📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಮುಳುಗುತ್ತಿರುವ ಕಾಂಗ್ರೆಸ್ಸಿಗೆ ಇನ್ನೂ ಬುದ್ಧಿ ಬಂದಂತಿಲ್ಲ… ಡಿಜೆಪಿ ರಾಮಚಂದ್ರರಾವ್  ಅಮಾನತ್ ಆದೇಶ ಹಿಂಪಡೆದ  ಸರ್ಕಾರ

    ಕಳೆದ ಜನವರಿಯ ಮಧ್ಯದ ಅವಧಿಯಲ್ಲಿ, ಹಿರಿಯ ಪೊಲೀಸ್ ಅಧಿಕಾರಿ ರಾಮಚಂದ್ರ ರಾವ್ ಅವರನ್ನು ರಾಜ್ಯ ಸರ್ಕಾರವು ಅಮಾನತ್ತುಗೊಳಿಸಿತ್ತು. ಇದೀಗ ಆ ಅಮಾನತ್ತನ್ನು ಏಕಾಏಕಿಯಾಗಿ, ತನಿಖಾ ವರದಿ ಬರುವ ಮೊದಲೇ ಹಿಂಪಡೆದಿದೆ. ಸರ್ಕಾರದ ಈ ನಡೆಯು ಸಾಮಾನ್ಯ ಜನರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.

    1993ರ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಡಾ. ರಾಮಚಂದ್ರರಾವ್ ರಾಜ್ಯದ ಹಲವೆಡೆ ಕರ್ತವ್ಯವನ್ನು ನಿಭಾಯಿಸಿದ್ದರು. ರಾಮಚಂದ್ರ ರಾವ್ ರವರು ಇಲ್ಲಿಯವರೆಗೆ ಸಾಕಷ್ಟು ಬಾರಿ ವಿವಾದಿತ ವ್ಯಕ್ತಿಯಾಗಿ ಕಾಣಿಸಿಕೊಂಡಿದ್ದು ಸುಳ್ಳಲ್ಲ. ಅದರಲ್ಲೂ ಮೈಸೂರಿನಲ್ಲಿ ಐಜಿ ಆಗಿರುವಾಗ ಹವಾಲ ಹಣದ ವಿಚಾರವಾಗಿ ನಡೆದಂತಹ ಘಟನೆಯ ವಿಚಾರದಲ್ಲೂ ಇವರ ಹೆಸರು ತಳಕು ಹಾಕಿಕೊಂಡಿತ್ತು. ತಿರಾ ಇತ್ತೀಚೆಗೆ ರಾಮಚಂದ್ರರಾವ್ ರವರ ಎರಡನೆಯ ಪತ್ನಿಯ ಮಗಳು ಹಾಗೂ ಚಿತ್ರ ನಟಿ, ರೆಡ್ ಹ್ಯಾಂಡಾಗಿ ಚಿನ್ನ ಕಳ್ಳ ಸಾಗಾಣಿಕೆಯ ವಿಚಾರದಲ್ಲಿ ಸಿಕ್ಕಾಕಿಕೊಳ್ಳುತ್ತಾಳೆ. ಅದರಲ್ಲಿಯು ರಾಮಚಂದ್ರರಾವ್ರವರ ಪಾತ್ರವಿತ್ತು ಅನ್ನುವ ಆರೋಪವು ಕೇಳಿ ಬಂದಿತ್ತು. ಆದರೆ, ಬೆಳಗಾವಿ ಪರಿಸರದಲ್ಲಿ ಪೊಲೀಸ್ ಇಲಾಖೆಯ ಕಚೇರಿಯಲ್ಲಿ ಮಹಿಳೆ ಒಬ್ಬಳ ಜೊತೆ ರಾಸಲೀಲೆಯಲ್ಲಿ ತೊಡಗಿಕೊಂಡಿದ್ದರ ವಿಡಿಯೋ ಬಹಿರಂಗಗೊಂಡಾಗ, ಆ ಬಗ್ಗೆ ನೇರವಾದ ಅಂತಹ ಆರೋಪ ಬಂದಾಗ ಸರ್ಕಾರಕ್ಕೆ ಕ್ರಮ ಕೈಗೊಳ್ಳದೆ ಇರಲು ಆಗಲಿಲ್ಲ. ಪೊಲೀಸ್ ಇಲಾಖೆಯ ಶಿಸ್ತು ಹಾಗೂ ನಿಯಮ ಉಲ್ಲಂಘನೆ ವಿಚಾರದಲ್ಲಿ ಕಠಿಣಕ್ರಮಮ ಕೈಗೊಳ್ಳಲೇಬೇಕಾದಂತಹ ಪರಿಸ್ಥಿತಿಗೆ ಸರ್ಕಾರ ಸಿಲುಕಿತ್ತು. ಹಾಗಾಗಿ ಇದೇ ವರ್ಷದ ಜನವರಿ 19ರಂದು ಹಿರಿಯ ಐಪಿಎಸ್ ಅಧಿಕಾರಿ ಡಾ. ರಾಮಚಂದ್ರರಾವ್ ಅವರನ್ನು ಸರ್ಕಾರವು ಅಮಾನತುಗೊಳಿಸಿ ಆದೇಶ ನೀಡಿತ್ತು.

    ಈಗ ಅದೇ ರಾಮಚಂದ್ರರಾವ್ ಅವರನ್ನು ಸರ್ಕಾರವು ಡಿಜೆಪಿಯಾಗಿ ನೇಮಕ ಮಾಡಿದೆ. ಅವರ ಅಮಾನತ್ತು ಮಾಡಿದ ಆದೇಶವನ್ನು ಸರ್ಕಾರವು ಹಿಂಪಡೆದಿದೆ.

    ಸರ್ಕಾರವು ಯಾವುದೇ ಅಧಿಕಾರಿಯನ್ನು ಅಮಾನತ್ತು ಮಾಡಿದರೆ, ಅಧಿಕಾರಿಯ ವಿಚಾರವಾಗಿ ಇಲಾಖಾ ತನಿಖೆಯನ್ನು ಮಾಡಿಸುತ್ತದೆ. ಆದರೆ ಇಲ್ಲಿ  ಆಂತರಿಕ ತನಿಖೆಯು ಆಗಿಯೇ ಇಲ್ಲ ಎಂಬಂತೆ ತೋರುತ್ತದೆ. ಒಂದೊಮ್ಮೆ ತನಿಖೆ ಆಗಿದ್ದರೆ, ಆ ವರದಿಯು ಏನು ಅನ್ನುವುದನ್ನು ಬಹಿರಂಗಪಡಿಸಬೇಕಿತ್ತು. ತನಿಖಾ ವರದಿಯಲ್ಲಿ, ರಾಮಚಂದ್ರ ರಾವ್ ತಪ್ಪಿತಸ್ಥರಲ್ಲ ಎಂಬ ಕಾರಣಕ್ಕೆ ಅವರ ಅಮಾನತ್ತು ಆದೇಶವನ್ನು ಹಿಂಪಡೆಯಲಾಗಿದೆ ಅಂತ ಸರ್ಕಾರ ಹೇಳಿದ್ದರೆ ಅದನ್ನು ಒಪ್ಪಿಕೊಳ್ಳಬಹುದಿತ್ತು. ಆದರೆ ಸರ್ಕಾರವು, ಅಮಾನತ್ತಾದ ಅಧಿಕಾರಿಯನ್ನು, ಯಾವುದೇ ಸಕಾರಣ ನೀಡದೆ ಅಮಾನತ್ತು ಆದೇಶ ಹಿಂಪಡೆದು, ವಾಪಸ್ ಇಲಾಖೆಯ ಹಿರಿಯ ಅಧಿಕಾರಿಯ ಸ್ಥಾನದಲ್ಲಿ ಕೂರಿಸಿದ್ದರ ಬಗ್ಗೆ ಸಾರ್ವಜನಿಕವಾಗಿ ಸಾಕಷ್ಟು ಅಪಸ್ವರಗಳು ಕೇಳಲಾರಂಬಿಸಿದೆ.

    ಸರ್ಕಾರದ ಇಂತಹ ನಿರ್ಧಾರಗಳು, ಪೊಲೀಸ್ ಇಲಾಖೆಯಂತಹ ಶಿಸ್ತಿನ ಇಲಾಖೆಯಲ್ಲಿ, ಮುಂದಿನ ದಿನದಲ್ಲಿ ಅಶಿಸ್ತು ತಾಂಡವವಾಡಲು ಅವಕಾಶ ಮಾಡಿಕೊಟ್ಟಂತಾಗುತ್ತದೆ ಎಂಬ ಆರೋಪವು ಇಲಾಖೆಯ ಆಂತರಿಕ ವಲಯದಿಂದ ಕೇಳಿ ಬರುತ್ತದೆ. ರಾಜ್ಯ ಸರ್ಕಾರವನ್ನು ನಡೆಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ, ರಾಜಕೀಯವಾಗಿ ಸಾಕಷ್ಟು ಹಿನ್ನಡೆಯು ರಾಷ್ಟ್ರಮಟ್ಟದಲ್ಲಿ ಆಗುತ್ತಿದೆ. ಜನರ ನಾಡಿಮಿಡಿತಕ್ಕೆ ವಿರುದ್ಧವಾಗಿ ಹೋಗುತ್ತಿರುವುದರ ಕಾರಣದಿಂದಾಗಿ, ಪದೇಪದೇ ಹಿನ್ನಡೆಯನ್ನು ಕಾಣುತ್ತಿದೆ ಆ ಪಕ್ಷ. ಇಷ್ಟಾದರೂ ಜನಸಾಮಾನ್ಯರ ಮನಸ್ಸಿಗೆ ಯೋಚನೆಗೆ ವಿರುದ್ಧವಾಗಿ ಇಂತಹ ನಿರ್ಧಾರ ಕೈಗೊಂಡಿರುವುದು ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದಿಷ್ಟು ಹಿನ್ನೆಡೆ ಒದಗಿಸಬಹುದು ಎಂಬ ಲೆಕ್ಕಾಚಾರವು ಆ ಪಕ್ಷದ ಕಾರ್ಯಕರ್ತರ ಕಡೆಯಿಂದಲೇ ಆಗುತ್ತಿದೆ. ವಿರೋಧ ಪಕ್ಷಗಳು ಇದನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತವೆ ಎನ್ನುವುದು ಅವರ ವಿಶ್ವಾಸದ ಮಾತಾಗಿದೆ. ಆದಷ್ಟು ಬೇಗ ಕಾಂಗ್ರೆಸ್, ಜನರ ಜೊತೆಗೆ ಹೆಜ್ಜೆ ಹಾಕುವುದನ್ನು ರೂಡಿಸಿಕೊಂಡಲ್ಲಿ ಮಾತ್ರವೇ  ಭವಿಶ್ಯ ಇದೆ ಎಂಬ ಬೇಸರದ ಮಾತುಗಳು ಸಾಮಾನ್ಯ ಕಾರ್ಯಕರ್ತರ ಬಾಯಿಂದ ಕೇಳಿ ಬರುತ್ತದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಬೇಕಾದಾಗ, ಬೇಕಾದಂಗೆ ಸಂವಿಧಾನದ ಜಪ
    ದಲಿತ ವಿಧವೆ ಮೇಲೆ ಸಾಮೂಹಿಕ ಅತ್ಯಾಚಾರ – ಮೂವರು ಆರೋಪಿಗಳು ಬಂಧನ
    ಮಳೆ ಮಾಯ! ಪೆಸಿಫಿಕ್ ಚಂಡಮಾರುತದಿಂದ ಮುಂಗಾರಿಗೆ ಬ್ರೇಕ್ – ದೇಶದ 70-80% ಭಾಗದಲ್ಲಿ ಒಣಹವೆ
    ₹6,695 ಕೋಟಿಯ ಮೆಗಾ ಪ್ರಾಜೆಕ್ಟ್‌ಗೆ ಮಳೆಯ ಅಗ್ನಿಪರೀಕ್ಷೆ-ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಭೂಕುಸಿತ
    ಗುರು ಬ್ರಹ್ಮ – ಗುರು ವಿಷ್ಣು ಅನ್ನುವ ಕಾಲ ಮುಗಿದು ಹೋಯ್ತೇ?
    ಸನ್ಯಾಸಿಗೆ ಕಾಡಿದ ಸುಂದರಿಯ  ಬಂಧನ
    HSRP ರಿಲೀಫ್ + PUCC ಫೈನ್ ಮುಕ್ತ…ಡೀಟೇಲ್ಸ್ ಇಲ್ಲಿದೆ ಕರ್ನಾಟಕದ ಎಲ್ಲ ಡ್ರೈವರ್‌ಗಳಿಗೆ ಡಬಲ್ ಗುಡ್ ನ್ಯೂಸ್!???
    ಪೆಟ್ರೋಲ್–ಡೀಸೆಲ್ ಬೆಲೆ ಏರಿಕೆ ..! ಸಾರ್ವಜನಿಕ ಸಾರಿಗೆ ಬಳಸಿ ,ಇಂಧನ ಉಳಿಸಿ ,Work From Home ಮಾಡಿ ಎಂದಿದ್ದ ಮೋದಿ… ಈಗ ಅದರ ಅರ್ಥ ಸ್ಪಷ್ಟವಾಗುತ್ತಿದೆಯೇ?
    ಭಾರತದ 9 ರಾಜ್ಯದ 8.18 ಕೋಟಿ ಮತದಾರರನ್ನು ಕೈ ಬಿಡಲಾಗಿದ್ದು ,ಅವರ ಕಥೆ ಏನು?
    ಕೂತ್ಕೊಳಪ್ಪ ಡಿಕೆಶಿ ನಿಂದೆ ಖುರ್ಚಿ … ಅಂತ CM ಸಿದ್ದು ಯಾವಾಗ ಹೇಳ್ಬೇಕಿತ್ತು??ಅಹಿಂದ ಮಾಸ್ ಲೀಡರ್ ವರ್ಸಸ್ ಮನಿ ಮ್ಯಾನ್..ಕರ್ನಾಟಕ ರಾಜಕಾರಣದ ಅತಿ ದೊಡ್ಡ ಟ್ವಿಸ್ಟ್!
    “ಗ್ಯಾರಂಟಿ “ಹಣದ ಮೇಲೆ ಆಯೋಗದ ಕಣ್ಣು: ಸಿಎಂ ಸಿಡಿಮಿಡಿ ..ರಾಜಕೀಯ ಕಿಡಿ!
    ಬ್ರಹ್ಮಾವರ ಕೆಂಜೂರಿನಲ್ಲಿ ಅನ್ನಭಾಗ್ಯದ ಅಕ್ಕಿ  ಅಕ್ರಮ ದಾಸ್ತಾನು- 15 ಕ್ವಿಂಟಲ್‌ಗೂ ಅಧಿಕ ಅಕ್ಕಿ ವಶ
    ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್‌ನಿಂದ ಬಂದ ಪ್ರಯಾಣಿಕನ ಬ್ಯಾಗ್‌ನಲ್ಲಿ 47 ಜೀವಂತ ಅಪರೂಪದ ಪ್ರಾಣಿಗಳು ಪತ್ತೆ! 
    ಬೀಡಿ, ಗೋಡಂಬಿ ಮತ್ತು ಸ್ಕೀಮ್ ಕಾರ್ಮಿಕರಿಗೆ ಕನಿಷ್ಠ ಕೂಲಿ ನೀಡಿ: ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ.
    ನಾಲ್ಕು ದಶಕಗಳ ಕಾಲ ರೋಗಿಗಳಿಗೆ ಜೀವ ನೀಡಿದ ವೈದ್ಯನೇ ಇಂದು ಯಾಕೆ ತನ್ನ ಜೀವ ತಾನೇ ತೆಗೆದುಕೊಂಡರು …
    ಕೊನೆಗೂ ಸೋತ ಖಾಕಿ….!!!
    ಕರ್ನಾಟಕದಲ್ಲಿ 2,222 KEO AI, PCಗಳ ಲೋಕಾರ್ಪಣೆ
    ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಹೊಸ ತಿರುವು: ದರ್ಶನ್ ಆಪ್ತರ ‘ಮಾಫಿ ಸಾಕ್ಷಿ’ ಅರ್ಜಿ ಏಕೆ ಮಹತ್ವದ್ದು?
    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಮಚ್ಚು ದಾಳಿ: ಕಾಲೇಜಿಗೆ ತೆರಳುತ್ತಿದ್ದ ಪಿಯುಸಿ ವಿದ್ಯಾರ್ಥಿನಿ ಮೇಲೆ ಹಲ್ಲೆ; ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು
    ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ರೋಗಿಗಳಿಗೆ heartattack !!!..ಐಸಿಯು ಮತ್ತು ಸಿಸಿಟಿವಿ ದೃಶ್ಯಗಳಲ್ಲಿದೆ ಕ್ಲಾರಿಟಿ!
     ಆಸ್ಪತ್ರೆಯಲ್ಲಿ ಡಾಕ್ಟರ್ “mistakeಎಡವಟ್”…ಅಚ್ಚರಿಯೂ ಮೀರಿದ ಆಘಾತ!
    “ಹಿಜಾಬ್ ಆದೇಶಕ್ಕೆ ಕರಾವಳಿಯಲ್ಲಿ ಬಿಜೆಪಿ ಸಿಡಿದೆದ್ದಿದೆ!ಓಲೈಕೆಗಾಗಿ ಶಿಕ್ಷಣವನ್ನೇ ಬಲಿ ಕೊಟ್ಟ ಕಾಂಗ್ರೆಸ್” – ಬಿಜೆಪಿ ವಾಗ್ದಾಳಿ.
    *ಬೈಕಂಪಾಡಿ ಹೆದ್ದಾರಿ ಡಕಾಯಿತಿ, 23 ಲಕ್ಷ ಮೌಲ್ಯದ ಸೊತ್ತು ದರೋಡೆ ಪ್ರಕರಣ: 3 ಆರೋಪಿಗಳು ಸೆರೆ.
    ಹಾರ್ಮುಜ್ ಬಳಿ ಹಡಗುಗಳ ಹಿಂತಿರುಗುವ ಸರಣಿ!ಜಾಗತಿಕ ತೈಲ ಸರಬರಾಜಿಗೆ ಶಾಕ್ ⚠️
    ಮಂಡ್ಯದಲ್ಲಿ ವೈರಲ್ ವಿಡಿಯೋ!ಜಿಂಕೆ ಸಂಪೂರ್ಣ ಮಾಯ!ಈ ದೃಶ್ಯ ನೋಡಿದ್ರೆ ಗಾಬರಿಯಾಗ್ತೀರಾ!ಜೀವಂತ ಪ್ರಕೃತಿ ಡಾಕ್ಯುಮೆಂಟರಿ…
    PoKನಲ್ಲಿ ರಕ್ತಪಾತ-ಪಾಕಿಸ್ತಾನದ ವಿರುದ್ಧ ಭಾರತದ ತೀವ್ರ ಆಕ್ರೋಶ!ಗುಂಡಿನ ಮಳೆಯ ನಡುವೆ ಜೀವ ಕಳೆದುಕೊಂಡ ಪ್ರತಿಭಟನಾಕಾರರು!
    ‼️ ಮುಂಗಾರು ಅಬ್ಬರ ಶುರು: ಕರ್ನಾಟಕ-ಕೇರಳಕ್ಕೆ IMD ರೆಡ್ ಸಿಗ್ನಲ್! ಮುಂದಿನ 7 ದಿನ ಭಾರೀ ಮಳೆ, ಬಿರುಗಾಳಿ ಸಾಧ್ಯತೆ!
    ಕರಾವಳಿಯಲ್ಲಿ ವಾಪಸ್ ಆದ ಮುಂಗಾರು: ಜುಲೈ 6ರವರೆಗೆ ಆರೆಂಜ್ ಅಲರ್ಟ್ – ಜನರಿಗೆ ಎಚ್ಚರಿಕೆ
    AI ಡೀಪ್‌ಫೇಕ್ ಕೇವಲ ಸಿನಿಮಾ ನಟಿಯರಿಗೆ ಸೀಮಿತವಾಗಿಲ್ಲ .