📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಮೂಡಬಿದ್ರೆ: ಅಕ್ರಮ ಜಾನುವಾರು ಸಾಗಾಟ -ಆರೋಪಿಗಳ ಬಂಧನ, ವಾಹನ ಹಾಗೂ ಕರು ವಶಕ್ಕೆ.

    ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ 14/05/2026 ರಂದು ಬೆಳಿಗ್ಗೆ ಸುಮಾರು 07.00 ಗಂಟೆಗೆ PSI ಕೃಷ್ಣಪ್ಪ ಹಾಗೂ ಸಿಬ್ಬಂದಿಗಳು ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ, ಬೆಳುವಾಯಿ ಕಡೆಯಿಂದ ಮಾರ್ನಾಡು–ಅಳಿಯೂರು ಕಡೆಗೆ ಮಾರುತಿ ಬ್ರೀಜಾ ಕಾರಿನಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ದೊರೆತಿತ್ತು.

    ಈ ಹಿನ್ನೆಲೆಯಲ್ಲಿ ಸಿಬ್ಬಂದಿಗಳು ಮೂಡಬಿದ್ರೆ ತಾಲೂಕು ಪಡುಮಾರ್ನಾಡು ಗ್ರಾಮದ ಗುಂಡುಕಲ್ಲು ಕ್ರಾಸ್ ಬಳಿ ತಪಾಸಣೆ ನಡೆಸುತ್ತಿದ್ದಾಗ, ಬೆಳಿಗ್ಗೆ ಸುಮಾರು 07.30 ಗಂಟೆಗೆ ಬೆಳುವಾಯಿ ಕಡೆಯಿಂದ KA19MK4265 ಸಂಖ್ಯೆಯ ಬೂದು ಬಣ್ಣದ ಮಾರುತಿ ಬ್ರೀಜಾ ಕಾರು ಬಂದಿದ್ದು, ನಿಲ್ಲಿಸಲು ಸೂಚಿಸಿದರೂ ನಿಲ್ಲಿಸದೆ ಮುಂದಕ್ಕೆ ಸಾಗಿಸಿದೆ. ನಂತರ ಪೊಲೀಸರು ಬೆನ್ನಟ್ಟಿದಾಗ ವಾಹನವು ಗುಂಡುಕಲ್ಲು 5 ಸೈಂಟ್ಸ್ ರಸ್ತೆಗೆ ತಿರುಗಿ ಸಾಹುಲ್ ಹಮೀದ್ ಅವರ ಮನೆ ಕಂಪೌಂಡ್ ಒಳಗೆ ನಿಲ್ಲಿಸಲಾಗಿದೆ.

    ವಾಹನದಲ್ಲಿದ್ದ ಚಾಲಕ ಮೂಡಬಿದ್ರೆ ಠಾಣೆಯ M.O.B ಆಗಿರುವ ಹಂಡೇಲಿನ ಮಹಮ್ಮದ್ ಆರೀಪ್ ಹಾಗೂ ಸಹಚರ ಗಂಟಾಲಕಟ್ಟೆಯ ಇಮ್ರಾನ್ @ ಇಬ್ರಾಹಿಂ ಅವರು ವಾಹನದಿಂದ ಇಳಿದು ಓಡಲು ಪ್ರಯತ್ನಿಸಿದಾಗ ಸಿಬ್ಬಂದಿಗಳು ಅವರನ್ನು ಹಿಡಿದಿದ್ದಾರೆ. ವಾಹನದ ಪರಿಶೀಲನೆಯಲ್ಲಿ ಹಿಂಬದಿ ಸೀಟ್ ತೆಗೆದು ಅದರ ಮೇಲೆ ನೀಲಿ ಬಣ್ಣದ ಪ್ಲಾಸ್ಟಿಕ್ ಹಾಸಿ, ಅದರ ಮೇಲೆ ಒಂದು ಗಂಡು ಕರುವನ್ನು ಹಿಂಸಾತ್ಮಕವಾಗಿ ಕಾಲು ಮತ್ತು ತಲೆಯನ್ನು ಹಗ್ಗದಿಂದ ಕಟ್ಟಿ ಸಾಗಿಸುತ್ತಿರುವುದು ಪತ್ತೆಯಾಗಿದೆ.

    ಆರೋಪಿಗಳು ಕಳೆದ ಒಂದು ವಾರದಿಂದ ವಿವಿಧ ಕಡೆಗಳಿಂದ ದನಗಳನ್ನು ಕಳ್ಳತನ ಮಾಡಿ ತಂದು ಪಡುಮಾರ್ನಾಡು ಗ್ರಾಮದ ಗುಂಡುಕಲ್ಲು ಪ್ರದೇಶದಲ್ಲಿ ಅವುಗಳನ್ನು ಕಡಿಯಲು ಅಥವಾ ಮಾಂಸ ಮಾರಾಟ ಮಾಡಲು ಸಂಗ್ರಹಿಸುತ್ತಿದ್ದರೆಂಬ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಜಾನುವಾರು, KA19MK4265 ಮಾರುತಿ ಬ್ರೀಜಾ ಕಾರು ಹಾಗೂ ಆರೋಪಿಗಳನ್ನು ವಶಕ್ಕೆ ಪಡೆದು ಕಾನೂನು ಕ್ರಮ ಕೈಗೊಳ್ಳಲಾಗಿದೆ.

    ಮಹಮ್ಮದ್ ಆರೀಪ್ ವಿರುದ್ಧ ಇರುವ ಪ್ರಕರಣಗಳು:

    1. ಬೈಪೆ ಪೊಲೀಸ್ ಠಾಣೆ ಕ್ರ.ಸಂ. 150/2024, ಕಲಂ 303(2) BNS, 4, 5, 7, 12 ಗೋಹತ್ಯೆ ನಿಷೇಧ ಕಾಯ್ದೆ 2020 – CC 1491/2025 (ಮುಂದಿನ ದಿನಾಂಕ 22/06/2026)
    2. ಬನಕಲ್ ಪೊಲೀಸ್ ಠಾಣೆ ಕ್ರ.ಸಂ. 31/2024, ಕಲಂ 379 IPC, 4, 5, 12 ಗೋಹತ್ಯೆ ನಿಷೇಧ ಕಾಯ್ದೆ 2020, 11(d) ಪ್ರಾಣಿಗಳ ಕ್ರೂರತೆ ತಡೆ ಕಾಯ್ದೆ, 192(A) IMV ಕಾಯ್ದೆ – CC 1684/2024 (ಮುಂದಿನ ದಿನಾಂಕ 30/05/2026)
    3. ಮೂಡಬಿದ್ರೆ ಪೊಲೀಸ್ ಠಾಣೆ ಕ್ರ.ಸಂ. 56/2025, ಕಲಂ 303(2) BNS ಹಾಗೂ 4, 5, 7, 12 ಗೋಹತ್ಯೆ ನಿಷೇಧ ಕಾಯ್ದೆ 2020 – ತನಿಖೆಯಲ್ಲಿದೆ
    4. ಮೂಡಬಿದ್ರೆ ಪೊಲೀಸ್ ಠಾಣೆ ಕ್ರ.ಸಂ. 130/2025, ಕಲಂ 303(2) BNS – ತನಿಖೆಯಲ್ಲಿದೆ

    ಇಮ್ರಾನ್ ವಿರುದ್ಧ ಇರುವ ಪ್ರಕರಣಗಳು:

    1. ಮೂಡಬಿದ್ರೆ ಪೊಲೀಸ್ ಠಾಣೆ ಕ್ರ.ಸಂ. 133/2024, ಕಲಂ 27 NDPS ಕಾಯ್ದೆ
    2. ಮೂಡಬಿದ್ರೆ ಪೊಲೀಸ್ ಠಾಣೆ ಕ್ರ.ಸಂ. 6/2025, ಕಲಂ 87 ಕೆ.ಪಿ. ಕಾಯ್ದೆ
    3. ಕ್ರ.ಸಂ. 40/2025, ಕಲಂ 87 ಕೆ.ಪಿ. ಕಾಯ್ದೆ
    4. ಮೂಡಬಿದ್ರೆ ಪೊಲೀಸ್ ಠಾಣೆ ಕ್ರ.ಸಂ. 56/2025, ಕಲಂ 303(2) BNS ಹಾಗೂ 4, 5, 7, 12 ಗೋಹತ್ಯೆ ನಿಷೇಧ ಕಾಯ್ದೆ 2020
    5. ಮೂಡಬಿದ್ರೆ ಪೊಲೀಸ್ ಠಾಣೆ ಕ್ರ.ಸಂ. 130/2025, ಕಲಂ 303(2) BNS
    6. ಕಾರ್ಕಳ ಟೌನ್ ಪೊಲೀಸ್ ಠಾಣೆ ಕ್ರ.ಸಂ. 169/2025, ಕಲಂ 303(2) BNS

    ಈ ಸಂಬಂಧ ಮುಂದಿನ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

    ##ಮೂಡಬಿದ್ರೆ #ಮಂಗಳೂರುನಗರಪೊಲೀಸ್ #ಅಕ್ರಮಸಾಗಾಟ #ಜಾನುವಾರುರಕ್ಷಣೆ #ಕಾನೂನುಕ್ರಮ #ಪೊಲೀಸ್ದಾಳಿ #ಬಂಧನ #ಕರ್ನಾಟಕಪೊಲೀಸ್

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಉದ್ಯಮಿ, ಕಾಲೇಜ್ topper,  ಕೋಟ್ಯದೀಶರೇ…ಕಠಿಣ ಜೈನ ಸನ್ಯಾಸದತ್ತ…!
    ಮತ್ತೆ ಹೊತ್ತಿ ಉರಿದ ಮಧ್ಯಪ್ರಾಚ್ಯ: ಇಸ್ರೇಲ್ ಪ್ರಧಾನಿ ನೆತನ್ಯಾಹು ಹೇಳಿಕೆ ಬೆನ್ನಲ್ಲೇ ಲೆಬನಾನ್ ಮತ್ತು ಗಾಜಾದಲ್ಲಿ ಹೆಚ್ಚಿದ ಭೀಕರ ಯುದ್ಧದ ತೀವ್ರತೆ.
    ಜೀತಕ್ಕಿಟ್ಟುಕೊಂಡು ದರ್ಬಾರ್ ನಡೆಸುತ್ತಿದ್ದ ರಜನಿಶೆಟ್ಟಿಯ ಬಂಧನ
    ಉಡುಪಿಯ ಪ್ರತಿಷ್ಠಿತರನ್ನೇ ಟಾರ್ಗೆಟ್ ಮಾಡಿದ ಜೀನತ್ ವಿರುದ್ಧ ಮತ್ತೊಂದು ದೂರು? ₹15 ಲಕ್ಷ ಮೋಸದ ಹೊಸ ಆರೋಪ!?
    ಬಾಲಗರ್ಭಿಣಿಯರ ಸಂಖ್ಯೆ 5975….!!
    ರಾಮನ ಹೆಸರಲ್ಲಿ ‘ರಾವಣ’ ರಾಜ್ಯ-ಕರ್ನಾಟಕಕ್ಕೂ ತಟ್ಟಿದ ಕಳಂಕ!ರಾಮನ ಹೆಸರಲ್ಲಿ ಭಕ್ತರಿಗೇ ನಾಮ-ಅಯೋಧ್ಯೆಯ ಕೋಟಿಕೋಟಿ ಲೂಟಿಗೆ ಬೀದರ್ ಕನೆಕ್ಷನ್!
    ಸಚಿನ್ ತೆಂಡೂಲ್ಕರ್ ಮಗಳ ಜಪಾನೀಸ್ ಕನೆಕ್ಷನ್ ಈಗ ದೇಶದ ಗಮನ ಸೆಳೆಯುತ್ತಿದೆ…ಸಾರಾ ಹೊಸ ಒಪ್ಪಂದ ಚರ್ಚೆಯಲ್ಲಿ
    ಕೇವಲ “Aunty” ಅಂತ ಅಂದಿದಕ್ಕೆ 2 ಲಕ್ಷ ದಂಡ…!
     “ತಪ್ಪು ಮಾಡಿದ್ರೆ ಕೈ-ಕಾಲು ಕತ್ತರಿಸ್ಬೇಕು, ಆಗಲೇ ಕಾನೂನಿನ ಭಯ ಬರೋದು! “ಗಲ್ಫ್ ದೇಶಗಳ ಮಾದರಿ ಶಿಕ್ಷೆ ಜಾರಿಯಾಗ್ಬೇಕು ಅನ್ನೋ ನ್ಯಾಯಮೂರ್ತಿಗಳ ನಿಲುವಿಗೆ ಇಡೀ ರಾಜ್ಯವೇ ಜೈ ಅಂತಿದೆ!
    ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಮತ್ತು ನಗರ ಸಭೆ ಎರಡೂ ಕಮಾಯಿಗೆ ಕುಳಿತು ಕೊಂಡಿದೆಯಾ?
    ರಾಷ್ಟ್ರೀಯ ಭದ್ರತೆಗೆ ಎದುರಾಗುವ ಬೆದರಿಕೆಗಳನ್ನು ಮೊಳಕೆಯಲ್ಲೇ ಚಿವುಟಿ ಹಾಕಲು ಭದ್ರತಾ ಪಡೆ ಮುಖ್ಯಸ್ಥರಿಗೆ ಗೃಹ ಸಚಿವ ‘ಶಾ’ ಸೂಚನೆ
    ಹವ್ಯಕ ಭಾಷಾ ಅಕಾಡೆಮಿ ಅಸ್ತಿತ್ವಕ್ಕೆ ಗ್ರೀನ್ ಸಿಗ್ನಲ್ 
    “ಅಮ್ಮ”ನ ಕಾರ್ಯಕ್ರಮದಲ್ಲಿ  ಕೇಂದ್ರ ಸಚಿವರಿಂದ ರಾಜಕೀಯ ಭಾಷಣ
    2027ರಲ್ಲಿ ರಸ್ತೆಗಿಳಿಯಲಿರುವ EV ಕಾರ್ Avinya X ನೋಡಿದರೆ ಸಾಮಾನ್ಯ SUVಗಳನ್ನೇ ಮರೆತುಬಿಡುತ್ತಿರಾ…ಬರುತ್ತಿದೆ ಟಾಟಾದ ಅತ್ಯಂತ ದುಬಾರಿ ಕನಸು!
    ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಹೊಸ ತಿರುವು: ದರ್ಶನ್ ಆಪ್ತರ ‘ಮಾಫಿ ಸಾಕ್ಷಿ’ ಅರ್ಜಿ ಏಕೆ ಮಹತ್ವದ್ದು?
    ತಸ್ಲಿಮಳ ಹಣೆಗೆ ಸಿಂಧೂರವಿಟ್ಟ ಕೇಶವ, ಬುರ್ಖಾ ತೆಗೆದಿಟ್ಟ ತಸ್ಲೀಮಾ
    35 ವಾರಂಟ್ ಇದ್ದ ಆರೋಪಿಯು ವಿದೇಶದಿಂದ ಮರಳುತ್ತಿದ್ದಾಗ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ
    ಅಮಾವಾಸ್ಯೆ ಬೈಲ್ ಪೊಲೀಸ್ ಠಾಣೆಯಲ್ಲಿ ಜೀವ ಬೆದರಿಕೆ ಹಾಗೂ ನಿಂದನೆಯ ಪ್ರಕರಣ ದಾಖಲು
    ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್‌ನಿಂದ ಬಂದ ಪ್ರಯಾಣಿಕನ ಬ್ಯಾಗ್‌ನಲ್ಲಿ 47 ಜೀವಂತ ಅಪರೂಪದ ಪ್ರಾಣಿಗಳು ಪತ್ತೆ! 
    ಮೊಹಾಲಿ ಬೆಚ್ಚಿಬೀಳಿಸಿದ ಕಚೇರಿ ಕೊಲೆ: ಮಹಿಳೆ ಮೇಲೆ ಮಾರಣಾಂತಿಕ ದಾಳಿ, ದೇಶಾದ್ಯಂತ ಆಕ್ರೋಶ…
    “ಅಕ್ಕಾ, ಮನೆಗೆ ಹೋಗೋಣ” ಎಂದು ಅಕ್ಕನನ್ನು ಕರೆತರಲು ಬಂದ ಅಪೂರ್ವ… ಕೆಲವೇ ಕ್ಷಣಗಳಲ್ಲಿ ಕಬ್ಬಿಣದ ಗೇಟ್ ಅಡಿಯಲ್ಲಿ ಅಂತ್ಯ
    ಏರ್ ಇಂಡಿಯಾ ವಿಮಾನ ಸೇವೆ ಸ್ಥಗಿತ…40,000ಕ್ಕೂ ಹೆಚ್ಚು ಟೆಲ್ ಅವೀವ್‌ ಭಾರತೀಯರ ಪ್ರಯಾಣ ಅತಂತ್ರ…!
    ಪೂಜೆಗಾಗಿ ತೆರಳಿದ ಅರ್ಚಕರ ಶವ ನಾಲೆಯಲ್ಲಿ ಪತ್ತೆ
    ರಸ್ತೆಯ ವಿಚಾರಕ್ಕೆ ನೆರೆಹೊರೆಯರ ನಡುವೆ ಬಾರಿ ಗಲಾಟೆ !
    ಸುಳ್ಯ:  ಕರ್ತವ್ಯದಲ್ಲಿದ್ದ ಉಪನ್ಯಾಸಕ ಕುಸಿದು ಬಿದ್ದು ಸಾವು
    ಹೋಟೆಲ್ನಲ್ಲಿ ಅಗ್ನಿಯ ಜ್ವಾಲೆ-ಉಸಿರುಗಟ್ಟಿದ ಹೊಗೆಯೊಳಗೆ ಅಡಗಿಹೋದ ಜೀವಗಳು ..!
    ಜೀವನ್ಮರಣ ಹೋರಾಟದಲ್ಲೂ ಗೆಳೆಯರ ಬದುಕಿಸಿದ 14ರ ಬಾಲಕನ ರೋಚಕ  ಸ್ಟೋರಿ 
    ಕೊನೆಗೂ ಸೋತ ಖಾಕಿ….!!!
    ಕರ್ನಾಟಕ CM ಬದಲಾವಣೆ ರಾಜಕೀಯ ಕೌಂಟ್‌ಡೌನ್ ಶುರುವಾಗಿದೆ! ತೆರೆಮರೆಯಲ್ಲಿ ಏನೋ ನಡೀತಿದೆ… 
    ಎಷ್ಟೇ ಚಾಣಾಕ್ಷತನ ತೋರಿದರೂ, ಡಿಜಿಟಲ್ ಕಣ್ಣುಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.” AI ಸಣ್ಣ ಸುಳಿವು’ → ‘ನಿಖರ ಪತ್ತೆ’ ಜನರ ಭದ್ರತೆಗಾಗಿ ತಂತ್ರಜ್ಞಾನವೇ ಶಕ್ತಿಯುತ ಆಯುಧ ..!