📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಶಾಲಾ ವಾಹನಗಳ ಸುರಕ್ಷತೆ ಬಗ್ಗೆ ಜೆಡಿಎಸ್ ಆಗ್ರಹ

    ಅಧಿಕ ವಿದ್ಯಾರ್ಥಿಗಳ ಸಾಗಣೆ ತಡೆ, ಹಳೆಯ ವಾಹನಗಳ ಫಿಟ್ನೆಸ್ ತಪಾಸಣೆಗೆ ಮನವಿ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ವಾಹನಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲಾ ಜನತಾದಳ (ಜಾತ್ಯತೀತ) ನಿಯೋಗವು ಬುಧವಾರ ಪ್ರಾದೇಶಿಕ ಸಾರಿಗೆ ಅಧಿಕಾರಿ (ಆರ್‌ಟಿಒ) ಅವರಿಗೆ ಮನವಿ ಸಲ್ಲಿಸಿತು.

    ನಿಗದಿತ ಆಸನಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳ ಸಾಗಣೆ ಆರೋಪ

    ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ ಅವರ ನಿರ್ದೇಶನದ ಮೇರೆಗೆ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಯೋಗಿಶ್ ಶೆಟ್ಟಿ ಜಪ್ಪು ನೇತೃತ್ವದ ನಿಯೋಗವು ಮನವಿ ಸಲ್ಲಿಸಿತು.

    ಜಿಲ್ಲೆಯ ಹಲವು ಶಾಲಾ ಹಾಗೂ ಕಾಲೇಜು ವಾಹನಗಳಲ್ಲಿ ನಿಗದಿತ ಆಸನ ಸಾಮರ್ಥ್ಯಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ತುಂಬಿಕೊಂಡು ಸಂಚರಿಸಲಾಗುತ್ತಿದೆ ಎಂಬ ಬಗ್ಗೆ ಪೋಷಕರು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಂದ ನಿರಂತರ ದೂರುಗಳು ಬರುತ್ತಿವೆ ಎಂದು ಅವರು ಅಧಿಕಾರಿಗಳ ಗಮನಕ್ಕೆ ತಂದರು.

    ಮಳೆಗಾಲದಲ್ಲಿ ಅಪಾಯ ಹೆಚ್ಚು

    ಮಳೆಗಾಲದಲ್ಲಿ ಜಾರುವ ರಸ್ತೆಗಳು, ಗುಂಡಿಗಳು, ನೀರು ನಿಂತಿರುವ ರಸ್ತೆಗಳು ಹಾಗೂ ಕಡಿಮೆ ಗೋಚರತೆಯ ನಡುವೆ ಸಾಮರ್ಥ್ಯ ಮೀರಿ ವಿದ್ಯಾರ್ಥಿಗಳನ್ನು ಸಾಗಿಸುವುದು ಅತ್ಯಂತ ಅಪಾಯಕಾರಿ ಎಂದು ನಿಯೋಗ ಹೇಳಿತು. ಯಾವುದೇ ಅನಾಹುತ ಸಂಭವಿಸುವ ಮುನ್ನವೇ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿತು. ಹಾಗೂ ನಿಯೋಗವು ತನ್ನ ಮನವಿಯಲ್ಲಿ ಕೆಲವು ಬೇಡಿಕೆಗಳನ್ನು ಇಟ್ಟಿದೆ.

    “ವಿದ್ಯಾರ್ಥಿಗಳ ಜೀವ ಮತ್ತು ಸುರಕ್ಷತೆ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯಕ್ಕೊಳಗಾಗಬಾರದು. ಒಂದು ಸಣ್ಣ ಅಜಾಗರೂಕತೆಯೂ ಅಮೂಲ್ಯ ಜೀವಹಾನಿಗೆ ಕಾರಣವಾಗಬಹುದು” ಎಂದು ನಿಯೋಗ ಎಚ್ಚರಿಸಿತು.

    ಆರ್‌ಟಿಒ ಭರವಸೆ

    ಮನವಿ ಸ್ವೀಕರಿಸಿದ ಪ್ರಾದೇಶಿಕ ಸಾರಿಗೆ ಅಧಿಕಾರಿ ಅವರು, ನಿಯೋಗ ವ್ಯಕ್ತಪಡಿಸಿರುವ ಕಳವಳವನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಹೇಳಿದರು. “ವಿದ್ಯಾರ್ಥಿಗಳ ಸುರಕ್ಷತೆಗೆ ಯಾವುದೇ ರೀತಿಯ ರಾಜಿ ಮಾಡಿಕೊಳ್ಳುವುದಿಲ್ಲ. ನಿಯಮ ಉಲ್ಲಂಘಿಸುವ ವಾಹನಗಳ ವಿರುದ್ಧ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಸಿ, ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು  ಜೆಡಿಎಸ್ ನಿಯೋಗಕ್ಕೆ ಭರವಸೆ ನೀಡಿದರು .

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ವಿವಾಹಿತ ದಂಪತಿಗಳಿಗೆ ಜಂಟಿ ITR ವ್ಯವಸ್ಥೆ ತರಲು- ಸಂಸತ್ತಿನಲ್ಲಿ Raghav Chadha ಆಗ್ರಹ.
    ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ….
    ಲಕ್ನೋ ಕೋಚಿಂಗ್ ಸೆಂಟರ್‌ನಲ್ಲಿ ಭೀಕರ ಬೆಂಕಿ,15 ವಿದ್ಯಾರ್ಥಿಗಳು ಸಜೀವ ದಹನ ಹೃದಯವಿದ್ರಾವಕ ದುರಂತ
    ಭಾರತದ ‘ಗೋಲ್ಡನ್ ಗರ್ಲ್’ ಮೀರಾಬಾಯಿ ಚಾನು ಮತ್ತೊಮ್ಮೆ ಇತಿಹಾಸ ಬರೆದಿದ್ದಾರೆ! 
    ಮಂಗಳೂರು ಹಂಪನಕಟ್ಟೆಯಲ್ಲಿ ಶೂ ಅಂಗಡಿಗೆ ಬೆಂಕಿ; ಅಪಾರ ನಷ್ಟ, ಅವಘಡದಿಂದ ಎಚ್ಚೆತ್ತ ವ್ಯಾಪಾರಿಗಳು…!
    ಕೇಂದ್ರದ ಮೌನ ಮತ್ತು ಪ್ರಜಾಪ್ರಭುತ್ವದ ಅಣಕಕ್ಕೆ ಜಂತರ್ ಮಂತರ್‌ನಲ್ಲಿ ಧಗಧಗಿಸುತ್ತದ ನೀಟ್ (NEET) ಕಿಚ್ಚು…!
    ಉಡುಪಿಯ ಮಾರ್ಕೆಟ್‌ 99 ಮ್ಯಾನೇಜರ್‌ ವಿರುದ್ಧ ₹13.39 ಲಕ್ಷ ದುರ್ಬಳಕೆ ಪ್ರಕರಣ ದಾಖಲು…
    ಮೇ 29ರಿಂದ ತಣ್ಣೀರುಬಾವಿ ಬೀಚ್‌ನಲ್ಲಿ ಮೂರು ದಿನಗಳ ರಾಷ್ಟ್ರಮಟ್ಟದ ಸರ್ಫಿಂಗ್ ಸ್ಪರ್ಧೆ…
    ಸಾಯಿ ಚಿರಾಗ್ ಚಿಕಿತ್ಸೆಗೆ ಹರಿದುಬಂತು 2 ಕೋಟಿ ರೂ. ಜನಸಾಗರದ ನಿಧಿ!
    ಫೇಸ್‌ಬುಕ್ ‘ಸುಂದರಿ’ಅವಳಲ್ಲ ಅವನು!ಲವ್ ಮಾಡಿ ಹೆಂಡತಿ ಅಂದುಕೊಂಡವನು ಗಂಡಸು ಅಂತ ಗೊತ್ತಾದಾಗ ನಡೆದಿದ್ದೇ ಬೇರೆ!
    30 ವರ್ಷದ ಕನಸು ಸಾಕಾರ: ಮಾಣಿಲ–ಪೆರ್ಲ ಸಂಪರ್ಕಕ್ಕೆ ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್!
    ಜೆಡಿಎಸ್  ಜನರಲ್ ಸೆಕ್ರೆಟರಿಯಾಗಿ ಯೋಗೇಶ್ ಶೆಟ್ಟಿ ಜಪ್ಪು ಆಯ್ಕೆಯ ಲೆಕ್ಕಾಚಾರವೇನು?
    ಗೃಹಲಕ್ಷ್ಮಿ ಫಲಾನುಭವಿಗಳೇ ಗಮನಿಸಿ: ಹಣ ಕ್ರೆಡಿಟ್ ಆಗ್ಬೇಕಾದ್ರೆ ಇನ್ಮುಂದೆ ಬಯೋಮೆಟ್ರಿಕ್ ಕಡ್ಡಾಯ!
    ರಾಮಮಂದಿರ ಟ್ರಸ್ಟ್‌ನ ಮಹತ್ವದ ಹೇಳಿಕೆ!ಎಲ್ಲಾ ಕಾಣಿಕೆಗಳು ,ದೇಣಿಗೆ,ಚಿನ್ನ-ಬೆಳ್ಳಿ ಸೇರಿ 2,800 ಅಮೂಲ್ಯ ವಸ್ತುಗಳುಸುರಕ್ಷಿತ
    ಕೇರಳ ಸರ್ಕಾರ ರಚನೆಯ ಕಗ್ಗಂಟು.. ಸಿಎಂ ಅಭ್ಯರ್ಥಿ ಆಯ್ಕೆಗೆ ಕಸರತ್ತು… ಕಾಂಗ್ರೆಸ್ ದುರ್ಬಲತೆಗೆ ಸಾಕ್ಷಿ
    ಬಂಟ್ಸ್ ಹಾಗೂ ಬಿಲ್ಲವ ಸಮುದಾಯವನ್ನೇ ಅವಹೇಳಿಸಿ ಮಾತಾಡಿ ವಿಡಿಯೋ ವೈರಲ್ ರಾತ್ರೋರಾತ್ರಿ… ..ಫೇಮಸ್ ಆದ ಅನಿತಾಳ ಬಂಧನ ..!
    ಬ್ಯಾರಿ ಸಾಹಿತ್ಯ ಸಮ್ಮೇಳನಕ್ಕೆ ಸಹಕರಿಸಲು ಮನವಿ
    ಕನಸು ಹೊತ್ತ ಯುವತಿಯರ ಮೇಲೆ ಕಾಮುಕ ಸಮಾಜದ ಕಣ್ಣು! ಮೌನವಾಗಿರುವ ಸಾವಿರಾರು ಕಥೆಗಳಲ್ಲೊಂದು ಬೆಂಗಳೂರು ಘಟನೆ!
    ಸಂಸತ್ತಿನಲ್ಲಿ ಪ್ರಶ್ನೆ ಎದುರಿಸಲು ಆಗದೆ,  ಪ್ರಶ್ನೆಯನ್ನೇ ಕೇಳದಂತೆ ಮಾಡಿದರು – ರಾಹುಲ್ ಗಾಂಧಿ
    ಯುವ ಜನಾಂಗದ ಹೋರಾಟ ಕಿಚ್ಚಾಗದಂತೆ ನೋಡಿಕೊಳ್ಳಿ
    ಆಂಬ್ಯುಲೆನ್ಸ್‌ನಲ್ಲೇ ನಡೆದ ಭೀಕರ ಘಟನೆ… ನಂಬಲು ಕಷ್ಟ, ಆದರೆ ಸತ್ಯ!
    ಅಲ್ಲಿ ಸೌಮೆಂದು ಅಧಿಕಾರಿ…. ಇಲ್ಲಿ ಸಾಮ್ರಾಟ್ ಚೌದರಿ, ಹೆಲ್ತ್ ಮಿನಿಸ್ಟರ್ ನಿಶಾಂತ್….
    ಕಂಬಳಕ್ಕೆ ಘೋಷಿತ ಅನುದಾನ ಕೊಡುವಂತೆ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ..
    ವಿಶ್ವದ ಅತ್ಯುತ್ತಮ ಶಾಲೆಗಳ ಪಟ್ಟಿಯಲ್ಲಿ ಭಾರತದ 7 ಶಾಲೆಗಳು …!ವಿಶ್ವದ ಗಮನ ಸೆಳೆದ ಸಾಧನೆ ಅಂಥದ್ದೇನಿದೆ!?
    ಮಂಗಳೂರಿಗೆ ಮತ್ತೊಂದು ದೊಡ್ಡ ಯೋಜನೆ: 17.5 ಲಕ್ಷ ಮೆಟ್ರಿಕ್ ಟನ್ ತೈಲ ಸಂಗ್ರಹಾಗಾರಕ್ಕೆ ಅನುಮೋದನೆ – ಕರಾವಳಿಗೆ ಅಭಿವೃದ್ಧಿಯ ಹೊಸ ಅಧ್ಯಾಯ
    ಮಕ್ಕಳ ಕೈಯಿಂದ ಮೊಬೈಲ್ ಕಸಿಯಲು ಮುಂದಾದ ಬ್ರಿಟನ್!ಯುಕೆಯ ನಿರ್ಧಾರಕ್ಕೆ ವಿಶ್ವದ ಗಮನ…
    ಗೋವಾ ಕ್ಯಾಲಂಗಟ್ ರೆಸಾರ್ಟ್‌ನಲ್ಲಿ ಕರಾವಳಿಯ ಯುವಕನ ನಿಗೂಢ ಸಾವು ಪ್ರಕರಣಕ್ಕೆ ಹೊಸ ತಿರುವು ನಾಪತ್ತೆಯಾದ ಆ ಮಹಿಳೆಗಾಗಿ ತೀವ್ರ ಶೋಧ…
    ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ರಣಕಹಳೆ!”
    ಗ್ಯಾಸ್ ಪೈಪ್‍ಲೈನ್ ಸೋರಿಕೆ: ಅಣಕು ಪ್ರದರ್ಶನ
    ಸತೀಶ್’ ಆಗಿ ಹೋದವ, ‘ಸಲೀಂ’ ಆಗಿ ವಾಪಸ್ …!26 ವರ್ಷಗಳ ಬಳಿಕ ತಾಯಿಯ ಮಡಿಲಿಗೆ ಮರಳಿದ ಮಗನ ಭಾವುಕ ಕಥೆ