📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ರಾಮಮಂದಿರ ಟ್ರಸ್ಟ್‌ನ ಮಹತ್ವದ ಹೇಳಿಕೆ!ಎಲ್ಲಾ ಕಾಣಿಕೆಗಳು ,ದೇಣಿಗೆ,ಚಿನ್ನ-ಬೆಳ್ಳಿ ಸೇರಿ 2,800 ಅಮೂಲ್ಯ ವಸ್ತುಗಳುಸುರಕ್ಷಿತ

    ಅಯೋಧ್ಯೆ ರಾಮಮಂದಿರ ದೇಣಿಗೆ ವಿವಾದ: ‘ಚಿನ್ನ-ಬೆಳ್ಳಿ ಸೇರಿ 2,800 ಅಮೂಲ್ಯ ವಸ್ತುಗಳು ಸುರಕ್ಷಿತ’ – ಟ್ರಸ್ಟ್ ಸ್ಪಷ್ಟನೆ

    ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ಗೆ ಸಂಬಂಧಿಸಿದ ದೇಣಿಗೆ ಹಾಗೂ ಅಮೂಲ್ಯ ವಸ್ತುಗಳ ಲೂಟಿ ಆರೋಪ ದೇಶಾದ್ಯಂತ ದೊಡ್ಡ ಚರ್ಚೆಗೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಟ್ರಸ್ಟ್ ನಡೆಸಿದ ಮಹತ್ವದ ಸಭೆಯ ಬಳಿಕ, ಭಕ್ತರಲ್ಲಿ ಮೂಡಿದ್ದ ಆತಂಕವನ್ನು ನಿವಾರಿಸುವ ಉದ್ದೇಶದಿಂದ ಟ್ರಸ್ಟ್ ಸಮಗ್ರ ಸ್ಪಷ್ಟನೆ ನೀಡಿದೆ. “ರಾಮಮಂದಿರಕ್ಕೆ ಭಕ್ತರು ಸಮರ್ಪಿಸಿದ ಚಿನ್ನ, ಬೆಳ್ಳಿ ಸೇರಿದಂತೆ ಎಲ್ಲಾ ಅಮೂಲ್ಯ ವಸ್ತುಗಳು ಸುರಕ್ಷಿತವಾಗಿವೆ. ಯಾವುದೇ ವಸ್ತು ಕಾಣೆಯಾಗಿಲ್ಲ” ಎಂದು ಟ್ರಸ್ಟ್ ಖಜಾಂಚಿ ಸ್ವಾಮಿ ಗೋವಿಂದ್ ದೇವ್ ಗಿರಿ ಅಧಿಕೃತವಾಗಿ ತಿಳಿಸಿದ್ದಾರೆ.

    ಈ ವಿವಾದದ ಹಿನ್ನೆಲೆದಲ್ಲಿ ಟ್ರಸ್ಟ್ ಸೋಮವಾರ ತುರ್ತು ಸಭೆ ನಡೆಸಿತು. ಸಭೆಯಲ್ಲಿ ಮಾಜಿ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಹಾಗೂ ಮಾಜಿ ಸದಸ್ಯ ಅನಿಲ್ ಮಿಶ್ರಾ ಸಲ್ಲಿಸಿದ್ದ ರಾಜೀನಾಮೆಗಳನ್ನು ಅಂಗೀಕರಿಸಲಾಯಿತು. ಜೊತೆಗೆ ಕೃಷ್ಣ ಮೋಹನ್ ಅವರನ್ನು ಹಂಗಾಮಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಯಿತು. ದೇಣಿಗೆ ಲೂಟಿ ಆರೋಪದ ತನಿಖೆಯ ವರದಿ ಕುರಿತು ಮತ್ತೊಮ್ಮೆ ಜುಲೈ 22ರಂದು ಸಭೆ ನಡೆಸಲು ನಿರ್ಧರಿಸಲಾಗಿದೆ.

    ಟ್ರಸ್ಟ್ ಬಿಡುಗಡೆ ಮಾಡಿದ ಹಣಕಾಸು ವಿವರಗಳ ಪ್ರಕಾರ, ರಾಮಮಂದಿರ ನಿರ್ಮಾಣಕ್ಕಾಗಿ ನಿಧಿ ಸಮರ್ಪಣಾ ಅಭಿಯಾನ ಮತ್ತು ಕಾರ್ಪಸ್ ದೇಣಿಗೆಗಳ ಮೂಲಕ ಒಟ್ಟು ₹3,264 ಕೋಟಿ ಸಂಗ್ರಹವಾಗಿದೆ. ಇದರಲ್ಲಿ ₹2,370 ಕೋಟಿ ಮೊತ್ತವನ್ನು ಮಂದಿರ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಬಳಸಲಾಗಿದೆ. ರಾಮಮಂದಿರ ಲೋಕಾರ್ಪಣೆಯಾದ ನಂತರದಿಂದ ಈ ವರ್ಷದ ಮಾರ್ಚ್ 31ರವರೆಗೆ ಭಕ್ತರಿಂದ ₹582 ಕೋಟಿ ಕಾಣಿಕೆ ಬಂದಿದೆ. ಅದರಲ್ಲಿ ₹391 ಕೋಟಿ ಮೊತ್ತವನ್ನು ದೇವಸ್ಥಾನದ ನಿರ್ವಹಣೆ, ಭದ್ರತೆ ಹಾಗೂ ಆಡಳಿತ ವೆಚ್ಚಗಳಿಗೆ ಬಳಸಲಾಗಿದ್ದು, ಉಳಿದ ಹಣವನ್ನು ಬ್ಯಾಂಕ್ ಖಾತೆಗಳಲ್ಲಿ ಸುರಕ್ಷಿತವಾಗಿ ಇರಿಸಲಾಗಿದೆ ಎಂದು ಟ್ರಸ್ಟ್ ತಿಳಿಸಿದೆ.

    ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲ ವರದಿಗಳಲ್ಲಿ, ರಾಮಮಂದಿರಕ್ಕೆ ದೇಣಿಗೆಯಾಗಿ ಬಂದಿದ್ದ ಚಿನ್ನದ ಲೇಪಿತ ರಾಮಚರಿತ ಮಾನಸದ ಪ್ರತಿಯೊಂದು, ಶ್ರೀರಾಮನ ಸಾಂಕೇತಿಕ ಪಾದಮುದ್ರೆಗಳು, ಅಮೂಲ್ಯ ಸರ ಹಾಗೂ ಕಾಗಭುಶಂಡಿ ವಿಗ್ರಹ ಸೇರಿದಂತೆ ಹಲವು ವಸ್ತುಗಳು ಕಾಣೆಯಾಗಿವೆ ಎಂಬ ಆರೋಪಗಳು ಕೇಳಿಬಂದಿದ್ದವು. ಆದರೆ ಈ ಎಲ್ಲಾ ವಸ್ತುಗಳನ್ನು ಸುದ್ದಿಗೋಷ್ಠಿಯಲ್ಲಿ ಸಾರ್ವಜನಿಕವಾಗಿ ಪ್ರದರ್ಶಿಸಿದ ಟ್ರಸ್ಟ್, “ಪಟ್ಟಿಯಲ್ಲಿರುವ ಎಲ್ಲಾ 2,800 ಅಮೂಲ್ಯ ವಸ್ತುಗಳು ಸುರಕ್ಷಿತವಾಗಿವೆ” ಎಂದು ಪುನರುಚ್ಚರಿಸಿತು.

    ಸ್ವಾಮಿ ಗೋವಿಂದ್ ದೇವ್ ಗಿರಿ ಮಾತನಾಡಿ, “ಈ ವಿವಾದದಿಂದ ಟ್ರಸ್ಟ್‌ಗೆ ಮಾತ್ರವಲ್ಲ, ಕೋಟ್ಯಂತರ ರಾಮಭಕ್ತರಿಗೂ ನೋವಾಗಿದೆ. ದೇವಾಲಯದಂತಹ ಪವಿತ್ರ ಸ್ಥಳದಲ್ಲಿ ಕಳ್ಳತನದ ಆರೋಪವೇ ದುಃಖಕರ. ಆದರೆ ವಾಸ್ತವಾಂಶಗಳನ್ನು ಪರಿಶೀಲಿಸದೇ ಅಪಪ್ರಚಾರ ಮಾಡುವುದು ಸರಿಯಲ್ಲ. ಯಾರಿಗಾದರೂ ಅನುಮಾನವಿದ್ದರೆ ಅವರು ದೇವಸ್ಥಾನಕ್ಕೆ ಬಂದು ದಾಖಲೆಗಳನ್ನು ಪರಿಶೀಲಿಸಬಹುದು” ಎಂದು ಆಹ್ವಾನ ನೀಡಿದರು.

    ಟ್ರಸ್ಟ್ ಅಧ್ಯಕ್ಷ ಮಹಾಂತ ನೃತ್ಯ ಗೋಪಾಲ್ ದಾಸ್ ಕೂಡ ತೀವ್ರ ಪ್ರತಿಕ್ರಿಯೆ ನೀಡಿ, “ದೇವರ ದೇಣಿಗೆಯ ದುರುಪಯೋಗ ನಂಬಿಕೆ ದ್ರೋಹಕ್ಕೆ ಸಮಾನ. ಯಾರೇ ತಪ್ಪಿತಸ್ಥರಾಗಿದ್ದರೂ ಕಾನೂನಿನ ಪ್ರಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಕೋಟ್ಯಂತರ ಹಿಂದೂಗಳ ಭಾವನೆಗಳಿಗೆ ಧಕ್ಕೆ ಉಂಟುಮಾಡಿದವರನ್ನು ಬಿಡಬಾರದು” ಎಂದು ಹೇಳಿದರು.

    ಇದೇ ವೇಳೆ ಟ್ರಸ್ಟ್‌ನಲ್ಲಿ ಪೂರ್ಣಕಾಲಿಕ ಪ್ರಧಾನ ಕಾರ್ಯದರ್ಶಿ ನೇಮಕ ಕುರಿತೂ ಚರ್ಚೆ ನಡೆಯಿತು. ವಿಶ್ವ ಹಿಂದೂ ಪರಿಷತ್‌ನ ಅಂತಾರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಜರಂಗ್ ಬಾಗ್ರಾ ಅವರನ್ನು ಈ ಹುದ್ದೆಗೆ ನೇಮಿಸುವ ಸಾಧ್ಯತೆ ಇದೆ ಎಂಬ ಮಾಹಿತಿಯೂ ಹೊರಬಂದಿದೆ. ಅಂತಿಮ ನಿರ್ಧಾರ ಜುಲೈ 22ರಂದು ನಡೆಯಲಿರುವ ಮುಂದಿನ ಸಭೆಯ ಬಳಿಕ ಪ್ರಕಟವಾಗುವ ಸಾಧ್ಯತೆಯಿದೆ.

    ಪ್ರಸ್ತುತ ದೇಣಿಗೆ ಲೂಟಿ ಆರೋಪಗಳ ಕುರಿತು ತನಿಖೆ ಮುಂದುವರಿದಿದ್ದು, ವಿಶೇಷ ತನಿಖಾ ತಂಡ (SIT) ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕಿದೆ. ಆ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಈ ನಡುವೆ ಟ್ರಸ್ಟ್ ತನ್ನ ಹಣಕಾಸು ವ್ಯವಹಾರಗಳು ಹಾಗೂ ಅಮೂಲ್ಯ ದೇಣಿಗೆಗಳ ಸಂರಕ್ಷಣೆಯಲ್ಲಿ ಯಾವುದೇ ಲೋಪವಾಗಿಲ್ಲ ಎಂದು ಪುನಃ ಭರವಸೆ ನೀಡಿದ್ದು, ಭಕ್ತರು ವದಂತಿಗಳಿಗೆ ಕಿವಿಗೊಡದೆ ಅಧಿಕೃತ ಮಾಹಿತಿಯನ್ನೇ ನಂಬುವಂತೆ ಮನವಿ ಮಾಡಿದೆ.

    ##RamMandir #Ayodhya #ShriRamJanmabhoomi #BreakingNews #IndiaNews

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ವಿಪರೀತ ಸೆಕೆಯಿಂದ ಬಳಲುತ್ತಿರುವಾಗಲೇ ಕರೆಂಟ್ ತೆಗೆದ ದುಷ್ಟ ಮೆಸ್ಕಾಂ
    ಇಂದು ಬೆಳ್ಳಂ ಬೆಳಗ್ಗೆ ಪಲ್ಟಿ ಯಾದ ಬಸ್… ಒಬ್ಬ ಸಾವು ಹಲವರಿಗೆ ಗಾಯ
    ಮಂಗಳೂರು ನೀರಿನ ಸಂಕಷ್ಟ:ಮಳೆಯಿಲ್ಲದೆ ಮುಂದಿನ 1–2 ತಿಂಗಳು ಗಂಭೀರ ನೀರಿನ ಕೊರತೆ ಸಂಭವ ಸಾಧ್ಯತೆ.
    24 ಭಾರತೀಯರಿದ್ದ ಹಡಗಿನ ಮೇಲೆ ಅಮೆರಿಕಾ ದಾಳಿ: 3 ನಾವಿಕರ ಜೀವ ಬಲಿ
    ಇಂದು ಮಂಗಳೂರಲ್ಲಿ ತಲೆಮೇಲೆ ಸುತ್ತು ಹೊಡೆದಂತೆ ಬಾರಿ ಶಬ್ದದೊಂದಿಗೆ ಹೆಲಿಕಾಪ್ಟರ್‌..!ಆಶ್ಚರ್ಯ ಮತ್ತು ಆತಂಕದ ಹಿಂದಿದೆ ಭದ್ರತಾ ‘ಮೆಗಾ ಡ್ರಿಲ್’ ..!ಅಸಲಿ ಕಾರಣವೇನು
    ಬಾಲ್ಯವಿವಾಹಕ್ಕೆ ಬ್ರೇಕ್ ಹಾಕಲು ಮಹಾರಾಷ್ಟ್ರದ ಮಾಸ್ಟರ್ ಪ್ಲಾನ್: ಇನ್ವಿಟೇಶನ್ ಕಾರ್ಡ್‌ನಲ್ಲಿ ಜನ್ಮ ದಿನಾಂಕ ಕಡ್ಡಾಯ!
    ಹೆಸರು ಬದಲಾವಣೆ ಪಶ್ಚಿಮ ಬಂಗಾಳ ಪೆಂಡಿಂಗ್, ಕೇರಳ ಪ್ರಗತಿಯಲ್ಲಿ
    ದಿವಾ ಉತ್ಕರ್ಷ ಬೆಂಗಳೂರಿನ ಕೇವಲ 17 ವರ್ಷದ ಹೆಣ್ಣುಮಗಳಕಾರ್ಯಕ್ಕೆ ಪ್ರಪಂಚವೇ ಫಿದಾ…ಫೋರ್ಬ್ಸ್ ಟಾಪ್ ಪಟ್ಟಿಯಲ್ಲಿ ಯುವಸ್ಪೂರ್ತಿ ಹೆಸರು ಯಾಕೆ ಬಂತು ..!?
    ಕೆತ್ತಿಕಲ್‌ನಿಂದ ಚಾರ್ಮಾಡಿವರೆಗೆ ಅಪಾಯದ ಗಂಟೆ! ಭೂಕುಸಿತ ಭೀತಿಯಲ್ಲಿ ಕರಾವಳಿ ರಸ್ತೆಗಳು !ಮಳೆ ಬಂದ ಮೇಲೆ ಸಭೆ, ಪರಿಶೀಲನೆ… ಆದರೆ ಮುನ್ನೆಚ್ಚರಿಕೆ ಎಲ್ಲಿದೆ?
    ಮಂಗಳೂರಿನಲ್ಲಿ ಪಕ್ಕಪ್ಲಾನ್ ಡ್ ಅಟ್ಯಾಕ್ ..!ರೌಡಿ ಶೀಟರ್ ಬರ್ಬರ ಹತ್ಯೆ…ವಿಶೇಷ ತಂಡ ರಚನೆ..!
    “ಯೋಗೇಶ್ ಗೌಡ ಪ್ರಕರಣದಲ್ಲಿ ಕಾನೂನು ಗರ್ಜನೆ!”ಕಾನೂನು ಕಾಯುವವರೇ ಬೂಟು ನೆಕ್ಕಿಕಾನೂನು ಮುರಿದಾಗ-7 ವರ್ಷಗಳ ಜೈಲು!ಕಾನೂನು ಇನ್ನೂ ಜೀವಂತ!”
    ಭಾರತದಲ್ಲಿ ಮೊದಲ ಬಾರಿಗೆ ಭಾರೀ ಕ್ಯಾಪ್ಟಾಗನ್ “ಜಿಹಾದಿ ಡ್ರಗ್”ಜಾಲ ಬಯಲಾಗಿದ್ದು, ಸುಮಾರು ₹182 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ!ಅಪಾಯಕಾರಿ ಡ್ರಗ್ ದೇಶದೊಳಗೆ ಹೇಗೆ ಪ್ರವೇಶಿಸಿತು ಎಂಬುದರ ಬಗ್ಗೆ ತನಿಖೆ ತೀವ್ರವಾಗಿದೆ.
    ಸಿಟಿ ಬಸ್ ಫೋಲ್ಡಿಂಗ್ ಬಾಗಿಲು ಕಡ್ಡಾಯ: ಸುರಕ್ಷತೆಗೆ ಹೆಜ್ಜೆ, ಆದರೆ ಸವಾಲುಗಳೇನು? ಪರಿಹಾರ ಹೇಗೆ?
    ಸೋಶಿಯಲ್ ಮೀಡಿಯಾದ ವೈರಲ್ ವಿಡಿಯೋದಿಂದ ಕೋರ್ಟ್ ತನಕ..!ರಸ್ತೆ ರೇಜ್ ಪ್ರಕರಣದಲ್ಲಿ ಹೊಸ ತಿರುವು
    ನಕಲಿ ಔಷಧ ದಂಧೆ: ಜೀವ ಉಳಿಸಬೇಕಾದ ಔಷಧವೇ ಹಣ ಮಾಡುವ ದಂಧೆಯಾಯಿತೇ?
    ಶಿಕ್ಷಣ ಸುಧಾರಣೆಗೆ ರಾಜ್ಯ ಸರ್ಕಾರದ ಭರ್ಜರಿ ಪ್ಲಾನ್ ಬಹಿರಂಗ!
    ಈ ಬಾರಿ ಮಕ್ಕಳೊಟ್ಟಿಗೆ PUC ಎಕ್ಸಾಮ್ ಪಾಸಾದಅಮ್ಮಂದಿರೇ ಮನಸ್ಸಿದ್ದರೆ ಮಾರ್ಗ ಇದೆ ಅನ್ನೋದಕ್ಕೆ…ಪ್ರೇರಣೆ…!
    ಬೊಬ್ಬೆ ಕೇಳುತ್ತಿದ್ದಂತೆಯೇ ಓಡಿ ಜೀವ ಉಳಿಸಿದ!ಸಮಯಪ್ರಜ್ಞೆ ಎಂದರೆ ಇದು; ಐದನೇ ತರಗತಿಯ ಬಾಲಕನ ಕ್ಷಿಪ್ರ ನಿರ್ಧಾರದಿಂದ ತಪ್ಪಿದ ಅನಾಹುತ!
    ಮಗಳ ಎಡವಟ್ಟಿಗೆ ಪಿಣರಾಯಿ ಬಲಿ…..ಕೇರಳ ರಾಜಕಾರಣದಲ್ಲಿ ಹೈವೋಲ್ಟೇಜ್ ಭೂಕಂಪ
    ಮೂಡಬಿದಿರೆ ಇನ್‌ಸ್ಪೆಕ್ಟರ್ ಪ್ರಕರಣಕ್ಕೆ ಟ್ವಿಸ್ಟ್: ಆರೋಪ ಮಾಡಿದ ಮಹಿಳೆಯ ವಿರುದ್ಧವೇ ಸಹೋದರಿಯ ಬಾಂಬ್!
    ಕರ್ನಾಟಕದಲ್ಲಿ ಮಳೆ ಅಬ್ಬರಕ್ಕೆ ರೆಡ್ ಅಲರ್ಟ್ ಸನ್ನಾಹ!8 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ – ಜನರಿಗೆ ಎಚ್ಚರಿಕೆ
    ನಾಸಿಕ್ TCS ಪ್ರಕರಣ-ಸತ್ಯ ಮರೆಮಾಚಿದವರಾರು?ಕಾರ್ಪೊರೇಟ್ ಜಗತ್ತಿನ ಕತ್ತಲೆ ಮುಖ:HRಮಹಿಳೆಯಾಗಿಯೂ…..
    ಭಾರತದ ಅತ್ಯಂತ ನಿರೀಕ್ಷಿತ ಸಿನಿಮಾ ‘ರಾಮಾಯಣ’: ಟ್ರೇಲರ್ ಬಂದ ಕ್ಷಣದಿಂದಲೇ ದೇಶವ್ಯಾಪಿ ಚರ್ಚೆ!
    ಉಡುಪಿ ಜಿಲ್ಲೆಯಲ್ಲಿ  ಹೆಚ್ಚಾದ  ಚಿರತೆ ಉಪಟಳ : ತುರ್ತು ಕ್ರಮಕ್ಕೆ ತುರವೇ ಮನವಿ
    ನಾಸಿಕ್‌ನ Tata Consultancy Services ಕಚೇರಿಯಲ್ಲಿ ಗಂಭೀರ ಆರೋಪಗಳ ನಡುವೆ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ — ಸುರಕ್ಷತೆಗೆ ಮೊದಲ ಆದ್ಯತೆ.
    ನೀವೂ ತಿಳಿದಿರಬೇಕಾದ ವಿಷಯ:ಬರುವ ಆರ್ಥಿಕ ಸಂಕಷ್ಟಕ್ಕೆ ಈಗಲೇ ಸಿದ್ಧರಾಗಿ!
    ಮಹಿಳಾ ಕ್ರಿಕೆಟ್ ವಿಶ್ವಕಪ್ 2026 ಆರಂಭ:ಗಾಯ, ನೋವು, ಟೀಕೆ… ಎಲ್ಲವನ್ನೂ ಮೀರಿ ವಿಶ್ವಕಪ್‌ನಲ್ಲಿ ಭಾರತದ ಮಹಿಳಾ ಪಡೆ!
    5 ವರ್ಷದಲ್ಲಿ ಮನೆ ಕಟ್ಟದಿದ್ದರೆ ಸರ್ಕಾರಿ ಸೈಟ್ ವಾಪಸ್..! ಸರ್ಕಾರದ ಹೊಸ ಕಠಿಣ ನಿಯಮ
    KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ ಅಮಾನತ್
    ಆಕಾಂಕ್ಷಳ ಪತ್ರ “ಮಮ್ಮಿ-ಪಾಪಾ, ನನಗೆ ಮತ್ತೆ ನೀಟ್ ಪರೀಕ್ಷೆ ಬರೆಯುವ ಧೈರ್ಯವಿಲ್ಲ” 3 ಲಕ್ಷ ಸಾಲ, ಡಾಕ್ಟರ್ ಆಗುವ ಆ ಕನಸುಗಳು…650 ಅಂಕಗಳ ನಿರೀಕ್ಷೆ..ಆದರೆ…ಕೊನೆಗೆ ಹೀಗೊಂದು ವಿದಾಯ ಪತ್ರ!