📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಮಹಿಳಾ ದಿನಾಚರಣೆಯಲ್ಲಿ ಮಹಿಳಾ ಸಂಪನ್ಮೂಲ ಕೇಂದ್ರ ಉದ್ಘಾಟನೆ, ಜಾಗೃತಿ ಕಾರ್ಯಕ್ರಮ


ಮಂಗಳೂರುದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯ ಜಿಲ್ಲಾ ಮಹಿಳಾ ಸಬಲೀಕರಣ ಘಟಕದಲ್ಲಿ ಮಹಿಳಾ ಸಂಪನ್ಮೂಲ ಕೇಂದ್ರವನ್ನು ಉದ್ಘಾಟಿಸಲಾಯಿತು. ಮುತ್ತೂಟ್ ಫೈನಾನ್ಸ್ ಸಂಸ್ಥೆಯ ಸಿಎಸ್‌ಆರ್ ಅನುದಾನದಡಿ ಈ ಕೇಂದ್ರವನ್ನು ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಸಜ್ಜುಗೊಳಿಸಿ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಲೋಕಾರ್ಪಣೆ ಮಾಡಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮುತ್ತೂಟ್ ಫೈನಾನ್ಸ್ ಪ್ರಾದೇಶಿಕ ವ್ಯವಸ್ಥಾಪಕ ಪ್ರಶಾಂತ್ ನಾಯ್ಕ್, ಇಂದಿನ ಸಮಾಜದಲ್ಲಿ ಮಹಿಳೆಯರು ಶಿಕ್ಷಣ, ವಿಜ್ಞಾನ, ರಾಜಕೀಯ, ಕ್ರೀಡೆ ಮತ್ತು ವ್ಯಾಪಾರ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಮಹತ್ವದ ಸಾಧನೆ ಮಾಡುತ್ತಿದ್ದಾರೆ. ಮಹಿಳಾ ದಿನವು ಕೇವಲ ಆಚರಣೆಯ ದಿನವಲ್ಲ; ಮಹಿಳೆಯರ ಮೇಲಿನ ದೌರ್ಜನ್ಯ ನಿರ್ಮೂಲನೆ, ರಾಜಕೀಯ ಮತ್ತು ಆರ್ಥಿಕ ಕ್ಷೇತ್ರಗಳಲ್ಲಿ ಸಮಾನ ಪ್ರಾತಿನಿಧ್ಯ ಹಾಗೂ ಗೌರವಯುತ ಜೀವನಕ್ಕೆ ಸಂಕಲ್ಪ ಮಾಡುವ ದಿನವಾಗಿದೆ ಎಂದು ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಉಸ್ಮಾನ್ ಎ ಮಾತನಾಡಿ, ಮಹಿಳಾ ದಿನಾಚರಣೆ ಸಮಾಜದಲ್ಲಿ ಸಮಾನತೆ ಮತ್ತು ಗೌರವಕ್ಕಾಗಿ ಒಟ್ಟಾಗಿ ಕಾರ್ಯನಿರ್ವಹಿಸುವ ಸಂದೇಶ ನೀಡುತ್ತದೆ. ಸರ್ಕಾರ ಮತ್ತು ಸಂಘ ಸಂಸ್ಥೆಗಳು ಕೈಜೋಡಿಸಿದಾಗ ಮಹಿಳಾ ಸಬಲೀಕರಣ ಸಾಧ್ಯವಾಗುತ್ತದೆ. ಮಹಿಳಾ ಸಂಪನ್ಮೂಲ ಕೇಂದ್ರವು ಜಿಲ್ಲೆಯ ಮಹಿಳೆಯರಿಗೆ ತರಬೇತಿ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಮಾಹಿತಿಯನ್ನು ನೀಡುವ ಮೂಲಕ ಸಬಲೀಕರಣಕ್ಕೆ ನೆರವಾಗಲಿದೆ ಎಂದು ಹೇಳಿದರು.

ಮುತ್ತೂಟ್ ಫೈನಾನ್ಸ್ ಸಂಸ್ಥೆಯ ಸಿಎಸ್‌ಆರ್ ಮ್ಯಾನೇಜರ್ ಪ್ರಸಾದ್ ಕುಮಾರ್ ಮಾತನಾಡಿ, ಸಂಸ್ಥೆ ಸಾಮಾಜಿಕ ಜವಾಬ್ದಾರಿಯೊಂದಿಗೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಸಹಕಾರ ನೀಡುತ್ತಿದ್ದು, ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಮುತ್ತೂಟ್ ಫೈನಾನ್ಸ್ ಪಿವಿಎಸ್ ಶಾಖೆಯ ವ್ಯವಸ್ಥಾಪಕಿ ಗಾಯತ್ರಿ ನಾಯಕ್ ಹಾಗೂ ಸಖಿ ಒನ್ ಸ್ಟಾಪ್ ಸೆಂಟರ್‌ನ ಆಡಳಿತಾಧಿಕಾರಿ ಪ್ರಿಯ ಮಾತನಾಡಿದರು. ಮುತ್ತೂಟ್ ಫೈನಾನ್ಸ್ ವಲಯ ವ್ಯವಸ್ಥಾಪಕ ಸಂದೇಶ್ ಶೆಣೈ, ಶಾಖಾ ವ್ಯವಸ್ಥಾಪಕ ಚಂದ್ರಶೇಖರ್ ಯು, ವಿಜಿಲನ್ಸ್ ಅಧಿಕಾರಿ ತಾರನಾಥ ಸೇರಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಮಹಿಳಾ ಅಭಿವೃದ್ಧಿ ನಿಗಮದ ಅಭಿವೃದ್ಧಿ ನಿರೀಕ್ಷಕಿ ಚಂದ್ರಿಕಾ ಕಾರ್ಯಕ್ರಮ ನಿರೂಪಿಸಿದರು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 8 ಮಕ್ಕಳಿಗೆ ಹೊಯ್ಸಳ ಕೆಳದಿ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

COMMENTS

Login with Gmail to comment

ಇನ್ನಷ್ಟು ಸುದ್ದಿ

ಎಲ್ಲರಿಗೂ ಯುಗಾದಿ ಹಬ್ಬ… ಆದರೆ ಈ ಗ್ರಾಮಗಳಲ್ಲಿ ಭಯ ಮೌನ…ಹಬ್ಬ ಇಲ್ಲ…!ಒಂದು ವಿಚಿತ್ರ ಕಥೆ!
ಬಂಗಾಳದಲ್ಲಿ ಈಗಲೂ ದೀದಿನೇ ಫೇವರೆಟ್, ಬಲ ಹೆಚ್ಚಿಸಿ ಕೊಂಡ ಬಿಜೆಪಿ
“ಕಾಂತರಾ” ಖ್ಯಾತಿಯ ಸಪ್ತಮಿ ಗೌಡ, ದುಮುಕಿದ್ದು  ಹೋರಾಟದ ಅಂಗಳಕ್ಕೆ
ದ್ವಿತೀಯ ಪಿ.ಯು.ಸಿ ಪರೀಕ್ಷಾ ಹಾಜರಾತಿ
ಇನ್‌ಸ್ಟಾಗ್ರಾಮ್ ಬ್ಲಾಕ್ ಆದ ಕ್ಷಣದಿಂದ ಹೊರಬಂತು ರಹಸ್ಯ!
Golden Hour ಉಳಿಸುವತ್ತ ಗ್ರಾಮದಿಂದ ನಗರವರೆಗೆ – ಕರ್ನಾಟಕ ಹೆಲ್ತ್ ಸಿಸ್ಟಮ್ ಮಹತ್ವದ ಹೆಜ್ಜೆ
ಅನಾಥ ಪುಟ್ಟ ಬಾಲಕಿಯರ ಮೇಲೆ ವರ್ಷಗಳ ಕಾಲ ಲೈಂಗಿಕ ದೌರ್ಜನ್ಯ:ರಾಕ್ಷಸ ಮನಸ್ಸುಗಳಿಗೆ ಅಂತ್ಯ ಯಾವಾಗ?
ಬಲಪಂಥೀಯರ ಜೊತೆ ಮುಖ್ಯಮಂತ್ರಿಗಳ ಸ್ನೇಹ : ಅಭದ್ರತೆ ಯಾರಿಗೆಲ್ಲ?
ಬಾಲಗರ್ಭಿಣಿಯರ ಸಂಖ್ಯೆ 5975….!!
ಪಹಲ್ಗಾಮ್ ದಾಳಿಗೆ ವರ್ಷ : ಮೋದಿ ಶ್ರದ್ಧಾಂಜಲಿ, ಉಗ್ರರಿಗೆ ಎಚ್ಚರಿಕೆ
ಮಾರ್ಕ್ಸ್ 90%, ಆದರೆ 19ಕ್ಕೆ ಕ್ರೂರ ಅಪರಾಧಿ!ಕನಸುಗಳಿದ್ದ ಹುಡುಗನೊಬ್ಬ ಕಟುಕನಾದ ದುರಂತ ಕಥೆ”
ಮಂತ್ರಾಲಯದ ಮಠದ ಹೆಸರಲ್ಲಿ 3 ಲಕ್ಷ ಆಸೆ ತೋರಿಸಿ ವಂಚನೆ..!
ಉಡುಪಿ ಜಿಲ್ಲೆಯಲ್ಲಿ  ಹೆಚ್ಚಾದ  ಚಿರತೆ ಉಪಟಳ : ತುರ್ತು ಕ್ರಮಕ್ಕೆ ತುರವೇ ಮನವಿ
ಸೂರ್ಯನ ತಾಪಕ್ಕೆ ಜೋಗ ಜಲಪಾತ ದೊಡ್ಡ ಬಂಡೆಯೇ ಒಡೆಯಿತು..ಮಾನವನಿಗೆ ಅಪಾಯ ಇನ್ನಷ್ಟು!
 ಆಸ್ಪತ್ರೆಯಲ್ಲಿ ಡಾಕ್ಟರ್ “mistakeಎಡವಟ್”…ಅಚ್ಚರಿಯೂ ಮೀರಿದ ಆಘಾತ!
“ಬಾಂಬ್‌ಗಿಂತ ಅಪಾಯಕಾರಿ ಅಹಂಕಾರ …! ಜಗತ್ತೇ ಕಾಯುತ್ತಿದೆ… ಮುಂದೇನು?”
ಜಾಗತಿಕ ಸಂಘರ್ಷದ ಮಧ್ಯೆ ಭಾರತ–ಯುಎಇ ಬಿಗ್ ಡೀಲ್! ತಂತ್ರಜ್ಞಾನ, ಇಂಧನ ಮತ್ತು ಭದ್ರತೆಯಲ್ಲಿ ಐತಿಹಾಸಿಕ ಒಗ್ಗಟ್ಟು.
NEET ಗೊಂದಲ, ಮರುಪರೀಕ್ಷೆ, ಮೌಲ್ಯಮಾಪನ ದೋಷಗಳು ಮತ್ತು ವಿದ್ಯಾರ್ಥಿ ಜೀವನದ ನೋವು..
ಮಾಜಿ ಸಚಿವರಿಂದ ಮಂಗಳೂರು ವೈಭವಕ್ಕೆ ಬೃಹತ್ ಕೊಡುಗೆ
ಬ್ಯಾಂಕಿಂಗ್ ಸೇವೆ ಸ್ಮಾರ್ಟ್‌ಫೋನ್ ನೇ ಬೇಕಂತಿಲ್ಲ .ಕೀಪ್ಯಾಡ್ ಫೋನ್ ಸಾಕು ಈಗ “ಸ್ಮಾರ್ಟ್” ಆಗಿದ್ದರೆ ಸಾಕು! 
ಮನೆಗಣತಿ ಮಂಗಳೂರು ಮಹಾನಗರ ಪಾಲಿಕೆ-ಸ್ಪೀಕರ್ ಯು ಟಿ ಖಾದರ್ ಚಾಲನೆ
ಆರ್‌ಸಿಬಿ ಎದುರಿಸಲು ರಾಯಲ್ಸ್ ರೆಡಿ??: ಕ್ರಿಕೆಟ್ ಜಗತ್ತಿಗೆ ಶಾಕ್ ಕೊಟ್ಟ ಬಿಹಾರದ ಬಾಲಕ-ಸಚಿನ್ ತೆಂಡೂಲ್ಕರ್ ಕೂಡ ಮೆಚ್ಚಿದ ಆ 29 ಎಸೆತಗಳ ರುದ್ರತಾಂಡವ!
ಡೊನಾಲ್ಡ್ ಟ್ರoಪ್ ಮುಂದೆ ಮಂಡಿಯೂರಿ ಕೂತ ಜಗತ್ತು!
ಯುಎಇಯಿಂದ ಯುರೋಪ್ ತನಕ ಮೋದಿ ಐತಿಹಾಸಿಕ ವಿದೇಶ ಪ್ರವಾಸ…ಡಿಪ್ಲೊಮಸಿ – ತೈಲದಿಂದ ತಂತ್ರಜ್ಞಾನವರೆಗೆ ಇದು ಭಾರತದ ಭವಿಷ್ಯದ ತಂತ್ರಾತ್ಮಕ ನಡೆ ?!
ಚುನಾವಣೆಯವರೆಗೆ ಮೌನ, ನಂತರ LPG ದರ ಭಾರಿ ಏರಿಕೆ –ಇದು ರಾಜಕೀಯ ಅಜೆಂಡಾನಾ?
“Arvind Kejriwal: ‘ಸತ್ಯಾಗ್ರಹ’ದಿಂದ ನ್ಯಾಯದ ಬೇಡಿಕೆ.”
ಮುಂದಿನ ಕೆಲವು ದಿನ ಭಾರಿ ಗಾಳಿ ಮಳೆ ಗುಡುಗು -ಮಿಂಚಿನ ಎಚ್ಚರಿಕೆ 
594 ಕಿಮೀ ಗಂಗಾ ಎಕ್ಸ್‌ಪ್ರೆಸ್‌ ವೇ ..!ಮೀರಟ್‌ನಿಂದ ಪ್ರಯಾಗರಾಜ್‌ವರೆಗೆ -ದೇಶದ ಪ್ರಗತಿಗೆ ಮತ್ತೊಂದು ಮೈಲುಗಲ್ಲು 
ಆಂಬ್ಯುಲೆನ್ಸ್‌ನಲ್ಲೇ ನಡೆದ ಭೀಕರ ಘಟನೆ… ನಂಬಲು ಕಷ್ಟ, ಆದರೆ ಸತ್ಯ!