📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಶಾಮ್ ಇನ್ಸ್ಟಿಟ್ಯೂಶನ್ ಪ್ರಸ್ತುತ ಪಡಿಸಿದ “ಕಜ್ಜ” ತುಳು ಸಿನಿಮಾದ ಆಡಿಯೋ, ಟೇಲರ್ ಬಿಡುಗಡೆ

    ತುಳು ಸಿನಿಮಾಗಳ ಮೂಲಕ ತುಳು ಭಾಷೆ ಜಾಗತಿಕ ಮಟ್ಟದಲ್ಲಿ ಮನ್ನಣೆ ಪಡೆದಿದೆ.

    ಡಾ ಎಂ ಮೋಹನ್ ಆಳ್ವ

    ಮಂಗಳೂರು: ಪಂಚ ದ್ರಾವಿಡ ಭಾಷೆಗಳಲ್ಲಿ ತುಳು ಭಾಷೆ ಪ್ರಮುಖ ಭಾಷೆಯಾಗಿದೆ. ನಾಟಕ, ಸಿನಿಮಾಗಳ ಮೂಲಕ ತುಳು ಭಾಷೆ ಇಂದು ಜಾಗತಿಕ ಮಟ್ಟದಲ್ಲಿ ಮನ್ನಣೆ ಪಡೆದಿದೆ. ಎಲ್ಲರೂ ಇಷ್ಟ ಪಡುವ ಭಾಷೆ ತುಳು. ಸುಮುಖ ಪ್ರೊಡಕ್ಷನ್ ಲಾಂಛನದಲ್ಲಿ, ಈ ಹಿಂದೆ ತೆರೆಕಂಡ “ತುಡರ್” ಯಶಸ್ವಿ ಪ್ರದರ್ಶನ ದಾಖಲಿಸಿದೆ. ಅದೇ ತಂಡದಿಂದ “ಕಜ್ಜ” ತುಳು ಸಿನಿಮಾ ಪ್ರೇಕ್ಷಕರ ಮನಗೆಲ್ಲಲಿ. ತುಳುವಿನಲ್ಲಿ 150 ಕ್ಕೂ ಮಿಕ್ಕಿದ ಸಿನಿಮಾಗಳು ತೆರೆಗೆ ಬಂದಿದೆ. ಎಲ್ಲವನ್ನು ಮೀರಿ ತುಳು ಚಿತ್ರರಂಗ ಬೆಳೆಯುತ್ತಿದೆ ಎಂದು ಮೂಡಬಿದ್ರೆ ಆಳ್ವಾಸ್ ಸಂಸ್ಥೆಯ ಅಧ್ಯಕ್ಷ ಡಾ ಎಂ ಮೋಹನ್ ಆಳ್ವ ನುಡಿದರು.
    ಮಂಗಳೂರು ಪುರಭವನದಲ್ಲಿ ಜರಗಿದ ಶಾಮ್ ಇನ್ಸ್ಟಿಟ್ಯೂಶನ್ ಪ್ರಸ್ತುತ ಪಡಿಸುವ “ಕಜ್ಜ” ತುಳು ಸಿನಿಮಾದ ಆಡಿಯೋ ಮತ್ತು ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
    ಕಾರ್ಯಕ್ರಮವನ್ನು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಮೊಕ್ತೇಸರರಾದ ಲಕ್ಷ್ಮೀನಾರಾಯಣ ಅಸ್ರಣ್ಣ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು.
    ತುಳು ಸಿನಿಮಾದ ಮೂಲಕ ಸಂಸ್ಕಾರ, ಸಂಸ್ಕೃತಿ, ಆಚಾರ ವಿಚಾರ ಜಗತ್ತಿಗೆ ಪಸರಿಸಲಿ. ಸೀಮಿತ ಮಾರುಕಟ್ಟೆಯ ತುಳು ಚಿತ್ರರಂಗ ಇಂದು ವಿಶಾಲವಾಗಿ ಬೆಳೆಯುತ್ತಿರುವುದು ಸಂತೋಷದ ವಿಚಾರ. “ಕಜ್ಜ” ಸಿನಿಮಾದ ಮೂಲಕ ಪ್ರಮುಖ ಪ್ರೊಡಕ್ಷನ್ ತಂಡ ತುಳು ಭಾಷೆಯಲ್ಲಿ ಸಿನಿಮಾ ಮಾಡುತ್ತಿದೆ. ದೈವ ದೇವರ ಮೇಲಿನ ನಂಬಿಕೆ, ಶ್ರದ್ದೆ ಭಕ್ತಿಯಿಂದ ಕೆಲಸ ಮಾಡಿದಾಗ ಯಶಸ್ಸು ಲಭಿಸುತ್ತದೆ. ತುಳುಭಾಷೆ ಇಂದು ಜಗತ್ತಿನಾದ್ಯಂತ ಪಸರಿಸಿದೆ ಎಂದರು.
    ಮುಖ್ಯ ಅತಿಥಿಯಾಗಿ ಭಾಗವಹಿಸಿದ ನಾಟಕ, ಸಿನಿಮಾ ನಿರ್ದೇಶಕರಾದ ವಿಜಯಕುಮಾರ್ ಕೊಡಿಯಾಲ್ ಬೈಲ್ ಮಾತನಾಡಿ “ಕಜ್ಜ’ ತುಳು ಸಿನಿಮಾ ತುಳುವಿನಲ್ಲಿ ಮೈಲುಗಲ್ಲಾಗಲಿ ಎಂದರು.
    ಮುಖ್ಯ ಅತಿಥಿ ಸರ್ವೋತ್ತಮ ಶೆಟ್ಟಿ ಅಬುದಾಬಿ ಮಾತನಾಡಿ “ಕಜ್ಜ” ಒಳ್ಳೆಯ ಸಿನಿಮಾ ಆಗಿ ಮೂಡಿಬಂದು ಪ್ರೇಕ್ಷಕರ ಮನಸ್ಸಿನಲ್ಲಿ ಉಳಿಯಲಿ ಎಂದರು.
    ಆಡಿಯೋ, ಟ್ರೇಲರ್ ಬಿಡುಗಡೆಗೊಳಿಸಿದ ನಟ ವಸಿಷ್ಠ ಸಿಂಹ ಮಾತನಾಡಿ ಇಲ್ಲಿಯ ಭಾಷೆ ಇಲ್ಲಿಯ ಜನರ ಒಡನಾಟದಿಂದ ನಾನು ತುಳು ಭಾಷೆ ಕಲಿಯುವಂತಾಯಿತು.‌ “ಕಜ್ಜ” ಸಿನಿಮಾದ ಚಿತ್ರೀಕರಣದ ವೇಳೆ ಒಂದು ಕುಟುಂಬದ ಸದಸ್ಯರಂತೆ ನಾವು ಇದ್ದೆವು. ಸಿನಿಮಾ ಯಶಸ್ವಿಯಾಗುತ್ತದೆ ಎಂಬ ವಿಶ್ವಾಸ ತನಗಿದೆ ಎಂದರು.
    ಕರ್ನಾಟಕ ವಿಧಾನಾ ಸಭಾಧ್ಯಕ್ಷ ಯು.ಟಿ ಖಾದರ್ ಮಾತನಾಡಿ ಆಧುನಿಕ ತಂತ್ರಜ್ಞಾನದಲ್ಲಿ ತುಳು ಭಾಷೆಯನ್ನು ಮರೆಯುತ್ತಾರೆ ಎಂಬ ಭಾವನೆ ನನ್ನಲ್ಲಿತ್ತು. ಆದರೆ ಇಂದು ತುಳು ಸಿನಿಮಾಗಳ ಮೂಲಕ ಭಾಷೆ ಎತ್ತರಕ್ಕೆ ಬೆಳೆದಿದೆ ಎಂದರು.
    ತುಳು ಭಾಷೆಯ ಅಭಿಮಾದಿಂದ ತಯಾರಿಸಿದ “ಕಜ್ಜ” ಯಶಸ್ವಿಯಾಗಲಿ ಎಂದು ಪ್ರದೀಪ್ ಕಲ್ಕೂರ ನುಡಿದರು‌.
    ಶಾಸಕ ವೇದವ್ಯಾಸ ಕಾಮತ್ ಮಾತನಾಡಿ ಅನೇಕ ತುಳು ಭಾಷೆಯ ಸಿನಿಮಾಗಳು ತೆರೆಗೆ ಬರುತ್ತಿರುವುದನ್ನು ನಾವು ನೋಡುತ್ತೇವೆ. ಎಲ್ಲರೂ ತುಳು ಭಾಷೆಯ ಸಿನಿಮಾಗಳನ್ನು ನೋಡಿ ಪ್ರೋತ್ಸಾಹಿಸ ಬೇಕೆಂದರು.
    ಸಮಾರಂಭದಲ್ಲಿ ಹರಿಕೃಷ್ಣ ಪುನರೂರು, ಅರವಿಂದ ಬೋಳಾರ್, ಎಂಪಿ ಶೈಣೈ, ವಿಶ್ವನಾಥ ಶೆಟ್ಟಿ ದುಬಾಯಿ, ಸತೀಶ್ ಬಂದಲೆ, ಉದಯ ಪೂಜಾರಿ ಬಲ್ಲಾಲ್ ಭಾಗ್, ರೈ ಮಸಾಲೆಯ ಮಾಲಕಿ ದಿವ್ಯಾ ರೈ, ನಿರ್ಮಾಪಕ ವಿಶಾಂತ್ ಮೆನೆಜೆಸ್, ಸಹ ನಿರ್ಮಾಪಕ ಪ್ರವೀಣ್ ಸುವರ್ಣ, ನಟ ಸಿದ್ದಾಥ್೯ ಶೆಟ್ಟಿ, ಸಂಗೀತ ನಿರ್ದೇಶಕ ಲಿಖಿತ್ ಪ್ರಸಾದ್ ಶೆಟ್ಟಿ, ಲಂಚುಲಾಲ್, ಹರೀಶ್ ಶೆಟ್ಟಿ, ಆರತಿ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
    ಪ್ರಕಾಶ್ ಮಹಾದೇವನ್ ಪ್ರಾರ್ಥಿಸಿದರು. ಚಿತ್ರದ ಕಥೆ ಹಾಗೂ ಸಾಹಿತ್ಯ ಬರೆದ ಮೋಹನ್ ರಾಜ್ ಸ್ವಾಗತಿಸಿದರು. ಅನುರಾಗ್ ಕಾರ್ಯಕ್ರಮ ನಿರ್ವಹಿಸಿದರು.
    “ಕಜ್ಜ” ಸಿನಿಮಾ ಮೇ 15 ರಂದು ತೆರೆ ಕಾಣಲಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ
    ಬಿಜೆಪಿ–ಕಾಂಗ್ರೆಸ್ ಕಾರ್ಯಕರ್ತರ ನಡುವೆ ತೀವ್ರ ವಾಕ್ಸಮರ, ಬಿಗುವಿನ ವಾತಾವರಣ
    5 ವರ್ಷ ನೀರಿನೊಳಗೆ ಬದುಕಿದ 16 ರ ಬಾಲಕ…!ಈತನ ವಿಚಿತ್ರ ಕಾಯಿಲೆ ಕಂಡು ಬೆಚ್ಚಿಬಿದ್ದ ದೇಶ!ಈಗ ಅನಂತ್ ಅಂಬಾನಿ ನೆರವು!
    ತಿರುಮಲ ತಿಮ್ಮಪ್ಪನ 3,550 ಮೆಟ್ಟಿಲು ಹತ್ತಿದ 116 ವರ್ಷದ ನವನೀತಮ್ಮ ಕರ್ನಾಟಕದ ಶತಾಯುಷಿ!
    ಚಿಕ್ಕಸ್ವಾಮಿ-ದೊಡ್ಡಸ್ವಾಮಿ ಭಕ್ತರ ಮಿಲನ! ಕಾಶಿಮಠ ವಿವಾದಕ್ಕೆ ಸಂಯಮೇ೦ದ್ರ ಮದ್ದು
    ವಿಮಾನದಲ್ಲಿ ಭಾರೀ ಟರ್ಬುಲೆನ್ಸ್:300 ಅಡಿ ಹಠಾತ್ ಕುಸಿದ ಏರ್ ಇಂಡಿಯಾ ವಿಮಾನ..!ಪ್ರಯಾಣಿಕರು-ಸಿಬ್ಬಂದಿಗೆ ಗಾಯ..
    30 ದಿನ, 13 ನಗರಗಳು, ₹10 ಲಕ್ಷ ಖರ್ಚು! ಅಮೆರಿಕದ ದಂಪತಿಯ ಭಾರತ ಯಾತ್ರೆ ವೈರಲ್….ವೈರಲ್ ವಿಡಿಯೋದಲ್ಲಿ ಹೊರಬಿದ್ದ ಅಚ್ಚರಿಯ ಲೆಕ್ಕ!
    ಮಂಗಳೂರು -ವೆನ್ಲಾಕ್ ಮಾಸ್ಟರ್ ಪ್ಲ್ಯಾನ್…!
    ಚುನಾವಣೆಯವರೆಗೆ ಮೌನ, ನಂತರ LPG ದರ ಭಾರಿ ಏರಿಕೆ –ಇದು ರಾಜಕೀಯ ಅಜೆಂಡಾನಾ?
    “ನನ್ನ ಮಗಳನ್ನೂ ಅದೇ ಕೋಟೆಯಿಂದ ಕೆಳಗೆ ತಳ್ಳಿ!” – ನಿಶ್ಚಿತ ವರನ ಹತ್ಯೆಗೈದ ಸಿಯಾ ಹೆತ್ತವರ ಆಕ್ರೋಶದ ಹೇಳಿಕೆ
    ಪುತ್ತೂರಿನ ದೇವಸ್ಥಾನ ಪದಾಧಿಕಾರಿಗಳ ವಿರುದ್ಧ FIR ..!
    ಇನ್ನು ಹೈವೇಯಲ್ಲಿ ಲಿಮಿಟ್ ಗಿಂತ ವೇಗವಾಗಿ ಹೋಗುವವರು ಹುಷಾರಾಗಿರಿ…
    🎬 ಜೈಲರ್ 2 ಸೆಟ್‌ನಲ್ಲಿ ವಿದ್ಯುತ್ ಅವಘಡ…28 ವರ್ಷದ ಕಾರ್ತಿಕೇಯನ್ ವಿದ್ಯುತ್ ಶಾಕ್‌ಗೆ ಬಲಿ..
    book ಮಾಡಿದ ನಿಮ್ಮ ಹೊಸ ಕಾರು-ಬೈಕ್ ಇನ್ನೂ ಬಂದಿಲ್ವಾ?ಪಶ್ಚಿಮ ಏಷ್ಯಾ ಯುದ್ಧದಿಂದ ಸರಬರಾಜು ವಿಳಂಬ…!
    ಮಂಗಳೂರಿಗರಿಗೆ ಎಚ್ಚರಿಕೆ: ನೀರನ್ನು ಜಾಣ್ಮೆಯಿಂದ ಬಳಸಿ –ಮಾರ್ಚ್ ನಲ್ಲೇ ರೇಷನಿಂಗ್ ಮಾಡುವ ಪರಿಸ್ಥಿತಿ ಇದೆ…
    ಕಾಂಗ್ರೆಸ್ ಮೇಲಿನ ಕೋಪ ತಣ್ಣಗಾಗಿಲ್ಲ….. ಜನಪರ ಯೋಜನೆ ಮುಂದುವರೆಸಲು ಸ್ಟಾಲಿನ್ ಮನವಿ
    ಡೆಲಿವರಿ ಬಾಯ್ ಗೆ “₹500 ಟಿಪ್… !” video viral ಅಸಲಿ ಕಥೆ ಏನು..!?
    ಬೆಂಗಳೂರಲ್ಲಿ Bowring Hospital ಬಳಿ ಗೋಡೆ ಕುಸಿತ ಮನ ಕಲುಕುವ ಘಟನೆ ಬಿಸಿಲಿನಿಂದ ತಪ್ಪಿಸಿಕೊಳ್ಳಲು ನಿಂತವರು… ಏಳು ಮಂದಿಯ ದುರಂತ ಅಂತ್ಯ.!
    ಕರ್ನಾಟಕದಲ್ಲಿ ಯುಗಾದಿ ಹಬ್ಬಕ್ಕೂ ಮುನ್ನವೇ  ಮುಂಗಾರು  ಮಳೆರಂಗು – 5 ಜಿಲ್ಲೆಗಳಲ್ಲಿ ಆಲಿಕಲ್ಲು ಅಬ್ಬರ!
    ಬಂಗಾಳದಲ್ಲಿ ಈಗಲೂ ದೀದಿನೇ ಫೇವರೆಟ್, ಬಲ ಹೆಚ್ಚಿಸಿ ಕೊಂಡ ಬಿಜೆಪಿ
    ಡಿಕೆ ಶಿವಕುಮಾರ್ ಪ್ರತಿಷ್ಠೆ ಪಣಕ್ಕಿಟ್ಟ ಪರಿಷತ್ ಚುನಾವಣೆ!
    ಕಾಂಚನಾ ಟೆಕ್ಸ್‌ಟೈಲ್ಸ್ ಮ್ಯಾನೇಜರ್ ದಿನೇಶ್ ರಾಜ್ ಕೊಲೆ ಆರೋಪಿ 11 ವರ್ಷ ಬಳಿಕ ಅರೆಸ್ಟ್..!
    ಮಂಗಳೂರು ಹಂಪನಕಟ್ಟೆಯಲ್ಲಿ ಶೂ ಅಂಗಡಿಗೆ ಬೆಂಕಿ; ಅಪಾರ ನಷ್ಟ, ಅವಘಡದಿಂದ ಎಚ್ಚೆತ್ತ ವ್ಯಾಪಾರಿಗಳು…!
    ದೇವಳದ ಗೋಲ್ಮಾಲ್ ತಡೆಗೆ ಉಪ-ಮುಖ್ಯಮಂತ್ರಿ ಬುಲಾವ್!
    ಸುಳ್ಯದಲ್ಲಿ ಚಿನ್ನಾಭರಣ ಕಳವು,  ಮಹಿಳೆಯ ಮೇಲೆ ಶಂಕೆ
    ಉಡುಪಿಯಲ್ಲಿ  ಬೆಟ್ಟಿಂಗ್ ಮಾಫಿಯಾದ ಚಟುವಟಿಕೆಯನ್ನು ಡೆತ್ ನೋಟ್ ರಿವಿಲ್ ಮಾಡಿತೇ?
    ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ರಣಕಹಳೆ!”
    ಖಾದರ್‌ ಖಡಕ್ ವಾರ್ನಿಂಗ್ ವೈರಲ್ : ಆದರೆ ಖಡಕ್ ಆಕ್ಷನ್ ಯಾವಾಗ?”ಪ್ರತಿ ಮಳೆಯಲ್ಲೂ ಅದೇ ಕಥೆ: ರಸ್ತೆ ಗುಂಡಿ, ಅಪಘಾತ, ಎಚ್ಚರಿಕೆ, ಜವಾಬ್ದಾರಿ ಹೊತ್ತವರ ಜಾಣ ಮರೆವು!
    ಅರ್ಧ ಸಂಬಳ ಸಾಕು ಮತ್ತು VIP ಸೌಲಭ್ಯಕ್ಕೆ ‘ನೋ’ ಎಂದ ನ್ಯಾಯಾಧೀಶ!
    ನದಿಯಲ್ಲ ರಸ್ತೆ..!ಕೈಕಂಬದ ಕಂದಾವರದ ಈ ರಸ್ತೆ ಕೆರೆಯಾಗಿ ನೀರಿನಲ್ಲಿ ಮುಳುಗಿದೆ!ಶಾಲಾ ಮಕ್ಕಳಿಂದ ವೃದ್ಧರವರೆಗೆ ಎಲ್ಲರಿಗೂ ಜೀವಭಯ!