📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಮೊಸಾದ್ ಏಜೆಂಟ್ ಇಸ್ಮಾಯಿಲ್ ಖಾನಿಯಿಂದ ಇರಾನಿ ಸರ್ವೋಚ್ಛ ನಾಯಕನ  ಹತ್ಯೆ

ಡೆಂಟಲ್ ಇಂಪ್ಲಾಂಟ್ ಮೂಲಕ ಸ್ಥಳ ಪತ್ತೆ?!!

ಖಮೇನಿ ಹತ್ಯೆ ಯೋಜನೆಗೆ ಹಲವು ವರ್ಷಗಳ ಸಂಚು, ಹಾಗೇ ವರ್ಷಗಳ ಸಿಸಿಟಿವಿ ನಿಗಾವಳಿ ,ಕುತೂಹಲ ಕೆರಳಿಸಿದ ತನಿಖೆ!

ಇರಾನ್‌ನ ಪರಮೋನ್ನತ ನಾಯಕ Ali Khamenei ಅವರನ್ನು ಗುರಿಯಾಗಿಸಿಕೊಂಡು ಹಲವು ವರ್ಷಗಳಿಂದ ಸಂಚು ರೂಪಿಸಲಾಗುತ್ತಿತ್ತು ಎಂಬ ಅಚ್ಚರಿ ಮೂಡಿಸುವ ಮಾಹಿತಿ ಬಹಿರಂಗವಾಗಿದೆ ಎಂದು ವರದಿಯಾಗಿದೆ. ಭದ್ರತಾ ಸಂಸ್ಥೆಗಳು ಪತ್ತೆಹಚ್ಚಿದ ಪ್ರಾಥಮಿಕ ಮಾಹಿತಿಯ ಪ್ರಕಾರ, ಹತ್ಯೆಗೆ ಸಂಬಂಧಿಸಿದಂತೆ ರೂಪರೇಖೆ (ಸ್ಕೆಚ್), ತಂತ್ರಜ್ಞಾನ ಉಪಕರಣಗಳು ಹಾಗೂ ಚಲನವಲನಗಳ ಮೇಲ್ವಿಚಾರಣೆ ನಡೆದಿರುವ ಸುಳಿವುಗಳು ದೊರೆತಿವೆ.

ಇದರ ಮಧ್ಯೆ ಮತ್ತೊಂದು ಸಂಚಲನಕಾರಿ ಅಂಶ ಬೆಳಕಿಗೆ ಬಂದಿದೆ. ಡೆಂಟಲ್ ಇಂಪ್ಲಾಂಟ್‌ನಲ್ಲಿ ಅಳವಡಿಸಿದ್ದ ಮೈಕ್ರೋ-ಚಿಪ್ ಅಥವಾ ಸೀರಿಯಲ್ ಟ್ರ್ಯಾಕಿಂಗ್ ಕೋಡ್ ಮೂಲಕ ವ್ಯಕ್ತಿಯ locationtrace.,ಚಲನೆಯ ಸುಳಿವುಗಳನ್ನು ಪತ್ತೆಹಚ್ಚುವ ಪ್ರಯತ್ನ ನಡೆದಿರುವ ಮಾಹಿತಿ ತನಿಖೆಯನ್ನು ಮತ್ತಷ್ಟು ಕುತೂಹಲಕರಗೊಳಿಸಿದೆ. ಈ ತಂತ್ರದ ಮೂಲಕ ಇರಾನ್ ನಲ್ಲಿ ವೈದ್ಯರ ಮಾರುವೇಷ ದಲ್ಲಿದ್ದ ಮೊಸಾದ್ ಅಂಡರ್ ಕವರ್ ಏಜೆಂಟ್ ಗಳು ಇರಾನಿಯನ್ ಸೇನಾಧಿಕಾರಿಗಳಿಗೆ ಅದರಲ್ಲೂ ಖಮೇನಿ ಆಪ್ತವಲಯದ ಅಧಿಕಾರಿಗಳಿಗೆ ಹಲ್ಲಿನ ಚಿಕಿತ್ಸೆ ನೀಡುವ ನೆಪದಲ್ಲಿ ನಿಖರ ಲೊಕೇಶನ್ ಪತ್ತೆ ಹಚ್ಚುವ ಮೈಕ್ರೊಚಿಪ್ ಇರುವ ಡೆಂಟಲ್ಇಂಪ್ಲಾಂಟ್ ಮಾಡಿದ್ದರು ಅನ್ನುವ ತಂತ್ರಗಾರಿಕೆ ಹತ್ಯೆಗೆ ಸಹಾಯ ಮಾಡಿದೆ ಅನ್ನುವ ಮಾಹಿತಿ ತನಿಖೆಯಿಂದ ಬಹಿರಂಗವಾಗಿದೆ.

ತಂತ್ರಜ್ಞಾನ ಮತ್ತು ವೈದ್ಯಕೀಯ ಸಾಧನಗಳನ್ನು ಸಂಯೋಜಿಸಿ ನಡೆಸಿದ ಈ ಶೋಧ ಕಾರ್ಯ ತನಿಖಾಧಿಕಾರಿಗಳಿಗೆ ಮಹತ್ವದ ಕೊಂಡಿಯಾಗಿದೆಯೆಂದು ಹೇಳಲಾಗಿದೆ.

ಗುಪ್ತ ಸಭೆಗಳು, ಆರ್ಥಿಕ ನೆರವು ಮತ್ತು ವಿದೇಶಿ ಸಂಪರ್ಕಗಳ ಮೂಲಕ ಈ ಸಂಚು ಹಂತ ಹಂತವಾಗಿ ರೂಪುಗೊಂಡಿರಬಹುದೆಂಬ ಅನುಮಾನ ವ್ಯಕ್ತವಾಗಿದೆ. ಭದ್ರತಾ ವಲಯಗಳು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆಯನ್ನು ತೀವ್ರಗೊಳಿಸಲಾಗಿದೆ.

ಅಚ್ಚರಿಗೊಳಿಸಿದ ಈ ಪ್ರಕರಣದಲ್ಲಿ, ಹಲವು ವರ್ಷಗಳಿಂದ ಸಂಶಯಾಸ್ಪದ ಚಲನವಲನಗಳ ಮೇಲೆ ಸಿಸಿಟಿವಿ ಕ್ಯಾಮೆರಾಗಳ ನಿಗಾವಳಿ ನಡೆದಿದ್ದುದಾಗಿ ತನಿಖಾ ಮೂಲಗಳು ತಿಳಿಸಿವೆ. ನಗರದ ವಿವಿಧ ಭಾಗಗಳಲ್ಲಿ ಅಳವಡಿಸಿದ್ದ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ವಿಶ್ಲೇಷಿಸಿದಾಗ, ನಿರ್ದಿಷ್ಟ ವ್ಯಕ್ತಿಗಳ ಚಟುವಟಿಕೆಗಳು ಒಂದೇ ಮಾದರಿಯಲ್ಲಿ ಪುನರಾವರ್ತಿತವಾಗಿರುವುದು ಪತ್ತೆಯಾಗಿದೆ ಎನ್ನಲಾಗಿದೆ.

ಭದ್ರತಾ ತಜ್ಞರ ಪ್ರಕಾರ, ಸಿಸಿಟಿವಿ ದೃಶ್ಯಗಳು ಮತ್ತು ಡಿಜಿಟಲ್ ಸುಳಿವುಗಳ ಸಮನ್ವಯದಿಂದ ಪ್ರಕರಣದ ಜಾಲವನ್ನು ಬಿಚ್ಚಿಡಲು ಸಾಧ್ಯವಾಗುತ್ತಿದೆ. ಹಲವು ವರ್ಷಗಳ ಹಿನ್ನಲೆಯಲ್ಲಿ ನಡೆದಿರುವ ಈ ನಿಗಾವಳಿ ಮತ್ತು ತಂತ್ರಜ್ಞಾನದ ಬಳಕೆ ಪ್ರಕರಣಕ್ಕೆ ಹೊಸ ತಿರುವು ನೀಡಿದೆ.

ಸರ್ಕಾರ ಸಾರ್ವಜನಿಕರಲ್ಲಿ ಎಚ್ಚರಿಕೆ ಹಾಗೂ ಶಾಂತಿ ಕಾಪಾಡುವಂತೆ ಮನವಿ ಮಾಡಿದೆ. ಘಟನೆಯ ಹಿನ್ನೆಲೆ ಮತ್ತು ಹತ್ಯೆಯ ಸಂಚಿನ ವ್ಯಾಪ್ತಿ ಕುರಿತು ಹೆಚ್ಚಿನ ಮಾಹಿತಿ ತನಿಖೆಯ ಬಳಿಕವೇ ಸ್ಪಷ್ಟವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಉದ್ಯಮಿ, ಕಾಲೇಜ್ topper,  ಕೋಟ್ಯದೀಶರೇ…ಕಠಿಣ ಜೈನ ಸನ್ಯಾಸದತ್ತ…!
ಪಿಸ್ತೂಲ್ ತೋರಿಸಿ ಬೆದರಿಸಿ ಪರಾರಿಯಾಗಿದ್ದ ಯುವಕ ಬಂಧನ
ಕರ್ನಾಟಕದಲ್ಲಿ ಮಳೆ ಅಲರ್ಟ್! 13 ಜಿಲ್ಲೆಗಳಿಗೆ ಯೆಲ್ಲೋ ವಾರ್ನಿಂಗ್ – ಜನರು ಎಚ್ಚರಿಕೆ ಅಗತ್ಯ
ಹಳಿಯಾಳದಲ್ಲಿ ನೀರಿನ ಹಾಹಾಕಾರ… ಮಾರ್ಚ್ 16ರಂದು ಬೃಹತ್ ಪ್ರತಿಭಟನೆ 
ಇದು IPLನಲ್ಲಿ ಹೊಸ ಹೀರೋ ಹುಟ್ಟಿದಂತೇ…ಆದ್ರೆ ಕ್ರಿಕೆಟ್ ಅಲ್ಲ, ಬಾಕ್ಸಿಂಗ್‌ನಲ್ಲಿ! 🥊🔥
ಯುದ್ಧದ ಹೊಡೆತ: ಹಣ ಕೊಟ್ಟರೂ ಗ್ಯಾಸ್ ಇಲ್ಲ! ಕಾರವಾರ ಬಂದರು ಸ್ತಬ್ಧ — ಜನಜೀವನ ಅಸ್ತವ್ಯಸ್ತ 🔥
ಸಿಐಡಿ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್: ವಂಚಕರ ಬಲೆಯಿಂದ ಜಸ್ಟ್ ಎಸ್ಕೇಪ್
ಎಸ್ ಪಿ ಅರುಣ್ ಕುಮಾರ್ ಗೆ ಮುಖ್ಯಮಂತ್ರಿ ಪದಕ
ಜೈನ ಸನ್ಯಾಸ ದೀಕ್ಷೆ ನಿಯಮಗಳು ಏನು ಗೊತ್ತಾ?
ಕಂದಾಯ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ
ಅಹಿಂಸೆ, ಸತ್ಯ ಮತ್ತು ತ್ಯಾಗದ ಮಾರ್ಗವೇ ಮಹಾವೀರರ ದರ್ಶನ — ಇದೇ ಸುಖಿ ಜೀವನದ ಗುಟ್ಟು.
Tata Consultancy Services (TCS) ನಾಶಿಕ್ ವಿವಾದ-ಬೆಚ್ಚಿಬೀಳಿಸಿದ 30 ದಿನಗಳ ಗುಪ್ತ ಪೊಲೀಸ್ ಆಪರೇಷನ್‌ ರಹಸ್ಯಗಳು…!
ಮಂಗಳೂರಿನಲ್ಲಿ ಪಕ್ಕಪ್ಲಾನ್ ಡ್ ಅಟ್ಯಾಕ್ ..!ರೌಡಿ ಶೀಟರ್ ಬರ್ಬರ ಹತ್ಯೆ…ವಿಶೇಷ ತಂಡ ರಚನೆ..!
ಅಂದು ಮುಖ್ಯ ಮಂತ್ರಿ, ಇಂದು ಪುಟ್ಟಪಾತ್ ವ್ಯಾಪಾರಿ!!
₹1270 ಕೋಟಿ ಕಾನ್ಟ್ರಾಕ್ಟ್ ಹಗರಣ -CM ಖಾಂಡು ಕುಟುಂಬ ವಿಚಾರಣೆ-ಸುಪ್ರೀಂಕೋರ್ಟ್ ಸಿಬಿಐಗೆ ಆದೇಶ..
ಎಲ್ಪಿಜಿ ಗ್ಯಾಸ್ ದರದಲ್ಲಿ ಏರಿಕೆ:  ಮಧ್ಯಮ ವರ್ಗದವರಲ್ಲಿ ಹತಾಶೆ
ಮಕ್ಕಳ ಸುರಕ್ಷತೆಯೇ ಮುಖ್ಯ – ಸಂದೇಶ ಕೊಟ್ಟ ಹೈಕೋರ್ಟ್
ದಕ್ಷಿಣಕನ್ನಡ ಜಿಲ್ಲಾಡಳಿತ ರೈತರ ಪರವಾಗಿ ನಿಲ್ಲುತ್ತಿಲ್ಲ ಎಂಬ ಅಸಮಾಧಾನ
ಜೀವನ್ಮರಣ ಹೋರಾಟದಲ್ಲೂ ಗೆಳೆಯರ ಬದುಕಿಸಿದ 14ರ ಬಾಲಕನ ರೋಚಕ  ಸ್ಟೋರಿ 
ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ದಯಾ ಮರಣಕ್ಕೆ ಅನುಮತಿ
HSRP ರಿಲೀಫ್ + PUCC ಫೈನ್ ಮುಕ್ತ…ಡೀಟೇಲ್ಸ್ ಇಲ್ಲಿದೆ ಕರ್ನಾಟಕದ ಎಲ್ಲ ಡ್ರೈವರ್‌ಗಳಿಗೆ ಡಬಲ್ ಗುಡ್ ನ್ಯೂಸ್!???
ಪಕ್ಷದಿಂದ ಪಕ್ಕಕ್ಕೆ? ರಾಘವ್ ಚಡ್ಡಾ ಹಿಂದೆ ಏನಿದೆ ದೊಡ್ಡ ರಾಜಕೀಯ ಆಟ!”ಮೌನಗೊಳಿಸಿದರೂ ನಿಲ್ಲದ ಧ್ವನಿ – ರಾಘವ್ ಚಡ್ಡಾ!”
ತಪ್ಪುಅರ್ಥಕ್ಕೆಕ್ಷಮೆ, ಹೊಸರೂಪದಲ್ಲಿಮತ್ತೆ ‘ಸರ್ಸೆಸೆರಗು’”-ಪ್ರೇಮ್
ಇರಾನ್ ಬಿಕ್ಕಟ್ಟು ವೀಸಾ ವಿಸ್ತರಿಸಲು ವಿದೇಶಿ ಪ್ರಜೆಗಳು ಹತ್ತಿರದ FRRO ಅನ್ನು ಸಂಪರ್ಕಿಸಲು ಭಾರತ ಸಲಹೆ
“ಪ್ರೇಮ ಕಥೆ ತಿರುವು: ಗಂಡನ ಜೀವವೇ ಟಾರ್ಗೆಟ್!”ಬ್ಯಾಂಕ್ ಅಧಿಕಾರಿ ಪತ್ನಿ taxi ಚಾಲಕನೊಂದಿಗೆ ಸೇರಿ killing plan
ಮಂಗಳೂರು ಶಾಕ್ ! ನೇತ್ರಾವತಿ ತೀರದ ನದಿಯಲ್ಲಿ ತೇಲಿ ಬಂದ ರಾಶಿ ರಾಶಿ ಆಧಾರ್ ಕಾರ್ಡ್‌ಗಳು !!!ಹೊಣೆ ಯಾರು?
ಮರಣದಂಡನೆ ಶಿಕ್ಷೆಗೆ ಈಡಾದ  ತಮಿಳುನಾಡು   ಪೊಲೀಸರು
ಮಧ್ಯಪ್ರಾಚ್ಯದಲ್ಲಿ ಯುದ್ಧ– ಸಂಕಷ್ಟದಲ್ಲಿ ಜಗತ್ತು-ಉಸಿರು ತಡೆದ ಪರಿಸ್ಥಿತಿ!ಏನಾಗ್ತಾ ಇದೆ…
ಬಲಪಂಥೀಯರ ಜೊತೆ ಮುಖ್ಯಮಂತ್ರಿಗಳ ಸ್ನೇಹ : ಅಭದ್ರತೆ ಯಾರಿಗೆಲ್ಲ?
ವಿಷಪ್ರಾಶನ  ಪ್ರಕರಣದಲ್ಲಿ ಕಾರ್ಕಳ ಗಜರಿಯ ಹಾಸ್ಪಿಟಲ್ ತಪ್ಪು ಮಾಡಿತೇ?