📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಶಾಮ್ ಇನ್ಸ್ಟಿಟ್ಯೂಶನ್ ಪ್ರಸ್ತುತ ಪಡಿಸಿದ “ಕಜ್ಜ” ತುಳು ಸಿನಿಮಾದ ಆಡಿಯೋ, ಟೇಲರ್ ಬಿಡುಗಡೆ

ತುಳು ಸಿನಿಮಾಗಳ ಮೂಲಕ ತುಳು ಭಾಷೆ ಜಾಗತಿಕ ಮಟ್ಟದಲ್ಲಿ ಮನ್ನಣೆ ಪಡೆದಿದೆ.

ಡಾ ಎಂ ಮೋಹನ್ ಆಳ್ವ

ಮಂಗಳೂರು: ಪಂಚ ದ್ರಾವಿಡ ಭಾಷೆಗಳಲ್ಲಿ ತುಳು ಭಾಷೆ ಪ್ರಮುಖ ಭಾಷೆಯಾಗಿದೆ. ನಾಟಕ, ಸಿನಿಮಾಗಳ ಮೂಲಕ ತುಳು ಭಾಷೆ ಇಂದು ಜಾಗತಿಕ ಮಟ್ಟದಲ್ಲಿ ಮನ್ನಣೆ ಪಡೆದಿದೆ. ಎಲ್ಲರೂ ಇಷ್ಟ ಪಡುವ ಭಾಷೆ ತುಳು. ಸುಮುಖ ಪ್ರೊಡಕ್ಷನ್ ಲಾಂಛನದಲ್ಲಿ, ಈ ಹಿಂದೆ ತೆರೆಕಂಡ “ತುಡರ್” ಯಶಸ್ವಿ ಪ್ರದರ್ಶನ ದಾಖಲಿಸಿದೆ. ಅದೇ ತಂಡದಿಂದ “ಕಜ್ಜ” ತುಳು ಸಿನಿಮಾ ಪ್ರೇಕ್ಷಕರ ಮನಗೆಲ್ಲಲಿ. ತುಳುವಿನಲ್ಲಿ 150 ಕ್ಕೂ ಮಿಕ್ಕಿದ ಸಿನಿಮಾಗಳು ತೆರೆಗೆ ಬಂದಿದೆ. ಎಲ್ಲವನ್ನು ಮೀರಿ ತುಳು ಚಿತ್ರರಂಗ ಬೆಳೆಯುತ್ತಿದೆ ಎಂದು ಮೂಡಬಿದ್ರೆ ಆಳ್ವಾಸ್ ಸಂಸ್ಥೆಯ ಅಧ್ಯಕ್ಷ ಡಾ ಎಂ ಮೋಹನ್ ಆಳ್ವ ನುಡಿದರು.
ಮಂಗಳೂರು ಪುರಭವನದಲ್ಲಿ ಜರಗಿದ ಶಾಮ್ ಇನ್ಸ್ಟಿಟ್ಯೂಶನ್ ಪ್ರಸ್ತುತ ಪಡಿಸುವ “ಕಜ್ಜ” ತುಳು ಸಿನಿಮಾದ ಆಡಿಯೋ ಮತ್ತು ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಕಾರ್ಯಕ್ರಮವನ್ನು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಮೊಕ್ತೇಸರರಾದ ಲಕ್ಷ್ಮೀನಾರಾಯಣ ಅಸ್ರಣ್ಣ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು.
ತುಳು ಸಿನಿಮಾದ ಮೂಲಕ ಸಂಸ್ಕಾರ, ಸಂಸ್ಕೃತಿ, ಆಚಾರ ವಿಚಾರ ಜಗತ್ತಿಗೆ ಪಸರಿಸಲಿ. ಸೀಮಿತ ಮಾರುಕಟ್ಟೆಯ ತುಳು ಚಿತ್ರರಂಗ ಇಂದು ವಿಶಾಲವಾಗಿ ಬೆಳೆಯುತ್ತಿರುವುದು ಸಂತೋಷದ ವಿಚಾರ. “ಕಜ್ಜ” ಸಿನಿಮಾದ ಮೂಲಕ ಪ್ರಮುಖ ಪ್ರೊಡಕ್ಷನ್ ತಂಡ ತುಳು ಭಾಷೆಯಲ್ಲಿ ಸಿನಿಮಾ ಮಾಡುತ್ತಿದೆ. ದೈವ ದೇವರ ಮೇಲಿನ ನಂಬಿಕೆ, ಶ್ರದ್ದೆ ಭಕ್ತಿಯಿಂದ ಕೆಲಸ ಮಾಡಿದಾಗ ಯಶಸ್ಸು ಲಭಿಸುತ್ತದೆ. ತುಳುಭಾಷೆ ಇಂದು ಜಗತ್ತಿನಾದ್ಯಂತ ಪಸರಿಸಿದೆ ಎಂದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ ನಾಟಕ, ಸಿನಿಮಾ ನಿರ್ದೇಶಕರಾದ ವಿಜಯಕುಮಾರ್ ಕೊಡಿಯಾಲ್ ಬೈಲ್ ಮಾತನಾಡಿ “ಕಜ್ಜ’ ತುಳು ಸಿನಿಮಾ ತುಳುವಿನಲ್ಲಿ ಮೈಲುಗಲ್ಲಾಗಲಿ ಎಂದರು.
ಮುಖ್ಯ ಅತಿಥಿ ಸರ್ವೋತ್ತಮ ಶೆಟ್ಟಿ ಅಬುದಾಬಿ ಮಾತನಾಡಿ “ಕಜ್ಜ” ಒಳ್ಳೆಯ ಸಿನಿಮಾ ಆಗಿ ಮೂಡಿಬಂದು ಪ್ರೇಕ್ಷಕರ ಮನಸ್ಸಿನಲ್ಲಿ ಉಳಿಯಲಿ ಎಂದರು.
ಆಡಿಯೋ, ಟ್ರೇಲರ್ ಬಿಡುಗಡೆಗೊಳಿಸಿದ ನಟ ವಸಿಷ್ಠ ಸಿಂಹ ಮಾತನಾಡಿ ಇಲ್ಲಿಯ ಭಾಷೆ ಇಲ್ಲಿಯ ಜನರ ಒಡನಾಟದಿಂದ ನಾನು ತುಳು ಭಾಷೆ ಕಲಿಯುವಂತಾಯಿತು.‌ “ಕಜ್ಜ” ಸಿನಿಮಾದ ಚಿತ್ರೀಕರಣದ ವೇಳೆ ಒಂದು ಕುಟುಂಬದ ಸದಸ್ಯರಂತೆ ನಾವು ಇದ್ದೆವು. ಸಿನಿಮಾ ಯಶಸ್ವಿಯಾಗುತ್ತದೆ ಎಂಬ ವಿಶ್ವಾಸ ತನಗಿದೆ ಎಂದರು.
ಕರ್ನಾಟಕ ವಿಧಾನಾ ಸಭಾಧ್ಯಕ್ಷ ಯು.ಟಿ ಖಾದರ್ ಮಾತನಾಡಿ ಆಧುನಿಕ ತಂತ್ರಜ್ಞಾನದಲ್ಲಿ ತುಳು ಭಾಷೆಯನ್ನು ಮರೆಯುತ್ತಾರೆ ಎಂಬ ಭಾವನೆ ನನ್ನಲ್ಲಿತ್ತು. ಆದರೆ ಇಂದು ತುಳು ಸಿನಿಮಾಗಳ ಮೂಲಕ ಭಾಷೆ ಎತ್ತರಕ್ಕೆ ಬೆಳೆದಿದೆ ಎಂದರು.
ತುಳು ಭಾಷೆಯ ಅಭಿಮಾದಿಂದ ತಯಾರಿಸಿದ “ಕಜ್ಜ” ಯಶಸ್ವಿಯಾಗಲಿ ಎಂದು ಪ್ರದೀಪ್ ಕಲ್ಕೂರ ನುಡಿದರು‌.
ಶಾಸಕ ವೇದವ್ಯಾಸ ಕಾಮತ್ ಮಾತನಾಡಿ ಅನೇಕ ತುಳು ಭಾಷೆಯ ಸಿನಿಮಾಗಳು ತೆರೆಗೆ ಬರುತ್ತಿರುವುದನ್ನು ನಾವು ನೋಡುತ್ತೇವೆ. ಎಲ್ಲರೂ ತುಳು ಭಾಷೆಯ ಸಿನಿಮಾಗಳನ್ನು ನೋಡಿ ಪ್ರೋತ್ಸಾಹಿಸ ಬೇಕೆಂದರು.
ಸಮಾರಂಭದಲ್ಲಿ ಹರಿಕೃಷ್ಣ ಪುನರೂರು, ಅರವಿಂದ ಬೋಳಾರ್, ಎಂಪಿ ಶೈಣೈ, ವಿಶ್ವನಾಥ ಶೆಟ್ಟಿ ದುಬಾಯಿ, ಸತೀಶ್ ಬಂದಲೆ, ಉದಯ ಪೂಜಾರಿ ಬಲ್ಲಾಲ್ ಭಾಗ್, ರೈ ಮಸಾಲೆಯ ಮಾಲಕಿ ದಿವ್ಯಾ ರೈ, ನಿರ್ಮಾಪಕ ವಿಶಾಂತ್ ಮೆನೆಜೆಸ್, ಸಹ ನಿರ್ಮಾಪಕ ಪ್ರವೀಣ್ ಸುವರ್ಣ, ನಟ ಸಿದ್ದಾಥ್೯ ಶೆಟ್ಟಿ, ಸಂಗೀತ ನಿರ್ದೇಶಕ ಲಿಖಿತ್ ಪ್ರಸಾದ್ ಶೆಟ್ಟಿ, ಲಂಚುಲಾಲ್, ಹರೀಶ್ ಶೆಟ್ಟಿ, ಆರತಿ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಪ್ರಕಾಶ್ ಮಹಾದೇವನ್ ಪ್ರಾರ್ಥಿಸಿದರು. ಚಿತ್ರದ ಕಥೆ ಹಾಗೂ ಸಾಹಿತ್ಯ ಬರೆದ ಮೋಹನ್ ರಾಜ್ ಸ್ವಾಗತಿಸಿದರು. ಅನುರಾಗ್ ಕಾರ್ಯಕ್ರಮ ನಿರ್ವಹಿಸಿದರು.
“ಕಜ್ಜ” ಸಿನಿಮಾ ಮೇ 15 ರಂದು ತೆರೆ ಕಾಣಲಿದೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ನಾಳೆ ಮಂಗಳೂರಲ್ಲಿ ಇಡೀ ದಿನ ಕರೆಂಟಿಲ್ಲ Power Cut.. ಎಲ್ಲೆಲ್ಲಿ?
60 ದಿನಗಳ ಸ್ಟಾಕ್ – ಭಾರತಕ್ಕೆ ಎಲ್‌ಪಿಜಿ ಚಿಂತೆ ಇಲ್ಲ!
ಕಳುವಾದ ವಾಹನ ಸಮೇತ ಕಳ್ಳರ ಬಂಧನ…!
ಯುದ್ಧ: ಯಾವುದೇ ಜಾಗತಿಕ ನಾಯಕರ ಮಾತುಕತೆ ಫಲಪ್ರದವಾಗದೇ?!
50 ಸಾವಿರ ಸಾಲಕ್ಕೆ ಸವಣೂರು ಪೇಟೆಯಲ್ಲಿ ರಕ್ತಸಿಕ್ತ ಘರ್ಷಣೆ ..
ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ
ಕನಸು ಹೊತ್ತ ಯುವತಿಯರ ಮೇಲೆ ಕಾಮುಕ ಸಮಾಜದ ಕಣ್ಣು! ಮೌನವಾಗಿರುವ ಸಾವಿರಾರು ಕಥೆಗಳಲ್ಲೊಂದು ಬೆಂಗಳೂರು ಘಟನೆ!
“ಬರ್ಕಾಸ್ತು ಘಟಕಕ್ಕೆ ‘ಬೋಗಸ್ ನಾಯಕತ್ವ’ – ಕರವೇ ಮಹಿಳಾ ಘಟಕದಲ್ಲಿ ಭಿನ್ನಮತ ಸ್ಫೋಟ!”
AAP ಸದ್ದು ಮಂಗಳೂರಲ್ಲೂ! ಜನರ ಸಮಸ್ಯೆಗೆ ನೇರ ಹೋರಾಟ
ನೂರರ ಸಂಭ್ರಮದಲ್ಲಿ “ಜೈ” ತುಳು ಸಿನಿಮಾ
ಭರ್ಜರಿ ಬಿಜೆಪಿ ವಿಜಯೋತ್ಸವ ಬೆಂಗಳೂರಲ್ಲಿ ..!ಪ್ರಧಾನಿ ಮೋದಿ ಬರ್ತಿದ್ದಾರೆ.
ಭಾರತ ಬಗ್ಗೆ ಟ್ರಂಪ್ ಡಬಲ್ ಸ್ಟ್ಯಾಂಡ್…!ವಿವಾದ ಸೃಷ್ಟಿಸಿ, ಬಳಿಕ ಸಮಾಧಾನದ ಮಾತು
ಶಾಸಕ ಹ್ಯಾರಿಸ್ ಮೇಲೆ ಪ್ರಕರಣ ದಾಖಲು
ವಿಟ್ಲ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಚೇರಿಯಲ್ಲಿ ಗಲಾಟೆ:
ಬಾವಿ ಮುಖ್ಯಮಂತ್ರಿ ಆಪ್ತನ ಭೀಕರ ಹತ್ಯೆ ಹಿಂದೆ ಯಾರು?
ಮೂಡಬಿದ್ರೆ: ಅಕ್ರಮ ಜಾನುವಾರು ಸಾಗಾಟ -ಆರೋಪಿಗಳ ಬಂಧನ, ವಾಹನ ಹಾಗೂ ಕರು ವಶಕ್ಕೆ.
ಮಂಗಳೂರು ಗ್ರಾಮಾಂತರ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರ
ಹೆಣ್ಣು ಎಂಬ ಕನಿಕರ, ಸಿಗದ ಹಾಗೆ ಮಾಡಿದ ಮಾಯಾಂಗನೇ…
ಹೆಸರು ಬದಲಾವಣೆ ಪಶ್ಚಿಮ ಬಂಗಾಳ ಪೆಂಡಿಂಗ್, ಕೇರಳ ಪ್ರಗತಿಯಲ್ಲಿ
ಸಾರ್ವಜನಿಕರಲ್ಲಿ ವಿನಂತಿ …!
ಮಂಗಳೂರು ಶಾಲಾ ದಾಖಲಾತಿ ಅಂದೋಲನ-ಎಲ್ಲ ಮಕ್ಕಳಿಗೂ ಶಾಲೆಯ ಹಕ್ಕು …
ಜಾಗತಿಕ ಸಂಘರ್ಷದ ಮಧ್ಯೆ ಭಾರತ–ಯುಎಇ ಬಿಗ್ ಡೀಲ್! ತಂತ್ರಜ್ಞಾನ, ಇಂಧನ ಮತ್ತು ಭದ್ರತೆಯಲ್ಲಿ ಐತಿಹಾಸಿಕ ಒಗ್ಗಟ್ಟು.
ಎಸ್ ಪಿ ಅರುಣ್ ಕುಮಾರ್ ಗೆ ಮುಖ್ಯಮಂತ್ರಿ ಪದಕ
ಸ್ಪೀಕರ್ ಯುಟಿ ಖಾದರ್‌ಗೆ ಮುತ್ತಿಗೆ: 11 ಜನರ ವಿರುದ್ಧ FIR
ತಪ್ಪೊಪ್ಪಿಕೊಂಡ ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಆರೋಪಿ ಶಾರೀಕ್…!ಶಿಕ್ಷೆ ಏನು?
ಸಿದ್ದು vs ಕೃಷ್ಣ -ಸಿದ್ಧು ವಿರುದ್ಧ ನೇರ ಸವಾಲು: ‘ಬಿ’ ರಿಪೋರ್ಟ್ ಪ್ರಶ್ನಿಸಿ ಸ್ನೇಹಮಯಿ ಕೃಷ್ಣನ ನಡೆ ಭ್ರಷ್ಟ ವ್ಯವಸ್ಥೆಗೆ ಬಿಗಿ ಹೊಡೆತ!”
ಬರ್ಗಿ ಅಣೆಕಟ್ಟಿನಲ್ಲಿ ಭೀಕರ ದುರಂತ-ಕರುಳು ಹಿಂಡುವ ದೃಶ್ಯ ಅಮ್ಮ-ಮಗು ಅಪ್ಪಿಕೊಂಡೇ ಜಲಸಮಾದಿ ಸಂತೋಷದ ಪ್ರವಾಸದಿಂದ ಶೋಕದ ಸಾಗರಕ್ಕೆ
ಮದರಸಾದಲ್ಲಿ ದೌರ್ಜನ್ಯ ಮತ್ತು ಬಲವಂತದ ಕೂಲಿ ಆರೋಪ-24 ಮಕ್ಕಳ ರಕ್ಷಣೆ
 “ಮೀನುಗಾರರ ಡೀಸೆಲ್ & ಸಿಲಿಂಡರ್ ಸಮಸ್ಯೆಗೆ ಸರ್ಕಾರದ ತುರ್ತು ಹಸ್ತಕ್ಷೇಪ -ಇಂಧನ ಭರವಸೆ: ಮಂಗಳೂರು ಬಂದರಿನಲ್ಲಿ ತುರ್ತು ಕ್ರಮ”-
ಪಹಲ್ಗಾಮ್ ದಾಳಿಗೆ ವರ್ಷ : ಮೋದಿ ಶ್ರದ್ಧಾಂಜಲಿ, ಉಗ್ರರಿಗೆ ಎಚ್ಚರಿಕೆ