📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಮೊಬೈಲ್ ನೋಡುತ್ತಿದ್ದ ಉಡುಪಿ ಡಿಸಿ ವಿರುದ್ಧ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಿಡಿ

    ಬರ ಪರಿಸ್ಥಿತಿ ಮತ್ತು ಪರಿಹಾರ ಕಾರ್ಯಗಳ ಕುರಿತು ನಡೆದ ಉನ್ನತ ಮಟ್ಟದ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಯೊಬ್ಬರ ನಿರ್ಲಕ್ಷ್ಯಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಘಟನೆ ನಡೆಯಿತು.

    ಸಭೆಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು, ಬರ ಪರಿಸ್ಥಿತಿಯ ಕುರಿತು ಗಂಭೀರವಾಗಿ ಮಾತನಾಡುತ್ತಿದ್ದ ಸಂದರ್ಭದಲ್ಲಿ, ಉಡುಪಿ ಜಿಲ್ಲಾಧಿಕಾರಿ ಸ್ವರೂಪ್ ಅವರು ಮೊಬೈಲ್ ಫೋನ್‌ನಲ್ಲಿ ಮಾತನಾಡುತ್ತಾ ಕುಳಿತಿದ್ದರು. ಇದನ್ನು ಸೂಕ್ಷ್ಮವಾಗಿ ಗಮನಿಸಿದ ಡಿ.ಕೆ. ಶಿವಕುಮಾರ್ ಅವರು ಕೂಡಲೇ ಮಧ್ಯಪ್ರವೇಶಿಸಿ ಅಧಿಕಾರಿ ವಿರುದ್ಧ ಕಿಡಿಕಾರಿದರು.

    “ಸಭೆಗೆ ಗೌರವ ಕೊಡಿ”
    ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಡಿ.ಕೆ. ಶಿವಕುಮಾರ್, “ನಿಮಗೆ ಸಭೆಯ ಮೇಲೆ ಆಸಕ್ತಿ ಇಲ್ಲದಿದ್ದರೆ ದಯವಿಟ್ಟು ಹೊರಗಡೆ ಹೋಗಿ. ಅಷ್ಟೊಂದು ಅರ್ಜೆಂಟ್ ಫೋನ್ ಕರೆ ಇದ್ದರೆ ಹೊರಗೆ ಹೋಗಿ ಮಾತನಾಡಿ ಆಮೇಲೆ ಬಂದು ಸಭೆಯಲ್ಲಿ ಕೂತ್ಕೊಳ್ಳಿ. ಒಬ್ಬ ಜವಾಬ್ದಾರಿಯುತ ಜಿಲ್ಲಾಧಿಕಾರಿಯಾಗಿ ನಿಮಗೆ ಸಭೆಯ ಮರ್ಯಾದೆ ಕಾಪಾಡುವುದು ಗೊತ್ತಿಲ್ಲ ಎಂದರೆ, ನಿಮ್ಮ ಕೆಳಗಿನ ಅಧಿಕಾರಿಗಳು ಇನ್ಯಾವ ರೀತಿ ನಿರ್ಲಕ್ಷ್ಯ ವಹಿಸಬಹುದು?” ಎಂದು ಪ್ರಶ್ನಿಸಿದರು.

    “ಇನ್ಮುಂದೆ ಇಂತಹ ನಡವಳಿಕೆಯನ್ನು ಸಹಿಸುವುದಿಲ್ಲ” ಎಂದು ಸಭೆಯಲ್ಲೇ ಖಡಕ್ ಎಚ್ಚರಿಕೆ ನೀಡಿದರು.

    ಬರ ನಿರ್ವಹಣೆಯಲ್ಲಿ ಪಾರದರ್ಶಕತೆ: ಡಿ.ಕೆ. ಸೂಚನೆ

    ಅದೇ ಸಭೆಯಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ರಾಜ್ಯದಲ್ಲಿ ಬರ ನಿರ್ವಹಣೆಯಲ್ಲಿ ಸಂಪೂರ್ಣ ಪಾರದರ್ಶಕತೆ ಇರಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಪ್ರಮುಖ ಅಂಶಗಳು:

    • ಬೋರ್‌ವೆಲ್ ದಾಖಲಾತಿ ಕಡ್ಡಾಯ: ರಾಜ್ಯದಲ್ಲಿ ಇನ್ನು ಮುಂದೆ ಹೊಸದಾಗಿ ಬೋರ್‌ವೆಲ್ ಕೊರೆಯುವಾಗ ಕಡ್ಡಾಯವಾಗಿ ಅದರ ಸಂಪೂರ್ಣ ವಿಡಿಯೋ ರೆಕಾರ್ಡಿಂಗ್ ಮಾಡಬೇಕು. ಎಲ್ಲೋ ಬೋರ್‌ವೆಲ್ ಕೊರೆದಿದ್ದೇವೆ ಎಂದು ಸುಳ್ಳು ಹೇಳಿದರೆ ಒಪ್ಪುವುದಿಲ್ಲ.
    • ನಕಲಿ ಬೋರ್‌ವೆಲ್‌ಗೆ ಕ್ರಮ: ಎಲ್ಲಾದರೂ ನಕಲಿ ಅಥವಾ ಬೋಗಸ್ ಬೋರ್‌ವೆಲ್ ಹಗರಣ ಪತ್ತೆಯಾದರೆ ಆಯಾ ಜಿಲ್ಲಾ ಪಂಚಾಯತ್ ಸಿಇಒಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು.
    • ಫೀಲ್ಡ್ ವರದಿ ಬೇಕು: ಕೇವಲ ಕಚೇರಿಯಲ್ಲಿ ಕುಳಿತು ಪೇಪರ್ ರಿಪೋರ್ಟ್ ನೀಡಿದರೆ ಸಾಲದು. ಅಧಿಕಾರಿಗಳು ಫೀಲ್ಡ್‌ಗೆ ಇಳಿದು ಕೆಲಸ ಮಾಡಿದ ವರದಿ ಬೇಕು.
    • ಬರದ ತೀವ್ರತೆ: ರಾಜ್ಯದ 178 ತಾಲೂಕುಗಳಲ್ಲಿ ಶೇಕಡಾ 60 ರಷ್ಟು ಭೀಕರ ಮಳೆ ಕೊರತೆ ಕಾಣಿಸಿಕೊಂಡಿದೆ. 15 ದಿನಗಳಲ್ಲಿ ಕೇಂದ್ರ ಸರ್ಕಾರಕ್ಕೆ ಬರ ವರದಿ ಸಲ್ಲಿಸಬೇಕಾಗಿರುವುದರಿಂದ ಡಿಸಿ-ಸಿಇಒಗಳು ತ್ವರಿತವಾಗಿ ಸಮಗ್ರ ಮಾಹಿತಿ ನೀಡಬೇಕು.
    • ಕುಡಿಯುವ ನೀರಿಗೆ 1 ಕೋಟಿ: ಗ್ರಾಮೀಣ ಭಾಗದ ತಾಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ತಲಾ 1 ಕೋಟಿ ರೂಪಾಯಿ ಹೆಚ್ಚುವರಿ ಹಣ ಘೋಷಿಸಲಾಗಿದೆ.

    ಡಿಸಿಗಳು ರೈತರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಕೃಷಿ ಚಟುವಟಿಕೆಗಳಿಗೆ ಮಾರ್ಗದರ್ಶನ ನೀಡಬೇಕು ಎಂದು ಅವರು ಸೂಚಿಸಿದರು.


    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಬ್ರೇಕಿಂಗ್ ನ್ಯೂಸ್
    ಅರ್ಧರಾತ್ರಿ ತಾಯಿ-ಮಗುವಿನ ಅಕ್ರಮ ಬಂಧನ: ಇಡೀ ಪೊಲೀಸ್ ಠಾಣೆಯನ್ನೇ ಸಸ್ಪೆಂಡ್ ಮಾಡಿದ ಜಡ್ಜ್!
    ನಾಟಕ ಕಲಾವಿದೆ ಸೌಮ್ಯ ಶೆಟ್ಟಿ ಬಂಧನ
    ಟೆಕ್ಸಾಸ್‌ನಲ್ಲಿ ತ್ರಿವರ್ಣ ಧ್ವಜ ಹರಿದು ಹಾಕಿದ ವಿಡಿಯೋ ವೈರಲ್ …ಅಮೆರಿಕದಲ್ಲಿ ಹೆಚ್ಚುತ್ತಿದೆಯೇ ಭಾರತ ವಿರೋಧಿ ಮನೋಭಾವ?
    ಖಾದರ್‌ ಖಡಕ್ ವಾರ್ನಿಂಗ್ ವೈರಲ್ : ಆದರೆ ಖಡಕ್ ಆಕ್ಷನ್ ಯಾವಾಗ?”ಪ್ರತಿ ಮಳೆಯಲ್ಲೂ ಅದೇ ಕಥೆ: ರಸ್ತೆ ಗುಂಡಿ, ಅಪಘಾತ, ಎಚ್ಚರಿಕೆ, ಜವಾಬ್ದಾರಿ ಹೊತ್ತವರ ಜಾಣ ಮರೆವು!
    “ಅಕ್ಕಾ, ಮನೆಗೆ ಹೋಗೋಣ” ಎಂದು ಅಕ್ಕನನ್ನು ಕರೆತರಲು ಬಂದ ಅಪೂರ್ವ… ಕೆಲವೇ ಕ್ಷಣಗಳಲ್ಲಿ ಕಬ್ಬಿಣದ ಗೇಟ್ ಅಡಿಯಲ್ಲಿ ಅಂತ್ಯ
    PTCL ಕಾಯ್ದೆ ಉಲ್ಲಂಘಿಸಿದ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮಕ್ಕೆ ಒತ್ತಾಯ – ಕಂದಾಯ ಸಚಿವರಿಗೆ ದಲಿತ ನಾಯಕರ ಮನವಿ
    ಅಮೇರಿಕಾಕ್ಕೆ ಅಷ್ಟು ಧೈರ್ಯದಿಂದ ಎಲ್ಲಿಂದ ಬಂತು?
    ವಿಟ್ಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ
    ಜಾಗತಿಕ ಸಂಘರ್ಷದ ಮಧ್ಯೆ ಭಾರತ–ಯುಎಇ ಬಿಗ್ ಡೀಲ್! ತಂತ್ರಜ್ಞಾನ, ಇಂಧನ ಮತ್ತು ಭದ್ರತೆಯಲ್ಲಿ ಐತಿಹಾಸಿಕ ಒಗ್ಗಟ್ಟು.
    ಭೀಕರ ಅಪಘಾತ ಮಹಿಳೆ ಬಲಿ
    ಸರಸಕ್ಕೆ ಅಡ್ಡಿಪಡಿಸಿದ ಯುವಕನ ಮೇಲೆ  ಭೀಕರ ದಾಳಿ: ಗುಜರಾತ್‌ನಲ್ಲಿ 21 ವರ್ಷದ ಯುವಕ ಬಲಿ
    ಕೊನೆಕ್ಷಣದ ಹೃದಯ ಕಲುಕುವ ಹರೀಶ್ ರಾಣಾ – ದಯಾಮರಣvedio
    ಹೃದಯವಿದ್ರಾವಕ ಘಟನೆ: ರಾಜಕಾಲುವೆಯಲ್ಲಿ ತೇಲಿ ಬಂದ ನವಜಾತ ಹಸುಗೂಸು
    ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ – 10 ರೋಗಿಗಳ ದುರ್ಮರಣ-11 ಸಿಬ್ಬಂದಿಗೆ ಗಾಯ
    ಸಾರ್ವಜನಿಕರಲ್ಲಿ ವಿನಂತಿ …!
    ಮನೆ ಬಾಡಿಗೆ ಕೊಡುವಾಗ ನಿಗಾ ಇರಿಸಲು ಮಾಲಕರಿಗೆ ಎಚ್ಚರಿಕೆ ..!ಗಾಂಜಾ ಸೇವಿಸಿದ ಐದು ನರ್ಸಿಂಗ್ ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ….
    ತಮಿಳು ರಾಜಕೀಯ ರಣರಂಗದಲ್ಲಿ “ವಿಜಯ”ಗಾಥೆ 118 ದಾಟಿದ TVK  ವಿಜಯ್ ಕೈ ಹಿಡಿದ ಮೈತ್ರಿ ಪಕ್ಷಗಳು!
    ವಿಷಪ್ರಾಶನ  ಪ್ರಕರಣದಲ್ಲಿ ಕಾರ್ಕಳ ಗಜರಿಯ ಹಾಸ್ಪಿಟಲ್ ತಪ್ಪು ಮಾಡಿತೇ?
    ಡ್ರೋನ್ ದಾಳಿಯ ನಂತರ ಬಹ್ರೇನ್‌ನಲ್ಲಿ ಕನಿಷ್ಠ 32 ಜನರಿಗೆ ಗಾಯ
    ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆಯ ಕ್ರೆಡಿಟ್ ಪಡೆದುಕೊಳ್ಳಲು ಶುರುವಾಯಿತು ಫೈಟ್
    ಪಹಲ್ಗಾಮ್ ದಾಳಿಗೆ ವರ್ಷ : ಮೋದಿ ಶ್ರದ್ಧಾಂಜಲಿ, ಉಗ್ರರಿಗೆ ಎಚ್ಚರಿಕೆ
    ಕಾಂಗ್ರೆಸ್–ಮುಸ್ಲಿಂ ಸಮುದಾಯ ಸಂಬಂಧದಲ್ಲಿ ದೊಡ್ಡ ಬಿರುಕು?
    ಟ್ರಂಪ್ ಮೇಲೆ ದಾಳಿ ಯತ್ನ -ಗನ್ ಸದ್ದು ಮತ್ತೆ ವೈಟ್ ಹೌಸ್ ರಾಜಕೀಯವನ್ನ ನಡುಗಿಸಿದೆ!ಭದ್ರತಾ ಪ್ರಶ್ನೆ!
    War update-ಕಂಪ್ಲೀಟ್ ಡೀಟೇಲ್ಸ್ …ಮುಂದೇನು? ceasefire ಮುಂದುವರಿಯುತ್ತದೆಯಾ?ಶಾಂತಿ ಅಥವಾ ಸಂಘರ್ಷ? ಮುಂದಿನ ಕೆಲ ದಿನಗಳು ವಿಶ್ವದ ಭವಿಷ್ಯ ತೀರ್ಮಾನಿಸುತ್ತದೆ.
    19 ವರ್ಷದ ಆಯಾನ್ ಅಹ್ಮದ್ ತನ್ವೀರ್ ಅಹ್ಮದ್ ವಿರುದ್ಧ ಗಂಭೀರ ಸೈಬರ್ ಲೈಂಗಿಕ ಶೋಷಣೆ ..!ಅಮರಾವತಿ ಭೀಕರ ಪ್ರಕರಣ-
    “ಧುರಂಧರ್ “ಸಿನಿಮಾವನ್ನೂ ಮೀರಿದ ಪಾಕ್ ಸಂಚನ್ನ ಭೇದಿಸಿದ ಕೇಂದ್ರ ಗುಪ್ತಚರ ಇಲಾಖೆ ಮತ್ತು ಕರ್ನಾಟಕ ಖಾಕಿ..
    ಕಾರ್ಕಳದಲ್ಲಿ  ಜಾಗ ಕಿತ್ತುಕೊಳ್ಳಲು ಮಾಡಿದ ಪ್ಲಾನ್, ರಿವರ್ಸಾಗಿ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದೆ
    ಪ್ರತೀಕಾರದ ದಾಳಿಗೆ ‘ ರೌಡಿಶೀಟರ್ ಟ್ಯಾಬ್ಲೆಟ್’ ಆರೀಫ್ ಖತಂ .!
    ದುಬೈ ಕನಸು… ಜೈಲು ವಾಸ್ತವ!ಡ್ರಗ್ ಮಾಫಿಯಾದ ಗುರಿಯೇ ಯುವಕರು..!!ಭವಿಷ್ಯ ಕಳೆದುಕೊಳ್ಳುವ ಮುನ್ನ ಎಚ್ಚರ!