📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ರಾಮಮಂದಿರ ಟ್ರಸ್ಟ್‌ನ ಮಹತ್ವದ ಹೇಳಿಕೆ!ಎಲ್ಲಾ ಕಾಣಿಕೆಗಳು ,ದೇಣಿಗೆ,ಚಿನ್ನ-ಬೆಳ್ಳಿ ಸೇರಿ 2,800 ಅಮೂಲ್ಯ ವಸ್ತುಗಳುಸುರಕ್ಷಿತ

ಅಯೋಧ್ಯೆ ರಾಮಮಂದಿರ ದೇಣಿಗೆ ವಿವಾದ: ‘ಚಿನ್ನ-ಬೆಳ್ಳಿ ಸೇರಿ 2,800 ಅಮೂಲ್ಯ ವಸ್ತುಗಳು ಸುರಕ್ಷಿತ’ – ಟ್ರಸ್ಟ್ ಸ್ಪಷ್ಟನೆ

ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ಗೆ ಸಂಬಂಧಿಸಿದ ದೇಣಿಗೆ ಹಾಗೂ ಅಮೂಲ್ಯ ವಸ್ತುಗಳ ಲೂಟಿ ಆರೋಪ ದೇಶಾದ್ಯಂತ ದೊಡ್ಡ ಚರ್ಚೆಗೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಟ್ರಸ್ಟ್ ನಡೆಸಿದ ಮಹತ್ವದ ಸಭೆಯ ಬಳಿಕ, ಭಕ್ತರಲ್ಲಿ ಮೂಡಿದ್ದ ಆತಂಕವನ್ನು ನಿವಾರಿಸುವ ಉದ್ದೇಶದಿಂದ ಟ್ರಸ್ಟ್ ಸಮಗ್ರ ಸ್ಪಷ್ಟನೆ ನೀಡಿದೆ. “ರಾಮಮಂದಿರಕ್ಕೆ ಭಕ್ತರು ಸಮರ್ಪಿಸಿದ ಚಿನ್ನ, ಬೆಳ್ಳಿ ಸೇರಿದಂತೆ ಎಲ್ಲಾ ಅಮೂಲ್ಯ ವಸ್ತುಗಳು ಸುರಕ್ಷಿತವಾಗಿವೆ. ಯಾವುದೇ ವಸ್ತು ಕಾಣೆಯಾಗಿಲ್ಲ” ಎಂದು ಟ್ರಸ್ಟ್ ಖಜಾಂಚಿ ಸ್ವಾಮಿ ಗೋವಿಂದ್ ದೇವ್ ಗಿರಿ ಅಧಿಕೃತವಾಗಿ ತಿಳಿಸಿದ್ದಾರೆ.

ಈ ವಿವಾದದ ಹಿನ್ನೆಲೆದಲ್ಲಿ ಟ್ರಸ್ಟ್ ಸೋಮವಾರ ತುರ್ತು ಸಭೆ ನಡೆಸಿತು. ಸಭೆಯಲ್ಲಿ ಮಾಜಿ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಹಾಗೂ ಮಾಜಿ ಸದಸ್ಯ ಅನಿಲ್ ಮಿಶ್ರಾ ಸಲ್ಲಿಸಿದ್ದ ರಾಜೀನಾಮೆಗಳನ್ನು ಅಂಗೀಕರಿಸಲಾಯಿತು. ಜೊತೆಗೆ ಕೃಷ್ಣ ಮೋಹನ್ ಅವರನ್ನು ಹಂಗಾಮಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಯಿತು. ದೇಣಿಗೆ ಲೂಟಿ ಆರೋಪದ ತನಿಖೆಯ ವರದಿ ಕುರಿತು ಮತ್ತೊಮ್ಮೆ ಜುಲೈ 22ರಂದು ಸಭೆ ನಡೆಸಲು ನಿರ್ಧರಿಸಲಾಗಿದೆ.

ಟ್ರಸ್ಟ್ ಬಿಡುಗಡೆ ಮಾಡಿದ ಹಣಕಾಸು ವಿವರಗಳ ಪ್ರಕಾರ, ರಾಮಮಂದಿರ ನಿರ್ಮಾಣಕ್ಕಾಗಿ ನಿಧಿ ಸಮರ್ಪಣಾ ಅಭಿಯಾನ ಮತ್ತು ಕಾರ್ಪಸ್ ದೇಣಿಗೆಗಳ ಮೂಲಕ ಒಟ್ಟು ₹3,264 ಕೋಟಿ ಸಂಗ್ರಹವಾಗಿದೆ. ಇದರಲ್ಲಿ ₹2,370 ಕೋಟಿ ಮೊತ್ತವನ್ನು ಮಂದಿರ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಬಳಸಲಾಗಿದೆ. ರಾಮಮಂದಿರ ಲೋಕಾರ್ಪಣೆಯಾದ ನಂತರದಿಂದ ಈ ವರ್ಷದ ಮಾರ್ಚ್ 31ರವರೆಗೆ ಭಕ್ತರಿಂದ ₹582 ಕೋಟಿ ಕಾಣಿಕೆ ಬಂದಿದೆ. ಅದರಲ್ಲಿ ₹391 ಕೋಟಿ ಮೊತ್ತವನ್ನು ದೇವಸ್ಥಾನದ ನಿರ್ವಹಣೆ, ಭದ್ರತೆ ಹಾಗೂ ಆಡಳಿತ ವೆಚ್ಚಗಳಿಗೆ ಬಳಸಲಾಗಿದ್ದು, ಉಳಿದ ಹಣವನ್ನು ಬ್ಯಾಂಕ್ ಖಾತೆಗಳಲ್ಲಿ ಸುರಕ್ಷಿತವಾಗಿ ಇರಿಸಲಾಗಿದೆ ಎಂದು ಟ್ರಸ್ಟ್ ತಿಳಿಸಿದೆ.

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲ ವರದಿಗಳಲ್ಲಿ, ರಾಮಮಂದಿರಕ್ಕೆ ದೇಣಿಗೆಯಾಗಿ ಬಂದಿದ್ದ ಚಿನ್ನದ ಲೇಪಿತ ರಾಮಚರಿತ ಮಾನಸದ ಪ್ರತಿಯೊಂದು, ಶ್ರೀರಾಮನ ಸಾಂಕೇತಿಕ ಪಾದಮುದ್ರೆಗಳು, ಅಮೂಲ್ಯ ಸರ ಹಾಗೂ ಕಾಗಭುಶಂಡಿ ವಿಗ್ರಹ ಸೇರಿದಂತೆ ಹಲವು ವಸ್ತುಗಳು ಕಾಣೆಯಾಗಿವೆ ಎಂಬ ಆರೋಪಗಳು ಕೇಳಿಬಂದಿದ್ದವು. ಆದರೆ ಈ ಎಲ್ಲಾ ವಸ್ತುಗಳನ್ನು ಸುದ್ದಿಗೋಷ್ಠಿಯಲ್ಲಿ ಸಾರ್ವಜನಿಕವಾಗಿ ಪ್ರದರ್ಶಿಸಿದ ಟ್ರಸ್ಟ್, “ಪಟ್ಟಿಯಲ್ಲಿರುವ ಎಲ್ಲಾ 2,800 ಅಮೂಲ್ಯ ವಸ್ತುಗಳು ಸುರಕ್ಷಿತವಾಗಿವೆ” ಎಂದು ಪುನರುಚ್ಚರಿಸಿತು.

ಸ್ವಾಮಿ ಗೋವಿಂದ್ ದೇವ್ ಗಿರಿ ಮಾತನಾಡಿ, “ಈ ವಿವಾದದಿಂದ ಟ್ರಸ್ಟ್‌ಗೆ ಮಾತ್ರವಲ್ಲ, ಕೋಟ್ಯಂತರ ರಾಮಭಕ್ತರಿಗೂ ನೋವಾಗಿದೆ. ದೇವಾಲಯದಂತಹ ಪವಿತ್ರ ಸ್ಥಳದಲ್ಲಿ ಕಳ್ಳತನದ ಆರೋಪವೇ ದುಃಖಕರ. ಆದರೆ ವಾಸ್ತವಾಂಶಗಳನ್ನು ಪರಿಶೀಲಿಸದೇ ಅಪಪ್ರಚಾರ ಮಾಡುವುದು ಸರಿಯಲ್ಲ. ಯಾರಿಗಾದರೂ ಅನುಮಾನವಿದ್ದರೆ ಅವರು ದೇವಸ್ಥಾನಕ್ಕೆ ಬಂದು ದಾಖಲೆಗಳನ್ನು ಪರಿಶೀಲಿಸಬಹುದು” ಎಂದು ಆಹ್ವಾನ ನೀಡಿದರು.

ಟ್ರಸ್ಟ್ ಅಧ್ಯಕ್ಷ ಮಹಾಂತ ನೃತ್ಯ ಗೋಪಾಲ್ ದಾಸ್ ಕೂಡ ತೀವ್ರ ಪ್ರತಿಕ್ರಿಯೆ ನೀಡಿ, “ದೇವರ ದೇಣಿಗೆಯ ದುರುಪಯೋಗ ನಂಬಿಕೆ ದ್ರೋಹಕ್ಕೆ ಸಮಾನ. ಯಾರೇ ತಪ್ಪಿತಸ್ಥರಾಗಿದ್ದರೂ ಕಾನೂನಿನ ಪ್ರಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಕೋಟ್ಯಂತರ ಹಿಂದೂಗಳ ಭಾವನೆಗಳಿಗೆ ಧಕ್ಕೆ ಉಂಟುಮಾಡಿದವರನ್ನು ಬಿಡಬಾರದು” ಎಂದು ಹೇಳಿದರು.

ಇದೇ ವೇಳೆ ಟ್ರಸ್ಟ್‌ನಲ್ಲಿ ಪೂರ್ಣಕಾಲಿಕ ಪ್ರಧಾನ ಕಾರ್ಯದರ್ಶಿ ನೇಮಕ ಕುರಿತೂ ಚರ್ಚೆ ನಡೆಯಿತು. ವಿಶ್ವ ಹಿಂದೂ ಪರಿಷತ್‌ನ ಅಂತಾರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಜರಂಗ್ ಬಾಗ್ರಾ ಅವರನ್ನು ಈ ಹುದ್ದೆಗೆ ನೇಮಿಸುವ ಸಾಧ್ಯತೆ ಇದೆ ಎಂಬ ಮಾಹಿತಿಯೂ ಹೊರಬಂದಿದೆ. ಅಂತಿಮ ನಿರ್ಧಾರ ಜುಲೈ 22ರಂದು ನಡೆಯಲಿರುವ ಮುಂದಿನ ಸಭೆಯ ಬಳಿಕ ಪ್ರಕಟವಾಗುವ ಸಾಧ್ಯತೆಯಿದೆ.

ಪ್ರಸ್ತುತ ದೇಣಿಗೆ ಲೂಟಿ ಆರೋಪಗಳ ಕುರಿತು ತನಿಖೆ ಮುಂದುವರಿದಿದ್ದು, ವಿಶೇಷ ತನಿಖಾ ತಂಡ (SIT) ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕಿದೆ. ಆ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಈ ನಡುವೆ ಟ್ರಸ್ಟ್ ತನ್ನ ಹಣಕಾಸು ವ್ಯವಹಾರಗಳು ಹಾಗೂ ಅಮೂಲ್ಯ ದೇಣಿಗೆಗಳ ಸಂರಕ್ಷಣೆಯಲ್ಲಿ ಯಾವುದೇ ಲೋಪವಾಗಿಲ್ಲ ಎಂದು ಪುನಃ ಭರವಸೆ ನೀಡಿದ್ದು, ಭಕ್ತರು ವದಂತಿಗಳಿಗೆ ಕಿವಿಗೊಡದೆ ಅಧಿಕೃತ ಮಾಹಿತಿಯನ್ನೇ ನಂಬುವಂತೆ ಮನವಿ ಮಾಡಿದೆ.

##RamMandir #Ayodhya #ShriRamJanmabhoomi #BreakingNews #IndiaNews

COMMENTS

Login with Gmail to comment

ಇನ್ನಷ್ಟು ಸುದ್ದಿ

ಬೈಜು ರವೀಂದ್ರನ್ ಗೆ ಕೊನೆಗೂ ಜೈಲು ಶಿಕ್ಷೆ …!ಮುಳುಗಿಯೇ ಹೋಯ್ತು ಬೈಜೂಸ್!ಕೋಟಿ ಕೋಟಿ ಲೂಟಿ ಮಾಡಿ ಕ್ರಿಕೆಟ್ ಜರ್ಸಿಯಿಂದ ಜೈಲಿನ ಕೈದಿ ನಂಬರ್ ವರೆಗೆ….ಬೈಜೂಸ್ ಸಾಮ್ರಾಜ್ಯದ ರೋಚಕ ಪತನದ inside story
ರೆಸ್ಯೂಮ್ ಅಲ್ಲ, ಪ್ರಾಜೆಕ್ಟ್ ಮಾತಾಡಿತು! ಒಂದೇ ವರ್ಷದಲ್ಲಿ ₹10 ಲಕ್ಷ ಸಂಬಳದಿಂದ ₹80 LPA ಗಳಿಸಿದ ಯುವತಿಯ ಯಶಸ್ಸಿನ ಸೂತ್ರ ವೈರಲ್..!!
ಗಂಡನ ಮನೆಯಿಂದ ಯುವತಿಯನ್ನು ಎಳೆದೊಯ್ದರು
ಇಸ್ರೇಲ್ ಸ್ಥಿತಿ ಶೋಚನೀಯ ಸೈನ್ಯದಲ್ಲೇ ಅಸಮಾಧಾನ
ಕರ್ನಾಟಕದಲ್ಲಿ ಮಳೆ ಅಬ್ಬರಕ್ಕೆ ರೆಡ್ ಅಲರ್ಟ್ ಸನ್ನಾಹ!8 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ – ಜನರಿಗೆ ಎಚ್ಚರಿಕೆ
ಸಚಿವ ಜಮೀರ್ ಅಹಮದ್ ಹಚ್ಚಿದ ಪಟಾಕಿಗೆ ಕಾಂಗ್ರೆಸ್ ಕೋಟೆಯಲ್ಲಿ ಬಿರುಕು..!?
ಮಹಿಳಾ ಕ್ರಿಕೆಟ್ ವಿಶ್ವಕಪ್ 2026 ಆರಂಭ:ಗಾಯ, ನೋವು, ಟೀಕೆ… ಎಲ್ಲವನ್ನೂ ಮೀರಿ ವಿಶ್ವಕಪ್‌ನಲ್ಲಿ ಭಾರತದ ಮಹಿಳಾ ಪಡೆ!
ಕಾರ್ಕಳದ ವಂಚನೆ ಪ್ರಕರಣ, ದೂರುದಾರನ ಮೇಲೂ ಶಂಕೆ
ಆಸಿಡ್ ದಾಳಿಗೊಳಗಾದ ಮಹಿಳೆಯರಿಗೆ ₹50 ಸಾವಿರ ಮಾಸಾಶನ: ಆಸಿಡ್ ಮಾರಾಟಕ್ಕೆ ಕಡಿವಾಣ ಹಾಕಲು ಸರ್ಕಾರ ಕ್ರಮ
ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ರಣಕಹಳೆ!”
ಬೆಳಗಾವಿ ಮಾಜಿ ಯೋಧನ ಸಾವಿನ ಹಿಂದೆ ಬೆಚ್ಚಿಬೀಳಿಸುವ ಸತ್ಯ ₹2 ಕೋಟಿ ವಿಮೆ..!? ಸಿನೆಮಾವನ್ನೂ ಮೀರಿಸಿದ ಕ್ರೈಂ ಸ್ಟೋರಿ!
ಕುಡಿತದ ಅಮಲಿನಲ್ಲಿ ಹೆತ್ತ ತಾಯಿಯನ್ನೇ ಕೊಂದ ಮಗಳು, ಮೊಮ್ಮಗ: ಕೆಂಗೇರಿಯಲ್ಲಿ ಕರುಳು ಹರಿಯುವ ಕೃತ್ಯ!
ಬೈಕಂಪಾಡಿಯಲ್ಲಿ ನಡುರಾತ್ರಿ ನಡೆದ ಸಿನೆಮಾ ಸ್ಟೈಲ್ ದರೋಡೆ: ಕೇರಳ ಉದ್ಯಮಿ ಕುಟುಂಬಕ್ಕೆ ಗನ್ ಪಾಯಿಂಟ್ ಶಾಕ್!
ಟೆನಿಸ್ ಕೋರ್ಟ್‌ನಲ್ಲಿ ಡಿಸೈನರ್ ಉಡುಪುಗಳ ಧಮಾಕಾ!
ಮಂಗಳೂರಿಗರಿಗೆ ಎಚ್ಚರಿಕೆ: ನೀರನ್ನು ಜಾಣ್ಮೆಯಿಂದ ಬಳಸಿ –ಮಾರ್ಚ್ ನಲ್ಲೇ ರೇಷನಿಂಗ್ ಮಾಡುವ ಪರಿಸ್ಥಿತಿ ಇದೆ…
ಉಡುಪಿಯ ಹಲವು ಉದ್ಯಮಿಗಳು ಹಾಗೂ ಪುಡಿ ರಾಜಕಾರಣಿಗಳ ಎದೆಯಲ್ಲಿ ಭಯ ಸೃಷ್ಟಿಸಿದ ಹನಿಟ್ರ್ಯಾಪ್, ವಂಚನೆ ಆರೋಪಿ ಜೀನತ್ ಬಂಧನ ….!
ದೆಹಲಿ ಭಾರೀ ದುರಂತದಿಂದ ಪಾರು!: ಏರ್ ಇಂಡಿಯಾ ವಿಮಾನಗಳು ಜಖಂಗೊಂಡರೂ ತಪ್ಪಿದ ಪ್ರಾಣಾಪಾಯ!
ನೂರರ ಸಂಭ್ರಮದಲ್ಲಿ “ಜೈ” ತುಳು ಸಿನಿಮಾ
ವಂಚಕನ ಬೆನ್ನಿಗೆ ನಿಂತರೆ, ಕೊರಳಿಗೆ ಉರುಳಾದೀತು!
KIOCL ಮತ್ತು NDMC ವಿಲೀನಕ್ಕೆ ಶಾಸಕ ಡಾ. ಭರತ್ ಶೆಟ್ಟಿಯಿಂದ ಕೇಂದ್ರ ಸಚಿವರಿಗೆ ಮನವಿ
ತಮಿಳು ರಾಜಕೀಯ ರಣರಂಗದಲ್ಲಿ “ವಿಜಯ”ಗಾಥೆ 118 ದಾಟಿದ TVK  ವಿಜಯ್ ಕೈ ಹಿಡಿದ ಮೈತ್ರಿ ಪಕ್ಷಗಳು!
ಮಂಗಳೂರಲ್ಲಿ 10ನೇ ತರಗತಿ ತಾಯಿಯಿಲ್ಲದ ಬಾಲಕಿ ಮೇಲೆ ಜಲೀಲ್ ಎಂಬಾತ 7 ತಿಂಗಳು ನಿರಂತರ ದೌರ್ಜನ್ಯ! 
ಉದ್ಯಮಿ ಧೀರಜ್ ಜೈನ್ ಗಪ್ ಚುಪ್ಪಾಗಿ ನಡೆಸಿದ ಮಾನವೀಯ ನಡೆಗೆ ಸಾಕ್ಷಿ ನೋಡಿ
ಉತ್ತರ ಪ್ರದೇಶದಲ್ಲಿ ಸುಮಾರು 90ಕ್ಕೂ ಹೆಚ್ಚು ಜನರು ಬಲಿ ಹೃದಯವಿದ್ರಾವಕ ಪರಿಸ್ಥಿತಿ…ಭಾರೀ ಮಳೆ, ಬಿರುಗಾಳಿ ಮತ್ತು ಕುಸಿದ ಮನೆಗಳು
ಹಳಿಯಾಳದಲ್ಲಿ ನೀರಿನ ಹಾಹಾಕಾರ… ಮಾರ್ಚ್ 16ರಂದು ಬೃಹತ್ ಪ್ರತಿಭಟನೆ 
₹10,000ಕ್ಕೆ NEET-UG 2026 ಪ್ರಶ್ನೆಪತ್ರಿಕೆ? ದೇಶವೇ ಬೆಚ್ಚಿಬಿದ್ದ ಲೀಕ್ ಸ್ಕಾಂಡಲ್!ಟೆಲಿಗ್ರಾಂ ಸೀಕ್ರೆಟ್ ಚಾಟ್ ವೈರಲ್…22 ಲಕ್ಷ ವಿದ್ಯಾರ್ಥಿಗಳ ಕನಸಿಗೆ ದೊಡ್ಡ ಹೊಡೆತ — NEET 2026 ರದ್ದು!
ಕೆಲವೊಮ್ಮೆ ದೇಹದ ಶತ್ರು “ಲೂಪಸ್ “ಹೊರಗಿಲ್ಲ… ಒಳಗೇ ಇರುತ್ತದೆ.ಮಹಿಳೆಯರ ದಣಿವು, ಸಂಧಿ ನೋವು, ತೂಕ ಇಳಿಕೆ —. ನಿರ್ಲಕ್ಷ್ಯ ಬೇಡ. ‘ಸಾಮಾನ್ಯ’ ಎಂದು ಕಡೆಗಣಿಸಬೇಡಿ.
🔥 “Get out of here! — ಸೂಪರ್ women ವಿರುದ್ಧವೇ ಕೇಸ್?!!
ಡೆಲಿವರಿ ಬಾಯ್‌ಗೆ ಅಡ್ಡಗಟ್ಟಿ ಹಲ್ಲೆ – ಪ್ರಕರಣ ದಾಖಲು
ಮಂಗಳೂರಿನ ಆಡಳಿತ ವೈಫಲ್ಯ ಸರ್ಕಾರಿ ಕಚೇರಿಗಳಲ್ಲಿ ಸಾಲು…ಪಾಲಿಕೆ ಸೇವೆಗಳ ವಿಳಂಬ, ಭೂಪರಿವರ್ತನೆ ಗೊಂದಲ: ರಾಜ್ಯ ಸರ್ಕಾರದ ವಿರುದ್ಧ ಶಾಸಕ ವೇದವ್ಯಾಸ ಕಾಮತ್ ಆಕ್ರೋಶ ..