📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    “ಸಂತೋಷ್ Kumar” ಯಾರು? ಸಾವಿರ ಕಾರ್ಡ್‌ಗಳಲ್ಲಿ ಒಂದೇ ಹೆಸರು..!₹95 ಕೋಟಿ ಅಮೆರಿಕಾ ಹಣ,1000 ಡೆಬಿಟ್ ಕಾರ್ಡ್‌ಗಳು!ಬಯಲಾಯ್ತು ಕರ್ನಾಟಕದಲ್ಲಿ ಭಾರೀ ನಕ್ಸಲ್-ಮತಾಂತರ ಜಾಲ?

    ಕರ್ನಾಟಕದಲ್ಲಿ ಇದೀಗ ದೊಡ್ಡ ವಿವಾದಕ್ಕೆ ಕಾರಣವಾಗಿರುವ ಪ್ರಕರಣದಲ್ಲಿ, ಅಮೆರಿಕ ಮೂಲದ ಮಿಷನರಿ ಸಂಸ್ಥೆ The Timothy Initiative (TTI) ಹಾಗೂ ಅದರೊಂದಿಗೆ ಸಂಬಂಧ ಹೊಂದಿದ್ದಾರೆ ಎನ್ನಲಾದ ಆರು ಮಂದಿಯ ವಿರುದ್ಧ ಬೆಂಗಳೂರು ನಗರದ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಯುಎಪಿಎ (UAPA) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣವನ್ನು ಜಾರಿ ನಿರ್ದೇಶನಾಲಯ (ED) ನೀಡಿದ ದೂರಿನ ಆಧಾರದ ಮೇಲೆ ದಾಖಲಿಸಲಾಗಿದೆ.

    ATMಗಳಿಂದ ₹95 ಕೋಟಿ ಡ್ರಾ! 1000 ಕಾರ್ಡ್‌ಗಳ ಹಿಂದೆ ಏನಿದೆ ರಹಸ್ಯ?

    ಇಡಿ ತನಿಖೆಯ ಪ್ರಕಾರ, 2025ರ ನವೆಂಬರ್‌ನಿಂದ 2026ರ ಏಪ್ರಿಲ್‌ವರೆಗೆ ಸುಮಾರು ₹92.55 ಕೋಟಿ ರಿಂದ ₹95 ಕೋಟಿ ವರೆಗೆ ವಿದೇಶಿ ಹಣವನ್ನು ಭಾರತದಲ್ಲಿ ಅಕ್ರಮವಾಗಿ ಬಳಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಣವನ್ನು ನೇರ ಬ್ಯಾಂಕಿಂಗ್ ವ್ಯವಸ್ಥೆಯ ಬದಲು ವಿದೇಶಿ ಡೆಬಿಟ್ ಕಾರ್ಡ್‌ಗಳ ಮೂಲಕ ಎಟಿಎಂನಲ್ಲಿ ಹಣ ತೆಗೆಯುವ ಮೂಲಕ ಬಳಕೆ ಮಾಡಲಾಗಿದೆ ಎಂದು ತನಿಖಾ ಸಂಸ್ಥೆಗಳು ಹೇಳಿವೆ.

    1,000ಕ್ಕೂ ಹೆಚ್ಚು ಡೆಬಿಟ್ ಕಾರ್ಡ್‌ಗಳ ಜಾಲ!

    ಇಡಿ ತನಿಖೆಯಲ್ಲಿ ಅತ್ಯಂತ ಅಚ್ಚರಿಯ ಸಂಗತಿ ಎಂದರೆ, ಅಮೆರಿಕದ ಬ್ಯಾಂಕ್‌ನಿಂದ ನೀಡಲಾಗಿದ್ದ 1,000ಕ್ಕೂ ಹೆಚ್ಚು ಡೆಬಿಟ್ ಕಾರ್ಡ್‌ಗಳನ್ನು ಬಳಸಲಾಗಿದೆ ಎನ್ನುವ ಆರೋಪ. ಹಲವಾರು ಕಾರ್ಡ್‌ಗಳಲ್ಲಿ “Santosh Kumar” ಎಂಬ ಒಂದೇ ಹೆಸರು ಕಂಡುಬಂದಿದ್ದು, ಬೇರೆ ಬೇರೆ ಪ್ರದೇಶಗಳ ಗುರುತುಗಳನ್ನು ಬಳಸಿ ಹಣ ವಹಿವಾಟು ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.

    ಕರ್ನಾಟಕದ ಸಂಪರ್ಕ ಮತ್ತು ಆರೋಪ?

    ಈ ಪ್ರಕರಣದಲ್ಲಿ ಬೆಂಗಳೂರಿನ ಕೆಲ ವ್ಯಕ್ತಿಗಳ ಹೆಸರು ಕೂಡ ಕೇಳಿಬಂದಿದೆ. ಹಣಕಾಸು ನಿರ್ವಹಣೆ, ವಿದೇಶಿ ಹಣದ ವಹಿವಾಟು ಹಾಗೂ ಶೆಲ್ ಕಂಪನಿಗಳ ಮೂಲಕ ಹಣ ಸಾಗಣೆ ನಡೆದಿರಬಹುದು ಎಂಬ ಶಂಕೆಯನ್ನು ತನಿಖಾ ಸಂಸ್ಥೆಗಳು ವ್ಯಕ್ತಪಡಿಸಿವೆ. ಈ ಹಿನ್ನೆಲೆಯಲ್ಲಿ ವಿಶೇಷ ತನಿಖಾ ತಂಡ (SIT) ಕೂಡ ತನಿಖೆ ನಡೆಸುತ್ತಿದೆ. 

    ಇಡಿ ಮತ್ತು ಪೊಲೀಸರ ಆರೋಪದ ಪ್ರಕಾರ, ಈ ಹಣದ ಒಂದು ಭಾಗವನ್ನು ಮತಾಂತರ ಚಟುವಟಿಕೆಗಳಿಗೆ ಹಾಗೂ ಮತ್ತೊಂದು ಭಾಗವನ್ನು ನಕ್ಸಲ್ ಪ್ರಭಾವಿತ ಪ್ರದೇಶಗಳಲ್ಲಿ ಬಳಸಲಾಗಿದೆ. ವಿಶೇಷವಾಗಿ ಛತ್ತೀಸ್‌ಗಢದ ಬಸ್ತರ್ ಮತ್ತು ಧಮ್ತಾರಿ ಭಾಗಗಳಲ್ಲಿ ಕೋಟಿ ಕೋಟಿ ರೂಪಾಯಿ ಹಣ ಹಿಂಪಡೆಯಲಾಗಿದೆ ಎಂಬ ಮಾಹಿತಿ ತನಿಖೆಯಲ್ಲಿ ಹೊರಬಂದಿದೆ. 

    ವಿದೇಶಿ ಹಣವನ್ನು ನಿಯಮಗಳನ್ನು ಮೀರಿ ಭಾರತಕ್ಕೆ ತರಲು ಸಾಧ್ಯವಾಗುತ್ತದೆ.ಹಣದ ಮೂಲವನ್ನು ಮರೆಮಾಚಬಹುದು.ಸ್ಥಳೀಯ ಮಟ್ಟದಲ್ಲಿ ಪ್ರಭಾವ ವಿಸ್ತರಿಸಲು ಬಳಸಬಹುದು.ಮತಾಂತರ ಅಥವಾ ಇತರ ಸಂಘಟನಾ ಚಟುವಟಿಕೆಗಳಿಗೆ ಹಣಕಾಸು ಒದಗಿಸಬಹುದು.ನಕ್ಸಲ್ ಅಥವಾ ಇತರ ಕಾನೂನುಬಾಹಿರ ಚಟುವಟಿಕೆಗಳಿಗೆ ಹಣ ತಲುಪಿಸುವ ಸಾಧ್ಯತೆ ಉಂಟಾಗುತ್ತದೆ ಎಂದು ತನಿಖಾ ಸಂಸ್ಥೆಗಳು ಶಂಕಿಸಿವೆ.

    UAPA ಯಾಕೆ ಹಾಕಲಾಗಿದೆ?

    ಯುಎಪಿಎ (Unlawful Activities Prevention Act) ಭಾರತದಲ್ಲಿ ರಾಷ್ಟ್ರದ ಭದ್ರತೆಗೆ ಧಕ್ಕೆ ಉಂಟುಮಾಡುವ ಅಥವಾ ಭಯೋತ್ಪಾದನೆ, ನಿಷೇಧಿತ ಸಂಘಟನೆಗಳಿಗೆ ನೆರವು, ರಾಷ್ಟ್ರವಿರೋಧಿ ಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಬಳಸುವ ಕಠಿಣ ಕಾನೂನು. ಈ ಪ್ರಕರಣದಲ್ಲಿ ಹಣದ ಹರಿವು ನಕ್ಸಲ್ ಪ್ರಭಾವಿತ ಪ್ರದೇಶಗಳಿಗೆ ಹೋಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. 

    ##NaxalFundingCase #EDInvestigation #KarnatakaNews #BreakingNewsKannada #UAPAcase #CrimeAlertIndia

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    Trump ಮಾತಿಗೆ Iran ಸಂಸತ್ ಸ್ಪೀಕರ್‌ನ ಕಠಿಣ ಸಂದೇಶ ವಿಶ್ವದ ಗಮನ ಸೆಳೆದಿದೆ!
    ಭೀಕರ ಅಪಘಾತ ಮಹಿಳೆ ಬಲಿ
    19 ವರ್ಷದ ಆಯಾನ್ ಅಹ್ಮದ್ ತನ್ವೀರ್ ಅಹ್ಮದ್ ವಿರುದ್ಧ ಗಂಭೀರ ಸೈಬರ್ ಲೈಂಗಿಕ ಶೋಷಣೆ ..!ಅಮರಾವತಿ ಭೀಕರ ಪ್ರಕರಣ-
    ಇಂದಿನ ಆಧುನಿಕ ಯುಗದಲ್ಲೂ ಗಂಡನ ಮನೆಯಲ್ಲಿ ಹೆಣ್ಣೊಬ್ಬಳ ನರಕಯಾತನೆಯ ನೈಜ ದೃಶ್ಯ ತಂದೆಯೇ ಕಣ್ಣಾರೆ ನೋಡಿದರೇ ….ಕಣ್ಣೀರು ತಡೆಯಲು ಸಾಧ್ಯವಿಲ್ಲ…..
    108 ವರ್ಷಗಳ ಇತಿಹಾಸದಲ್ಲಿ ಪಾಟ್ನಾವಿಶ್ವವಿದ್ಯಾಲಯದಲ್ಲಿ ಹೊಸ ಅಧ್ಯಾಯ- ಮಹಿಳೆಯರ ಐತಿಹಾಸಿಕ ಹೆಜ್ಜೆ!
    ಒಬ್ಬರೇ ಹಾಗಾಗಿ ಕಾರಿನಲ್ಲಿ ಯಾಕೆ? ಫ್ಲೈಟ್ ಫೇರ್ ಜಾಸ್ತಿ ಇದೆ..ಟ್ರೈನ್ ಲೇಟ್ ಆಗುತ್ತೆ..so ಹೆಗೋಗೋಣ….!? ಹೀಗೂ ಹೋಗ್ಬಹುದು ತಿಳ್ಕೊಳ್ಳಿ..
    ಮನೆ ಬಾಡಿಗೆ ಕೊಡುವಾಗ ನಿಗಾ ಇರಿಸಲು ಮಾಲಕರಿಗೆ ಎಚ್ಚರಿಕೆ ..!ಗಾಂಜಾ ಸೇವಿಸಿದ ಐದು ನರ್ಸಿಂಗ್ ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ….
    KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ ಅಮಾನತ್
    ಗೃಹ ಬಳಕೆಯ LPG ಗ್ರಾಹಕರಿಗೆ Aadhaar e-KYC ಕಡ್ಡಾಯ – PMUY ಫಲಾನುಭವಿಗಳಿಗೆ ವಾರ್ಷಿಕ ಬಯೋಮೆಟ್ರಿಕ್ ಪರಿಶೀಲನೆ
    ಜೈನ ಸನ್ಯಾಸ ದೀಕ್ಷೆ ನಿಯಮಗಳು ಏನು ಗೊತ್ತಾ?
    ಮಂಗಳೂರು- ಕೊಲ್ಲೂರಿನವರೆಗೆ ಹೈ ಅಲರ್ಟ್!ಕ.ರ.ವೇ ಕಪ್ಪು ಬಾವುಟ .!!ತಮಿಳುನಾಡು ಸಿಎಂ ವಿಜಯ್ ಭೇಟಿ-ಕೊಲ್ಲೂರಿನಲ್ಲಿ ಹೈವೋಲ್ಟೇಜ್ ದಿನ! 
    ಸುರತ್ಕಲ್ ಹುಡುಗಿ ವಿಚಾರದಲ್ಲಿ ಹಲ್ಲೆ
    ಅವಮಾನವೇ ಯಶಸ್ಸಿನ ಇಂಧನ: ಕೋಮಲ್ ಗನಾತ್ರಾ ಎಂಬ ಅದಮ್ಯ ಚೇತನ ಕೇವಲ 2 ವಾರಗಳ ಸಂಸಾರ, ನಂತರ ಜೀವಮಾನದ ಸಾಧನೆ!
    ಒಂದು ಚಿನ್ನದ ಸರಕ್ಕಾಗಿ ನಿದ್ರೆಯಲ್ಲಿದ್ದ ಗೆಳತಿಯನ್ನೇ ಕೊಲ್ಲಲೆತ್ನಿಸಿದ ಆಕೆಗೆ ಜೈಲೆ ಗತಿ …..ನಂಬಿಕೆಯೇ ರಕ್ತಸಿಕ್ತವಾದ ಮಣಿಪಾಲದ ಭೀಕರ ಘಟನೆ…
    ಮೋದಿ ಅವರ ನಿರ್ಧಾರಗಳು“ದೀರ್ಘಕಾಲೀನ ಅಭಿವೃದ್ಧಿಗೆ ಜವಾಬ್ದಾರಿಯುತ ನೀತಿಗಳು” ಆತಂಕದ ಸೂಚನೆ ಅಲ್ಲ-ಎಸ್.ಎಸ್. ನಾಯಕ್
    ಡಾನ್ ಹೇಮಂತ್ ಪೂಜಾರಿ ಸಹೋದರ ವಶಕ್ಕೆ?!?
    ಜಾರ್ಖಂಡ್‌ನಲ್ಲಿ 16 ದಿನಗಳ ಉಪವಾಸಕ್ಕೆ ಫಲ!ವಿದ್ಯಾರ್ಥಿಗಳ ಹೋರಾಟಕ್ಕೆ ಮಹತ್ವದ ಜಯ —ಒತ್ತಡಕ್ಕೆ ಮಣಿದ ಸರ್ಕಾರ? ಬೇಡಿಕೆಗಳ ಮೇಲೆ ಮಹತ್ವದ ಒಪ್ಪಂದಗಳೇನು..?
    “ವಾಹನ ಮಾರಾಟ-RC ಬದಲಾವಣೆ  ಅಗತ್ಯ.. ಇಲ್ಲವಾದರೆ ಕಾನೂನು ಸಮಸ್ಯೆಗಳು ತಪ್ಪಿದ್ದಲ್ಲ..!” ಹೈಕೋರ್ಟ್
    ಆರು ಲಕ್ಷ ರೂ. ಶುಲ್ಕದ ಸಂಕಷ್ಟಕ್ಕೆ ಮಾನವೀಯ ಸ್ಪಂದನೆ: ವಿದ್ಯಾರ್ಥಿನಿಯ ಕನಸಿಗೆ ಸಚಿವ ಬಾಲಕೃಷ್ಣ ಬೆನ್ನೆಲುಬು
    ಕ್ಲೀನ್ ಮಂಗಳೂರು ಕನಸು ನಿಮ್ಮದಾಗಿದ್ದರೆ ಇಲ್ಲಿದೆ ದಾರಿ…ಸ್ವಚ್ಛ ಮಂಗಳೂರು ಅಭಿಯಾನ: ನಾಗರಿಕರ ಕೈಗೆ ಸಿಕ್ಕಿತು ವಾಟ್ಸಾಪ್ ಅಸ್ತ್ರ….!
    ಅಕ್ರಮ ಡಿಸೇಲ್ ದಾಸ್ತಾನು ಪ್ರಕರಣ: 4,175 ಲೀಟರ್ ಡಿಸೇಲ್ ಕಂದಾಯ ಇಲಾಖೆಯಿಂದ ಹರಾಜು – ₹2.35 ಲಕ್ಷಕ್ಕೆ ಮಾರಾಟ!
    ಚುನಾವಣೆಯವರೆಗೆ ಮೌನ, ನಂತರ LPG ದರ ಭಾರಿ ಏರಿಕೆ –ಇದು ರಾಜಕೀಯ ಅಜೆಂಡಾನಾ?
    ಬಂಟ್ಸ್ ಹಾಗೂ ಬಿಲ್ಲವ ಸಮುದಾಯವನ್ನೇ ಅವಹೇಳಿಸಿ ಮಾತಾಡಿ ವಿಡಿಯೋ ವೈರಲ್ ರಾತ್ರೋರಾತ್ರಿ… ..ಫೇಮಸ್ ಆದ ಅನಿತಾಳ ಬಂಧನ ..!
    ಆರು ಲಕ್ಷ ರೂ. ಶುಲ್ಕದ ಸಂಕಷ್ಟಕ್ಕೆ ಮಾನವೀಯ ಸ್ಪಂದನೆ: ವಿದ್ಯಾರ್ಥಿನಿಯ ಕನಸಿಗೆ ಸಚಿವ ಬಾಲಕೃಷ್ಣ ಬೆನ್ನೆಲುಬು
    ಅಪ್ರಾಪ್ತನ ಕ್ರೌರ್ಯಕ್ಕೆ ಬಳ್ಳಾರಿ ವಸತಿ ಶಾಲೆಯ ದೌರ್ಜನ್ಯವೇ ಸಾಕ್ಷಿ… ಈ ಕ್ರೌರ್ಯದ ಹಿಂದೆ ಮನೋರೋಗ ಅಡಗಿದೆಯಾ? 
     ಮಗಳ ಗಂಡನೇ …ಅತ್ತೆಯ ಗಂಡ! ಹೌದು…ಅಳಿಯ-ಅತ್ತೆಯ ಪ್ರೇಮಕಥೆ ವೈರಲ್!ಕುಟುಂಬ ಸಂಬಂಧಗಳೇ ತಲೆಕೆಳಗು! ಉತ್ತರ ಪ್ರದೇಶದ ಈ ಮದುವೆ ಹಿಂದಿನ ರಹಸ್ಯ ಏನು?
    40 ವರ್ಷದ ಹಳೆಯ ಕೊಲೆಕೇಸ್‌ಗೆ ಅಂತಿಮ ಕೀ ಆಗಿ ಸಾಕ್ಷಿ ಆಗಿದ್ದು ತಿಂದು ಉಗುಳಿದ ಚೂಯಿಂಗ್ ಗಮ್ …!ಏನಿದು realstory..
    ರೂಪಾಯಿಗೆ ತೈಲದ ಬಿಸಿ! RBI ಅಖಾಡಕ್ಕಿಳಿಯುತ್ತಾ?ತೈಲ ಬೆಲೆ ಏರಿಕೆ ಎಫೆಕ್ಟ್ -ಡಾಲರ್ ಎದುರು ರೂಪಾಯಿ ದುರ್ಬಲ!
    ದಕ್ಷಿಣ ಕನ್ನಡದಲ್ಲಿ ಮಳೆ ದುರಂತ: ಎರಡು ಮೃತದೇಹಗಳು ನೀರಲ್ಲಿ ಪತ್ತೆ
    ಒಂದು ವಾಟ್ಸ್ಯಾಪ್ ಮೆಸೇಜ್… ಕೋರ್ಟ್ ವರೆಗೂ ಎಳೆದ ಶಾಕ್ ಘಟನೆಯ ಸುತ್ತ..