📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    “ಮಾರಿಕೊಂಡ ಮಾಧ್ಯಮದವರು ಯಾರು?” ಪ್ರಶ್ನೆಗೆ ಪ್ರಕಾಶ್ ರಾಜ್ ನಿರುತ್ತರ”ಪತ್ರಿಕಾಗೋಷ್ಠಿಯಲ್ಲೇ ಶುರುವಾದ ಭಾರೀ ವಿವಾದ ಏನು?

    ನೇರ ಮಾತು, ತೀಕ್ಷ್ಣ ಟೀಕೆ ಮತ್ತು ವಿವಾದಾತ್ಮಕ ಹೇಳಿಕೆಗಳಿಗೆ ಹೆಸರುವಾಸಿಯಾದ ನಟ ಪ್ರಕಾಶ್ ರಾಜ್ ಮತ್ತೊಮ್ಮೆ ದೇಶದಾದ್ಯಂತ ಚರ್ಚೆಗೆ ಕಾರಣವಾಗಿದ್ದರು. ಪತ್ರಿಕಾಗೋಷ್ಠಿಯೊಂದರಲ್ಲಿ ಮಾತನಾಡುವ ವೇಳೆ ಅವರು ಕೆಲ ಮಾಧ್ಯಮಗಳನ್ನು ಉದ್ದೇಶಿಸಿ  “ಮಾರಿಕೊಂಡ ಮಾಧ್ಯಮ ” (ಮಾರಾಟವಾದ ಮಾಧ್ಯಮ) ಎಂದು ಹೇಳಿದ್ದ ಮಾತು ಭಾರೀ ಸಂಚಲನ ಸೃಷ್ಟಿಸಿತ್ತು.

    ಬೆಂಗಳೂರು, ಬುಧವಾರ: ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ರಾಜ್ ಅವರು ಬೆಂಗಳೂರು ಪ್ರೆಸ್ ಕ್ಲಬ್‌ನಲ್ಲಿ ನಡೆಸಿದ ಪತ್ರಿಕಾಗೋಷ್ಠಿ, ವಿವಾದಕ್ಕೆ ಕಾರಣವಾಯಿತು. ಬೆಳಗ್ಗೆ 10.30ಕ್ಕೆ ಆರಂಭವಾದ ಕಾರ್ಯಕ್ರಮ, ಪತ್ರಕರ್ತರ ಜೊತೆಗಿನ ಜಟಾಪಟಿಯಿಂದಾಗಿ ಮಧ್ಯಾಹ್ನ 12 ಗಂಟೆಯವರೆಗೆ ಗೊಂದಲದಲ್ಲಿ ಕಳೆಯಿತು.

    ಜಟಾಪಟಿ ಹೇಗಾಯ್ತು?
    ಪ್ರಕಾಶ್ ರಾಜ್ ಅವರು ತಮ್ಮ ಭಾಷಣದಲ್ಲಿ “ಮಾರಿಕೊಂಡ ಮಾಧ್ಯಮದವರು ಇದಾರೆ” ಎಂದು ಪರೋಕ್ಷವಾಗಿ ಟೀಕೆ ಮಾಡಿದರು. ಇದಕ್ಕೆ ಪತ್ರಕರ್ತರು ತಕ್ಷಣ ಪ್ರತಿಕ್ರಿಯಿಸಿ, “ಸರ್, ಮಾರಿಕೊಂಡ ಮಾಧ್ಯಮದವರು ಯಾರು? ಹೆಸರು ಹೇಳಿ” ಎಂದು ಪ್ರಶ್ನಿಸಿದರು.

    ಪತ್ರಕರ್ತರ ಪ್ರಶ್ನೆಗೆ ಪ್ರಕಾಶ್ ರಾಜ್, ಉತ್ತರ ಹೇಳಲು ತಡಬಡಾಯಿಸಿದರು”ನಾನು ನಿಮಗೆ ಹೇಳಿದ್ದಲ್ಲ” ಎಂದು ತೇಪೆ ಹಾಕಲು ಪ್ರಯತ್ನಿಸಿದರು. ಪತ್ರಕರ್ತರು ಮತ್ತೆ ಅದೇ ಉತ್ತರಕ್ಕಾಗಿ ಆಗ್ರಹಿಸಿದಾಗ, “ಇನ್ಯಾರಿಗೆ ಹೇಳಿದ್ದು? ಹೆಸರು ಹೇಳಿ” ಎಂದು ಒತ್ತಾಯಿಸಿದರು. ಇದಕ್ಕೆ ಪ್ರಕಾಶ್ ರಾಜ್, “ಅದು ನಿಮಗೇ ಗೊತ್ತಿದೆ” ಎಂದು ಹೇಳಿದರು. “ಹೆಸರು ಹೇಳಿ” ಎಂಬ ಪತ್ರಕರ್ತರ ಪಟ್ಟಿಗೆ ಕೊನೆಗೆ “ನೀವಲ್ಲ..” ಎಂದು ಮಾತ್ರ ಉತ್ತರಿಸಿದರು.

    12 ಗಂಟೆ ಬಳಿಕ ಏನಾಯ್ತು?
    1.5 ಗಂಟೆ ಜಟಾಪಟಿ ಬಳಿಕ ಪ್ರಕಾಶ್ ರಾಜ್ ಅವರು ಧರ್ಮಸ್ಥಳ ಬುರುಡೆ ಪ್ರಕರಣ ಹಾಗೂ ಚಿನ್ನಪ್ಪ ವಿಚಾರದ ಬಗ್ಗೆ ಮಾತನಾಡಿದರು. ಆದರೆ ಪತ್ರಕರ್ತರು ನಿರೀಕ್ಷಿಸಿದಂತೆ ಯಾವುದೇ ಸ್ಪಷ್ಟ ಉತ್ತರ ಸಿಗಲಿಲ್ಲ.

    ಸಭೆ ಮುಗಿದ ಬಳಿಕ ಹಾಜರಿದ್ದ ಪತ್ರಕರ್ತರೊಬ್ಬರು, “ಬೆಟ್ಟ ಅಗೆದು ಇಲಿಯೂ ಹಿಡಿಯಲಿಲ್ಲ” ಎಂದು ವ್ಯಂಗ್ಯವಾಡಿದರು.

    ಪ್ರಕಾಶ್ ರಾಜ್ ಅವರು ಈ ಹಿಂದೆಯೂ “ಹಾಫ್ ಆಫ್ ಬಾಲಿವುಡ್ ಸೋಲ್ಡ್” ಮತ್ತು “ಮೀಡಿಯಾ ಆರ್ಗನೈಸ್ಡ್ ಆಗಿ ಖರೀದಿಯಾಗ್ತಿದೆ” ಎಂದು ಆರೋಪ ಮಾಡಿದ್ದರು. ಆದರೆ ಯಾವತ್ತೂ ನಿರ್ದಿಷ್ಟ ಹೆಸರು ಬಹಿರಂಗಪಡಿಸಿಲ್ಲ. ಒಂದು ತರ ಹಿಟ್ ಅಂಡ್ ರನ್ ಮಾಡಿದರು.

    ಪ್ರಕಾಶ್ ರಾಜ್ ಅವರ ಆರೋಪ ಏನಂದರೆ, ಕೆಲವು ಮಾಧ್ಯಮ ಸಂಸ್ಥೆಗಳು ಅಧಿಕಾರದಲ್ಲಿರುವವರ ಪರವಾಗಿ ಮಾತ್ರ ಸುದ್ದಿಗಳನ್ನು ಪ್ರಸಾರ ಮಾಡುತ್ತಿವೆ. ಸರ್ಕಾರದ ವಿರುದ್ಧದ ಪ್ರಶ್ನೆಗಳು, ಭಿನ್ನಾಭಿಪ್ರಾಯಗಳು ಅಥವಾ ವಿರೋಧದ ಧ್ವನಿಗಳಿಗೆ ಬೇಕಾದಷ್ಟು ಪ್ರಾಮುಖ್ಯತೆ ನೀಡುತ್ತಿಲ್ಲ ಎಂಬುದು ಅವರ ವಾದವಾಗಿತ್ತು. “ನಾನು ಪತ್ರಿಕಾಗೋಷ್ಠಿ ನಡೆಸಿದರೂ ಕೆಲವು ಚಾನೆಲ್‌ಗಳು ಅದನ್ನು ತೋರಿಸುವುದೇ ಇಲ್ಲ” ಎಂದು ಅವರು ಬೇಸರ ವ್ಯಕ್ತಪಡಿಸಿದ್ದರು.

    ಈ ಹೇಳಿಕೆ ಹೊರಬಿದ್ದ ತಕ್ಷಣ ಸಾಮಾಜಿಕ ಜಾಲತಾಣಗಳಲ್ಲಿ ಎರಡು ಬಣಗಳು ನಿರ್ಮಾಣವಾದವು. ಒಂದು ಕಡೆ ಪ್ರಕಾಶ್ ರಾಜ್ ಮಾತನ್ನು ಬೆಂಬಲಿಸಿದವರು, “ಮಾಧ್ಯಮ ಸ್ವಾತಂತ್ರ್ಯ ಅಪಾಯದಲ್ಲಿದೆ” ಎಂದು ವಾದಿಸಿದರು. ಮತ್ತೊಂದು ಕಡೆ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದವರು, “ಎಲ್ಲ ಮಾಧ್ಯಮಗಳನ್ನು ಒಂದೇ ತಕ್ಕಡಿಯಲ್ಲಿ ತೂಗುವುದು ಸರಿಯಲ್ಲ” ಎಂದು ಟೀಕಿಸಿದರು.

    ರಾಜಕೀಯ ವಿಚಾರಗಳಲ್ಲಿ ಮುಕ್ತವಾಗಿ ಮಾತನಾಡುವ ಪ್ರಕಾಶ್ ರಾಜ್, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರದ ಕೆಲವು ನೀತಿಗಳ ವಿರುದ್ಧ ಹಲವಾರು ಬಾರಿ ಧ್ವನಿ ಎತ್ತಿದ್ದಾರೆ. ಇದರಿಂದ ಅವರ ಪ್ರತಿಯೊಂದು ಹೇಳಿಕೆಯೂ ರಾಜಕೀಯ ಚರ್ಚೆಗೆ ಕಾರಣವಾಗುತ್ತದೆ  “ಮಾರಿಕೊಂಡ ಮಾಧ್ಯಮ ”  ಹೇಳಿಕೆಯೂ ಅದಕ್ಕೆ ಹೊರತಾಗಿರಲಿಲ್ಲ.

    ಆಸಕ್ತಿಕರ ಸಂಗತಿಯೆಂದರೆ, ಈ ಒಂದು ಪದವೇ ದೇಶದಾದ್ಯಂತ ಮಾಧ್ಯಮಗಳ ಪಾತ್ರ, ಪತ್ರಿಕೋದ್ಯಮದ ಸ್ವಾತಂತ್ರ್ಯ ಮತ್ತು ಸುದ್ದಿಗಳ ನಿಷ್ಪಕ್ಷಪಾತತೆ ಬಗ್ಗೆ ದೊಡ್ಡ ಚರ್ಚೆಗೆ ನಾಂದಿ ಹಾಡಿತ್ತು. ಕೆಲವರಿಗೆ ಅದು ಕಠಿಣ ಸತ್ಯವಾಗಿ ಕಂಡರೆ, ಇನ್ನೂ ಕೆಲವರಿಗೆ ಅದು ಅತಿರೇಕದ ಆರೋಪವಾಗಿ ಕಾಣಿಸಿತು.

    . ಒಂದು ಹೇಳಿಕೆ ಹೇಗೆ ರಾಷ್ಟ್ರಮಟ್ಟದ ವಿವಾದವಾಗಿ ಬದಲಾಗಬಹುದು ಎಂಬುದಕ್ಕೆ ಇದು ಪ್ರಮುಖ ಉದಾಹರಣೆಯಾಗಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಆರು ಲಕ್ಷ ರೂ. ಶುಲ್ಕದ ಸಂಕಷ್ಟಕ್ಕೆ ಮಾನವೀಯ ಸ್ಪಂದನೆ: ವಿದ್ಯಾರ್ಥಿನಿಯ ಕನಸಿಗೆ ಸಚಿವ ಬಾಲಕೃಷ್ಣ ಬೆನ್ನೆಲುಬು
    ಸ್ವಂತ ತಂಗಿಯೊಂದಿಗೆ ಅಕ್ರಮ ಸಂಬಂಧ- ಕುಟುಂಬ ಹಾಗೂ ಸಮಾಜದಲ್ಲಿ ಆತಂಕ
    ಮುಗ್ಧ ಮಗು ಮೇಲೆ ನಡೆದ ಅಮಾನವೀಯ ಕ್ರೌರ್ಯ… ನ್ಯಾಯಕ್ಕಾಗಿ ಸಮಾಜದ ಒಕ್ಕೊರಲ ಹೋರಾಟ
    ಪಂಜಿಮೊಗರುವಿನಲ್ಲಿ ಹೆಂಡತಿಯ ಅಕ್ರಮ ಸಂಬಂಧಕ್ಕೆ, ಗಂಡ ಫಿನಿಶ್!
    ದುರಂತ ಸಂಭವಿಸುವ ಮುನ್ನ ಮೆಸ್ಕಾಂ ಎಚ್ಚೆತ್ತುಕೊಳ್ಳುವುದೇ? ಮಂಗಳೂರಿನ PVS ರಸ್ತೆಯಲ್ಲೇ ಮೆಸ್ಕಾಂ ಟ್ರಾನ್ಸ್‌ಫಾರ್ಮರ್ ಅಡಿಯಲ್ಲೇ ಸುತ್ತಲೂ ಒಣ ಕಸದ ಪ್ಲಾಸ್ಟಿಕ್ ಟಾರ್ಪಾಲಿನ್ ಮತ್ತು ಬಾಕ್ಸ್ ರಾಶಿ!
    ರೀಲ್ಸ್ ಮಾಡುವ ಕನಸು… ಕ್ಷಣದಲ್ಲೇ ದುರ್ಘಟನೆ,  ಜೀವವನ್ನೇ ಕಳೆದುಕೊಂಡ ಬಾಲಕ.
    ಮಹಿಳಾ ಟಿ20 ವಿಶ್ವಕಪ್‌ಗೂ ಮುನ್ನ ಭಾರತ-ಪಾಕ್ ಹೈಪ್ ನಡುವೆ ಮಂಧಾನಾ ಮಾತು ವೈರಲ್…
    ಹೊಸ ರಾಜಕೀಯ ಕ್ರಾಂತಿ! ಅಸ್ಸಾಂ ಕುದಿಯುತ್ತಿದೆ…ಹಿಂದುತ್ವ vs ಗುರುತು ರಾಜಕೀಯ…!
    ಕನ್ನಡ ಫಿಲಂ ಇಂಡಸ್ಟ್ರಿ ಮರ್ಯಾದೆ “ಒಂದು ಬಾಟ್ಲು ಸಾರಾಯಿ, ಒಂದು ಚಮಚ ಉಪ್ಪಿನ ಕಾಯಿಗೆ”ಆನ್‌ಲೈನ್‌ನಲ್ಲಿ (Online) ಹರಾಜು..!
    ಬೆಳ್ತಂಗಡಿ ಆನೆ ದಾಳಿ, ವ್ಯಕ್ತಿಯ ಬರ್ಬರ ಹತ್ಯೆ
    ರೇಪ್ ಆರೋಪಿಗೆ ಹೂಮಳೆ, ಹೂವಿನಹಾರ,ಘೋಷಣೆ, ರಾಜಕೀಯ ರೀತಿ ರೋಡ್ ಶೋ! ಉತ್ತರ ಪ್ರದೇಶದ ವೈರಲ್ ವಿಡಿಯೋಗೆ ದೇಶಾದ್ಯಂತ ಆಕ್ರೋಶ
    ಕೇವಲ ₹5 ಕ್ಕೆ ಸಿಗಲಿದೆ ಬಿಸಿಬಿಸಿ ಮೀನು-ಊಟ! ಮಹಿಳೆಯರ ಖಾತೆಗೆ ಪ್ರತಿ ತಿಂಗಳು ₹3,000 ಫಿಕ್ಸ್! ಎಲ್ಲಿ ಯಾರು ಕೊಡ್ತಾರೆ …
    ಕಾಮನ್‌ವೆಲ್ತ್‌ನಲ್ಲಿ ಹೊಸ ಇತಿಹಾಸ ಬರೆದ ಆಟಗಾರರು..ವಿಶ್ವದ ಮುಂದೆ ತ್ರಿವರ್ಣದ ಘರ್ಜನೆ!ತೇಜಸ್ವಿನ್ ಶಂಕರ್ ಟ್ರೆಂಡಿಂಗ್ ಹೀರೋ!
    ಮಾರ್ಚ್ 17 :ಮಂಗಳೂರಿನಲ್ಲಿ ವಿಶ್ವ ಗ್ರಾಹಕರ ದಿನಾಚರಣೆ-ಗ್ರಾಹಕರ ಹಕ್ಕುಗಳ ಜಾಗೃತಿ ಕಾರ್ಯಕ್ರಮ
    Side Income ಇಂದು ಆಯ್ಕೆ ಅಲ್ಲ, ಅಗತ್ಯ …ಹಣ ಗಳಿಸಿ… ನಿದ್ರೆಯಲ್ಲೂ!ಒಂದು ಸಂಬಳ ಸಾಕಾಗದ ಕಾಲ ಇದು.
    ಕುಂದಾಪುರ ಗಂಗೊಳ್ಳಿಯಲ್ಲಿ ಕತ್ತಿ  ದೊಣ್ಣೆಗಳಿಂದ ಮಾರಾಮಾರಿ; ವೈರಲ್ ವಿಡಿಯೋದಿಂದ ಪ್ರಕರಣಕ್ಕೆ ಹೊಸ ತಿರುವು?
    ನಾಸಿಕ್‌ನ Tata Consultancy Services ಕಚೇರಿಯಲ್ಲಿ ಗಂಭೀರ ಆರೋಪಗಳ ನಡುವೆ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ — ಸುರಕ್ಷತೆಗೆ ಮೊದಲ ಆದ್ಯತೆ.
    ಯಾರದ್ದೋ ಹಠ, ಮತ್ತ್ಯಾರದೋ ಚಟ, ಹೆತ್ತವರ ಜಗಳಕ್ಕೆ ಬಲಿಯಾಯ್ತು ಮಗುವಿನ ಬಾಲ್ಯ -ಭವಿಷ್ಯ!
    “ದಪ್ಪ, ಕಪ್ಪು ಎಂಬ ಅವಹೇಳನ… ವರದಕ್ಷಿಣೆ ಕಿರುಕುಳ… ಕೊನೆಗೆ ಕತ್ತು ಹಿಸುಕಿ ಹತ್ಯೆ! ಧಾರವಾಡದ ಘಟನೆ ಸಮಾಜದ ಮನಸ್ಸನ್ನೇ ನಡುಗಿಸಿದೆ”
    ಚಾಮನಗರದಲ್ಲೊಂದು ಅನಿಷ್ಠದ ಕ್ರೈಂ
    ದಕ್ಷಿಣ ಕನ್ನಡದ 14 ವರ್ಷದ ಎಲ್ಲ ಬಾಲಕಿಯರು ಉಚಿತ HPV ಲಸಿಕೆ ಹಾಕಿಸಿಕೊಳ್ಳಲು ಸಂಸದರ ಕರೆ
    ಚುನಾವಣೆಯವರೆಗೆ ಮೌನ, ನಂತರ LPG ದರ ಭಾರಿ ಏರಿಕೆ –ಇದು ರಾಜಕೀಯ ಅಜೆಂಡಾನಾ?
    ಜೆಡಿಎಸ್  ಜನರಲ್ ಸೆಕ್ರೆಟರಿಯಾಗಿ ಯೋಗೇಶ್ ಶೆಟ್ಟಿ ಜಪ್ಪು ಆಯ್ಕೆಯ ಲೆಕ್ಕಾಚಾರವೇನು?
    ಗುರುವಾಯನಕೆರೆ ಯ ಪ್ರತಿಷ್ಠಿತ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ
    ಮೋದಿ ಅವರ ನಿರ್ಧಾರಗಳು“ದೀರ್ಘಕಾಲೀನ ಅಭಿವೃದ್ಧಿಗೆ ಜವಾಬ್ದಾರಿಯುತ ನೀತಿಗಳು” ಆತಂಕದ ಸೂಚನೆ ಅಲ್ಲ-ಎಸ್.ಎಸ್. ನಾಯಕ್
    “ಟೀಕೆ ಮಾಡಿ, ತೇಜೋವಧೆ ಬೇಡ” – ಹೈಕೋರ್ಟ್‌ನಿಂದ ಗಿರೀಶ್ ಮಟ್ಟೆಣ್ಣನವರ್‌ಗೆ ಖಡಕ್ ಎಚ್ಚರಿಕೆ
    5.5 ವರ್ಷದ ಹೆಣ್ಣುಮಗಳ ಕೊಲೆ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್!ಮಗು ಸತ್ತು 3 ತಿಂಗಳು…ಆದ್ರೆ FIR ಇಲ್ಲ! 3 ಪೊಲೀಸರು ಸಸ್ಪೆಂಡ್
    ಅಮ್ಮಾ ಎದ್ದು ಬಾ… ಕಣ್ಣೀರಾಕಿ ಕರೆದರೂ, ಬರಲಾರದೇ ಒದ್ದಾಡಿದ ಅಮ್ಮ …ದುಬಾರೆ ಶಿಬಿರದಲ್ಲಿ ಮನಕಲುಕುವ ಘಟನೆ-ಆನೆಗಳ ಕಾದಾಟ… ಜೀವ ಕಳೆದುಕೊಂಡ ಮಹಿಳೆ
    ಟೂರಿಸಂ ಡೆವಲಪ್‌ಮೆಂಟ್‌ಗೆ ಅಧಿಕಾರಿಗಳೇ ಮಾರಕ
    “ಕಾಂತರಾ” ಖ್ಯಾತಿಯ ಸಪ್ತಮಿ ಗೌಡ, ದುಮುಕಿದ್ದು  ಹೋರಾಟದ ಅಂಗಳಕ್ಕೆ