📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ವಿಪರೀತ ಸೆಕೆಯಿಂದ ಬಳಲುತ್ತಿರುವಾಗಲೇ ಕರೆಂಟ್ ತೆಗೆದ ದುಷ್ಟ ಮೆಸ್ಕಾಂ

ಮಂಗಳೂರು ನಗರದಲ್ಲಿ, ಯಾವುದೇ ಮುನ್ನೆಚ್ಚರಿಕೆ ಅಥವಾ ಯಾವುದೇ ಮುನ್ಸೂಚನೆ ಇಲ್ಲದೆ ಮೆಸ್ಕಾಂ ಸಂಸ್ಥೆಯು, ಈಗ ರಾತ್ರಿ 9 45ರ ಸುಮಾರಿಗೆ ಕರೆಂಟ್ ತೆಗೆಯುವ ಮೂಲಕ ಮಧ್ಯಮ ವರ್ಗ ಹಾಗೂ ಕೆಳ ವರ್ಗದವರ ಪಾಲಿಗೆ ಟಾರ್ಚರ್ ನೀಡುವ ಸಂಸ್ಥೆಯಾಗಿ ಮಾರ್ಪಾಡಾಗಿದೆ. ಇದು ಕೇವಲ ಮಧ್ಯಮ ಹಾಗೂ ಬಡ ಮಧ್ಯಮ ವರ್ಗಕ್ಕೆ ಮಾತ್ರ ಸೀಮಿತವಾಗಿಲ್ಲ ಇಡೀ ನಗರದ ಸಾರ್ವಜನಿಕರಿಗೆ ಉಪದ್ರ ನೀಡಿದೆ. ಸುಮಾರು ಹತ್ತು ನಿಮಿಷಗಳ ಕಾಲ ತೆಗೆಯಲಾದ ಕರೆಂಟ್ನಿಂದಾಗಿ ಜನರು ಕಂಗಾಲಾಗಿದ್ದು ಸುಳ್ಳಲ್ಲ. ಸರ್ಕಾರಕ್ಕೆ ಹಾಗೂ ಮೆಸ್ಕಾಂಗೆ ಬಿಡಿ ಶಾಪ ಹಾಕುತ್ತಿದ್ದು ಕಂಡು ಬಂತು.

ಒಂದು ಕಡೆ ಇಡೀ ನಗರದ ತುಂಬಾ ಸೊಳ್ಳೆಯ ಕಾಟ ಹೆಚ್ಚಾಗಿದ್ದರೆ, ಮತ್ತೊಂದು ಕಡೆ ಮೆಸ್ಕಾಂ ತನ್ನ ದುಷ್ಟಬುದ್ಧಿಯನ್ನು ತೋರಿಸುತ್ತಿದೆ. ಇಡೀ ನಗರ ಸೆಕೆ ಇಂದ ನರಳುತ್ತಿದೆ. ಇಂತಹ ಸಂದರ್ಭದಲ್ಲಿ, ಕರೆಂಟ್ ತೆಗೆಯುವ ಕೆಲಸ ಕ್ರಿಮಿನಲ್ ಅಪರಾಧವೆ ಸರಿ. ಸಾಮಾನ್ಯ ಜನರು, ಈಗಾಗಲೇ ಮೆಸ್ಕಾಂ ನಲ್ಲಿ  ಡಿಪೋಸಿಟ್ ಹಣವನ್ನು ಇಟ್ಟಿದ್ದಾರೆ.  ತೀರಾ ಇತ್ತೀಚೆಗೆ ಮೆಸ್ಕಾಂ ಯುನಿಟ್ ದರವನ್ನು ಏರಿಸುವುದಾಗಿ ಹೇಳಿದೆ. ಆದರೆ ಸಾರ್ವಜನಿಕರಿಗೆ ಸೇವೆಯನ್ನು ಕೊಡುವಾಗ ವ್ಯತ್ಯಾಯ ಮಾಡಬಾರದೆಂಬ ಪರಿಜ್ಞಾನ ಇರಬೇಕಿತ್ತು. ವಿಪರೀತ ಗುಡುಗು ಸಿಡಿಲು ಮಳೆ ಬರುತ್ತಿದೆ ಎಂದರೆ ಅದು ಬೇರೆ ಪ್ರಶ್ನೆ, ಆಕಸ್ಮಿಕವಾಗಿ ಅಪಘಾತದಿಂದಲೊ ಅಥವಾ ದುರ್ಘಟನೆಯಿಂದ ಅವಘಡ ಸಂಭವಿಸಿದ್ದರೆ, ಆಗ ಕರೆಂಟ್ ತೆಗೆದಿದ್ದನ್ನು ಒಪ್ಪಿಕೊಳ್ಳಬಹುದು. ಆದರೆ, ಇನ್ನುಳಿದ ಸಂದರ್ಭದಲ್ಲಿ ಅದರಲ್ಲೂ ರಾತ್ರಿಯ ಸಮಯದಲ್ಲಿ ಕರೆಂಟ್ ತೆಗೆಯುವುದು ಅಪರಾಧವೇ ಅನ್ನೋದ್ರಲ್ಲಿ ಎರಡು ಮಾತಿಲ್ಲ. ಮೆಸ್ಕಾಂ ಸಂಸ್ಥೆಯ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿ ಕಠಿಣ ಕ್ರಮ ಜರುಗಿಸುವ ಅವಶ್ಯಕತೆ ಇದೆ. ಇಲ್ಲಿಯವರೆಗೆ ಆ ಕೆಲಸ ಆಗದ ಕಾರಣ ಮೆಸ್ಕಾಂ ತನಗೆ ಮನಸ್ಸಿಗೆ ಬಂದಂತೆ ನಡೆಯನ್ನು ಪ್ರದರ್ಶಿಸುತ್ತಿದೆ. ಅದಕ್ಕೆ ಫುಲ್ ಸ್ಟಾಪ್ ಹಾಕುವ ಕೆಲಸ ಆಗಬೇಕು. ಇಂಧನ ಸಚಿವ ಕೆ ಜೆ ಜಾರ್ಜ್ ತಕ್ಷಣವೇ ಆಕ್ಷನ್ ಗೆ ಮುಂದಾಗಬೇಕಿದೆ ಎಂಬ ಆಗ್ರಹವನ್ನು ಮಂಗಳೂರಿನ ಸಾಕಷ್ಟು ಹಿರಿಯ ನಾಗರಿಕರು ಆಕ್ರೋಶದಿಂದ ಮಾಡುತ್ತಿದ್ದಾರೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

“ಅಮ್ಮ”ನ ಕಾರ್ಯಕ್ರಮದಲ್ಲಿ  ಕೇಂದ್ರ ಸಚಿವರಿಂದ ರಾಜಕೀಯ ಭಾಷಣ
ಅಪ್ರಾಪ್ತನ ಕ್ರೌರ್ಯಕ್ಕೆ ಬಳ್ಳಾರಿ ವಸತಿ ಶಾಲೆಯ ದೌರ್ಜನ್ಯವೇ ಸಾಕ್ಷಿ… ಈ ಕ್ರೌರ್ಯದ ಹಿಂದೆ ಮನೋರೋಗ ಅಡಗಿದೆಯಾ? 
ಜೆಡಿಎಸ್  ಜನರಲ್ ಸೆಕ್ರೆಟರಿಯಾಗಿ ಯೋಗೇಶ್ ಶೆಟ್ಟಿ ಜಪ್ಪು ಆಯ್ಕೆಯ ಲೆಕ್ಕಾಚಾರವೇನು?
ಕಣ್ಣೀರಾದ ಕಣ್ಣಾಲಿಗಳು ಹೊಟ್ಟೆ ತುಂಬಾ ಊಟ ಮಾಡಿ ನಿದ್ರಿಸುವಂತೆ ಮಾಡುವ  “ಕಾರುಣ್ಯ ಸೇವಾಕ್ಕೀಗ 3000 ದಿನಗಳು…!!!”
ಡೇಟಾದಲ್ಲಿ ಸತ್ತಿದ್ದಾರೆ: ಬಡ ಮಹಿಳೆ ತಾನು ಜೀವಂತ ಸಾಬೀತುಪಡಿಸಲು ಹರಸಾಹಸ…ಬಡಜನರು “ಡೇಟಾ” ಅಲ್ಲ — ಅವರು ಜೀವಂತ ಮಾನವರು. 
ಮಂಗಳೂರು ಏರ್‌ಪೋರ್ಟ್‌ನಲ್ಲಿ ಉಬರ್ …
“ವಾಹನ ಮಾರಾಟ-RC ಬದಲಾವಣೆ  ಅಗತ್ಯ.. ಇಲ್ಲವಾದರೆ ಕಾನೂನು ಸಮಸ್ಯೆಗಳು ತಪ್ಪಿದ್ದಲ್ಲ..!” ಹೈಕೋರ್ಟ್
ಟೂರ್ plan ಮಾಡ್ತಿದ್ದೀರಾ ?ಸ್ಥಳವೇ ಇಲ್ಲದ address ಗೆ online book ಮಾಡಿ ಮೋಸ ಹೋಗ್ಬೇಡಿ…
ಕರ್ನಾಟಕದ ಮಾಜಿ ಸಚಿವರಿಗೆ ಜೈಲು ಜೈಲು ಶಿಕ್ಷೆಗೆ ಉಪಮುಖ್ಯಮಂತ್ರಿ ಡಿಕೆಯ ಶಾಕ್ ಸ್ಟೇಟ್ಮೆಂಟ್
ಪುತ್ತೂರಿನ ಕೃಷ್ಣ ಜೆ. ರಾವ್ ಪ್ರಕರಣಕ್ಕೆ ಹೈಕೋರ್ಟ್ ಬ್ರೇಕ್!“ಮಧ್ಯಂತರ ತೀರ್ಪು: ₹75K ತಿಂಗಳ ಸಹಾಯ ಷರತ್ತು”
ಗೃಹಿಣಿ ಅಲ್ಲ, ರಾಷ್ಟ್ರ ನಿರ್ಮಾಣಕಾರಿ”ಮನೆಯ ಕೆಲಸ ಕೆಲಸವೇ ಅಲ್ಲ ಎನ್ನುವವರೇ… ಈ ಸುದ್ದಿ ಒಮ್ಮೆ ಓದಿ!ಆಕೆಯ ಶ್ರಮಕ್ಕೆ-₹30,000 ಮೌಲ್ಯ!– ಸುಪ್ರೀಂ ಕೋರ್ಟ್ ಮಹತ್ವದ ಸಂದೇಶ
Tata Consultancy Services (TCS) ನಾಶಿಕ್ ವಿವಾದ-ಬೆಚ್ಚಿಬೀಳಿಸಿದ 30 ದಿನಗಳ ಗುಪ್ತ ಪೊಲೀಸ್ ಆಪರೇಷನ್‌ ರಹಸ್ಯಗಳು…!
 ಡೊನಾಲ್ಡ್ ಟ್ರಂಪ್ ಟೆರರ್ ನಡೆ      ವಿಶ್ವದ ಆರ್ಥಿಕತೆ ಪಾತಾಳದ ಕೆಡೆ
🚢 “ಹಾರ್ಮುಝ್‌ನಿಂದ ಮಂಗಳೂರುವರೆಗೆ – 46,000 MT ಎಲ್‌ಪಿಜಿ ಯಮಹಾಯಾತ್ರೆ!
ಕರಾವಳಿಯ ಭವಿಷ್ಯ ರೂಪಿಸಲು ಸಿಎಂನ ಮಾಸ್ಟರ್ ಪ್ಲಾನ್! ಹೆಲಿ ಟೂರಿಸಂನಿಂದ ಹಿಡಿದು ಸಾವಿರಾರು ಉದ್ಯೋಗಗಳವರೆಗೆ…ಕ್ಯಾಬಿನೆಟ್ ಸಭೆ ಮೇಲೆ ಎಲ್ಲರ ಕಣ್ಣು.
50ಕ್ಕೂ ಹೆಚ್ಚು ಆಟೋ ಚಾಲಕರ ದಿನನಿತ್ಯದ ಆರೋಗ್ಯದ ಬದುಕಿಗೆ ಮುಳುವಾದ ದೇರಳಕಟ್ಟೆ ಜಂಕ್ಷನ್ ದುರ್ನಾತ! 
ವಿಶ್ವಕಪ್‌ನಲ್ಲಿ ಪಾಕಿಸ್ತಾನವನ್ನು ಪುಡಿಗೈದ ಭಾರತದ ವನಿತೆಯರು !ಆರಂಭವೇ ವಿಜಯದ ಘರ್ಜನೆ!
ಮಂಗಳೂರು ಕಮಿಷನರ್ ವಿರುದ್ಧ ಎಸ್ಪಿ ಕಾಶಿನಾಥ್ ದೂರು ಕೊಡುತ್ತಿರುವುದು ಯಾಕೆ?
ಹಳಿಯಾಳದಲ್ಲಿ ನೀರಿನ ಹಾಹಾಕಾರ… ಮಾರ್ಚ್ 16ರಂದು ಬೃಹತ್ ಪ್ರತಿಭಟನೆ 
🚨 ದೇಶಾದ್ಯಂತ ಉಗ್ರ ಜಾಲದ ಮೇಲೆ ದೊಡ್ಡ ದಾಳಿ: ಕರ್ನಾಟಕದ ಬಳ್ಳಾರಿಯ ಅಬ್ದುಲ್ ಸಲಾಂ ಸೇರಿದಂತೆ 7 ರಾಜ್ಯಗಳಲ್ಲಿ 12 ಮಂದಿ ಬಂಧನ — ಯುವಕರಿಗೆ ಎಚ್ಚರಿಕೆ!
ನನ್ನನ್ನು ದುರ್ಬಲ ವ್ಯಕ್ತಿ ಅಂದುಕೊಳ್ಳಬೇಡಿ- U.T ಖಾದರ್
ಘೋರ ಭಾನುವಾರ, ಒಂದೇ ಕುಟುಂಬದ ಎಂಟು ಮಹಿಳೆಯರ ದುರ್ಮರಣ
ಬಂಗಾಳದಲ್ಲಿ ಬಿಜೆಪಿಯ ಯುದ್ಧೋನ್ಮಾದ, ದೀದಿಯ ರಚ್ಚೆ…
₹3 ಕೋಟಿ ಹೂಡಿಕೆ ಮಾಡಿದ ಶಾಲೆಗೀಗ 20ಕ್ಕೂ ಹೆಚ್ಚು ಭಾಷೆಗಳಲ್ಲಿ ಮಾತನಾಡುವ ಸುಂದರಿ “ಐರಿಸ್” ಮೇಡಂ…ಸರ್ಕಾರಿ ಶಾಲೆ ನೋಡಿ ದೇಶವೇ ಶಾಕ್!
ವಿಜಯ್ ತಳಪತಿ ಸಂಗೀತಾ ವಿಚ್ಛೇದನ ವಿಚಾರ: 27 ವರ್ಷದ ದಾಂಪತ್ಯಕ್ಕೆ ತೆರೆ? ₹250 ಕೋಟಿ ಸೆಟ್ಲ್‌ಮೆಂಟ್ ಚರ್ಚೆ!!
“ಕೃಷ್ಣ ಜೆ. ರಾವ್‌ ಡಿಎನ್ಎ ಸತ್ಯ ಬಯಲು — ಮಗುವಿಗೆ ನ್ಯಾಯ ಬೇಕು ಎಂದ ಹೈಕೋರ್ಟ್!”
ನಿರ್ಮಾಣ ಹಂತ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು-  ಶಣೈ ಮೇಲೆ ಕೇಸು
ನಾಟೆಕಲ್ ತಿರುವಿನಲ್ಲಿ ಪಿ.ಎ. ಕಾಲೇಜು ಬಸ್ ಅಪಘಾತ: ಬಸ್‌ನಡಿ ಸಿಲುಕಿ ಬೈಕ್ ಸವಾರ ಗಂಭೀರ ಗಾಯಗೊಂಡು ಸಾವು
ದೊಡ್ಡ ಮಿಕವನ್ನೇ ಬಲೆಗೆ ಹಾಕಿದ  ಲೋಕಾಯುಕ್ತ ಪೊಲೀಸರು 
ರಾಜಕೀಯ ಬದಲಾಗುತ್ತಿದೆ -ಪಂಚರಾಜ್ಯ election ರಿಸಲ್ಟ್ “ಗೆಲುವು-ಸೋಲಿನ ಶಕ್ತಿ ಪಕ್ಷದಲ್ಲಲ್ಲ… ಜನರ ಕೈಯಲ್ಲಿ”