📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹಿಗ್ಗಾಮುಗ್ಗ ಜಾಡಿಸಿದ ಹೆಚ್ ವಿಶ್ವನಾಥ್

ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶದ ವಿಚಾರವಾಗಿ ಸಿಡಿದು ನಿಂತಿರುವ ರಾಜ್ಯದ ಮಾಜಿ ಶಿಕ್ಷಣ ಸಚಿವ ಹೆಚ್ ವಿಶ್ವನಾಥ್,, ಹಾಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಇಬ್ಬರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

94% ಫಲಿತಾಂಶವು ರಾಜ್ಯದಲ್ಲಿ ಬರಲು ಹೇಗೆ ಸಾಧ್ಯ ಎಂಬ ಪ್ರಶ್ನೆಯನ್ನು ಮುಂದಿಟ್ಟುಕೊಂಡು ಮಾತು ಪ್ರಾರಂಬಿಸಿದ ಮಾಜಿ ಶಿಕ್ಷಣ ಸಚಿವ ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್, ಸುಳ್ಳು ಡೇಟಾ ಗಳನ್ನು ಸೃಷ್ಟಿಸಲಾಗುತ್ತಿದೆ. ಈ ಪ್ರಮಾಣದ ಫಲಿತಾಂಶ ಬರಲು ಸಾಧ್ಯವೇ ಇಲ್ಲ. ಈ ಫಲಿತಾಂಶವನ್ನು ತರಬೇಕು ಎಂಬ ಕಾರಣಕ್ಕೆ ತರಲಾಗಿದೆಯೇ ಹೊರತು, ಇದು ನೈಜ ಫಲಿತಾಂಶವಲ್ಲ ಎಂಬ ಗಂಭೀರ ಆರೋಪವನ್ನು ಮಾಜಿ ಸಚಿವರು ಮಾಡಿದ್ದಾರೆ.

ಕಳೆದೆವು ವರ್ಷ 83% ಇದ್ದ ಫಲಿತಾಂಶ, ಒಂದೇ ವರ್ಷದಲ್ಲಿ 94 ಪರ್ಸೆಂಟ್ಗೆ ಏರಲು ಸಾಧ್ಯವಾಗಿದ್ದಾದರೂ ಹೇಗೆ? ದೊಡ್ಡ ಪ್ರಮಾಣದಲ್ಲಿಯೇ  ರಾಜ್ಯದ ಹೈಸ್ಕೂಲ್ಗಳಲ್ಲಿ ಶಿಕ್ಷಕರ ಕೊರತೆ ಇದೆ. ಈ ಕೊರತೆಯ ಹೊರತಾಗಿಯೂ ಇಷ್ಟು ದೊಡ್ಡ ಪ್ರಮಾಣದಲ್ಲಿ ಫಲಿತಾಂಶ ತರಲು ಸಾಧ್ಯವೇ ಇಲ್ಲ. ಈ ಸರ್ಕಾರ 94% ಫಲಿತಾಂಶವನ್ನು ತೋರಿಸಿ ತನ್ನ ಸಾಧನೆ ಅಂತ ಬಿಂಬಿಸಿಕೊಳ್ಳುತ್ತಿದೆ ಇಲಾಖೆ. ಇದು ಶಿಕ್ಷಣ ವ್ಯವಸ್ಥೆಯನ್ನು ಹಾಳು ಮಾಡುತ್ತಿರುವದರ ಮುನ್ಸೂಚನೆ ಎಂದು ಎಚ್ಚರಿಸಿದ್ದಾರೆ.

ಶಿಕ್ಷಣದ ಬಲವರ್ಧನೆಗಾಗಿ ಎಡಿಬಿಯಿಂದ ಎರಡು ಸಾವಿರ ಕೋಟಿ ಹಣವನ್ನು ತರಲಾಗಿದ್ದರೂ ಅದರಲ್ಲಿ ಸಾಕಷ್ಟು ದೊಡ್ಡ ಪ್ರಮಾಣದಲ್ಲಿ ಭ್ರಷ್ಟಾಚಾರವಾಗುತ್ತಿದೆ, ಕಿಕ್ ಬ್ಯಾಕ್ ವ್ಯವಹಾರ ನಡೆಯುತ್ತಿದೆ ಎಂದು ಡೈರೆಕ್ಟಾಗಿ ಗದಾಪ್ರಹಾರ ಮಾಡಿದ ಹೆಚ್ ವಿಶ್ವನಾಥ್, ಸಿದ್ರಾಮಯ್ಯನವರನ್ನು ನೇರವಾಗಿ ಟಾರ್ಗೆಟ್ ಮಾಡಿ, ಇಡೀ ರಾಜ್ಯವನ್ನು ಅಡವಿಟ್ಟ ಸಾಲಗಾರ ಮುಖ್ಯಮಂತ್ರಿ ಎಂಬ ಹೆಸರನ್ನು ಸಿದ್ದರಾಮಯ್ಯನವರು ಹೊತ್ತುಕೊಂಡಿದ್ದಾರೆ ಎಂದು ಧೂಷಿಸಿದರು. ಇಂತಹ ಮುಖ್ಯಮಂತ್ರಿಯಿಂದ ರಾಜ್ಯದ ಶಿಕ್ಷಣ ವ್ಯವಸ್ಥೆಯು ಸಂಪೂರ್ಣವಾಗಿ ಕಲುಷಿತಗೊಳ್ಳುತ್ತಿದೆ. ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದ್ದಾರೆಂದು ಆರೋಪಿಸಿರುವ ಹೆಚ್ ವಿಶ್ವನಾಥ್, ರಾಜ್ಯದ ಎಸ್ ಎಸ್ ಎಲ್ ಸಿ ಫಲಿತಾಂಶ ದೊಡ್ಡ ಸ್ಕ್ಯಾಂಡಲ್ ಆಗಿ ಕಾಣುತ್ತಿದೆ ಎಂದು ಆರೋಪಿಸಿದ್ದಾರೆ. ಮುಂದುವರಿದು ಮಾತನಾಡಿದ ಎಚ್ ವಿಶ್ವನಾತ್, ಆಂತರಿಕ ಅಂಕವನ್ನು 20ಕ್ಕೆ 20ನ್ನೂ ವಿದ್ಯಾರ್ಥಿಗಳಿಗೆ ನೀಡಿದೆ. ಶಿಕ್ಷಣ ಇಲಾಖೆಯು, ಕೇವಲ ಹೆಚ್ಚು ಫಲಿತಾಂಶ ತರುವುದಕ್ಕಾಗಿ ಹೀಗೆ ಅಂಕವನ್ನು ನೀಡಿದೆ. ಆಂತರಿಕ ಅಂಕ ಸುಮ್ಮ ಸುಮ್ಮನೆ ಕೊಡುವಂಥದ್ದಲ್ಲ. ವಿದ್ಯಾರ್ಥಿಯ ನಡೆ-ನುಡಿ ಗುಣಮಟ್ಟ ದಿನಚರಿ ಎಲ್ಲವನ್ನು ಸೂಕ್ಷ್ಮವಾಗಿ ಗಮನಿಸಿ ನೀಡುವಂತ್ತದ್ದೆ ಆಂತರಿಕ ಅಂಕವಾಗಿದೆ. ಆದ್ರೆ ಇಲ್ಲಿ ಎಲ್ಲರಿಗೂ 20ಕ್ಕೆ 20 ಅಂಕ ನೀಡಲಾಗಿದೆ. ಪಾಸಾಗಲು ಉಳಿದ ಅಂಕ ಎಷ್ಟು ಬೇಕು ಹೇಳಿ. ಅಲ್ಲೂ ಸಹ ನಕಲು ಮಾಡಿಸಲಾಗಿದೆ ಎಂದು ಗಂಭೀರ ಆರೋಪ ಮಾಡಿರುವ ಮಾಜಿ ಶಿಕ್ಷಣ ಸಚಿವ ಹೆಚ್ ವಿಶ್ವನಾಥ್, ಶಿಕ್ಷಣ ಸಚಿವ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಇಬ್ಬರನ್ನೂ ತರಾಟೆಗೆ ತೆಗೆದುಕೊಂಡಿದ್ದಷ್ಟೇ ಅಲ್ಲ,ಅವರ ವಿರುದ್ಧ ಭ್ರಷ್ಟಾಚಾರದ ಆರೋಪವನ್ನು ಮಾಡಿದ್ದಾರೆ. ಈ ಬಗ್ಗೆ ತನಿಖೆಯಾಗಬೇಕೆಂದು ಆಗ್ರಹಿಸಿದ್ದಾರೆ

COMMENTS

Login with Gmail to comment

ಇನ್ನಷ್ಟು ಸುದ್ದಿ

ಪರಿಸರ ನಾಶಕ್ಕಾಗಿ ಸುಳ್ಳು ಸರ್ಟಿಫಿಕೇಟ್ ರೆಡಿಮಾಡಿಕೊಂಡು ಒಂದು ಊರನ್ನೇ ಭಯದಲ್ಲಿರಿಸಿದ ಉಡುಪಿ ಜಿಲ್ಲಾ ಆಡಳಿತ
ಟಾಟಾ ಸನ್ಸ್ IPOಗೆ ಒತ್ತಾಯ: ಟ್ರಸ್ಟಿಗಳಲ್ಲಿ ಭಿನ್ನಾಭಿಪ್ರಾಯ ಹೆಚ್ಚಳ…!
ಮುಂಬಯಿಯಲ್ಲಿ ಪಹಲ್ಗಾಮ್ ಮಾದರಿ ದಾಳಿ ಯತ್ನ: ಉಗ್ರ ಚಟುವಟಿಕೆ ಯತ್ನ ವಿಫಲ…!
ಸಾರ್ವಜನಿಕರಲ್ಲಿ ವಿನಂತಿ …!
“ಪಾಲಕ್ಕಾಡ್‌ನಲ್ಲಿ ಮೋದಿ ಚಂಡೆ ಸದ್ದು—ಕೇರಳದಲ್ಲಿ ಚುನಾವಣಾ ಕಹಳೆ!” 
ಭಾರತದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಅನ್ನೋ ಇತಿಹಾಸ ಬರೆಯಲಿದ್ದಾರೆ ‘ಡಿ ಕೆ ಶಿ’!
ಡಿಸ್ಟಿಂಕ್ಷನ್ ಪಡೆದರೆ ಸಂಭ್ರಮಿಸುತ್ತಿದ್ದ ಕಾಲ ಹೋಗಿ, ಇಂದು 99% ಬಂದರೂ ಬೀದಿಯಲ್ಲಿ ನಿಂತು ಅಳಬೇಕಾದ ದುಸ್ಥಿತಿ ..ಇದು ನಮ್ಮಇಂದಿನ ಶಿಕ್ಷಣ ವ್ಯವಸ್ಥೆ!
ಚಿಕ್ಕಸ್ವಾಮಿ-ದೊಡ್ಡಸ್ವಾಮಿ ಭಕ್ತರ ಮಿಲನ! ಕಾಶಿಮಠ ವಿವಾದಕ್ಕೆ ಸಂಯಮೇ೦ದ್ರ ಮದ್ದು
ಒಂದು ರಾಷ್ಟ್ರ, ಒಂದು ಚುನಾವಣೆ’ಗೆ ಡಿಕೆಶಿ ಸಿಡಿದೆದ್ದೇಕೆ?
ಪಂಚ ಗ್ಯಾರಂಟಿ ಯೋಜನೆಯಿಂದ ಕರ್ನಾಟಕ ಸಾಲದ ಸುಳಿಗೆ……..
ತೆರಿಗೆ ನಮ್ಮದು… ಪಾಲು ಬೇರೆ ರಾಜ್ಯಗಳಿಗೆ!
50ಕ್ಕೂ ಹೆಚ್ಚು ಆಟೋ ಚಾಲಕರ ದಿನನಿತ್ಯದ ಆರೋಗ್ಯದ ಬದುಕಿಗೆ ಮುಳುವಾದ ದೇರಳಕಟ್ಟೆ ಜಂಕ್ಷನ್ ದುರ್ನಾತ! 
ಜನಗಣತಿ 2026–27 – Self Enumeration ಮುಗಿದು ಈಗ ಮನೆ ಮನೆ ಭೇಟಿ ಹಂತ ಆರಂಭ!ನಮ್ಮ ಮಾಹಿತಿ = ನಮ್ಮ ದೇಶದ ಬೆಳವಣಿಗೆ…
ಆಸ್ಪತ್ರೆಯಲ್ಲೇ ಮೂರನೇ ಮಹಡಿಯಿಂದ ಬಿದ್ದು ಸಾವುನಿರ್ಲಕ್ಷ್ಯವೇ? ಸುರಕ್ಷತೆ ಪ್ರಶ್ನೆಗೊಳಗಾಗಿದೆ!
17ನೇ ಆಯವ್ಯಯ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ
ಮಂಗಳೂರಿನಲ್ಲಿ ಪಕ್ಕಪ್ಲಾನ್ ಡ್ ಅಟ್ಯಾಕ್ ..!ರೌಡಿ ಶೀಟರ್ ಬರ್ಬರ ಹತ್ಯೆ…ವಿಶೇಷ ತಂಡ ರಚನೆ..!
ಇನ್‌ಸ್ಟಾಗ್ರಾಮ್ ಬ್ಲಾಕ್ ಆದ ಕ್ಷಣದಿಂದ ಹೊರಬಂತು ರಹಸ್ಯ!
ಮಂತ್ರಾಲಯದ ಮಠದ ಹೆಸರಲ್ಲಿ 3 ಲಕ್ಷ ಆಸೆ ತೋರಿಸಿ ವಂಚನೆ..!
ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯ ಬಂಧನ
ಬಾಲಿವುಡ್‌ ಮಿಸ್ಟರ್ ಪರ್ಫೆಕ್ಷನಿಸ್ಟ್ ಆಮೀರ್ ಖಾನ್ ಗೆ 60ರ ವಯಸ್ಸಿನಲ್ಲಿ  ಸಿಕ್ಕ ಪರ್ಫೆಕ್ಟ್ ಸಂಗಾತಿ……?!ಎಷ್ಟನೇ ಮದುವೆ?!
ಗುರುವಾಯನಕೆರೆ ಯ ಪ್ರತಿಷ್ಠಿತ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ
ಚುನಾವಣೆಯವರೆಗೆ ಮೌನ, ನಂತರ LPG ದರ ಭಾರಿ ಏರಿಕೆ –ಇದು ರಾಜಕೀಯ ಅಜೆಂಡಾನಾ?
ಸಿಎಂ ಕುರ್ಚಿಯನ್ನು, ಡಿಕೆಗೆ ಮಗ್ಗಲ ಮುಳ್ಳನ್ನಾಗಿಸಲು ಸಕಲ ತಯಾರಿ
ಏರ್ ಇಂಡಿಯಾದಿಂದ ದೈನಂದಿನ ವಿಮಾನ ಹಾರಾಟದ ಬಗ್ಗೆ ನೂತನ ಪ್ರಕಟಣೆ
ರಾಜಕೀಯದಲ್ಲಿ ಅನುಭವ ಎಷ್ಟು ಮುಖ್ಯ?…  ತಮಿಳುನಾಡು ರಾಜಕಾರಣ ತೋರಿಸುತ್ತಿದೆ ನೋಡಿ
“ಅಪ್ರಾಪ್ತ ಅತ್ಯಾಚಾರ ಸಂತ್ರಸ್ತರಿಗೆ ಅಬಾರ್ಷನ್ ಮಾಡಲು ಆದ್ಯತೆ ,ಕಾನೂನು ತಿದ್ದುಪಡಿ”- ಸುಪ್ರೀಂ ಕೋರ್ಟ್
ಪುತ್ತೂರಿನ ದೇವಸ್ಥಾನ ಪದಾಧಿಕಾರಿಗಳ ವಿರುದ್ಧ FIR ..!
ಥಾರ್ ಕಾರ್ ನಲ್ಲಿ ಬಂದು ದೇವಸ್ಥಾನದಲ್ಲಿ ವಿಕೃತಿ ಮೆರೆದ ಕಿಡಿಗೇಡಿ!
ಬಂಗಾಳ ರಾಜಕೀಯದಲ್ಲಿ ಭಾರಿ ಟ್ವಿಸ್ಟ್ ಮೇಲೆ ಟ್ವಿಸ್ಟ್..! ಸುವೇಂದು ಪ್ರಮಾಣವಚನಕ್ಕೂ ಬ್ರೇಕ್ ಬೀಳುತ್ತಾ?ಸುಪ್ರೀಂ ಕೋರ್ಟ್ ಎಂಟ್ರಿ ಆಗುತ್ತಾ?
ವಿಶ್ವದ ನಂಬರ್ ವನ್ ಜನನಾಯಕನಾದ ಪ್ರಧಾನಿ ಮೋದಿ