📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಶಾಲಾ ಶಿಕ್ಷಕಿಯರ ಹೆಸರಿನಲ್ಲಿ ಡ್ರಗ್ಸ್ ಜಾಲ ..! ತನಿಖೆಯಲ್ಲಿ ಬೆಚ್ಚಿಬೀಳಿಸುವ ಕೊಂಡಿಗಳು ಇನ್‌ಸ್ಟಾಗ್ರಾಮ್‌ನಿಂದ ಗ್ರಾಹಕರ ಸೆಳೆತ, ಗಲ್ಫ್ ನಂಬರ್ ಮೂಲಕ ಬುಕ್ಕಿಂಗ್

    ಕೋಝಿಕೋಡ್: ಸಮಾಜದಲ್ಲಿ ಗೌರವದ ಸ್ಥಾನದಲ್ಲಿರುವ ಶಿಕ್ಷಕಿಯರ ಹೆಸರಿನಲ್ಲಿ ನಡೆಯುತ್ತಿದ್ದ ಎಂಡಿಎಂಎ (MDMA) ಮಾದಕ ದ್ರವ್ಯ ಜಾಲದ ತನಿಖೆಯಲ್ಲಿ ಮತ್ತೊಂದು ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಹೊರಗಿನಿಂದ ಸಾಮಾನ್ಯ ಶಿಕ್ಷಕಿಯರ ಜೀವನದಂತೆ ಕಂಡಿದ್ದ ಈ ಪ್ರಕರಣದ ಹಿಂದೆ ಅಂತರರಾಜ್ಯ ಮತ್ತು ಅಂತರರಾಷ್ಟ್ರೀಯ ಡ್ರಗ್ಸ್ ಜಾಲದ ಕೊಂಡಿ ಇರಬಹುದೇ? ಎಂಬ ಅನುಮಾನ ಈಗ ಬಲವಾಗುತ್ತಿದೆ. ತನಿಖೆ ಮುಂದುವರಿದಂತೆ ಇನ್ನಷ್ಟು ದೊಡ್ಡ ಹೆಸರುಗಳು ಬಹಿರಂಗವಾಗುವ ಸಾಧ್ಯತೆಯಿದೆ.

    ಪೆರಂಬ್ರಾ ಬಿಆರ್‌ಸಿಯ ವಿಶೇಷ ಶಿಕ್ಷಕಿ ವಿ.ಪಿ. ನೀಶ್ಮಾ (30) ಅವರನ್ನು ಎಸ್‌ಐಟಿ ಬಂಧಿಸಿದ್ದು, ಪ್ರಕರಣದಲ್ಲಿ ಸಿಕ್ಕಿಬಿದ್ದ ಶಿಕ್ಷಕಿಯರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

    ಈ ಹಿಂದೆ ಬಂಧಿತ ಶಿಕ್ಷಕಿಯರಾದ ಕೀರ್ತನಾ ಮತ್ತು ಕಾವ್ಯಾ ಜೊತೆಗೂಡಿ ನೀಶ್ಮಾ ಕೂಡ ಮಾದಕ ದ್ರವ್ಯ ಸೇವನೆ ಮಾಡುತ್ತಿದ್ದಷ್ಟೇ ಅಲ್ಲ, ಇನ್‌ಸ್ಟಾಗ್ರಾಮ್ ಖಾತೆಗಳ ಮೂಲಕ ಗ್ರಾಹಕರನ್ನು ಸೆಳೆದು ಹೈಟೆಕ್ ಡ್ರಗ್ಸ್ ಜಾಲ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

    ಗಲ್ಫ್ ನಂಬರ್‌ನಿಂದ ಕಾರ್ಯಾಚರಣೆ

    ತನಿಖೆಯಲ್ಲಿ ಅತ್ಯಂತ ಗಂಭೀರವಾಗಿ ಹೊರಬಂದ ಅಂಶವೆಂದರೆ, ಈ ಜಾಲದ ಕೊಂಡಿ ಗಲ್ಫ್ ದೇಶದ ಮೊಬೈಲ್ ಸಂಖ್ಯೆಗೆ ಸಂಪರ್ಕ ಹೊಂದಿರುವುದು. ವಾಟ್ಸಾಪ್ ಮೂಲಕ ಬುಕ್ಕಿಂಗ್ ಪಡೆದು, ಕ್ಯೂಆರ್ ಕೋಡ್ ಮೂಲಕ ಹಣ ಸಂಗ್ರಹಿಸಿ, ನಂತರ ಡ್ರಗ್ಸ್ ಅಡಗಿಸಿಟ್ಟ ಸ್ಥಳದ ಫೋಟೋ ಕಳುಹಿಸಿ ಡೆಲಿವರಿ ನೀಡಲಾಗುತ್ತಿತ್ತು.

    ಆದಾಯಕ್ಕಿಂತ ಕೋಟ್ಯಾಂತರ ಶಂಕಾಸ್ಪದ ವ್ಯವಹಾರ

    ಕೀರ್ತನಾ ಖಾತೆಗೆ ಸುಮಾರು ₹14 ಲಕ್ಷ, ಕಾವ್ಯಾ ಖಾತೆಗೆ ಕೇವಲ ಐದು ತಿಂಗಳಲ್ಲಿ ₹9 ಲಕ್ಷ ಜಮೆಯಾಗಿರುವುದು ತನಿಖೆಯಲ್ಲಿ ಪತ್ತೆಯಾಗಿದೆ. ತಿಂಗಳಿಗೆ ಕೇವಲ ₹12,000 ಗುತ್ತಿಗೆ ವೇತನ ಪಡೆಯುತ್ತಿದ್ದ ಶಿಕ್ಷಕಿಯರ ಖಾತೆಗಳಲ್ಲಿ ಇಷ್ಟು ದೊಡ್ಡ ಮೊತ್ತದ ಹಣ ಹರಿದಾಡಿರುವುದು ತನಿಖಾಧಿಕಾರಿಗಳ ಅನುಮಾನವನ್ನು ಮತ್ತಷ್ಟು ಗಟ್ಟಿಗೊಳಿಸಿದೆ.

    ಮಂಗಳೂರು–ಬೆಂಗಳೂರು ಕೊಂಡಿ

    ಈ ಜಾಲಕ್ಕೆ ಮಂಗಳೂರಿನ ವ್ಯಕ್ತಿಯೊಬ್ಬ ಪರಿಚಯ ಮಾಡಿಸಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಶಿಕ್ಷಕಿಯರು ಬೆಂಗಳೂರುಗೆ ನಡೆಸಿದ ಸರಣಿ ಪ್ರವಾಸಗಳು, ಐಷಾರಾಮಿ ಕಾರು ಖರೀದಿ ಮತ್ತು ಹಣದ ಮೂಲ ಕುರಿತು ಎಸ್‌ಐಟಿ ತನಿಖೆಯನ್ನು ತೀವ್ರಗೊಳಿಸಿದೆ.

    ##KeralaDrugsCase #MDMA #DrugNetwork #KozhikodeNews #InstagramDrugs #CrimeNews #IndiaNews

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಶಸ್ತ್ರಚಿಕಿತ್ಸೆಯ ಪಿತಾಮಹ ಮಹಾನ್ ವೈದ್ಯ….ಸುಶ್ರುತನನ್ನ ಜಗತ್ತು ಗೌರವಿಸಿದ ಕ್ಷಣ…ಆಧುನಿಕ ವೈದ್ಯಕೀಯದ ಬೇರುಗಳು ಭಾರತದಲ್ಲೇ…
    ಕುಮಾರಸ್ವಾಮಿ ನೆನೆದ ಗುಬ್ಬಿ ವಾಸು: ಮತ್ತೆ ಜೆಡಿಎಸ್ ಸೇರ್ಪಡೆಗೆ ಮುನ್ನುಡಿಯೇ ಈ ಹೇಳಿಕೆ?
    ಜಾತಿ ನಿಂದನೆಗೆ ಕೋರ್ಟ್ ಹಾಕಿದ ಕಾನೂನು ಸ್ಪಷ್ಟತೆ!?
    ‘ಕಾಕ್ರೋಚ್’ಗಳ ದಂಗೆಗೆ ದೆಹಲಿ ನಡುಗಿತೇ? ವಿದ್ಯಾರ್ಥಿಗಳ ‘ಸಂಸತ್ ಚಲೋ’ಗೆ ಲಾಠಿಚಾರ್ಜ್… ಸಂಸತ್ತಿನಲ್ಲೂ ಸದ್ದು!ಕಲಾಪ ಮುಂದೂಡಿಕೆ?!
    ಡಾನ್ -3 ಸಿನಿಮಾ ಕಥೆ ಗೋವಿಂದ….!
    ತೈಲ ಟ್ಯಾಂಕರ್ ಮೇಲೆ ಇರಾನ್ ಆತ್ಮಹತ್ಯಾ ದೋಣಿ ದಾಳಿ – ಭಾರತೀಯ ನಾವಿಕ ಸಾವು
    ಹೀಟ್ ಸ್ಟ್ರೋಕ್ ಗಂಭೀರ – ನಿರ್ಲಕ್ಷ್ಯ ಬೇಡ …ತಲೆ ಸುತ್ತಿದ್ರೆ ತಕ್ಷಣ ನೆರವು ಪಡೆಯಿರಿ.
    ಅಹಿಂಸೆ, ಸತ್ಯ ಮತ್ತು ತ್ಯಾಗದ ಮಾರ್ಗವೇ ಮಹಾವೀರರ ದರ್ಶನ — ಇದೇ ಸುಖಿ ಜೀವನದ ಗುಟ್ಟು.
    ಬರಾಯಿಪುರ 12 ವರ್ಷದ ಬಾಲಕಿಯ ಅತ್ಯಾಚಾರದ ಕ್ರೌರ್ಯಕ್ಕಿಂತ ಈಗ ಎನ್‌ಕೌಂಟರ್‌ ಚರ್ಚೆಯ ಕೇಂದ್ರ!?ಆರೋಪಿ ಒಟ್ಟಿಗೆ … ಎಲ್ಲಾ ಸತ್ಯವೂ ಸತ್ತಿತೇ?
    ಚುನಾವಣೆಯವರೆಗೆ ಮೌನ, ನಂತರ LPG ದರ ಭಾರಿ ಏರಿಕೆ –ಇದು ರಾಜಕೀಯ ಅಜೆಂಡಾನಾ?
    ಮುದ್ದಾದ ಅವಳಿ ಹೆಣ್ಣು ಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ಅಪ್ಪ
    ರೆಸ್ಯೂಮ್ ಅಲ್ಲ, ಪ್ರಾಜೆಕ್ಟ್ ಮಾತಾಡಿತು! ಒಂದೇ ವರ್ಷದಲ್ಲಿ ₹10 ಲಕ್ಷ ಸಂಬಳದಿಂದ ₹80 LPA ಗಳಿಸಿದ ಯುವತಿಯ ಯಶಸ್ಸಿನ ಸೂತ್ರ ವೈರಲ್..!!
    ಮಸೀದಿ ಹುಂಡಿಗೂ ಲಗ್ಗೆ ಇಟ್ಟ ಕಳ್ಳರು….!
    KGF, ಕಾಂತಾರ ಬ್ಯಾನರ್‌ನಲ್ಲಿ ಕಾಲಿವುಡ್ ‘ಜೈ ಭೀಮ್’..!ಹೊಂಬಾಳೆ ಜೊತೆ ಕೈಜೋಡಿಸಿದ ಸೂರ್ಯ, ಬಾಕ್ಸ್ ಆಫೀಸ್ ಧೂಳೀಪಟ ಖಚಿತ!
    ಶಾಲೆಗಳ ದುಸ್ಥಿತಿ ತೋರಿಸಲು CJP ಸಜ್ಜು; ‘ಹೊರಗಿನವರಿಗೆ ನೋ ಎಂಟ್ರಿ’ ಎಂದ ರಾಜಸ್ಥಾನ ಸರ್ಕಾರ!
    ಕರ್ನಾಟಕದಲ್ಲೇ ಮೊದಲು-ಕಿಚ್ಚ ಸುದೀಪ್ ಕೈಯಿಂದ ಗ್ರಾಂಡ್ ಓಪನಿಂಗ್!₹130 ಕೋಟಿ ವೆಚ್ಚದ ವಿಶ್ವದರ್ಜೆಯ ‘MR-Linac’ ತಂತ್ರಜ್ಞಾನ ಹೈಟೆಕ್ ಕ್ಯಾನ್ಸರ್ ಆಸ್ಪತ್ರೆ!
    ಭರತ್ ತಿವಾರಿ ಎನ್‌ಕೌಂಟರ್ -ಬಿಹಾರ ಎಡಿಜಿಪಿಯಿಂದಲೇ ಪೊಲೀಸ್ ಲೋಪದ ಒಪ್ಪಿಗೆ: ಶಾಹಪುರ SHO ಸೇರಿ 5 ಅಧಿಕಾರಿಗಳು ಸಸ್ಪೆಂಡ್!
    ಜನಗಣತಿ 2026–27 – Self Enumeration ಮುಗಿದು ಈಗ ಮನೆ ಮನೆ ಭೇಟಿ ಹಂತ ಆರಂಭ!ನಮ್ಮ ಮಾಹಿತಿ = ನಮ್ಮ ದೇಶದ ಬೆಳವಣಿಗೆ…
    ಹತ್ತು ವರ್ಷದಿಂದ ಪೊಲೀಸರಿಗೆ ಬೇಕಾದ ಆರೋಪಿಯನ್ನು ಕೊನೆಗೂ ಬಂಧಿಸಿದ ಪೊಲೀಸರು
    ಮೂಡಬಿದ್ರಿ ಪುರಸಭೆಯ ಬೇಜವಾಬ್ದಾರಿ ಹಾಗೂ ವೇಸ್ಟ್ ಆಗುತ್ತಿರುವ ನೀರು
    ಎಚ್ಚರ… ನಿಮ್ಮಸುತ್ತಮುತ್ತ ಏನು ನಡೆಯುತ್ತಿದೆ ಗೊತ್ತಿರಲಿ! 🚨Be Aware… Stay Alert… Save Youth!
    ಅಂಡಮಾನ್ boat ದುರಂತ-250 ಕ್ಕೂ ಹೆಚ್ಚು ಮಂದಿ ಕಾಣೆ..
    Tesla Experience Centre ಬೆಂಗಳೂರು ಈಗ EV ಕ್ರೇಜ್ ಹಬ್!car craze ಇರುವವರು ಮುಗಿಬೀಳುತ್ತಿದ್ದಾರೆ..
    ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ
    ಡೊನಾಲ್ಡ್ ಟ್ರoಪ್ ಮುಂದೆ ಮಂಡಿಯೂರಿ ಕೂತ ಜಗತ್ತು!
    ದ್ವಿತೀಯ ಪಿ.ಯು.ಸಿ ಪರೀಕ್ಷಾ ಹಾಜರಾತಿ
    ಐಪಿಎಲ್ ಇತಿಹಾಸದಲ್ಲೇ ಸುಮಾರು ₹230 ಕೋಟಿಗೂ ಅಧಿಕ ಒಟ್ಟು ಸಂಭಾವನೆ ಪಡೆದ ಆಟಗಾರನಾಗಿ ಕೊಹ್ಲಿ ದಾಖಲೆ…ಯ ಹಿಂದಿರುವ ಅಸಲಿ ಕಥೆ…!
    ಗ್ಯಾಸ್ ಸೋರಿಕೆ ಎಷ್ಟು ಅಪಾಯಕಾರಿ? ಕ್ಷಣದ ನಿರ್ಲಕ್ಷ್ಯ ಮನೆ ಸುಟ್ಟು, ಶೇ.60 ಸುಟ್ಟ ಗಾಯಾಳುವಿಗೆ ಶಾಸಕ ಭರತ್ ಶೆಟ್ಟಿ ನೆರವಿನ ಭರವಸೆ..
    ಸೌಜನ್ಯಾ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಶಾಕ್; ಸುಪ್ರೀಂ ಕೋರ್ಟ್ ಮಹತ್ವದ ಆದೇಶ
    ಪಡ್ಡೆ ರೌಡಿಗಳ ಅಟ್ಟಹಾಸಕ್ಕೆ ಕಡಿವಾಣ ಬೀಳುವುದು ಯಾವಾಗ ಗ್ರಹಸಚಿವರೆ?