📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಮುಂದಿನ ಕೆಲವು ದಿನ ಭಾರಿ ಗಾಳಿ ಮಳೆ ಗುಡುಗು -ಮಿಂಚಿನ ಎಚ್ಚರಿಕೆ 

ಬೆಂಗಳೂರು: ರಾಜ್ಯದಲ್ಲಿ ಪೂರ್ವ ಮುಂಗಾರು ಮಾರುತಗಳು ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ಮುಂದಿನ ಐದು ದಿನಗಳ ಕಾಲ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ, ಗುಡುಗು-ಮಿಂಚು ಹಾಗೂ ಬಿರುಗಾಳಿ ಸಂಭವಿಸುವ ಸಾಧ್ಯತೆಯಿದೆ ಎಂದು India Meteorological Department (IMD) ಎಚ್ಚರಿಕೆ ನೀಡಿದೆ. ಮೇ 25ರವರೆಗೆ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗುವ ಸಾಧ್ಯತೆಯಿಂದ ಕರಾವಳಿ ಭಾಗಗಳಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯಬಾರದೆಂದು ಸೂಚಿಸಲಾಗಿದೆ.

ಕರಾವಳಿಯಲ್ಲಿ ಸಮುದ್ರ ಅಲೆಗಳ ಅಬ್ಬರ

ಕಾರವಾರ , ಮಲ್ಪೆ ಹಾಗೂ ಮಂಗಳೂರು ಭಾಗಗಳಲ್ಲಿ ಸಮುದ್ರ ಅಲೆಗಳ ಎತ್ತರ ಹೆಚ್ಚಾಗಿದ್ದು, ಮೀನುಗಾರಿಕಾ ಚಟುವಟಿಕೆಗಳಿಗೆ ತಾತ್ಕಾಲಿಕ ತಡೆ ಸೂಚಿಸಲಾಗಿದೆ. ತಣ್ಣೀರುಬಾವಿ ಸಮುದ್ರದಲ್ಲಿ ಸಾರ್ವಜನಿಕರಿಗೂ ಆಟ ಆಡಲು ನಿನ್ನೆಯೇ ನೀರಿಗೆ ಇಳಿಯದಂತೆ  ಕಠಿಣ ಮುನ್ನೆಚ್ಚರಿಕೆಯನ್ನ ವಹಿಸಿದ್ದರಿಂದ ಬಂದವರು ನಿರಾಶರಾದರು.

ಮರಗಳು ಉರುಳಿ ವಾಹನಗಳಿಗೆ ಹಾನಿ. ರಸ್ತೆ ಜಲಾವೃತ – ಟ್ರಾಫಿಕ್ ಸಮಸ್ಯೆ

Bengaluru ನಗರದಲ್ಲಿ ಕಳೆದ ಎರಡು ದಿನಗಳಲ್ಲಿ ಬಿರುಗಾಳಿಯಿಂದ ಅನೇಕ ಮರಗಳು ಉರುಳಿದ್ದು, ಕೆಲವು ವಾಹನಗಳು ಜಖಂಗೊಂಡಿವೆ. ಕೆಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವೂ ಉಂಟಾಗಿದೆ.

ಬೆಂಗಳೂರು, ಮೈಸೂರು, ಹುಬ್ಬಳ್ಳಿ ಮತ್ತು ಮಂಗಳೂರಿನ ಕೆಲ ತಗ್ಗು ಪ್ರದೇಶಗಳಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದೆ. ಐಟಿ ಕಾರಿಡಾರ್ ಪ್ರದೇಶಗಳಲ್ಲಿ ಟ್ರಾಫಿಕ್ ನಿಧಾನಗೊಂಡಿದೆ.

ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕೆಲವೆಡೆ ಗಂಟೆಗೆ 50–60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ಆರೋಗ್ಯ ಇಲಾಖೆ ಸಲಹೆಗಳು

  • ಕಲುಷಿತ ನೀರು ಸೇವಿಸಬಾರದು
  • ಮಕ್ಕಳಿಗೆ ಜ್ವರ, ಶೀತ, ವೈರಲ್ ಸೋಂಕುಗಳ ಬಗ್ಗೆ ಜಾಗ್ರತೆ ವಹಿಸಬೇಕು
  • ನೀರು ನಿಂತ ಪ್ರದೇಶಗಳಲ್ಲಿ ಡೆಂಗ್ಯೂ, ಮಲೇರಿಯಾ ಹರಡುವ ಸಾಧ್ಯತೆ ಹೆಚ್ಚಿದೆ.

ಭಾರಿ ಮಳೆಯ ಸಾಧ್ಯತೆ ಇರುವ ಜಿಲ್ಲೆಗಳು

  • ದಕ್ಷಿಣ ಕನ್ನಡ,ಉಡುಪಿ,ಉತ್ತರ ಕನ್ನಡ,ಕೊಡಗು,ಶಿವಮೊಗ್ಗ,ಹಾಸನ,ಚಿಕ್ಕಮಗಳೂರು,ಬೆಂಗಳೂರು ನಗರ ಮತ್ತು ಗ್ರಾಮಾಂತರ,ತುಮಕೂರು,ರಾಯಚೂರು,ಕಲಬುರಗಿ ಮತ್ತು ಬೀದರ್.

ಜನರಿಗೆ ಎಚ್ಚರಿಕೆ ಸೂಚನೆಗಳು

  • ಮಿಂಚು-ಗುಡುಗು ಸಮಯದಲ್ಲಿ ಮರಗಳ ಕೆಳಗೆ ನಿಲ್ಲಬಾರದು
  • ಹಳೆಯ ಮನೆಗಳು ಮತ್ತು ಮಣ್ಣಿನ ಚಾವಣಿಯ ಕಟ್ಟಡಗಳಿಂದ ದೂರ ಇರಬೇಕು
  • ನದಿ, ಹಳ್ಳ, ಕೆರೆಗಳ ಬಳಿ ಹೋಗುವುದನ್ನು ತಪ್ಪಿಸಬೇಕು
  • ರೈತರು ಬೆಳೆ ರಕ್ಷಣೆಗೆ ಮುನ್ನೆಚ್ಚರಿಕೆ ವಹಿಸಬೇಕು
  • ಮೀನುಗಾರರು ಸಮುದ್ರ ಪ್ರವೇಶ ಮಾಡಬಾರದು

ಮಳೆಯಿಂದ ಸಂಭವಿಸಿದ ಸಾವುಗಳು ಮತ್ತು ಘಟನೆಗಳು

ವಿಜಯಪುರದಲ್ಲಿ ಮನೆ ಚಾವಣಿ ಕುಸಿದು ಮಹಿಳೆ ಸಾವು

Vijayapura ಜಿಲ್ಲೆಯ ನಿಡಗುಂದಿಯಲ್ಲಿ ಹಳೆಯ ಮನೆಯ ಮಣ್ಣಿನ ಚಾವಣಿ ಕುಸಿದು ಮಹಾದೇವಿ ಶಿವಾನಂದ ವಾರದ (56) ಮೃತಪಟ್ಟಿದ್ದಾರೆ. ನಿರಂತರ ಮಳೆಯಿಂದ ಮನೆ ತೇವಗೊಂಡಿದ್ದು, ನಸುಕಿನಲ್ಲಿ ಚಾವಣಿ ಕುಸಿದಿದೆ.

ರೈತರಿಗೆ ಮಹತ್ವದ ಮಾಹಿತಿ

ಹೆಚ್ಚಿನ ಮಳೆಯಿಂದ ಬೆಳೆ ಹಾನಿಯಾಗುವ ಸಾಧ್ಯತೆ ಇರುವುದರಿಂದ:

  • ಬೆಳೆ ಹೊಲಗಳಲ್ಲಿ ನೀರು ನಿಲ್ಲದಂತೆ ಕಾಲುವೆ ವ್ಯವಸ್ಥೆ ಮಾಡಬೇಕು
  • ಕೊಯ್ಲಿಗೆ ಸಿದ್ಧ ಬೆಳೆಗಳನ್ನು ಸುರಕ್ಷಿತ ಸ್ಥಳಕ್ಕೆ ಸಾಗಿಸಬೇಕು
  • ಪಶುಗಳಿಗೆ ಒಣ ಆಶ್ರಯ ವ್ಯವಸ್ಥೆ ಮಾಡಬೇಕು

ಮುಂದಿನ 48 ಗಂಟೆಗಳ ಸ್ಥಿತಿ

ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಸಂಜೆ ಮತ್ತು ರಾತ್ರಿ ವೇಳೆಯಲ್ಲಿ ಸಾಧಾರಣದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ ಸುಮಾರು 33°C ಹಾಗೂ ಕನಿಷ್ಠ 22°C ಇರಬಹುದು.

ತುರ್ತು ಸಹಾಯವಾಣಿ

  • ರಾಜ್ಯ ವಿಪತ್ತು ನಿರ್ವಹಣಾ ಸಹಾಯವಾಣಿ: 1070
  • ಜಿಲ್ಲಾ ತುರ್ತು ಸೇವೆ: 1077
  • ವಿದ್ಯುತ್ ತುರ್ತು ಸೇವೆ: 1912

##KarnatakaRain #RainAlert #BengaluruRains #MonsoonUpdate #IMDAlert #BreakingNews

COMMENTS

Login with Gmail to comment

ಇನ್ನಷ್ಟು ಸುದ್ದಿ

ಕರ್ನಾಟಕ ಸೇರಿ 16 ರಾಜ್ಯಗಳಲ್ಲಿ SIR ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಅಳಿಸಬಹುದಾ? ಈಗಲೇ ಎಚ್ಚರ!
ಕೇವಲ “Aunty” ಅಂತ ಅಂದಿದಕ್ಕೆ 2 ಲಕ್ಷ ದಂಡ…!
ಅಹಿಂಸೆ, ಸತ್ಯ ಮತ್ತು ತ್ಯಾಗದ ಮಾರ್ಗವೇ ಮಹಾವೀರರ ದರ್ಶನ — ಇದೇ ಸುಖಿ ಜೀವನದ ಗುಟ್ಟು.
ಹೊಸ ರಾಜಕೀಯ ಕ್ರಾಂತಿ! ಅಸ್ಸಾಂ ಕುದಿಯುತ್ತಿದೆ…ಹಿಂದುತ್ವ vs ಗುರುತು ರಾಜಕೀಯ…!
ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ಎರಡು ಬಣಗಳ ರಣರಂಗ!ಮಾತಿನ ಚಕಮಕಿ ಹೊಡೆದಾಟಕ್ಕೆ ತಿರುಗಿದ ಕ್ಷಣ…
ಚುನಾವಣೆ ಗೆಲ್ಲುವುದು ಸಾಕಿನ್ನು, ರಾಷ್ಟ್ರದ ಸಣ್ಣ ಮತ್ತು ಮಧ್ಯಮ ವ್ಯವಹಾರ ಸ್ಥರ ಹಿತ ಕಾಪಾಡಿ
ಮುಂಬೈ ಬೀದಿಯಲ್ಲಿ ನಾರಿ ಶಕ್ತಿಯ ಸಿಡಿಲು!ಜನರ ಬದುಕು ಅಡ್ಡಗಟ್ಟಿದರೆ ಎದುರಿಸುವವರು ಹೀಗೆ ಒಬ್ಬೊಬ್ಬರೇ ಇನ್ನೂ ಹುಟ್ಟುತ್ತಾರೆ..
ತಸ್ಲಿಮಳ ಹಣೆಗೆ ಸಿಂಧೂರವಿಟ್ಟ ಕೇಶವ, ಬುರ್ಖಾ ತೆಗೆದಿಟ್ಟ ತಸ್ಲೀಮಾ
ಮಾಜಿ ಸಚಿವರಿಂದ ಮಂಗಳೂರು ವೈಭವಕ್ಕೆ ಬೃಹತ್ ಕೊಡುಗೆ
ಸಂಸತ್ತಿನಲ್ಲಿ ಇತಿಹಾಸ ಸೃಷ್ಟಿಸುವ ಚರ್ಚೆ-ಮಹಿಳಾ ಮೀಸಲು ಬಿಲ್ಲಿನ ಸುತ್ತ ಕಂಗೊಳಿಸಿದ ಸಂಸತ್ !
ಏರ್ ಇಂಡಿಯಾದಿಂದ ದೈನಂದಿನ ವಿಮಾನ ಹಾರಾಟದ ಬಗ್ಗೆ ನೂತನ ಪ್ರಕಟಣೆ
ಬ್ರಹ್ಮಾವರ, ಮಂದಾರ್ತಿ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಹೇಳೋರು ಕೇಳೋರು ಯಾರು ಇಲ್ವಾ?
“ವಾಟ್ಸಾಪ್ university ” (ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ತಪ್ಪು/ಅಪೂರ್ಣ ಮಾಹಿತಿ)ಕುರಿತು ಸುಪ್ರೀಂ ಕೋರ್ಟ್ ಖಡಕ್ ನಿಲುವು…!
ಮಂಗಳೂರು ಬೆಂಗಳೂರು ಮಧ್ಯೆ ಇನ್ನು ತಡರಾತ್ರಿಯೂ ವಿಮಾನ ಯಾನ
ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣಕ್ಕೆ ಅಂತಿಮ ತೀರ್ಪು – ಶಾರೀಕ್ ಗೆ 10 ವರ್ಷ ಜೈಲು..
KSRTC ಬಸ್ ಪಲ್ಟಿಯಾಗಿ ಕಂದಕಕ್ಕೆ — ಐವರು ದುರ್ಮರಣ, ಹಲವರಿಗೆ ಗಂಭೀರ ಗಾಯ-ಜಹೀರಾಬಾದ್ ಸಮೀಪ ಭೀಕರ ರಸ್ತೆ ಅಪಘಾತ
“ವಾಹನ ಮಾರಾಟ-RC ಬದಲಾವಣೆ  ಅಗತ್ಯ.. ಇಲ್ಲವಾದರೆ ಕಾನೂನು ಸಮಸ್ಯೆಗಳು ತಪ್ಪಿದ್ದಲ್ಲ..!” ಹೈಕೋರ್ಟ್
ಫ್ರಿಡ್ಜ್ ರಿಪೇರಿಗೆ ಬಂದವ ಮನೆ ಲೂಟಿ ಪರಾರಿ…!ಬಿ ಅಲರ್ಟ್ ‼️
🔴 ಯುದ್ಧದ ಹೊತ್ತಿನಲ್ಲಿ ಮಾನವೀಯ ರಾಜತಾಂತ್ರಿಕತೆ: ಇರಾನ್‌ಗೆ ಭಾರತದಿಂದ ಮೊದಲ ವೈದ್ಯಕೀಯ ನೆರವು:
ಅಮಾವಾಸ್ಯೆ ಬೈಲ್ ಪೊಲೀಸ್ ಠಾಣೆಯಲ್ಲಿ ಜೀವ ಬೆದರಿಕೆ ಹಾಗೂ ನಿಂದನೆಯ ಪ್ರಕರಣ ದಾಖಲು
“ಮಂಜಿನ ನಡುವೆ ಕ್ಷಣಾರ್ಧದಲ್ಲಿ ಮಾಯವಾದ ಮಗಳು”ಶ್ರೀನಂದಾ ಶವವಾಗಿ ಪತ್ತೆ…!
ಹೊಟ್ಟೆಪಾಡಿಗಾಗಿ ಬಂದ ಕಾರ್ಮಿಕನ ಜೀವ ರೋಡ್ ರೋಲರ್ ಹರಿದು ರಸ್ತೆಯಲ್ಲೇ ಅಂತ್ಯ…
ಸ್ಕ್ಯಾಮರ್‌ಗೆ 60 ಸೆಕೆಂಡ್ ಸಾಕು… RBIಗೆ ಈಗ 60 ನಿಮಿಷ ಬೇಕಂತೆ!ಹಣ ಕಳಿಸುವ ಮುನ್ನ ಯೋಚಿಸಲು 1 ಗಂಟೆ!
ವಿಶ್ವದ ನಂಬರ್ ವನ್ ಜನನಾಯಕನಾದ ಪ್ರಧಾನಿ ಮೋದಿ
ರಸ್ತೆಯ ವಿಚಾರಕ್ಕೆ ನೆರೆಹೊರೆಯರ ನಡುವೆ ಬಾರಿ ಗಲಾಟೆ !
ನೀರು ಪೋಲು ಬೇಡ….ಈಗಲೇ ಎಚ್ಚೆತ್ತುಕೊಳ್ಳಿ!ಇಂದು ನಿರ್ಲಕ್ಷ್ಯ,ನಾಳೆ ಜಲ ಸಂಕಷ್ಟದ ಎಚ್ಚರಿಕೆ…!
ಮಂಗಳೂರು ಶಾಕ್ ! ನೇತ್ರಾವತಿ ತೀರದ ನದಿಯಲ್ಲಿ ತೇಲಿ ಬಂದ ರಾಶಿ ರಾಶಿ ಆಧಾರ್ ಕಾರ್ಡ್‌ಗಳು !!!ಹೊಣೆ ಯಾರು?
ಹಳಿಯಾಳದಲ್ಲಿ ನೀರಿನ ಹಾಹಾಕಾರ… ಮಾರ್ಚ್ 16ರಂದು ಬೃಹತ್ ಪ್ರತಿಭಟನೆ 
ಅಮೇರಿಕಾ ಅಧ್ಯಕ್ಷರ ಮೇಲೆ ಎರಡನೆಯ ಬಾರಿ ಗುಂಡಿನ ದಾಳಿ
ಒಂದು ದಿನ ಕೈದಿ ಆಗ್ಬೇಕಾ? ಜೈಲು ಜೀವನ ಹೇಗಿರುತ್ತೆ ಅನ್ನೋ ಕುತೂಹಲಕ್ಕೀಗ ಚಂಚಲ್‌ಗುಡ ಜೈಲು ಬಾಗಿಲು ಈಗ ಸಾರ್ವಜನಿಕರಿಗೆ ಓಪನ್!