📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಏನಿದು ‘ಲಾಸ್ಟ್ ಲೈವ್’ ಮತ್ತು ಅಂತಿಮ ಸಂಸ್ಕಾರದ ವಿಡಿಯೋ ಅಸಲಿ ಸಮಾಚಾರ? ವೈರಲ್ ಆದ ಬಿಹಾರದ ಭರತ್ ತಿವಾರಿ ಎನ್‌ಕೌಂಟರ್ ಕೇಸ್…

    ಬಿಹಾರದ ಬೋಜ್‌ಪುರ ಜಿಲ್ಲೆಯ ಬಿಲೌಟಿ ಹಳ್ಳಿಯಲ್ಲಿ ಜೂನ್ 17 ರಂದು ನಡೆದ ಪೊಲೀಸ್ ಎನ್‌ಕೌಂಟರ್ ಇಡೀ ರಾಜ್ಯದಲ್ಲೇ ಈಗ ದೊಡ್ಡ ಗದ್ದಲ ಎಬ್ಬಿಸಿದೆ. 28 ವರ್ಷದ ಸೋಶಿಯಲ್ ವರ್ಕರ್ ಭರತ್ ಭೂಷಣ್ ತಿವಾರಿ ಎಂಬಾತ ಪೊಲೀಸ್ ಗುಂಡಿಗೆ ಬಲಿಯಾಗಿದ್ದು, ಆತ ಸಾಯುವ ಮುನ್ನ ಫೇಸ್‌ಬುಕ್‌ನಲ್ಲಿ ಮಾಡಿದ ಕೊನೆಯ ‘ಲೈವ್’ ವಿಡಿಯೋ ಈಗ ಸಖತ್ ವೈರಲ್ ಆಗ್ತಿದೆ.

    ಅಸಲಿಗೆ ಅಲ್ಲಿ ನಡೆದಿದ್ದೇನು?

    ಪೊಲೀಸರ ವಾದ: ಜೂನ್ 16 ರಂದು ಭರತ್ ತಿವಾರಿ ಕೈಯಲ್ಲಿ ಪಿಸ್ತೂಲ್ ಹಿಡಿದು ಪೊಲೀಸರಿಗೆ ಧಮ್ಕಿ ಹಾಕಿದ್ದ ವಿಡಿಯೋ ಒಂದಿಷ್ಟು ಹರಿದಾಡಿತ್ತು. ಮರುದಿನ ಬೆಳಗ್ಗೆ 5 ಗಂಟೆಗೆ ಪೊಲೀಸರು ಆತನ ಮನೆಗೆ ರೈಡ್ ಮಾಡಿದಾಗ, ಭರತ್ ಪೊಲೀಸರ ಮೇಲೆಯೇ 8-10 ರೌಂಡ್ ಫೈರಿಂಗ್ ಮಾಡಿದ್ದನಂತೆ. ಸೆಲ್ಫ್ ಡಿಫೆನ್ಸ್‌ಗಾಗಿ ಪೊಲೀಸರು ವಾಪಸ್ ಶೂಟ್ ಮಾಡಿದಾಗ ಭರತ್‌ಗೆ ಗುಂಡು ತಗುಲಿ ಆಸ್ಪತ್ರೆಯಲ್ಲಿ ಪ್ರಾಣ ಬಿಟ್ಟಿದ್ದಾನೆ.

    ವೈರಲ್ ಲೈವ್ ವಿಡಿಯೋ ತಂದ ಟ್ವಿಸ್ಟ್!

    ಕುಟುಂಬದ ಆರೋಪ: ಎನ್‌ಕೌಂಟರ್ ಆಗುವ ಕೆಲವು ಗಂಟೆಗಳ ಮುನ್ನ ಭರತ್ ಫೇಸ್‌ಬುಕ್ ಲೈವ್ ಬಂದಿದ್ದ. ಆ ವಿಡಿಯೋದಲ್ಲಿ ಆತ ಬಯಲು ಮೈದಾನದಲ್ಲಿ ನಿಂತು, ತನ್ನಲ್ಲಿದ್ದ ಪಿಸ್ತೂಲನ್ನು ಪೊಲೀಸರ ಕಡೆಗೆ ಎಸೆದು ಶರಣಾಗುವ ತರಹ ಆಕ್ಟ್ ಮಾಡಿದ್ದಾನೆ. “ನಮ್ಮ ಹುಡುಗ ಗನ್ ಎಸೆದು ಶರಣಾದರೂ ಪೊಲೀಸರು ಆತನನ್ನು ಬೇಕಂತಲೇ ಶೂಟ್ ಮಾಡಿ ಕೊಂದಿದ್ದಾರೆ” ಅನ್ನೋದು ಮನೆಯವರ ಕಣ್ಣೀರಿನ ಆರೋಪ.

    ಫೇಕ್ ವಿಡಿಯೋಗಳ ಬಗ್ಗೆ ಎಚ್ಚರ!

    ಫ್ಯಾಕ್ಟ್-ಚೆಕ್: ಈ ಎನ್‌ಕೌಂಟರ್ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಜನಸಾಗರ ನೆರೆದಿರುವ ಮತ್ತು ಶವಯಾತ್ರೆ ನಡೆಸುತ್ತಿರುವ ಕೆಲವು ವಿಡಿಯೋಗಳು ಸಿಕ್ಕಾಪಟ್ಟೆ ಶೇರ್ ಆಗ್ತಿವೆ. ಆದರೆ ‘Factly’ ಟೀಮ್ ತನಿಖೆ ನಡೆಸಿದಾಗ, ಅವು ಬಿಹಾರದ್ದಲ್ಲ, ಬದಲಿಗೆ ರಾಜಸ್ಥಾನ ಮತ್ತು ಜಾರ್ಖಂಡ್‌ನ ಹಳೇ ವಿಡಿಯೋಗಳು ಅಂತ ಗೊತ್ತಾಗಿದೆ. ಈ ಕೇಸಿಗೂ ಅದಕ್ಕೂ ಸಂಬಂಧವಿಲ್ಲ!

    ಖಾಕಿ ಪಡೆಗೆ ಶಾಕ್, ಸರ್ಕಾರದ ತನಿಖೆ

    ಕಠಿಣ ಕ್ರಮ: ಮ್ಯಾಟರ್ ಗಂಭೀರವಾಗ್ತಿದ್ದಂತೆ ಬಿಹಾರ ಸಿಎಂ ಸಮ್ರಾಟ್ ಚೌಧರಿ ಅವರು ಹೈಕೋರ್ಟ್ ನಿವೃತ್ತ ಜಡ್ಜ್ ಕೈಯಲ್ಲಿ ಜುಡಿಷಿಯಲ್ ತನಿಖೆಗೆ ಆರ್ಡರ್ ಮಾಡಿದ್ದಾರೆ. ಅಷ್ಟೇ ಅಲ್ಲ, ವಿಡಿಯೋ ಸಾಕ್ಷಿ ಆಧಾರದ ಮೇಲೆ ಶಾಹಪುರ ಠಾಣೆಯ ಇನ್ಸ್‌ಪೆಕ್ಟರ್ ಸೇರಿದಂತೆ ೪-೫ ಜನ ಪೊಲೀಸ್ ಸಿಬ್ಬಂದಿಯನ್ನು ಸಸ್ಪೆಂಡ್ ಮಾಡಲಾಗಿದೆ. ಇನ್ನೊಂದೆಡೆ, ಸಿಬಿಐ ತನಿಖೆ ಬೇಕು ಅಂತ ಸುಪ್ರೀಂ ಕೋರ್ಟ್‌ಗೆ ಅರ್ಜಿ ಹೋಗಿದೆಯಾದರೂ, ಕೋರ್ಟ್ ತಕ್ಷಣದ ವಿಚಾರಣೆಗೆ ನೋ ಎಂದಿದೆ.

    ಯಾರು ಈ ಭರತ್ ತಿವಾರಿ?

    ಹಿನ್ನೆಲೆ: ಊರಿನವರ ಪ್ರಕಾರ ಭರತ್ ಯಾವುದೇ ರೌಡಿ ಶೀಟರ್ ಅಲ್ವಂತೆ. ಹಳ್ಳಿಯಲ್ಲಿ ಪ್ರವಾಹ ಬಂದಾಗ ಜನರಿಗೆ ಹೆಲ್ಪ್ ಮಾಡುವುದು, ಭ್ರಷ್ಟಾಚಾರದ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಧ್ವನಿ ಎತ್ತುವ ಕೆಲಸ ಮಾಡ್ತಿದ್ದ ಜನ್ರ ಹುಡುಗ. ವಿರೋಧ ಪಕ್ಷದವರಂತೂ ಇದು ‘ಫೇಕ್ ಎನ್‌ಕೌಂಟರ್’ ಅಂತ ಗಲಾಟೆ ಮಾಡ್ತಿದ್ದು, ಆತನ ಕುಟುಂಬಕ್ಕೆ 1ಕೋಟಿ ರೂ. ಪರಿಹಾರ ಮತ್ತು ಸರ್ಕಾರಿ ಕೆಲಸ ಕೊಡಬೇಕು ಅಂತ ಪಟ್ಟು ಹಿಡಿದಿದ್ದಾರೆ.

    ಕೊನೆಗೂ confusion..!

    ಪೊಲೀಸರು ಹೇಳೋದು ‘ಆತ್ಮರಕ್ಷಣೆ’, ಮನೆಯವರು ಹೇಳೋದು ‘ಖಾಕಿ ದೌರ್ಜನ್ಯ’. ಈ ಎರಡರ ನಡುವೆ ಅಸಲಿ ಸತ್ಯ ಏನೆಂಬುದು ಕೋರ್ಟ್ ತನಿಖೆಯಿಂದಲೇ ಹೊರಬರಬೇಕಿದೆ. ಅಲ್ಲಿಯವರೆಗೆ ಸೋಶಿಯಲ್ ಮೀಡಿಯಾದಲ್ಲಿ ಬರುವ ಕಥೆಗಳನ್ನು ನಂಬಿ ಫಾರ್ವರ್ಡ್ ಮಾಡುವ ಮುನ್ನ ಪಬ್ಲಿಕ್ ಸ್ವಲ್ಪ ಎಚ್ಚರಿಕೆಯಿಂದ ಇರಬೇಕಪ್ಪಾ!

    ##BharatTiwariEncounter #BiharNews #SocialMediaViral #JudicialInquiry #FactCheckBihar #PoliceEncounter2026

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಮಂಗಳೂರು ಶಾಲಾ ದಾಖಲಾತಿ ಅಂದೋಲನ-ಎಲ್ಲ ಮಕ್ಕಳಿಗೂ ಶಾಲೆಯ ಹಕ್ಕು …
    ಆನ್‌ಲೈನ್ ಕೇರಳ ಲಾಟರಿ ಹೆಸರಿನಲ್ಲಿ 1.85 ಲಕ್ಷ ವಂಚನೆ – ಸೈಬರ್ ವಂಚಕರ ಜಾಲ ಪತ್ತೆ
    ಜನಗಣತಿ 2026–27 – Self Enumeration ಮುಗಿದು ಈಗ ಮನೆ ಮನೆ ಭೇಟಿ ಹಂತ ಆರಂಭ!ನಮ್ಮ ಮಾಹಿತಿ = ನಮ್ಮ ದೇಶದ ಬೆಳವಣಿಗೆ…
    ಶಸ್ತ್ರಚಿಕಿತ್ಸೆಯ ಪಿತಾಮಹ ಮಹಾನ್ ವೈದ್ಯ….ಸುಶ್ರುತನನ್ನ ಜಗತ್ತು ಗೌರವಿಸಿದ ಕ್ಷಣ…ಆಧುನಿಕ ವೈದ್ಯಕೀಯದ ಬೇರುಗಳು ಭಾರತದಲ್ಲೇ…
    ಸಂಸತ್ ಕಾರಿಡಾರ್‌ನಲ್ಲಿ ವಿವಾದಿತ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ರೇಣುಕಾ ಚೌಧರಿ ತರಾಟೆ
    ಸುಮಂತ್ ನಿಗೂಢ ಸಾವು ಪ್ರಕರಣ: ತನಿಖೆಗೆ ಹೊಸ ತಿರುವು—ಕುಟುಂಬಸ್ಥರ ಬ್ರೈನ್ ಮ್ಯಾಪಿಂಗ್, ಮಂಪರು ಪರೀಕ್ಷೆ!
    ಉಡುಪಿಯ ಆರು ತಹಶೀಲ್ದಾರ್ ಕಚೇರಿಗಳಿಗೆ ಲೋಕಾಯುಕ್ತ ಪೊಲೀಸರ ದಾಳಿ… ದಾಳಿಯ ಬಿಸಿ ತಟ್ಟುತ್ತದಾ ಅಧಿಕಾರಿಗಳಿಗೆ?
    ಲಕ್ಷ ಫೀಸ್ ಕೊಟ್ಟರೂ ಸಿಗದ ಶಿಕ್ಷಣ ಇಲ್ಲಿ ಉಚಿತ! 15 ಮಕ್ಕಳ ಪುಟ್ಟ ಶಾಲೆಯ ದೊಡ್ಡ ಸಾಧನೆ
    ಸುಳ್ಳು ಸ್ಟೇಟ್ಮೆಂಟ್ ನೀಡಿದ ಎಚ್ ಪಿ ಸಿ ಎಲ್
    ಅಣ್ಣಾ ಹಜಾರೆಗೆ ಲೈವ್, ಸೋನಂ ವಾಂಗ್ಚುಕ್‌ಗೆ ಮೌನವೇಕೆ?”  ದ್ವಂದ್ವ ನೀತಿಯ ಬಗ್ಗೆ ಪ್ರಶ್ನೆ
    ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ – 10 ರೋಗಿಗಳ ದುರ್ಮರಣ-11 ಸಿಬ್ಬಂದಿಗೆ ಗಾಯ
    ಜೆಡಿಎಸ್  ಜನರಲ್ ಸೆಕ್ರೆಟರಿಯಾಗಿ ಯೋಗೇಶ್ ಶೆಟ್ಟಿ ಜಪ್ಪು ಆಯ್ಕೆಯ ಲೆಕ್ಕಾಚಾರವೇನು?
    ಸಂಸತ್ತಿನಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಚರ್ಚೆ-ಕಾನೂನು ಬರೋ ಮುನ್ನವೇ ಮತ್ತೊಂದು ಲೀಕ್!
    ಸ್ಟರ್ಲಿಂಗ್ ವಸತಿ ಶಾಲೆಯ ಶಿಸ್ತಿನ ಹೆಸರಲ್ಲಿ 12 ವರ್ಷದ ಮುಗ್ಧನ ಜೀವ ಕಸಿದ ಕ್ರೌರ್ಯ!ಅನುಮಾನಾಸ್ಪದ ಸಾವಿನ ಸುತ್ತ ಹರಡಿದ ಆಘಾತಕಾರಿ ಸತ್ಯ…ಇಲ್ಲಿದೆ
    ಬಂಟರ ಸಮುದಾಯದಲ್ಲೊಂದು ಹೀನ ಸಂಪ್ರದಾಯ-ವರದಕ್ಷಿಣೆಗಾಗಿ ಹಿಂಸೆ, ಹಲ್ಲೆ.. ಬೆದರಿಕೆ!
    17 ವರ್ಷದ ಯುವಕ ಸಂಸತ್ತಿನ ಕದ ತಟ್ಟಬಲ್ಲ ಎಂದಾದರೆ, ನಿಮ್ಮ ಧ್ವನಿಗೆ ಎಷ್ಟು ಶಕ್ತಿಯಿದೆ ಯೋಚಿಸಿ!..ವ್ಯವಸ್ಥೆಯ ಲೋಪದ ವಿರುದ್ಧ ಧ್ವನಿ ಎತ್ತದಿದ್ದರೆ ಬದಲಾವಣೆ ಸಾಧ್ಯವಿಲ್ಲ.
    ಸಾಲು ಸಾಲು ಹೀನ ಕೃತ್ಯದ ಆರೋಪಿ….ಸೈನೈಡ್ ಮೋಹನ್ ಖುಲಾಸೆ! ಸಾಕ್ಷ್ಯಗಳ ಕೊಂಡಿ ಜೋಡಿಸಲು ಪ್ರಾಸಿಕ್ಯೂಷನ್ ವಿಫಲ
    ಹುಬ್ಬಳ್ಳಿ ಲವ್ ಜಿಹಾದ್..!?ಮೂರು ವರ್ಷದ ಸಂಬಂಧ, friendship, ಫ್ಯಾಮಿಲಿ closeness-ಕ್ಷಣದಲ್ಲೇ ಬಾರಿ ಸಂಘರ್ಷ..!
    ಮೈ ಜುಮ್ಮೆನ್ನಿಸುವ ಬೈಕ್–ಲಾರಿ ಡಿಕ್ಕಿ ಅಪಘಾತ… ಕ್ಷಣಾರ್ಧದಲ್ಲೇ ಜೀವ ಹೋದ ಹೃದಯವಿದ್ರಾವಕ ರಸ್ತೆ ದುರಂತ
    ಕೊನೆಗೂ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಿತೀಶ್ ಕುಮಾರ್
    ಜೈನ ಮುನಿ… ಇರಾನ್‌ನ ಇಸ್ಲಾಮಿಕ್ ಸರ್ವೋಚ್ಚ ನಾಯಕನ ಅಂತ್ಯಕ್ರಿಯೆಯಲ್ಲಿ?
    35 ವಾರಂಟ್ ಇದ್ದ ಆರೋಪಿಯು ವಿದೇಶದಿಂದ ಮರಳುತ್ತಿದ್ದಾಗ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ
    ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಪುಟ್ಟ ಜೀವವೊಂದು ಬಲಿ.. ಕೆಲವು ಮಕ್ಕಳಿಗೆ ಗಾಯ..
    ಅಯೋಧ್ಯೆಯಲ್ಲಿ ನ್ಯಾಯಕ್ಕಾಗಿ ವಕೀಲರ ಮೆರವಣಿಗೆ..ಭುಗಿಲೆದ್ದ ಪ್ರತಿಭಟನೆ..ಕಠಿಣ ಕ್ರಮಕ್ಕೆ ಆಗ್ರಹ
    ವಿಶ್ವಸಂಸ್ಥೆಗೆ ಜೀವ ಬಂತು ನೋಡಿ…
    ಕ್ರಿಮಿನಲ್ಸ್ ಸಪೋರ್ಟಿಗೆ ನಿಂತವರು ಯಾರ್ಯಾರು ಅನ್ನುವುದು ಈಗ ಗೊತ್ತಾಗುತ್ತಿದೆ ನೋಡಿ….!
    ಗುಜರಾತ್ ಪೊಲೀಸರಲ್ಲಿ ಆಗದ ಕೆಲಸ, ಒಬ್ಬ ಮಂತ್ರವಾದಿಯಿಂದ ಆಯ್ತು
    ಮಂಗಳೂರು ಇನ್ಸ್ಟಾಮಾರ್ಟ ಕುಂಟಿಕಾನದಲ್ಲಿ ಲಿಫ್ಟ್ ದುರಂತ: ಡೆಲಿವರಿ ಸಿಬ್ಬಂದಿ ದುರ್ಮರಣ
    79% ಹಾಲು ಅಶುದ್ಧ! ಹಾಲಿನ ಮಾಫಿಯಾಗೆ ಸಿಂಹಸ್ವಪ್ನವಾದ ಐಎಎಸ್ ತುಕಾರಾಂ ಮುಂಧೆ…350 ಬಂಧನ, 360 ದಾಳಿ!
    ಅಮಾವಾಸ್ಯೆ ಬೈಲ್ ಪೊಲೀಸ್ ಠಾಣೆಯಲ್ಲಿ ಜೀವ ಬೆದರಿಕೆ ಹಾಗೂ ನಿಂದನೆಯ ಪ್ರಕರಣ ದಾಖಲು