📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಮೂಡಬಿದಿರೆ ಇನ್‌ಸ್ಪೆಕ್ಟರ್ ಪ್ರಕರಣಕ್ಕೆ ಟ್ವಿಸ್ಟ್: ಆರೋಪ ಮಾಡಿದ ಮಹಿಳೆಯ ವಿರುದ್ಧವೇ ಸಹೋದರಿಯ ಬಾಂಬ್!

ಮಂಗಳೂರು | ದಕ್ಷಿಣ ಕನ್ನಡ

ಪ್ರೆಸ್ ಮೀಟ್‌ನಲ್ಲಿ ಸಹೋದರಿಯ ಸ್ಪೋಟಕ ಹೇಳಿಕೆ”ಮೂಡಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ. ವಿರುದ್ಧ ಕೇಳಿಬಂದಿದ್ದ ಲೈಂಗಿಕ ಕಿರುಕುಳದ ಗಂಭೀರ ಆರೋಪ ಇದೀಗ ಹೊಸ ತಿರುವು ಪಡೆದಿದ್ದು, ದೂರು ನೀಡಿದ ಮಹಿಳೆಯ ಕುಟುಂಬದಲ್ಲೇ ಭಿನ್ನಾಭಿಪ್ರಾಯ ಬಹಿರಂಗವಾಗಿದೆ.

ಈ ವಿವಾದದ ಮಧ್ಯೆ, ಆರೋಪ ಮಾಡಿದ ಮಹಿಳೆಯ ಸಹೋದರಿ ಪ್ರಫುಲ್ಲಾ ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ದಿಢೀರ್ ಸುದ್ದಿಗೋಷ್ಠಿ ನಡೆಸಿ, ಪ್ರಕರಣಕ್ಕೆ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. “ನನ್ನ ತಂಗಿ ಮಾಡಿರುವ ಆರೋಪ ಸಂಪೂರ್ಣ ಸುಳ್ಳು. ಅವಳು ಯಾವುದೇ ಸ್ಥಿರ ಉದ್ಯೋಗವಿಲ್ಲದೆ ವೈಶ್ಯಾವಾಟಿಕೆಯಲ್ಲಿ ತೊಡಗಿದ್ದಾಳೆ. ಆದರೂ, ಸುಮಾರು 75 ಲಕ್ಷ ರೂ. ಮೌಲ್ಯದ ಮನೆ ಕಟ್ಟಿರುವುದು ಅನುಮಾನಾಸ್ಪದ,” ಎಂದು ಹೇಳಿದ್ದಾರೆ.

ಇದಲ್ಲದೆ, “ಮೂಡಬಿದಿರೆ ಇನ್‌ಸ್ಪೆಕ್ಟರ್ ಒಬ್ಬ ಒಳ್ಳೆಯ ಅಧಿಕಾರಿ. ನಮ್ಮ ಕುಟುಂಬದ ಒಳಗಿನ ಸಮಸ್ಯೆಗೆ ನ್ಯಾಯ ಒದಗಿಸಲು ಅವರು ಮುಂದಾಗಿದ್ದರು. ಅದನ್ನು ತಪ್ಪಾಗಿ ಅರ್ಥೈಸಿಕೊಂಡು, ವೈಯಕ್ತಿಕ ದ್ವೇಷದಿಂದ ನನ್ನ ತಂಗಿ ಈ ರೀತಿಯ ಷಡ್ಯಂತ್ರ ರೂಪಿಸಿದ್ದಾಳೆ,” ಎಂದು ಪ್ರಫುಲ್ಲಾ ಗಂಭೀರ ಆರೋಪ ಮಾಡಿದ್ದಾರೆ.

ಈ ಹೇಳಿಕೆ ಪ್ರಕರಣದ ದಿಕ್ಕನ್ನೇ ಬದಲಿಸುವಂತಾಗಿದ್ದು, ಈಗ ಇದು ಕೇವಲ ಪೊಲೀಸ್ ಅಧಿಕಾರಿಯ ವಿರುದ್ಧದ ಆರೋಪವಾಗಿರದೇ, ಕುಟುಂಬದ ಒಳಗಿನ ಸಂಘರ್ಷ ಮತ್ತು ವಿಶ್ವಾಸಾರ್ಹತೆಯ ಪ್ರಶ್ನೆಯಾಗಿ ಮಾರ್ಪಟ್ಟಿದೆ.

ಒಂದು ಕಡೆ ಮಹಿಳೆಯ ಗಂಭೀರ ಆರೋಪ, ಮತ್ತೊಂದು ಕಡೆ ಅವಳದೇ ಸಹೋದರಿಯ ಪ್ರತಿರೋಧ—ಇವುಗಳ ನಡುವೆ ಸತ್ಯ ಏನು ಎಂಬುದು ಈಗ ತನಿಖೆಯಲ್ಲೇ ಹೊರಬರಬೇಕಿದೆ. ಪೊಲೀಸ್ ಆಯುಕ್ತರ ಆದೇಶದಂತೆ ನಡೆಯುತ್ತಿರುವ ತನಿಖೆ ಇದೀಗ ಇನ್ನಷ್ಟು ಸೂಕ್ಷ್ಮತೆಯಿಂದ ಸಾಗಬೇಕಾದ ಪರಿಸ್ಥಿತಿ ಎದುರಾಗಿದೆ.

ಬೈಟ್ (ಪ್ರಫುಲ್ಲಾ):
“ನನ್ನ ತಂಗಿ ಮಾಡಿರುವ ಆರೋಪ ಸುಳ್ಳು. ಇನ್‌ಸ್ಪೆಕ್ಟರ್ ಒಳ್ಳೆಯವರು. ನಮ್ಮ ಕುಟುಂಬದ ಸಮಸ್ಯೆಯನ್ನು ಬಗೆಹರಿಸಲು ಅವರು ಪ್ರಯತ್ನಿಸಿದ್ದರು. ವೈಯಕ್ತಿಕ ಕಾರಣಗಳಿಂದ ನನ್ನ ತಂಗಿ ಈ ಆರೋಪ ಮಾಡಿದ್ದಾಳೆ.”

ಈ ಪ್ರಕರಣವು ಸಾರ್ವಜನಿಕರಲ್ಲಿ ಭಾರಿ ಚರ್ಚೆಗೆ ಕಾರಣವಾಗಿದ್ದು, ಅಂತಿಮವಾಗಿ ನ್ಯಾಯ ಯಾರ ಪಾಲಾಗುತ್ತದೆ ಎಂಬುದನ್ನು ಎಲ್ಲರೂ ಕಾದು ನೋಡುತ್ತಿದ್ದಾರೆ.

#BreakingNews#DakshinaKannada#FamilyDispute#InspectorCase#LatestNews#SexualHarassmentAllegation#ಮೂಡಬಿದಿರೆ

COMMENTS

Login with Gmail to comment

ಇನ್ನಷ್ಟು ಸುದ್ದಿ

ಸೂರತ್‌ನಲ್ಲಿ ಮಳೆಯ ರೌದ್ರನರ್ತನ: 200ಕ್ಕೂ ಹೆಚ್ಚು ಅಂಗಡಿಗಳಿಗೆ ನೀರು ನುಗ್ಗಿ ₹200 ಕೋಟಿ ನಷ್ಟ – ಕಣ್ಣೀರಿನಲ್ಲಿ ಮುಳುಗಿದ ವ್ಯಾಪಾರಿಗಳು
ಹೊರಗೆ ಕ್ಯಾಂಟೀನ್…ಆದ್ರೆ ಒಳಗೆ ನಡೆಯುತ್ತಿತ್ತು ಬೇರೆದ್ದೇ ಆಟ..!ಬಯಲಾಯ್ತು ಬೆಚ್ಚಿಬೀಳಿಸುವ ದಂಧೆ. 
ದುರಂತ ಸಂಭವಿಸುವ ಮುನ್ನ ಮೆಸ್ಕಾಂ ಎಚ್ಚೆತ್ತುಕೊಳ್ಳುವುದೇ? ಮಂಗಳೂರಿನ PVS ರಸ್ತೆಯಲ್ಲೇ ಮೆಸ್ಕಾಂ ಟ್ರಾನ್ಸ್‌ಫಾರ್ಮರ್ ಅಡಿಯಲ್ಲೇ ಸುತ್ತಲೂ ಒಣ ಕಸದ ಪ್ಲಾಸ್ಟಿಕ್ ಟಾರ್ಪಾಲಿನ್ ಮತ್ತು ಬಾಕ್ಸ್ ರಾಶಿ!
🚨4 ವರ್ಷಗಳಿಂದ ಪೊಲೀಸರಿಗೆ ತಪ್ಪಿಸಿಕೊಂಡಿದ್ದ 17 ಪ್ರಕರಣಗಳ ಆರೋಪಿಯ ಡ್ರಾಮಾಟಿಕ್ ಬಂಧನ!
ಚಾರ್ಮಾಡಿ ಘಾಟಿಯಲ್ಲಿ ಬಂಡೆ ಕುಸಿತ; ಅದೃಷ್ಟವಶಾತ್ ಅಪಾಯ ತಪ್ಪಿತು
ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹಿಗ್ಗಾಮುಗ್ಗ ಜಾಡಿಸಿದ ಹೆಚ್ ವಿಶ್ವನಾಥ್
ಕುಡಿತದ ಅಮಲಿನಲ್ಲಿ ಹೆತ್ತ ತಾಯಿಯನ್ನೇ ಕೊಂದ ಮಗಳು, ಮೊಮ್ಮಗ: ಕೆಂಗೇರಿಯಲ್ಲಿ ಕರುಳು ಹರಿಯುವ ಕೃತ್ಯ!
ಮಾಜಿ ಸಚಿವರಿಂದ ಮಂಗಳೂರು ವೈಭವಕ್ಕೆ ಬೃಹತ್ ಕೊಡುಗೆ
ಗಂಡನಿಗೆ ಚಿನ್ನ ಕಳ್ಳತನದ ಪಿಎಚ್‌ಡಿ, ಹೆಂಡತಿಗೆ ಮಾರ್ಕೆಟಿಂಗ್ ಜಾಣ್ಮೆ…ಆಹಾ ಒಮ್ಮೆ ಓದಿ ಎಂಥಾ ಜೋಡಿ..
ಪಿಸ್ತೂಲ್ ತೋರಿಸಿ ಬೆದರಿಸಿ ಪರಾರಿಯಾಗಿದ್ದ ಯುವಕ ಬಂಧನ
ಬ್ಯಾರಿ ಸಾಹಿತ್ಯ ಸಮ್ಮೇಳನಕ್ಕೆ ಸಹಕರಿಸಲು ಮನವಿ
ಕರ್ನಾಟಕ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: 123 ಕೇಂದ್ರಗಳ ಪಾಸ್ ವಿತರಣ –ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿದೆ, ಬಸ್‌ಗಳ ಸಂಖ್ಯೆಯೂ ಹೆಚ್ಚುತ್ತದೆಯೇ?
ಶಾಲೆ ಹತ್ತಿರವಿದ್ದರೂ,ಮಕ್ಕಳ ಹೆಲ್ಮೆಟ್ ನಿರ್ಲಕ್ಷಿಸಬೇಡಿ!4 ವರ್ಷದೊಳಗಿನ ಮಗುಗೂ ಹೆಲ್ಮೆಟ್ ಕಡ್ಡಾಯ!
ಗ್ರಾಮೀಣ ವಿದ್ಯಾರ್ಥಿಗಳಿಗೂ AI ಶಿಕ್ಷಣ: ಕರ್ನಾಟಕ ಸರ್ಕಾರದ ಐತಿಹಾಸಿಕ ಹೆಜ್ಜೆ..50 ಸರ್ಕಾರಿ ಕಾಲೇಜುಗಳಲ್ಲಿ AI ಲ್ಯಾಬ್‌ಗಳು!
ಸಂಸತ್ ವಿಶೇಷ ಅಧಿವೇಶನ: ಮಹಿಳಾ ಮೀಸಲಾತಿಗೆ ಒಗ್ಗಟ್ಟು, ಡಿಲಿಮಿಟೇಶನ್ ಮೇಲೆ ಭಾರಿ ವಿವಾದ – ಕರ್ನಾಟಕಕ್ಕೂ ಪರಿಣಾಮದ ಚರ್ಚೆ 🔥
ಹೆಡ್‌ಲೈಟ್ ಇಲ್ಲ… ಮೊಬೈಲ್ ಟಾರ್ಚ್‌ನಲ್ಲೇ ಓಡಿದ ಸರ್ಕಾರಿ ಬಸ್!
ಪ್ರತಿಭಟನಾ ಶಕ್ತಿಯನ್ನೇ ಕಳೆದುಕೊಂಡ ಭಾರತ… ನಿಶ್ಯಕ್ತವಾದ ವಿರೋಧ ಪಕ್ಷಗಳು
ಪಹಲ್ಗಾಂಮ್ ದಾಳಿಯ ಒಂದು ವರ್ಷ: ಇನ್ನೂ ಮುಗಿಯದ ನೋವು, ಮರೆಯಲಾಗದ ನೆನಪುಗಳು
ಹೋಟೆಲ್ ಉದ್ಯಮ ಉಳಿಸಲು ಜಿಎಸ್‌ಟಿ ಕಡಿತ ಅಗತ್ಯ-ಕರ್ನಾಟಕ ಹೋಟೆಲ್ ಸಂಘದ ಆಗ್ರಹ
ಕಾಂಗ್ರೆಸ್ ಹೈಕಮಾಂಡ್ ಖಡಕ್ ವಾರ್ನಿಂಗ್: ಸ್ವಾಮೀಜಿ, ಧಾರ್ಮಿಕ ಮುಖಂಡರ ಶಿಫಾರಸುಗಳಿಗೆ ಸಿಗಲ್ಲ ಮನ್ನಣೆ!
ಘರ್ಷಣೆಗಳ ನಡುವೆಯೂ ಜನರ ಮತದ ಹಕ್ಕು ಅಚಲ…ಸಂಕ್ಷಿಪ್ತ ನೋಟ..
ಲಕ್ಷ ಫೀಸ್ ಕೊಟ್ಟರೂ ಸಿಗದ ಶಿಕ್ಷಣ ಇಲ್ಲಿ ಉಚಿತ! 15 ಮಕ್ಕಳ ಪುಟ್ಟ ಶಾಲೆಯ ದೊಡ್ಡ ಸಾಧನೆ
“ಬರ್ಕಾಸ್ತು ಘಟಕಕ್ಕೆ ‘ಬೋಗಸ್ ನಾಯಕತ್ವ’ – ಕರವೇ ಮಹಿಳಾ ಘಟಕದಲ್ಲಿ ಭಿನ್ನಮತ ಸ್ಫೋಟ!”
ಹಳಿಯಾಳದಲ್ಲಿ ನೀರಿನ ಹಾಹಾಕಾರ… ಮಾರ್ಚ್ 16ರಂದು ಬೃಹತ್ ಪ್ರತಿಭಟನೆ 
AAP ಸದ್ದು ಮಂಗಳೂರಲ್ಲೂ! ಜನರ ಸಮಸ್ಯೆಗೆ ನೇರ ಹೋರಾಟ
ಸಾಮಾಜಿಕ‌ ಕಾರ್ಯಕರ್ತರಿಗೆ ಹಾಗೂ ನಗರ ಸಭೆ ಪೌರಯುಕ್ತರಿಗೆ ಬಹಿರಂಗ ಸವಾಲು.ಶ್ರೀಮಂತರ ಅಕ್ರಮಗಳ ಬಗ್ಗೆ ಮೌನವೇಕೆ.‌‌?
MLC ಐವನ್ ಡಿಸೋಜಾರಿಂದ ಕಾಮಗಾರಿ ಸ್ಥಳ ಪರಿಶೀಲನೆ
ಡ್ರೋನ್ ದಾಳಿ, ಪ್ರತಿದಾಳಿ ಮಧ್ಯಪ್ರಾಚ್ಯದಲ್ಲಿ ಹೈ-ವೋಲ್ಟೇಜ್ ಡ್ರಾಮಾ!
ಇರಾನ್–ಇಸ್ರೇಲ್ ಯುದ್ಧ: ಯುದ್ಧ ನಿಲ್ಲಿಸಲು ಇರಾನ್‌ನ 3 ಷರತ್ತುಗಳು… ಅಮೇರಿಕಾ ಕಂಗಾಲು
ಕಾಂಗ್ರೆಸ್ ದೇಶದ ಹಿತಾಸಕ್ತಿಯ ವಿರುದ್ಧ ನಡೆದುಕೊಳ್ಳುತ್ತಿದೆ- ಪ್ರಧಾನಿ ಮೋದಿ ಆರೋಪ