📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಮೂಡಬಿದಿರೆ ಇನ್‌ಸ್ಪೆಕ್ಟರ್ ಪ್ರಕರಣಕ್ಕೆ ಟ್ವಿಸ್ಟ್: ಆರೋಪ ಮಾಡಿದ ಮಹಿಳೆಯ ವಿರುದ್ಧವೇ ಸಹೋದರಿಯ ಬಾಂಬ್!

ಮಂಗಳೂರು | ದಕ್ಷಿಣ ಕನ್ನಡ

ಪ್ರೆಸ್ ಮೀಟ್‌ನಲ್ಲಿ ಸಹೋದರಿಯ ಸ್ಪೋಟಕ ಹೇಳಿಕೆ”ಮೂಡಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ. ವಿರುದ್ಧ ಕೇಳಿಬಂದಿದ್ದ ಲೈಂಗಿಕ ಕಿರುಕುಳದ ಗಂಭೀರ ಆರೋಪ ಇದೀಗ ಹೊಸ ತಿರುವು ಪಡೆದಿದ್ದು, ದೂರು ನೀಡಿದ ಮಹಿಳೆಯ ಕುಟುಂಬದಲ್ಲೇ ಭಿನ್ನಾಭಿಪ್ರಾಯ ಬಹಿರಂಗವಾಗಿದೆ.

ಈ ವಿವಾದದ ಮಧ್ಯೆ, ಆರೋಪ ಮಾಡಿದ ಮಹಿಳೆಯ ಸಹೋದರಿ ಪ್ರಫುಲ್ಲಾ ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ದಿಢೀರ್ ಸುದ್ದಿಗೋಷ್ಠಿ ನಡೆಸಿ, ಪ್ರಕರಣಕ್ಕೆ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. “ನನ್ನ ತಂಗಿ ಮಾಡಿರುವ ಆರೋಪ ಸಂಪೂರ್ಣ ಸುಳ್ಳು. ಅವಳು ಯಾವುದೇ ಸ್ಥಿರ ಉದ್ಯೋಗವಿಲ್ಲದೆ ವೈಶ್ಯಾವಾಟಿಕೆಯಲ್ಲಿ ತೊಡಗಿದ್ದಾಳೆ. ಆದರೂ, ಸುಮಾರು 75 ಲಕ್ಷ ರೂ. ಮೌಲ್ಯದ ಮನೆ ಕಟ್ಟಿರುವುದು ಅನುಮಾನಾಸ್ಪದ,” ಎಂದು ಹೇಳಿದ್ದಾರೆ.

ಇದಲ್ಲದೆ, “ಮೂಡಬಿದಿರೆ ಇನ್‌ಸ್ಪೆಕ್ಟರ್ ಒಬ್ಬ ಒಳ್ಳೆಯ ಅಧಿಕಾರಿ. ನಮ್ಮ ಕುಟುಂಬದ ಒಳಗಿನ ಸಮಸ್ಯೆಗೆ ನ್ಯಾಯ ಒದಗಿಸಲು ಅವರು ಮುಂದಾಗಿದ್ದರು. ಅದನ್ನು ತಪ್ಪಾಗಿ ಅರ್ಥೈಸಿಕೊಂಡು, ವೈಯಕ್ತಿಕ ದ್ವೇಷದಿಂದ ನನ್ನ ತಂಗಿ ಈ ರೀತಿಯ ಷಡ್ಯಂತ್ರ ರೂಪಿಸಿದ್ದಾಳೆ,” ಎಂದು ಪ್ರಫುಲ್ಲಾ ಗಂಭೀರ ಆರೋಪ ಮಾಡಿದ್ದಾರೆ.

ಈ ಹೇಳಿಕೆ ಪ್ರಕರಣದ ದಿಕ್ಕನ್ನೇ ಬದಲಿಸುವಂತಾಗಿದ್ದು, ಈಗ ಇದು ಕೇವಲ ಪೊಲೀಸ್ ಅಧಿಕಾರಿಯ ವಿರುದ್ಧದ ಆರೋಪವಾಗಿರದೇ, ಕುಟುಂಬದ ಒಳಗಿನ ಸಂಘರ್ಷ ಮತ್ತು ವಿಶ್ವಾಸಾರ್ಹತೆಯ ಪ್ರಶ್ನೆಯಾಗಿ ಮಾರ್ಪಟ್ಟಿದೆ.

ಒಂದು ಕಡೆ ಮಹಿಳೆಯ ಗಂಭೀರ ಆರೋಪ, ಮತ್ತೊಂದು ಕಡೆ ಅವಳದೇ ಸಹೋದರಿಯ ಪ್ರತಿರೋಧ—ಇವುಗಳ ನಡುವೆ ಸತ್ಯ ಏನು ಎಂಬುದು ಈಗ ತನಿಖೆಯಲ್ಲೇ ಹೊರಬರಬೇಕಿದೆ. ಪೊಲೀಸ್ ಆಯುಕ್ತರ ಆದೇಶದಂತೆ ನಡೆಯುತ್ತಿರುವ ತನಿಖೆ ಇದೀಗ ಇನ್ನಷ್ಟು ಸೂಕ್ಷ್ಮತೆಯಿಂದ ಸಾಗಬೇಕಾದ ಪರಿಸ್ಥಿತಿ ಎದುರಾಗಿದೆ.

ಬೈಟ್ (ಪ್ರಫುಲ್ಲಾ):
“ನನ್ನ ತಂಗಿ ಮಾಡಿರುವ ಆರೋಪ ಸುಳ್ಳು. ಇನ್‌ಸ್ಪೆಕ್ಟರ್ ಒಳ್ಳೆಯವರು. ನಮ್ಮ ಕುಟುಂಬದ ಸಮಸ್ಯೆಯನ್ನು ಬಗೆಹರಿಸಲು ಅವರು ಪ್ರಯತ್ನಿಸಿದ್ದರು. ವೈಯಕ್ತಿಕ ಕಾರಣಗಳಿಂದ ನನ್ನ ತಂಗಿ ಈ ಆರೋಪ ಮಾಡಿದ್ದಾಳೆ.”

ಈ ಪ್ರಕರಣವು ಸಾರ್ವಜನಿಕರಲ್ಲಿ ಭಾರಿ ಚರ್ಚೆಗೆ ಕಾರಣವಾಗಿದ್ದು, ಅಂತಿಮವಾಗಿ ನ್ಯಾಯ ಯಾರ ಪಾಲಾಗುತ್ತದೆ ಎಂಬುದನ್ನು ಎಲ್ಲರೂ ಕಾದು ನೋಡುತ್ತಿದ್ದಾರೆ.

#BreakingNews#DakshinaKannada#FamilyDispute#InspectorCase#LatestNews#SexualHarassmentAllegation#ಮೂಡಬಿದಿರೆ

COMMENTS

Login with Gmail to comment

ಇನ್ನಷ್ಟು ಸುದ್ದಿ

ಆನ್ ಲೈನ್ ವಂಚನೆ ಶಿರ್ವದ ಯುವತಿಗೆ ಲಕ್ಷ ಲಕ್ಷ ಉಂಡೆನಾಮ… ಬ್ಯಾಂಕ್ ನಿಯಮ ವಂಚಕರಿಗೆ  ಸಹಕಾರಿ?
ಬೆಳ್ತಂಗಡಿಯಲ್ಲಿ ಮಧುಮಗ ಜೈಲಿಗೆ-ಅಪ್ರಾಪ್ತೆಯ ಮೇಲೆ ದೌರ್ಜನ್ಯ – ಇಬ್ಬರು ಆರೋಪಿಗಳ ಬಂಧನ..!
ನಾರ್ವೇ ಪತ್ರಕರ್ತರಿಗೆ ತಿರುಗೇಟು: “ಭಾರತದ ವಾಸ್ತವತೆ ಅರಿವಿಲ್ಲ” ಎಂದ MEA ಕಾರ್ಯದರ್ಶಿ ಸಿಬಿ ಜಾರ್ಜ್…
ಮೇ 22 ಮಂಗಳೂರು ಎಂದಿಗೂ ಮರೆಯದ ದಿನ…
ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆಯ ಪೋಸ್ಟ್ ಗಳನ್ನು ಹಾಕಿದ ಆರೋಪಿಯ ಬಂಧನ
ಕಣ್ಣೀರಾದ ಕಣ್ಣಾಲಿಗಳು ಹೊಟ್ಟೆ ತುಂಬಾ ಊಟ ಮಾಡಿ ನಿದ್ರಿಸುವಂತೆ ಮಾಡುವ  “ಕಾರುಣ್ಯ ಸೇವಾಕ್ಕೀಗ 3000 ದಿನಗಳು…!!!”
ಅಮೆರಿಕ–ಇಸ್ರೇಲ್ ದಾಳಿ ಬಳಿಕ ಇರಾನ್‌ನಲ್ಲಿ ಉದ್ವಿಗ್ನತೆ ತಾರಕಕ್ಕೆ
ಆಮಾದ್ಮಿ ಪಕ್ಷದ ಏಳು ಸಂಸದರು ಬಿಜೆಪಿಯ ತೆಕ್ಕೆಗೆ ರೈಟೋ?  ರಾಂಗೋ?
ಪರಿಸರ ನಾಶಕ್ಕಾಗಿ ಸುಳ್ಳು ಸರ್ಟಿಫಿಕೇಟ್ ರೆಡಿಮಾಡಿಕೊಂಡು ಒಂದು ಊರನ್ನೇ ಭಯದಲ್ಲಿರಿಸಿದ ಉಡುಪಿ ಜಿಲ್ಲಾ ಆಡಳಿತ
ಕಾಂಗ್ರೆಸ್ ಮೇಲಿನ ಕೋಪ ತಣ್ಣಗಾಗಿಲ್ಲ….. ಜನಪರ ಯೋಜನೆ ಮುಂದುವರೆಸಲು ಸ್ಟಾಲಿನ್ ಮನವಿ
“ಧುರಂಧರ್” ನಟ ರಣವೀರ್ ಸಿಂಗ್‌ ವಿರುದ್ಧ ಇಡೀ ಬಾಲಿವುಡ್ ಒಕ್ಕೂಟವೇ ತಿರುಗಿಬಿದ್ದಿದ್ದೇಕೆ? shocking ₹45 ಕೋಟಿ ವಿವಾದದ ಅಸಲಿ ಕಥೆ ಇಲ್ಲಿದೆ!
ಮಂಗಳೂರು ಇನ್ಸ್ಟಾಮಾರ್ಟ ಕುಂಟಿಕಾನದಲ್ಲಿ ಲಿಫ್ಟ್ ದುರಂತ: ಡೆಲಿವರಿ ಸಿಬ್ಬಂದಿ ದುರ್ಮರಣ
ಇಂದು ಆನ್‌ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಆಕ್ರೋಶ!ದಕ್ಷಿಣ ಕನ್ನಡದಲ್ಲಿ 1100 ಮೆಡಿಕಲ್ ಶಾಪ್ ಬಂದ್!
ಮಗಳ ಎಡವಟ್ಟಿಗೆ ಪಿಣರಾಯಿ ಬಲಿ…..ಕೇರಳ ರಾಜಕಾರಣದಲ್ಲಿ ಹೈವೋಲ್ಟೇಜ್ ಭೂಕಂಪ
ಒಂದು ದೇಶವನ್ನೇ ಮಟ್ಟಾಶ್ ಮಾಡುವಷ್ಟು ನ್ಯೂಕ್ಲಿಯರ್ ಪವರ್ stock ಇರಾನ್ನಲ್ಲಿ ಇದ್ಯಾ !?
ಭಾರತದ ಹಡಗಿಗೆ ಗ್ರೀನ್ ಸಿಗ್ನಲ್ ನೀಡಿದ ಇರಾನ್ 
ಪುತ್ತೂರು ಗ್ರಾಮಾಂತರದಲ್ಲಿ ಭೂ ವಿವಾದದ ಗಲಾಟೆ ತೀವ್ರತೆ: ಪರಸ್ಪರ ಹಲ್ಲೆ – ಎರಡು ಪ್ರಕರಣಗಳು ದಾಖಲು
ಮಂತ್ರಾಲಯದ ಮಠದ ಹೆಸರಲ್ಲಿ 3 ಲಕ್ಷ ಆಸೆ ತೋರಿಸಿ ವಂಚನೆ..!
Political Heatwave 2026:ದಕ್ಷಿಣದಲ್ಲಿ ಅಧಿಕಾರ ಆಟ, ಅಸ್ಸಾಂನಲ್ಲಿ ಅಬ್ಬರ..!
80 ಲಕ್ಷ ವಂಚನೆ ಪ್ರಕರಣ ದೂರು ದಾಖಲು
ಬಿಜೆಪಿ–ಕಾಂಗ್ರೆಸ್ ಕಾರ್ಯಕರ್ತರ ನಡುವೆ ತೀವ್ರ ವಾಕ್ಸಮರ, ಬಿಗುವಿನ ವಾತಾವರಣ
ಥಾರ್ ಕಾರ್ ನಲ್ಲಿ ಬಂದು ದೇವಸ್ಥಾನದಲ್ಲಿ ವಿಕೃತಿ ಮೆರೆದ ಕಿಡಿಗೇಡಿ!
ಘರ್ ವಾಪ್ಸಿ ಯಾದ ಯೋಗೇಶ್ ಶೆಟ್ಟಿ ಜೆಪ್ಪು
ಒಂದು ಕ್ಷಣದಲ್ಲಿ ನಗು, ಇನ್ನೊಂದು ಕ್ಷಣದಲ್ಲಿ ನಿಶ್ಶಬ್ದ ಕಣ್ಣೀರು…
ಅಮೇರಿಕಾ ಅಧ್ಯಕ್ಷರ ಮೇಲೆ ಎರಡನೆಯ ಬಾರಿ ಗುಂಡಿನ ದಾಳಿ
ವಿಜಯ್ ತಳಪತಿ ಸಂಗೀತಾ ವಿಚ್ಛೇದನ ವಿಚಾರ: 27 ವರ್ಷದ ದಾಂಪತ್ಯಕ್ಕೆ ತೆರೆ? ₹250 ಕೋಟಿ ಸೆಟ್ಲ್‌ಮೆಂಟ್ ಚರ್ಚೆ!!
ಉದ್ಯಮಿ, ಕಾಲೇಜ್ topper,  ಕೋಟ್ಯದೀಶರೇ…ಕಠಿಣ ಜೈನ ಸನ್ಯಾಸದತ್ತ…!
60 ದಿನಗಳ ಸ್ಟಾಕ್ – ಭಾರತಕ್ಕೆ ಎಲ್‌ಪಿಜಿ ಚಿಂತೆ ಇಲ್ಲ!
ಯಕ್ಷಗಾನದಲ್ಲಿ ಶಿಳ್ಳೆ ಹಾಕ್ಲಿಕ್ಕೆ ಪರ್ಮಿಶನ್ ಬೇಕಾ..…!?