📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಮೈ ಜುಮ್ಮೆನ್ನಿಸುವ ಬೈಕ್–ಲಾರಿ ಡಿಕ್ಕಿ ಅಪಘಾತ… ಕ್ಷಣಾರ್ಧದಲ್ಲೇ ಜೀವ ಹೋದ ಹೃದಯವಿದ್ರಾವಕ ರಸ್ತೆ ದುರಂತ

ಮಂಗಳೂರು: ಬೈಕ್ಲಾರಿ ಅಪಘಾತದಲ್ಲಿ ಯುವಕ ಸ್ಥಳದಲ್ಲೇ ದುರ್ಮರಣ, ಇಬ್ಬರಿಗೆ ಗಾಯ 

ಮಂಗಳೂರು ಹೊರವಲಯದ ಮುಕ್ಕ ಚೆಕ್‌ಪೋಸ್ಟ್ ಬಳಿಯ ಖಂಡಿಗೆ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಓರ್ವ ಯುವಕ ಸ್ಥಳದಲ್ಲೇ ಸಾವಿಗೀಡಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಮೃತರನ್ನು ಬಾಗಲಕೋಟೆ ಮೂಲದ ಭೀಮಾ ಎಂದು ಗುರುತಿಸಲಾಗಿದೆ. ಅವರು ಪ್ರಸ್ತುತ ಕಾವೂರು ಪಂಜಿಮೊಗರು ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಅಪಘಾತದಲ್ಲಿ ಅವರ ಸಹೋದ್ಯೋಗಿಗಳಾದ ಸಂಗಮೇಶ ಮತ್ತು ಮಂಜುನಾಥ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾಹಿತಿಯ ಪ್ರಕಾರ, ಭೀಮಾ ಮತ್ತು ಅವರ ಇಬ್ಬರು ಸಹೋದ್ಯೋಗಿಗಳು ಕೆಲಸ ಮುಗಿಸಿ ಒಂದೇ ಬೈಕ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ 66 ಮೂಲಕ ತಮ್ಮ ಮನೆಗೆ ತೆರಳುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಈ ವೇಳೆ ಭಾರೀ ಸರಕು ಹೊತ್ತಿದ್ದ ಲಾರಿಯನ್ನು ಎಡಭಾಗದಿಂದ ಓವರ್‌ಟೇಕ್ ಮಾಡಲು ಯತ್ನಿಸಿದಾಗ ಬೈಕ್ ಲಾರಿಯನ್ನು ಸ್ವಲ್ಪ ತಾಗಿಕೊಂಡಿದೆ ಎಂದು ತಿಳಿದುಬಂದಿದೆ.

ಇದರಿಂದ ಬೈಕ್ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದ್ದು, ಆ ಕ್ಷಣದಲ್ಲಿ ಭೀಮಾ ಲಾರಿಯ ಹಿಂಬದಿ ಚಕ್ರಗಳಡಿ ಸಿಲುಕಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಎನ್ನಲಾಗಿದೆ. ಘಟನೆಯಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಘಟನೆಯ ಬಗ್ಗೆ ಮಾಹಿತಿ ಪಡೆದ ಮಂಗಳೂರು ಉತ್ತರ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ. ಪ್ರಕರಣ ಸಂಬಂಧ ತನಿಖೆ ಮುಂದುವರಿದಿದೆ.

##Mangalore #RoadAccident #BreakingNews #AccidentNews #DakshinaKannada #TragicNews

COMMENTS

Login with Gmail to comment

ಇನ್ನಷ್ಟು ಸುದ್ದಿ

50ಕ್ಕೂ ಹೆಚ್ಚು ಆಟೋ ಚಾಲಕರ ದಿನನಿತ್ಯದ ಆರೋಗ್ಯದ ಬದುಕಿಗೆ ಮುಳುವಾದ ದೇರಳಕಟ್ಟೆ ಜಂಕ್ಷನ್ ದುರ್ನಾತ! 
ಕುಂದಾಪುರದಲ್ಲಿ ಎರಡು ಮಕ್ಕಳ ತಾಯಿ ನಾಪತ್ತೆ. ಸ್ನೇಹಿತರ ಜೊತೆಯಲ್ಲಿ ಹೋಗಿರುವ ಶಂಕೆ
ಮಂಗಳೂರಿಗೆ “ಅಮ್ಮ”ನ ಆಗಮನ ಭಕ್ತರಲ್ಲಿ ಸಡಗರವೂ ಸಡಗರ….. ನಾಳೆ ನಗರಕ್ಕೆ ಇಬ್ಬರು ಕೇಂದ್ರ ಸಚಿವರ ಆಗಮನ
ಪುತ್ತೂರು ಗ್ರಾಮಾಂತರದಲ್ಲಿ ಭೂ ವಿವಾದದ ಗಲಾಟೆ ತೀವ್ರತೆ: ಪರಸ್ಪರ ಹಲ್ಲೆ – ಎರಡು ಪ್ರಕರಣಗಳು ದಾಖಲು
ಸಾಲದ ಹಣ ಕೇಳಿದ ವಿಚಾರಕ್ಕೆ ಚೂರಿಯಿಂದ ಕೊಲೆ ಯತ್ನ..
165 ಹೆಣ್ಮಕ್ಕಳು ತಮ್ಮದಲ್ಲದ ತಪ್ಪಿಗೆ ಹತ್ಯೆಗೆ ಒಳಗಾದರು 
ಸೈಡ್ ಕೊಡಲಿಲ್ಲ ಎಂಬ ಸಣ್ಣ ವಿಚಾರ… ದೊಡ್ಡ ಜಗಳದ ವೈರಲ್ ವಿಡಿಯೋ… ಪೊಲೀಸ್ ಕೇಸ್… ಕೊನೆಗೆ ಬಂಧನ!
Forex ಟ್ರೇಡಿಂಗ್ ಹೆಸರಲ್ಲಿ 3.5 ಲಕ್ಷ ವಂಚನೆ – ಆರೋಪಿ ವಿರುದ್ಧ ಪ್ರಕರಣ ದಾಖಲು
“ಗ್ಯಾರಂಟಿ “ಹಣದ ಮೇಲೆ ಆಯೋಗದ ಕಣ್ಣು: ಸಿಎಂ ಸಿಡಿಮಿಡಿ ..ರಾಜಕೀಯ ಕಿಡಿ!
ಅಂಡಮಾನ್ ಸಮುದ್ರದಲ್ಲಿ ಸಿಕ್ಕಿದ ಖಜಾನೆ! ಭಾರತದ ಇಂಧನ ಭವಿಷ್ಯ ಬದಲಾಗುತ್ತಿದೆಯೇ?
ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ? ದೆಹಲಿ–ಬೆಂಗಳೂರು ರಾಜಕೀಯ ಚಟುವಟಿಕೆ ಜೋರು, ಹೈಕಮಾಂಡ್ ನಿರ್ಧಾರದತ್ತ ರಾಜ್ಯದ ಚಿತ್ತ
ಲಖನೌ ಅಗ್ನಿ ದುರಂತದ ಕೊನೆ ಕ್ಷಣದ ಫೋನ್ ಕರೆಗಳು …”ಅಪ್ಪಾ,ಪ್ಲೀಸ್ ನನ್ನನ್ನು ಉಳಿಸು…” – “ನನ್ನ ಮಗನ ಬಳಿ ಹೋಗಲು ಬಿಡಿ…”
ಗೃಹಸಚಿವ ಪ್ರಿಯಾಂಕ್ ಖರ್ಗೆಗೆ ಅವಹೇಳನ ಜಾತಿ ನಿಂದನೆ  ಆರೋಪದಲ್ಲಿ ಕಾರ್ಕಳ ವ್ಯಕ್ತಿಯ ಬಂಧನ !
ಗೃಹಿಣಿ ಅಲ್ಲ, ರಾಷ್ಟ್ರ ನಿರ್ಮಾಣಕಾರಿ”ಮನೆಯ ಕೆಲಸ ಕೆಲಸವೇ ಅಲ್ಲ ಎನ್ನುವವರೇ… ಈ ಸುದ್ದಿ ಒಮ್ಮೆ ಓದಿ!ಆಕೆಯ ಶ್ರಮಕ್ಕೆ-₹30,000 ಮೌಲ್ಯ!– ಸುಪ್ರೀಂ ಕೋರ್ಟ್ ಮಹತ್ವದ ಸಂದೇಶ
ಜಿಮ್,“ಫಿಟ್ನೆಸ್ ಸೆಂಟರ್‌ಗಳಲ್ಲಿ ಹೆಚ್ಚುತ್ತಿರುವ ಅಪಾಯಕಾರಿ ಸಂಬಂಧಗಳು: ಜಿಮ್ ಟ್ರೈನರ್ ಆತ್ಮಹತ್ಯೆ
ಮಂಡ್ಯಒಂದೇ ಕುಟುಂಬದ ಐವರ ಜಲಸಮಾಧಿ: ಕಾವೇರಿ ಒಡಲಲ್ಲಿವಿಧಿಯ ಕ್ರೂರ ಆಟಕ್ಕೆ ಕಣ್ಣೀರ ಕಡಲಾದ ಮುತ್ತತ್ತಿ!
ಪ್ರತಿಭಟನಾ ಶಕ್ತಿಯನ್ನೇ ಕಳೆದುಕೊಂಡ ಭಾರತ… ನಿಶ್ಯಕ್ತವಾದ ವಿರೋಧ ಪಕ್ಷಗಳು
ಉದ್ಯಮಿ ಧೀರಜ್ ಜೈನ್ ಗಪ್ ಚುಪ್ಪಾಗಿ ನಡೆಸಿದ ಮಾನವೀಯ ನಡೆಗೆ ಸಾಕ್ಷಿ ನೋಡಿ
ಜೈಲಿನೊಳಗೆ ಮೊಬೈಲ್ ಮಾಫಿಯಾ: ಖತರ್ನಾಕ್ ಐಡಿಯಾ..!
ಪೆಟ್ರೋಲ್–ಡೀಸೆಲ್ ಬೆಲೆ ಏರಿಕೆ ..! ಸಾರ್ವಜನಿಕ ಸಾರಿಗೆ ಬಳಸಿ ,ಇಂಧನ ಉಳಿಸಿ ,Work From Home ಮಾಡಿ ಎಂದಿದ್ದ ಮೋದಿ… ಈಗ ಅದರ ಅರ್ಥ ಸ್ಪಷ್ಟವಾಗುತ್ತಿದೆಯೇ?
ಭಾರತದ 9 ರಾಜ್ಯದ 8.18 ಕೋಟಿ ಮತದಾರರನ್ನು ಕೈ ಬಿಡಲಾಗಿದ್ದು ,ಅವರ ಕಥೆ ಏನು?
ಆಸಿಡ್ ದಾಳಿಗೊಳಗಾದ ಮಹಿಳೆಯರಿಗೆ ₹50 ಸಾವಿರ ಮಾಸಾಶನ: ಆಸಿಡ್ ಮಾರಾಟಕ್ಕೆ ಕಡಿವಾಣ ಹಾಕಲು ಸರ್ಕಾರ ಕ್ರಮ
ಕೆಲವೊಮ್ಮೆ ದೇಹದ ಶತ್ರು “ಲೂಪಸ್ “ಹೊರಗಿಲ್ಲ… ಒಳಗೇ ಇರುತ್ತದೆ.ಮಹಿಳೆಯರ ದಣಿವು, ಸಂಧಿ ನೋವು, ತೂಕ ಇಳಿಕೆ —. ನಿರ್ಲಕ್ಷ್ಯ ಬೇಡ. ‘ಸಾಮಾನ್ಯ’ ಎಂದು ಕಡೆಗಣಿಸಬೇಡಿ.
ಕರ್ನಾಟಕ ಎಸ್‌ಎಸ್‌ಎಲ್‌ಸಿ 2026 ಫಲಿತಾಂಶ: ಇತಿಹಾಸದ ಅತ್ಯಧಿಕ ಉತ್ತೀರ್ಣ ಪ್ರಮಾಣ ಮತ್ತು ಟಾಪರ್‌ಗಳ ಸಾಧನೆ
ಉಡುಪಿಯಲ್ಲಿ ಆಡಳಿತ ನಡೆಸುತ್ತಿರುವುದು ಜನವಿರೋಧಿ ಜಿಲ್ಲಾಡಳಿತವೇ?
ಹೆಸರು ಬದಲಾವಣೆ ಪಶ್ಚಿಮ ಬಂಗಾಳ ಪೆಂಡಿಂಗ್, ಕೇರಳ ಪ್ರಗತಿಯಲ್ಲಿ
ಸಾಲ ಮರುಪಾವತಿ ವಿಚಾರಕ್ಕೆ ಜಾಲ್ಸೂರು ರಸ್ತೆಯಲ್ಲೇ ಗಲಾಟೆ ಹಲ್ಲೆ
“ಟೀಕೆ ಮಾಡಿ, ತೇಜೋವಧೆ ಬೇಡ” – ಹೈಕೋರ್ಟ್‌ನಿಂದ ಗಿರೀಶ್ ಮಟ್ಟೆಣ್ಣನವರ್‌ಗೆ ಖಡಕ್ ಎಚ್ಚರಿಕೆ
“ಅಮ್ಮ”ನ ಕಾರ್ಯಕ್ರಮದಲ್ಲಿ  ಕೇಂದ್ರ ಸಚಿವರಿಂದ ರಾಜಕೀಯ ಭಾಷಣ
🛑 ನಾಗರಮಠದಲ್ಲಿ ಅವೈಜ್ಞಾನಿಕ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರ ಆಕ್ರೋಶ