📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಮಾಜಿ ಮುಖ್ಯಮಂತ್ರಿಯ ಮೇಲೆ ಗುಂಡಿನ ದಾಳಿ,- Z+ ಭದ್ರತೆಯ ನಡುವೆ ದಾಳಿಕೋರ ಹೇಗೆ  ಬಂದ?

    ಜಮ್ಮು: ದೇಶದ ಅತಿ ಉನ್ನತ ಮಟ್ಟದ ಭದ್ರತೆ ಪಡೆದಿರುವ ನಾಯಕರಲ್ಲಿ ಒಬ್ಬರಾದ ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರ ಮೇಲೆ ಮದುವೆ ಸಮಾರಂಭದಲ್ಲೇ ನಡೆದ ಹತ್ಯೆ ಯತ್ನ ದೇಶದ ಭದ್ರತಾ ವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ. Z+ ಮಟ್ಟದ ಭದ್ರತೆ ಹೊಂದಿದ್ದರೂ, ಬಂದೂಕು ಹಿಡಿದ ವ್ಯಕ್ತಿಯೊಬ್ಬರು ಅವರನ್ನು ಅತೀ ಹತ್ತಿರದಿಂದ ಗುರಿಯಾಗಿಸಿ ಗುಂಡು ಹಾರಿಸಲು ಯತ್ನಿಸಿದ್ದೇ ದೊಡ್ಡ ವಿವಾದಕ್ಕೆ ಕಾರಣವಾಗಿದೆ.
    ಬುಧವಾರ ಸಂಜೆ ಜಮ್ಮುವಿನ ಹೊರವಲಯದ ಗ್ರೇಟರ್ ಕೈಲಾಶ್ ಪ್ರದೇಶದಲ್ಲಿರುವ ಹೋಟೆಲ್ ರಾಯಲ್ ಪಾರ್ಕ್‌ನಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಈ ಆತಂಕಕಾರಿ ಘಟನೆ ನಡೆದಿದೆ. ಆ ಕಾರ್ಯಕ್ರಮದಲ್ಲಿ ಫಾರೂಕ್ ಅಬ್ದುಲ್ಲಾ ಅವರೊಂದಿಗೆ ಜಮ್ಮು-ಕಾಶ್ಮೀರದ ಉಪ ಮುಖ್ಯಮಂತ್ರಿ ಸುರೀಂದರ್ ಚೌಧರಿ ಕೂಡ ಹಾಜರಿದ್ದರು.


    ಸಿಸಿಟಿವಿ ದೃಶ್ಯಾವಳಿಗಳು ಬಹಿರಂಗಪಡಿಸಿದ ಸತ್ಯ ಮತ್ತಷ್ಟು ಬೆಚ್ಚಿಬೀಳಿಸುವಂತಿದೆ. ದೃಶ್ಯದಲ್ಲಿ ಆರೋಪಿಯು ಹಿಂದಿನಿಂದಲೇ ಫಾರೂಕ್ ಅಬ್ದುಲ್ಲಾ ಅವರತ್ತ ಬಂದೂಕು ತೋರಿಸಿ ಗುಂಡು ಹಾರಿಸಲು ಮುಂದಾಗಿರುವುದು ಕಾಣುತ್ತದೆ. ಆದರೆ ಅಲ್ಲಿದ್ದ ಭದ್ರತಾ ಸಿಬ್ಬಂದಿ ಕೊನೆಯ ಕ್ಷಣದಲ್ಲಿ ಎಚ್ಚರಗೊಂಡು ಆರೋಪಿಯನ್ನು ಅಟ್ಟಿಹಾಕಿದ್ದು, ದೊಡ್ಡ ದುರಂತ ತಪ್ಪಿದೆ.
    ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರ ಹೇಳಿಕೆಯೂ ಪ್ರಶ್ನೆಗಳಿಗೆ ಕಾರಣವಾಗಿದೆ. “ಇದು ಭಯೋತ್ಪಾದಕ ಕೃತ್ಯವಲ್ಲ” ಎಂದು ಪೊಲೀಸರು ಸ್ಪಷ್ಟಪಡಿಸಿದರೂ, ದೇಶದ ಅತ್ಯುನ್ನತ ಭದ್ರತೆ ಹೊಂದಿರುವ ನಾಯಕನ ಹತ್ತಿರಕ್ಕೆ ಬಂದೂಕು ಹಿಡಿದು ವ್ಯಕ್ತಿಯೊಬ್ಬನು ಸುಲಭವಾಗಿ ತಲುಪಿದ ಸಂಗತಿ ಹೇಗೆ ಸಾಧ್ಯವಾಯಿತು ಎಂಬ ಪ್ರಶ್ನೆಗೆ ಸ್ಪಷ್ಟ ಉತ್ತರ ಇನ್ನೂ ಲಭ್ಯವಾಗಿಲ್ಲ.
    ಪೊಲೀಸರ ಪ್ರಕಾರ, ದಾಳಿಕೋರನನ್ನು ಕಮಲ್ ಸಿಂಗ್ ಜಮ್ವಾಲ್ (60) ಎಂದು ಗುರುತಿಸಲಾಗಿದೆ. ಆತ ಜಮ್ಮುವಿನ ನಿವಾಸಿಯಾಗಿದ್ದು, ಕೆಲವು ಅಂಗಡಿಗಳ ಮಾಲೀಕರಾಗಿದ್ದಾನೆ ಎನ್ನಲಾಗಿದೆ. ಘಟನೆ ವೇಳೆ ಆತ ಮದ್ಯಪಾನ ಮಾಡಿದ ಸ್ಥಿತಿಯಲ್ಲಿ ಇದ್ದನು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
    ಇನ್ನೂ ಆತಂಕಕಾರಿ ಸಂಗತಿ ಎಂದರೆ, ವಿಚಾರಣೆ ವೇಳೆ ಜಮ್ವಾಲ್ ಪೊಲೀಸರಿಗೆ ನೀಡಿದ ಹೇಳಿಕೆ. ಕಳೆದ 20 ವರ್ಷಗಳಿಂದ ಫಾರೂಕ್ ಅಬ್ದುಲ್ಲಾ ಅವರನ್ನು ಕೊಲ್ಲಲು ಯತ್ನಿಸುತ್ತಿದ್ದೇನೆ ಎಂದು ಆತ ಹೇಳಿರುವುದಾಗಿ ವರದಿಯಾಗಿದೆ. ದಾಳಿಗೆ ಬಳಸಿದ ಬಂದೂಕು ತನ್ನ ವೈಯಕ್ತಿಕ ಪರವಾನಗಿ ಪಡೆದ ಪಿಸ್ತೂಲ್ ಎಂದು ಆತ ಹೇಳಿದ್ದಾನೆ.
    ಈ ಘಟನೆ ವೇಳೆ ಫಾರೂಕ್ ಅಬ್ದುಲ್ಲಾ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದರೂ, ಅವರ ಪಕ್ಷದ ಸಹೋದ್ಯೋಗಿ ಹಾಗೂ ಉಪ ಮುಖ್ಯಮಂತ್ರಿ ಸುರೀಂದರ್ ಚೌಧರಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
    ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ, ತಮ್ಮ ತಂದೆಯ ಮೇಲೆ ನಡೆದ ದಾಳಿಯನ್ನು Z+ ಭದ್ರತಾ ಸಿಬ್ಬಂದಿಯ ನಿಕಟ ರಕ್ಷಣಾ ತಂಡವೇ ತಡೆದಿದೆ ಎಂದು ಹೇಳಿದ್ದಾರೆ.


    “ಅಲ್ಲಾಹನ ಕೃಪೆಯಿಂದ ನನ್ನ ತಂದೆ ಅಪಾಯದಿಂದ ಪಾರಾಗಿದ್ದಾರೆ. ಆದರೆ ಲೋಡ್ ಮಾಡಲಾದ ಪಿಸ್ತೂಲ್ ಹಿಡಿದ ವ್ಯಕ್ತಿಯೊಬ್ಬನು ಪಾಯಿಂಟ್-ಬ್ಲ್ಯಾಂಕ್ ದೂರದವರೆಗೆ ಹತ್ತಿರ ಬಂದಿರುವುದು ಅಚ್ಚರಿ ಮೂಡಿಸುವ ಸಂಗತಿ. Z+ ಭದ್ರತೆ ಇರುವ ನಾಯಕರ ಹತ್ತಿರ ಯಾರಾದರೂ ಹೀಗೆ ತಲುಪುವುದು ಹೇಗೆ ಸಾಧ್ಯವಾಯಿತು ಎಂಬುದು ಈಗ ದೊಡ್ಡ ಪ್ರಶ್ನೆ,” ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ.
    ಈ ಘಟನೆ ಕೇವಲ ಹತ್ಯೆ ಯತ್ನವಷ್ಟೇ ಅಲ್ಲ, ದೇಶದ ಪ್ರಮುಖ ನಾಯಕರ ಭದ್ರತಾ ವ್ಯವಸ್ಥೆಯಲ್ಲಿರುವ ಗಂಭೀರ ಬಿರುಕುಗಳನ್ನೂ ಬಹಿರಂಗಪಡಿಸಿದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆ ಆರಂಭವಾಗಿದೆ. ಮದುವೆ ಸಮಾರಂಭದಂತಹ ಖಾಸಗಿ ಕಾರ್ಯಕ್ರಮದಲ್ಲೂ ಭದ್ರತಾ ನಿಯಮಗಳು ಸಡಿಲವಾಗಿದ್ದವೆಯೇ? ಅಥವಾ ಯಾರಾದರೂ ಒಳಗಿನ ನಿರ್ಲಕ್ಷ್ಯ ಇದಕ್ಕೆ ಕಾರಣವೇ? ಎಂಬ ಪ್ರಶ್ನೆಗಳು ಈಗ ತನಿಖೆಯ ಕೇಂದ್ರಬಿಂದುವಾಗಿವೆ.

    ಉಪಮುಖ್ಯಮಂತ್ರಿ ಸುರಿಂದ್ರ ಚೌಧರಿ

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಪುತ್ತೂರು ಘಟನೆ ಚಾಕು ಕಂಡು ಆತಂಕ…ಏನಾಯಿತು?ತನಿಖೆಯಲ್ಲಿ ಬಯಲಾಯ್ತು ಮತ್ತೊಂದು ಸತ್ಯ!
    ಆಸಿಡ್ ದಾಳಿಗೊಳಗಾದ ಮಹಿಳೆಯರಿಗೆ ₹50 ಸಾವಿರ ಮಾಸಾಶನ: ಆಸಿಡ್ ಮಾರಾಟಕ್ಕೆ ಕಡಿವಾಣ ಹಾಕಲು ಸರ್ಕಾರ ಕ್ರಮ
    ಒಂದು ಸಹಿ… ಲಕ್ಷಾಂತರ ರೂ. ಹೊಣೆಗಾರಿಕೆಯ ಶಾಕ್!ಸಹಕಾರ ಸಂಸ್ಥೆಯಲ್ಲಿ ನಡೆದ ಅಕ್ರಮದ ಸತ್ಯ ಬಯಲು..
    ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು ಪತ್ತೆ – ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
    ಉದ್ಯಮಿ, ಕಾಲೇಜ್ topper,  ಕೋಟ್ಯದೀಶರೇ…ಕಠಿಣ ಜೈನ ಸನ್ಯಾಸದತ್ತ…!
    ಇಂದು ಆನ್‌ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಆಕ್ರೋಶ!ದಕ್ಷಿಣ ಕನ್ನಡದಲ್ಲಿ 1100 ಮೆಡಿಕಲ್ ಶಾಪ್ ಬಂದ್!
    ವಿದೇಶಿಗರ ಮೇಲೆ ನಿಗಾ ಇಟ್ಟ ಕೇಂದ್ರ ಗೃಹ ಇಲಾಖೆ! ನಿಯಮ ಮೀರಿದರೆ ಕಠಿಣ ಕ್ರಮ ಗ್ಯಾರಂಟಿ! 
    ಜನಗಣತಿ 2026–27 – Self Enumeration ಮುಗಿದು ಈಗ ಮನೆ ಮನೆ ಭೇಟಿ ಹಂತ ಆರಂಭ!ನಮ್ಮ ಮಾಹಿತಿ = ನಮ್ಮ ದೇಶದ ಬೆಳವಣಿಗೆ…
    ಸ್ಪೇನ್‌ಗೆ 2ನೇ FIFA ವಿಶ್ವಕಪ್ ಕಿರೀಟ!ನ್ಯೂಯಾರ್ಕ್‌ನಲ್ಲಿ ಮೆಸ್ಸಿಯ ಅರ್ಜೆಂಟೀನಾವನ್ನು ಮಣಿಸಿದ ಸ್ಪೇನ್ ನ ಲಾ ರೋಜಾ ಗೆ ಐತಿಹಾಸಿಕ ಜಯ! 
    ಒಂದೇ ಫ್ಲಾಟ್ ಇಬ್ಬಿಬ್ಬಿರ ಹೆಸರಲ್ಲಿ ..!ಡಬಲ್ ಡಾಕ್ಯುಮೆಂಟ್ ದಂಧೆ ಬಯಲು –ಕೋಟಿ ಕೋಟಿ ವಂಚನೆ ಮಾಡಿ ಆರೋಪಿ ಪರಾರಿ! ರಿಯಲ್ ಎಸ್ಟೇಟ್ ಶಾಕ್….
    ಅಂಗಳ, ಶೆಡ್, ಗೋದಾಮು ಮಾತ್ರವಲ್ಲ… ಡೈನಿಂಗ್ ಹಾಲ್‌ಗೂ ಬಂದ 8 ಅಡಿ ಕಾಳಿಂಗ!
    ಪಕ್ಷದಿಂದ ಪಕ್ಕಕ್ಕೆ? ರಾಘವ್ ಚಡ್ಡಾ ಹಿಂದೆ ಏನಿದೆ ದೊಡ್ಡ ರಾಜಕೀಯ ಆಟ!”ಮೌನಗೊಳಿಸಿದರೂ ನಿಲ್ಲದ ಧ್ವನಿ – ರಾಘವ್ ಚಡ್ಡಾ!”
    ಗೃಹಲಕ್ಷ್ಮಿ ಹಣ ಉಳಿಸಿ ದೇವಿಗೆ ₹17 ಲಕ್ಷ ದೇಣಿಗೆ!
    ಮೇ 20ರ ಬಸ್ ಸ್ಟ್ರೈಕ್‌ಗೆ ಹೈಕೋರ್ಟ್ ಬ್ರೇಕ್..! KSRTC-BMTC ಬಸ್‌ಗಳು ನಿಲ್ಲೋದಿಲ್ಲ! ಹೈಕೋರ್ಟ್ ಮಹತ್ವದ ಆದೇಶ..
    ಕಸ ಸಾಗಾಣಿಕೆ ಟೆಂಡರ್‌ನಲ್ಲಿ ₹133 ಕೋಟಿ ಅಕ್ರಮ ಆರೋಪ
    ಲಾರ್ಡ್ಸ್‌ನಲ್ಲಿ ಭಾರತ ಮಹಿಳಾ ತಂಡದ ಐತಿಹಾಸಿಕ ಟೆಸ್ಟ್ ಜಯ; ದೇಶದಲ್ಲಿ ಕ್ರಿಕೆಟ್‌ನಿಂದ ಟೆನಿಸ್‌ವರೆಗೆ… ಕ್ರೀಡೆಗಳತ್ತ ಹೆಚ್ಚುತ್ತಿರುವ ಆಸಕ್ತಿ..!
    *ಬೈಕಂಪಾಡಿ ಹೆದ್ದಾರಿ ಡಕಾಯಿತಿ, 23 ಲಕ್ಷ ಮೌಲ್ಯದ ಸೊತ್ತು ದರೋಡೆ ಪ್ರಕರಣ: 3 ಆರೋಪಿಗಳು ಸೆರೆ.
    “ಬೇಕಾದರೇ ನನಗೆ ಪೊರಕೆಲಿ ಹೊಡಿರಿ ಆದ್ರೆ ಅಧಿಕಾರಿಗಳಿಗಲ್ಲ”- ಡಿಕೆಶಿ “ಭೂಮಿ ಉಳಿಸಿಕೊಳ್ಳಲು ಹೋರಾಡಿದ ರೈತರ ಮೇಲೆ ಕೊಲೆ ಕೇಸ್? ಬಿಡದಿ ವಿವಾದದ ಬಗ್ಗೆ ರಾಜ್ಯಾದ್ಯಂತ ಆಕ್ರೋಶ!
    ಮ್ಯಾರಥಾನ್ ನಲ್ಲಿ ಇರುವಾಗಲೇ ಹೃದಯಾಘಾತದಿಂದ  ಸಬ್ ಇನ್ಸ್ಪೆಕ್ಟರ್ ನಿಧನ
    ಅಜಿತ್ ಅಗರ್ಕರ್ ಗೆ ಜಾಕ್ಪಾಟ್
    ಬೆಂಗಳೂರಿನಲ್ಲಿ₹2,384 ಕೋಟಿ GSTದಂಧೆ ಭೇದಿಸಿದ ಇಲಾಖೆ.. ಭರ್ಜರಿ ದಾಳಿ! ಭಾರೀ GST ಸ್ಕ್ಯಾಂ .. ಹಲವರು ಬಲೆಗೆ ಬೀಳುವ ಸಾಧ್ಯತೆ!…
    ವೋಟರ್ಸ್ ಗಮನಕ್ಕೆಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ: ಸಾರ್ವಜನಿಕರು ತಿಳಿಯಲೇಬೇಕಾದ ಪ್ರಮುಖ ವರದಿ
    21 ವರ್ಷದ ಆಡಳಿತಕ್ಕೆ ತೆರೆ: ನಿತೀಶ್ ಕುಮಾರ್ ಹೊರಟರೇ?ಸಿಎಂ ಕುರ್ಚಿ ಖಾಲಿ-ಬಿಜೆಪಿ ಹೊಸ ಮುಖ ಮುಂದಿನ ಸಿಎಂ??
    ಮೊಬೈಲ್ ನೋಡುತ್ತಿದ್ದ ಉಡುಪಿ ಡಿಸಿ ವಿರುದ್ಧ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಿಡಿ
    ಮಂಗಳೂರು -ವೆನ್ಲಾಕ್ ಮಾಸ್ಟರ್ ಪ್ಲ್ಯಾನ್…!
    ಶಾಸಕ ಸ್ಥಾನಕ್ಕೆ ರಾಜೀನಾಮೆ, ಯಶ್ವಂತರಾಯಗೌಡರ ನಡೆ  ಸಸ್ಪೆನ್ಸ್
    ಉಡುಪಿಯಲ್ಲಿ ಆಡಳಿತ ನಡೆಸುತ್ತಿರುವುದು ಜನವಿರೋಧಿ ಜಿಲ್ಲಾಡಳಿತವೇ?
    ಕುತ್ತಾರಿನಲ್ಲಿ ಸ್ಪೀಕರ್‌ನ್ನೇ ಜನರು ಸುತ್ತುವರಿದ ಶಾಕಿಂಗ್ ದೃಶ್ಯ! ಏನಾಯ್ತು ನಿಜವಾಗಿಯೂ?ಸಾಮಾಜಿಕ ಮಾಧ್ಯಮದಲ್ಲಿ ಸದ್ದು ಮಾಡುತ್ತಿರುವ ಕುತ್ತಾರು ವಾದವಿವಾದ!
    ಬೇಕಾದಾಗ, ಬೇಕಾದಂಗೆ ಸಂವಿಧಾನದ ಜಪ
    ಭಾರತ ಬಗ್ಗೆ ಟ್ರಂಪ್ ಡಬಲ್ ಸ್ಟ್ಯಾಂಡ್…!ವಿವಾದ ಸೃಷ್ಟಿಸಿ, ಬಳಿಕ ಸಮಾಧಾನದ ಮಾತು