📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಶಾಮ್ ಇನ್ಸ್ಟಿಟ್ಯೂಶನ್ ಪ್ರಸ್ತುತ ಪಡಿಸಿದ “ಕಜ್ಜ” ತುಳು ಸಿನಿಮಾದ ಆಡಿಯೋ, ಟೇಲರ್ ಬಿಡುಗಡೆ

ತುಳು ಸಿನಿಮಾಗಳ ಮೂಲಕ ತುಳು ಭಾಷೆ ಜಾಗತಿಕ ಮಟ್ಟದಲ್ಲಿ ಮನ್ನಣೆ ಪಡೆದಿದೆ.

ಡಾ ಎಂ ಮೋಹನ್ ಆಳ್ವ

ಮಂಗಳೂರು: ಪಂಚ ದ್ರಾವಿಡ ಭಾಷೆಗಳಲ್ಲಿ ತುಳು ಭಾಷೆ ಪ್ರಮುಖ ಭಾಷೆಯಾಗಿದೆ. ನಾಟಕ, ಸಿನಿಮಾಗಳ ಮೂಲಕ ತುಳು ಭಾಷೆ ಇಂದು ಜಾಗತಿಕ ಮಟ್ಟದಲ್ಲಿ ಮನ್ನಣೆ ಪಡೆದಿದೆ. ಎಲ್ಲರೂ ಇಷ್ಟ ಪಡುವ ಭಾಷೆ ತುಳು. ಸುಮುಖ ಪ್ರೊಡಕ್ಷನ್ ಲಾಂಛನದಲ್ಲಿ, ಈ ಹಿಂದೆ ತೆರೆಕಂಡ “ತುಡರ್” ಯಶಸ್ವಿ ಪ್ರದರ್ಶನ ದಾಖಲಿಸಿದೆ. ಅದೇ ತಂಡದಿಂದ “ಕಜ್ಜ” ತುಳು ಸಿನಿಮಾ ಪ್ರೇಕ್ಷಕರ ಮನಗೆಲ್ಲಲಿ. ತುಳುವಿನಲ್ಲಿ 150 ಕ್ಕೂ ಮಿಕ್ಕಿದ ಸಿನಿಮಾಗಳು ತೆರೆಗೆ ಬಂದಿದೆ. ಎಲ್ಲವನ್ನು ಮೀರಿ ತುಳು ಚಿತ್ರರಂಗ ಬೆಳೆಯುತ್ತಿದೆ ಎಂದು ಮೂಡಬಿದ್ರೆ ಆಳ್ವಾಸ್ ಸಂಸ್ಥೆಯ ಅಧ್ಯಕ್ಷ ಡಾ ಎಂ ಮೋಹನ್ ಆಳ್ವ ನುಡಿದರು.
ಮಂಗಳೂರು ಪುರಭವನದಲ್ಲಿ ಜರಗಿದ ಶಾಮ್ ಇನ್ಸ್ಟಿಟ್ಯೂಶನ್ ಪ್ರಸ್ತುತ ಪಡಿಸುವ “ಕಜ್ಜ” ತುಳು ಸಿನಿಮಾದ ಆಡಿಯೋ ಮತ್ತು ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಕಾರ್ಯಕ್ರಮವನ್ನು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಮೊಕ್ತೇಸರರಾದ ಲಕ್ಷ್ಮೀನಾರಾಯಣ ಅಸ್ರಣ್ಣ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು.
ತುಳು ಸಿನಿಮಾದ ಮೂಲಕ ಸಂಸ್ಕಾರ, ಸಂಸ್ಕೃತಿ, ಆಚಾರ ವಿಚಾರ ಜಗತ್ತಿಗೆ ಪಸರಿಸಲಿ. ಸೀಮಿತ ಮಾರುಕಟ್ಟೆಯ ತುಳು ಚಿತ್ರರಂಗ ಇಂದು ವಿಶಾಲವಾಗಿ ಬೆಳೆಯುತ್ತಿರುವುದು ಸಂತೋಷದ ವಿಚಾರ. “ಕಜ್ಜ” ಸಿನಿಮಾದ ಮೂಲಕ ಪ್ರಮುಖ ಪ್ರೊಡಕ್ಷನ್ ತಂಡ ತುಳು ಭಾಷೆಯಲ್ಲಿ ಸಿನಿಮಾ ಮಾಡುತ್ತಿದೆ. ದೈವ ದೇವರ ಮೇಲಿನ ನಂಬಿಕೆ, ಶ್ರದ್ದೆ ಭಕ್ತಿಯಿಂದ ಕೆಲಸ ಮಾಡಿದಾಗ ಯಶಸ್ಸು ಲಭಿಸುತ್ತದೆ. ತುಳುಭಾಷೆ ಇಂದು ಜಗತ್ತಿನಾದ್ಯಂತ ಪಸರಿಸಿದೆ ಎಂದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ ನಾಟಕ, ಸಿನಿಮಾ ನಿರ್ದೇಶಕರಾದ ವಿಜಯಕುಮಾರ್ ಕೊಡಿಯಾಲ್ ಬೈಲ್ ಮಾತನಾಡಿ “ಕಜ್ಜ’ ತುಳು ಸಿನಿಮಾ ತುಳುವಿನಲ್ಲಿ ಮೈಲುಗಲ್ಲಾಗಲಿ ಎಂದರು.
ಮುಖ್ಯ ಅತಿಥಿ ಸರ್ವೋತ್ತಮ ಶೆಟ್ಟಿ ಅಬುದಾಬಿ ಮಾತನಾಡಿ “ಕಜ್ಜ” ಒಳ್ಳೆಯ ಸಿನಿಮಾ ಆಗಿ ಮೂಡಿಬಂದು ಪ್ರೇಕ್ಷಕರ ಮನಸ್ಸಿನಲ್ಲಿ ಉಳಿಯಲಿ ಎಂದರು.
ಆಡಿಯೋ, ಟ್ರೇಲರ್ ಬಿಡುಗಡೆಗೊಳಿಸಿದ ನಟ ವಸಿಷ್ಠ ಸಿಂಹ ಮಾತನಾಡಿ ಇಲ್ಲಿಯ ಭಾಷೆ ಇಲ್ಲಿಯ ಜನರ ಒಡನಾಟದಿಂದ ನಾನು ತುಳು ಭಾಷೆ ಕಲಿಯುವಂತಾಯಿತು.‌ “ಕಜ್ಜ” ಸಿನಿಮಾದ ಚಿತ್ರೀಕರಣದ ವೇಳೆ ಒಂದು ಕುಟುಂಬದ ಸದಸ್ಯರಂತೆ ನಾವು ಇದ್ದೆವು. ಸಿನಿಮಾ ಯಶಸ್ವಿಯಾಗುತ್ತದೆ ಎಂಬ ವಿಶ್ವಾಸ ತನಗಿದೆ ಎಂದರು.
ಕರ್ನಾಟಕ ವಿಧಾನಾ ಸಭಾಧ್ಯಕ್ಷ ಯು.ಟಿ ಖಾದರ್ ಮಾತನಾಡಿ ಆಧುನಿಕ ತಂತ್ರಜ್ಞಾನದಲ್ಲಿ ತುಳು ಭಾಷೆಯನ್ನು ಮರೆಯುತ್ತಾರೆ ಎಂಬ ಭಾವನೆ ನನ್ನಲ್ಲಿತ್ತು. ಆದರೆ ಇಂದು ತುಳು ಸಿನಿಮಾಗಳ ಮೂಲಕ ಭಾಷೆ ಎತ್ತರಕ್ಕೆ ಬೆಳೆದಿದೆ ಎಂದರು.
ತುಳು ಭಾಷೆಯ ಅಭಿಮಾದಿಂದ ತಯಾರಿಸಿದ “ಕಜ್ಜ” ಯಶಸ್ವಿಯಾಗಲಿ ಎಂದು ಪ್ರದೀಪ್ ಕಲ್ಕೂರ ನುಡಿದರು‌.
ಶಾಸಕ ವೇದವ್ಯಾಸ ಕಾಮತ್ ಮಾತನಾಡಿ ಅನೇಕ ತುಳು ಭಾಷೆಯ ಸಿನಿಮಾಗಳು ತೆರೆಗೆ ಬರುತ್ತಿರುವುದನ್ನು ನಾವು ನೋಡುತ್ತೇವೆ. ಎಲ್ಲರೂ ತುಳು ಭಾಷೆಯ ಸಿನಿಮಾಗಳನ್ನು ನೋಡಿ ಪ್ರೋತ್ಸಾಹಿಸ ಬೇಕೆಂದರು.
ಸಮಾರಂಭದಲ್ಲಿ ಹರಿಕೃಷ್ಣ ಪುನರೂರು, ಅರವಿಂದ ಬೋಳಾರ್, ಎಂಪಿ ಶೈಣೈ, ವಿಶ್ವನಾಥ ಶೆಟ್ಟಿ ದುಬಾಯಿ, ಸತೀಶ್ ಬಂದಲೆ, ಉದಯ ಪೂಜಾರಿ ಬಲ್ಲಾಲ್ ಭಾಗ್, ರೈ ಮಸಾಲೆಯ ಮಾಲಕಿ ದಿವ್ಯಾ ರೈ, ನಿರ್ಮಾಪಕ ವಿಶಾಂತ್ ಮೆನೆಜೆಸ್, ಸಹ ನಿರ್ಮಾಪಕ ಪ್ರವೀಣ್ ಸುವರ್ಣ, ನಟ ಸಿದ್ದಾಥ್೯ ಶೆಟ್ಟಿ, ಸಂಗೀತ ನಿರ್ದೇಶಕ ಲಿಖಿತ್ ಪ್ರಸಾದ್ ಶೆಟ್ಟಿ, ಲಂಚುಲಾಲ್, ಹರೀಶ್ ಶೆಟ್ಟಿ, ಆರತಿ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಪ್ರಕಾಶ್ ಮಹಾದೇವನ್ ಪ್ರಾರ್ಥಿಸಿದರು. ಚಿತ್ರದ ಕಥೆ ಹಾಗೂ ಸಾಹಿತ್ಯ ಬರೆದ ಮೋಹನ್ ರಾಜ್ ಸ್ವಾಗತಿಸಿದರು. ಅನುರಾಗ್ ಕಾರ್ಯಕ್ರಮ ನಿರ್ವಹಿಸಿದರು.
“ಕಜ್ಜ” ಸಿನಿಮಾ ಮೇ 15 ರಂದು ತೆರೆ ಕಾಣಲಿದೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ವಿಪರೀತ ಸೆಕೆಯಿಂದ ಬಳಲುತ್ತಿರುವಾಗಲೇ ಕರೆಂಟ್ ತೆಗೆದ ದುಷ್ಟ ಮೆಸ್ಕಾಂ
🔥 ಮಧ್ಯಪ್ರಾಚ್ಯ ಯುದ್ಧ: 17ನೇ ದಿನಕ್ಕೆ- ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ!
ಕರ್ನಾಟಕದಲ್ಲಿ ತಾಪಮಾನ ಅಪಾಯ ಮಟ್ಟಕ್ಕೆ!ಆಸ್ಪತ್ರೆಗಳಲ್ಲಿ ವಿಶೇಷ ಹೀಟ್ ಸ್ಟ್ರೋಕ್ ರೂಮ್‌ಗಳು-ಆರೋಗ್ಯ ಇಲಾಖೆ ತುರ್ತು ಕ್ರಮ ಜಾರಿ
ಕರ್ನಾಟಕ ಪ್ರವಾಸೋದ್ಯಮದ ರಾಯಭಾರಿಯಾಗಿ ರಿಷಬ್ ಶೆಟ್ಟಿ…
ಮೇ 22 ಮಂಗಳೂರು ಎಂದಿಗೂ ಮರೆಯದ ದಿನ…
🚨 “ಮಂಗಳೂರು ಜಿಲ್ಲಾಕಾರಾಗೃಹದಲ್ಲಿ ಗಲಾಟೆ: ಜೈಲು ಅಧೀಕ್ಷಕರ ಮೇಲೆಯೇ ಕೈದಿಗಳ ಹಲ್ಲೆಯತ್ನ!”
ಸಿಲಿಂಡರ್ ಪಡೆಯಲು ಹೊಸ ಶರತ್ತುಗಳು – ಈಗಲೇ ತಿಳಿದುಕೊಳ್ಳಿ, …
🚨 ದೇಶಾದ್ಯಂತ ಉಗ್ರ ಜಾಲದ ಮೇಲೆ ದೊಡ್ಡ ದಾಳಿ: ಕರ್ನಾಟಕದ ಬಳ್ಳಾರಿಯ ಅಬ್ದುಲ್ ಸಲಾಂ ಸೇರಿದಂತೆ 7 ರಾಜ್ಯಗಳಲ್ಲಿ 12 ಮಂದಿ ಬಂಧನ — ಯುವಕರಿಗೆ ಎಚ್ಚರಿಕೆ!
‘ಪೊಲೀಸರಿಗೆ ದೂರು ಕೊಡ್ತೀಯಾ?’… ಗಾಂಜಾ ವ್ಯಸನಕ್ಕೆ ಸೈಜು ಕಲ್ಲಿನಿಂದ ಅಜ್ಜಿಯ ತಲೆ ಪುಡಿ ಮಾಡಿದ ಮೊಮ್ಮಗ!ಅಜ್ಜಿಯೇ ಬಲಿ!
ಭರ್ಜರಿ ಬಿಜೆಪಿ ವಿಜಯೋತ್ಸವ ಬೆಂಗಳೂರಲ್ಲಿ ..!ಪ್ರಧಾನಿ ಮೋದಿ ಬರ್ತಿದ್ದಾರೆ.
ಬ್ಯಾಂಕುಗಳ ಮೇಲೆ ಭೀಕರ ದಾಳಿಯ ಮುನ್ಸೂಚನೆ ನೀಡಿದ ಇರಾನ್- ಮಿನಿಮಮ್ 1000 ಮೀಟರ್ ದೂರವಿರಿ
ಮಂಗಳೂರಿನಲ್ಲಿ ವಕೀಲರೊಬ್ಬರ ನಕಲಿ ದುಷ್ಕೃತ್ಯ ಬಯಲಿಗೆ?
ರಾಷ್ಟ್ರೀಯ ಹೆದ್ದಾರಿ ಪೊಳಲಿ ದ್ವಾರದ ಸಮೀಪ ಭಾರೀ ಗಾತ್ರದ ಮರ ಬಿದ್ದು ಕಾರ್ ಜಖಂ, ಚಾಲಕ ಆಸ್ಪತ್ರೆಗೆ ದಾಖಲು
ಮೊಹಾಲಿ ಬೆಚ್ಚಿಬೀಳಿಸಿದ ಕಚೇರಿ ಕೊಲೆ: ಮಹಿಳೆ ಮೇಲೆ ಮಾರಣಾಂತಿಕ ದಾಳಿ, ದೇಶಾದ್ಯಂತ ಆಕ್ರೋಶ…
ಒಂದು ವಾಟ್ಸ್ಯಾಪ್ ಮೆಸೇಜ್… ಕೋರ್ಟ್ ವರೆಗೂ ಎಳೆದ ಶಾಕ್ ಘಟನೆಯ ಸುತ್ತ..
ಮಂಗಳೂರಲ್ಲಿ 10ನೇ ತರಗತಿ ತಾಯಿಯಿಲ್ಲದ ಬಾಲಕಿ ಮೇಲೆ ಜಲೀಲ್ ಎಂಬಾತ 7 ತಿಂಗಳು ನಿರಂತರ ದೌರ್ಜನ್ಯ! 
‘ಮೇಕ್ ಇನ್ ಇಂಡಿಯಾ’ಗೆ ಮತ್ತೊಂದು ದೊಡ್ಡ ಗೆಲುವು: C295 ವಿಮಾನದ ಮೊದಲ ಯಶಸ್ವಿ ಪರೀಕ್ಷಾ ಹಾರಾಟ
“ಬೆಡ್‌ರೂಮ್ ರಾಜಕೀಯ”ಪಪ್ಪು ಯಾದವ್ ಹೇಳಿಕೆ ಸ್ಫೋಟಕ ಚರ್ಚೆ…!ಪಪ್ಪು ತಪ್ಪಾಗ್ ಮಾತಾಡಿದ್ದು ತಪ್ಪು 
🔴 ಯುದ್ಧದ ಹೊತ್ತಿನಲ್ಲಿ ಮಾನವೀಯ ರಾಜತಾಂತ್ರಿಕತೆ: ಇರಾನ್‌ಗೆ ಭಾರತದಿಂದ ಮೊದಲ ವೈದ್ಯಕೀಯ ನೆರವು:
ಸುಳ್ಯ:  ಕರ್ತವ್ಯದಲ್ಲಿದ್ದ ಉಪನ್ಯಾಸಕ ಕುಸಿದು ಬಿದ್ದು ಸಾವು
ಪ್ರೀತಿಸಿ ಓಡಿಹೋದ ಸೇಡಿನ ಬೆಂಕಿಗೆ ಬಲಿಯಾದ ನಿರ್ದೋಷಿ ಅಣ್ಣ..!
ಅಮೆರಿಕ–ಇಸ್ರೇಲ್ ದಾಳಿ ಬಳಿಕ ಇರಾನ್‌ನಲ್ಲಿ ಉದ್ವಿಗ್ನತೆ ತಾರಕಕ್ಕೆ
ನೀರು ಪೋಲು ಬೇಡ….ಈಗಲೇ ಎಚ್ಚೆತ್ತುಕೊಳ್ಳಿ!ಇಂದು ನಿರ್ಲಕ್ಷ್ಯ,ನಾಳೆ ಜಲ ಸಂಕಷ್ಟದ ಎಚ್ಚರಿಕೆ…!
ಕ್ರಿಕೆಟ್ pad gloves ಒಳಗೆ ಕೋಟಿ ಕೋಟಿ ಕೊಕೇನ್!
ಡಿ.ಕೆ. ಶಿವಕುಮಾರ್ ಪ್ರಮಾಣ ವಚನ  ಜೂನ್ 3ಕ್ಕೆ, ರಾಜ್ಯಪಾಲರಿಂದ ಆಹ್ವಾನ
ಸುಬ್ರಹ್ಮಣ್ಯದಲ್ಲಿ ಭಟ್ಟರಿಗೆ ದಕ್ಷಿಣೆ ಕೊಡುವoತಿಲ್ಲ- ಸಿಟ್ಟಿಗೆಳುತ್ತಿರುವ ಪುರೋಹಿತರು
ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ – 10 ರೋಗಿಗಳ ದುರ್ಮರಣ-11 ಸಿಬ್ಬಂದಿಗೆ ಗಾಯ
ಸುಪ್ರೀಂ ಕೋರ್ಟ್‌ನಲ್ಲಿ ಗದ್ದಲ: ದಾಖಲೆ ಎಸೆದು ಅವಾಚ್ಯ ಶಬ್ದ ಬಳಕೆ ಯಾಕೆ?- ಅರ್ಜಿದಾರನ ಅರ್ಜಿ ವಜಾ
ಗೋವಾ ಕ್ಯಾಲಂಗಟ್ ರೆಸಾರ್ಟ್‌ನಲ್ಲಿ ಕರಾವಳಿಯ ಯುವಕನ ನಿಗೂಢ ಸಾವು ಪ್ರಕರಣಕ್ಕೆ ಹೊಸ ತಿರುವು ನಾಪತ್ತೆಯಾದ ಆ ಮಹಿಳೆಗಾಗಿ ತೀವ್ರ ಶೋಧ…