📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ‘ಪೊಲೀಸರಿಗೆ ದೂರು ಕೊಡ್ತೀಯಾ?’… ಗಾಂಜಾ ವ್ಯಸನಕ್ಕೆ ಸೈಜು ಕಲ್ಲಿನಿಂದ ಅಜ್ಜಿಯ ತಲೆ ಪುಡಿ ಮಾಡಿದ ಮೊಮ್ಮಗ!ಅಜ್ಜಿಯೇ ಬಲಿ!

    ಶಿವಮೊಗ್ಗದಲ್ಲಿ ಬೆಚ್ಚಿಬೀಳಿಸಿದ ದುರಂತ:ಗಾಂಜಾ ವಿರುದ್ಧ ದೂರು ನೀಡಲು ಹೊರಟಿದ್ದ ಅಜ್ಜಿಯನ್ನು ಸೈಜುಕಲ್ಲಿನಿಂದ ಹೊಡೆದು ಕೊಂದ ಮೊಮ್ಮಗ

    ಶಿವಮೊಗ್ಗ ನಗರದ ಮಿಳಘಟ್ಟ ವಾರ್ಡಿನ ಆನಂದರಾವ್ ಬಡಾವಣೆಯಲ್ಲಿ ಬುಧವಾರ ಸಂಜೆ ಮನಕಲಕುವ ಹಾಗೂ ಭೀಕರ ಘಟನೆ ನಡೆದಿದ್ದು, ಗಾಂಜಾ ವ್ಯಸನದ ವಿರುದ್ಧ ಪೊಲೀಸರಿಗೆ ದೂರು ನೀಡಲು ಹೊರಟಿದ್ದ ವೃದ್ಧೆಯನ್ನು ಆಕೆಯ ಮೊಮ್ಮಗನೇ ಸೈಜುಕಲ್ಲಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.

    ಆನಂದರಾವ್ ಬಡಾವಣೆಯ ತಖ್ವಾ ಮಸೀದಿ ಸಮೀಪದ ರಸ್ತೆಯಲ್ಲಿ ಈ ಕೃತ್ಯ ನಡೆದಿದ್ದು, ಆರೋಪಿಯನ್ನು ಕಿಶೋರ್ ಎಂದು ಗುರುತಿಸಲಾಗಿದೆ.

    ಮಾಹಿತಿಯ ಪ್ರಕಾರ, ಕಿಶೋರ್ ಗಾಂಜಾ ವ್ಯಸನಕ್ಕೆ ಒಳಗಾಗಿದ್ದ ಎನ್ನಲಾಗಿದ್ದು, ಈ ಕುರಿತು ಆತನ ಅಜ್ಜಿ ಹಲವು ಬಾರಿ ದೊಡ್ಡಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬುಧವಾರ ಸಂಜೆ ಕೂಡ ದೂರು ನೀಡಲು ಮನೆಯಿಂದ ಹೊರಟಿದ್ದ ವೇಳೆ, ಮೊಮ್ಮಗ ಆಕೆಯನ್ನು ತಡೆದು ಹಲ್ಲೆ ನಡೆಸಿದ್ದಾನೆ. ತಳ್ಳಿದ ಪರಿಣಾಮ ವೃದ್ಧೆ ಕೆಳಗೆ ಬಿದ್ದಿದ್ದು, ಬಳಿಕ ಸೈಜುಕಲ್ಲು ಎತ್ತಿ ತಲೆಯ ಮೇಲೆ ಬಡಿದು ಭೀಕರವಾಗಿ ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

    ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದು, ದೊಡ್ಡಪೇಟೆ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲು ಕ್ರಮ ಕೈಗೊಳ್ಳಲಾಗಿದೆ.

    ಸ್ಥಳೀಯರ ಪ್ರಕಾರ, ಮಿಳಘಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗಾಂಜಾ ಮಾರಾಟ ಮತ್ತು ವ್ಯಸನದ ಹಾವಳಿ ಹೆಚ್ಚುತ್ತಿರುವ ಬಗ್ಗೆ ಈ ಹಿಂದೆಯೇ ಪೊಲೀಸ್ ಇಲಾಖೆಗೆ ಹಲವು ಬಾರಿ ದೂರು ಹಾಗೂ ಮನವಿ ಸಲ್ಲಿಸಲಾಗಿತ್ತು. ಆದರೂ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗದ ಹಿನ್ನೆಲೆಯಲ್ಲಿ ಇದೀಗ ಅಮಾಯಕ ವೃದ್ಧೆಯೊಬ್ಬರು ಜೀವ ಕಳೆದುಕೊಂಡಿರುವುದು ಸಾರ್ವಜನಿಕರಲ್ಲಿ ತೀವ್ರ ಆತಂಕ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ.

    ಈ ಘಟನೆ ಶಿವಮೊಗ್ಗ ನಗರದಲ್ಲಿ ಮಾದಕ ವಸ್ತುಗಳ ಹಾವಳಿ ಎಷ್ಟರ ಮಟ್ಟಿಗೆ ಅಪಾಯಕಾರಿ ರೂಪ ಪಡೆದುಕೊಂಡಿದೆ ಎಂಬುದನ್ನು ಮತ್ತೊಮ್ಮೆ ಎತ್ತಿ ತೋರಿಸಿದ್ದು, ಗಾಂಜಾ ಜಾಲದ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಪ.ಪಂ ಮುಖ್ಯಾಧಿಕಾರಿ – 1 ಲಕ್ಷ ಲಂಚ ಸ್ವೀಕಾರದ ವೇಳೆ ರೆಡ್ ಹ್ಯಾಂಡ್!
    ಇನ್ಮುಂದೆ ಏರ್‌ಪೋರ್ಟ್‌ನಲ್ಲಿ ಇಷ್ಟ ಬಂದಂತೆ ವಿಡಿಯೋ ಮಾಡುವಂತಿಲ್ಲ! ಇನ್ಸ್ಟಾರೀಲ್ಸ್, ವಿಡಿಯೋ ಮಾಡಿದರೆ ‘ನೋ-ಫ್ಲೈ ಲಿಸ್ಟ್’ ಸೇರುವ ಮುನ್ನೆಚ್ಚರಿಕೆ ನೀಡಿದ DGCA! ಲೇಟೆಸ್ಟ್ ಅಪ್ಡೇಟ್ ಹೊಸ ರೂಲ್ಸ್ ಇಲ್ಲಿದೆ.. ಓದಿ..
    ಇಂದು ಮಾಜಿ ಸಚಿವರಿಂದ ಸೌಹಾರ್ದ ಇಫ್ತಾರ್ ಕೂಟ 
    ಪಂಜಿಮೊಗರುವಿನಲ್ಲಿ ಹೆಂಡತಿಯ ಅಕ್ರಮ ಸಂಬಂಧಕ್ಕೆ, ಗಂಡ ಫಿನಿಶ್!
    ಬುಡಕಟ್ಟು ಹೆಣ್ಣುಮಕ್ಕಳ ಬದುಕು ಬದಲಿಸಿದ ಗಾರ್ಗಿ ಜೈನ್ ‘ಮೇಡಂ ಕಲೆಕ್ಟರ್’ನಿಂದ ‘ಕಲೆಕ್ಟರ್ ದೀದಿ’ವರೆಗೆ…
    ವಿಷ ಸೇವನೆ ಸ್ವಯಂ ಆಗಿತ್ತೇ ಅಥವಾ ಪ್ರಚೋದನೆ ಕಾರಣವೇ ….?!
    ಮಕ್ಕಳ ಕೈಯಿಂದ ಮೊಬೈಲ್ ಕಸಿಯಲು ಮುಂದಾದ ಬ್ರಿಟನ್!ಯುಕೆಯ ನಿರ್ಧಾರಕ್ಕೆ ವಿಶ್ವದ ಗಮನ…
    ED ₹2,178 ಕೋಟಿ ಆಸ್ತಿ ಜಪ್ತಿ ನಿರವ್ ಮೋದಿ–ವಿಜಯ್ ಮಲ್ಯ ಸೇರಿ 21 ಜನರ ಆರ್ಥಿಕ ಅಪರಾಧಿಗಳ ವಿರುದ್ಧ ದೊಡ್ಡ ಮಟ್ಟದ ಕ್ರಮ
    ಶಿಕ್ಷಣದ ಹೆಸರಿನಲ್ಲಿ ಡ್ರಗ್ ವ್ಯವಹಾರ! ಬೆಚ್ಚಿಬಿದ್ದ ಮಂಗಳೂರು…
    ಬೆಳ್ತಂಗಡಿ: 16ರ ಹರೆಯದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ್ದ ಆಟೋ ಚಾಲಕ ಅಂದರ್!
    ಹೆಡ್‌ಲೈಟ್ ಇಲ್ಲ… ಮೊಬೈಲ್ ಟಾರ್ಚ್‌ನಲ್ಲೇ ಓಡಿದ ಸರ್ಕಾರಿ ಬಸ್!
    ನೇಪಾಳ ಪ್ರವಾಹ: ಪ್ರಧಾನಿ ನರೇಂದ್ರ ಮೋದಿಯವರಿಂದ ಸಂತಾಪ- ನೇಪಾಳ ಪ್ರಧಾನಿಗೆ ಸಹಕಾರದ ಭರವಸೆ
    ಅಕ್ರಮ ಮರಳುಗಾರಿಕೆ, ಕ್ರಮ ಕೈಗೊಂಡ ವೇಣೂರು ಪೊಲೀಸರು
    ಮೂಡಬಿದಿರೆ ಇನ್‌ಸ್ಪೆಕ್ಟರ್ ಪ್ರಕರಣಕ್ಕೆ ಟ್ವಿಸ್ಟ್: ಆರೋಪ ಮಾಡಿದ ಮಹಿಳೆಯ ವಿರುದ್ಧವೇ ಸಹೋದರಿಯ ಬಾಂಬ್!
    ಅಕ್ರಮ ಕಸಾಯಿ ಖಾನೆಗೆ ದಾಳಿ ಇಬ್ಬರನ್ನು ಬಂಧಿಸಿದ ಬಂಟ್ವಾಳದ ಪೊಲೀಸರು
    ವಿಟ್ಲ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಚೇರಿಯಲ್ಲಿ ಗಲಾಟೆ:
    ಇಸ್ರೇಲ್ ಸ್ಥಿತಿ ಶೋಚನೀಯ ಸೈನ್ಯದಲ್ಲೇ ಅಸಮಾಧಾನ
    ಒಂಟಿ – ಆಂಟಿಯರ ನಂಬಿಕೆ ಗಳಿಸಿ ಕೊಲೆಗೈಯುತ್ತಿದ್ದ ಸೀರಿಯಲ್ ಕಿಲ್ಲರ್ ಬಂಧನ …!
    ಎಚ್ಚರ… ನಿಮ್ಮಸುತ್ತಮುತ್ತ ಏನು ನಡೆಯುತ್ತಿದೆ ಗೊತ್ತಿರಲಿ! 🚨Be Aware… Stay Alert… Save Youth!
    ಆನ್ ಲೈನ್ ವಂಚನೆ ಶಿರ್ವದ ಯುವತಿಗೆ ಲಕ್ಷ ಲಕ್ಷ ಉಂಡೆನಾಮ… ಬ್ಯಾಂಕ್ ನಿಯಮ ವಂಚಕರಿಗೆ  ಸಹಕಾರಿ?
    ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಸಿಂಗ್‌ಗೆ ದೆಹಲಿ ಕೋರ್ಟ್‌ನಿಂದ ಖುಲಾಸೆ
    ಮಂಗಳೂರು ಶಾಕ್ ! ನೇತ್ರಾವತಿ ತೀರದ ನದಿಯಲ್ಲಿ ತೇಲಿ ಬಂದ ರಾಶಿ ರಾಶಿ ಆಧಾರ್ ಕಾರ್ಡ್‌ಗಳು !!!ಹೊಣೆ ಯಾರು?
    ಹೋಟೆಲ್ ಉದ್ಯಮ ಉಳಿಸಲು ಜಿಎಸ್‌ಟಿ ಕಡಿತ ಅಗತ್ಯ-ಕರ್ನಾಟಕ ಹೋಟೆಲ್ ಸಂಘದ ಆಗ್ರಹ
    ಕೂದಲೆಳೆ ಅಂತರದಲ್ಲಿ ಪಾರಾದ ಗುಜರಾತ್ ಟೈಟಾನ್ಸ್!ಕ್ಷಣಾರ್ಧ ತಡವಾಗಿದ್ದರೂ ಸಂಭವಿಸುತ್ತಿತ್ತು ಘೋರ ಅಗ್ನಿ ದುರಂತ!
    30 ವರ್ಷದ ಕನಸು ಸಾಕಾರ: ಮಾಣಿಲ–ಪೆರ್ಲ ಸಂಪರ್ಕಕ್ಕೆ ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್!
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ
    ತಾಯಿಯನ್ನೇ ಮದುವೆಗೆ ಆಹ್ವಾನಿಸದ ಕಾರಣಕ್ಕೆ ಉದ್ಯೋಗ ಕಳೆದುಕೊಂಡ ಯುವಕ…!
    ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು ಪತ್ತೆ – ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
    ಅರೆ ವಾ..! ಕರ್ನಾಟಕದ ಜನರಿಗೆ ಫ್ಯಾನ್ಸಿ ನಂಬರ್‌ಗಳೇ ಫೇವರಿಟ್…RTOಗೆ ₹118 ಕೋಟಿ ಆದಾಯ!
    ಪ್ರಜ್ವಲ್ ರೇವಣ್ಣ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಕ್ಷಿಗೆ ಬೆದರಿಕೆ ಕರೆ!