📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಮೂಡಬಿದಿರೆ ಇನ್‌ಸ್ಪೆಕ್ಟರ್ ಪ್ರಕರಣಕ್ಕೆ ಟ್ವಿಸ್ಟ್: ಆರೋಪ ಮಾಡಿದ ಮಹಿಳೆಯ ವಿರುದ್ಧವೇ ಸಹೋದರಿಯ ಬಾಂಬ್!

ಮಂಗಳೂರು | ದಕ್ಷಿಣ ಕನ್ನಡ

ಪ್ರೆಸ್ ಮೀಟ್‌ನಲ್ಲಿ ಸಹೋದರಿಯ ಸ್ಪೋಟಕ ಹೇಳಿಕೆ”ಮೂಡಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ. ವಿರುದ್ಧ ಕೇಳಿಬಂದಿದ್ದ ಲೈಂಗಿಕ ಕಿರುಕುಳದ ಗಂಭೀರ ಆರೋಪ ಇದೀಗ ಹೊಸ ತಿರುವು ಪಡೆದಿದ್ದು, ದೂರು ನೀಡಿದ ಮಹಿಳೆಯ ಕುಟುಂಬದಲ್ಲೇ ಭಿನ್ನಾಭಿಪ್ರಾಯ ಬಹಿರಂಗವಾಗಿದೆ.

ಈ ವಿವಾದದ ಮಧ್ಯೆ, ಆರೋಪ ಮಾಡಿದ ಮಹಿಳೆಯ ಸಹೋದರಿ ಪ್ರಫುಲ್ಲಾ ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ದಿಢೀರ್ ಸುದ್ದಿಗೋಷ್ಠಿ ನಡೆಸಿ, ಪ್ರಕರಣಕ್ಕೆ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. “ನನ್ನ ತಂಗಿ ಮಾಡಿರುವ ಆರೋಪ ಸಂಪೂರ್ಣ ಸುಳ್ಳು. ಅವಳು ಯಾವುದೇ ಸ್ಥಿರ ಉದ್ಯೋಗವಿಲ್ಲದೆ ವೈಶ್ಯಾವಾಟಿಕೆಯಲ್ಲಿ ತೊಡಗಿದ್ದಾಳೆ. ಆದರೂ, ಸುಮಾರು 75 ಲಕ್ಷ ರೂ. ಮೌಲ್ಯದ ಮನೆ ಕಟ್ಟಿರುವುದು ಅನುಮಾನಾಸ್ಪದ,” ಎಂದು ಹೇಳಿದ್ದಾರೆ.

ಇದಲ್ಲದೆ, “ಮೂಡಬಿದಿರೆ ಇನ್‌ಸ್ಪೆಕ್ಟರ್ ಒಬ್ಬ ಒಳ್ಳೆಯ ಅಧಿಕಾರಿ. ನಮ್ಮ ಕುಟುಂಬದ ಒಳಗಿನ ಸಮಸ್ಯೆಗೆ ನ್ಯಾಯ ಒದಗಿಸಲು ಅವರು ಮುಂದಾಗಿದ್ದರು. ಅದನ್ನು ತಪ್ಪಾಗಿ ಅರ್ಥೈಸಿಕೊಂಡು, ವೈಯಕ್ತಿಕ ದ್ವೇಷದಿಂದ ನನ್ನ ತಂಗಿ ಈ ರೀತಿಯ ಷಡ್ಯಂತ್ರ ರೂಪಿಸಿದ್ದಾಳೆ,” ಎಂದು ಪ್ರಫುಲ್ಲಾ ಗಂಭೀರ ಆರೋಪ ಮಾಡಿದ್ದಾರೆ.

ಈ ಹೇಳಿಕೆ ಪ್ರಕರಣದ ದಿಕ್ಕನ್ನೇ ಬದಲಿಸುವಂತಾಗಿದ್ದು, ಈಗ ಇದು ಕೇವಲ ಪೊಲೀಸ್ ಅಧಿಕಾರಿಯ ವಿರುದ್ಧದ ಆರೋಪವಾಗಿರದೇ, ಕುಟುಂಬದ ಒಳಗಿನ ಸಂಘರ್ಷ ಮತ್ತು ವಿಶ್ವಾಸಾರ್ಹತೆಯ ಪ್ರಶ್ನೆಯಾಗಿ ಮಾರ್ಪಟ್ಟಿದೆ.

ಒಂದು ಕಡೆ ಮಹಿಳೆಯ ಗಂಭೀರ ಆರೋಪ, ಮತ್ತೊಂದು ಕಡೆ ಅವಳದೇ ಸಹೋದರಿಯ ಪ್ರತಿರೋಧ—ಇವುಗಳ ನಡುವೆ ಸತ್ಯ ಏನು ಎಂಬುದು ಈಗ ತನಿಖೆಯಲ್ಲೇ ಹೊರಬರಬೇಕಿದೆ. ಪೊಲೀಸ್ ಆಯುಕ್ತರ ಆದೇಶದಂತೆ ನಡೆಯುತ್ತಿರುವ ತನಿಖೆ ಇದೀಗ ಇನ್ನಷ್ಟು ಸೂಕ್ಷ್ಮತೆಯಿಂದ ಸಾಗಬೇಕಾದ ಪರಿಸ್ಥಿತಿ ಎದುರಾಗಿದೆ.

ಬೈಟ್ (ಪ್ರಫುಲ್ಲಾ):
“ನನ್ನ ತಂಗಿ ಮಾಡಿರುವ ಆರೋಪ ಸುಳ್ಳು. ಇನ್‌ಸ್ಪೆಕ್ಟರ್ ಒಳ್ಳೆಯವರು. ನಮ್ಮ ಕುಟುಂಬದ ಸಮಸ್ಯೆಯನ್ನು ಬಗೆಹರಿಸಲು ಅವರು ಪ್ರಯತ್ನಿಸಿದ್ದರು. ವೈಯಕ್ತಿಕ ಕಾರಣಗಳಿಂದ ನನ್ನ ತಂಗಿ ಈ ಆರೋಪ ಮಾಡಿದ್ದಾಳೆ.”

ಈ ಪ್ರಕರಣವು ಸಾರ್ವಜನಿಕರಲ್ಲಿ ಭಾರಿ ಚರ್ಚೆಗೆ ಕಾರಣವಾಗಿದ್ದು, ಅಂತಿಮವಾಗಿ ನ್ಯಾಯ ಯಾರ ಪಾಲಾಗುತ್ತದೆ ಎಂಬುದನ್ನು ಎಲ್ಲರೂ ಕಾದು ನೋಡುತ್ತಿದ್ದಾರೆ.

#BreakingNews#DakshinaKannada#FamilyDispute#InspectorCase#LatestNews#SexualHarassmentAllegation#ಮೂಡಬಿದಿರೆ

COMMENTS

Login with Gmail to comment

ಇನ್ನಷ್ಟು ಸುದ್ದಿ

PTCL ಕಾಯ್ದೆ ಉಲ್ಲಂಘಿಸಿದ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮಕ್ಕೆ ಒತ್ತಾಯ – ಕಂದಾಯ ಸಚಿವರಿಗೆ ದಲಿತ ನಾಯಕರ ಮನವಿ
ಮಕ್ಕಳಿಗೆ ಪ್ರಕೃತಿ ಮತ್ತು ಸಕಲ ಜೀವಿಗಳನ್ನು ಪ್ರೀತಿಸುವುದನ್ನು ಕಲಿಸಿ
TCS ಜಿಹಾದ್..ಗಂಭೀರ ತಿರುವು… ಟೀಮ್ ಲೀಡರ್ಸ್ ನಿಂದ subordinates ಗಳನ್ನ ಮಲೇಷ್ಯಾಕ್ಕೆ ಎತ್ತಂಗಡಿ ಮಾಡುವ ಪ್ಲಾನ್ ಇತ್ತಾ..?!ದಿನಕ್ಕೊಂದು ಮಹತ್ವದ ಸುಳಿವು…
ಒಂದೇ ಫ್ಲಾಟ್ ಇಬ್ಬಿಬ್ಬಿರ ಹೆಸರಲ್ಲಿ ..!ಡಬಲ್ ಡಾಕ್ಯುಮೆಂಟ್ ದಂಧೆ ಬಯಲು –ಕೋಟಿ ಕೋಟಿ ವಂಚನೆ ಮಾಡಿ ಆರೋಪಿ ಪರಾರಿ! ರಿಯಲ್ ಎಸ್ಟೇಟ್ ಶಾಕ್….
ಹುಬ್ಬಳ್ಳಿ ಲವ್ ಜಿಹಾದ್..!?ಮೂರು ವರ್ಷದ ಸಂಬಂಧ, friendship, ಫ್ಯಾಮಿಲಿ closeness-ಕ್ಷಣದಲ್ಲೇ ಬಾರಿ ಸಂಘರ್ಷ..!
ಮಂಗಳೂರು ಬಸ್‌ನಲ್ಲಿ ಗುಪ್ತಾಂಗ ತೋರಿಸಿ ಕಂಡಕ್ಟರ್ ವಿಕೃತ ವರ್ತನೆ: ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ಬಂಧನ
ಭಾರತದಲ್ಲಿ ಎಚ್‌ಪಿವಿ (HPV) ಲಸಿಕೆ ಕಾರ್ಯಕ್ರಮ ಹೆಣ್ಣೆತ್ತವರು ತಿಳಿದುಕೊಳ್ಳಲೇಬೇಕಾದ ವಿಚಾರ
ರಾಜಕೀಯ ಸುದ್ದಿ ಅಂದರೆ ಬೋರ್ ಅಂತ ಅನ್ನಿಸುವರಿಗೆ ಇದು ಒಂದು ಪಕ್ಕಾ ಎಂಟರ್‌ಟೈನ್‌ಮೆಂಟ್ ಎಪಿಸೋಡ್!!!
ಸುಬ್ರಹ್ಮಣ್ಯ ಅಭಿವೃದ್ಧಿ — ಸ್ಥಳೀಯರ ಜೊತೆಗೂಡಿ ಮಾತ್ರ ಸಾಧ್ಯ!”
ಅಂದು ಮುಖ್ಯ ಮಂತ್ರಿ, ಇಂದು ಪುಟ್ಟಪಾತ್ ವ್ಯಾಪಾರಿ!!
ಬಂಗಾಳದಲ್ಲಿ ಬಿಜೆಪಿಯ ಯುದ್ಧೋನ್ಮಾದ, ದೀದಿಯ ರಚ್ಚೆ…
ಜೂನ್ 22ರವರೆಗೆ ಭಾರತದಲ್ಲಿ ಟೆಲಿಗ್ರಾಂ ಬ್ಯಾನ್…!ಅಪ್ಲಿಕೇಶನ್ ಬ್ಯಾನ್ ಅಲ್ಲ, ವ್ಯವಸ್ಥೆ ಸರಿಪಡಿಸಿ! ಸರ್ಕಾರಕ್ಕೆ ನಿಸರ್ಗ ಅಧಿಕಾರಿಯ ಸಲಹೆ
8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಮಳೆ ಮಾಯ! ಪೆಸಿಫಿಕ್ ಚಂಡಮಾರುತದಿಂದ ಮುಂಗಾರಿಗೆ ಬ್ರೇಕ್ – ದೇಶದ 70-80% ಭಾಗದಲ್ಲಿ ಒಣಹವೆ
KSRTC ಬಸ್ ಪಲ್ಟಿಯಾಗಿ ಕಂದಕಕ್ಕೆ — ಐವರು ದುರ್ಮರಣ, ಹಲವರಿಗೆ ಗಂಭೀರ ಗಾಯ-ಜಹೀರಾಬಾದ್ ಸಮೀಪ ಭೀಕರ ರಸ್ತೆ ಅಪಘಾತ
“ಬೆಡ್‌ರೂಮ್ ರಾಜಕೀಯ”ಪಪ್ಪು ಯಾದವ್ ಹೇಳಿಕೆ ಸ್ಫೋಟಕ ಚರ್ಚೆ…!ಪಪ್ಪು ತಪ್ಪಾಗ್ ಮಾತಾಡಿದ್ದು ತಪ್ಪು 
ಮಂಗಳೂರು, ಮೈಸೂರಿಗೂ ‘Amazon Now’ 2,800 ಕೋಟಿ ಹೂಡಿಕೆ-
ಶಂಕರಾಚಾರ್ಯರ ಹೊಸ ಯೋಜನೆ ದೇಶವನ್ನೇ ಚರ್ಚೆಗೆ ತಳ್ಳಿದ ಕಾರಣ ಏನು?Go-LXಒಂದು ಕ್ಲಿಕ್‌ನಲ್ಲಿ ಹಸು ಮಾರಾಟ…
ಪೆಟ್ರೋಲ್–ಡೀಸೆಲ್ ಬೆಲೆ ಏರಿಕೆ ..! ಸಾರ್ವಜನಿಕ ಸಾರಿಗೆ ಬಳಸಿ ,ಇಂಧನ ಉಳಿಸಿ ,Work From Home ಮಾಡಿ ಎಂದಿದ್ದ ಮೋದಿ… ಈಗ ಅದರ ಅರ್ಥ ಸ್ಪಷ್ಟವಾಗುತ್ತಿದೆಯೇ?
ಕನ್ನಡ ಫಿಲಂ ಇಂಡಸ್ಟ್ರಿ ಮರ್ಯಾದೆ “ಒಂದು ಬಾಟ್ಲು ಸಾರಾಯಿ, ಒಂದು ಚಮಚ ಉಪ್ಪಿನ ಕಾಯಿಗೆ”ಆನ್‌ಲೈನ್‌ನಲ್ಲಿ (Online) ಹರಾಜು..!
ರಸ್ತೆಯ ವಿಚಾರಕ್ಕೆ ನೆರೆಹೊರೆಯರ ನಡುವೆ ಬಾರಿ ಗಲಾಟೆ !
ಕರಾವಳಿಯಲ್ಲಿ ವರುಣನ ಆರ್ಭಟ ಮುಂದುವರಿಕೆ: ಜುಲೈ 2ಕ್ಕೆ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್, ಏಳು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ಪುತ್ತೂರಿನ ಜಾತ್ರೆಯಲ್ಲಿ ಸುಡುಮದ್ದು ದುರಂತ-ಹಲವರಿಗೆ ಗಾಯ..
🔥 ಮಧ್ಯಪ್ರಾಚ್ಯ ಯುದ್ಧ: 17ನೇ ದಿನಕ್ಕೆ- ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ!
ಪಿಸ್ತೂಲ್ ತೋರಿಸಿ ಬೆದರಿಸಿ ಪರಾರಿಯಾಗಿದ್ದ ಯುವಕ ಬಂಧನ
ಗಂಡನ ಮನೆಯಿಂದ ಯುವತಿಯನ್ನು ಎಳೆದೊಯ್ದರು
ಸರ್ಕಾರಿ ಸ್ವಾಮ್ಯದ ಬೇಲಿ ಕಂಬ ಕಿತ್ತಾಕಲು DYFI ಕುಮ್ಮಕ್ಕು….!
 “ತಪ್ಪು ಮಾಡಿದ್ರೆ ಕೈ-ಕಾಲು ಕತ್ತರಿಸ್ಬೇಕು, ಆಗಲೇ ಕಾನೂನಿನ ಭಯ ಬರೋದು! “ಗಲ್ಫ್ ದೇಶಗಳ ಮಾದರಿ ಶಿಕ್ಷೆ ಜಾರಿಯಾಗ್ಬೇಕು ಅನ್ನೋ ನ್ಯಾಯಮೂರ್ತಿಗಳ ನಿಲುವಿಗೆ ಇಡೀ ರಾಜ್ಯವೇ ಜೈ ಅಂತಿದೆ!
ನಿಮ್ಮ ಮಾತು ಕೇಳಿ ರಾಜೀನಾಮೆ ನೀಡಿದ್ದೇನೆ. ಈಗ ನನ್ನ ಬೇಡಿಕೆ ಈಡೇರಿಸುವುದು ನಿಮ್ಮ ಸರದಿ  ಎಂದ ಸಿದ್ದರಾಮಯ್ಯ
ಬೆಳಗ್ಗೆಯೇ ಲೋಕಾಯುಕ್ತ ಬಿಗ್ ಬ್ಲಾಸ್ಟ್!54 ಕಡೆ ಏಕಕಾಲದಲ್ಲಿ ರೇಡ್… ಚಿನ್ನ, ನಗದು, ಮನೆ, ಜಮೀನುಗಳ ಮಹಾಪರ್ವತ ಪತ್ತೆ!