📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಮಾಜಿ ಮುಖ್ಯಮಂತ್ರಿಗೆ ಉಂಡೇನಾಮ ತಿಕ್ಕಿದ ಸಚಿವ ಯಾರು?

    ರಾಜ್ಯದ ಮಾಜಿ ಮುಖ್ಯಮಂತ್ರಿ ಒಬ್ಬರಿಗೆ ದೊಡ್ಡ ಮೊತ್ತದ ಹಣವನ್ನು ಹಿಡಿಸಿದ್ದಾರೆಂಬ ಮಾತುಗಳು ರಾಜಧಾನಿ ಬೆಂಗಳೂರಿನ ಆದ್ಯಂತ ಪಸರಿಸಿಕೊಳ್ಳುತ್ತಿದೆ. ಅವರಿಗೆ ಆಪ್ತರಾಗಿದ್ದ ಸಚಿವರೊಬ್ಬರ ಬಳಿ ತಮಗೆ ಬರಬೇಕಿದ್ದ ಹಣವನ್ನು ಸೇಫ್ಟಿಯ ಕಾರಣಕ್ಕಾಗಿ( ಬ್ಲಾಕ್ ಮನಿ ಅಂಕೊಳಿ)ಇಟ್ಟಿದ್ದರಂತೆ. ಆಪ್ತ ಸಚಿವನೂ ಸಹ, ಆ ಹಣವನ್ನು ತನ್ನ ಸೇಫ್ಟಿಗಾಗಿ ತಮ್ಮದೇ ನಂಬುಗೆಯ ಐದಾರು ವ್ಯಕ್ತಿಗಳ ಬಳಿ ಜೋಪಾನ ಮಾಡಿಡಲು ಹೇಳಿದರಂತೆ.

    ಇದೆಲ್ಲವೂ ಕಾಗಕ್ಕ ಗುಬ್ಬಕ್ಕನ ಲೆಕ್ಕದ ಅಮೌಂಟಂತೆ. ಆ ಅಮೌಂಟ್ ಮಾಜಿ ಮುಖ್ಯಮಂತ್ರಿ, ಆಪ್ತ ಸಚಿವನಲ್ಲಿ ಕೇಳಲು ಪ್ರಾರಂಭಿಸಿದಾಗ ಆಪ್ತ ಸಚಿವನ ವರಸೆಯೇ ಬದಲಾಯಿತಂತೆ. ಇದರಿಂದಾಗಿ ಆ ಮಾಜಿ ಮುಖ್ಯಮಂತ್ರಿ ಮತ್ತು ಆಪ್ತ ಸಚಿವ ಆಗಿದ್ದವ, ಇವತ್ತು ಹಾವು ಮುಂಗುಸಿಯಂತೆ ಆಡುತ್ತಿದ್ದಾರಂತೆ. ನಂಬುಗೆಯ ವ್ಯಕ್ತಿ ಕೈ ಕೊಟ್ಟಿದ್ದು ಮಾಜಿ ಮುಖ್ಯಮಂತ್ರಿಗೆ ಸಿಕ್ಕಾಪಟ್ಟೆ ರೋಷವನ್ನು ತಂದಿದೆ. ಹಾಗಾಗಿಯೇ ಅವರಿಗ ತಮ್ಮ ಜೊತೆಗೆ ಎಷ್ಟು ಶಾಸಕರಿದ್ದಾರೆ ಎಂಬುದನ್ನು ಲೆಕ್ಕ ಮಾಡಲು ಶುರು ಮಾಡಿದ್ದಾರಂತೆ. ಪ್ರಾದೇಶಿಕ ಪಕ್ಷದ ಜೊತೆಗೆ ಹೆಜ್ಜೆ ಹಾಕುವುದಕ್ಕೂ ಸೈ ಎಂಬ ನಿರ್ಧಾರಕ್ಕೆ ಆ ಮಾಜಿ ಮುಖ್ಯಮಂತ್ರಿಗಳು ಬಂದಿದ್ದಾರೆ. ಯಾವುದೇ ಕಾರಣಕ್ಕೂ ತನಗೆ ಮೋಸ ಮಾಡಿರುವ ಆ ಆಪ್ತ ಸಚಿವ ಮತ್ತು ಆತನ ಜೊತೆಗೆ ಕೈಜೋಡಿಸಿದವರು ನೆಮ್ಮದಿಯಿಂದ ಇರಲು ಬಿಡುವುದಿಲ್ಲ ಎಂಬ ಶಪಥ ಮಾಡಿದವರಂತೆ ಓಡಾಡುತ್ತಿದ್ದಾರೆ ಎಂಬ ಮಾತುಗಳನ್ನು ಅವರ ಆಪ್ತ ವಲಯದಿಂದಲೇ ಕೇಳಿ ಬರುತ್ತಿದೆ.

    ಒಂದು ಸಮಯದಲ್ಲಿ ಪ್ರಭಾವಿ ವ್ಯಕ್ತಿಯಾಗಿದ್ದ ಮಾಜಿ ಮುಖ್ಯಮಂತ್ರಿ ಈಗ ಇದ್ದಕ್ಕಿದ್ದಂತೆ ದುರ್ಬಲ ನಾಯಕರಂತೆ ತೋರುತ್ತಿದ್ದಾರೆ, ಹಾಗಾಗಿಯೇ ಪ್ರಾದೇಶಿಕ ಪಕ್ಷದ ಮುಖಂಡರು ಸಹ ಹಲವು ನಿಯಮ ಮತ್ತು ಕಂಡೀಶನ್ ಹಾಕುತ್ತಿದ್ದಾರೆ ಎನ್ನಲಾಗುತ್ತಿದೆ.

    ಒಟ್ಟಿನಲ್ಲಿ ರಾಜಧಾನಿಯ ತುಂಬಾ, ಮಾಜಿ ಮುಖ್ಯಮಂತ್ರಿಯ ತಲೆಗೆ ಟೋಪಿ ಇಟ್ಟ ಆಪ್ತ ಸಚಿವ ಯಾರು? ಮಾಜಿ ಮುಖ್ಯಮಂತ್ರಿ ಯಾರು ಎಂಬೆಲ್ಲ ಚರ್ಚೆಗಳು ತರಹೇವಾರಿಯಾಗಿ ನಡೆಯುತ್ತಿದೆ. ಇದರಲ್ಲಿ ಸತ್ಯವೇ ಎಷ್ಟು ಮಿತ್ಯ ಎಷ್ಟು

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ರೀಲ್ಸ್ ಮಾಡುವ ಕನಸು… ಕ್ಷಣದಲ್ಲೇ ದುರ್ಘಟನೆ,  ಜೀವವನ್ನೇ ಕಳೆದುಕೊಂಡ ಬಾಲಕ.
    ಮೋದಿ ನೇತೃತ್ವದಲ್ಲಿ ಇತಿಹಾಸಕ್ಕೆ ಮರಳಿದ ರಾಜರಾಜಚೋಳರ ಹೆಮ್ಮೆ — ಆನೈಮಂಗಲಂ ತಾಮ್ರಶಾಸನಗಳು! 1000 ವರ್ಷದ ಇತಿಹಾಸ 100 ವರ್ಷಗಳ ಬಳಿಕ ಚೋಳರ ಕಾಲದ ಅಪರೂಪದ ದಾಖಲೆ ನೆದರ್‌ಲ್ಯಾಂಡ್ಸ್‌ನಿಂದ ಭಾರತಕ್ಕೆ ವಾಪಸ್….
    ಮಂಗಳೂರು ಜಾರಂದಾಯ ಸ್ಥಾನದ ದೈವ ನರ್ತನ ವಿವಾದ – ಸ್ಪಷ್ಟನೆ- ಮರುಪ್ರಶ್ನೆ-ಇತ್ಯರ್ಥವಾಗುತ್ತಾ..?!
    ಹೊಸ ಸಂಸತ್ ಭವನದ ವಿನ್ಯಾಸಕ್ಕೆ ಶಶಿ ತರೂರ್ ಅಸಮಾಧಾನ: “ಆತ್ಮ ರಹಿತ ಸಮಾವೇಶ ಕೇಂದ್ರ”
    ಕ್ಲೌಡ್ ಮಾರುಕಟ್ಟೆಗೆ ಮಾರ್ಕ್ ಜುಕರ್‌ಬರ್ಗ್ ಎಂಟ್ರಿ!?ಇಡೀ ಟೆಕ್ ಪ್ರಪಂಚವೇ ಬೆಚ್ಚಿಬೀಳುವಂತಿದೆ ಜುಕರ್‌ಬರ್ಗ್ ಮುಂದಿನ ನಡೆ!
    ಸುಳ್ಯ:  ಕರ್ತವ್ಯದಲ್ಲಿದ್ದ ಉಪನ್ಯಾಸಕ ಕುಸಿದು ಬಿದ್ದು ಸಾವು
    ದಾವಣಗೆರೆ & ಬಾಗಲಕೋಟೆ ಬೈಎಲೆಕ್ಷನ್ ಬಿಗ್ ಬ್ಲಾಸ್ಟ್!
    ಶಿಕ್ಷಕರು ಹೊಡೆಯುತ್ತಾರೆಂಬ ಭಯಕ್ಕೆ ಮನೆ ಬಿಟ್ಟ 9ನೇ–10ನೇ ತರಗತಿ ವಿದ್ಯಾರ್ಥಿನಿಯರು..!ಎಲ್ಲಿದ್ದರು ಗೊತ್ತಾ..!
    ಈ ಸುದ್ದಿ ಸಿನಿಮಾ ಇತಿಹಾಸದಲ್ಲೇ ದೊಡ್ಡ ಬಾಕ್ಸ್ ಆಫೀಸ್ ಸ್ಫೋಟಗಳಲ್ಲಿ ಒಂದಾಗಿದೆ. ‘Spider-Man: Brand New Day’ 
    ಬಿಜೆಪಿಯ ಹೊಸ ರಾಷ್ಟ್ರೀಯ ಪದಾಧಿಕಾರಿಗಳ ತಂಡ ready…!
    AI ವಿಶ್ವವಿದ್ಯಾಲಯಕ್ಕೂ ಮೊದಲು AI ಪರಿಣಾಮಗಳ ಅಧ್ಯಯನ ಅಗತ್ಯವೇ?
    ಹೋಳಿ ಮತ್ತು ರಂಜಾನ್ ಒಂದು ಜೀವವನ್ನೇ ನುಂಗಿತು..!
    ಸೂರ್ಯನ ತಾಪಕ್ಕೆ ಜೋಗ ಜಲಪಾತ ದೊಡ್ಡ ಬಂಡೆಯೇ ಒಡೆಯಿತು..ಮಾನವನಿಗೆ ಅಪಾಯ ಇನ್ನಷ್ಟು!
    ಡಿ.ಕೆ. ಶಿವಕುಮಾರ್ ಪ್ರಮಾಣ ವಚನ  ಜೂನ್ 3ಕ್ಕೆ, ರಾಜ್ಯಪಾಲರಿಂದ ಆಹ್ವಾನ
    ಫ್ರಿಡ್ಜ್ ರಿಪೇರಿಗೆ ಬಂದವ ಮನೆ ಲೂಟಿ ಪರಾರಿ…!ಬಿ ಅಲರ್ಟ್ ‼️
    ಸಾಲದ ಹಣ ಕೇಳಿದ ವಿಚಾರಕ್ಕೆ ಚೂರಿಯಿಂದ ಕೊಲೆ ಯತ್ನ..
    ಭಾರತದಲ್ಲಿ ಎಚ್‌ಪಿವಿ (HPV) ಲಸಿಕೆ ಕಾರ್ಯಕ್ರಮ ಹೆಣ್ಣೆತ್ತವರು ತಿಳಿದುಕೊಳ್ಳಲೇಬೇಕಾದ ವಿಚಾರ
    “ಮಾರಿಕೊಂಡ ಮಾಧ್ಯಮದವರು ಯಾರು?” ಪ್ರಶ್ನೆಗೆ ಪ್ರಕಾಶ್ ರಾಜ್ ನಿರುತ್ತರ”ಪತ್ರಿಕಾಗೋಷ್ಠಿಯಲ್ಲೇ ಶುರುವಾದ ಭಾರೀ ವಿವಾದ ಏನು?
    ಪೆಟ್ರೋಲ್ ಡೀಸೆಲ್ ದರ ಏರಿಕೆ ತಡೆಯಲು ಕೇಂದ್ರದ ಮಹತ್ವದ ಕ್ರಮ 
    2047ರ ಕನಸಿನ ಭಾರತಕ್ಕಾಗಿ ದೆಹಲಿಯಲ್ಲಿ ಮೆಗಾ ಮಂಥನ… ಏನಿದೆ ಈ ಮಾಸ್ಟರ್ ಪ್ಲಾನ್‌ನಲ್ಲಿ?
    ಕೋರ್ಟ್ ವಿಡಿಯೊ ವೈರಲ್‌ಗೆ ಬ್ರೇಕ್: ಸುಪ್ರೀಂ ಕೋರ್ಟ್ ಆದೇಶದ ಬಗ್ಗೆ ಜನಾಭಿಪ್ರಾಯ ಏನು?
    ಬರಾಯಿಪುರ 12 ವರ್ಷದ ಬಾಲಕಿಯ ಅತ್ಯಾಚಾರದ ಕ್ರೌರ್ಯಕ್ಕಿಂತ ಈಗ ಎನ್‌ಕೌಂಟರ್‌ ಚರ್ಚೆಯ ಕೇಂದ್ರ!?ಆರೋಪಿ ಒಟ್ಟಿಗೆ … ಎಲ್ಲಾ ಸತ್ಯವೂ ಸತ್ತಿತೇ?
    ಸಚಿವ ಜಮೀರ್ ಕಥೆ ಗೋವಿಂದ!!!?
    ₹119 ಕೋಟಿ ವ್ಯತ್ಯಾಸ ಸಣ್ಣ ವಿಷಯನಾ….ಏನಿದು ತಲೈವಾ..!
    ದಕ್ಷಿಣ ಕನ್ನಡದ 14 ವರ್ಷದ ಎಲ್ಲ ಬಾಲಕಿಯರು ಉಚಿತ HPV ಲಸಿಕೆ ಹಾಕಿಸಿಕೊಳ್ಳಲು ಸಂಸದರ ಕರೆ
    ಅಕ್ರಮವಾಗಿ ಲಕ್ಷಾಂತರ ಮೌಲ್ಯದ ಎತ್ತುಗಳನ್ನು ವಧೆಗೆ….!
    ಬಂಗಾಳದಲ್ಲಿ ಈಗಲೂ ದೀದಿನೇ ಫೇವರೆಟ್, ಬಲ ಹೆಚ್ಚಿಸಿ ಕೊಂಡ ಬಿಜೆಪಿ
    AYS TROPHY–2026 ಯಶಸ್ವಿಯಾಗಿಸಲು ನಿಮ್ಮ ಉಪಸ್ಥಿತಿ ಅಗತ್ಯ.
    ಹಾವು ಮುಂಗುಸಿ ಅಂತಾಗಿದ್ದವರು ಒಂದಾದರು
    ಕರಾವಳಿಯಲ್ಲಿ ವರುಣನ ಆರ್ಭಟ ಮುಂದುವರಿಕೆ: ಜುಲೈ 2ಕ್ಕೆ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್, ಏಳು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್