📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಮುಳುಗುತ್ತಿರುವ ಕಾಂಗ್ರೆಸ್ಸಿಗೆ ಇನ್ನೂ ಬುದ್ಧಿ ಬಂದಂತಿಲ್ಲ… ಡಿಜೆಪಿ ರಾಮಚಂದ್ರರಾವ್  ಅಮಾನತ್ ಆದೇಶ ಹಿಂಪಡೆದ  ಸರ್ಕಾರ

ಕಳೆದ ಜನವರಿಯ ಮಧ್ಯದ ಅವಧಿಯಲ್ಲಿ, ಹಿರಿಯ ಪೊಲೀಸ್ ಅಧಿಕಾರಿ ರಾಮಚಂದ್ರ ರಾವ್ ಅವರನ್ನು ರಾಜ್ಯ ಸರ್ಕಾರವು ಅಮಾನತ್ತುಗೊಳಿಸಿತ್ತು. ಇದೀಗ ಆ ಅಮಾನತ್ತನ್ನು ಏಕಾಏಕಿಯಾಗಿ, ತನಿಖಾ ವರದಿ ಬರುವ ಮೊದಲೇ ಹಿಂಪಡೆದಿದೆ. ಸರ್ಕಾರದ ಈ ನಡೆಯು ಸಾಮಾನ್ಯ ಜನರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.

1993ರ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಡಾ. ರಾಮಚಂದ್ರರಾವ್ ರಾಜ್ಯದ ಹಲವೆಡೆ ಕರ್ತವ್ಯವನ್ನು ನಿಭಾಯಿಸಿದ್ದರು. ರಾಮಚಂದ್ರ ರಾವ್ ರವರು ಇಲ್ಲಿಯವರೆಗೆ ಸಾಕಷ್ಟು ಬಾರಿ ವಿವಾದಿತ ವ್ಯಕ್ತಿಯಾಗಿ ಕಾಣಿಸಿಕೊಂಡಿದ್ದು ಸುಳ್ಳಲ್ಲ. ಅದರಲ್ಲೂ ಮೈಸೂರಿನಲ್ಲಿ ಐಜಿ ಆಗಿರುವಾಗ ಹವಾಲ ಹಣದ ವಿಚಾರವಾಗಿ ನಡೆದಂತಹ ಘಟನೆಯ ವಿಚಾರದಲ್ಲೂ ಇವರ ಹೆಸರು ತಳಕು ಹಾಕಿಕೊಂಡಿತ್ತು. ತಿರಾ ಇತ್ತೀಚೆಗೆ ರಾಮಚಂದ್ರರಾವ್ ರವರ ಎರಡನೆಯ ಪತ್ನಿಯ ಮಗಳು ಹಾಗೂ ಚಿತ್ರ ನಟಿ, ರೆಡ್ ಹ್ಯಾಂಡಾಗಿ ಚಿನ್ನ ಕಳ್ಳ ಸಾಗಾಣಿಕೆಯ ವಿಚಾರದಲ್ಲಿ ಸಿಕ್ಕಾಕಿಕೊಳ್ಳುತ್ತಾಳೆ. ಅದರಲ್ಲಿಯು ರಾಮಚಂದ್ರರಾವ್ರವರ ಪಾತ್ರವಿತ್ತು ಅನ್ನುವ ಆರೋಪವು ಕೇಳಿ ಬಂದಿತ್ತು. ಆದರೆ, ಬೆಳಗಾವಿ ಪರಿಸರದಲ್ಲಿ ಪೊಲೀಸ್ ಇಲಾಖೆಯ ಕಚೇರಿಯಲ್ಲಿ ಮಹಿಳೆ ಒಬ್ಬಳ ಜೊತೆ ರಾಸಲೀಲೆಯಲ್ಲಿ ತೊಡಗಿಕೊಂಡಿದ್ದರ ವಿಡಿಯೋ ಬಹಿರಂಗಗೊಂಡಾಗ, ಆ ಬಗ್ಗೆ ನೇರವಾದ ಅಂತಹ ಆರೋಪ ಬಂದಾಗ ಸರ್ಕಾರಕ್ಕೆ ಕ್ರಮ ಕೈಗೊಳ್ಳದೆ ಇರಲು ಆಗಲಿಲ್ಲ. ಪೊಲೀಸ್ ಇಲಾಖೆಯ ಶಿಸ್ತು ಹಾಗೂ ನಿಯಮ ಉಲ್ಲಂಘನೆ ವಿಚಾರದಲ್ಲಿ ಕಠಿಣಕ್ರಮಮ ಕೈಗೊಳ್ಳಲೇಬೇಕಾದಂತಹ ಪರಿಸ್ಥಿತಿಗೆ ಸರ್ಕಾರ ಸಿಲುಕಿತ್ತು. ಹಾಗಾಗಿ ಇದೇ ವರ್ಷದ ಜನವರಿ 19ರಂದು ಹಿರಿಯ ಐಪಿಎಸ್ ಅಧಿಕಾರಿ ಡಾ. ರಾಮಚಂದ್ರರಾವ್ ಅವರನ್ನು ಸರ್ಕಾರವು ಅಮಾನತುಗೊಳಿಸಿ ಆದೇಶ ನೀಡಿತ್ತು.

ಈಗ ಅದೇ ರಾಮಚಂದ್ರರಾವ್ ಅವರನ್ನು ಸರ್ಕಾರವು ಡಿಜೆಪಿಯಾಗಿ ನೇಮಕ ಮಾಡಿದೆ. ಅವರ ಅಮಾನತ್ತು ಮಾಡಿದ ಆದೇಶವನ್ನು ಸರ್ಕಾರವು ಹಿಂಪಡೆದಿದೆ.

ಸರ್ಕಾರವು ಯಾವುದೇ ಅಧಿಕಾರಿಯನ್ನು ಅಮಾನತ್ತು ಮಾಡಿದರೆ, ಅಧಿಕಾರಿಯ ವಿಚಾರವಾಗಿ ಇಲಾಖಾ ತನಿಖೆಯನ್ನು ಮಾಡಿಸುತ್ತದೆ. ಆದರೆ ಇಲ್ಲಿ  ಆಂತರಿಕ ತನಿಖೆಯು ಆಗಿಯೇ ಇಲ್ಲ ಎಂಬಂತೆ ತೋರುತ್ತದೆ. ಒಂದೊಮ್ಮೆ ತನಿಖೆ ಆಗಿದ್ದರೆ, ಆ ವರದಿಯು ಏನು ಅನ್ನುವುದನ್ನು ಬಹಿರಂಗಪಡಿಸಬೇಕಿತ್ತು. ತನಿಖಾ ವರದಿಯಲ್ಲಿ, ರಾಮಚಂದ್ರ ರಾವ್ ತಪ್ಪಿತಸ್ಥರಲ್ಲ ಎಂಬ ಕಾರಣಕ್ಕೆ ಅವರ ಅಮಾನತ್ತು ಆದೇಶವನ್ನು ಹಿಂಪಡೆಯಲಾಗಿದೆ ಅಂತ ಸರ್ಕಾರ ಹೇಳಿದ್ದರೆ ಅದನ್ನು ಒಪ್ಪಿಕೊಳ್ಳಬಹುದಿತ್ತು. ಆದರೆ ಸರ್ಕಾರವು, ಅಮಾನತ್ತಾದ ಅಧಿಕಾರಿಯನ್ನು, ಯಾವುದೇ ಸಕಾರಣ ನೀಡದೆ ಅಮಾನತ್ತು ಆದೇಶ ಹಿಂಪಡೆದು, ವಾಪಸ್ ಇಲಾಖೆಯ ಹಿರಿಯ ಅಧಿಕಾರಿಯ ಸ್ಥಾನದಲ್ಲಿ ಕೂರಿಸಿದ್ದರ ಬಗ್ಗೆ ಸಾರ್ವಜನಿಕವಾಗಿ ಸಾಕಷ್ಟು ಅಪಸ್ವರಗಳು ಕೇಳಲಾರಂಬಿಸಿದೆ.

ಸರ್ಕಾರದ ಇಂತಹ ನಿರ್ಧಾರಗಳು, ಪೊಲೀಸ್ ಇಲಾಖೆಯಂತಹ ಶಿಸ್ತಿನ ಇಲಾಖೆಯಲ್ಲಿ, ಮುಂದಿನ ದಿನದಲ್ಲಿ ಅಶಿಸ್ತು ತಾಂಡವವಾಡಲು ಅವಕಾಶ ಮಾಡಿಕೊಟ್ಟಂತಾಗುತ್ತದೆ ಎಂಬ ಆರೋಪವು ಇಲಾಖೆಯ ಆಂತರಿಕ ವಲಯದಿಂದ ಕೇಳಿ ಬರುತ್ತದೆ. ರಾಜ್ಯ ಸರ್ಕಾರವನ್ನು ನಡೆಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ, ರಾಜಕೀಯವಾಗಿ ಸಾಕಷ್ಟು ಹಿನ್ನಡೆಯು ರಾಷ್ಟ್ರಮಟ್ಟದಲ್ಲಿ ಆಗುತ್ತಿದೆ. ಜನರ ನಾಡಿಮಿಡಿತಕ್ಕೆ ವಿರುದ್ಧವಾಗಿ ಹೋಗುತ್ತಿರುವುದರ ಕಾರಣದಿಂದಾಗಿ, ಪದೇಪದೇ ಹಿನ್ನಡೆಯನ್ನು ಕಾಣುತ್ತಿದೆ ಆ ಪಕ್ಷ. ಇಷ್ಟಾದರೂ ಜನಸಾಮಾನ್ಯರ ಮನಸ್ಸಿಗೆ ಯೋಚನೆಗೆ ವಿರುದ್ಧವಾಗಿ ಇಂತಹ ನಿರ್ಧಾರ ಕೈಗೊಂಡಿರುವುದು ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದಿಷ್ಟು ಹಿನ್ನೆಡೆ ಒದಗಿಸಬಹುದು ಎಂಬ ಲೆಕ್ಕಾಚಾರವು ಆ ಪಕ್ಷದ ಕಾರ್ಯಕರ್ತರ ಕಡೆಯಿಂದಲೇ ಆಗುತ್ತಿದೆ. ವಿರೋಧ ಪಕ್ಷಗಳು ಇದನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತವೆ ಎನ್ನುವುದು ಅವರ ವಿಶ್ವಾಸದ ಮಾತಾಗಿದೆ. ಆದಷ್ಟು ಬೇಗ ಕಾಂಗ್ರೆಸ್, ಜನರ ಜೊತೆಗೆ ಹೆಜ್ಜೆ ಹಾಕುವುದನ್ನು ರೂಡಿಸಿಕೊಂಡಲ್ಲಿ ಮಾತ್ರವೇ  ಭವಿಶ್ಯ ಇದೆ ಎಂಬ ಬೇಸರದ ಮಾತುಗಳು ಸಾಮಾನ್ಯ ಕಾರ್ಯಕರ್ತರ ಬಾಯಿಂದ ಕೇಳಿ ಬರುತ್ತದೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ನಿಶ್ಚಿತಾರ್ಥ ಮಾಡಿಕೊಂಡು, ಫೈನಾನ್ಸಿಯಲ್ ವಂಚನೆ ದೂರು ದಾಖಲು
KSRTC ಬಸ್ ಪಲ್ಟಿಯಾಗಿ ಕಂದಕಕ್ಕೆ — ಐವರು ದುರ್ಮರಣ, ಹಲವರಿಗೆ ಗಂಭೀರ ಗಾಯ-ಜಹೀರಾಬಾದ್ ಸಮೀಪ ಭೀಕರ ರಸ್ತೆ ಅಪಘಾತ
ಬೆಂಗಳೂರಲ್ಲಿ Bowring Hospital ಬಳಿ ಗೋಡೆ ಕುಸಿತ ಮನ ಕಲುಕುವ ಘಟನೆ ಬಿಸಿಲಿನಿಂದ ತಪ್ಪಿಸಿಕೊಳ್ಳಲು ನಿಂತವರು… ಏಳು ಮಂದಿಯ ದುರಂತ ಅಂತ್ಯ.!
ಉಪಚುನಾವಣೆ ಮುಗಿಯುತಿದ್ದಂತೆಯೇ, ವಿದ್ಯುತ್ ದರ ಏರಿಸುತ್ತಿರುವ ರಾಜ್ಯ ಸರ್ಕಾರ
ದಕ್ಷಿಣಕನ್ನಡ ಜಿಲ್ಲಾಡಳಿತ ರೈತರ ಪರವಾಗಿ ನಿಲ್ಲುತ್ತಿಲ್ಲ ಎಂಬ ಅಸಮಾಧಾನ
ಅಕ್ರಮ ಡಿಸೇಲ್ ದಾಸ್ತಾನು ಪ್ರಕರಣ: 4,175 ಲೀಟರ್ ಡಿಸೇಲ್ ಕಂದಾಯ ಇಲಾಖೆಯಿಂದ ಹರಾಜು – ₹2.35 ಲಕ್ಷಕ್ಕೆ ಮಾರಾಟ!
ಇನ್ನು ಹೈವೇಯಲ್ಲಿ ಲಿಮಿಟ್ ಗಿಂತ ವೇಗವಾಗಿ ಹೋಗುವವರು ಹುಷಾರಾಗಿರಿ…
ಶಿಶಿಲದಲ್ಲಿ ವಿಷಪೂರಿತ ಹಾವು ಕಚ್ಚಿ 65 ವರ್ಷದ ರೈತ ಮೃತ್ಯು
ಅಪ್ರಾಪ್ತನ ಕ್ರೌರ್ಯಕ್ಕೆ ಬಳ್ಳಾರಿ ವಸತಿ ಶಾಲೆಯ ದೌರ್ಜನ್ಯವೇ ಸಾಕ್ಷಿ… ಈ ಕ್ರೌರ್ಯದ ಹಿಂದೆ ಮನೋರೋಗ ಅಡಗಿದೆಯಾ? 
🚨4 ವರ್ಷಗಳಿಂದ ಪೊಲೀಸರಿಗೆ ತಪ್ಪಿಸಿಕೊಂಡಿದ್ದ 17 ಪ್ರಕರಣಗಳ ಆರೋಪಿಯ ಡ್ರಾಮಾಟಿಕ್ ಬಂಧನ!
ಡೊನಾಲ್ಡ್ ಟ್ರoಪ್ ಮುಂದೆ ಮಂಡಿಯೂರಿ ಕೂತ ಜಗತ್ತು!
ರಾಜಕೀಯ ಬದಲಾಗುತ್ತಿದೆ -ಪಂಚರಾಜ್ಯ election ರಿಸಲ್ಟ್ “ಗೆಲುವು-ಸೋಲಿನ ಶಕ್ತಿ ಪಕ್ಷದಲ್ಲಲ್ಲ… ಜನರ ಕೈಯಲ್ಲಿ”
ಕಪ್ಪೆ ಚಿಪ್ಪು ದುರಂತಕ್ಕೆ ಮತ್ತೆರಡು ಜೀವ ಬಲಿ, ಬಲಿಯ ಸಂಖ್ಯೆ ಏರುವ ಸಾಧ್ಯತೆ
ಇಂದು ಆನ್‌ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಆಕ್ರೋಶ!ದಕ್ಷಿಣ ಕನ್ನಡದಲ್ಲಿ 1100 ಮೆಡಿಕಲ್ ಶಾಪ್ ಬಂದ್!
17ನೇ ಆಯವ್ಯಯ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ
Anticipatory Bail ಗೆ ಹೊಸ ರಕ್ಷಣೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಆಕ್ಷೇಪ
ಅಲ್ಲಿ ಸೌಮೆಂದು ಅಧಿಕಾರಿ…. ಇಲ್ಲಿ ಸಾಮ್ರಾಟ್ ಚೌದರಿ, ಹೆಲ್ತ್ ಮಿನಿಸ್ಟರ್ ನಿಶಾಂತ್….
ಗುಜರಾತ್ ಪೊಲೀಸರಲ್ಲಿ ಆಗದ ಕೆಲಸ, ಒಬ್ಬ ಮಂತ್ರವಾದಿಯಿಂದ ಆಯ್ತು
ಮಂಗಳೂರು ನೀರಿನ ಸಂಕಷ್ಟ:ಮಳೆಯಿಲ್ಲದೆ ಮುಂದಿನ 1–2 ತಿಂಗಳು ಗಂಭೀರ ನೀರಿನ ಕೊರತೆ ಸಂಭವ ಸಾಧ್ಯತೆ.
ಸಂಸದ ಸಂಜಯ್ ಅರೋರ ಬಂಧನ…. ಉಳಿದ ಮೂರು ಸಂಸದರನ್ನು ಸೆಳೆಯಲು ಈ ಅನೈತಿಕ ಮಾರ್ಗ ಎಂದು ಎಎಪಿ.
Tesla Experience Centre ಬೆಂಗಳೂರು ಈಗ EV ಕ್ರೇಜ್ ಹಬ್!car craze ಇರುವವರು ಮುಗಿಬೀಳುತ್ತಿದ್ದಾರೆ..
ಅಂದು ಮುಖ್ಯ ಮಂತ್ರಿ, ಇಂದು ಪುಟ್ಟಪಾತ್ ವ್ಯಾಪಾರಿ!!
ಪ್ರಧಾನಿ ಮೋದಿ ಯವರಿಗೆ ಡೈರೆಕ್ಟ್ ಬೆದರಿಕೆ ಹಾಕಿದ ಹೆಂಗಸು!!
ಹೆಚ್.ಪಿ.ವಿ. ಚುಚ್ಚು ಮದ್ದಿನ ಬಗ್ಗೆ ಗೊಂದಲ ಬೇಡ: ಜಿಲ್ಲಾ ಆರೋಗ್ಯಾಧಿಕಾರಿ ಸ್ಪಷ್ಟನೆ
Golden Hour ಉಳಿಸುವತ್ತ ಗ್ರಾಮದಿಂದ ನಗರವರೆಗೆ – ಕರ್ನಾಟಕ ಹೆಲ್ತ್ ಸಿಸ್ಟಮ್ ಮಹತ್ವದ ಹೆಜ್ಜೆ
ಕೊನೆಗೂ ಸೋತ ಖಾಕಿ….!!!
ಆಮಾದ್ಮಿ ಪಕ್ಷದ ಏಳು ಸಂಸದರು ಬಿಜೆಪಿಯ ತೆಕ್ಕೆಗೆ ರೈಟೋ?  ರಾಂಗೋ?
ಪಾಕಿಸ್ತಾನಕ್ಕೆ ಭಾರತೀಯ ಸೇನಾ ಮುಖ್ಯಸ್ಥರ ಕಠಿಣ ಎಚ್ಚರಿಕೆ ದ್ವಿವೇದಿ ವಾರ್ನಿಂಗ್ ವೈರಲ್!” “ಭೂಗೋಳದ ಭಾಗವಾಗಿರಬೇಕೆ ಅಥವಾ ಇತಿಹಾಸದ ಭಾಗವಾಗಬೇಕೆ ?”
🚨 ಸಾರ್ವಜನಿಕರಿಗೆ ತುರ್ತು ಎಚ್ಚರಿಕೆ – ಕಟಪಾಡಿ ರಾಷ್ಟ್ರೀಯ ಹೆದ್ದಾರಿ ಅಪಘಾತ
ಧೂಮಪಾನ ಮಾಡುತ್ತಿದ್ದೀರಾ? ನಿಮ್ಮ ಮುಖ ನಿಧಾನವಾಗಿ ನಾಶವಾಗುತ್ತಿದೆ…