📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಶೃಂಗೇರಿ ವಿಧಾನಸಭೆಯ ಮರುಕೌಂಟಿಂಗ್ ನಲ್ಲಿ ನಡೆದ ಲಪಡಾಗಳೇನು?

    ಈ ಗೊಂದಲಕ್ಕೆ ನೇರಾನೇರವಾಗಿ ಚುನಾವಣಾ ಅಧಿಕಾರಿಗಳೇ ಹೊಣೆಯಾಗುತ್ತಾರೆ. ಟಿ ರಾಜೇಗೌಡ 200ರಷ್ಟು ಕಡಿಮೆ ಮತಗಳ  ಅಂತರದಿಂದ ಗೆದ್ದಿದ್ದರೆ ಎನ್ನುವುದು ಅವತ್ತಿನ ಚುನಾವಣಾ ಅಧಿಕಾರಿಗಳ ಘೋಷಣೆಯಾಗಿತ್ತು. ಇದನ್ನು ಪ್ರಶ್ನಿಸಿ ಪ್ರತಿಸ್ಪರ್ಧಿ ಮಾಜಿ ಶಾಸಕ ಜೀವರಾಜ್ ನ್ಯಾಯಾಲಯದ ಮೆಟ್ಟಿಲು ಏರಿದ್ದರು. ನ್ಯಾಯಾಲಯವು ಮೂರು ವರ್ಷದ ನಂತರ ಮರು ಎಣಿಕೆ ಮಾಡಲು ಆದೇಶ ನೀಡಿತು. ಆ ಆದೇಶದ ಪ್ರಕಾರ, ನಡೆದ ಕೌಂಟಿಂಗ್ನಲ್ಲಿ ಎಲ್ಲವೂ ಅಯೋಮಯ. ಹಾಗಾದ್ರೆ ದೇಶದ ಎಲ್ಲಾ ಕ್ಷೇತ್ರದಲ್ಲೂ ಇದೇ ರೀತಿಯ ಎಡವಟ್ಟುಗಳು ನಡೆದಿರಬಹುದು ಅಂತ ಊಹಿಸಬೇಕೇ?

    ಆವತ್ತು ಅಂದರೆ ಮೂರು ವರ್ಷದ ಹಿಂದೆ, ಚುನಾವಣೆಯ ಕೌಂಟಿಂಗ್ ಮುಗಿದ ತಕ್ಷಣ, ಗೆದ್ದ ಹಾಗೂ ಸೋತ ಅಭ್ಯರ್ಥಿಗಳ ಪರವಾಗಿ ಅಲ್ಲಿ ಉಪಸ್ಥಿತರಿದ್ದ ಎಲೆಕ್ಷನ್ ಏಜೆಂಟ್ ರ ಸಹಿ ಪಡೆದೆಯಲಾಗುತ್ತದೆ. ಅವರ ಸಮ್ಮುಖದಲ್ಲೇ ಅವೆಲ್ಲಾ ಕೌಂಟಿಂಗ್ ನಡೆದಿರುತ್ತದೆ. ಹಾಗೆಯೇ  ಆ ಏಜೆಂಟರುಗಳ ಸಹಿಯನ್ನು  ಪಡೆಯಲಾಗಿರುತ್ತದೆ. ಒಂದೊಮ್ಮೆ ಸರಿಯಾದ ಎಣಿಕೆ ನಡೆದಿಲ್ಲ ಎಂದರೆ, ಆ ಏಜೆಂಟರುಗಳಿಗೆ ಸಹಿ ಹಾಕದೆ ಪ್ರತಿಭಟಿಸುವ ಅವಕಾಶವಿತ್ತು. ಆವತ್ತು, ಅದ್ಯಾವುದು ಆಗದ ಕಾರಣ, ಚುನಾವಣಾ ಅಧಿಕಾರಿಗಳು ರಾಜೇಗೌಡರನ್ನು ಗೆದ್ದ ಅಭ್ಯರ್ಥಿಯೆಂದು ಘೋಷಿಸಿದ್ದರು.

    ಇವತ್ತು, ಮರು ಎಣಿಕೆಯ ನಂತರ ಗೊಂದಲಗಳಾಗಿದೆ, ರಾಜೇಗೌಡರಿಗೆ ಬಿದ್ದ ಮತಗಳಲ್ಲಿ ದೊಡ್ಡ ಪ್ರಮಾಣದಲ್ಲೇ ಅಸಿಂಧು ಮತಗಳೆಂದು ತಳ್ಳಲ್ಪಡುತ್ತದೆ. ಹಾಗಿದ್ದರೆ ಆವತ್ತು,  ಅಸಿಂದು ಮತವನ್ನು ಯಾಕೆ ಸಿಂಧೂ ಮಾಡಿದ್ದರು? ಆ ಅಸಿಂಧು ಮತಗಳನ್ನು ಸಿಂಧೂ ಮಾಡಲು ಜೀವರಾಜ್ಪರ   ಇದ್ದ ಏಜೆಂಟರು ಏಕೆ ಅವಕಾಶ ಕೊಟ್ಟಿದ್ದರು? ಈ ಎರಡೂ ಪ್ರಶ್ನೆ ಮುಖ್ಯವಾಗುತ್ತದೆ. ಜೀವರಾಜ ಗೆಲ್ಲಲಿ ಅಥವಾ ರಾಜೇಗೌಡ ಗೆಲ್ಲಲಿ ನಮಗೆ ಇಲ್ಲಿ ಅದು ಮುಖ್ಯವೇ ಅಲ್ಲ. ಆದರೆ ಜನರ ಮತಕ್ಕೆ ನ್ಯಾಯ ದೊರಕಬೇಕು. ಜನರ ತೀರ್ಪು ಯಾಸಿಟೀಸ್ ಬಹಿರಂಗವಾಗಬೇಕು. ಆದರೆ ಅವತ್ತು ಬಂದ ಮತದ ಲೆಕ್ಕ ಬೇರೆ, ಇವತ್ತು ಬಂದ ಮತದ ಲೆಕ್ಕವೆ ಬೇರೆ

    ಆದರೆ ಅದನ್ನು ನಾವು ಏನನ್ನಬೇಕು? ಅಧಿಕಾರಿಗಳು ಇಲ್ಲಿ ತಪ್ಪು ಮಾಡಿದ್ದಾರೆ ಎನ್ನಬೇಕಾಗುತ್ತದೆ? ಅಧಿಕಾರಿಗಳು, ಆವತ್ತು ತಪ್ಪು ಮಾಡಿದ್ದರೋ ಅಥವಾ ಇವತ್ತು ತಪ್ಪು ಮಾಡಿದ್ದಾರೋ?

    ಕೇವಲ ಖಡಕ್ ನಿರ್ಧಾರ ಪತ್ರಿಕೆಯಲ್ಲಿದ್ದರೆ ಸಾಲದು, ಇಲಾಖೆಯ ಅಧಿಕಾರಿಗಳು, ತಪ್ಪು ಮಾಡಿದಾಗ ಅವರ ಮೇಲೆ ಯಾವ ರೀತಿಯ ಕಠಿಣ ಕ್ರಮ ತೆಗೆದುಕೊಂಡಿದ್ದೀರಿ ಅನ್ನುವುದು ಸಾರ್ವಜನಿಕರಿಗೆ ಗೊತ್ತಾಗಬೇಕು, ಅವತ್ತಿನ ಚುನಾವಣೆಯ ರಿಸಲ್ಟ್ ಬೇರೆ ಇವತ್ತಿನ ಚುನಾವಣೆಯ ರಿಸಲ್ಟ್ ಬೇರೆ ಆಗಿದ್ದಾರೆ, ಅಧಿಕಾರಿಗಳತಪ್ಪು ಅಲ್ಲಿ ಇದೆ ಅಂತಾಯ್ತು. ಹಾಗಿರುವಾಗ ಆ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಆಗಲೇಬೇಕು ತಾನೆ? ಜನರ ಆದೇಶವನ್ನು ಅವರು ಬದಲಾಯಿಸಿದ್ದಾರೆ ಅಂತನ್ನಿಸಿಕೊಳ್ಳುವುದಿಲ್ಲವೇ? ಜನರ ಆದೇಶವನ್ನೇ ಬದಲಿಸುವಷ್ಟು ಈ ಅಧಿಕಾರಿಗಳು ಹೆಚ್ಚು ಕೊಂಡಿದ್ದಾರೆ ಎಂದರೆ, ಅವರನ್ನು ಸುಮ್ಮನೆ ಬಿಡುವುದು ತಪ್ಪಾಗುತ್ತದೆ ಜನದ್ರೋಹವಾಗುತ್ತದೆ. ಈಗ, ಮಾತನ್ನು ಕೇಳಬೇಕಂತಿಲ್ಲ ಸ್ವತಹ ನ್ಯಾಯಾಲಯವೇ ಅಧಿಕಾರಿಗಳ ಮೇಲೆ ಜನದ್ರೋಹ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಆದೇಶಿಸಬೇಕು. ಹಾಗೆಯೇ ಆ ತಪ್ಪಿತಸ್ಥರ ಮೇಲೆ ಆಗಬೇಕು. ಹೀಗಾದಾಗ ಇನ್ನೆಲ್ಲೋ ಜನರ ಮತವನ್ನು ತಿರುಗಿಸುವುದಕ್ಕೆ ಯಾರೂ ಹೋಗುವುದಿಲ್ಲ. ಜನರ ಮತಕ್ಕೆ ಇನ್ನೂ ಒಂದಿಷ್ಟು ಬಲ ಬರುತ್ತದೆ. ಕೆಲಸವಾಗದಿದ್ದರೆ ಪ್ರಜಾಪ್ರಭುತ್ವದ ಉಳಿವಿಗಾಗಿ ಪ್ರಜಾಪ್ರಭುತ್ವವಾದಿಗಳು ಅಂತ ಎನಿಸಿಕೊಂಡವರು ಈ ಬಗ್ಗೆ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಅಷ್ಟೇ. ಎಲ್ಲಕ್ಕೂ ಹೆಚ್ಚಾಗಿ ನ್ಯಾಯಾಂಗದ ಜವಾಬ್ದಾರಿ ಇಲ್ಲಿ ಅತ್ಯಂತ ಮಹತ್ವದ್ದು. ತನ್ನ ಜವಾಬ್ದಾರಿಯನ್ನು ನ್ಯಾಯಾಂಗ ನಿಭಾಯಿಸುತ್ತದೆ ಎನ್ನುವ ನಂಬಿಕೆಯನ್ನು ಶೃಂಗೇರಿ ವಿಧಾನಸಭಾ ಕ್ಷೇತ್ರದ ನಾಗರಿಕರು ವ್ಯಕ್ತಪಡಿಸುತ್ತಿದ್ದಾರೆ. ನ್ಯಾಯಾಂಗವು ತನ್ನ ಜವಾಬ್ದಾರಿಯನ್ನು ನಿಭಾಯಿಸುತ್ತದೆ, ಈ ಕಾರಣಕ್ಕಾಗಿ ಜನರು ಹೋರಾಟಕ್ಕೆ ಇಳಿಯದಂತೆ ನೋಡಿಕೊಳ್ಳಬಹುದು ಎಂಬುದು ಕ್ಷೇತ್ರದ ಜನರ ನಂಬಿಕೆಯಾಗಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಹಿಂದೂ ಬುಡಕಟ್ಟು ಸಮಾಜದ ರುದ್ರಾಕ್ಷಿ ಸುಂದರಿ ಮುಸ್ಲಿಂ ಹುಡುಗನ ಮದುವೆಯಾದ್ಲು
    ಎಲಾನ್ ಮಸ್ಕ್: ವಿಶ್ವದ ಮೊದಲ ಟ್ರಿಲಿಯನೇರ್‌ನಿಂದ ಇನ್ನೂ ಎತ್ತರದತ್ತ!
    2 ಲಕ್ಷಕ್ಕೆ ಮಗುವಿನ ಜೀವದ ಬೆಲೆ ಕಟ್ಟಬೇಡಿ!” – ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನರ ಮಾನವೀಯ ನಿಲುವಿಗೆ ದೇಶಾದ್ಯಂತ ಮೆಚ್ಚುಗೆ
    ಬ್ರಹ್ಮಾವರ ಅಪಾರ್ಟ್‌ಮೆಂಟ್ ರೂಮಿನಲ್ಲಿ ಯುವತಿಯ ನಿಗೂಢ ಸಾವು
    717 ಮದ್ಯದಂಗಡಿಗಳಿಗೆ ವಿಜಯ್ ಬ್ರೇಕ್‌! ತಮಿಳುನಾಡು ಖಜಾನೆಗೆ ಸಾವಿರಾರು ಕೋಟಿ ಶಾಕ್!
    5 ವರ್ಷ ನೀರಿನೊಳಗೆ ಬದುಕಿದ 16 ರ ಬಾಲಕ…!ಈತನ ವಿಚಿತ್ರ ಕಾಯಿಲೆ ಕಂಡು ಬೆಚ್ಚಿಬಿದ್ದ ದೇಶ!ಈಗ ಅನಂತ್ ಅಂಬಾನಿ ನೆರವು!
    ಭಾರತದಲ್ಲಿ ಎಚ್‌ಪಿವಿ (HPV) ಲಸಿಕೆ ಕಾರ್ಯಕ್ರಮ ಹೆಣ್ಣೆತ್ತವರು ತಿಳಿದುಕೊಳ್ಳಲೇಬೇಕಾದ ವಿಚಾರ
    ಮನೆಯ ಮೇಲೆ ಪೊಲೀಸರ  ದಾಳಿ  ಮಾರಾಟಕ್ಕೆ ಇಡಲಾದ ಮಾದಕ ವಸ್ತು ಹಾಗೂ ಮಾರಕ ಆಯುಧ ವಶ
    ವಿಧಾನಸೌಧದಲ್ಲಿ ಡಿಕೆಶಿ–ಕಟೀಲ್ ಭೇಟಿ -ರಾಜಕೀಯದಲ್ಲಿ ಬಿಸಿ ಚರ್ಚೆ
    ‘ನನ್ನ ಮೇಲ್‌ಗೆ ಉತ್ತರವೇ ಬರಲಿಲ್ಲ…’ ಸಭೆಯಲ್ಲೇ ಮಹಿಳೆಯ ಪ್ರಶ್ನೆ; ನಿಖಿಲ್ ಕಾಮತ್ ನೀಡಿದ ಪ್ರತಿಕ್ರಿಯೆಗೆ ದೇಶವೇ ಫಿದಾ!
    ಮಂಗಳೂರು ಯೂಟ್ಯೂಬರ್‌ಗಳ ವಿರುದ್ಧ ಬಿಎನ್‌ಎಸ್ ಅಸ್ತ್ರ ಪ್ರಯೋಗಿಸಿದ ಖಾಕಿ!….
    ಅಮೇರಿಕಾ ಅಧ್ಯಕ್ಷರ ಮೇಲೆ ಎರಡನೆಯ ಬಾರಿ ಗುಂಡಿನ ದಾಳಿ
    “ಒಂದು ಫಾರ್ವರ್ಡ್… ಒಂದು ಎಫ್‌ಐಆರ್!”ಲಾವಣ್ಯ ಕೊಲೆ ಪ್ರಕರಣ ಆರೋಪಿಗೆ ಕೋಮು ಬಣ್ಣ ಹಚ್ಚಿದ – 6 ಸಾಮಾಜಿಕ ಜಾಲತಾಣ ಖಾತೆಗಳು/ಗ್ರೂಪ್‌ಗಳ ವಿರುದ್ಧ FIR..!
    🎬 ಸೀನ್ ಹಿಂದೆ ಇರುವ ಸೀಕ್ರೆಟ್ ಏನು?ಧುರಂಧರ್ ಚಿತ್ರದ ಈ ಸಣ್ಣ ಕ್ಷಣವೇ ಈಗ ದೊಡ್ಡ ಸೆನ್ಸೇಶನ್ ಆಗಿದೆ…ಮುಸ್ತಫಾ ಫುಲ್ ಖುಷ್
    ಗ್ಯಾಸ್ ಪೈಪ್‍ಲೈನ್ ಸೋರಿಕೆ: ಅಣಕು ಪ್ರದರ್ಶನ
    ಹೆತ್ತ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಲು ಯತ್ನಿಸಿದ ತಾಯಿಯ ಜೊತೆಗೆ ಮಗಳನ್ನು ಕಳುಹಿಸಲು ಕೋರ್ಟ್ ನಕಾರ 
    ಬಂಗಾಳ ಚುನಾವಣೆ ಫಲಿತಾಂಶವೇ ಬದಲಾಗಿತ್ತಾ?ಬಂಗಾಳ ರಾಜಕೀಯದಲ್ಲಿ ಹೊಸ ಬಾಂಬ್!ಸುಪ್ರೀಂ ಕೋರ್ಟ್ ಮುಂದೆ ಬಿಜೆಪಿ ಜಯದ ಮೇಲೆ ಟಿಎಂಸಿ ದೊಡ್ಡ ಪ್ರಶ್ನೆ!
    108 ಆರೋಗ್ಯ ಕವಚ'”ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ಇನ್ಮುಂದೆ ಆಂಬ್ಯುಲೆನ್ಸ್ ನಿಮ್ಮ ಮನೆಬಾಗಿಲಿಗೆ! 
    ಕಾಂಗೋದಲ್ಲಿ ಎಬೋಲಾ ಅಟ್ಟಹಾಸ:ಜಗತ್ತಿಗೆ ಮತ್ತೆ ಸಾಂಕ್ರಾಮಿಕ ಭೀತಿಯ ಗಂಟೆ..!
    ಉಡುಪಿಯಲ್ಲಿ ಟ್ರೇಡಿಂಗ್ ಹೆಸರಲ್ಲಿ ಲಕ್ಷಗಟ್ಟಲೆ ಧೋಕಾ….
    ಕಮ್ ಬ್ಯಾಕ್ ಮಾಡಿದ ಮುಂಬೈ ಇಂಡಿಯನ್, ಕ್ಯಾಪ್ಟನ್ ಪ್ರೇರಣೆಗೆ ವರ್ಮಾ ಬ್ಯಾಟಿನಿಂದ  ಮೊದಲ ಸೆಂಚುರಿ
    50 ಸಾವಿರ ಸಾಲಕ್ಕೆ ಸವಣೂರು ಪೇಟೆಯಲ್ಲಿ ರಕ್ತಸಿಕ್ತ ಘರ್ಷಣೆ ..
    ಪರಮೇಶ್ವರ ವಿರುದ್ಧ FIR-₹500 ಬೆಟ್ಟಿಂಗ್ ಹೇಳಿಕೆಗೆ ಕಾನೂನು ಕ್ರಮ.
    90 ನಿಮಿಷದ ರೋಚಕ ರಕ್ಷಣಾ ಕಾರ್ಯಾಚರಣೆ – 6 ಮೀನುಗಾರರ ಜೀವ ಉಳಿಸಿದ ಇಂಡಿಯನ್ ಕೋಸ್ಟ್ ಗಾರ್ಡ್ ಸಾಹಸ!ಪ್ರಕ್ಷುಬ್ಧ ಸಮುದ್ರಕ್ಕೂ ಸವಾಲು
    ‼️ ಮುಂಗಾರು ಅಬ್ಬರ ಶುರು: ಕರ್ನಾಟಕ-ಕೇರಳಕ್ಕೆ IMD ರೆಡ್ ಸಿಗ್ನಲ್! ಮುಂದಿನ 7 ದಿನ ಭಾರೀ ಮಳೆ, ಬಿರುಗಾಳಿ ಸಾಧ್ಯತೆ!
    ಪರಸ್ತ್ರೀ ಹುಂಡಿಗೆ  ಒಂದುವರೆ ಕೋಟಿ ಅಪಾರ್ಟ್ಮೆಂಟ್, ಮಾಜಿ ಶಾಸಕನ ರಂಗಿನಾಟ 
    ಐಸಿಸಿ ಟ್ವೆಂಟಿ-20 ವಿಶ್ವಕಪ್ ಮೂಡಿಗೇರಿಸಿಕೊಂಡ ಭಾರತ
    ಅಪ್ರಾಪ್ತನ ಕ್ರೌರ್ಯಕ್ಕೆ ಬಳ್ಳಾರಿ ವಸತಿ ಶಾಲೆಯ ದೌರ್ಜನ್ಯವೇ ಸಾಕ್ಷಿ… ಈ ಕ್ರೌರ್ಯದ ಹಿಂದೆ ಮನೋರೋಗ ಅಡಗಿದೆಯಾ? 
    ಪ್ರತೀಕಾರದ ದಾಳಿಗೆ ‘ ರೌಡಿಶೀಟರ್ ಟ್ಯಾಬ್ಲೆಟ್’ ಆರೀಫ್ ಖತಂ .!
    ದರ್ಬೆ ಗಲಾಟೆ: ಸಾಕ್ಷ್ಯಾಧಾರದ ಆಧಾರದಲ್ಲೇ ಕಾನೂನು ಕ್ರಮ – ಎಸ್ಪಿ ಅರುಣ್ ಕೆ