📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

“ಮಾರಿಕೊಂಡ ಮಾಧ್ಯಮದವರು ಯಾರು?” ಪ್ರಶ್ನೆಗೆ ಪ್ರಕಾಶ್ ರಾಜ್ ನಿರುತ್ತರ”ಪತ್ರಿಕಾಗೋಷ್ಠಿಯಲ್ಲೇ ಶುರುವಾದ ಭಾರೀ ವಿವಾದ ಏನು?

ನೇರ ಮಾತು, ತೀಕ್ಷ್ಣ ಟೀಕೆ ಮತ್ತು ವಿವಾದಾತ್ಮಕ ಹೇಳಿಕೆಗಳಿಗೆ ಹೆಸರುವಾಸಿಯಾದ ನಟ ಪ್ರಕಾಶ್ ರಾಜ್ ಮತ್ತೊಮ್ಮೆ ದೇಶದಾದ್ಯಂತ ಚರ್ಚೆಗೆ ಕಾರಣವಾಗಿದ್ದರು. ಪತ್ರಿಕಾಗೋಷ್ಠಿಯೊಂದರಲ್ಲಿ ಮಾತನಾಡುವ ವೇಳೆ ಅವರು ಕೆಲ ಮಾಧ್ಯಮಗಳನ್ನು ಉದ್ದೇಶಿಸಿ  “ಮಾರಿಕೊಂಡ ಮಾಧ್ಯಮ ” (ಮಾರಾಟವಾದ ಮಾಧ್ಯಮ) ಎಂದು ಹೇಳಿದ್ದ ಮಾತು ಭಾರೀ ಸಂಚಲನ ಸೃಷ್ಟಿಸಿತ್ತು.

ಬೆಂಗಳೂರು, ಬುಧವಾರ: ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ರಾಜ್ ಅವರು ಬೆಂಗಳೂರು ಪ್ರೆಸ್ ಕ್ಲಬ್‌ನಲ್ಲಿ ನಡೆಸಿದ ಪತ್ರಿಕಾಗೋಷ್ಠಿ, ವಿವಾದಕ್ಕೆ ಕಾರಣವಾಯಿತು. ಬೆಳಗ್ಗೆ 10.30ಕ್ಕೆ ಆರಂಭವಾದ ಕಾರ್ಯಕ್ರಮ, ಪತ್ರಕರ್ತರ ಜೊತೆಗಿನ ಜಟಾಪಟಿಯಿಂದಾಗಿ ಮಧ್ಯಾಹ್ನ 12 ಗಂಟೆಯವರೆಗೆ ಗೊಂದಲದಲ್ಲಿ ಕಳೆಯಿತು.

ಜಟಾಪಟಿ ಹೇಗಾಯ್ತು?
ಪ್ರಕಾಶ್ ರಾಜ್ ಅವರು ತಮ್ಮ ಭಾಷಣದಲ್ಲಿ “ಮಾರಿಕೊಂಡ ಮಾಧ್ಯಮದವರು ಇದಾರೆ” ಎಂದು ಪರೋಕ್ಷವಾಗಿ ಟೀಕೆ ಮಾಡಿದರು. ಇದಕ್ಕೆ ಪತ್ರಕರ್ತರು ತಕ್ಷಣ ಪ್ರತಿಕ್ರಿಯಿಸಿ, “ಸರ್, ಮಾರಿಕೊಂಡ ಮಾಧ್ಯಮದವರು ಯಾರು? ಹೆಸರು ಹೇಳಿ” ಎಂದು ಪ್ರಶ್ನಿಸಿದರು.

ಪತ್ರಕರ್ತರ ಪ್ರಶ್ನೆಗೆ ಪ್ರಕಾಶ್ ರಾಜ್, ಉತ್ತರ ಹೇಳಲು ತಡಬಡಾಯಿಸಿದರು”ನಾನು ನಿಮಗೆ ಹೇಳಿದ್ದಲ್ಲ” ಎಂದು ತೇಪೆ ಹಾಕಲು ಪ್ರಯತ್ನಿಸಿದರು. ಪತ್ರಕರ್ತರು ಮತ್ತೆ ಅದೇ ಉತ್ತರಕ್ಕಾಗಿ ಆಗ್ರಹಿಸಿದಾಗ, “ಇನ್ಯಾರಿಗೆ ಹೇಳಿದ್ದು? ಹೆಸರು ಹೇಳಿ” ಎಂದು ಒತ್ತಾಯಿಸಿದರು. ಇದಕ್ಕೆ ಪ್ರಕಾಶ್ ರಾಜ್, “ಅದು ನಿಮಗೇ ಗೊತ್ತಿದೆ” ಎಂದು ಹೇಳಿದರು. “ಹೆಸರು ಹೇಳಿ” ಎಂಬ ಪತ್ರಕರ್ತರ ಪಟ್ಟಿಗೆ ಕೊನೆಗೆ “ನೀವಲ್ಲ..” ಎಂದು ಮಾತ್ರ ಉತ್ತರಿಸಿದರು.

12 ಗಂಟೆ ಬಳಿಕ ಏನಾಯ್ತು?
1.5 ಗಂಟೆ ಜಟಾಪಟಿ ಬಳಿಕ ಪ್ರಕಾಶ್ ರಾಜ್ ಅವರು ಧರ್ಮಸ್ಥಳ ಬುರುಡೆ ಪ್ರಕರಣ ಹಾಗೂ ಚಿನ್ನಪ್ಪ ವಿಚಾರದ ಬಗ್ಗೆ ಮಾತನಾಡಿದರು. ಆದರೆ ಪತ್ರಕರ್ತರು ನಿರೀಕ್ಷಿಸಿದಂತೆ ಯಾವುದೇ ಸ್ಪಷ್ಟ ಉತ್ತರ ಸಿಗಲಿಲ್ಲ.

ಸಭೆ ಮುಗಿದ ಬಳಿಕ ಹಾಜರಿದ್ದ ಪತ್ರಕರ್ತರೊಬ್ಬರು, “ಬೆಟ್ಟ ಅಗೆದು ಇಲಿಯೂ ಹಿಡಿಯಲಿಲ್ಲ” ಎಂದು ವ್ಯಂಗ್ಯವಾಡಿದರು.

ಪ್ರಕಾಶ್ ರಾಜ್ ಅವರು ಈ ಹಿಂದೆಯೂ “ಹಾಫ್ ಆಫ್ ಬಾಲಿವುಡ್ ಸೋಲ್ಡ್” ಮತ್ತು “ಮೀಡಿಯಾ ಆರ್ಗನೈಸ್ಡ್ ಆಗಿ ಖರೀದಿಯಾಗ್ತಿದೆ” ಎಂದು ಆರೋಪ ಮಾಡಿದ್ದರು. ಆದರೆ ಯಾವತ್ತೂ ನಿರ್ದಿಷ್ಟ ಹೆಸರು ಬಹಿರಂಗಪಡಿಸಿಲ್ಲ. ಒಂದು ತರ ಹಿಟ್ ಅಂಡ್ ರನ್ ಮಾಡಿದರು.

ಪ್ರಕಾಶ್ ರಾಜ್ ಅವರ ಆರೋಪ ಏನಂದರೆ, ಕೆಲವು ಮಾಧ್ಯಮ ಸಂಸ್ಥೆಗಳು ಅಧಿಕಾರದಲ್ಲಿರುವವರ ಪರವಾಗಿ ಮಾತ್ರ ಸುದ್ದಿಗಳನ್ನು ಪ್ರಸಾರ ಮಾಡುತ್ತಿವೆ. ಸರ್ಕಾರದ ವಿರುದ್ಧದ ಪ್ರಶ್ನೆಗಳು, ಭಿನ್ನಾಭಿಪ್ರಾಯಗಳು ಅಥವಾ ವಿರೋಧದ ಧ್ವನಿಗಳಿಗೆ ಬೇಕಾದಷ್ಟು ಪ್ರಾಮುಖ್ಯತೆ ನೀಡುತ್ತಿಲ್ಲ ಎಂಬುದು ಅವರ ವಾದವಾಗಿತ್ತು. “ನಾನು ಪತ್ರಿಕಾಗೋಷ್ಠಿ ನಡೆಸಿದರೂ ಕೆಲವು ಚಾನೆಲ್‌ಗಳು ಅದನ್ನು ತೋರಿಸುವುದೇ ಇಲ್ಲ” ಎಂದು ಅವರು ಬೇಸರ ವ್ಯಕ್ತಪಡಿಸಿದ್ದರು.

ಈ ಹೇಳಿಕೆ ಹೊರಬಿದ್ದ ತಕ್ಷಣ ಸಾಮಾಜಿಕ ಜಾಲತಾಣಗಳಲ್ಲಿ ಎರಡು ಬಣಗಳು ನಿರ್ಮಾಣವಾದವು. ಒಂದು ಕಡೆ ಪ್ರಕಾಶ್ ರಾಜ್ ಮಾತನ್ನು ಬೆಂಬಲಿಸಿದವರು, “ಮಾಧ್ಯಮ ಸ್ವಾತಂತ್ರ್ಯ ಅಪಾಯದಲ್ಲಿದೆ” ಎಂದು ವಾದಿಸಿದರು. ಮತ್ತೊಂದು ಕಡೆ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದವರು, “ಎಲ್ಲ ಮಾಧ್ಯಮಗಳನ್ನು ಒಂದೇ ತಕ್ಕಡಿಯಲ್ಲಿ ತೂಗುವುದು ಸರಿಯಲ್ಲ” ಎಂದು ಟೀಕಿಸಿದರು.

ರಾಜಕೀಯ ವಿಚಾರಗಳಲ್ಲಿ ಮುಕ್ತವಾಗಿ ಮಾತನಾಡುವ ಪ್ರಕಾಶ್ ರಾಜ್, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರದ ಕೆಲವು ನೀತಿಗಳ ವಿರುದ್ಧ ಹಲವಾರು ಬಾರಿ ಧ್ವನಿ ಎತ್ತಿದ್ದಾರೆ. ಇದರಿಂದ ಅವರ ಪ್ರತಿಯೊಂದು ಹೇಳಿಕೆಯೂ ರಾಜಕೀಯ ಚರ್ಚೆಗೆ ಕಾರಣವಾಗುತ್ತದೆ  “ಮಾರಿಕೊಂಡ ಮಾಧ್ಯಮ ”  ಹೇಳಿಕೆಯೂ ಅದಕ್ಕೆ ಹೊರತಾಗಿರಲಿಲ್ಲ.

ಆಸಕ್ತಿಕರ ಸಂಗತಿಯೆಂದರೆ, ಈ ಒಂದು ಪದವೇ ದೇಶದಾದ್ಯಂತ ಮಾಧ್ಯಮಗಳ ಪಾತ್ರ, ಪತ್ರಿಕೋದ್ಯಮದ ಸ್ವಾತಂತ್ರ್ಯ ಮತ್ತು ಸುದ್ದಿಗಳ ನಿಷ್ಪಕ್ಷಪಾತತೆ ಬಗ್ಗೆ ದೊಡ್ಡ ಚರ್ಚೆಗೆ ನಾಂದಿ ಹಾಡಿತ್ತು. ಕೆಲವರಿಗೆ ಅದು ಕಠಿಣ ಸತ್ಯವಾಗಿ ಕಂಡರೆ, ಇನ್ನೂ ಕೆಲವರಿಗೆ ಅದು ಅತಿರೇಕದ ಆರೋಪವಾಗಿ ಕಾಣಿಸಿತು.

. ಒಂದು ಹೇಳಿಕೆ ಹೇಗೆ ರಾಷ್ಟ್ರಮಟ್ಟದ ವಿವಾದವಾಗಿ ಬದಲಾಗಬಹುದು ಎಂಬುದಕ್ಕೆ ಇದು ಪ್ರಮುಖ ಉದಾಹರಣೆಯಾಗಿದೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಬೆಂಗಳೂರು ಟು ಮುಂಬೈ  ಐದೇ ಘಂಟೆ ಪ್ರಯಾಣ- ಎಕ್ಸ್ಪ್ರೆಸ್ ಹೈವೇಗೆ ಅಸ್ತು
ಒಂದು ವಾಟ್ಸ್ಯಾಪ್ ಮೆಸೇಜ್… ಕೋರ್ಟ್ ವರೆಗೂ ಎಳೆದ ಶಾಕ್ ಘಟನೆಯ ಸುತ್ತ..
ಬೆಳ್ತಂಗಡಿ ಸ್ನಾನಕ್ಕೆ ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವು…
ಬಂಗಾಳ ಚುನಾವಣೆ ಫಲಿತಾಂಶವೇ ಬದಲಾಗಿತ್ತಾ?ಬಂಗಾಳ ರಾಜಕೀಯದಲ್ಲಿ ಹೊಸ ಬಾಂಬ್!ಸುಪ್ರೀಂ ಕೋರ್ಟ್ ಮುಂದೆ ಬಿಜೆಪಿ ಜಯದ ಮೇಲೆ ಟಿಎಂಸಿ ದೊಡ್ಡ ಪ್ರಶ್ನೆ!
2026 ವಿಧಾನಸಭೆ ಚುನಾವಣೆ – ಮುಖ್ಯ ಮಾಹಿತಿ
ಸಂಕಷ್ಟದಲ್ಲಿರುವ ರಾಜ್ಯದ ಜನತೆಗೆ ಬರೆ ಹಾಕಿದ ರಾಜ್ಯ ಸರ್ಕಾರ!
ಮಂಗಳೂರು ಶಾಲಾ ದಾಖಲಾತಿ ಅಂದೋಲನ-ಎಲ್ಲ ಮಕ್ಕಳಿಗೂ ಶಾಲೆಯ ಹಕ್ಕು …
🎬 ಜೈಲರ್ 2 ಸೆಟ್‌ನಲ್ಲಿ ವಿದ್ಯುತ್ ಅವಘಡ…28 ವರ್ಷದ ಕಾರ್ತಿಕೇಯನ್ ವಿದ್ಯುತ್ ಶಾಕ್‌ಗೆ ಬಲಿ..
ಮರಣದಂಡನೆ ಶಿಕ್ಷೆಗೆ ಈಡಾದ  ತಮಿಳುನಾಡು   ಪೊಲೀಸರು
ಕಾರ್ಕಳದಲ್ಲಿ  ಜಾಗ ಕಿತ್ತುಕೊಳ್ಳಲು ಮಾಡಿದ ಪ್ಲಾನ್, ರಿವರ್ಸಾಗಿ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದೆ
ತಪ್ಪುಅರ್ಥಕ್ಕೆಕ್ಷಮೆ, ಹೊಸರೂಪದಲ್ಲಿಮತ್ತೆ ‘ಸರ್ಸೆಸೆರಗು’”-ಪ್ರೇಮ್
ಮಂಗಳೂರು ಜಾರಂದಾಯ ಸ್ಥಾನದ ದೈವ ನರ್ತನ ವಿವಾದ – ಸ್ಪಷ್ಟನೆ- ಮರುಪ್ರಶ್ನೆ-ಇತ್ಯರ್ಥವಾಗುತ್ತಾ..?!
ಜನರ ಹಾಹಾ ಕಾರಕ್ಕೆ ಬೆಚ್ಚಿಬಿದ್ದ ಸರ್ಕಾರ –  ಎಸ್ಮ ಕಾಯ್ದೆ ಜಾರಿಗೆ
ಮನೆಯ ಲಾಕ್ ವ್ಯವಸ್ಥೆ ಇದ್ದರೂ, ಸುರಕ್ಷತೆ ಭೇದಿಸಲಾಗಿದೆ….!ಕುಟುಂಬ ದೇವಸ್ಥಾನಕ್ಕೆ -ಕಳ್ಳರು ಅದೇ ಮನೆ ಟಾರ್ಗೆಟ್..!
ಕೂತ್ಕೊಳಪ್ಪ ಡಿಕೆಶಿ ನಿಂದೆ ಖುರ್ಚಿ … ಅಂತ CM ಸಿದ್ದು ಯಾವಾಗ ಹೇಳ್ಬೇಕಿತ್ತು??ಅಹಿಂದ ಮಾಸ್ ಲೀಡರ್ ವರ್ಸಸ್ ಮನಿ ಮ್ಯಾನ್..ಕರ್ನಾಟಕ ರಾಜಕಾರಣದ ಅತಿ ದೊಡ್ಡ ಟ್ವಿಸ್ಟ್!
MLC ಐವನ್ ಡಿಸೋಜಾರಿಂದ ಕಾಮಗಾರಿ ಸ್ಥಳ ಪರಿಶೀಲನೆ
ಮಕ್ಕಳ ಸುರಕ್ಷತೆಯೇ ಮುಖ್ಯ – ಸಂದೇಶ ಕೊಟ್ಟ ಹೈಕೋರ್ಟ್
ಇದು IPLನಲ್ಲಿ ಹೊಸ ಹೀರೋ ಹುಟ್ಟಿದಂತೇ…ಆದ್ರೆ ಕ್ರಿಕೆಟ್ ಅಲ್ಲ, ಬಾಕ್ಸಿಂಗ್‌ನಲ್ಲಿ! 🥊🔥
₹10,000ಕ್ಕೆ NEET-UG 2026 ಪ್ರಶ್ನೆಪತ್ರಿಕೆ? ದೇಶವೇ ಬೆಚ್ಚಿಬಿದ್ದ ಲೀಕ್ ಸ್ಕಾಂಡಲ್!ಟೆಲಿಗ್ರಾಂ ಸೀಕ್ರೆಟ್ ಚಾಟ್ ವೈರಲ್…22 ಲಕ್ಷ ವಿದ್ಯಾರ್ಥಿಗಳ ಕನಸಿಗೆ ದೊಡ್ಡ ಹೊಡೆತ — NEET 2026 ರದ್ದು!
ವೈರಲ್ ವೀಡಿಯೊ ….ನಗು ಆರೋಗ್ಯಕ್ಕೆ ಒಳ್ಳೆಯದು, ಆದ್ರೆ ಹೆಣ್ಣುಮಗುವಿನ ಹೆಣದ ಮುಂದೆ ನಕ್ಕರೆ.. ಏನಂತಾರೆ?ತಮಿಳುನಾಡಿನ ಜನ ಕಣ್ಣೀರಲ್ಲಿರುವಾಗ ಇವರಿಗೆ ಜೋಕ್ಸ್‌ ನೆನಪಾಯ್ತಾ? ಏನದು ಅಂತ ಜೋಕ್ಸ್ …
ಬೈಜು ರವೀಂದ್ರನ್ ಗೆ ಕೊನೆಗೂ ಜೈಲು ಶಿಕ್ಷೆ …!ಮುಳುಗಿಯೇ ಹೋಯ್ತು ಬೈಜೂಸ್!ಕೋಟಿ ಕೋಟಿ ಲೂಟಿ ಮಾಡಿ ಕ್ರಿಕೆಟ್ ಜರ್ಸಿಯಿಂದ ಜೈಲಿನ ಕೈದಿ ನಂಬರ್ ವರೆಗೆ….ಬೈಜೂಸ್ ಸಾಮ್ರಾಜ್ಯದ ರೋಚಕ ಪತನದ inside story
ಮಿಸೆಸ್ ಕೇರಳ ಈಗ ‘ಡ್ರಗ್ ಕ್ವೀನ್’…!?ಕೋಟಿ ಮೌಲ್ಯದ ಡ್ರಗ್ಸ್ ಜೊತೆ ಮಾಜಿ ‘ಮಿಸೆಸ್ ಕೇರಳ’ ಅರೆಸ್ಟ್!”
ಮಣಿಪಾಲ ಜೆಇಇ ಮೇನ್ಸ್ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ಪ್ರಯತ್ನ….
ನೀರು ಪೋಲು ಬೇಡ….ಈಗಲೇ ಎಚ್ಚೆತ್ತುಕೊಳ್ಳಿ!ಇಂದು ನಿರ್ಲಕ್ಷ್ಯ,ನಾಳೆ ಜಲ ಸಂಕಷ್ಟದ ಎಚ್ಚರಿಕೆ…!
ಬೃಹತ್ ಅಭಿಯಾನ….5.51 ಟನ್ ವಸ್ತುಗಳು..!5000ಕ್ಕೂ ಹೆಚ್ಚು ದೇವರ ಫೋಟೋಗಳು
ಇಬ್ಬರು ಮಕ್ಕಳ ಕಣ್ಣೆದುರೇ ಪತ್ನಿಯನ್ನು ಸುಮಾರು 20 ಬಾರಿ ಚಾಕುವಿನಿಂದ ಇರಿದು ಕೊಂದ ಪತಿ – ಕಾರಣ ಮೊಬೈಲ್‌ನಲ್ಲಿ ಆಟ
ಸರ್ಕಾರಿ ಸ್ವಾಮ್ಯದ ಬೇಲಿ ಕಂಬ ಕಿತ್ತಾಕಲು DYFI ಕುಮ್ಮಕ್ಕು….!
ವಿಷ ಸೇವನೆ ಸ್ವಯಂ ಆಗಿತ್ತೇ ಅಥವಾ ಪ್ರಚೋದನೆ ಕಾರಣವೇ ….?!
ಯುದ್ಧ ನಿಂತಿತು,ಕಚ್ಚಾ ತೈಲ 78 ಡಾಲರ್‌ಗೆ ಕುಸಿತ!LPG, ಪೆಟ್ರೋಲ್, ಡೀಸೆಲ್ ದರ  ಇಳಿಯುತ್ತದೆಯೇ? 
ಹೊಸ ರಾಜಕೀಯ ಕ್ರಾಂತಿ! ಅಸ್ಸಾಂ ಕುದಿಯುತ್ತಿದೆ…ಹಿಂದುತ್ವ vs ಗುರುತು ರಾಜಕೀಯ…!