📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಮುಳುಗುತ್ತಿರುವ ಕಾಂಗ್ರೆಸ್ಸಿಗೆ ಇನ್ನೂ ಬುದ್ಧಿ ಬಂದಂತಿಲ್ಲ… ಡಿಜೆಪಿ ರಾಮಚಂದ್ರರಾವ್  ಅಮಾನತ್ ಆದೇಶ ಹಿಂಪಡೆದ  ಸರ್ಕಾರ

ಕಳೆದ ಜನವರಿಯ ಮಧ್ಯದ ಅವಧಿಯಲ್ಲಿ, ಹಿರಿಯ ಪೊಲೀಸ್ ಅಧಿಕಾರಿ ರಾಮಚಂದ್ರ ರಾವ್ ಅವರನ್ನು ರಾಜ್ಯ ಸರ್ಕಾರವು ಅಮಾನತ್ತುಗೊಳಿಸಿತ್ತು. ಇದೀಗ ಆ ಅಮಾನತ್ತನ್ನು ಏಕಾಏಕಿಯಾಗಿ, ತನಿಖಾ ವರದಿ ಬರುವ ಮೊದಲೇ ಹಿಂಪಡೆದಿದೆ. ಸರ್ಕಾರದ ಈ ನಡೆಯು ಸಾಮಾನ್ಯ ಜನರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.

1993ರ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಡಾ. ರಾಮಚಂದ್ರರಾವ್ ರಾಜ್ಯದ ಹಲವೆಡೆ ಕರ್ತವ್ಯವನ್ನು ನಿಭಾಯಿಸಿದ್ದರು. ರಾಮಚಂದ್ರ ರಾವ್ ರವರು ಇಲ್ಲಿಯವರೆಗೆ ಸಾಕಷ್ಟು ಬಾರಿ ವಿವಾದಿತ ವ್ಯಕ್ತಿಯಾಗಿ ಕಾಣಿಸಿಕೊಂಡಿದ್ದು ಸುಳ್ಳಲ್ಲ. ಅದರಲ್ಲೂ ಮೈಸೂರಿನಲ್ಲಿ ಐಜಿ ಆಗಿರುವಾಗ ಹವಾಲ ಹಣದ ವಿಚಾರವಾಗಿ ನಡೆದಂತಹ ಘಟನೆಯ ವಿಚಾರದಲ್ಲೂ ಇವರ ಹೆಸರು ತಳಕು ಹಾಕಿಕೊಂಡಿತ್ತು. ತಿರಾ ಇತ್ತೀಚೆಗೆ ರಾಮಚಂದ್ರರಾವ್ ರವರ ಎರಡನೆಯ ಪತ್ನಿಯ ಮಗಳು ಹಾಗೂ ಚಿತ್ರ ನಟಿ, ರೆಡ್ ಹ್ಯಾಂಡಾಗಿ ಚಿನ್ನ ಕಳ್ಳ ಸಾಗಾಣಿಕೆಯ ವಿಚಾರದಲ್ಲಿ ಸಿಕ್ಕಾಕಿಕೊಳ್ಳುತ್ತಾಳೆ. ಅದರಲ್ಲಿಯು ರಾಮಚಂದ್ರರಾವ್ರವರ ಪಾತ್ರವಿತ್ತು ಅನ್ನುವ ಆರೋಪವು ಕೇಳಿ ಬಂದಿತ್ತು. ಆದರೆ, ಬೆಳಗಾವಿ ಪರಿಸರದಲ್ಲಿ ಪೊಲೀಸ್ ಇಲಾಖೆಯ ಕಚೇರಿಯಲ್ಲಿ ಮಹಿಳೆ ಒಬ್ಬಳ ಜೊತೆ ರಾಸಲೀಲೆಯಲ್ಲಿ ತೊಡಗಿಕೊಂಡಿದ್ದರ ವಿಡಿಯೋ ಬಹಿರಂಗಗೊಂಡಾಗ, ಆ ಬಗ್ಗೆ ನೇರವಾದ ಅಂತಹ ಆರೋಪ ಬಂದಾಗ ಸರ್ಕಾರಕ್ಕೆ ಕ್ರಮ ಕೈಗೊಳ್ಳದೆ ಇರಲು ಆಗಲಿಲ್ಲ. ಪೊಲೀಸ್ ಇಲಾಖೆಯ ಶಿಸ್ತು ಹಾಗೂ ನಿಯಮ ಉಲ್ಲಂಘನೆ ವಿಚಾರದಲ್ಲಿ ಕಠಿಣಕ್ರಮಮ ಕೈಗೊಳ್ಳಲೇಬೇಕಾದಂತಹ ಪರಿಸ್ಥಿತಿಗೆ ಸರ್ಕಾರ ಸಿಲುಕಿತ್ತು. ಹಾಗಾಗಿ ಇದೇ ವರ್ಷದ ಜನವರಿ 19ರಂದು ಹಿರಿಯ ಐಪಿಎಸ್ ಅಧಿಕಾರಿ ಡಾ. ರಾಮಚಂದ್ರರಾವ್ ಅವರನ್ನು ಸರ್ಕಾರವು ಅಮಾನತುಗೊಳಿಸಿ ಆದೇಶ ನೀಡಿತ್ತು.

ಈಗ ಅದೇ ರಾಮಚಂದ್ರರಾವ್ ಅವರನ್ನು ಸರ್ಕಾರವು ಡಿಜೆಪಿಯಾಗಿ ನೇಮಕ ಮಾಡಿದೆ. ಅವರ ಅಮಾನತ್ತು ಮಾಡಿದ ಆದೇಶವನ್ನು ಸರ್ಕಾರವು ಹಿಂಪಡೆದಿದೆ.

ಸರ್ಕಾರವು ಯಾವುದೇ ಅಧಿಕಾರಿಯನ್ನು ಅಮಾನತ್ತು ಮಾಡಿದರೆ, ಅಧಿಕಾರಿಯ ವಿಚಾರವಾಗಿ ಇಲಾಖಾ ತನಿಖೆಯನ್ನು ಮಾಡಿಸುತ್ತದೆ. ಆದರೆ ಇಲ್ಲಿ  ಆಂತರಿಕ ತನಿಖೆಯು ಆಗಿಯೇ ಇಲ್ಲ ಎಂಬಂತೆ ತೋರುತ್ತದೆ. ಒಂದೊಮ್ಮೆ ತನಿಖೆ ಆಗಿದ್ದರೆ, ಆ ವರದಿಯು ಏನು ಅನ್ನುವುದನ್ನು ಬಹಿರಂಗಪಡಿಸಬೇಕಿತ್ತು. ತನಿಖಾ ವರದಿಯಲ್ಲಿ, ರಾಮಚಂದ್ರ ರಾವ್ ತಪ್ಪಿತಸ್ಥರಲ್ಲ ಎಂಬ ಕಾರಣಕ್ಕೆ ಅವರ ಅಮಾನತ್ತು ಆದೇಶವನ್ನು ಹಿಂಪಡೆಯಲಾಗಿದೆ ಅಂತ ಸರ್ಕಾರ ಹೇಳಿದ್ದರೆ ಅದನ್ನು ಒಪ್ಪಿಕೊಳ್ಳಬಹುದಿತ್ತು. ಆದರೆ ಸರ್ಕಾರವು, ಅಮಾನತ್ತಾದ ಅಧಿಕಾರಿಯನ್ನು, ಯಾವುದೇ ಸಕಾರಣ ನೀಡದೆ ಅಮಾನತ್ತು ಆದೇಶ ಹಿಂಪಡೆದು, ವಾಪಸ್ ಇಲಾಖೆಯ ಹಿರಿಯ ಅಧಿಕಾರಿಯ ಸ್ಥಾನದಲ್ಲಿ ಕೂರಿಸಿದ್ದರ ಬಗ್ಗೆ ಸಾರ್ವಜನಿಕವಾಗಿ ಸಾಕಷ್ಟು ಅಪಸ್ವರಗಳು ಕೇಳಲಾರಂಬಿಸಿದೆ.

ಸರ್ಕಾರದ ಇಂತಹ ನಿರ್ಧಾರಗಳು, ಪೊಲೀಸ್ ಇಲಾಖೆಯಂತಹ ಶಿಸ್ತಿನ ಇಲಾಖೆಯಲ್ಲಿ, ಮುಂದಿನ ದಿನದಲ್ಲಿ ಅಶಿಸ್ತು ತಾಂಡವವಾಡಲು ಅವಕಾಶ ಮಾಡಿಕೊಟ್ಟಂತಾಗುತ್ತದೆ ಎಂಬ ಆರೋಪವು ಇಲಾಖೆಯ ಆಂತರಿಕ ವಲಯದಿಂದ ಕೇಳಿ ಬರುತ್ತದೆ. ರಾಜ್ಯ ಸರ್ಕಾರವನ್ನು ನಡೆಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ, ರಾಜಕೀಯವಾಗಿ ಸಾಕಷ್ಟು ಹಿನ್ನಡೆಯು ರಾಷ್ಟ್ರಮಟ್ಟದಲ್ಲಿ ಆಗುತ್ತಿದೆ. ಜನರ ನಾಡಿಮಿಡಿತಕ್ಕೆ ವಿರುದ್ಧವಾಗಿ ಹೋಗುತ್ತಿರುವುದರ ಕಾರಣದಿಂದಾಗಿ, ಪದೇಪದೇ ಹಿನ್ನಡೆಯನ್ನು ಕಾಣುತ್ತಿದೆ ಆ ಪಕ್ಷ. ಇಷ್ಟಾದರೂ ಜನಸಾಮಾನ್ಯರ ಮನಸ್ಸಿಗೆ ಯೋಚನೆಗೆ ವಿರುದ್ಧವಾಗಿ ಇಂತಹ ನಿರ್ಧಾರ ಕೈಗೊಂಡಿರುವುದು ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದಿಷ್ಟು ಹಿನ್ನೆಡೆ ಒದಗಿಸಬಹುದು ಎಂಬ ಲೆಕ್ಕಾಚಾರವು ಆ ಪಕ್ಷದ ಕಾರ್ಯಕರ್ತರ ಕಡೆಯಿಂದಲೇ ಆಗುತ್ತಿದೆ. ವಿರೋಧ ಪಕ್ಷಗಳು ಇದನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತವೆ ಎನ್ನುವುದು ಅವರ ವಿಶ್ವಾಸದ ಮಾತಾಗಿದೆ. ಆದಷ್ಟು ಬೇಗ ಕಾಂಗ್ರೆಸ್, ಜನರ ಜೊತೆಗೆ ಹೆಜ್ಜೆ ಹಾಕುವುದನ್ನು ರೂಡಿಸಿಕೊಂಡಲ್ಲಿ ಮಾತ್ರವೇ  ಭವಿಶ್ಯ ಇದೆ ಎಂಬ ಬೇಸರದ ಮಾತುಗಳು ಸಾಮಾನ್ಯ ಕಾರ್ಯಕರ್ತರ ಬಾಯಿಂದ ಕೇಳಿ ಬರುತ್ತದೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಡೆಲಿವರಿ ಬಾಯ್‌ಗೆ ಅಡ್ಡಗಟ್ಟಿ ಹಲ್ಲೆ – ಪ್ರಕರಣ ದಾಖಲು
ಟಾಟಾ ಸನ್ಸ್ IPOಗೆ ಒತ್ತಾಯ: ಟ್ರಸ್ಟಿಗಳಲ್ಲಿ ಭಿನ್ನಾಭಿಪ್ರಾಯ ಹೆಚ್ಚಳ…!
ನಿತ್ಯ bus ಪ್ರಯಾಣಿಕರಿಗೆ ಶಾಕ್‌: ‌ ಟಿಕೆಟ್‌ ದರ 5 ರಿಂದ 8% ಹೆಚ್ಚಳ: ಇನ್ಮೇಲೆ ಓಡಾಟ ಮತ್ತಷ್ಟು ದುಬಾರಿ!
ರಾಜಿ ಮಾಡಲು ಬಂದವನಿಗೇ ಚೂರಿ ಇರಿತ
ಯಾರದ್ದೋ ಹಠ, ಮತ್ತ್ಯಾರದೋ ಚಟ, ಹೆತ್ತವರ ಜಗಳಕ್ಕೆ ಬಲಿಯಾಯ್ತು ಮಗುವಿನ ಬಾಲ್ಯ -ಭವಿಷ್ಯ!
ಅಮಿತ್ ಶಾ- “UCC ಜಾರಿಗೆ ತಂದು ನಾಲ್ಕು ಮದುವೆ ಪದ್ಧತಿ ನಿಷೇಧ” — ಪಶ್ಚಿಮ ಬಂಗಾಳದಲ್ಲಿ ದೊಡ್ಡ ಘೋಷಣೆ
ಏಪ್ರಿಲ್ 1, 2026ರಿಂದಲೇ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ
“ಮಾರಿಕೊಂಡ ಮಾಧ್ಯಮದವರು ಯಾರು?” ಪ್ರಶ್ನೆಗೆ ಪ್ರಕಾಶ್ ರಾಜ್ ನಿರುತ್ತರ”ಪತ್ರಿಕಾಗೋಷ್ಠಿಯಲ್ಲೇ ಶುರುವಾದ ಭಾರೀ ವಿವಾದ ಏನು?
ಇರಾನ್ ದಾಳಿಗೆ ಬೆಂಜಿಮನೇತನ್ಯಹೋ ಕೊಲ್ಲಲ್ಪಟ್ಟಿದ್ದಾರಾ?
AYS TROPHY–2026 ಯಶಸ್ವಿಯಾಗಿಸಲು ನಿಮ್ಮ ಉಪಸ್ಥಿತಿ ಅಗತ್ಯ.
“ಪ್ರೇಮ ಕಥೆ ತಿರುವು: ಗಂಡನ ಜೀವವೇ ಟಾರ್ಗೆಟ್!”ಬ್ಯಾಂಕ್ ಅಧಿಕಾರಿ ಪತ್ನಿ taxi ಚಾಲಕನೊಂದಿಗೆ ಸೇರಿ killing plan
ಇನ್ಮುಂದೆ ಏರ್‌ಪೋರ್ಟ್‌ನಲ್ಲಿ ಇಷ್ಟ ಬಂದಂತೆ ವಿಡಿಯೋ ಮಾಡುವಂತಿಲ್ಲ! ಇನ್ಸ್ಟಾರೀಲ್ಸ್, ವಿಡಿಯೋ ಮಾಡಿದರೆ ‘ನೋ-ಫ್ಲೈ ಲಿಸ್ಟ್’ ಸೇರುವ ಮುನ್ನೆಚ್ಚರಿಕೆ ನೀಡಿದ DGCA! ಲೇಟೆಸ್ಟ್ ಅಪ್ಡೇಟ್ ಹೊಸ ರೂಲ್ಸ್ ಇಲ್ಲಿದೆ.. ಓದಿ..
ಕಮ್ ಬ್ಯಾಕ್ ಮಾಡಿದ ಮುಂಬೈ ಇಂಡಿಯನ್, ಕ್ಯಾಪ್ಟನ್ ಪ್ರೇರಣೆಗೆ ವರ್ಮಾ ಬ್ಯಾಟಿನಿಂದ  ಮೊದಲ ಸೆಂಚುರಿ
ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ ವಿಂಗಡಣೆ ನಡುವೆ ಮಹಿಳಾ ಮಿಸಲಿಗೆ ಸೋಲು….
AI ಹವಾ-ಬೇಗನೆ ಫೈನಾನ್ಷಿಯಲ್ ಇಂಡಿಪೆಂಡೆಂಟ್ ಆಗೋ ಟ್ರೆಂಡ್- ಕೈಬಿಟ್ಟ  ಓದು!! ಇದು ಗಂಭೀರ ಸೂಚನೆ….
ಘರ್ಷಣೆಗಳ ನಡುವೆಯೂ ಜನರ ಮತದ ಹಕ್ಕು ಅಚಲ…ಸಂಕ್ಷಿಪ್ತ ನೋಟ..
ಚಾಮನಗರದಲ್ಲೊಂದು ಅನಿಷ್ಠದ ಕ್ರೈಂ
ಸಂಸತ್ತಿನಲ್ಲಿ ಇತಿಹಾಸ ಸೃಷ್ಟಿಸುವ ಚರ್ಚೆ-ಮಹಿಳಾ ಮೀಸಲು ಬಿಲ್ಲಿನ ಸುತ್ತ ಕಂಗೊಳಿಸಿದ ಸಂಸತ್ !
ಬೆಳ್ಳಂಬೆಳಗ್ಗೆ ಸಿದ್ದರಾಮಯ್ಯ ಮನೆಗೆ ಡಿ.ಕೆ. ಶಿವಕುಮಾರ್ ಸರ್ಪ್ರೈಸ್ ವಿಸಿಟ್!
ಬಳ್ಳಾರಿ “ಪೊಲೀಸ್ ಗನ್‌ಮನ್ ಎಕ್ಸ್‌ಟಾರ್ಷನ್”ಇಲಾಖೆಗೆ ಕಳಂಕ: ಗನ್‌ಮನ್ ಸೇರಿ ಮೂವರ ವಿರುದ್ಧ ಪ್ರಕರಣ!
ನೀಟ್ ಪರೀಕ್ಷೆಯ ಎಡವಟ್ಟು….ಸುಳ್ಳು ತನಿಖಾ ವರದಿಯನ್ನು ಸರ್ಕಾರಕ್ಕೆ ನೀಡಿದ ಅಧಿಕಾರಿಗಳು!!?
ಬೀದಿ ನಾಯಿಗಳ ಹಾವಳಿ ಮಾನವ ಜೀವ ರಕ್ಷಣೆಗೆ ಮೊದಲ ಆದ್ಯತೆ — ಸುಪ್ರೀಂ ಕೋರ್ಟ್‌ನ ಕಠಿಣ ನಿಲುವು
₹6,695 ಕೋಟಿಯ ಮೆಗಾ ಪ್ರಾಜೆಕ್ಟ್‌ಗೆ ಮಳೆಯ ಅಗ್ನಿಪರೀಕ್ಷೆ-ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಭೂಕುಸಿತ
ದಕ್ಷಿಣಕನ್ನಡ ಜಿಲ್ಲಾಡಳಿತ ರೈತರ ಪರವಾಗಿ ನಿಲ್ಲುತ್ತಿಲ್ಲ ಎಂಬ ಅಸಮಾಧಾನ
ಯುವ ಜನಾಂಗದ ಹೋರಾಟ ಕಿಚ್ಚಾಗದಂತೆ ನೋಡಿಕೊಳ್ಳಿ
ಪಿಸ್ತೂಲ್ ತೋರಿಸಿ ಬೆದರಿಸಿ ಪರಾರಿಯಾಗಿದ್ದ ಯುವಕ ಬಂಧನ
ಸಾರ್ವಜನಿಕ ಸ್ಥಳದಲ್ಲಿ ಕೈಕೈ ಮಿಲಾಯಿಸಿ ಜಗಳ ಮಾಡಿದ್ರೇ ಹುಷಾರ್…!
“ವಚನಾನಂದ ಶ್ರೀ ಸರದಿ ಸಾಲಿನಲ್ಲಿ ಮಕ್ಕಳನ್ನು ಕರೆಯುತ್ತಿದ್ದರು”– ಪೀಠದಿಂದ ಉಚ್ಚಾಟನೆ ಬಳಿಕ ಪೋಕ್ಸೋ ಕೇಸ್ ಶಾಕ್..ಮಠದಲ್ಲಿ ಭಾರೀ ಸಂಚಲನ .. ಭೇಟಿ ನೀಡಿದ ಮಕ್ಕಳ ಕಲ್ಯಾಣ ಸಮಿತಿ
ಅಮೇರಿಕಾ ಅಧ್ಯಕ್ಷರ ಮೇಲೆ ಎರಡನೆಯ ಬಾರಿ ಗುಂಡಿನ ದಾಳಿ
24 ಭಾರತೀಯರಿದ್ದ ಹಡಗಿನ ಮೇಲೆ ಅಮೆರಿಕಾ ದಾಳಿ: 3 ನಾವಿಕರ ಜೀವ ಬಲಿ