಾರತೀಯ ಕುಸ್ತಿ ಒಕ್ಕೂಟದ (WFI) ಕ್ರಮಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. “ಕ್ರೀಡೆಯಲ್ಲಿ ದ್ವೇಷ ರಾಜಕಾರಣಕ್ಕೆ ಜಾಗ ಇರಬಾರದು; ಮಾತೃತ್ವವನ್ನು ಅಥ್ಲೀಟ್ ವಿರುದ್ಧ ಬಳಸುವುದು ಅಮಾನುಷ” ಎಂದು ಕೋರ್ಟ್ ಖಡಕ್ ಎಚ್ಚರಿಕೆ ನೀಡಿದೆ.

ಪ್ರಮುಖ ಅಂಶಗಳು

  • ವಿನೇಶ್ ಫೋಗಟ್‌ಗೆ ದೆಹಲಿ ಹೈಕೋರ್ಟ್‌ನಿಂದ ದೊಡ್ಡ ರಿಲೀಫ್
  • ಏಷ್ಯನ್ ಗೇಮ್ಸ್ ಟ್ರಯಲ್ಸ್‌ನಲ್ಲಿ ಭಾಗವಹಿಸಲು ಅವಕಾಶ
  • WFI ವಿರುದ್ಧ “ದ್ವೇಷ ರಾಜಕಾರಣ” ಆರೋಪದ ಮೇಲೆ ಕೋರ್ಟ್ ಆಕ್ರೋಶ
  • “ಮಾತೃತ್ವ ಶಿಕ್ಷೆಯಾಗಬಾರದು” ಎಂಬ ಕೋರ್ಟ್‌ನ ಕಠಿಣ ಸಂದೇಶ
  • ಮಹಿಳಾ ಕ್ರೀಡಾಪಟುಗಳ ಹಕ್ಕುಗಳ ಬಗ್ಗೆ ದೇಶವ್ಯಾಪಿ ಚರ್ಚೆಗೆ ಕಾರಣವಾದ ಪ್ರಕರಣ.

2023ರಲ್ಲಿ ಮಾಜಿ WFI ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್  ವಿರುದ್ಧ ನಡೆದ ಲೈಂಗಿಕ ಕಿರುಕುಳ ವಿರೋಧಿ ಹೋರಾಟದಲ್ಲಿ ವಿನೇಶ್ ಪ್ರಮುಖ ಧ್ವನಿಯಾಗಿದ್ದರು. ಈಗಿನ ಬೆಳವಣಿಗೆಗಳು ಅವರನ್ನು ಉದ್ದೇಶಪೂರ್ವಕವಾಗಿ ಮೂಲೆಗುಂಪು ಮಾಡುವ ಪ್ರಯತ್ನವೇ ಎಂಬ ಪ್ರಶ್ನೆ ಮತ್ತೆ ಚರ್ಚೆಗೆ ಬಂದಿದೆ.

ವಿವಾದದ ಮೂಲ ಏನು?”ತಾಯ್ತನ ದೇಶದ ಗೌರವ-ಮಾತೃತ್ವಕ್ಕೆ ಶಿಕ್ಷೆ ಬೇಡ”

2025ರ ಜುಲೈನಲ್ಲಿ ತಾಯಿಯಾದ ವಿನೇಶ್, ಡಿಸೆಂಬರ್‌ನಲ್ಲಿ ನಿವೃತ್ತಿ ನಿರ್ಧಾರ ಹಿಂಪಡೆದು ಮತ್ತೆ ಕಣಕ್ಕಿಳಿಯಲು ಸಿದ್ಧರಾಗಿದ್ದರು. ಆದರೆ WFI ಹೊಸ ನಿಯಮ ಜಾರಿಗೆ ತಂದು, ಇತ್ತೀಚಿನ ರಾಷ್ಟ್ರೀಯ ಪದಕ ವಿಜೇತರಿಗೆ ಮಾತ್ರ ಟ್ರಯಲ್ಸ್ ಅವಕಾಶ ನೀಡಿತು.

ಗರ್ಭಧಾರಣೆಯಿಂದ ರಾಷ್ಟ್ರೀಯ ಟೂರ್ನಿಗಳನ್ನು ಮಿಸ್ ಮಾಡಿದ್ದ ಕಾರಣದಿಂದಲೇ ತಮ್ಮನ್ನು ಗುರಿಯಾಗಿಸಿಕೊಂಡು ನಿಯಮ ಬದಲಾಯಿಸಲಾಗಿದೆ ಎಂದು ವಿನೇಶ್ ಆರೋಪಿಸಿದ್ದರು.

“ಭಾರತದಲ್ಲಿ ತಾಯ್ತನವನ್ನು ಗೌರವಿಸಲಾಗುತ್ತದೆ. ಅದನ್ನೇ ಒಬ್ಬ ಮಹಿಳಾ ಕ್ರೀಡಾಪಟುವಿನ ವೃತ್ತಿಜೀವನಕ್ಕೆ ಅಡ್ಡಿಯಾಗುವ ರೀತಿಯಲ್ಲಿ ಬಳಸಬಾರದು” ಎಂದು ನ್ಯಾಯಪೀಠ ಕಠಿಣವಾಗಿ ಹೇಳಿದೆ.

ಪ್ಯಾರಿಸ್ ಒಲಿಂಪಿಕ್ಸ್ ವೇಳೆ ವಿನೇಶ್ ಅನರ್ಹಗೊಂಡ ವಿಚಾರವನ್ನು “ರಾಷ್ಟ್ರೀಯ ಅವಮಾನ” ಎಂದು WFI ನೋಟಿಸ್‌ನಲ್ಲಿ ಉಲ್ಲೇಖಿಸಿದ್ದಕ್ಕೂ ಕೋರ್ಟ್ ಆಕ್ರೋಶ ವ್ಯಕ್ತಪಡಿಸಿದೆ.

2026ರ ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ವಿನೇಶ್ ಫೋಗಟ್ ಭಾಗವಹಿಸಲು ಅವಕಾಶ ಕಲ್ಪಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ನಿರ್ದೇಶನ ನೀಡಿದೆ. ಜೊತೆಗೆ, ಪ್ರಕರಣ ಪರಿಶೀಲನೆಗಾಗಿ ವಿಶೇಷ ತಜ್ಞರ ಸಮಿತಿ ರಚಿಸುವಂತೆಯೂ ಸೂಚಿಸಿದೆ.

ವಿಚಾರಣೆ ವೇಳೆ ನ್ಯಾಯಾಲಯವು WFI ವಿರುದ್ಧ ಗಂಭೀರ ಪ್ರಶ್ನೆಗಳನ್ನು ಎತ್ತಿತು.

  • ಆಯ್ಕೆ ಮಾನದಂಡಗಳನ್ನು ಕೊನೆಯ ಕ್ಷಣದಲ್ಲಿ ಏಕೆ ಬದಲಾಯಿಸಲಾಯಿತು?
  • ನಿಯಮ ಬದಲಾವಣೆಯ ಹಿಂದೆ ವೈಯಕ್ತಿಕ ದ್ವೇಷವೇ ಕಾರಣವೇ?
  • ಮಾತೃತ್ವದ ಕಾರಣದಿಂದ ಸ್ಪರ್ಧೆಯಿಂದ ದೂರವಿದ್ದ ಅಥ್ಲೀಟ್‌ಗೆ ಇದು ನ್ಯಾಯವೇ?
##VineshPhogat #WFI #DelhiHighCourt #AsianGames2026 #WomenInSports #WrestlingIndia #SportsPolitics

COMMENTS

Login with Gmail to comment

ಇನ್ನಷ್ಟು ಸುದ್ದಿ

ಡಿಸ್ಟಿಂಕ್ಷನ್ ಪಡೆದರೆ ಸಂಭ್ರಮಿಸುತ್ತಿದ್ದ ಕಾಲ ಹೋಗಿ, ಇಂದು 99% ಬಂದರೂ ಬೀದಿಯಲ್ಲಿ ನಿಂತು ಅಳಬೇಕಾದ ದುಸ್ಥಿತಿ ..ಇದು ನಮ್ಮಇಂದಿನ ಶಿಕ್ಷಣ ವ್ಯವಸ್ಥೆ!
ಡಿಕೆಎಮುಲ್‌ನಿಂದ ₹1,270 ಕೋಟಿ ದಾಖಲೆ ಬೆಳವಣಿಗೆ ಹೊಸ ಮೈಲುಗಲ್ಲು..!
ಶಾಲೆ ಹತ್ತಿರವಿದ್ದರೂ,ಮಕ್ಕಳ ಹೆಲ್ಮೆಟ್ ನಿರ್ಲಕ್ಷಿಸಬೇಡಿ!4 ವರ್ಷದೊಳಗಿನ ಮಗುಗೂ ಹೆಲ್ಮೆಟ್ ಕಡ್ಡಾಯ!
ಸಿದ್ದು vs ಕೃಷ್ಣ -ಸಿದ್ಧು ವಿರುದ್ಧ ನೇರ ಸವಾಲು: ‘ಬಿ’ ರಿಪೋರ್ಟ್ ಪ್ರಶ್ನಿಸಿ ಸ್ನೇಹಮಯಿ ಕೃಷ್ಣನ ನಡೆ ಭ್ರಷ್ಟ ವ್ಯವಸ್ಥೆಗೆ ಬಿಗಿ ಹೊಡೆತ!”
5.5 ವರ್ಷದ ಹೆಣ್ಣುಮಗಳ ಕೊಲೆ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್!ಮಗು ಸತ್ತು 3 ತಿಂಗಳು…ಆದ್ರೆ FIR ಇಲ್ಲ! 3 ಪೊಲೀಸರು ಸಸ್ಪೆಂಡ್
ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ರಣಕಹಳೆ!”
ಶಿರಸಿ ಮಾರಿಯಮ್ಮನ ಜಾತ್ರೆ ಪ್ರಾರಂಭ
ರಾಜಕೀಯ ಬದಲಾಗುತ್ತಿದೆ -ಪಂಚರಾಜ್ಯ election ರಿಸಲ್ಟ್ “ಗೆಲುವು-ಸೋಲಿನ ಶಕ್ತಿ ಪಕ್ಷದಲ್ಲಲ್ಲ… ಜನರ ಕೈಯಲ್ಲಿ”
ಫ್ರಿಡ್ಜ್ ರಿಪೇರಿಗೆ ಬಂದವ ಮನೆ ಲೂಟಿ ಪರಾರಿ…!ಬಿ ಅಲರ್ಟ್ ‼️
ತಮಿಳುನಾಡು ಮುಖ್ಯಮಂತ್ರಿ ವಿಜಯ್, ಚಧುರಂಗದಾಟದಲ್ಲಿ ಲಾಂಗ್ ಟೈಮ್ ಉಳಿಯುವರೇ?
ಹತ್ತು ವರ್ಷದಿಂದ ಪೊಲೀಸರಿಗೆ ಬೇಕಾದ ಆರೋಪಿಯನ್ನು ಕೊನೆಗೂ ಬಂಧಿಸಿದ ಪೊಲೀಸರು
ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ
ಲಖನೌ ಅಗ್ನಿ ದುರಂತದ ಕೊನೆ ಕ್ಷಣದ ಫೋನ್ ಕರೆಗಳು …”ಅಪ್ಪಾ,ಪ್ಲೀಸ್ ನನ್ನನ್ನು ಉಳಿಸು…” – “ನನ್ನ ಮಗನ ಬಳಿ ಹೋಗಲು ಬಿಡಿ…”
ವಿಶಾಖಪಟ್ಟಣಂ ಉಕ್ಕಿನ ಕಾರ್ಖಾನೆ ದುರಂತ:ಕೆಲವೇ ಕ್ಷಣಗಳಲ್ಲಿ ಎಂಟು ಜೀವಗಳನ್ನು ನುಂಗಿದ ಉಕ್ಕಿನ ಬೆಂಕಿ!ಕೆಲಸಕ್ಕೆ ಹೋದವರು ಮನೆಗೆ ಮರಳಲಿಲ್ಲ… 
ರಾಷ್ಟ್ರೀಯ ಹೆದ್ದಾರಿ ಪೊಳಲಿ ದ್ವಾರದ ಸಮೀಪ ಭಾರೀ ಗಾತ್ರದ ಮರ ಬಿದ್ದು ಕಾರ್ ಜಖಂ, ಚಾಲಕ ಆಸ್ಪತ್ರೆಗೆ ದಾಖಲು
ತಪ್ಪೊಪ್ಪಿಕೊಂಡ ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಆರೋಪಿ ಶಾರೀಕ್…!ಶಿಕ್ಷೆ ಏನು?
 “ತಪ್ಪು ಮಾಡಿದ್ರೆ ಕೈ-ಕಾಲು ಕತ್ತರಿಸ್ಬೇಕು, ಆಗಲೇ ಕಾನೂನಿನ ಭಯ ಬರೋದು! “ಗಲ್ಫ್ ದೇಶಗಳ ಮಾದರಿ ಶಿಕ್ಷೆ ಜಾರಿಯಾಗ್ಬೇಕು ಅನ್ನೋ ನ್ಯಾಯಮೂರ್ತಿಗಳ ನಿಲುವಿಗೆ ಇಡೀ ರಾಜ್ಯವೇ ಜೈ ಅಂತಿದೆ!
19 ವರ್ಷದ ಆಯಾನ್ ಅಹ್ಮದ್ ತನ್ವೀರ್ ಅಹ್ಮದ್ ವಿರುದ್ಧ ಗಂಭೀರ ಸೈಬರ್ ಲೈಂಗಿಕ ಶೋಷಣೆ ..!ಅಮರಾವತಿ ಭೀಕರ ಪ್ರಕರಣ-
ಇಂದು ಬೆಳ್ಳಂ ಬೆಳಗ್ಗೆ ಪಲ್ಟಿ ಯಾದ ಬಸ್… ಒಬ್ಬ ಸಾವು ಹಲವರಿಗೆ ಗಾಯ
ನಿಮ್ಮ ಮಾತು ಕೇಳಿ ರಾಜೀನಾಮೆ ನೀಡಿದ್ದೇನೆ. ಈಗ ನನ್ನ ಬೇಡಿಕೆ ಈಡೇರಿಸುವುದು ನಿಮ್ಮ ಸರದಿ  ಎಂದ ಸಿದ್ದರಾಮಯ್ಯ
“ಕುಮಾರಸ್ವಾಮಿ ಅವರನ್ನು ಹರಕೆ ಕುರಿ ಮಾಡುತ್ತಿದ್ದಾರೆ” – ಬಿಜೆಪಿ ವಿರುದ್ಧ ಕೆಪಿಸಿಸಿ ಅಧ್ಯಕ್ಷರ ವಾಗ್ದಾಳಿ
ಮಂಗಳೂರಿನಲ್ಲಿ ವಕೀಲರೊಬ್ಬರ ನಕಲಿ ದುಷ್ಕೃತ್ಯ ಬಯಲಿಗೆ?
ಹೆಡ್‌ಲೈಟ್ ಇಲ್ಲ… ಮೊಬೈಲ್ ಟಾರ್ಚ್‌ನಲ್ಲೇ ಓಡಿದ ಸರ್ಕಾರಿ ಬಸ್!
ಸರ್ಕಾರಿ ವೈದ್ಯರ ಅನರ್ದಿಷ್ಟಾವಧಿ ಮುಷ್ಕರ ರದ್ದು
ಮಧ್ಯಪ್ರಾಚ್ಯದಲ್ಲಿ ರೆಡ್ ಅಲರ್ಟ್!3 ತಿಂಗಳ ಯುದ್ಧಕ್ಕೆ ಮಹಾ ಟ್ವಿಸ್ಟ್ ಇರಾನ್ ಸೇನಾ ನೆಲೆಗಳನ್ನು ಧೂಳೀಪಟ ಮಾಡಿದ ಅಮೆರಿಕ!
ಒಂದೂವರೆ ವರ್ಷ ಫ್ರೀ ಬಸ್  ಪ್ರಯಾಣ…ಕೊನೆಯಲ್ಲಿ ದಂಡ ಮತ್ತು ಜೈಲು ಶಿಕ್ಷೆ!
ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ ವಿಂಗಡಣೆ ನಡುವೆ ಮಹಿಳಾ ಮಿಸಲಿಗೆ ಸೋಲು….
ಕಾಂಗ್ರೆಸ್ ದೇಶದ ಹಿತಾಸಕ್ತಿಯ ವಿರುದ್ಧ ನಡೆದುಕೊಳ್ಳುತ್ತಿದೆ- ಪ್ರಧಾನಿ ಮೋದಿ ಆರೋಪ
ಎಥೆನಾಲ್ ಮಿಶ್ರಿತ ಇಂಧನದಿಂದ ವಾಹನಗಳಿಗೆ ಸಮಸ್ಯೆ ಇಲ್ಲ – ನಿತಿನ್ ಗಡ್ಕರಿ
ವಿಷ ಸೇವನೆ ಸ್ವಯಂ ಆಗಿತ್ತೇ ಅಥವಾ ಪ್ರಚೋದನೆ ಕಾರಣವೇ ….?!