📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಮೋದಿ–ಶಾ ಆಡಳಿತದ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ: ತಪ್ಪಿತಸ್ಥರನ್ನು ರಕ್ಷಿಸಲು ಅಧಿಕಾರ ದುರ್ಬಳಕೆ ಆರೋಪ

    ನವದೆಹಲಿ: “ದೇಶವೇ ನೋಡಲಿ, ತಪ್ಪಿತಸ್ಥರನ್ನು ರಕ್ಷಿಸಲು ಹಾಗೂ ನ್ಯಾಯಕ್ಕೆ ಅಡ್ಡಿಪಡಿಸಲು ಮೋದಿ–ಶಾ ಆಡಳಿತ ತನ್ನ ಸಂಪೂರ್ಣ ಅಧಿಕಾರವನ್ನು ಹೇಗೆ ಬಳಸುತ್ತಿದೆ ಎಂಬುದನ್ನು” ಎಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

    ಅವರು ಇಂದು, ವಿದ್ಯಾರ್ಥಿಗಳ ಪ್ರತಿಭಟನೆಯ ಸಂದರ್ಭದಲ್ಲಿ ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಲು ನಡೆಸಿದ ದಾಳಿಯಲ್ಲಿ ಪ್ಯಾಲೆಟ್ ಗನ್ನಿನ ಬುಲೆಟಿನಿಂದ ಹಲ್ಲೆಗೊಳಗಾದ ಹೋರಾಟಗಾರರನ್ನು ಕರೆದುಕೊಂಡು ದೆಹಲಿಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಸ್ವತಹ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಸಹಿತ ಹಲವು ನಾಯಕರು ಆಗಮಿಸಿದ್ದರು. ಪ್ರಾರಂಭದಲ್ಲಿ ಪ್ರಕರಣ ದಾಖಲಿಸಲು ಒಪ್ಪದ ದೆಹಲಿ ಪೊಲೀಸರು ಕೊನೆಯಲ್ಲಿ ಎಫ್ಐಆರ್ ದಾಖಲಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು.

    ಕೇಂದ್ರ ಸರ್ಕಾರವು ತನ್ನ ಅಧಿಕಾರ ಮತ್ತು ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಪ್ರಕರಣಗಳಲ್ಲಿ ನ್ಯಾಯಸಮ್ಮತ ತನಿಖೆ ಹಾಗೂ ನ್ಯಾಯ ಪ್ರಕ್ರಿಯೆಗೆ ಅಡ್ಡಿಪಡಿಸುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್‌, ಸರ್ಕಾರದ ಕ್ರಮಗಳ ಕುರಿತು ದೇಶದ ಜನತೆ ಗಮನ ಹರಿಸಬೇಕು ಎಂದು ಹೇಳಿದೆ.

    “ತಪ್ಪಿತಸ್ಥರನ್ನು ರಕ್ಷಿಸುವ ಪ್ರಯತ್ನ ಮತ್ತು ನ್ಯಾಯವನ್ನು ತಡೆಯುವ ಕ್ರಮಗಳನ್ನು ಇಡೀ ದೇಶ ನೋಡಲಿ” ಎಂದು ಕಾಂಗ್ರೆಸ್‌ ನಾಯಕರು ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಆಡಳಿತ ಪಕ್ಷ ಮಾತ್ರವಲ್ಲದೆ, ಸರ್ಕಾರದ ತನಿಖಾ ಸಂಸ್ಥೆಗಳು ಹಾಗೂ ಅಧಿಕಾರ ವ್ಯವಸ್ಥೆಯ ಕಾರ್ಯವೈಖರಿಯ ಬಗ್ಗೆಯೂ ವಿರೋಧ ಪಕ್ಷಗಳು ಹಲವು ಸಂದರ್ಭಗಳಲ್ಲಿ ಪ್ರಶ್ನೆಗಳನ್ನು ಎತ್ತುತ್ತಿವೆ. ಈ ಹಿನ್ನೆಲೆಯಲ್ಲಿ ಮೋದಿ–ಶಾ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಮಾಡಿರುವ ಈ ಆರೋಪ ರಾಜಕೀಯ ವಲಯದಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲೂ ತೀವ್ರ ಚರ್ಚೆಗೆ ಕಾರಣವಾಗಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಶಿಕ್ಷಕರು ಹೊಡೆಯುತ್ತಾರೆಂಬ ಭಯಕ್ಕೆ ಮನೆ ಬಿಟ್ಟ 9ನೇ–10ನೇ ತರಗತಿ ವಿದ್ಯಾರ್ಥಿನಿಯರು..!ಎಲ್ಲಿದ್ದರು ಗೊತ್ತಾ..!
    ಸಿಖ್ ವಿರೋಧಿ ದಂಗೆಯ ಆರೋಪಿ, ಸಜ್ಜನ್ ಕುಮಾರ್ ಜೈಲಿನಲ್ಲಿ ನಿಧನ
    AI ವಿಶ್ವವಿದ್ಯಾಲಯಕ್ಕೂ ಮೊದಲು AI ಪರಿಣಾಮಗಳ ಅಧ್ಯಯನ ಅಗತ್ಯವೇ?
    ಸಭೆಯ ನಡುವೆ ಬ್ಲಾಕ್ ಅಧ್ಯಕ್ಷ ಕಾಣೆ …ಕಾರ್ಯಕರ್ತರು ಗುಸು ಗುಸು – ಪಿಸುಪಿಸು
    ಗುಂಡಿನ ದಾಳಿ ನಡೆಸಿದ ಹಂತಕರ ಬಂಧನ??
    ಕರ್ನಾಟಕದಲ್ಲಿ ಅತಿ ಕನಿಷ್ಠ ಮಟ್ಟಕ್ಕೆ ಕುಸಿದ ‘ಟೀನ್ ಪ್ರೆಗ್ನೆನ್ಸಿ’! 70% ಕೇಸ್‌ಗಳು ಮಾಯವಾಗಿದ್ದು ಹೇಗೆ?
    ಬ್ಯಾಂಕುಗಳ ಮೇಲೆ ಭೀಕರ ದಾಳಿಯ ಮುನ್ಸೂಚನೆ ನೀಡಿದ ಇರಾನ್- ಮಿನಿಮಮ್ 1000 ಮೀಟರ್ ದೂರವಿರಿ
    ಶಾಲೆಗಳ ಸುತ್ತ ಜಂಕ್ ಫುಡ್‌ಗೆ ಬ್ರೇಕ್: ಮಕ್ಕಳ ಆರೋಗ್ಯ ರಕ್ಷಣೆಗೆ FDA ಅಲರ್ಟ್!
    “ಅಪ್ರಾಪ್ತ ಅತ್ಯಾಚಾರ ಸಂತ್ರಸ್ತರಿಗೆ ಅಬಾರ್ಷನ್ ಮಾಡಲು ಆದ್ಯತೆ ,ಕಾನೂನು ತಿದ್ದುಪಡಿ”- ಸುಪ್ರೀಂ ಕೋರ್ಟ್
    ಟೂರಿಸಂ ಡೆವಲಪ್‌ಮೆಂಟ್‌ಗೆ ಅಧಿಕಾರಿಗಳೇ ಮಾರಕ
    ಇನ್‌ಸ್ಟಾಗ್ರಾಮ್ ವ್ಯಾಮೋಹಕ್ಕೆ ಹೆತ್ತ ತಾಯಿಗೇ ವಿಷವಿಕ್ಕಿದ ಮಗಳು..ಪ್ರೀತಿಯ ಹೆಸರಲ್ಲಿ ಹಾದಿ ತಪ್ಪಿದ ಹದಿಹರೆಯ ಮುಂದೇನಾಯತು?
    ಡಿ.ಕೆ. ಶಿವಕುಮಾರ್ ಪ್ರಮಾಣ ವಚನ  ಜೂನ್ 3ಕ್ಕೆ, ರಾಜ್ಯಪಾಲರಿಂದ ಆಹ್ವಾನ
    ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿ ಕಳೆದ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಕೊನೆಗೂ ಪತ್ತೆ ಹಚ್ಚಲಾಗಿದೆ.
    ಕಾರ್ಕಳ ಮಹಾಮಸ್ತಕಾಭಿಷೇಕಕ್ಕೆ ₹1.59 ಕೋಟಿ ಅನುದಾನ: ಮೊದಲ ಕಂತು ಬಿಡುಗಡೆ…
    ಅಜ್ಜಿಯ ಚಿನ್ನಕ್ಕೇ ಕನ್ನ! ಮೊಮ್ಮಗ ಅರೆಸ್ಟ್….
    ರಾಜ್ಯಮಟ್ಟದಲ್ಲಿ ಸದ್ದು ಮಾಡಿದ ತೆರಿಗೆ ವಂಚನೆ ಪ್ರಕರಣದ ನಂತರವೂ ಅಧಿಕಾರಿಗಳು ಪಾಠ ಕಲಿತಿಲ್ಲವೇ….!?
    ಕದನ ವಿರಾಮ ಹೇಳಿಕೆ ಮಾತ್ರ…“Middle East ಮತ್ತೆ ಸ್ಫೋಟಕ
    ಕಾರ್ಕಳದಲ್ಲಿ  ಜಾಗ ಕಿತ್ತುಕೊಳ್ಳಲು ಮಾಡಿದ ಪ್ಲಾನ್, ರಿವರ್ಸಾಗಿ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದೆ
    ಅಯೋಧ್ಯೆ ರಾಮ ಮಂದಿರ ಸ್ಫೋಟಿಸಲು ಹರಿಹರದಲ್ಲಿ ಪ್ಲಾನ್! ಬಂಧಿತ ಸುಹೇಲ್ ಬೆನ್ನತ್ತಿದ ಇಂಟೆಲಿಜೆನ್ಸ್; 10 ಜನರ ಟೀಮ್‌ಗಾಗಿ ತೀವ್ರ ಶೋಧ!
    BRICS ಸಭೆಯಲ್ಲಿ UAE ಮೇಲೆ ಇರಾನ್ ಕಿಡಿ! ಇಸ್ರೇಲ್–ಇರಾನ್ ಯುದ್ಧ – ಇಸ್ರೇಲ್‌ಗೆ UAE ಗುಪ್ತ ಬೆಂಬಲವೇ?
    ದಿವಾ ಉತ್ಕರ್ಷ ಬೆಂಗಳೂರಿನ ಕೇವಲ 17 ವರ್ಷದ ಹೆಣ್ಣುಮಗಳಕಾರ್ಯಕ್ಕೆ ಪ್ರಪಂಚವೇ ಫಿದಾ…ಫೋರ್ಬ್ಸ್ ಟಾಪ್ ಪಟ್ಟಿಯಲ್ಲಿ ಯುವಸ್ಪೂರ್ತಿ ಹೆಸರು ಯಾಕೆ ಬಂತು ..!?
    “ಶಾಲಾ ಬಸ್‌ನಲ್ಲಿ ಪ್ರಯಾಣಿಸುವ ಪ್ರತಿಯೊಂದು ಮಗುವಿನ ಸುರಕ್ಷತೆಗೆ ಶಾಲೆಯೇ ಹೊಣೆ!”
    ನೀವು Fit…ಆದ್ರೆ ನಿಮ್ಮ ಹೃದಯ ?ಮನೆಯಲ್ಲಿಯೇ 5 ನಿಮಿಷದಲ್ಲಿ ಪರೀಕ್ಷಿಸಿಕೊಳ್ಳಿ ನಿಮ್ಮ ಹೃದಯದ ಆರೋಗ್ಯ!
    ನಿತ್ಯ bus ಪ್ರಯಾಣಿಕರಿಗೆ ಶಾಕ್‌: ‌ ಟಿಕೆಟ್‌ ದರ 5 ರಿಂದ 8% ಹೆಚ್ಚಳ: ಇನ್ಮೇಲೆ ಓಡಾಟ ಮತ್ತಷ್ಟು ದುಬಾರಿ!
    Golden Hour ಉಳಿಸುವತ್ತ ಗ್ರಾಮದಿಂದ ನಗರವರೆಗೆ – ಕರ್ನಾಟಕ ಹೆಲ್ತ್ ಸಿಸ್ಟಮ್ ಮಹತ್ವದ ಹೆಜ್ಜೆ
    KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ ಅಮಾನತ್
    ಮದುವೆ -ಜೀವನ ಬೇಸರವಾಯ್ತು ಆಸಕ್ತಿ ಇಲ್ಲ ಅಂದ್ರೆ ವಿಚ್ಛೇದನ ಸಿಗುತ್ತಾ ..! ಮಗಳು18 ದಾಟಿದರೂ ಶಿಕ್ಷಣದ ಹೊಣೆ ಯಾರಿಗೆ?
    ಆನ್ ಲೈನ್ ವಂಚನೆ ಶಿರ್ವದ ಯುವತಿಗೆ ಲಕ್ಷ ಲಕ್ಷ ಉಂಡೆನಾಮ… ಬ್ಯಾಂಕ್ ನಿಯಮ ವಂಚಕರಿಗೆ  ಸಹಕಾರಿ?
    ಮೇ 22 ಮಂಗಳೂರು ಎಂದಿಗೂ ಮರೆಯದ ದಿನ…
    ಹೊಸ ಸಂಸತ್ ಭವನದ ವಿನ್ಯಾಸಕ್ಕೆ ಶಶಿ ತರೂರ್ ಅಸಮಾಧಾನ: “ಆತ್ಮ ರಹಿತ ಸಮಾವೇಶ ಕೇಂದ್ರ”