📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ವಿಪರೀತ ಸೆಕೆಯಿಂದ ಬಳಲುತ್ತಿರುವಾಗಲೇ ಕರೆಂಟ್ ತೆಗೆದ ದುಷ್ಟ ಮೆಸ್ಕಾಂ

ಮಂಗಳೂರು ನಗರದಲ್ಲಿ, ಯಾವುದೇ ಮುನ್ನೆಚ್ಚರಿಕೆ ಅಥವಾ ಯಾವುದೇ ಮುನ್ಸೂಚನೆ ಇಲ್ಲದೆ ಮೆಸ್ಕಾಂ ಸಂಸ್ಥೆಯು, ಈಗ ರಾತ್ರಿ 9 45ರ ಸುಮಾರಿಗೆ ಕರೆಂಟ್ ತೆಗೆಯುವ ಮೂಲಕ ಮಧ್ಯಮ ವರ್ಗ ಹಾಗೂ ಕೆಳ ವರ್ಗದವರ ಪಾಲಿಗೆ ಟಾರ್ಚರ್ ನೀಡುವ ಸಂಸ್ಥೆಯಾಗಿ ಮಾರ್ಪಾಡಾಗಿದೆ. ಇದು ಕೇವಲ ಮಧ್ಯಮ ಹಾಗೂ ಬಡ ಮಧ್ಯಮ ವರ್ಗಕ್ಕೆ ಮಾತ್ರ ಸೀಮಿತವಾಗಿಲ್ಲ ಇಡೀ ನಗರದ ಸಾರ್ವಜನಿಕರಿಗೆ ಉಪದ್ರ ನೀಡಿದೆ. ಸುಮಾರು ಹತ್ತು ನಿಮಿಷಗಳ ಕಾಲ ತೆಗೆಯಲಾದ ಕರೆಂಟ್ನಿಂದಾಗಿ ಜನರು ಕಂಗಾಲಾಗಿದ್ದು ಸುಳ್ಳಲ್ಲ. ಸರ್ಕಾರಕ್ಕೆ ಹಾಗೂ ಮೆಸ್ಕಾಂಗೆ ಬಿಡಿ ಶಾಪ ಹಾಕುತ್ತಿದ್ದು ಕಂಡು ಬಂತು.

ಒಂದು ಕಡೆ ಇಡೀ ನಗರದ ತುಂಬಾ ಸೊಳ್ಳೆಯ ಕಾಟ ಹೆಚ್ಚಾಗಿದ್ದರೆ, ಮತ್ತೊಂದು ಕಡೆ ಮೆಸ್ಕಾಂ ತನ್ನ ದುಷ್ಟಬುದ್ಧಿಯನ್ನು ತೋರಿಸುತ್ತಿದೆ. ಇಡೀ ನಗರ ಸೆಕೆ ಇಂದ ನರಳುತ್ತಿದೆ. ಇಂತಹ ಸಂದರ್ಭದಲ್ಲಿ, ಕರೆಂಟ್ ತೆಗೆಯುವ ಕೆಲಸ ಕ್ರಿಮಿನಲ್ ಅಪರಾಧವೆ ಸರಿ. ಸಾಮಾನ್ಯ ಜನರು, ಈಗಾಗಲೇ ಮೆಸ್ಕಾಂ ನಲ್ಲಿ  ಡಿಪೋಸಿಟ್ ಹಣವನ್ನು ಇಟ್ಟಿದ್ದಾರೆ.  ತೀರಾ ಇತ್ತೀಚೆಗೆ ಮೆಸ್ಕಾಂ ಯುನಿಟ್ ದರವನ್ನು ಏರಿಸುವುದಾಗಿ ಹೇಳಿದೆ. ಆದರೆ ಸಾರ್ವಜನಿಕರಿಗೆ ಸೇವೆಯನ್ನು ಕೊಡುವಾಗ ವ್ಯತ್ಯಾಯ ಮಾಡಬಾರದೆಂಬ ಪರಿಜ್ಞಾನ ಇರಬೇಕಿತ್ತು. ವಿಪರೀತ ಗುಡುಗು ಸಿಡಿಲು ಮಳೆ ಬರುತ್ತಿದೆ ಎಂದರೆ ಅದು ಬೇರೆ ಪ್ರಶ್ನೆ, ಆಕಸ್ಮಿಕವಾಗಿ ಅಪಘಾತದಿಂದಲೊ ಅಥವಾ ದುರ್ಘಟನೆಯಿಂದ ಅವಘಡ ಸಂಭವಿಸಿದ್ದರೆ, ಆಗ ಕರೆಂಟ್ ತೆಗೆದಿದ್ದನ್ನು ಒಪ್ಪಿಕೊಳ್ಳಬಹುದು. ಆದರೆ, ಇನ್ನುಳಿದ ಸಂದರ್ಭದಲ್ಲಿ ಅದರಲ್ಲೂ ರಾತ್ರಿಯ ಸಮಯದಲ್ಲಿ ಕರೆಂಟ್ ತೆಗೆಯುವುದು ಅಪರಾಧವೇ ಅನ್ನೋದ್ರಲ್ಲಿ ಎರಡು ಮಾತಿಲ್ಲ. ಮೆಸ್ಕಾಂ ಸಂಸ್ಥೆಯ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿ ಕಠಿಣ ಕ್ರಮ ಜರುಗಿಸುವ ಅವಶ್ಯಕತೆ ಇದೆ. ಇಲ್ಲಿಯವರೆಗೆ ಆ ಕೆಲಸ ಆಗದ ಕಾರಣ ಮೆಸ್ಕಾಂ ತನಗೆ ಮನಸ್ಸಿಗೆ ಬಂದಂತೆ ನಡೆಯನ್ನು ಪ್ರದರ್ಶಿಸುತ್ತಿದೆ. ಅದಕ್ಕೆ ಫುಲ್ ಸ್ಟಾಪ್ ಹಾಕುವ ಕೆಲಸ ಆಗಬೇಕು. ಇಂಧನ ಸಚಿವ ಕೆ ಜೆ ಜಾರ್ಜ್ ತಕ್ಷಣವೇ ಆಕ್ಷನ್ ಗೆ ಮುಂದಾಗಬೇಕಿದೆ ಎಂಬ ಆಗ್ರಹವನ್ನು ಮಂಗಳೂರಿನ ಸಾಕಷ್ಟು ಹಿರಿಯ ನಾಗರಿಕರು ಆಕ್ರೋಶದಿಂದ ಮಾಡುತ್ತಿದ್ದಾರೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಬ್ಯಾರಿ ಸಾಹಿತ್ಯ ಸಮ್ಮೇಳನಕ್ಕೆ ಸಹಕರಿಸಲು ಮನವಿ
ಪ್ರಕೃತಿಯ ಮುನಿಸಿಗೆ ಕರಗುತ್ತಿದೆ ಯುರೋಪ್ ….!ತಂತ್ರಜ್ಞಾನದ ಅಹಂಕಾರವನ್ನು ಸುಟ್ಟು ಬೂದಿ ಮಾಡುತ್ತಿರುವ ಯುರೋಪ್ ಹೀಟ್‌ವೇವ್!
🎬 ಜೈಲರ್ 2 ಸೆಟ್‌ನಲ್ಲಿ ವಿದ್ಯುತ್ ಅವಘಡ…28 ವರ್ಷದ ಕಾರ್ತಿಕೇಯನ್ ವಿದ್ಯುತ್ ಶಾಕ್‌ಗೆ ಬಲಿ..
₹10,000ಕ್ಕೆ NEET-UG 2026 ಪ್ರಶ್ನೆಪತ್ರಿಕೆ? ದೇಶವೇ ಬೆಚ್ಚಿಬಿದ್ದ ಲೀಕ್ ಸ್ಕಾಂಡಲ್!ಟೆಲಿಗ್ರಾಂ ಸೀಕ್ರೆಟ್ ಚಾಟ್ ವೈರಲ್…22 ಲಕ್ಷ ವಿದ್ಯಾರ್ಥಿಗಳ ಕನಸಿಗೆ ದೊಡ್ಡ ಹೊಡೆತ — NEET 2026 ರದ್ದು!
ದೇಶಾದ್ಯಂತ ಇಂದು ಮೊಬೈಲ್‌ನಲ್ಲಿ ತುರ್ತು ಎಚ್ಚರಿಕೆ ಡ್ರಿಲ್ – ಗಾಬರಿ ಬೇಡ
ಟೆನಿಸ್ ಕೋರ್ಟ್‌ನಲ್ಲಿ ಡಿಸೈನರ್ ಉಡುಪುಗಳ ಧಮಾಕಾ!
ಗಂಡನನ್ನು ಕೊಂದ ಪತಿವ್ರತೆ… ಮೂರು ವರ್ಷದ ಮಗು ಅನಾಥ
 “ಮೀನುಗಾರರ ಡೀಸೆಲ್ & ಸಿಲಿಂಡರ್ ಸಮಸ್ಯೆಗೆ ಸರ್ಕಾರದ ತುರ್ತು ಹಸ್ತಕ್ಷೇಪ -ಇಂಧನ ಭರವಸೆ: ಮಂಗಳೂರು ಬಂದರಿನಲ್ಲಿ ತುರ್ತು ಕ್ರಮ”-
594 ಕಿಮೀ ಗಂಗಾ ಎಕ್ಸ್‌ಪ್ರೆಸ್‌ ವೇ ..!ಮೀರಟ್‌ನಿಂದ ಪ್ರಯಾಗರಾಜ್‌ವರೆಗೆ -ದೇಶದ ಪ್ರಗತಿಗೆ ಮತ್ತೊಂದು ಮೈಲುಗಲ್ಲು 
Anticipatory Bail ಗೆ ಹೊಸ ರಕ್ಷಣೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಆಕ್ಷೇಪ
“ಕುನಾಲ್ ಶಾ ವಾಟ್ಸಾಪ್ ಗ್ಲೋಬಲ್ ಹೆಡ್! ಸುಂದರ್ ಪಿಚೈ, ಸತ್ಯ ನಾಡೆಲ್ಲಾ ಸಾಲಿಗೆ ಮತ್ತೊಬ್ಬ ಭಾರತೀಯನ ಸೇರ್ಪಡೆ.
8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
“ಬಾಂಬ್‌ಗಿಂತ ಅಪಾಯಕಾರಿ ಅಹಂಕಾರ …! ಜಗತ್ತೇ ಕಾಯುತ್ತಿದೆ… ಮುಂದೇನು?”
ಕರಾವಳಿಯಲ್ಲಿ ವರುಣನ ಆರ್ಭಟ ಮುಂದುವರಿಕೆ: ಜುಲೈ 2ಕ್ಕೆ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್, ಏಳು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ಆಪಲ್‌ಗೆ ಭಾರತದಲ್ಲಿ ದೊಡ್ಡ ಕಾನೂನು ಶಾಕ್? App Store ನಿಯಮಗಳ ಮೇಲೆ ಆಪಲ್ vs ಭಾರತ CCI ಜಟಾಪಟಿ 
“ವಾಹನ ಮಾರಾಟ-RC ಬದಲಾವಣೆ  ಅಗತ್ಯ.. ಇಲ್ಲವಾದರೆ ಕಾನೂನು ಸಮಸ್ಯೆಗಳು ತಪ್ಪಿದ್ದಲ್ಲ..!” ಹೈಕೋರ್ಟ್
ರಾಜಧಾನಿಯ ಫುಟ್‌ಪಾತ್ ಮೇಲಿದ್ದ ಮಗುವನ್ನು ಎತ್ತಿಕೊಂಡು ಹೋಗಿ ಕ್ರೌರ್ಯ ಮೆರೆದ ಕಾಮುಕನ ಧೈರ್ಯ ಮತ್ತು ಭೀಕರ ಹತ್ಯೆ ಬಿಚ್ಚಿಟ್ಟ ಸತ್ಯ!
ಏಳು ವರ್ಷದ ನಂತರ ಮಂಗಳೂರಿಗೆ “ಅಮ್ಮ” ಬರುತ್ತಿದ್ದಾರೆ…. 50ಸಾವಿರ ಜನರ ನಿರೀಕ್ಷೆ
“ಮಂಗಳೂರಲ್ಲಿ ಡ್ರೈ ಡೇ ಘೋಷಣೆ -ಎರಡು ದಿನ ಬಾರ್‌ಗಳಿಗೆ ಲಾಕ್ ..!” ದಕ್ಷಿಣ ಕನ್ನಡದಲ್ಲಿ ಕಟ್ಟುನಿಟ್ಟಿನ ಆದೇಶ
‘ಮೇಕ್ ಇನ್ ಇಂಡಿಯಾ’ಗೆ ಮತ್ತೊಂದು ದೊಡ್ಡ ಗೆಲುವು: C295 ವಿಮಾನದ ಮೊದಲ ಯಶಸ್ವಿ ಪರೀಕ್ಷಾ ಹಾರಾಟ
ಮಿಸೆಸ್ ಕೇರಳ ಈಗ ‘ಡ್ರಗ್ ಕ್ವೀನ್’…!?ಕೋಟಿ ಮೌಲ್ಯದ ಡ್ರಗ್ಸ್ ಜೊತೆ ಮಾಜಿ ‘ಮಿಸೆಸ್ ಕೇರಳ’ ಅರೆಸ್ಟ್!”
19 ವರ್ಷದ ಆಯಾನ್ ಅಹ್ಮದ್ ತನ್ವೀರ್ ಅಹ್ಮದ್ ವಿರುದ್ಧ ಗಂಭೀರ ಸೈಬರ್ ಲೈಂಗಿಕ ಶೋಷಣೆ ..!ಅಮರಾವತಿ ಭೀಕರ ಪ್ರಕರಣ-
ಅಕ್ರಮವಾಗಿ ಲಕ್ಷಾಂತರ ಮೌಲ್ಯದ ಎತ್ತುಗಳನ್ನು ವಧೆಗೆ….!
ಸಿಲಿಂಡರ್ ಪಡೆಯಲು ಹೊಸ ಶರತ್ತುಗಳು – ಈಗಲೇ ತಿಳಿದುಕೊಳ್ಳಿ, …
ಯಾರದ್ದೋ ಹಠ, ಮತ್ತ್ಯಾರದೋ ಚಟ, ಹೆತ್ತವರ ಜಗಳಕ್ಕೆ ಬಲಿಯಾಯ್ತು ಮಗುವಿನ ಬಾಲ್ಯ -ಭವಿಷ್ಯ!
ನಿರ್ಮಾಣ ಹಂತ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು-  ಶಣೈ ಮೇಲೆ ಕೇಸು
ಹೈಕೋರ್ಟ್ ತೀರ್ಪಿನಿಂದ ದಕ್ಷಿಣ ಕನ್ನಡ ಇ-ರಿಕ್ಷಾ ಚಾಲಕರಿಗೆ favour
ಉದ್ಯಮಿ ಧೀರಜ್ ಜೈನ್ ಗಪ್ ಚುಪ್ಪಾಗಿ ನಡೆಸಿದ ಮಾನವೀಯ ನಡೆಗೆ ಸಾಕ್ಷಿ ನೋಡಿ
717 ಮದ್ಯದಂಗಡಿಗಳಿಗೆ ವಿಜಯ್ ಬ್ರೇಕ್‌! ತಮಿಳುನಾಡು ಖಜಾನೆಗೆ ಸಾವಿರಾರು ಕೋಟಿ ಶಾಕ್!
ಜಮ್ಮು-ಕಾಶ್ಮೀರದಲ್ಲಿ ಖಾಕಿ ಮೇಲೆ ಖಾಕಿ ದಾಳಿ? ಹೈಡ್ರಾಮಾ: ಕರ್ನಲ್, ಮೇಜರ್ ಸೇರಿ 40 ಸೇನಾ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲು.