📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ವಿಟ್ಲ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಚೇರಿಯಲ್ಲಿ ಗಲಾಟೆ:

ವಿಟ್ಲ: ಇತ್ತೀಚೆಗೆ ಬಂಟ್ವಾಳ ತಾಲೂಕಿನ ವಿಟ್ಲ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಯೋಜನಾ ಕಚೇರಿಯಲ್ಲಿ ಕೌಟುಂಬಿಕ ಕಲಹ ವಿಚಾರಣೆ ನಡೆಯುವ ವೇಳೆ ಗಲಾಟೆ ಸಂಭವಿಸಿ ಹಲ್ಲೆ ಹಾಗೂ ಆಸ್ತಿ ಹಾನಿಯಾದ ಘಟನೆ ನಡೆದಿದೆ.

ಸಹಾಯಕ ಶಿಶು ಅಭಿವೃದ್ಧಿ ಅಧಿಕಾರಿ ಶಾರದಾ ಕೆ ಅವರ ಕಚೇರಿಯಲ್ಲಿ, ಅಮೀರತ್ ಎಂಬ ಮಹಿಳೆ ತನ್ನ ಪತಿ ಮಹಮ್ಮದ್ ಅಫೀಜ್ ವಿರುದ್ಧ ನೀಡಿದ ದೂರಿನ ವಿಚಾರಣೆ ನಡೆಯುತ್ತಿತ್ತು. ವಿಚಾರಣೆಗೆ ಇಬ್ಬರೂ ಪಕ್ಷಗಳು ಹಾಗೂ ಅವರ ಕುಟುಂಬದ ಸದಸ್ಯರು, ವಕೀಲರ ಸಮ್ಮುಖದಲ್ಲಿ ಹಾಜರಾಗಿದ್ದರು.

ಈ ಸಂದರ್ಭದಲ್ಲಿ, ಮಹಮ್ಮದ್ ಅಫೀಜ್ ಏಕಾಏಕಿ ಅಮೀರತ್ ಅವರೊಂದಿಗೆ ಬಂದಿದ್ದ ಕುಟುಂಬದ ಸದಸ್ಯನ ಮೇಲೆ ಹಲ್ಲೆ ನಡೆಸಿದನು. ಇದರಿಂದ ಉದ್ವಿಗ್ನತೆ ಉಂಟಾಗಿ, ಎರಡೂ ಕುಟುಂಬದ ಸದಸ್ಯರು ಕಚೇರಿಯೊಳಗಿಂದ ಹೊರಬಂದು ಪರಸ್ಪರ ಹೊಡೆದಾಟ ನಡೆಸಿದರು.

ಗಲಾಟೆಯ ಪರಿಣಾಮವಾಗಿ ಕಚೇರಿಯ ಮೇಲಾಧಿಕಾರಿಗಳ ಕೊಠಡಿಯಲ್ಲಿ ಅಳವಡಿಸಿದ್ದ ಸ್ವಯಂ ಮುಚ್ಚುವ ಬಾಗಿಲು ಹಾಗೂ ಕುರ್ಚಿ ಹಾನಿಗೊಳಗಾಗಿ ಸುಮಾರು 5,000 ರೂ. ಮೌಲ್ಯದ ನಷ್ಟ ಸಂಭವಿಸಿದೆ ಎಂದು ತಿಳಿದುಬಂದಿದೆ.

ಘಟನೆ ನಡೆದ ಸಂದರ್ಭದಲ್ಲಿ ಕಚೇರಿಯ ಸಿಬ್ಬಂದಿಗಳು ಸ್ಥಳದಲ್ಲಿದ್ದು, ಘಟನೆಯನ್ನು ಕಣ್ಣಾರೆ ಕಂಡಿದ್ದಾರೆ. ಹಲ್ಲೆಯಲ್ಲಿ ಒಬ್ಬರಿಗೆ ಗಾಯಗಳಾಗಿರುವುದಾಗಿ ವರದಿಯಾಗಿದೆ.

ಗಲಾಟೆಯ ನಂತರ, ಎರಡೂ ಕುಟುಂಬದ ಕೆಲವರು ಕಚೇರಿಯ ಶಟರ್ ಬಾಗಿಲನ್ನು ಎಳೆದು ಸಿಬ್ಬಂದಿಗಳಿಗೆ ಭಯದ ವಾತಾವರಣ ಸೃಷ್ಟಿಸಿದರೆಂದು ದೂರಲಾಗಿದೆ.

ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ.

##ಮಹಿಳಾಮಕ್ಕಳಅಭಿವೃದ್ಧಿ#CrimeNews #Karnataka #Vittla #Bantwal #PoliceCase

COMMENTS

Login with Gmail to comment

ಇನ್ನಷ್ಟು ಸುದ್ದಿ

ಮಂಗಳೂರು ಗ್ರಾಮಾಂತರ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರ
ಶಾಸಕ ಹ್ಯಾರಿಸ್ ಮೇಲೆ ಪ್ರಕರಣ ದಾಖಲು
ಬೆಳ್ತಂಗಡಿ ಸ್ನಾನಕ್ಕೆ ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವು…
ವೆಟ್-ವೆಲ್‌ಗಳ ಕಳಪೆ ನಿರ್ವಹಣೆಚರಂಡಿ-ಬಾವಿಗಳಿಗೆ ಡ್ರೈನೇಜ್ ನೀರು..
ಭಾರತ ಮುಸ್ಲಿಂ ದೇಶವಾಗುವುದೇ?- ನಾಳೆ ಪುಸ್ತಕ ಬಿಡುಗಡೆಯ ಕಾರ್ಯಕ್ರಮ
ಅಂದು ಮುಖ್ಯ ಮಂತ್ರಿ, ಇಂದು ಪುಟ್ಟಪಾತ್ ವ್ಯಾಪಾರಿ!!
ಮಾರ್ಚ್ 7 ರಂದು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಆಗಮನ
🚨 ದೇಶಾದ್ಯಂತ ಉಗ್ರ ಜಾಲದ ಮೇಲೆ ದೊಡ್ಡ ದಾಳಿ: ಕರ್ನಾಟಕದ ಬಳ್ಳಾರಿಯ ಅಬ್ದುಲ್ ಸಲಾಂ ಸೇರಿದಂತೆ 7 ರಾಜ್ಯಗಳಲ್ಲಿ 12 ಮಂದಿ ಬಂಧನ — ಯುವಕರಿಗೆ ಎಚ್ಚರಿಕೆ!
“ಪಾಲಕ್ಕಾಡ್‌ನಲ್ಲಿ ಮೋದಿ ಚಂಡೆ ಸದ್ದು—ಕೇರಳದಲ್ಲಿ ಚುನಾವಣಾ ಕಹಳೆ!” 
ಉದ್ಯಮಿ ಧೀರಜ್ ಜೈನ್ ಗಪ್ ಚುಪ್ಪಾಗಿ ನಡೆಸಿದ ಮಾನವೀಯ ನಡೆಗೆ ಸಾಕ್ಷಿ ನೋಡಿ
ಪಿಸ್ತೂಲ್ ತೋರಿಸಿ ಬೆದರಿಸಿ ಪರಾರಿಯಾಗಿದ್ದ ಯುವಕ ಬಂಧನ
ಹಾವು ಮುಂಗುಸಿ ಅಂತಾಗಿದ್ದವರು ಒಂದಾದರು
ಇ-ಸಿಗರೇಟ್‌ಗೆ ಭಾರಿ ಡಿಮ್ಯಾಂಡ್ – ಗೋಣಿ ಚೀಲದಲ್ಲಿಸಂಗ್ರಹಿಸಿಟ್ಟ ಆರೋಪಿ ಬಂಧನ..!
ಭೀಕರ ಅಪಘಾತ ಮಹಿಳೆ ಬಲಿ
ಎಸ್.ಎಸ್.ಎಲ್.ಸಿ. ಪರೀಕ್ಷೆ: ಮಂಗಳೂರಲ್ಲಿ ನಿಷೇಧಾಜ್ಞೆ ಜಾರಿ
ಪಂಚ ಗ್ಯಾರಂಟಿ ಯೋಜನೆಯಿಂದ ಕರ್ನಾಟಕ ಸಾಲದ ಸುಳಿಗೆ……..
ಹಿಂದೂ ಬುಡಕಟ್ಟು ಸಮಾಜದ ರುದ್ರಾಕ್ಷಿ ಸುಂದರಿ ಮುಸ್ಲಿಂ ಹುಡುಗನ ಮದುವೆಯಾದ್ಲು
ಸಚಿವ ಜಮೀರ್ ಕಥೆ ಗೋವಿಂದ!!!?
ದೇಶಕ್ಕಾಗಿ ಹಾರಿದ ಯುವ ಪೈಲಟ್: ಅಸ್ಸಾಂ ದುರಂತದಲ್ಲಿ ಐಎಎಫ್ ಅಧಿಕಾರಿ ವೀರಮರಣ
ನೆತನ್ಯಾಹು ಎಲ್ಲಿದ್ದಾರೆ? ಬದುಕಿದ್ದರೆ ಹಿಂಬಾಲಿಸಿ ಕೊಲ್ಲುತ್ತೇವೆ ಎಂದ ಇರಾನ್
ಮಂಗಳೂರು ಸಿಟಿ ಪೊಲೀಸರ ಭರ್ಜರಿ ಬೇಟೆ – ನಿಷೇಧಿತ ಎಂಡಿಎಂ, ಗಾಂಜಾ ಮರಾಟಗಾರರ ಬಂಧನ
ವಿದ್ಯಾರ್ಥಿಯೊಬ್ಬ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ..
ಅಹಿಂಸೆ, ಸತ್ಯ ಮತ್ತು ತ್ಯಾಗದ ಮಾರ್ಗವೇ ಮಹಾವೀರರ ದರ್ಶನ — ಇದೇ ಸುಖಿ ಜೀವನದ ಗುಟ್ಟು.
ಮಂತ್ರಾಲಯದ ಮಠದ ಹೆಸರಲ್ಲಿ 3 ಲಕ್ಷ ಆಸೆ ತೋರಿಸಿ ವಂಚನೆ..!
ಕೊನೆಗೂ ಸೋತ ಖಾಕಿ….!!!
ಸಾರ್ವಜನಿಕರಲ್ಲಿ ವಿನಂತಿ …!
ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಮತ್ತು ನಗರ ಸಭೆ ಎರಡೂ ಕಮಾಯಿಗೆ ಕುಳಿತು ಕೊಂಡಿದೆಯಾ?
ಕೊಲೆ ಆರೋಪಿಗಳ ಕಾರು ಮಾಣಿಯಲ್ಲಿ ಪತ್ತೆ ….!
🚨 ಸಾರ್ವಜನಿಕರಿಗೆ ತುರ್ತು ಎಚ್ಚರಿಕೆ – ಕಟಪಾಡಿ ರಾಷ್ಟ್ರೀಯ ಹೆದ್ದಾರಿ ಅಪಘಾತ
ಇಸ್ರೇಲ್ ಸ್ಥಿತಿ ಶೋಚನೀಯ ಸೈನ್ಯದಲ್ಲೇ ಅಸಮಾಧಾನ