📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ವಿಪರೀತ ಸೆಕೆಯಿಂದ ಬಳಲುತ್ತಿರುವಾಗಲೇ ಕರೆಂಟ್ ತೆಗೆದ ದುಷ್ಟ ಮೆಸ್ಕಾಂ

ಮಂಗಳೂರು ನಗರದಲ್ಲಿ, ಯಾವುದೇ ಮುನ್ನೆಚ್ಚರಿಕೆ ಅಥವಾ ಯಾವುದೇ ಮುನ್ಸೂಚನೆ ಇಲ್ಲದೆ ಮೆಸ್ಕಾಂ ಸಂಸ್ಥೆಯು, ಈಗ ರಾತ್ರಿ 9 45ರ ಸುಮಾರಿಗೆ ಕರೆಂಟ್ ತೆಗೆಯುವ ಮೂಲಕ ಮಧ್ಯಮ ವರ್ಗ ಹಾಗೂ ಕೆಳ ವರ್ಗದವರ ಪಾಲಿಗೆ ಟಾರ್ಚರ್ ನೀಡುವ ಸಂಸ್ಥೆಯಾಗಿ ಮಾರ್ಪಾಡಾಗಿದೆ. ಇದು ಕೇವಲ ಮಧ್ಯಮ ಹಾಗೂ ಬಡ ಮಧ್ಯಮ ವರ್ಗಕ್ಕೆ ಮಾತ್ರ ಸೀಮಿತವಾಗಿಲ್ಲ ಇಡೀ ನಗರದ ಸಾರ್ವಜನಿಕರಿಗೆ ಉಪದ್ರ ನೀಡಿದೆ. ಸುಮಾರು ಹತ್ತು ನಿಮಿಷಗಳ ಕಾಲ ತೆಗೆಯಲಾದ ಕರೆಂಟ್ನಿಂದಾಗಿ ಜನರು ಕಂಗಾಲಾಗಿದ್ದು ಸುಳ್ಳಲ್ಲ. ಸರ್ಕಾರಕ್ಕೆ ಹಾಗೂ ಮೆಸ್ಕಾಂಗೆ ಬಿಡಿ ಶಾಪ ಹಾಕುತ್ತಿದ್ದು ಕಂಡು ಬಂತು.

ಒಂದು ಕಡೆ ಇಡೀ ನಗರದ ತುಂಬಾ ಸೊಳ್ಳೆಯ ಕಾಟ ಹೆಚ್ಚಾಗಿದ್ದರೆ, ಮತ್ತೊಂದು ಕಡೆ ಮೆಸ್ಕಾಂ ತನ್ನ ದುಷ್ಟಬುದ್ಧಿಯನ್ನು ತೋರಿಸುತ್ತಿದೆ. ಇಡೀ ನಗರ ಸೆಕೆ ಇಂದ ನರಳುತ್ತಿದೆ. ಇಂತಹ ಸಂದರ್ಭದಲ್ಲಿ, ಕರೆಂಟ್ ತೆಗೆಯುವ ಕೆಲಸ ಕ್ರಿಮಿನಲ್ ಅಪರಾಧವೆ ಸರಿ. ಸಾಮಾನ್ಯ ಜನರು, ಈಗಾಗಲೇ ಮೆಸ್ಕಾಂ ನಲ್ಲಿ  ಡಿಪೋಸಿಟ್ ಹಣವನ್ನು ಇಟ್ಟಿದ್ದಾರೆ.  ತೀರಾ ಇತ್ತೀಚೆಗೆ ಮೆಸ್ಕಾಂ ಯುನಿಟ್ ದರವನ್ನು ಏರಿಸುವುದಾಗಿ ಹೇಳಿದೆ. ಆದರೆ ಸಾರ್ವಜನಿಕರಿಗೆ ಸೇವೆಯನ್ನು ಕೊಡುವಾಗ ವ್ಯತ್ಯಾಯ ಮಾಡಬಾರದೆಂಬ ಪರಿಜ್ಞಾನ ಇರಬೇಕಿತ್ತು. ವಿಪರೀತ ಗುಡುಗು ಸಿಡಿಲು ಮಳೆ ಬರುತ್ತಿದೆ ಎಂದರೆ ಅದು ಬೇರೆ ಪ್ರಶ್ನೆ, ಆಕಸ್ಮಿಕವಾಗಿ ಅಪಘಾತದಿಂದಲೊ ಅಥವಾ ದುರ್ಘಟನೆಯಿಂದ ಅವಘಡ ಸಂಭವಿಸಿದ್ದರೆ, ಆಗ ಕರೆಂಟ್ ತೆಗೆದಿದ್ದನ್ನು ಒಪ್ಪಿಕೊಳ್ಳಬಹುದು. ಆದರೆ, ಇನ್ನುಳಿದ ಸಂದರ್ಭದಲ್ಲಿ ಅದರಲ್ಲೂ ರಾತ್ರಿಯ ಸಮಯದಲ್ಲಿ ಕರೆಂಟ್ ತೆಗೆಯುವುದು ಅಪರಾಧವೇ ಅನ್ನೋದ್ರಲ್ಲಿ ಎರಡು ಮಾತಿಲ್ಲ. ಮೆಸ್ಕಾಂ ಸಂಸ್ಥೆಯ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿ ಕಠಿಣ ಕ್ರಮ ಜರುಗಿಸುವ ಅವಶ್ಯಕತೆ ಇದೆ. ಇಲ್ಲಿಯವರೆಗೆ ಆ ಕೆಲಸ ಆಗದ ಕಾರಣ ಮೆಸ್ಕಾಂ ತನಗೆ ಮನಸ್ಸಿಗೆ ಬಂದಂತೆ ನಡೆಯನ್ನು ಪ್ರದರ್ಶಿಸುತ್ತಿದೆ. ಅದಕ್ಕೆ ಫುಲ್ ಸ್ಟಾಪ್ ಹಾಕುವ ಕೆಲಸ ಆಗಬೇಕು. ಇಂಧನ ಸಚಿವ ಕೆ ಜೆ ಜಾರ್ಜ್ ತಕ್ಷಣವೇ ಆಕ್ಷನ್ ಗೆ ಮುಂದಾಗಬೇಕಿದೆ ಎಂಬ ಆಗ್ರಹವನ್ನು ಮಂಗಳೂರಿನ ಸಾಕಷ್ಟು ಹಿರಿಯ ನಾಗರಿಕರು ಆಕ್ರೋಶದಿಂದ ಮಾಡುತ್ತಿದ್ದಾರೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ನಿಶ್ಶಬ್ದ ಕೊಠಡಿ ಹೇಳುವ ನಿಗೂಢ ರಹಸ್ಯ …!ಮನೆಯ ಗೋಡೆಗಳ ಮೇಲೆ ಬರಹ,ಕಾಗದಗಳು ನೂರಾರು…! ಅಸಹಜ ಮರಣದ ಹಿಂದೆ ಅಡಗಿರುವ ಸತ್ಯ ಇನ್ನೂ ಅನಾವರಣವಾಗಿಲ್ಲ…”
ಜನಪ್ರತಿನಿಧಿಗಳಿಗೆ ಕೆಲಸ ,ಜನಸೇವೆ ಬೇಡ ,ಪ್ಲೆಕ್ಸ್ ಮಾತ್ರ ಫುಲ್ ಸೈಜ್ …ಕಾನೂನು ಇದೆ… ಪಾಲನೆ ಮಾತ್ರ ಇಲ್ಲ!
ಕಾರ್ಕಳದ ವಂಚನೆ ಪ್ರಕರಣ, ದೂರುದಾರನ ಮೇಲೂ ಶಂಕೆ
🚨4 ವರ್ಷಗಳಿಂದ ಪೊಲೀಸರಿಗೆ ತಪ್ಪಿಸಿಕೊಂಡಿದ್ದ 17 ಪ್ರಕರಣಗಳ ಆರೋಪಿಯ ಡ್ರಾಮಾಟಿಕ್ ಬಂಧನ!
ಆಮಾದ್ಮಿ ಪಕ್ಷದ ಏಳು ಸಂಸದರು ಬಿಜೆಪಿಯ ತೆಕ್ಕೆಗೆ ರೈಟೋ?  ರಾಂಗೋ?
ಸ್ಟೇಟ್ ಬ್ಯಾಂಕ್ ಮೀನು ಮಾರುಕಟ್ಟೆಗೆ ಭೇಟಿ ನೀಡಿದ ಡಾ. ನಾಗಲಕ್ಷ್ಮಿ ಚೌಧರಿ – ಮಹಿಳಾ ಮೀನುಗಾರರ ಸಮಸ್ಯೆ ಆಲಿಕೆ
ಖಾಸಗಿ ಆಸ್ಪತ್ರೆಯ ಜೊತೆಗಿನ ಒಪ್ಪಂದ ರದ್ದುಪಡಿಸಲು ಆಗ್ರಹಿಸಿ ಪ್ರತಿಭಟನೆ
ದೆಹಲಿಯನ್ನು ನಡುಗಿಸಿದ ಸೈಕೋಪಾತ್ ಘಟನೆಯ ಕ್ರೂರ ಸತ್ಯ…. ಆನ್‌ಲೈನ್ ಬೆಟ್ಟಿಂಗ್ ಮತ್ತು ಆಟಗಳ ಅಡಿಕ್ಟ್ – ಸಾಲ …ಮನೋವೈಕಲ್ಯ ಲಕ್ಷಣ!
ಮಾರ್ಕ್ಸ್ 90%, ಆದರೆ 19ಕ್ಕೆ ಕ್ರೂರ ಅಪರಾಧಿ!ಕನಸುಗಳಿದ್ದ ಹುಡುಗನೊಬ್ಬ ಕಟುಕನಾದ ದುರಂತ ಕಥೆ”
“ಯೋಗೇಶ್ ಗೌಡ ಪ್ರಕರಣದಲ್ಲಿ ಕಾನೂನು ಗರ್ಜನೆ!”ಕಾನೂನು ಕಾಯುವವರೇ ಬೂಟು ನೆಕ್ಕಿಕಾನೂನು ಮುರಿದಾಗ-7 ವರ್ಷಗಳ ಜೈಲು!ಕಾನೂನು ಇನ್ನೂ ಜೀವಂತ!”
ಇತಿಹಾಸ ಸೇರಿತು ಮಂಗಳೂರಿನ ಮೋತಿ ಮಹಲ್…..
ಆಪಲ್‌ಗೆ ಭಾರತದಲ್ಲಿ ದೊಡ್ಡ ಕಾನೂನು ಶಾಕ್? App Store ನಿಯಮಗಳ ಮೇಲೆ ಆಪಲ್ vs ಭಾರತ CCI ಜಟಾಪಟಿ 
ಫ್ರಿಡ್ಜ್ ರಿಪೇರಿಗೆ ಬಂದವ ಮನೆ ಲೂಟಿ ಪರಾರಿ…!ಬಿ ಅಲರ್ಟ್ ‼️
35 ವಾರಂಟ್ ಇದ್ದ ಆರೋಪಿಯು ವಿದೇಶದಿಂದ ಮರಳುತ್ತಿದ್ದಾಗ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ
ಒಂದೂವರೆ ವರ್ಷ ಫ್ರೀ ಬಸ್  ಪ್ರಯಾಣ…ಕೊನೆಯಲ್ಲಿ ದಂಡ ಮತ್ತು ಜೈಲು ಶಿಕ್ಷೆ!
ವೆಟ್-ವೆಲ್‌ಗಳ ಕಳಪೆ ನಿರ್ವಹಣೆಚರಂಡಿ-ಬಾವಿಗಳಿಗೆ ಡ್ರೈನೇಜ್ ನೀರು..
ಕರ್ನಾಟಕದಲ್ಲಿ ತಾಪಮಾನ ಅಪಾಯ ಮಟ್ಟಕ್ಕೆ!ಆಸ್ಪತ್ರೆಗಳಲ್ಲಿ ವಿಶೇಷ ಹೀಟ್ ಸ್ಟ್ರೋಕ್ ರೂಮ್‌ಗಳು-ಆರೋಗ್ಯ ಇಲಾಖೆ ತುರ್ತು ಕ್ರಮ ಜಾರಿ
ಯುದ್ಧ: ಯಾವುದೇ ಜಾಗತಿಕ ನಾಯಕರ ಮಾತುಕತೆ ಫಲಪ್ರದವಾಗದೇ?!
60 ದಿನಗಳ ಸ್ಟಾಕ್ – ಭಾರತಕ್ಕೆ ಎಲ್‌ಪಿಜಿ ಚಿಂತೆ ಇಲ್ಲ!
ಇ-ಸಿಗರೇಟ್‌ಗೆ ಭಾರಿ ಡಿಮ್ಯಾಂಡ್ – ಗೋಣಿ ಚೀಲದಲ್ಲಿಸಂಗ್ರಹಿಸಿಟ್ಟ ಆರೋಪಿ ಬಂಧನ..!
ಪುತ್ತೂರಿನ ಜಾತ್ರೆಯಲ್ಲಿ ಸುಡುಮದ್ದು ದುರಂತ-ಹಲವರಿಗೆ ಗಾಯ..
40 ವರ್ಷದ ಹಳೆಯ ಕೊಲೆಕೇಸ್‌ಗೆ ಅಂತಿಮ ಕೀ ಆಗಿ ಸಾಕ್ಷಿ ಆಗಿದ್ದು ತಿಂದು ಉಗುಳಿದ ಚೂಯಿಂಗ್ ಗಮ್ …!ಏನಿದು realstory..
ಮನೆ ಬಾಡಿಗೆ ಕೊಡುವಾಗ ನಿಗಾ ಇರಿಸಲು ಮಾಲಕರಿಗೆ ಎಚ್ಚರಿಕೆ ..!ಗಾಂಜಾ ಸೇವಿಸಿದ ಐದು ನರ್ಸಿಂಗ್ ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ….
ಇಂಧನ ಬೆಲೆ ಏರಿಕೆ ಹೊಡೆತ Air India ಹೊಸ ತೀರ್ಮಾನ ಶಾಕಿಂಗ್ …!
ಭಾರತ ಮುಸ್ಲಿಂ ದೇಶವಾಗುವುದೇ?- ನಾಳೆ ಪುಸ್ತಕ ಬಿಡುಗಡೆಯ ಕಾರ್ಯಕ್ರಮ
ಬಿಜೆಪಿಯನ್ನು ಹಿಂದಿಕ್ಕಿದ   ಜಿರಳೆ ಪಕ್ಷ..”ಕಾಕ್ರೋಚ್ ಜನತಾ ಪಾರ್ಟಿ”
ಮೂಡಬಿದ್ರೆ ಪೊಲೀಸ್ ಅಧಿಕಾರಿಯ ಮಾನ ಹರಾಜಿಗೆ ನಿಂತವರು ಯಾರು?
ವಿಷ ಸೇವನೆ ಸ್ವಯಂ ಆಗಿತ್ತೇ ಅಥವಾ ಪ್ರಚೋದನೆ ಕಾರಣವೇ ….?!
ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ಎರಡು ಬಣಗಳ ರಣರಂಗ!ಮಾತಿನ ಚಕಮಕಿ ಹೊಡೆದಾಟಕ್ಕೆ ತಿರುಗಿದ ಕ್ಷಣ…