📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಮೊಸಾದ್ ಏಜೆಂಟ್ ಇಸ್ಮಾಯಿಲ್ ಖಾನಿಯಿಂದ ಇರಾನಿ ಸರ್ವೋಚ್ಛ ನಾಯಕನ  ಹತ್ಯೆ

ಡೆಂಟಲ್ ಇಂಪ್ಲಾಂಟ್ ಮೂಲಕ ಸ್ಥಳ ಪತ್ತೆ?!!

ಖಮೇನಿ ಹತ್ಯೆ ಯೋಜನೆಗೆ ಹಲವು ವರ್ಷಗಳ ಸಂಚು, ಹಾಗೇ ವರ್ಷಗಳ ಸಿಸಿಟಿವಿ ನಿಗಾವಳಿ ,ಕುತೂಹಲ ಕೆರಳಿಸಿದ ತನಿಖೆ!

ಇರಾನ್‌ನ ಪರಮೋನ್ನತ ನಾಯಕ Ali Khamenei ಅವರನ್ನು ಗುರಿಯಾಗಿಸಿಕೊಂಡು ಹಲವು ವರ್ಷಗಳಿಂದ ಸಂಚು ರೂಪಿಸಲಾಗುತ್ತಿತ್ತು ಎಂಬ ಅಚ್ಚರಿ ಮೂಡಿಸುವ ಮಾಹಿತಿ ಬಹಿರಂಗವಾಗಿದೆ ಎಂದು ವರದಿಯಾಗಿದೆ. ಭದ್ರತಾ ಸಂಸ್ಥೆಗಳು ಪತ್ತೆಹಚ್ಚಿದ ಪ್ರಾಥಮಿಕ ಮಾಹಿತಿಯ ಪ್ರಕಾರ, ಹತ್ಯೆಗೆ ಸಂಬಂಧಿಸಿದಂತೆ ರೂಪರೇಖೆ (ಸ್ಕೆಚ್), ತಂತ್ರಜ್ಞಾನ ಉಪಕರಣಗಳು ಹಾಗೂ ಚಲನವಲನಗಳ ಮೇಲ್ವಿಚಾರಣೆ ನಡೆದಿರುವ ಸುಳಿವುಗಳು ದೊರೆತಿವೆ.

ಇದರ ಮಧ್ಯೆ ಮತ್ತೊಂದು ಸಂಚಲನಕಾರಿ ಅಂಶ ಬೆಳಕಿಗೆ ಬಂದಿದೆ. ಡೆಂಟಲ್ ಇಂಪ್ಲಾಂಟ್‌ನಲ್ಲಿ ಅಳವಡಿಸಿದ್ದ ಮೈಕ್ರೋ-ಚಿಪ್ ಅಥವಾ ಸೀರಿಯಲ್ ಟ್ರ್ಯಾಕಿಂಗ್ ಕೋಡ್ ಮೂಲಕ ವ್ಯಕ್ತಿಯ locationtrace.,ಚಲನೆಯ ಸುಳಿವುಗಳನ್ನು ಪತ್ತೆಹಚ್ಚುವ ಪ್ರಯತ್ನ ನಡೆದಿರುವ ಮಾಹಿತಿ ತನಿಖೆಯನ್ನು ಮತ್ತಷ್ಟು ಕುತೂಹಲಕರಗೊಳಿಸಿದೆ. ಈ ತಂತ್ರದ ಮೂಲಕ ಇರಾನ್ ನಲ್ಲಿ ವೈದ್ಯರ ಮಾರುವೇಷ ದಲ್ಲಿದ್ದ ಮೊಸಾದ್ ಅಂಡರ್ ಕವರ್ ಏಜೆಂಟ್ ಗಳು ಇರಾನಿಯನ್ ಸೇನಾಧಿಕಾರಿಗಳಿಗೆ ಅದರಲ್ಲೂ ಖಮೇನಿ ಆಪ್ತವಲಯದ ಅಧಿಕಾರಿಗಳಿಗೆ ಹಲ್ಲಿನ ಚಿಕಿತ್ಸೆ ನೀಡುವ ನೆಪದಲ್ಲಿ ನಿಖರ ಲೊಕೇಶನ್ ಪತ್ತೆ ಹಚ್ಚುವ ಮೈಕ್ರೊಚಿಪ್ ಇರುವ ಡೆಂಟಲ್ಇಂಪ್ಲಾಂಟ್ ಮಾಡಿದ್ದರು ಅನ್ನುವ ತಂತ್ರಗಾರಿಕೆ ಹತ್ಯೆಗೆ ಸಹಾಯ ಮಾಡಿದೆ ಅನ್ನುವ ಮಾಹಿತಿ ತನಿಖೆಯಿಂದ ಬಹಿರಂಗವಾಗಿದೆ.

ತಂತ್ರಜ್ಞಾನ ಮತ್ತು ವೈದ್ಯಕೀಯ ಸಾಧನಗಳನ್ನು ಸಂಯೋಜಿಸಿ ನಡೆಸಿದ ಈ ಶೋಧ ಕಾರ್ಯ ತನಿಖಾಧಿಕಾರಿಗಳಿಗೆ ಮಹತ್ವದ ಕೊಂಡಿಯಾಗಿದೆಯೆಂದು ಹೇಳಲಾಗಿದೆ.

ಗುಪ್ತ ಸಭೆಗಳು, ಆರ್ಥಿಕ ನೆರವು ಮತ್ತು ವಿದೇಶಿ ಸಂಪರ್ಕಗಳ ಮೂಲಕ ಈ ಸಂಚು ಹಂತ ಹಂತವಾಗಿ ರೂಪುಗೊಂಡಿರಬಹುದೆಂಬ ಅನುಮಾನ ವ್ಯಕ್ತವಾಗಿದೆ. ಭದ್ರತಾ ವಲಯಗಳು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆಯನ್ನು ತೀವ್ರಗೊಳಿಸಲಾಗಿದೆ.

ಅಚ್ಚರಿಗೊಳಿಸಿದ ಈ ಪ್ರಕರಣದಲ್ಲಿ, ಹಲವು ವರ್ಷಗಳಿಂದ ಸಂಶಯಾಸ್ಪದ ಚಲನವಲನಗಳ ಮೇಲೆ ಸಿಸಿಟಿವಿ ಕ್ಯಾಮೆರಾಗಳ ನಿಗಾವಳಿ ನಡೆದಿದ್ದುದಾಗಿ ತನಿಖಾ ಮೂಲಗಳು ತಿಳಿಸಿವೆ. ನಗರದ ವಿವಿಧ ಭಾಗಗಳಲ್ಲಿ ಅಳವಡಿಸಿದ್ದ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ವಿಶ್ಲೇಷಿಸಿದಾಗ, ನಿರ್ದಿಷ್ಟ ವ್ಯಕ್ತಿಗಳ ಚಟುವಟಿಕೆಗಳು ಒಂದೇ ಮಾದರಿಯಲ್ಲಿ ಪುನರಾವರ್ತಿತವಾಗಿರುವುದು ಪತ್ತೆಯಾಗಿದೆ ಎನ್ನಲಾಗಿದೆ.

ಭದ್ರತಾ ತಜ್ಞರ ಪ್ರಕಾರ, ಸಿಸಿಟಿವಿ ದೃಶ್ಯಗಳು ಮತ್ತು ಡಿಜಿಟಲ್ ಸುಳಿವುಗಳ ಸಮನ್ವಯದಿಂದ ಪ್ರಕರಣದ ಜಾಲವನ್ನು ಬಿಚ್ಚಿಡಲು ಸಾಧ್ಯವಾಗುತ್ತಿದೆ. ಹಲವು ವರ್ಷಗಳ ಹಿನ್ನಲೆಯಲ್ಲಿ ನಡೆದಿರುವ ಈ ನಿಗಾವಳಿ ಮತ್ತು ತಂತ್ರಜ್ಞಾನದ ಬಳಕೆ ಪ್ರಕರಣಕ್ಕೆ ಹೊಸ ತಿರುವು ನೀಡಿದೆ.

ಸರ್ಕಾರ ಸಾರ್ವಜನಿಕರಲ್ಲಿ ಎಚ್ಚರಿಕೆ ಹಾಗೂ ಶಾಂತಿ ಕಾಪಾಡುವಂತೆ ಮನವಿ ಮಾಡಿದೆ. ಘಟನೆಯ ಹಿನ್ನೆಲೆ ಮತ್ತು ಹತ್ಯೆಯ ಸಂಚಿನ ವ್ಯಾಪ್ತಿ ಕುರಿತು ಹೆಚ್ಚಿನ ಮಾಹಿತಿ ತನಿಖೆಯ ಬಳಿಕವೇ ಸ್ಪಷ್ಟವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಕಾಂಗ್ರೆಸ್‌ಗೆ ದಾವಣಗೆರೆ ಬಿಸಿ ತುಪ್ಪ!..“ಸಮುದಾಯದ ಹೆಸರಿನಲ್ಲಿ ರಾಜಕೀಯ… ಅಥವಾ ರಾಜಕೀಯದ ಹೆಸರಿನಲ್ಲಿ ಸಮುದಾಯ?”
ಮನೆಯ ಲಾಕ್ ವ್ಯವಸ್ಥೆ ಇದ್ದರೂ, ಸುರಕ್ಷತೆ ಭೇದಿಸಲಾಗಿದೆ….!ಕುಟುಂಬ ದೇವಸ್ಥಾನಕ್ಕೆ -ಕಳ್ಳರು ಅದೇ ಮನೆ ಟಾರ್ಗೆಟ್..!
ಉಡುಪಿಯ ಮಾರ್ಕೆಟ್‌ 99 ಮ್ಯಾನೇಜರ್‌ ವಿರುದ್ಧ ₹13.39 ಲಕ್ಷ ದುರ್ಬಳಕೆ ಪ್ರಕರಣ ದಾಖಲು…
Golden Hour ಉಳಿಸುವತ್ತ ಗ್ರಾಮದಿಂದ ನಗರವರೆಗೆ – ಕರ್ನಾಟಕ ಹೆಲ್ತ್ ಸಿಸ್ಟಮ್ ಮಹತ್ವದ ಹೆಜ್ಜೆ
ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣಕ್ಕೆ ಆಪ್ ತೀವ್ರ ವಿರೋಧ-ಒಪ್ಪಂದ ಬಹಿರಂಗಪಡಿಸುವಂತೆ ಆಗ್ರಹ
ದೈವದ ನ್ಯಾಯ ತಡವಾಗಬಹುದು… ಆದರೆ ತಪ್ಪದು!”ತುಳುನಾಡಿನ ದೈವಶಕ್ತಿ – ನಂಬಿಕೆಗೆ ಸಾಕ್ಷಿಯಾದ ನಿಜಘಟನೆ ..
ಸತೀಶ್’ ಆಗಿ ಹೋದವ, ‘ಸಲೀಂ’ ಆಗಿ ವಾಪಸ್ …!26 ವರ್ಷಗಳ ಬಳಿಕ ತಾಯಿಯ ಮಡಿಲಿಗೆ ಮರಳಿದ ಮಗನ ಭಾವುಕ ಕಥೆ
ಗೃಹಲಕ್ಷ್ಮಿ ಫಲಾನುಭವಿಗಳೇ ಗಮನಿಸಿ: ಹಣ ಕ್ರೆಡಿಟ್ ಆಗ್ಬೇಕಾದ್ರೆ ಇನ್ಮುಂದೆ ಬಯೋಮೆಟ್ರಿಕ್ ಕಡ್ಡಾಯ!
ಮುಂಬೈ ಬೀದಿಯಲ್ಲಿ ನಾರಿ ಶಕ್ತಿಯ ಸಿಡಿಲು!ಜನರ ಬದುಕು ಅಡ್ಡಗಟ್ಟಿದರೆ ಎದುರಿಸುವವರು ಹೀಗೆ ಒಬ್ಬೊಬ್ಬರೇ ಇನ್ನೂ ಹುಟ್ಟುತ್ತಾರೆ..
ಸಂಸತ್ತಿನಲ್ಲಿ ಪ್ರಶ್ನೆ ಎದುರಿಸಲು ಆಗದೆ,  ಪ್ರಶ್ನೆಯನ್ನೇ ಕೇಳದಂತೆ ಮಾಡಿದರು – ರಾಹುಲ್ ಗಾಂಧಿ
ಮಂಗಳೂರು ಇನ್ಸ್ಟಾಮಾರ್ಟ ಕುಂಟಿಕಾನದಲ್ಲಿ ಲಿಫ್ಟ್ ದುರಂತ: ಡೆಲಿವರಿ ಸಿಬ್ಬಂದಿ ದುರ್ಮರಣ
ಧರ್ಮಸ್ಥಳ-ಚಿಕ್ಕಮಗಳೂರು ಟ್ರಿಪ್‌ಗೆ ಹೊರಟ ಸ್ವಿಗ್ಗಿ ಡೆಲಿವರಿ ಬಾಯ್ಸ್… ಅರಬೈಲ್ ಘಾಟ್‌ನಲ್ಲಿ ಭೀಕರ ಅಪಘಾತ, 6 ಜೀವಗಳು ಅಂತ್ಯ!
ಮಂಗಳೂರಿಗರಿಗೆ ಎಚ್ಚರಿಕೆ: ನೀರನ್ನು ಜಾಣ್ಮೆಯಿಂದ ಬಳಸಿ –ಮಾರ್ಚ್ ನಲ್ಲೇ ರೇಷನಿಂಗ್ ಮಾಡುವ ಪರಿಸ್ಥಿತಿ ಇದೆ…
ಇತಿಹಾಸ ಸೇರಿತು ಮಂಗಳೂರಿನ ಮೋತಿ ಮಹಲ್…..
ನಾರ್ವೇ ಪತ್ರಕರ್ತರಿಗೆ ತಿರುಗೇಟು: “ಭಾರತದ ವಾಸ್ತವತೆ ಅರಿವಿಲ್ಲ” ಎಂದ MEA ಕಾರ್ಯದರ್ಶಿ ಸಿಬಿ ಜಾರ್ಜ್…
ಅಹಿಂಸೆ, ಸತ್ಯ ಮತ್ತು ತ್ಯಾಗದ ಮಾರ್ಗವೇ ಮಹಾವೀರರ ದರ್ಶನ — ಇದೇ ಸುಖಿ ಜೀವನದ ಗುಟ್ಟು.
ಲಾರ್ಡ್ಸ್‌ನಲ್ಲಿ ಭಾರತ ಮಹಿಳಾ ತಂಡದ ಐತಿಹಾಸಿಕ ಟೆಸ್ಟ್ ಜಯ; ದೇಶದಲ್ಲಿ ಕ್ರಿಕೆಟ್‌ನಿಂದ ಟೆನಿಸ್‌ವರೆಗೆ… ಕ್ರೀಡೆಗಳತ್ತ ಹೆಚ್ಚುತ್ತಿರುವ ಆಸಕ್ತಿ..!
“ಬಾದಾಮಿ ತಿಂದರೆ ಮೆಮೊರಿ ಹೆಚ್ಚಾಗಿ, ನನ್ನ ಫೈಲ್ ಎಲ್ಲಿ ಇದೆ ಎಂದು ನೆನಪಾಗಬಹುದು”-ಹಣ ಕೊಡದೇ ಕೆಲಸ ಆಗೋದಿಲ್ಲ ಎಂಬ ಭ್ರಷ್ಟ ವ್ಯವಸ್ಥೆ ಇನ್ನೂ ಬಲವಾಗಿ ಜೀವಂತವಾಗಿದೆ…!
ಖಾಸಗಿ ಆಸ್ಪತ್ರೆಯ ಜೊತೆಗಿನ ಒಪ್ಪಂದ ರದ್ದುಪಡಿಸಲು ಆಗ್ರಹಿಸಿ ಪ್ರತಿಭಟನೆ
ಕಾರ್ಕಳದಲ್ಲಿ  ಜಾಗ ಕಿತ್ತುಕೊಳ್ಳಲು ಮಾಡಿದ ಪ್ಲಾನ್, ರಿವರ್ಸಾಗಿ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದೆ
ಮಂಗಳೂರು ನಗರದಲ್ಲಿ ಭಾರೀ ಪ್ರಮಾಣದ MDMA ವಶ – ಇಬ್ಬರು ಡ್ರಗ್ ಪೆಡ್ಲರ್‌ಗಳ ಬಂಧನ…
“ವಕೀಲರೇ ಎಚ್ಚರ! ಕೋರ್ಟ್‌ನಲ್ಲಿ ನಕಲಿ AI ರೆಫರೆನ್ಸ್ ನೀಡಿದರೆ ಕಠಿಣ ಶಿಸ್ತು ಕ್ರಮ: BCIಗೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ದೇಶನ”
ಕಪ್ಪೆ ಚಿಪ್ಪು ದುರಂತಕ್ಕೆ ಮತ್ತೆರಡು ಜೀವ ಬಲಿ, ಬಲಿಯ ಸಂಖ್ಯೆ ಏರುವ ಸಾಧ್ಯತೆ
AI ಹವಾ-ಬೇಗನೆ ಫೈನಾನ್ಷಿಯಲ್ ಇಂಡಿಪೆಂಡೆಂಟ್ ಆಗೋ ಟ್ರೆಂಡ್- ಕೈಬಿಟ್ಟ  ಓದು!! ಇದು ಗಂಭೀರ ಸೂಚನೆ….
ದಲಿತ ವಿಧವೆ ಮೇಲೆ ಸಾಮೂಹಿಕ ಅತ್ಯಾಚಾರ – ಮೂವರು ಆರೋಪಿಗಳು ಬಂಧನ
ಪುತ್ತೂರಿನ ಜಾತ್ರೆಯಲ್ಲಿ ಸುಡುಮದ್ದು ದುರಂತ-ಹಲವರಿಗೆ ಗಾಯ..
ಉಡುಪಿಯಲ್ಲಿ ಆಡಳಿತ ನಡೆಸುತ್ತಿರುವುದು ಜನವಿರೋಧಿ ಜಿಲ್ಲಾಡಳಿತವೇ?
ಹೊಸ ರಾಜಕೀಯ ಕ್ರಾಂತಿ! ಅಸ್ಸಾಂ ಕುದಿಯುತ್ತಿದೆ…ಹಿಂದುತ್ವ vs ಗುರುತು ರಾಜಕೀಯ…!
ಜೀವನ್ಮರಣ ಹೋರಾಟದಲ್ಲೂ ಗೆಳೆಯರ ಬದುಕಿಸಿದ 14ರ ಬಾಲಕನ ರೋಚಕ  ಸ್ಟೋರಿ 
ಸಹೋದರಿಯ ಎಲುಬುಗಳೊಂದಿಗೆ ಬ್ಯಾಂಕ್ ಗೆ ಬಂದ ಅಣ್ಣ…!ದಾಖಲೆ ನಿಯಮಗಳ ನಡುವೆ ಸೋತ ಮಾನವೀಯತೆ”