📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಮುಖವಾಡ ಧರಿಸಿದವರನ್ನು ನಂಬುವ ಮುನ್ನ ನೂರು ಬಾರಿ ಯೋಚಿಸಿ…!

    ಲೋಹಗಢ ಕೋಟೆ ನಡುಕ: ಪ್ರೀತಿ ಹೆಸರಲ್ಲಿ ಭಾವಿ ಪತಿಯನ್ನೇ 400 ಅಡಿ ಪ್ರಪಾತಕ್ಕೆ ತಳ್ಳಿದ ಕ್ರೂರ ಕಥೆ!ಪ್ರಕೃತಿಯ ಸೌಂದರ್ಯ ನೋಡಲು ಹೋದವನು ಮನುಷ್ಯನ ವಿಕೃತ ಮನಸ್ಸಿಗೆ ಬಲಿಯಾದ!

    ನಂಬಿಕೆ ಅನ್ನೋದು ಪ್ರತಿಯೊಂದು ಸಂಬಂಧದ ಜೀವಾಳ. ಅದರಲ್ಲೂ ಮದುವೆಯಾಗಲಿರುವ ಹೆಣ್ಣು ತನ್ನ ಬಾಳ ಸಂಗಾತಿಯನ್ನು ಕಣ್ಣಿನ ರೆಪ್ಪೆಯಂತೆ ಕಾಯುತ್ತಾಳೆ ಎಂಬ ನಂಬಿಕೆ ಎಲ್ಲರಲ್ಲಿದೆ. ಆದರೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಈ ಘಟನೆ ಇಡೀ ಸಮಾಜ ತಲೆತಗ್ಗಿಸುವಂತೆ ಮಾಡಿದೆ. ಹಸೆಮಣೆ ಏರಬೇಕಾಗಿದ್ದ ಕೋಟ್ಯಧಿಪತಿ ಉದ್ಯಮಿ, 26 ವರ್ಷದ ಕೇತನ್ ವಿಶಾಲ್ ಅಗರ್ವಾಲ್ ಎಂಬ ಯುವಕನನ್ನು ಆತನ ಭಾವಿ ಪತ್ನಿಯೇ ಪ್ರಿಯಕರನೊಂದಿಗೆ ಸೇರಿ ಲೋಹಗಢ ಕೋಟೆಯ ೪೦೦ ಅಡಿ ಆಳದ ಪ್ರಪಾತಕ್ಕೆ ತಳ್ಳಿ ಕೊಲೆ ಮಾಡಿರುವ ಘಟನೆ ಈಗ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ.

    17 ಕೋಟಿಯ ಭವ್ಯ ಮದುವೆ ಕನಸು: ದುರಂತ ಅಂತ್ಯದ ಹಿನ್ನೆಲೆ

    ಪುಣೆಯ ಪಿಂಪ್ರಿ-ಚಿಂಚವಾಡದ ಪ್ರಸಿದ್ಧ ರಿಯಲ್ ಎಸ್ಟೇಟ್ ಉದ್ಯಮಿ ವಿಶಾಲ್ ಅಗರ್ವಾಲ್ ಅವರ ಪುತ್ರ ಕೇತನ್, ವಿದೇಶದಲ್ಲಿ ಉನ್ನತ ಶಿಕ್ಷಣ ಮುಗಿಸಿ ತಂದೆಯ ವ್ಯವಹಾರ ಕೈಗೆತ್ತಿಕೊಂಡಿದ್ದರು. ಇವರಿಗೂ ಮತ್ತು ೨೦ ವರ್ಷದ ಸಿಯಾ ಗೋಯಲ್ ಎಂಬ ಯುವತಿಗೂ ಪೋಷಕರು ನಿಶ್ಚಿತಾರ್ಥ ಮಾಡಿಸಿದ್ದರು. ಬರುವ ನವೆಂಬರ್‌ನಲ್ಲಿ ರಾಜಸ್ಥಾನದ ಜೈಪುರದಲ್ಲಿ ಸುಮಾರು ೧೭ ಕೋಟಿ ರೂಪಾಯಿ ವೆಚ್ಚದಲ್ಲಿ ಅದ್ದೂರಿ ಅರಮನೆ ವಿವಾಹಕ್ಕೆ ಸಿದ್ಧತೆ ನಡೆದಿತ್ತು. ಅತಿಥಿಗಳನ್ನು ಕರೆತರಲು ಎರಡು ಖಾಸಗಿ ವಿಮಾನಗಳನ್ನೂ ಬುಕ್ ಮಾಡಲಾಗಿತ್ತು.

    ಆದರೆ, ಹೊರನೋಟಕ್ಕೆ ಅದ್ಧೂರಿಯಾಗಿ ಕಾಣುತ್ತಿದ್ದ ಈ ಸಂಬಂಧದ ಹಿಂದೆ ಒಂದು ಭೀಕರ ಕರಾಳ ಸಂಚು ಅಡಗಿತ್ತು. ಸಿಯಾಗೆ ಚೇತನ್ ಬಾಬುಲಾಲ್ ಚೌಧರಿ (22) ಎಂಬ ಪ್ರಿಯಕರನಿದ್ದನು ಮತ್ತು ಆಕೆಗೆ ಈ ಅರೇಂಜ್ಡ್ ಮ್ಯಾರೇಜ್ ಇಷ್ಟವಿರಲಿಲ್ಲ.

    ಜನ್ಮದಿನದ ನೆಪದಲ್ಲಿ ಮಸಣಕ್ಕೆ ಕರೆದೊಯ್ದ ಹೆಣ್ಣು!

    ಜೂನ್ ೧೮ ರಂದು ಸಿಯಾಳ ಹುಟ್ಟುಹಬ್ಬವಿತ್ತು. ಭಾವಿ ಪತ್ನಿಯ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಲು ಕೇತನ್ ತಿಂಗಳಿನಿಂದ ಭರಪೂರ ಸಿದ್ಧತೆ ಮಾಡಿಕೊಂಡಿದ್ದರು. ಸ್ನೇಹಿತರೊಂದಿಗೆ ಲೋನಾವಾಲಾ ಸಮೀಪದ ಲೋಹಗಢ ಕೋಟೆಗೆ ಟ್ರೆಕ್ಕಿಂಗ್ ಹೋಗಲು ಪ್ಲಾನ್ ಮಾಡಲಾಗಿತ್ತು. ಕೇತನ್ ಪ್ರೀತಿಯಿಂದ ಬಂದಿದ್ದರೆ, ಸಿಯಾ ಮಾತ್ರ ತನ್ನ ಪ್ರಿಯಕರ ಚೇತನ್‌ನೊಂದಿಗೆ ಸೇರಿ ಕೇತನ್‌ನನ್ನು ಮುಗಿಸಲು ಮೊದಲೇ ಸ್ಕೆಚ್ ಹಾಕಿದ್ದಳು.

    ಕೋಟೆಯ ತುದಿಯಲ್ಲಿ ಕೇತನ್ ಫೋಟೋಗೆ ಪೋಸ್ ನೀಡುತ್ತಿದ್ದಾಗ, ಸಿಯಾ ಮತ್ತು ಆಕೆಯ ಪ್ರಿಯಕರ ಸೇರಿ ಆತನನ್ನು ೪೦೦ ಅಡಿ ಆಳದ ಕಂದಕಕ್ಕೆ ತಳ್ಳಿದ್ದಾರೆ. ಆರಂಭದಲ್ಲಿ, “ಕೇತನ್ ಫೋಟೋ ತೆಗೆದುಕೊಳ್ಳುವಾಗ ಕಾಲು ಜಾರಿ ಬಿದ್ದರು” ಎಂದು ಸಿಯಾ ಎಲ್ಲರನ್ನೂ ನಂಬಿಸಿ ನಾಟಕವಾಡಿದ್ದಳು. ಮೂರು ಗಂಟೆಗಳ ಕಷ್ಟದ ಕಾರ್ಯಾಚರಣೆಯ ನಂತರ ಕೇತನ್ ಶವ ಪತ್ತೆಯಾಗಿತ್ತು.

    ಪೊಲೀಸರ ತನಿಖೆ ಮತ್ತು ಕರಾಳ ಸತ್ಯದ ಅನಾವರಣ

    ಮೊದಲಿಗೆ ಇದು ಆಕಸ್ಮಿಕ ಅಪಘಾತ ಎಂದೇ ಭಾವಿಸಲಾಗಿತ್ತು. ಆದರೆ ಕೇತನ್ ತಂದೆ ವಿಶಾಲ್ ಅಗರ್ವಾಲ್ ಅವರಿಗೆ ಸಂಶಯ ಬಂದು ದೂರು ನೀಡಿದಾಗ, ಗ್ರಾಮಾಂತರ ಪೊಲೀಸರು ತನಿಖೆ ತೀವ್ರಗೊಳಿಸಿದರು.

    • ಮೊಬೈಲ್ ಮತ್ತು ಸೋಶಿಯಲ್ ಮೀಡಿಯಾ ದಾಖಲೆ: ಸಿಯಾ ಮತ್ತು ಚೇತನ್ ನಡುವಿನ ಚಾಟ್‌ಗಳು ಹಾಗೂ ಕರೆಗಳ ವಿವರಗಳನ್ನು ಪರಿಶೀಲಿಸಿದಾಗ ಪೊಲೀಸರಿಗೆ ಭಾರಿ ಇನ್ಫರ್ಮೇಷನ್ ಸಿಕ್ಕಿತು.
    • ವಿಚಾರಣೆಯಲ್ಲಿ ತಪ್ಪೊಪ್ಪಿಗೆ: ಪೊಲೀಸರು ತೀವ್ರವಾಗಿ ವಿಚಾರಣೆ ನಡೆಸಿದಾಗ ಸಿಯಾ ಮತ್ತು ಚೇತನ್ ಇಬ್ಬರೂ ತಮ್ಮ ತಪ್ಪು ಒಪ್ಪಿಕೊಂಡಿದ್ದಾರೆ.
    • ಮೊದಲೇ ನಡೆದಿತ್ತು ಕೊಲೆ ಯತ್ನ: ಜೂನ್ ೧೮ರ ಮುನ್ನ, ಅಂದರೆ ಜೂನ್ ೧೪ರಂದೂ ಇದೇ ಕೋಟೆಯ ತುದಿಯಿಂದ ಕೇತನ್‌ನನ್ನು ಸಿಯಾ ತಳ್ಳಿದ್ದಳು! ಆದರೆ ಅದೃಷ್ಟವಶಾತ್ ಕೇತನ್ ಮರವೊಂದನ್ನು ಹಿಡಿದು ಬದುಕುಳಿದಿದ್ದರು. ಆಗ ಸಿಯಾ, “ಅಲ್ಲಿ ಹಾವು ಇತ್ತು, ನಿನ್ನನ್ನು ಕಾಪಾಡಲು ತಳ್ಳಿದೆ” ಎಂದು ಸುಳ್ಳು ಹೇಳಿ ನಂಬಿಸಿದ್ದಳು ಎಂಬ ಆಘಾತಕಾರಿ ಸತ್ಯ ಈಗ ಹೊರಬಿದ್ದಿದೆ. ಪ್ರಸ್ತುತ ಪೊಲೀಸರು ಸಿಯಾ ಮತ್ತು ಆಕೆಯ ಪ್ರಿಯಕರನನ್ನು ಬಂಧಿಸಿದ್ದಾರೆ.

    ಎತ್ತ ಸಾಗುತ್ತಿದೆ…. ಮಾನವೀಯತೆ? ತಾಳ್ಮೆ? ನಂಬಿಕೆ?ಪ್ರೀತಿ?ವಿಶ್ವಾಸ? ಅಂದ್ರೇನು ಅನ್ನುವಷ್ಟುರ ಮಟ್ಟಿಗೆ…?

    ಹೆಣ್ಣನ್ನು ಸೃಷ್ಟಿಕರ್ತ ಪ್ರೀತಿ, ಕರುಣೆ, ಕ್ಷಮಾದಾತ್ರಿ ಮತ್ತು ತಾಳ್ಮೆಯ ಮೂರ್ತಿಯಾಗಿ ಸೃಷ್ಟಿಸಿದ್ದಾನೆ. ತಾಯಿ ಹೃದಯದ ಹೆಣ್ಣು ಇಷ್ಟೊಂದು ಕ್ರೂರಿಯಾಗಲು ಹೇಗೆ ಸಾಧ್ಯ? ಎಂಬ ಪ್ರಶ್ನೆ ಇಂದು ಪ್ರತಿಯೊಬ್ಬರನ್ನೂ ಕಾಡುತ್ತಿದೆ.

    ನಿಜ, ಯಾವುದೇ ಒಬ್ಬ ಹೆಣ್ಣು ಇಂತಹ ಕ್ರೂರ ನಿರ್ಧಾರಕ್ಕೆ ಸುಲಭವಾಗಿ ಬರುವುದಿಲ್ಲ. ಆದರೆ ಇಂದಿನ ದಿನಗಳಲ್ಲಿ ಪ್ರೀತಿ, ಸಂಬಂಧಗಳಿಗಿಂತ ಸ್ವಾರ್ಥ ಮತ್ತು ಅತಿಯಾದ ಆವೇಶವೇ ಮೇಲುಗೈ ಸಾಧಿಸುತ್ತಿದೆ. ಈ ಮದುವೆ ಸಿಯಾಗೆ ಇಷ್ಟವಿರಲಿಲ್ಲ ಎಂದಾದರೆ, ಆಕೆ ಮನೆಯವರನ್ನು ಒಪ್ಪಿಸಬಹುದಿತ್ತು, ನಿರಾಕರಿಸಬಹುದಿತ್ತು, ಅಥವಾ ಕೇತನ್ ಬಳಿಯೇ ನೇರವಾಗಿ ಹೇಳಿ ಸಂಬಂಧದಿಂದ ದೂರ ಸರಿಯಬಹುದಿತ್ತು. ಇಷ್ಟೆಲ್ಲಾ ದಾರಿಗಳಿದ್ದರೂ, ಒಂದು ಜೀವವನ್ನು ಅತ್ಯಂತ ಕ್ರೂರವಾಗಿ ಕೊಲ್ಲುವ ಹಾದಿ ಹಿಡಿದಿದ್ದು ಅಕ್ಷಮ್ಯ ಅಪರಾಧ.

    ಇದೇ ರೀತಿ ಇತ್ತೀಚೆಗೆ ಪಂಜಾಬ್‌ನ ಮೊಹಾಲಿಯಲ್ಲೂ ಕಚೇರಿಯಲ್ಲೇ ಎಲ್ಲರ ಎದುರೇ ಪ್ರೀತಿಯ ವೈಫಲ್ಯಕ್ಕಾಗಿ ಸಹೋದ್ಯೋಗಿಯನ್ನು ಕೊಲೆ ಮಾಡಿದ ಘಟನೆ ನಡೆದಿತ್ತು. ಅಲ್ಲಿ ಸ್ನೇಹಿತರಿದ್ದರೂ, ಇಲ್ಲಿ ಜೊತೆಗೆ ಆಪ್ತರಿದ್ದರೂ ಇಂತಹ ಘಟನೆಗಳು ನಡೆಯುತ್ತಿರುವುದು ನೋಡಿದರೆ “ಮಾನವೀಯತೆ ಎಲ್ಲಿದೆ? ಸಮಾಜ ಎತ್ತ ಸಾಗುತ್ತಿದೆ?” ಎಂಬ ಆತಂಕ ಮೂಡುತ್ತದೆ. ಸಂಬಂಧಗಳಲ್ಲಿ ಬಿರುಕು ಬಂದಾಗ ಅಥವಾ ಇಷ್ಟವಿಲ್ಲದಿದ್ದಾಗ ದೂರ ಸರಿಯುವ ತಾಳ್ಮೆ ಇರಬೇಕೇ ಹೊರತು, ಮತ್ತೊಬ್ಬರ ಬದುಕನ್ನು ಕಸಿಯುವ ಹಕ್ಕು ಯಾರಿಗೂ ಇಲ್ಲ. ಈ ಘಟನೆ ಇಡೀ ಯುವ ಪೀಳಿಗೆಗೆ ಮತ್ತು ಸಮಾಜಕ್ಕೆ ಒಂದು ಕಹಿ ಎಚ್ಚರಿಕೆಯಾಗಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಮಂಗಳೂರು, ಮೈಸೂರಿಗೂ ‘Amazon Now’ 2,800 ಕೋಟಿ ಹೂಡಿಕೆ-
    ಕೌಶಾಂಬಿಯಲ್ಲಿ ಭೀಕರ LPG ಟ್ಯಾಂಕರ್ ದುರಂತ: ಸಿಸಿಟಿವಿಯಲ್ಲಿ ಸೆರೆಯಾದ ಜೀವಭಯದ ಕ್ಷಣಗಳು – ಮೃತರ ಸಂಖ್ಯೆ 4ಕ್ಕೆ ಏರಿಕೆ
    ಕರ್ನಾಟಕದಲ್ಲಿ 2,222 KEO AI, PCಗಳ ಲೋಕಾರ್ಪಣೆ
    50ಕ್ಕೂ ಹೆಚ್ಚು ಆಟೋ ಚಾಲಕರ ದಿನನಿತ್ಯದ ಆರೋಗ್ಯದ ಬದುಕಿಗೆ ಮುಳುವಾದ ದೇರಳಕಟ್ಟೆ ಜಂಕ್ಷನ್ ದುರ್ನಾತ! 
    ಎಲಾನ್ ಮಸ್ಕ್: ವಿಶ್ವದ ಮೊದಲ ಟ್ರಿಲಿಯನೇರ್‌ನಿಂದ ಇನ್ನೂ ಎತ್ತರದತ್ತ!
    ಮೂಡಬಿದ್ರೆ ಪೊಲೀಸ್ ಅಧಿಕಾರಿಯ ಮಾನ ಹರಾಜಿಗೆ ನಿಂತವರು ಯಾರು?
     ಆಸ್ಪತ್ರೆಯಲ್ಲಿ ಡಾಕ್ಟರ್ “mistakeಎಡವಟ್”…ಅಚ್ಚರಿಯೂ ಮೀರಿದ ಆಘಾತ!
    ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ಮಲ್ಪೆ ಬಂದರಿನಲ್ಲಿ ಮೀನುಗಾರ ಕಾರ್ಮಿಕನ ಬರ್ಬರ ಹತ್ಯೆ: ಗಲಾಟೆ ವಿಕೋಪಕ್ಕೆ ತಿರುಗಿ ಚೂರಿ ಇರಿತ…!
    ಮಕ್ಕಳಿಲ್ಲದ ನೋವನ್ನು ಮರಗಳ ಪ್ರೀತಿಯಾಗಿ ಬದಲಿಸಿ ಬರಡು ಭೂಮಿಯನ್ನು ಹಸಿರು ಕಾಡಾಗಿಸಿದ ದಂಪತಿಗಳ ಅದ್ಭುತ ಜೀವನಗಾಥೆ
    ಡಾನ್ -3 ಸಿನಿಮಾ ಕಥೆ ಗೋವಿಂದ….!
    ಬಂಗಾಳ ಚುನಾವಣೆ ಫಲಿತಾಂಶವೇ ಬದಲಾಗಿತ್ತಾ?ಬಂಗಾಳ ರಾಜಕೀಯದಲ್ಲಿ ಹೊಸ ಬಾಂಬ್!ಸುಪ್ರೀಂ ಕೋರ್ಟ್ ಮುಂದೆ ಬಿಜೆಪಿ ಜಯದ ಮೇಲೆ ಟಿಎಂಸಿ ದೊಡ್ಡ ಪ್ರಶ್ನೆ!
    *ಬೈಕಂಪಾಡಿ ಹೆದ್ದಾರಿ ಡಕಾಯಿತಿ, 23 ಲಕ್ಷ ಮೌಲ್ಯದ ಸೊತ್ತು ದರೋಡೆ ಪ್ರಕರಣ: 3 ಆರೋಪಿಗಳು ಸೆರೆ.
    ವಿಶ್ವಕಪ್‌ನಲ್ಲಿ ಪಾಕಿಸ್ತಾನವನ್ನು ಪುಡಿಗೈದ ಭಾರತದ ವನಿತೆಯರು !ಆರಂಭವೇ ವಿಜಯದ ಘರ್ಜನೆ!
    ಸುರತ್ಕಲ್ ಹುಡುಗಿ ವಿಚಾರದಲ್ಲಿ ಹಲ್ಲೆ
    ನಾಲ್ಕು ಮಕ್ಕಳನ್ನು ಹೆತ್ತ ಮಹಾತಾಯಿ, ಸದ್ಯಕ್ಕೆ ತಾಯಿ ಮಕ್ಕಳು ಸೇಫ್
    ‘ಮೇಕ್ ಇನ್ ಇಂಡಿಯಾ’ಗೆ ಮತ್ತೊಂದು ದೊಡ್ಡ ಗೆಲುವು: C295 ವಿಮಾನದ ಮೊದಲ ಯಶಸ್ವಿ ಪರೀಕ್ಷಾ ಹಾರಾಟ
    ಡೆಲಿವರಿ ಬಾಯ್ ಗೆ “₹500 ಟಿಪ್… !” video viral ಅಸಲಿ ಕಥೆ ಏನು..!?
    ಮಂಗಳೂರುಗೆ ಹೈಕೋರ್ಟ್ ಸರ್ಕ್ಯೂಟ್ ಬೆಂಚ್: ಕರಾವಳಿಗೆ ಐತಿಹಾಸಿಕ ನ್ಯಾಯಾಂಗ ಶಕ್ತಿ ನೀಡುವ ಮಹತ್ವದ ಹೆಜ್ಜೆ..
    ‘ಗಾರ್ಡನ್ ಸಿಟಿ’ ಈಗ ‘ಹಾಟ್ ಸಿಟಿ’!ದಾಖಲೆ ಮಟ್ಟಕ್ಕೆ ಏರಿದ ಬಿಸಿ…
    ಚಾಮನಗರದಲ್ಲೊಂದು ಅನಿಷ್ಠದ ಕ್ರೈಂ
    ಕಾರ್ಕಳ ಮಹಾಮಸ್ತಕಾಭಿಷೇಕಕ್ಕೆ ₹1.59 ಕೋಟಿ ಅನುದಾನ: ಮೊದಲ ಕಂತು ಬಿಡುಗಡೆ…
    ಜಾಗತಿಕ ಸಂಘರ್ಷದ ಮಧ್ಯೆ ಭಾರತ–ಯುಎಇ ಬಿಗ್ ಡೀಲ್! ತಂತ್ರಜ್ಞಾನ, ಇಂಧನ ಮತ್ತು ಭದ್ರತೆಯಲ್ಲಿ ಐತಿಹಾಸಿಕ ಒಗ್ಗಟ್ಟು.
    ರಾಜ್ಯದ 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳಾಗಿ ಉನ್ನತೀಕರಿಸಲು 3900 ಕೋಟಿ ಮೀಸಲು
    ದೇವರ ಮುಂದೆ ಸಾಲಿನಲ್ಲಿ ನಿಲ್ಲಲೇಬೇಕು! ಮಂತ್ರಿ ಇರಲಿ, ಸೆಲೆಬ್ರಿಟಿ ಇರಲಿ…ಅಧಿಕಾರ ಇರಲಿ, ಅಂತಸ್ತು ಇರಲಿ…”ವಿಐಪಿ ದರ್ಶನ”ಕ್ಕೆ ಹೈಕೋರ್ಟ್ ಕೊಟ್ಟ ಚಾವಟಿ ಏಟು!
    ಚಿಕ್ಕಸ್ವಾಮಿ-ದೊಡ್ಡಸ್ವಾಮಿ ಭಕ್ತರ ಮಿಲನ! ಕಾಶಿಮಠ ವಿವಾದಕ್ಕೆ ಸಂಯಮೇ೦ದ್ರ ಮದ್ದು
    ಚಿನ್ನ ಮತ್ತು ಬೆಳ್ಳಿ ಮಾರುಕಟ್ಟೆ ಜಿಗಿತ-ಸುಂಕ ಏರಿಕೆಯಿಂದ ಬೆಲೆಯಲ್ಲಿ ಭಾರೀ ಏರಿಕೆ ಗ್ರಾಹಕರಿಗೆ ಹೊರೆ.
    ಮಂಗಳೂರು ನೀರಿನ ಸಂಕಷ್ಟ:ಮಳೆಯಿಲ್ಲದೆ ಮುಂದಿನ 1–2 ತಿಂಗಳು ಗಂಭೀರ ನೀರಿನ ಕೊರತೆ ಸಂಭವ ಸಾಧ್ಯತೆ.
    ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳು …ಮಕ್ಕಳ ಶಾಲೆಯಾ? ನ್ಯೂಸ್ ಚಾನೆಲ್ಲಾ? ಬ್ರೇಕಿಂಗ್ ನ್ಯೂಸ್…ಪಠ್ಯಪುಸ್ತಕದಿಂದ ಪ್ರೈಮ್‌ಟೈಮ್‌ವರೆಗೆ..!
    ಕಪ್ಪು ಸಮುದ್ರದಲ್ಲಿ ಸರಕು ಹಡಗಿನ ಮೇಲೆ ರಷ್ಯಾ ದಾಳಿ: ನಾಲ್ವರು ಭಾರತೀಯರು ಸಾವು