📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಮೊಬೈಲ್ ನಂಬರ್ ದುರ್ಬಳಕೆ; ನಿವೃತ್ತ ಉದ್ಯೋಗಿಯ ವಿವಿಧ ಬ್ಯಾಂಕ್ ಖಾತೆಗಳಿಂದ ₹2.12 ಕೋಟಿ ಆನ್‌ಲೈನ್ ವಹಿವಾಟು

    ಮಂಗಳೂರು: ಮೊಬೈಲ್ ಸಿಮ್‌ಕಾರ್ಡ್‌ನ ನೆಟ್‌ವರ್ಕ್ ಪ್ರವೇಶವನ್ನು ದುರ್ಬಳಕೆ ಮಾಡಿಕೊಂಡು 78 ವರ್ಷದ ನಿವೃತ್ತ ಉದ್ಯೋಗಿಯ ವಿವಿಧ ಬ್ಯಾಂಕ್ ಖಾತೆಗಳಿಂದ ಹಂತ ಹಂತವಾಗಿ ಬರೋಬ್ಬರಿ ₹2,12,95,500 ಹಣವನ್ನು ಆನ್‌ಲೈನ್ ಮೂಲಕ ವರ್ಗಾಯಿಸಿಕೊಂಡಿರುವ ಗಂಭೀರ ಸೈಬರ್ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ.

    ಮುಂಬೈನಲ್ಲಿ ಸುಮಾರು 50 ವರ್ಷಗಳ ಕಾಲ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ನಿರ್ವಹಿಸಿ ನಿವೃತ್ತರಾದ 78 ವರ್ಷದ ಪಿರ್ಯಾದಿದಾರರು ಬಳಿಕ ಮಂಗಳೂರಿನಲ್ಲಿ ನೆಲೆಸಿದ್ದರು. ಸುಮಾರು 10 ವರ್ಷಗಳಿಂದ ತಮ್ಮ ಹೆಸರಿನಲ್ಲಿ ಪಡೆದ ವೊಡಾಫೋನ್ ಮೊಬೈಲ್ ಸಂಖ್ಯೆಯನ್ನು ಬಳಸುತ್ತಿದ್ದು, ಅದನ್ನು ತಮ್ಮ ವಿವಿಧ ಬ್ಯಾಂಕ್ ಖಾತೆಗಳಿಗೆ ಲಿಂಕ್ ಮಾಡಿದ್ದರು. ತಮ್ಮ ಜೀವನಪೂರ್ತಿ ಗಳಿಸಿದ ಹಣವನ್ನು ಬ್ಯಾಂಕ್ ಖಾತೆಗಳು ಹಾಗೂ ಫಿಕ್ಸ್ಡ್ ಡೆಪಾಸಿಟ್‌ಗಳಲ್ಲಿ ಇರಿಸಿದ್ದರು.

    ಕಳೆದ ಜುಲೈನಲ್ಲಿ ಏಕಾಏಕಿ ಅವರ ಮೊಬೈಲ್ ಸಂಖ್ಯೆಯ ನೆಟ್‌ವರ್ಕ್ ಸ್ಥಗಿತಗೊಂಡಿತ್ತು. ಈ ಹಿನ್ನೆಲೆಯಲ್ಲಿ ಮಂಗಳೂರಿನ ವೊಡಾಫೋನ್ ಕಚೇರಿಗೆ ತೆರಳಿ ವಿಚಾರಿಸಿದಾಗ, ತಮ್ಮ ಹೆಸರಿನಲ್ಲಿದ್ದ ಮೊಬೈಲ್ ಸಂಖ್ಯೆಯನ್ನು ಏರ್‌ಟೆಲ್ ಸಂಸ್ಥೆಯ ಮೂಲಕ ಬೇರೊಬ್ಬರಿಗೆ ನೀಡಿರುವುದು ಗಮನಕ್ಕೆ ಬಂದಿದೆ. ಕೂಡಲೇ ಪಿರ್ಯಾದಿದಾರರು ಏರ್‌ಟೆಲ್ ಕಚೇರಿಗೆ ತೆರಳಿ ಆ ಸಂಖ್ಯೆಯನ್ನು ಬ್ಲಾಕ್ ಮಾಡುವಂತೆ ದೂರು ನೀಡಿದ್ದರು.

    ಆದರೆ, ಇದರ ಬೆನ್ನಲ್ಲೇ ನಡೆದಿರುವುದು ಮತ್ತಷ್ಟು ಆತಂಕಕಾರಿ ಬೆಳವಣಿಗೆ. ಆಗಸ್ಟ್ 17ರಂದು ಐಡಿಎಫ್‌ಸಿ ಬ್ಯಾಂಕ್‌ಗೆ ತೆರಳಿದಾಗ, ತಮ್ಮ ಖಾತೆಯಲ್ಲಿ ಹಲವು ಅನುಮಾನಾಸ್ಪದ ವಹಿವಾಟುಗಳು ನಡೆದಿರುವುದನ್ನು ಬ್ಯಾಂಕ್ ಅಧಿಕಾರಿಗಳು ಪಿರ್ಯಾದಿದಾರರ ಗಮನಕ್ಕೆ ತಂದಿದ್ದಾರೆ. ನೆಟ್ ಬ್ಯಾಂಕಿಂಗ್ ಮೂಲಕ ಅಪರಿಚಿತರು ಹಣವನ್ನು ವರ್ಗಾವಣೆ ಮಾಡಿಕೊಂಡಿರುವುದು ತಿಳಿದುಬಂದಿದೆ.

    ತಕ್ಷಣ ಖಾತೆಯನ್ನು ಬ್ಲಾಕ್ ಮಾಡಿಸಿದ ಪಿರ್ಯಾದಿದಾರರು ಬ್ಯಾಂಕ್ ಸ್ಟೇಟ್‌ಮೆಂಟ್ ಪರಿಶೀಲಿಸಿದಾಗ ವಂಚನೆ ಬೆಳಕಿಗೆ ಬಂದಿದೆ. ಇದೇ ರೀತಿಯಲ್ಲಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಬರೋಡಾ, ಕರ್ನಾಟಕ ಬ್ಯಾಂಕ್ ಹಾಗೂ ಎಚ್‌ಡಿಎಫ್‌ಸಿ ಬ್ಯಾಂಕ್ ಖಾತೆಗಳಿಂದಲೂ ಹಣ ವರ್ಗಾವಣೆಯಾಗಿರುವುದು ಪತ್ತೆಯಾಗಿದೆ.

    ಪಿರ್ಯಾದಿದಾರರು ಎಲ್ಲಾ ಬ್ಯಾಂಕ್ ಖಾತೆಗಳನ್ನು ಬ್ಲಾಕ್ ಮಾಡಿಸಿ ಸ್ಟೇಟ್‌ಮೆಂಟ್‌ಗಳನ್ನು ಪರಿಶೀಲಿಸಿದಾಗ, 2026ರ ಜುಲೈ 16ರಿಂದ ಆಗಸ್ಟ್ 18ರ ಅವಧಿಯಲ್ಲಿ ಹಂತ ಹಂತವಾಗಿ ಒಟ್ಟು ₹2,12,95,500 ಹಣವನ್ನು ತಮ್ಮ ಗಮನಕ್ಕೆ ಬಾರದಂತೆ ಆನ್‌ಲೈನ್ ನೆಟ್ ಬ್ಯಾಂಕಿಂಗ್ ಮೂಲಕ ಅಪರಿಚಿತರು ವರ್ಗಾಯಿಸಿಕೊಂಡಿರುವುದು ಪತ್ತೆಯಾಗಿದೆ.

    ವಿಶೇಷವೆಂದರೆ, ಈ ಅವಧಿಯಲ್ಲಿ ಹಣ ವರ್ಗಾವಣೆಯಾಗುತ್ತಿದ್ದರೂ ಬ್ಯಾಂಕ್‌ನಿಂದ ಪಿರ್ಯಾದಿದಾರರಿಗೆ ಯಾವುದೇ ಎಸ್‌ಎಂಎಸ್ ಅಥವಾ ಕರೆಗಳ ಮೂಲಕ ಎಚ್ಚರಿಕೆ ಬಂದಿರಲಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ.

    ಇದಲ್ಲದೆ, ‘ಹೇಮಂತ್’ ಎಂಬ ವ್ಯಕ್ತಿಯೊಬ್ಬರು 7827590552 ಸಂಖ್ಯೆಯಿಂದ ನಿರಂತರವಾಗಿ ಕರೆ ಮಾಡುತ್ತಿದ್ದರು ಎಂದು ಪಿರ್ಯಾದಿದಾರರು ಆರೋಪಿಸಿದ್ದಾರೆ. ಬ್ಯಾಂಕ್ ಸ್ಟೇಟ್‌ಮೆಂಟ್ ಪರಿಶೀಲಿಸಿದಾಗಲೂ ‘ಹೇಮಂತ್’ ಎಂಬ ಹೆಸರಿನ ವ್ಯಕ್ತಿಗೆ ಹಣ ವರ್ಗಾವಣೆಯಾಗಿರುವ ಮಾಹಿತಿ ಕಂಡುಬಂದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

    ತಮ್ಮ ಮೊಬೈಲ್ ಸಂಖ್ಯೆಯ ನೆಟ್‌ವರ್ಕ್ ಪ್ರವೇಶವನ್ನು ಅಕ್ರಮವಾಗಿ ಪಡೆದುಕೊಂಡು, ಅದರ ದುರ್ಬಳಕೆ ಮೂಲಕ ಬ್ಯಾಂಕ್ ಖಾತೆಗಳಿಗೆ ಪ್ರವೇಶಿಸಿ ಹಣ ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಿರುವ ಪಿರ್ಯಾದಿದಾರರು, ಈ ಕೃತ್ಯದ ಹಿಂದೆ ಇರುವ ಅಪರಿಚಿತ ವ್ಯಕ್ತಿಗಳನ್ನು ಪತ್ತೆಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮಂಗಳೂರಿನ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಇನ್ನು ಮುಂದೆ ದೇವಸ್ಥಾನ ಆಸ್ತಿಗೆ ದಾಖಲೆಗಳಲ್ಲಿ ದೇವರ ಹೆಸರೇ ಮಾಲೀಕ….34 ಸಾವಿರಕ್ಕೂ ಹೆಚ್ಚುಮುಜರಾಯಿ ದೇವಸ್ಥಾನಗಳ ಆಸ್ತಿ ರಕ್ಷಣೆ:
    ಸಚಿನ್ ತೆಂಡೂಲ್ಕರ್ ಮಗಳ ಜಪಾನೀಸ್ ಕನೆಕ್ಷನ್ ಈಗ ದೇಶದ ಗಮನ ಸೆಳೆಯುತ್ತಿದೆ…ಸಾರಾ ಹೊಸ ಒಪ್ಪಂದ ಚರ್ಚೆಯಲ್ಲಿ
    ಉಡುಪಿಯ ಮಾರ್ಕೆಟ್‌ 99 ಮ್ಯಾನೇಜರ್‌ ವಿರುದ್ಧ ₹13.39 ಲಕ್ಷ ದುರ್ಬಳಕೆ ಪ್ರಕರಣ ದಾಖಲು…
    ಸುರ್ಜೆವಾಲ ಸಿಎಂ ಡಿಕೆಶಿ ಗುಪ್ತ ಮಾತುಕತೆ
    ಶಿಕ್ಷಣ ಸುಧಾರಣೆಗೆ ರಾಜ್ಯ ಸರ್ಕಾರದ ಭರ್ಜರಿ ಪ್ಲಾನ್ ಬಹಿರಂಗ!
    ಕರ್ನಾಟಕದಲ್ಲಿ ಹೈ ಅಲರ್ಟ್: ಕರಾವಳಿಯಲ್ಲಿ ಸತತ 4 ದಿನ ಭಾರೀ ಮಳೆ – ಮಕ್ಕಳು, ಮೀನುಗಾರರು ಮತ್ತು ನದಿ ಪಾತ್ರದ ಜನರು ವಿಶೇಷ ಎಚ್ಚರಿಕೆ ವಹಿಸಿ
    “ಅಕ್ಕಾ, ಮನೆಗೆ ಹೋಗೋಣ” ಎಂದು ಅಕ್ಕನನ್ನು ಕರೆತರಲು ಬಂದ ಅಪೂರ್ವ… ಕೆಲವೇ ಕ್ಷಣಗಳಲ್ಲಿ ಕಬ್ಬಿಣದ ಗೇಟ್ ಅಡಿಯಲ್ಲಿ ಅಂತ್ಯ
    ಕರಾವಳಿಯಲ್ಲಿ ಮತ್ತೆ ಸೈಬರ್ ವಂಚಕರ ಅಟ್ಟಹಾಸ: 3 ಪ್ರಕರಣಗಳಲ್ಲಿ ₹12 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡ ಜನ!
    ಪಹಲ್ಗಾಂಮ್ ದಾಳಿಯ ಒಂದು ವರ್ಷ: ಇನ್ನೂ ಮುಗಿಯದ ನೋವು, ಮರೆಯಲಾಗದ ನೆನಪುಗಳು
    Tata Consultancy Services (TCS) ನಾಶಿಕ್ ವಿವಾದ-ಬೆಚ್ಚಿಬೀಳಿಸಿದ 30 ದಿನಗಳ ಗುಪ್ತ ಪೊಲೀಸ್ ಆಪರೇಷನ್‌ ರಹಸ್ಯಗಳು…!
    ಮಂಗಳೂರು ಸರ್ಕಾರಿ ಕಾಲೇಜಿನಲ್ಲಿ ಎಬಿವಿಪಿ, ಎನ್ ಎಸ್ ಯು ಐ ವಿದ್ಯಾರ್ಥಿಗಳ ಘರ್ಷಣೆ 
    ಅಕ್ರಮ ಮರಳುಗಾರಿಕೆ, ಕ್ರಮ ಕೈಗೊಂಡ ವೇಣೂರು ಪೊಲೀಸರು
    ಮೇ 29ರಿಂದ ತಣ್ಣೀರುಬಾವಿ ಬೀಚ್‌ನಲ್ಲಿ ಮೂರು ದಿನಗಳ ರಾಷ್ಟ್ರಮಟ್ಟದ ಸರ್ಫಿಂಗ್ ಸ್ಪರ್ಧೆ…
    “ಶಾಲಾ ಬಸ್‌ನಲ್ಲಿ ಪ್ರಯಾಣಿಸುವ ಪ್ರತಿಯೊಂದು ಮಗುವಿನ ಸುರಕ್ಷತೆಗೆ ಶಾಲೆಯೇ ಹೊಣೆ!”
    ಲಂಚದ ವಿರುದ್ಧ ದೂರು ನೀಡಿದ್ದಕ್ಕೆ ರೈತನ ಮಗನ ವೃಷಣಗಳನ್ನೇ ಒಡೆದ ಪೊಲೀಸ್ ಕ್ರೌರ್ಯ!
    ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ FIR ..!ರಾಹುಲ್ ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆ ರಾಜಕೀಯ ಕಾವು ಏರಿಕೆ!
    ಮಂಗಳೂರಿನ ಆಡಳಿತ ವೈಫಲ್ಯ ಸರ್ಕಾರಿ ಕಚೇರಿಗಳಲ್ಲಿ ಸಾಲು…ಪಾಲಿಕೆ ಸೇವೆಗಳ ವಿಳಂಬ, ಭೂಪರಿವರ್ತನೆ ಗೊಂದಲ: ರಾಜ್ಯ ಸರ್ಕಾರದ ವಿರುದ್ಧ ಶಾಸಕ ವೇದವ್ಯಾಸ ಕಾಮತ್ ಆಕ್ರೋಶ ..
    ಮಂತ್ರಾಲಯದ ಮಠದ ಹೆಸರಲ್ಲಿ 3 ಲಕ್ಷ ಆಸೆ ತೋರಿಸಿ ವಂಚನೆ..!
    ಕರ್ನಾಟಕ CM ಬದಲಾವಣೆ ರಾಜಕೀಯ ಕೌಂಟ್‌ಡೌನ್ ಶುರುವಾಗಿದೆ! ತೆರೆಮರೆಯಲ್ಲಿ ಏನೋ ನಡೀತಿದೆ… 
    ಡ್ರೋನ್ ದಾಳಿಯ ನಂತರ ಬಹ್ರೇನ್‌ನಲ್ಲಿ ಕನಿಷ್ಠ 32 ಜನರಿಗೆ ಗಾಯ
    ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ನಿರ್ಧಾರ ಬದಲಾಗುತ್ತದೆಯೇ? ಕರಾವಳಿ ಕಾದಿದೆ ಉಸಿರು ಹಿಡಿದು!
    ಶೃಂಗೇರಿ ವಿಧಾನಸಭೆಯ ಮರುಕೌಂಟಿಂಗ್ ನಲ್ಲಿ ನಡೆದ ಲಪಡಾಗಳೇನು?
    ಅಸ್ಸಾಂನಲ್ಲಿ ಪ್ರವಾಹದ ಆರ್ಭಟಕ್ಕೆ ಸಾವಿನ ಸಂಖ್ಯೆ 61ಕ್ಕೆ, 7 ಲಕ್ಷಕ್ಕೂ ಹೆಚ್ಚು ಮಂದಿ ಸಂಕಷ್ಟದಲ್ಲಿ …!
    ಅಕ್ರಮ ಪ್ರವೇಶ, ದೌರ್ಜನ್ಯ, ಹಾಗೂ ಕೃಷಿ ಚಟುವಟಿಕೆಗೆ ತಡೆಯ ಬಗ್ಗೆ ದೂರು ದಾಖಲು
    ನಾಲ್ಕು ಮಕ್ಕಳನ್ನು ಹೆತ್ತ ಮಹಾತಾಯಿ, ಸದ್ಯಕ್ಕೆ ತಾಯಿ ಮಕ್ಕಳು ಸೇಫ್
    ಪುತ್ತೂರು ಗ್ರಾಮಾಂತರದಲ್ಲಿ ಭೂ ವಿವಾದದ ಗಲಾಟೆ ತೀವ್ರತೆ: ಪರಸ್ಪರ ಹಲ್ಲೆ – ಎರಡು ಪ್ರಕರಣಗಳು ದಾಖಲು
    ಎಷ್ಟೇ ಚಾಣಾಕ್ಷತನ ತೋರಿದರೂ, ಡಿಜಿಟಲ್ ಕಣ್ಣುಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.” AI ಸಣ್ಣ ಸುಳಿವು’ → ‘ನಿಖರ ಪತ್ತೆ’ ಜನರ ಭದ್ರತೆಗಾಗಿ ತಂತ್ರಜ್ಞಾನವೇ ಶಕ್ತಿಯುತ ಆಯುಧ ..!
    ಪ್ರಜ್ವಲ್ ರೇವಣ್ಣ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಕ್ಷಿಗೆ ಬೆದರಿಕೆ ಕರೆ!
    ದಿಲ್ಲಿಯಲ್ಲಿ ವಾಗ್ದಾಳಿ.. ಗಲ್ಲಿಯಲ್ಲಿ ಒಪ್ಪಂದ?! ದೇಶದ ಅತ್ಯಂತ ಕಾಂಟ್ರವರ್ಸಿಯಲ್ ಬಿಡ್ ತೆರೆಮರೆಯಲ್ಲಿ ನಡೆದ ಆ ಒಂದು ನಡೆ ಕಾಂಗ್ರೆಸ್ ಸರ್ಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದ್ದು ಯಾಕೆ?!
    ಪಕ್ಷದಿಂದ ಪಕ್ಕಕ್ಕೆ? ರಾಘವ್ ಚಡ್ಡಾ ಹಿಂದೆ ಏನಿದೆ ದೊಡ್ಡ ರಾಜಕೀಯ ಆಟ!”ಮೌನಗೊಳಿಸಿದರೂ ನಿಲ್ಲದ ಧ್ವನಿ – ರಾಘವ್ ಚಡ್ಡಾ!”