📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    “ಮಾಜಿ RSS ಕಾರ್ಯಕರ್ತನಿಗೆ ಮುಸ್ಲಿಂ ಮಹಿಳೆ ಅಗ್ನಿಸ್ಪರ್ಶ”ವಾಸ್ತವ ಏನು?ಮಾನವೀಯತೆಗೆ ಧರ್ಮದ ಗಡಿ ಇಲ್ಲ!

    ಮಂಜೇಶ್ವರದಲ್ಲಿ ಅನಾಥ ಶವ ಸಂಸ್ಕಾರದ ವಿಚಾರದಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಗೊಂದಲ ಮತ್ತು ಕುತೂಹಲ – ವಾಸ್ತವ ಏನು?

    ಮಂಜೇಶ್ವರ: ಮಂಜೇಶ್ವರದ ಚೆರುಗೋಳಿ ಸಾರ್ವಜನಿಕ ಸ್ಮಶಾನದಲ್ಲಿ ನಡೆದ ಅನಾಥ ವ್ಯಕ್ತಿಯೊಬ್ಬರ ಅಂತ್ಯಸಂಸ್ಕಾರದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, “ಮಾಜಿ RSS ಕಾರ್ಯಕರ್ತನಿಗೆ ಮುಸ್ಲಿಂ ಮಹಿಳೆ ಅಗ್ನಿಸ್ಪರ್ಶ” ಎಂಬ ನಿರೂಪಣೆಯೊಂದಿಗೆ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆದರೆ ಸ್ಥಳೀಯರು ನೀಡಿರುವ ಮಾಹಿತಿ ಪ್ರಕಾರ ಘಟನೆಯ ಹಿಂದೆ ಬೇರೆಯದೇ ವಿವರಗಳಿವೆ.

    ವೈರಲ್ ಆದ ಫೇಸ್‌ಬುಕ್ ಪೋಸ್ಟ್‌ನಲ್ಲಿ ಏನಿತ್ತು?
    ಒಂದು ಪೋಸ್ಟ್‌ನಲ್ಲಿ “ನಾರಾಯಣನ್ ಎಂಬ ಕಟ್ಟಾ RSS-BJP ಕಾರ್ಯಕರ್ತ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾಗ ಕುಟುಂಬ ಕೈಬಿಟ್ಟಿತು. ಕಾಸರಗೋಡು ಜಿಲ್ಲಾ ಪಂಚಾಯತ್ ಸದಸ್ಯೆ, ಮುಸ್ಲಿಂ ಲೀಗ್ ನಾಯಕಿ ಇರ್ಫಾನಾ ಇಕ್ಬಾಲ್ ಅವರನ್ನು ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಿದರು. ನಿಧನದ ಬಳಿಕ ಬುರ್ಖಾ-ಹಿಜಾಬ್ ಧರಿಸಿಯೇ ಚಿತೆಗೆ ಅಗ್ನಿಸ್ಪರ್ಶ ಮಾಡಿದರು” ಎಂದು ಬರೆಯಲಾಗಿತ್ತು. ಇದನ್ನು ರಾಜಕೀಯ ಸೌಹಾರ್ದತೆಯ ಉದಾಹರಣೆ ಎಂದು ಹಲವರು ಹಂಚಿಕೊಂಡಿದ್ದರು.

    ಸ್ಥಳೀಯರಿಂದ ಬಂದ ಸ್ಪಷ್ಟನೆ
    ಈ ಪೋಸ್ಟ್‌ಗೆ ಪ್ರತಿಕ್ರಿಯಿಸಿದ ಸ್ಥಳೀಯ ನಿವಾಸಿಗಳು ಮತ್ತು ಸೇವಾ ಭಾರತಿ ಕಾರ್ಯಕರ್ತರು ಬೇರೆಯದೇ ಮಾಹಿತಿ ನೀಡಿದ್ದಾರೆ:

    . ಅಂತ್ಯಸಂಸ್ಕಾರ ಮಾಡಿದವರು ಯಾರು?
    ಫೋಟೋದಲ್ಲಿ ಚಿತೆ ತಯಾರಿಸುತ್ತಿರುವ ವ್ಯಕ್ತಿ ರಘು ಚೆರುಗೋಳಿ. ಇವರು ಮಂಗಲ್ಪಾಡಿ ಸೇವಾ ಭಾರತಿ ಘಟಕದ ಸಂಚಾಲಕರು. ಕಳೆದ ಹಲವು ವರ್ಷಗಳಿಂದ ಅನಾಥ ಶವಗಳಿಗೆ ಅಂತ್ಯಸಂಸ್ಕಾರ ಮಾಡುವ ಸೇವೆ ಮಾಡುತ್ತಿದ್ದಾರೆ. ಕೊರೋನಾ ಸಂದರ್ಭದಲ್ಲೂ ಆರೋಗ್ಯ ಇಲಾಖೆಗೆ ನೆರವಾಗಿದ್ದರು. ಮೃತ ವ್ಯಕ್ತಿಗೆ ವಾರಿಸುದಾರರು ಇಲ್ಲದ ಕಾರಣ ರಘು ಚೆರುಗೋಳಿ ನೇತೃತ್ವದ ತಂಡವೇ ಅಂತಿಮ ವಿಧಿವಿಧಾನ ನೆರವೇರಿಸಿದೆ.

    . ಮುಸ್ಲಿಂ ಮಹಿಳಾ ಜನಪ್ರತಿನಿಧಿಯ ಪಾತ್ರ ಏನು?
    ಮೃತ ವ್ಯಕ್ತಿ ಅನಾಥನಾಗಿ ರೋಗಪೀಡಿತ ಸ್ಥಿತಿಯಲ್ಲಿದ್ದಾಗ ಸ್ಥಳೀಯ ಮುಸ್ಲಿಂ ಮಹಿಳಾ ಜನಪ್ರತಿನಿಧಿ ತಮ್ಮ ಅನಾಥಾಶ್ರಮ ಸಂಸ್ಥೆಯ ಮೂಲಕ ಅವರಿಗೆ ಚಿಕಿತ್ಸೆ ಮತ್ತು ಆರೈಕೆ ನೀಡಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಳಿಕ, ಅಂತ್ಯಸಂಸ್ಕಾರಕ್ಕಾಗಿ ಅವರು ಸೇವಾ ಭಾರತಿಯ ರಘು ಚೆರುಗೋಳಿ ಅವರನ್ನು ಸಂಪರ್ಕಿಸಿದ್ದರು.

    . ಖರ್ಚು-ವೆಚ್ಚ ಯಾರದ್ದು?
    ಅಂತ್ಯಸಂಸ್ಕಾರಕ್ಕೆ ಬೇಕಾದ ಎಲ್ಲಾ ಸಾಮಗ್ರಿಗಳನ್ನು, ಖರ್ಚುಗಳನ್ನು ಸೇವಾ ಭಾರತಿ ಸಂಘಟನೆಯೇ ಭರಿಸಿದೆ. ರಘು ಚೆರುಗೋಳಿ ಖುದ್ದು ನಿಂತು ಎಲ್ಲಾ ಕಾರ್ಯಗಳನ್ನು ನೆರವೇರಿಸಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

    ವಿವಾದ ಏಕೆ?
    ಒಂದು ಸಮುದಾಯದ ಮಹಿಳೆ ಚಿಕಿತ್ಸೆ ನೀಡಿದ ಮಾನವೀಯತೆ ಮತ್ತು ಇನ್ನೊಂದು ಸಂಘಟನೆಯ ಕಾರ್ಯಕರ್ತರು ಅಂತ್ಯಸಂಸ್ಕಾರ ಮಾಡಿದ ಸೇವೆ – ಎರಡೂ ಶ್ಲಾಘನೀಯ. ಆದರೆ ಸಾಮಾಜಿಕ ಮಾಧ್ಯಮದಲ್ಲಿ “ಮುಸ್ಲಿಂ ಮಹಿಳೆ ಅಗ್ನಿಸ್ಪರ್ಶ ಮಾಡಿದರು” ಎಂಬ ಒಂದು ಆಯಾಮ ಮಾತ್ರ ವೈರಲ್ ಆಗಿ, ಸೇವಾ ಭಾರತಿಯ ಪಾತ್ರ ಮರೆಯಾಯಿತು ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನು ಒಂದು ಸಂಘಟನೆ ಮತ್ತು ಸಮುದಾಯವನ್ನು ಗೇಲಿ ಮಾಡಲು ಬಳಸಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ.

    ವಾಸ್ತವ ಏನು?
    ಲಭ್ಯ ಮಾಹಿತಿ ಪ್ರಕಾರ: ಮುಸ್ಲಿಂ ಮಹಿಳಾ ಜನಪ್ರತಿನಿಧಿ ಮೃತ ವ್ಯಕ್ತಿಗೆ ಚಿಕಿತ್ಸೆ, ಆರೈಕೆ ನೀಡಿದ್ದಾರೆ. ಅಂತ್ಯಸಂಸ್ಕಾರವನ್ನು ಸೇವಾ ಭಾರತಿಯ ರಘು ಚೆರುಗೋಳಿ ನೇತೃತ್ವದ ತಂಡ ನೆರವೇರಿಸಿದೆ. ಇಬ್ಬರೂ ಸೇರಿ ಮಾಡಿದ ಮಾನವೀಯ ಕೆಲಸವನ್ನು ರಾಜಕೀಯ ಬಣ್ಣ ಹಚ್ಚಿ ವಿವಾದ ಮಾಡುವುದು ಸರಿಯಲ್ಲ ಎಂಬುದು ಸ್ಥಳೀಯರ ಅಭಿಪ್ರಾಯ.

    ವರದಿ: ಕಾಸರಗೋಡು ಪ್ರತಿನಿಧಿ

    #5): #Manjeshwar #FactCheck #ViralNews #HumanityFirst #KasaragodNews

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಸಕ್ಕರೆ ದುಬಾರಿ… ಬೆಲ್ಲವೂ ದುಬಾರಿ! ಸಿಹಿ ತಿನ್ನೋದು ಈಗ ‘ಲಕ್ಸುರಿ’ನಾ? ಕಬ್ಬು ಸಕ್ಕರೆ ಕಾರ್ಖಾನೆಗೆ ಅಲ್ಲ… ಇಥೆನಾಲ್ ಘಟಕಗಳಿಗೆ? ಗ್ರಾಹಕರ ಜೇಬಿಗೆ ಹೊಡೆತ!
    ಚಾಟ್‌ಜಿಪಿಟಿ ಹುಡುಕಾಟದ ಬಳಿಕ ಡಬಲ್ ಮರ್ಡರ್..!ತಾಯಿ-ಸಹೋದರನ ಹತ್ಯೆಗೆ AI ಹುಡುಕಾಟ..
    ₹1270 ಕೋಟಿ ಕಾನ್ಟ್ರಾಕ್ಟ್ ಹಗರಣ -CM ಖಾಂಡು ಕುಟುಂಬ ವಿಚಾರಣೆ-ಸುಪ್ರೀಂಕೋರ್ಟ್ ಸಿಬಿಐಗೆ ಆದೇಶ..
    30 ದಿನ, 13 ನಗರಗಳು, ₹10 ಲಕ್ಷ ಖರ್ಚು! ಅಮೆರಿಕದ ದಂಪತಿಯ ಭಾರತ ಯಾತ್ರೆ ವೈರಲ್….ವೈರಲ್ ವಿಡಿಯೋದಲ್ಲಿ ಹೊರಬಿದ್ದ ಅಚ್ಚರಿಯ ಲೆಕ್ಕ!
    ಜಮೀರ್ ಅಹಮದ್ ಉಚ್ಛಾಟನೆಗೆ ಕ್ಷಣಗಣನೆ
    🎬 ಜೈಲರ್ 2 ಸೆಟ್‌ನಲ್ಲಿ ವಿದ್ಯುತ್ ಅವಘಡ…28 ವರ್ಷದ ಕಾರ್ತಿಕೇಯನ್ ವಿದ್ಯುತ್ ಶಾಕ್‌ಗೆ ಬಲಿ..
    8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ
    ಆರ್‌ಸಿಬಿ ಎದುರಿಸಲು ರಾಯಲ್ಸ್ ರೆಡಿ??: ಕ್ರಿಕೆಟ್ ಜಗತ್ತಿಗೆ ಶಾಕ್ ಕೊಟ್ಟ ಬಿಹಾರದ ಬಾಲಕ-ಸಚಿನ್ ತೆಂಡೂಲ್ಕರ್ ಕೂಡ ಮೆಚ್ಚಿದ ಆ 29 ಎಸೆತಗಳ ರುದ್ರತಾಂಡವ!
    ಆನ್ಲೈನ್ ವಂಚಕರಿಂದ ಮಂಗಳೂರು ಡಾಕ್ಟರ್ ಒಬ್ಬರ ಏಳು ದಿನಗಳ ಕಾಲ ಹೌಸ್ ಅರೆಸ್ಟ್
    ₹10,000ಕ್ಕೆ NEET-UG 2026 ಪ್ರಶ್ನೆಪತ್ರಿಕೆ? ದೇಶವೇ ಬೆಚ್ಚಿಬಿದ್ದ ಲೀಕ್ ಸ್ಕಾಂಡಲ್!ಟೆಲಿಗ್ರಾಂ ಸೀಕ್ರೆಟ್ ಚಾಟ್ ವೈರಲ್…22 ಲಕ್ಷ ವಿದ್ಯಾರ್ಥಿಗಳ ಕನಸಿಗೆ ದೊಡ್ಡ ಹೊಡೆತ — NEET 2026 ರದ್ದು!
    ಘೋರ ಭಾನುವಾರ, ಒಂದೇ ಕುಟುಂಬದ ಎಂಟು ಮಹಿಳೆಯರ ದುರ್ಮರಣ
    ”ಮೋದಿ ಭರವಸೆ ಪೊಳ್ಳು” : ನೀಟ್ ಪತ್ರಿಕೆ ಸೋರಿಕೆ ಪ್ರಕರಣದ ಬಗ್ಗೆ ಕೇಜ್ರಿವಾಲ್ ವಾಗ್ದಾಳಿ
    ಕೊಡಗಿನಲ್ಲಿ ಪ್ರವಾಸಿ ಬಸ್ ಪಲ್ಟಿ20 ಪ್ರವಾಸಿಗರು ಕೂದಲೆಳೆಯ ಅಂತರದಲ್ಲಿ ಪಾರು; ಜೆಸಿಬಿಯಿಂದ ಬಸ್‌ ರಕ್ಷಣೆ!
    ₹3 ಕೋಟಿ ಹೂಡಿಕೆ ಮಾಡಿದ ಶಾಲೆಗೀಗ 20ಕ್ಕೂ ಹೆಚ್ಚು ಭಾಷೆಗಳಲ್ಲಿ ಮಾತನಾಡುವ ಸುಂದರಿ “ಐರಿಸ್” ಮೇಡಂ…ಸರ್ಕಾರಿ ಶಾಲೆ ನೋಡಿ ದೇಶವೇ ಶಾಕ್!
    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಮಚ್ಚು ದಾಳಿ: ಕಾಲೇಜಿಗೆ ತೆರಳುತ್ತಿದ್ದ ಪಿಯುಸಿ ವಿದ್ಯಾರ್ಥಿನಿ ಮೇಲೆ ಹಲ್ಲೆ; ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು
    ಶಿಕ್ಷಕರು ಹೊಡೆಯುತ್ತಾರೆಂಬ ಭಯಕ್ಕೆ ಮನೆ ಬಿಟ್ಟ 9ನೇ–10ನೇ ತರಗತಿ ವಿದ್ಯಾರ್ಥಿನಿಯರು..!ಎಲ್ಲಿದ್ದರು ಗೊತ್ತಾ..!
    14 ಮುಖ್ಯಮಂತ್ರಿಗಳ ವಿರುದ್ಧ ಕ್ರಿಮಿನಲ್ ಕೇಸ್….!!!!!!ಸುಪ್ರೀಂ ಕೋರ್ಟ್‌ಗೆ ಶಾಕಿಂಗ್ ವರದಿ!
    ‘ಮೇಕ್ ಇನ್ ಇಂಡಿಯಾ’ಗೆ ಮತ್ತೊಂದು ದೊಡ್ಡ ಗೆಲುವು: C295 ವಿಮಾನದ ಮೊದಲ ಯಶಸ್ವಿ ಪರೀಕ್ಷಾ ಹಾರಾಟ
    ಅಪ್ಪನ ಶವದ ಪಕ್ಕದಲ್ಲೇ ರಕ್ತದ ಮಡುವಿನಲ್ಲಿ ಮಗು…!ಧಾರವಾಡದಲ್ಲಿ ಬೆಚ್ಚಿಬೀಳಿಸಿದ ವೈದ್ಯ ಕುಟುಂಬ ದುರಂತ..!ಪತ್ನಿ ಪೊಲೀಸ್ ವಶದಲ್ಲಿ, ತನಿಖೆ ತೀವ್ರ .
    ಸಾರ್ವಜನಿಕವಲ್ಲದ ಸ್ಥಳದಲ್ಲಿ ಜಾತಿ ನಿಂದನೆ ಮಾಡಿದರೆ SC/ST ಕಾಯ್ದೆಯಡಿ ಅಪರಾಧವಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
    ಅಪ್ಪ -ಅಮ್ಮ ಮಕ್ಕಳ–ಬಾಂಧವ್ಯಕ್ಕೆ ಎಚ್ಚರಿಕೆಯ ಗಂಟೆ……!ಸುತ್ತಿಗೆಯಿಂದ ಹೊಡೆದು ತಂದೆ-ತಾಯಿಯನ್ನೇ ಕೊಂದ ಮಗ!
    ದಕ್ಷಿಣ ಕನ್ನಡ–ಉಡುಪಿಯಲ್ಲಿ ಗೋಡಂಬಿ ಕ್ರಾಂತಿಗೆ ರಾಜ್ಯ ಸರ್ಕಾರ ಸಜ್ಜು..₹1 ಕೋಟಿ ಯೋಜನೆ ಘೋಷಿಸಿದ ಈಶ್ವರ್ ಖಂಡ್ರೆ…
    ದೆಹಲಿಯನ್ನು ನಡುಗಿಸಿದ ಸೈಕೋಪಾತ್ ಘಟನೆಯ ಕ್ರೂರ ಸತ್ಯ…. ಆನ್‌ಲೈನ್ ಬೆಟ್ಟಿಂಗ್ ಮತ್ತು ಆಟಗಳ ಅಡಿಕ್ಟ್ – ಸಾಲ …ಮನೋವೈಕಲ್ಯ ಲಕ್ಷಣ!
    ಕಾಂಚನಾ ಟೆಕ್ಸ್‌ಟೈಲ್ಸ್ ಮ್ಯಾನೇಜರ್ ದಿನೇಶ್ ರಾಜ್ ಕೊಲೆ ಆರೋಪಿ 11 ವರ್ಷ ಬಳಿಕ ಅರೆಸ್ಟ್..!
    ಮಂಗಳೂರು ಹಂಪನಕಟ್ಟೆಯಲ್ಲಿ ಶೂ ಅಂಗಡಿಗೆ ಬೆಂಕಿ; ಅಪಾರ ನಷ್ಟ, ಅವಘಡದಿಂದ ಎಚ್ಚೆತ್ತ ವ್ಯಾಪಾರಿಗಳು…!
    ಬಳ್ಳಾರಿ “ಪೊಲೀಸ್ ಗನ್‌ಮನ್ ಎಕ್ಸ್‌ಟಾರ್ಷನ್”ಇಲಾಖೆಗೆ ಕಳಂಕ: ಗನ್‌ಮನ್ ಸೇರಿ ಮೂವರ ವಿರುದ್ಧ ಪ್ರಕರಣ!
    ವಿಮಾನದಲ್ಲಿ ಭಾರೀ ಟರ್ಬುಲೆನ್ಸ್:300 ಅಡಿ ಹಠಾತ್ ಕುಸಿದ ಏರ್ ಇಂಡಿಯಾ ವಿಮಾನ..!ಪ್ರಯಾಣಿಕರು-ಸಿಬ್ಬಂದಿಗೆ ಗಾಯ..
    ಮತ್ತೆ ಜಾರುತ್ತಿದೆ ಕೆತ್ತಿಕಲ್ ಗುಡ್ಡ: ಕೋಟ್ಯಂತರ ವೆಚ್ಚದ ತಡೆ ಕಾಮಗಾರಿಯೂ ವಿಫಲವೇ? ಹೆದ್ದಾರಿ 169ರ ಸುರಕ್ಷತೆ ಮತ್ತೆ ಪ್ರಶ್ನಾರ್ಥಕ
    ಕುಂದಾಪುರದಲ್ಲಿ ಎರಡು ಮಕ್ಕಳ ತಾಯಿ ನಾಪತ್ತೆ. ಸ್ನೇಹಿತರ ಜೊತೆಯಲ್ಲಿ ಹೋಗಿರುವ ಶಂಕೆ