📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹಿಗ್ಗಾಮುಗ್ಗ ಜಾಡಿಸಿದ ಹೆಚ್ ವಿಶ್ವನಾಥ್

    ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶದ ವಿಚಾರವಾಗಿ ಸಿಡಿದು ನಿಂತಿರುವ ರಾಜ್ಯದ ಮಾಜಿ ಶಿಕ್ಷಣ ಸಚಿವ ಹೆಚ್ ವಿಶ್ವನಾಥ್,, ಹಾಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಇಬ್ಬರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

    94% ಫಲಿತಾಂಶವು ರಾಜ್ಯದಲ್ಲಿ ಬರಲು ಹೇಗೆ ಸಾಧ್ಯ ಎಂಬ ಪ್ರಶ್ನೆಯನ್ನು ಮುಂದಿಟ್ಟುಕೊಂಡು ಮಾತು ಪ್ರಾರಂಬಿಸಿದ ಮಾಜಿ ಶಿಕ್ಷಣ ಸಚಿವ ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್, ಸುಳ್ಳು ಡೇಟಾ ಗಳನ್ನು ಸೃಷ್ಟಿಸಲಾಗುತ್ತಿದೆ. ಈ ಪ್ರಮಾಣದ ಫಲಿತಾಂಶ ಬರಲು ಸಾಧ್ಯವೇ ಇಲ್ಲ. ಈ ಫಲಿತಾಂಶವನ್ನು ತರಬೇಕು ಎಂಬ ಕಾರಣಕ್ಕೆ ತರಲಾಗಿದೆಯೇ ಹೊರತು, ಇದು ನೈಜ ಫಲಿತಾಂಶವಲ್ಲ ಎಂಬ ಗಂಭೀರ ಆರೋಪವನ್ನು ಮಾಜಿ ಸಚಿವರು ಮಾಡಿದ್ದಾರೆ.

    ಕಳೆದೆವು ವರ್ಷ 83% ಇದ್ದ ಫಲಿತಾಂಶ, ಒಂದೇ ವರ್ಷದಲ್ಲಿ 94 ಪರ್ಸೆಂಟ್ಗೆ ಏರಲು ಸಾಧ್ಯವಾಗಿದ್ದಾದರೂ ಹೇಗೆ? ದೊಡ್ಡ ಪ್ರಮಾಣದಲ್ಲಿಯೇ  ರಾಜ್ಯದ ಹೈಸ್ಕೂಲ್ಗಳಲ್ಲಿ ಶಿಕ್ಷಕರ ಕೊರತೆ ಇದೆ. ಈ ಕೊರತೆಯ ಹೊರತಾಗಿಯೂ ಇಷ್ಟು ದೊಡ್ಡ ಪ್ರಮಾಣದಲ್ಲಿ ಫಲಿತಾಂಶ ತರಲು ಸಾಧ್ಯವೇ ಇಲ್ಲ. ಈ ಸರ್ಕಾರ 94% ಫಲಿತಾಂಶವನ್ನು ತೋರಿಸಿ ತನ್ನ ಸಾಧನೆ ಅಂತ ಬಿಂಬಿಸಿಕೊಳ್ಳುತ್ತಿದೆ ಇಲಾಖೆ. ಇದು ಶಿಕ್ಷಣ ವ್ಯವಸ್ಥೆಯನ್ನು ಹಾಳು ಮಾಡುತ್ತಿರುವದರ ಮುನ್ಸೂಚನೆ ಎಂದು ಎಚ್ಚರಿಸಿದ್ದಾರೆ.

    ಶಿಕ್ಷಣದ ಬಲವರ್ಧನೆಗಾಗಿ ಎಡಿಬಿಯಿಂದ ಎರಡು ಸಾವಿರ ಕೋಟಿ ಹಣವನ್ನು ತರಲಾಗಿದ್ದರೂ ಅದರಲ್ಲಿ ಸಾಕಷ್ಟು ದೊಡ್ಡ ಪ್ರಮಾಣದಲ್ಲಿ ಭ್ರಷ್ಟಾಚಾರವಾಗುತ್ತಿದೆ, ಕಿಕ್ ಬ್ಯಾಕ್ ವ್ಯವಹಾರ ನಡೆಯುತ್ತಿದೆ ಎಂದು ಡೈರೆಕ್ಟಾಗಿ ಗದಾಪ್ರಹಾರ ಮಾಡಿದ ಹೆಚ್ ವಿಶ್ವನಾಥ್, ಸಿದ್ರಾಮಯ್ಯನವರನ್ನು ನೇರವಾಗಿ ಟಾರ್ಗೆಟ್ ಮಾಡಿ, ಇಡೀ ರಾಜ್ಯವನ್ನು ಅಡವಿಟ್ಟ ಸಾಲಗಾರ ಮುಖ್ಯಮಂತ್ರಿ ಎಂಬ ಹೆಸರನ್ನು ಸಿದ್ದರಾಮಯ್ಯನವರು ಹೊತ್ತುಕೊಂಡಿದ್ದಾರೆ ಎಂದು ಧೂಷಿಸಿದರು. ಇಂತಹ ಮುಖ್ಯಮಂತ್ರಿಯಿಂದ ರಾಜ್ಯದ ಶಿಕ್ಷಣ ವ್ಯವಸ್ಥೆಯು ಸಂಪೂರ್ಣವಾಗಿ ಕಲುಷಿತಗೊಳ್ಳುತ್ತಿದೆ. ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದ್ದಾರೆಂದು ಆರೋಪಿಸಿರುವ ಹೆಚ್ ವಿಶ್ವನಾಥ್, ರಾಜ್ಯದ ಎಸ್ ಎಸ್ ಎಲ್ ಸಿ ಫಲಿತಾಂಶ ದೊಡ್ಡ ಸ್ಕ್ಯಾಂಡಲ್ ಆಗಿ ಕಾಣುತ್ತಿದೆ ಎಂದು ಆರೋಪಿಸಿದ್ದಾರೆ. ಮುಂದುವರಿದು ಮಾತನಾಡಿದ ಎಚ್ ವಿಶ್ವನಾತ್, ಆಂತರಿಕ ಅಂಕವನ್ನು 20ಕ್ಕೆ 20ನ್ನೂ ವಿದ್ಯಾರ್ಥಿಗಳಿಗೆ ನೀಡಿದೆ. ಶಿಕ್ಷಣ ಇಲಾಖೆಯು, ಕೇವಲ ಹೆಚ್ಚು ಫಲಿತಾಂಶ ತರುವುದಕ್ಕಾಗಿ ಹೀಗೆ ಅಂಕವನ್ನು ನೀಡಿದೆ. ಆಂತರಿಕ ಅಂಕ ಸುಮ್ಮ ಸುಮ್ಮನೆ ಕೊಡುವಂಥದ್ದಲ್ಲ. ವಿದ್ಯಾರ್ಥಿಯ ನಡೆ-ನುಡಿ ಗುಣಮಟ್ಟ ದಿನಚರಿ ಎಲ್ಲವನ್ನು ಸೂಕ್ಷ್ಮವಾಗಿ ಗಮನಿಸಿ ನೀಡುವಂತ್ತದ್ದೆ ಆಂತರಿಕ ಅಂಕವಾಗಿದೆ. ಆದ್ರೆ ಇಲ್ಲಿ ಎಲ್ಲರಿಗೂ 20ಕ್ಕೆ 20 ಅಂಕ ನೀಡಲಾಗಿದೆ. ಪಾಸಾಗಲು ಉಳಿದ ಅಂಕ ಎಷ್ಟು ಬೇಕು ಹೇಳಿ. ಅಲ್ಲೂ ಸಹ ನಕಲು ಮಾಡಿಸಲಾಗಿದೆ ಎಂದು ಗಂಭೀರ ಆರೋಪ ಮಾಡಿರುವ ಮಾಜಿ ಶಿಕ್ಷಣ ಸಚಿವ ಹೆಚ್ ವಿಶ್ವನಾಥ್, ಶಿಕ್ಷಣ ಸಚಿವ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಇಬ್ಬರನ್ನೂ ತರಾಟೆಗೆ ತೆಗೆದುಕೊಂಡಿದ್ದಷ್ಟೇ ಅಲ್ಲ,ಅವರ ವಿರುದ್ಧ ಭ್ರಷ್ಟಾಚಾರದ ಆರೋಪವನ್ನು ಮಾಡಿದ್ದಾರೆ. ಈ ಬಗ್ಗೆ ತನಿಖೆಯಾಗಬೇಕೆಂದು ಆಗ್ರಹಿಸಿದ್ದಾರೆ

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಬಳ್ಳಾರಿ “ಪೊಲೀಸ್ ಗನ್‌ಮನ್ ಎಕ್ಸ್‌ಟಾರ್ಷನ್”ಇಲಾಖೆಗೆ ಕಳಂಕ: ಗನ್‌ಮನ್ ಸೇರಿ ಮೂವರ ವಿರುದ್ಧ ಪ್ರಕರಣ!
    HSRP ರಿಲೀಫ್ + PUCC ಫೈನ್ ಮುಕ್ತ…ಡೀಟೇಲ್ಸ್ ಇಲ್ಲಿದೆ ಕರ್ನಾಟಕದ ಎಲ್ಲ ಡ್ರೈವರ್‌ಗಳಿಗೆ ಡಬಲ್ ಗುಡ್ ನ್ಯೂಸ್!???
    ನೀಟ್ ಪರೀಕ್ಷೆಯ ಎಡವಟ್ಟು….ಸುಳ್ಳು ತನಿಖಾ ವರದಿಯನ್ನು ಸರ್ಕಾರಕ್ಕೆ ನೀಡಿದ ಅಧಿಕಾರಿಗಳು!!?
    Top 5, ಹೆಚ್ಚು ಅನುದಾನ ಪಡೆದ ಇಲಾಖೆಗಳು ಯಾವವು ಗೊತ್ತಾ?
    ಗ್ರಾಹಕರ ಮಾತು ಕೇಳಿ, ₹900 ಕೋಟಿಯ ರೆಸ್ಟೋರೆಂಟ್ ಸಾಮ್ರಾಜ್ಯ ನಿರ್ಮಿಸಿದ ಉದ್ಯಮಿ..
    ದ.ಕ ಜಿಲ್ಲಾಡಳಿತದಿಂದ ಮಂಗಳಮುಖಿಯರಲ್ಲದವರಿಗೂ ಗುರುತಿನ ಚೀಟಿ ವಿತರಣೆ – ಗಂಭೀರ ಆರೋಪ
    3-ಭಾಷಾ ನೀತಿಗೆ ಬ್ರೇಕ್? CBSEಗೆ ಸುಪ್ರೀಂ ಕೋರ್ಟ್‌ ಮಹತ್ವದ ಸೂಚನೆ
    ಈ ಬಾರಿ ಮಕ್ಕಳೊಟ್ಟಿಗೆ PUC ಎಕ್ಸಾಮ್ ಪಾಸಾದಅಮ್ಮಂದಿರೇ ಮನಸ್ಸಿದ್ದರೆ ಮಾರ್ಗ ಇದೆ ಅನ್ನೋದಕ್ಕೆ…ಪ್ರೇರಣೆ…!
    ಒಂದು ವಾಟ್ಸ್ಯಾಪ್ ಮೆಸೇಜ್… ಕೋರ್ಟ್ ವರೆಗೂ ಎಳೆದ ಶಾಕ್ ಘಟನೆಯ ಸುತ್ತ..
    ಅರೆಬೈಲ್ ಘಾಟ್ ನ ಕಾರು ಅಫಘಾತ ವ್ಯವಸ್ಥಿತ ಕೊಲೆ…!
    ಬಿಡದಿ ಟೌನ್‌ಶಿಪ್ ಯೋಜನೆ ಜಾರಿಗೆ ಸ್ಥಳೀಯ ರೈತರಿಂದಲೇ ಆಗ್ರಹ
    ಲಾರ್ಡ್ಸ್‌ನಲ್ಲಿ ಭಾರತ ಮಹಿಳಾ ತಂಡದ ಐತಿಹಾಸಿಕ ಟೆಸ್ಟ್ ಜಯ; ದೇಶದಲ್ಲಿ ಕ್ರಿಕೆಟ್‌ನಿಂದ ಟೆನಿಸ್‌ವರೆಗೆ… ಕ್ರೀಡೆಗಳತ್ತ ಹೆಚ್ಚುತ್ತಿರುವ ಆಸಕ್ತಿ..!
    ಸುಳ್ಳು ಸ್ಟೇಟ್ಮೆಂಟ್ ನೀಡಿದ ಎಚ್ ಪಿ ಸಿ ಎಲ್
    ಹೆಸರು ಬದಲಾವಣೆ ಪಶ್ಚಿಮ ಬಂಗಾಳ ಪೆಂಡಿಂಗ್, ಕೇರಳ ಪ್ರಗತಿಯಲ್ಲಿ
    ತೆರಿಗೆ ನಮ್ಮದು… ಪಾಲು ಬೇರೆ ರಾಜ್ಯಗಳಿಗೆ!
    ಮೇ 22 ಮಂಗಳೂರು ಎಂದಿಗೂ ಮರೆಯದ ದಿನ…
    ‘ಗಾರ್ಡನ್ ಸಿಟಿ’ ಈಗ ‘ಹಾಟ್ ಸಿಟಿ’!ದಾಖಲೆ ಮಟ್ಟಕ್ಕೆ ಏರಿದ ಬಿಸಿ…
    90 ನಿಮಿಷದ ರೋಚಕ ರಕ್ಷಣಾ ಕಾರ್ಯಾಚರಣೆ – 6 ಮೀನುಗಾರರ ಜೀವ ಉಳಿಸಿದ ಇಂಡಿಯನ್ ಕೋಸ್ಟ್ ಗಾರ್ಡ್ ಸಾಹಸ!ಪ್ರಕ್ಷುಬ್ಧ ಸಮುದ್ರಕ್ಕೂ ಸವಾಲು
    ಮದುವೆ -ಜೀವನ ಬೇಸರವಾಯ್ತು ಆಸಕ್ತಿ ಇಲ್ಲ ಅಂದ್ರೆ ವಿಚ್ಛೇದನ ಸಿಗುತ್ತಾ ..! ಮಗಳು18 ದಾಟಿದರೂ ಶಿಕ್ಷಣದ ಹೊಣೆ ಯಾರಿಗೆ?
    ಪುತ್ತೂರು ಗ್ರಾಮಾಂತರದಲ್ಲಿ ಭೂ ವಿವಾದದ ಗಲಾಟೆ ತೀವ್ರತೆ: ಪರಸ್ಪರ ಹಲ್ಲೆ – ಎರಡು ಪ್ರಕರಣಗಳು ದಾಖಲು
    ಮಕ್ಕಳ ಕೈಯಿಂದ ಮೊಬೈಲ್ ಕಸಿಯಲು ಮುಂದಾದ ಬ್ರಿಟನ್!ಯುಕೆಯ ನಿರ್ಧಾರಕ್ಕೆ ವಿಶ್ವದ ಗಮನ…
    ಸಂಸತ್ತಿನಲ್ಲಿ ಇತಿಹಾಸ ಸೃಷ್ಟಿಸುವ ಚರ್ಚೆ-ಮಹಿಳಾ ಮೀಸಲು ಬಿಲ್ಲಿನ ಸುತ್ತ ಕಂಗೊಳಿಸಿದ ಸಂಸತ್ !
    ತಸ್ಲಿಮಳ ಹಣೆಗೆ ಸಿಂಧೂರವಿಟ್ಟ ಕೇಶವ, ಬುರ್ಖಾ ತೆಗೆದಿಟ್ಟ ತಸ್ಲೀಮಾ
    ಡೇಟಾದಲ್ಲಿ ಸತ್ತಿದ್ದಾರೆ: ಬಡ ಮಹಿಳೆ ತಾನು ಜೀವಂತ ಸಾಬೀತುಪಡಿಸಲು ಹರಸಾಹಸ…ಬಡಜನರು “ಡೇಟಾ” ಅಲ್ಲ — ಅವರು ಜೀವಂತ ಮಾನವರು. 
    ಕಾಂಚನಾ ಟೆಕ್ಸ್‌ಟೈಲ್ಸ್ ಮ್ಯಾನೇಜರ್ ದಿನೇಶ್ ರಾಜ್ ಕೊಲೆ ಆರೋಪಿ 11 ವರ್ಷ ಬಳಿಕ ಅರೆಸ್ಟ್..!
    ಬಿಡದಿ “ಸಮಗ್ರ ಉಪನಗರ” ಯೋಜನೆ ಕೈಬಿಡಿ: ಸಿಎಂ ಡಿಕೆ ಶಿಗೆ ಎಚ್.ಡಿ. ದೇವೇಗೌಡ ಪತ್ರ
    ಮಧ್ಯಪ್ರಾಚ್ಯದಲ್ಲಿ ರೆಡ್ ಅಲರ್ಟ್!3 ತಿಂಗಳ ಯುದ್ಧಕ್ಕೆ ಮಹಾ ಟ್ವಿಸ್ಟ್ ಇರಾನ್ ಸೇನಾ ನೆಲೆಗಳನ್ನು ಧೂಳೀಪಟ ಮಾಡಿದ ಅಮೆರಿಕ!
    ಬ್ರೇಕಿಂಗ್ ನ್ಯೂಸ್..!final‘ಸಚಿವರ ಪಟ್ಟಿ’ ವೈರಲ್: ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ!
    ವಿದೇಶಿಗರ ಮೇಲೆ ನಿಗಾ ಇಟ್ಟ ಕೇಂದ್ರ ಗೃಹ ಇಲಾಖೆ! ನಿಯಮ ಮೀರಿದರೆ ಕಠಿಣ ಕ್ರಮ ಗ್ಯಾರಂಟಿ!