📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಶೃಂಗೇರಿ ವಿಧಾನಸಭೆಯ ಮರುಕೌಂಟಿಂಗ್ ನಲ್ಲಿ ನಡೆದ ಲಪಡಾಗಳೇನು?

ಈ ಗೊಂದಲಕ್ಕೆ ನೇರಾನೇರವಾಗಿ ಚುನಾವಣಾ ಅಧಿಕಾರಿಗಳೇ ಹೊಣೆಯಾಗುತ್ತಾರೆ. ಟಿ ರಾಜೇಗೌಡ 200ರಷ್ಟು ಕಡಿಮೆ ಮತಗಳ  ಅಂತರದಿಂದ ಗೆದ್ದಿದ್ದರೆ ಎನ್ನುವುದು ಅವತ್ತಿನ ಚುನಾವಣಾ ಅಧಿಕಾರಿಗಳ ಘೋಷಣೆಯಾಗಿತ್ತು. ಇದನ್ನು ಪ್ರಶ್ನಿಸಿ ಪ್ರತಿಸ್ಪರ್ಧಿ ಮಾಜಿ ಶಾಸಕ ಜೀವರಾಜ್ ನ್ಯಾಯಾಲಯದ ಮೆಟ್ಟಿಲು ಏರಿದ್ದರು. ನ್ಯಾಯಾಲಯವು ಮೂರು ವರ್ಷದ ನಂತರ ಮರು ಎಣಿಕೆ ಮಾಡಲು ಆದೇಶ ನೀಡಿತು. ಆ ಆದೇಶದ ಪ್ರಕಾರ, ನಡೆದ ಕೌಂಟಿಂಗ್ನಲ್ಲಿ ಎಲ್ಲವೂ ಅಯೋಮಯ. ಹಾಗಾದ್ರೆ ದೇಶದ ಎಲ್ಲಾ ಕ್ಷೇತ್ರದಲ್ಲೂ ಇದೇ ರೀತಿಯ ಎಡವಟ್ಟುಗಳು ನಡೆದಿರಬಹುದು ಅಂತ ಊಹಿಸಬೇಕೇ?

ಆವತ್ತು ಅಂದರೆ ಮೂರು ವರ್ಷದ ಹಿಂದೆ, ಚುನಾವಣೆಯ ಕೌಂಟಿಂಗ್ ಮುಗಿದ ತಕ್ಷಣ, ಗೆದ್ದ ಹಾಗೂ ಸೋತ ಅಭ್ಯರ್ಥಿಗಳ ಪರವಾಗಿ ಅಲ್ಲಿ ಉಪಸ್ಥಿತರಿದ್ದ ಎಲೆಕ್ಷನ್ ಏಜೆಂಟ್ ರ ಸಹಿ ಪಡೆದೆಯಲಾಗುತ್ತದೆ. ಅವರ ಸಮ್ಮುಖದಲ್ಲೇ ಅವೆಲ್ಲಾ ಕೌಂಟಿಂಗ್ ನಡೆದಿರುತ್ತದೆ. ಹಾಗೆಯೇ  ಆ ಏಜೆಂಟರುಗಳ ಸಹಿಯನ್ನು  ಪಡೆಯಲಾಗಿರುತ್ತದೆ. ಒಂದೊಮ್ಮೆ ಸರಿಯಾದ ಎಣಿಕೆ ನಡೆದಿಲ್ಲ ಎಂದರೆ, ಆ ಏಜೆಂಟರುಗಳಿಗೆ ಸಹಿ ಹಾಕದೆ ಪ್ರತಿಭಟಿಸುವ ಅವಕಾಶವಿತ್ತು. ಆವತ್ತು, ಅದ್ಯಾವುದು ಆಗದ ಕಾರಣ, ಚುನಾವಣಾ ಅಧಿಕಾರಿಗಳು ರಾಜೇಗೌಡರನ್ನು ಗೆದ್ದ ಅಭ್ಯರ್ಥಿಯೆಂದು ಘೋಷಿಸಿದ್ದರು.

ಇವತ್ತು, ಮರು ಎಣಿಕೆಯ ನಂತರ ಗೊಂದಲಗಳಾಗಿದೆ, ರಾಜೇಗೌಡರಿಗೆ ಬಿದ್ದ ಮತಗಳಲ್ಲಿ ದೊಡ್ಡ ಪ್ರಮಾಣದಲ್ಲೇ ಅಸಿಂಧು ಮತಗಳೆಂದು ತಳ್ಳಲ್ಪಡುತ್ತದೆ. ಹಾಗಿದ್ದರೆ ಆವತ್ತು,  ಅಸಿಂದು ಮತವನ್ನು ಯಾಕೆ ಸಿಂಧೂ ಮಾಡಿದ್ದರು? ಆ ಅಸಿಂಧು ಮತಗಳನ್ನು ಸಿಂಧೂ ಮಾಡಲು ಜೀವರಾಜ್ಪರ   ಇದ್ದ ಏಜೆಂಟರು ಏಕೆ ಅವಕಾಶ ಕೊಟ್ಟಿದ್ದರು? ಈ ಎರಡೂ ಪ್ರಶ್ನೆ ಮುಖ್ಯವಾಗುತ್ತದೆ. ಜೀವರಾಜ ಗೆಲ್ಲಲಿ ಅಥವಾ ರಾಜೇಗೌಡ ಗೆಲ್ಲಲಿ ನಮಗೆ ಇಲ್ಲಿ ಅದು ಮುಖ್ಯವೇ ಅಲ್ಲ. ಆದರೆ ಜನರ ಮತಕ್ಕೆ ನ್ಯಾಯ ದೊರಕಬೇಕು. ಜನರ ತೀರ್ಪು ಯಾಸಿಟೀಸ್ ಬಹಿರಂಗವಾಗಬೇಕು. ಆದರೆ ಅವತ್ತು ಬಂದ ಮತದ ಲೆಕ್ಕ ಬೇರೆ, ಇವತ್ತು ಬಂದ ಮತದ ಲೆಕ್ಕವೆ ಬೇರೆ

ಆದರೆ ಅದನ್ನು ನಾವು ಏನನ್ನಬೇಕು? ಅಧಿಕಾರಿಗಳು ಇಲ್ಲಿ ತಪ್ಪು ಮಾಡಿದ್ದಾರೆ ಎನ್ನಬೇಕಾಗುತ್ತದೆ? ಅಧಿಕಾರಿಗಳು, ಆವತ್ತು ತಪ್ಪು ಮಾಡಿದ್ದರೋ ಅಥವಾ ಇವತ್ತು ತಪ್ಪು ಮಾಡಿದ್ದಾರೋ?

ಕೇವಲ ಖಡಕ್ ನಿರ್ಧಾರ ಪತ್ರಿಕೆಯಲ್ಲಿದ್ದರೆ ಸಾಲದು, ಇಲಾಖೆಯ ಅಧಿಕಾರಿಗಳು, ತಪ್ಪು ಮಾಡಿದಾಗ ಅವರ ಮೇಲೆ ಯಾವ ರೀತಿಯ ಕಠಿಣ ಕ್ರಮ ತೆಗೆದುಕೊಂಡಿದ್ದೀರಿ ಅನ್ನುವುದು ಸಾರ್ವಜನಿಕರಿಗೆ ಗೊತ್ತಾಗಬೇಕು, ಅವತ್ತಿನ ಚುನಾವಣೆಯ ರಿಸಲ್ಟ್ ಬೇರೆ ಇವತ್ತಿನ ಚುನಾವಣೆಯ ರಿಸಲ್ಟ್ ಬೇರೆ ಆಗಿದ್ದಾರೆ, ಅಧಿಕಾರಿಗಳತಪ್ಪು ಅಲ್ಲಿ ಇದೆ ಅಂತಾಯ್ತು. ಹಾಗಿರುವಾಗ ಆ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಆಗಲೇಬೇಕು ತಾನೆ? ಜನರ ಆದೇಶವನ್ನು ಅವರು ಬದಲಾಯಿಸಿದ್ದಾರೆ ಅಂತನ್ನಿಸಿಕೊಳ್ಳುವುದಿಲ್ಲವೇ? ಜನರ ಆದೇಶವನ್ನೇ ಬದಲಿಸುವಷ್ಟು ಈ ಅಧಿಕಾರಿಗಳು ಹೆಚ್ಚು ಕೊಂಡಿದ್ದಾರೆ ಎಂದರೆ, ಅವರನ್ನು ಸುಮ್ಮನೆ ಬಿಡುವುದು ತಪ್ಪಾಗುತ್ತದೆ ಜನದ್ರೋಹವಾಗುತ್ತದೆ. ಈಗ, ಮಾತನ್ನು ಕೇಳಬೇಕಂತಿಲ್ಲ ಸ್ವತಹ ನ್ಯಾಯಾಲಯವೇ ಅಧಿಕಾರಿಗಳ ಮೇಲೆ ಜನದ್ರೋಹ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಆದೇಶಿಸಬೇಕು. ಹಾಗೆಯೇ ಆ ತಪ್ಪಿತಸ್ಥರ ಮೇಲೆ ಆಗಬೇಕು. ಹೀಗಾದಾಗ ಇನ್ನೆಲ್ಲೋ ಜನರ ಮತವನ್ನು ತಿರುಗಿಸುವುದಕ್ಕೆ ಯಾರೂ ಹೋಗುವುದಿಲ್ಲ. ಜನರ ಮತಕ್ಕೆ ಇನ್ನೂ ಒಂದಿಷ್ಟು ಬಲ ಬರುತ್ತದೆ. ಕೆಲಸವಾಗದಿದ್ದರೆ ಪ್ರಜಾಪ್ರಭುತ್ವದ ಉಳಿವಿಗಾಗಿ ಪ್ರಜಾಪ್ರಭುತ್ವವಾದಿಗಳು ಅಂತ ಎನಿಸಿಕೊಂಡವರು ಈ ಬಗ್ಗೆ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಅಷ್ಟೇ. ಎಲ್ಲಕ್ಕೂ ಹೆಚ್ಚಾಗಿ ನ್ಯಾಯಾಂಗದ ಜವಾಬ್ದಾರಿ ಇಲ್ಲಿ ಅತ್ಯಂತ ಮಹತ್ವದ್ದು. ತನ್ನ ಜವಾಬ್ದಾರಿಯನ್ನು ನ್ಯಾಯಾಂಗ ನಿಭಾಯಿಸುತ್ತದೆ ಎನ್ನುವ ನಂಬಿಕೆಯನ್ನು ಶೃಂಗೇರಿ ವಿಧಾನಸಭಾ ಕ್ಷೇತ್ರದ ನಾಗರಿಕರು ವ್ಯಕ್ತಪಡಿಸುತ್ತಿದ್ದಾರೆ. ನ್ಯಾಯಾಂಗವು ತನ್ನ ಜವಾಬ್ದಾರಿಯನ್ನು ನಿಭಾಯಿಸುತ್ತದೆ, ಈ ಕಾರಣಕ್ಕಾಗಿ ಜನರು ಹೋರಾಟಕ್ಕೆ ಇಳಿಯದಂತೆ ನೋಡಿಕೊಳ್ಳಬಹುದು ಎಂಬುದು ಕ್ಷೇತ್ರದ ಜನರ ನಂಬಿಕೆಯಾಗಿದೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

🚨 BREAKING: ಬಿಜೆಪಿಯಿಂದ ಅಣ್ಣಾಮಲೈ ಔಟ್?!…ರಾತ್ರೋರಾತ್ರಿ ರಾರಾಜಿಸಿದ ಬಂಡಾಯದ ಪೋಸ್ಟರ್‌ಗಳು! 
ಧುರಂಧರ್ 2 ಕ್ರೇಜ್ ಓವರ್‌ಫ್ಲೋ ಕಲೆಕ್ಷನ್‌ನಲ್ಲಿಕರ್ನಾಟಕವೇ ಟಾಪ್… ದಕ್ಷಿಣ ಭಾರತದಲ್ಲಿ 300 ಕೋಟಿ ಕ್ಲಬ್!
ಸಂಕಷ್ಟದಲ್ಲಿರುವ ರಾಜ್ಯದ ಜನತೆಗೆ ಬರೆ ಹಾಕಿದ ರಾಜ್ಯ ಸರ್ಕಾರ!
ಅರ್ಧ ಸಂಬಳ ಸಾಕು ಮತ್ತು VIP ಸೌಲಭ್ಯಕ್ಕೆ ‘ನೋ’ ಎಂದ ನ್ಯಾಯಾಧೀಶ!
ಮಂಗಳೂರು -ವೆನ್ಲಾಕ್ ಮಾಸ್ಟರ್ ಪ್ಲ್ಯಾನ್…!
ಸಂಸತ್ ವಿಶೇಷ ಅಧಿವೇಶನ: ಮಹಿಳಾ ಮೀಸಲಾತಿಗೆ ಒಗ್ಗಟ್ಟು, ಡಿಲಿಮಿಟೇಶನ್ ಮೇಲೆ ಭಾರಿ ವಿವಾದ – ಕರ್ನಾಟಕಕ್ಕೂ ಪರಿಣಾಮದ ಚರ್ಚೆ 🔥
ಎಚ್ಚರ… ನಿಮ್ಮಸುತ್ತಮುತ್ತ ಏನು ನಡೆಯುತ್ತಿದೆ ಗೊತ್ತಿರಲಿ! 🚨Be Aware… Stay Alert… Save Youth!
ಉಡುಪಿ ಜಿಲ್ಲಾಆಸ್ಪತ್ರೆಯಲ್ಲಿ ಹಗರಣ, ತಾರತಮ್ಯದ ಆರೋಪ: ವೀಣಾದೇವಿ ವಿರುದ್ಧದಕ್ರಮ ಕಣ್ಣೊರೆಸುವ ತಂತ್ರ
ಚಿನ್ನ ಖರೀದಿಸುವ ಕಾಲ ಹೋಯ್ತಾ? ಗಗನಕ್ಕೇರಿದ ದರ ಕೇಳಿ ಬೆಚ್ಚಿಬಿದ್ದ ಜನ!ಒಂದೂವರೆ ಲಕ್ಷ ರೂಪಾಯಿ ಗಡಿದಾಟಿತಾ …?ಬೆಳ್ಳಿಎರಡೇ ದಿನದಲ್ಲಿ ಆರು ಸಾವಿರ ಏರಿಕೆ
ಉಡುಪಿ ಮಹಿಳೆಗೆ ಮುಂಬೈನಲ್ಲಿ ಕಂಬಿ! ₹3.10 ಕೋಟಿ ವಂಚನೆ ಉಡುಪಿ ಮೂಲದ ಮಹಿಳೆ ಅರೆಸ್ಟ್!
ಬೆಳಗ್ಗೆಯೇ ಲೋಕಾಯುಕ್ತ ಬಿಗ್ ಬ್ಲಾಸ್ಟ್!54 ಕಡೆ ಏಕಕಾಲದಲ್ಲಿ ರೇಡ್… ಚಿನ್ನ, ನಗದು, ಮನೆ, ಜಮೀನುಗಳ ಮಹಾಪರ್ವತ ಪತ್ತೆ!
ಭರತ್ ತಿವಾರಿ ಎನ್‌ಕೌಂಟರ್ -ಬಿಹಾರ ಎಡಿಜಿಪಿಯಿಂದಲೇ ಪೊಲೀಸ್ ಲೋಪದ ಒಪ್ಪಿಗೆ: ಶಾಹಪುರ SHO ಸೇರಿ 5 ಅಧಿಕಾರಿಗಳು ಸಸ್ಪೆಂಡ್!
ಹೀಟ್ ಸ್ಟ್ರೋಕ್ ಗಂಭೀರ – ನಿರ್ಲಕ್ಷ್ಯ ಬೇಡ …ತಲೆ ಸುತ್ತಿದ್ರೆ ತಕ್ಷಣ ನೆರವು ಪಡೆಯಿರಿ.
ಹತ್ತು ವರ್ಷದ ಮಗಳ ಹುಟ್ಟುಹಬ್ಬದ ಸಂಭ್ರಮ…  ವಿಧಿಯಾಟದಲ್ಲಿ ಕಣ್ಣೀರಾಗಿ ಮಾರ್ಪಟ್ಟ ದುರಂತ ಕಥೆ
ಹವ್ಯಕ ಭಾಷಾ ಅಕಾಡೆಮಿ ಅಸ್ತಿತ್ವಕ್ಕೆ ಗ್ರೀನ್ ಸಿಗ್ನಲ್ 
ಟೂರಿಸಂ ಡೆವಲಪ್‌ಮೆಂಟ್‌ಗೆ ಅಧಿಕಾರಿಗಳೇ ಮಾರಕ
ನಾಲ್ಕು ದಶಕಗಳ ಕಾಲ ರೋಗಿಗಳಿಗೆ ಜೀವ ನೀಡಿದ ವೈದ್ಯನೇ ಇಂದು ಯಾಕೆ ತನ್ನ ಜೀವ ತಾನೇ ತೆಗೆದುಕೊಂಡರು …
🚨 “ಮಂಗಳೂರು ಜಿಲ್ಲಾಕಾರಾಗೃಹದಲ್ಲಿ ಗಲಾಟೆ: ಜೈಲು ಅಧೀಕ್ಷಕರ ಮೇಲೆಯೇ ಕೈದಿಗಳ ಹಲ್ಲೆಯತ್ನ!”
ಡೇಟಾದಲ್ಲಿ ಸತ್ತಿದ್ದಾರೆ: ಬಡ ಮಹಿಳೆ ತಾನು ಜೀವಂತ ಸಾಬೀತುಪಡಿಸಲು ಹರಸಾಹಸ…ಬಡಜನರು “ಡೇಟಾ” ಅಲ್ಲ — ಅವರು ಜೀವಂತ ಮಾನವರು. 
ಮೂಡಬಿದ್ರೆ ಪೊಲೀಸ್ ಅಧಿಕಾರಿಯ ಮಾನ ಹರಾಜಿಗೆ ನಿಂತವರು ಯಾರು?
ದಿಲ್ಲಿಯಲ್ಲಿ ವಾಗ್ದಾಳಿ.. ಗಲ್ಲಿಯಲ್ಲಿ ಒಪ್ಪಂದ?! ದೇಶದ ಅತ್ಯಂತ ಕಾಂಟ್ರವರ್ಸಿಯಲ್ ಬಿಡ್ ತೆರೆಮರೆಯಲ್ಲಿ ನಡೆದ ಆ ಒಂದು ನಡೆ ಕಾಂಗ್ರೆಸ್ ಸರ್ಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದ್ದು ಯಾಕೆ?!
ನದಿಯಲ್ಲ ರಸ್ತೆ..!ಕೈಕಂಬದ ಕಂದಾವರದ ಈ ರಸ್ತೆ ಕೆರೆಯಾಗಿ ನೀರಿನಲ್ಲಿ ಮುಳುಗಿದೆ!ಶಾಲಾ ಮಕ್ಕಳಿಂದ ವೃದ್ಧರವರೆಗೆ ಎಲ್ಲರಿಗೂ ಜೀವಭಯ!
ರಾಕಿಂಗ್ ಸ್ಟಾರ್ ಯಶ್ ‘ಟಾಕ್ಸಿಕ್’ ಸಿನಿಮಾ ಅಪ್ಡೇಟ್: ಸೋಶಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸ್ತಿರೋ ಯಶ್ ಡೈಲಾಗ್!
“ಮಂಜಿನ ನಡುವೆ ಕ್ಷಣಾರ್ಧದಲ್ಲಿ ಮಾಯವಾದ ಮಗಳು”ಶ್ರೀನಂದಾ ಶವವಾಗಿ ಪತ್ತೆ…!
ಕೇವಲ “Aunty” ಅಂತ ಅಂದಿದಕ್ಕೆ 2 ಲಕ್ಷ ದಂಡ…!
420 ವಂಚನೆ ಪ್ರಕರಣದಲ್ಲಿ ಮಹಿಳೆಯ ಬಂಧನ – ಪೊಲೀಸ್ ತನಿಖೆ
ಡೊನಾಲ್ಡ್ ಟ್ರoಪ್ ಮುಂದೆ ಮಂಡಿಯೂರಿ ಕೂತ ಜಗತ್ತು!
ಬಾಲಿವುಡ್‌ ಮಿಸ್ಟರ್ ಪರ್ಫೆಕ್ಷನಿಸ್ಟ್ ಆಮೀರ್ ಖಾನ್ ಗೆ 60ರ ವಯಸ್ಸಿನಲ್ಲಿ  ಸಿಕ್ಕ ಪರ್ಫೆಕ್ಟ್ ಸಂಗಾತಿ……?!ಎಷ್ಟನೇ ಮದುವೆ?!
ಬೋಗಸ್ ದೂರು ಕೊಡುವವರ ಮೇಲೆ ಕಠಿಣ ಕ್ರಮ ಕೈಗೊಳ್ಳದಿದ್ದರೆ ಗಂಡಾಂತರ ಗ್ಯಾರೆಂಟಿ