📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಸರ್ಕಾರಕ್ಕೆ CJP ಸವಾಲು…ದೆಹಲಿ ಪ್ರತಿಭಟನೆಗೆ ಹಿಂಸಾತ್ಮಕ ತಿರುವು..ಲಾಠಿಚಾರ್ಜ್, ಅಶ್ರುವಾಯು, ಇಂಟರ್ನೆಟ್ ಶಟ್‌ಡೌನ್..

    .ನಿನ್ನೆ ದೆಹಲಿಯಲ್ಲಿ ನಡೆದ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ದೃಶ್ಯಗಳಲ್ಲಿ ಪೊಲೀಸರ ಲಾಠಿಚಾರ್ಜ್, ಅಶ್ರುವಾಯು ದಾಳಿ, ಪ್ರತಿಭಟನಾಕಾರರನ್ನು ಚದುರಿಸುವ ಪ್ರಯತ್ನ ಹಾಗೂ ಗಾಯಗೊಂಡ ವಿದ್ಯಾರ್ಥಿಗಳ ದೃಶ್ಯಗಳು ವ್ಯಾಪಕವಾಗಿ ಹರಿದಾಡುತ್ತಿವೆ. ಅನೇಕರು ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಲಾಟಿಚಾರ್ಜ್ ನಡೆಯನ್ನ ಆಕ್ರೋಶದಿಂದಖಂಡಿಸಿದ್ದಾರೆ.ಪ್ರತಿಭಟನಾಕಾರರ ಪ್ರಕಾರ, ಹಲವರು ಗಾಯಗೊಂಡಿದ್ದು, ಕೆಲವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕನಿಷ್ಠ 38 ಮಂದಿ ಲೇಡಿ ಹಾರ್ಡಿಂಜ್ ಆಸ್ಪತ್ರೆಗೂ, ಸುಮಾರು 65 ಮಂದಿ RML ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಗಾಯಗಳಲ್ಲಿ ತಲೆಗಾಯ, ಫ್ರ್ಯಾಕ್ಚರ್, ಕಣ್ಣಿನ ಸಮಸ್ಯೆ ಮತ್ತು ಅಶ್ರುವಾಯುವಿನಿಂದ ಉಂಟಾದ ತೊಂದರೆಗಳು ಸೇರಿವೆ ಎಂದು ವರದಿಯಾಗಿದೆ.

    “ಬ್ರೂಟಲ್ ಲಾಠಿಚಾರ್ಜ್‌ನಲ್ಲಿ ಗಾಯಗೊಂಡ ಯುವತಿ RML ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿದ್ದಾಳೆ” ಎಂದು CJP ನಾಯಕ ಅಭಿಜೀತ್ ದಿಪ್ಕೆ ಹೇಳಿದ್ದಾರೆ. ಪ್ರತಿಭಟನಾಕಾರರಿಗೆ ವೈದ್ಯಕೀಯ ಮತ್ತು ಕಾನೂನು ನೆರವು ನೀಡುವುದಾಗಿ CJP ಘೋಷಿಸಿದೆ.

    ಈ ನಡುವೆ, ಪ್ರತಿಭಟನೆಯ ಪ್ರಮುಖ ಬೇಡಿಕೆಗಳನ್ನು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರೊಂದಿಗೆ CJP ಪ್ರತಿನಿಧಿಗಳು ಚರ್ಚಿಸಿದ್ದಾರೆ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ತಕ್ಷಣದ ರಾಜೀನಾಮೆ ಅಥವಾ ವಜಾ, ಸೋನಂ ವಾಂಗ್‌ಚುಕ್ ಅವರನ್ನು ಬಿಡುಗಡೆ ಮಾಡುವುದು ಹಾಗೂ NEET-UG ಪೇಪರ್ ಲೀಕ್‌ನಿಂದ ಮೃತಪಟ್ಟ ಅಭ್ಯರ್ಥಿಗಳ ಕುಟುಂಬಗಳಿಗೆ ₹1 ಕೋಟಿ ಪರಿಹಾರ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.

    CJP ವಕ್ತಾರ ಸೌರವ್ ದಾಸ್ ಪ್ರಕಾರ, ಜೆ.ಪಿ. ನಡ್ಡಾ ಅವರು ಬೇಡಿಕೆಗಳನ್ನು ‘ಸೂಕ್ತ ಮಟ್ಟದಲ್ಲಿ’ ಚರ್ಚಿಸುವುದಾಗಿ ಭರವಸೆ ನೀಡಿದ್ದಾರೆ. ಆದರೆ ಯಾವುದೇ ಖಚಿತ ಭರವಸೆ ಅಥವಾ ನಿರ್ಧಾರ ಇನ್ನೂ ಬಂದಿಲ್ಲ. ಹೀಗಾಗಿ ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ಮುಂದುವರಿಸುವುದಾಗಿ CJP ಸ್ಪಷ್ಟಪಡಿಸಿದೆ.

    ಮತ್ತೊಂದೆಡೆ, ದೆಹಲಿ ಪೊಲೀಸರು ಪ್ರತಿಭಟನಾಕಾರರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ಮತ್ತು ಇತರ ವಸ್ತುಗಳನ್ನು ಎಸೆದರು, ಬ್ಯಾರಿಕೇಡ್‌ಗಳನ್ನು ಮುರಿಯಲು ಯತ್ನಿಸಿದರು, ಪೊಲೀಸ್ ಹಾಗೂ ಸರ್ಕಾರಿ ವಾಹನಗಳಿಗೆ ಹಾನಿ ಮಾಡಿದರು ಮತ್ತು ಸಾರ್ವಜನಿಕ ಆಸ್ತಿಗೆ ನಷ್ಟ ಉಂಟುಮಾಡಿದರು ಎಂದು ಪೊಲೀಸರು ತಿಳಿಸಿದ್ದಾರೆ.

    ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ಸೆಂಟ್ರಲ್ ದೆಹಲಿಯ ಹಲವು ಪ್ರದೇಶಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಯಿತು. ಇದರಿಂದ ಪ್ರತಿಭಟನಾ ಸ್ಥಳದ ದೃಶ್ಯಗಳು ಮತ್ತು ಮಾಹಿತಿಯ ಹರಿವು ನಿಧಾನಗೊಂಡಿತು. ಮಾನವ ಹಕ್ಕುಗಳ ಸಂಘಟನೆಗಳು ಪೊಲೀಸರು ಸಂಯಮದಿಂದ ವರ್ತಿಸಬೇಕು ಮತ್ತು ಇಂಟರ್ನೆಟ್ ಸಂಪರ್ಕವನ್ನು ಪುನಃಸ್ಥಾಪಿಸಬೇಕು ಎಂದು ಆಗ್ರಹಿಸಿವೆ.

    ಇತ್ತ, CJP ನಾಯಕರು ಹಾಗೂ ಸರ್ಕಾರದ ನಡುವೆ ಮಾತುಕತೆ ನಡೆದರೂ, ಪ್ರತಿಭಟನಾಕಾರರು ಪ್ರಧಾನಿ ಅಥವಾ ಕೇಂದ್ರ ಸಚಿವರ ಮಟ್ಟದಲ್ಲಿ ನೇರ ಸಂವಾದಕ್ಕೆ ಒತ್ತಾಯಿಸಿದ್ದಾರೆ. ಸರ್ಕಾರ ಪ್ರತಿಭಟನೆಯನ್ನು ಅಂತ್ಯಗೊಳಿಸುವಂತೆ ಮನವಿ ಮಾಡಿದೆ. ಆದರೆ CJP ನಾಯಕರು ಬೇಡಿಕೆ ಈಡೇರುವವರೆಗೆ ಹೋರಾಟ ಮುಂದುವರಿಸುವುದಾಗಿ ಹೇಳಿದ್ದಾರೆ.

    ಪ್ರತಿಭಟನಾ ಸ್ಥಳದಲ್ಲಿದ್ದ ಸೋನಂ ವಾಂಗ್‌ಚುಕ್ ಅವರ ಪತ್ನಿ ಗೀತಾಂಜಲಿ ಅಂಗ್ಮೋ ಅವರ ಮೇಲೂ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು CJP ಆರೋಪಿಸಿದೆ. ಆದರೆ ದೆಹಲಿ ಪೊಲೀಸರು ಈ ಆರೋಪವನ್ನು ಸಂಪೂರ್ಣ ಸುಳ್ಳು ಮತ್ತು ದಾರಿ ತಪ್ಪಿಸುವಂತದ್ದು ಎಂದು ತಳ್ಳಿಹಾಕಿದ್ದಾರೆ.

    ರಾಜಕೀಯ ವಲಯದಲ್ಲೂ ಪ್ರತಿಭಟನೆಗೆ ಬೆಂಬಲ ಮತ್ತು ವಿರೋಧದ ಧ್ವನಿಗಳು ಕೇಳಿಬಂದಿವೆ. ರಾಹುಲ್ ಗಾಂಧಿ ಪೊಲೀಸರ ಲಾಠಿಚಾರ್ಜ್‌ನ್ನು ಖಂಡಿಸಿ ಪ್ರಧಾನಿ ನರೇಂದ್ರ ಮೋದಿ ಅವರನ್ನು “ದೇಶದ ಇತಿಹಾಸದಲ್ಲೇ ಅತ್ಯಂತ ಯುವ ವಿರೋಧಿ ಪ್ರಧಾನಿ” ಎಂದು ಟೀಕಿಸಿದ್ದಾರೆ. ಡಿ. ರಾಜಾ, ಮಮತಾ ಬ್ಯಾನರ್ಜಿ, ಉದಯನಿಧಿ ಸ್ಟಾಲಿನ್ ಸೇರಿದಂತೆ ಹಲವು ವಿರೋಧ ಪಕ್ಷದ ನಾಯಕರು ಪೊಲೀಸ್ ಕ್ರಮವನ್ನು ಖಂಡಿಸಿದ್ದಾರೆ.

    ಆದರೆ ದೆಹಲಿ ಪೊಲೀಸರ ವಾದವೇ ಬೇರೆ. “ಪ್ರತಿಭಟನಾಕಾರರೇ ಹಿಂಸಾತ್ಮಕವಾಗಿ ವರ್ತಿಸಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದರು”ಎಂದು ಪೊಲೀಸರು ಹೇಳುತ್ತಿದ್ದಾರೆ. ಹೀಗಾಗಿ, ಒಂದು ಕಡೆ ವಿದ್ಯಾರ್ಥಿಗಳ ಗಾಯಗಳ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ಹುಟ್ಟಿಸುತ್ತಿದ್ದರೆ, ಮತ್ತೊಂದೆಡೆ ಪ್ರತಿಭಟನಾಕಾರರಿಂದಲೇ ಹಿಂಸೆ ನಡೆದಿದೆ ಎಂಬ ಪೊಲೀಸ್ ಹೇಳಿಕೆ ಹೊಸ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ.

    ಸದ್ಯ ದೆಹಲಿಯಲ್ಲಿ ಪ್ರತಿಭಟನೆ, ಪೊಲೀಸ್ ಕ್ರಮ ಮತ್ತು ಸರ್ಕಾರದ ಪ್ರತಿಕ್ರಿಯೆ—ಮೂರೂ ಮುಖಾಮುಖಿಯಾಗಿವೆ. ಬೇಡಿಕೆಗಳಿಗೆ ಕೇಂದ್ರ ಸರ್ಕಾರ ಯಾವ ನಿರ್ಧಾರ ಕೈಗೊಳ್ಳಲಿದೆ? ಪ್ರತಿಭಟನೆ ಶಾಂತವಾಗುತ್ತದೆಯೇ ಅಥವಾ ಇನ್ನಷ್ಟು ತೀವ್ರಗೊಳ್ಳುತ್ತದೆಯೇ ಎಂಬುದು ಈಗ ದೇಶದ ಗಮನ ಸೆಳೆದಿದೆ.

    ##DelhiProtest #CJPProtest #NEETPaperLeak #DharmendraPradhan #SonamWangchuk #StudentProtest #DelhiPolice

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ತೊಕ್ಕೊಟ್ಟು ವಿನಮ್ರ ಬಾರ್‌ನಲ್ಲಿ ತಲವಾರು ಹಿಡಿದು ದಾಂಧಲೆ!
    ಕರ್ನಾಟಕ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: 123 ಕೇಂದ್ರಗಳ ಪಾಸ್ ವಿತರಣ –ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿದೆ, ಬಸ್‌ಗಳ ಸಂಖ್ಯೆಯೂ ಹೆಚ್ಚುತ್ತದೆಯೇ?
    ಮಂಗಳೂರು ಏರ್‌ಪೋರ್ಟ್ ಬಳಿ ಬರ್ತಿದೆ ಲಕ್ಸುರಿ ಇಂಟರ್‌ನ್ಯಾಷನಲ್ ಹೋಟೆಲ್!
    ಒಂದು ತಪ್ಪು ಹೆಜ್ಜೆ…25 ಅಡಿ ಬಾವಿಗೆ ಬಿದ್ದ ಆನೆ …ನೋಡಿ ಈ ಸ್ಮಾರ್ಟ್ ಆಪರೇಷನ್!
    ಸಂಸತ್ತಿನಲ್ಲಿ ಪ್ರಶ್ನೆ ಎದುರಿಸಲು ಆಗದೆ,  ಪ್ರಶ್ನೆಯನ್ನೇ ಕೇಳದಂತೆ ಮಾಡಿದರು – ರಾಹುಲ್ ಗಾಂಧಿ
    ಕೊಪ್ಪ ತಹಸಿಲ್ದಾರ್ ಲಿಖಿತಾ ಮೋಹನ್, ಅಧಿಕಾರ ದುರುಪಯೋಗ ಮಾಡಿಕೊಂಡರಾ?
    ಕರ್ನಾಟಕದಲ್ಲಿ ಬೇಸಿಗೆ ಬೆಂಕಿ ತೀವ್ರ ಬಿಸಿಗಾಳಿ ಹೈ ಅಲರ್ಟ್
    ಇದು IPLನಲ್ಲಿ ಹೊಸ ಹೀರೋ ಹುಟ್ಟಿದಂತೇ…ಆದ್ರೆ ಕ್ರಿಕೆಟ್ ಅಲ್ಲ, ಬಾಕ್ಸಿಂಗ್‌ನಲ್ಲಿ! 🥊🔥
    ಮಂಗಳೂರು ಯೂಟ್ಯೂಬರ್‌ಗಳ ವಿರುದ್ಧ ಬಿಎನ್‌ಎಸ್ ಅಸ್ತ್ರ ಪ್ರಯೋಗಿಸಿದ ಖಾಕಿ!….
    ತಿಮರೋಡಿ ಸೇರಿ ನಾಲ್ವರಿಗೆ ಕೇಸ್…
    ಬ್ರಹ್ಮಾವರ ಕೆಂಜೂರಿನಲ್ಲಿ ಅನ್ನಭಾಗ್ಯದ ಅಕ್ಕಿ  ಅಕ್ರಮ ದಾಸ್ತಾನು- 15 ಕ್ವಿಂಟಲ್‌ಗೂ ಅಧಿಕ ಅಕ್ಕಿ ವಶ
    ಪ್ರಜ್ವಲ್ ರೇವಣ್ಣ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಕ್ಷಿಗೆ ಬೆದರಿಕೆ ಕರೆ!
    ಜೈನ ಮುನಿ… ಇರಾನ್‌ನ ಇಸ್ಲಾಮಿಕ್ ಸರ್ವೋಚ್ಚ ನಾಯಕನ ಅಂತ್ಯಕ್ರಿಯೆಯಲ್ಲಿ?
    ಬೆಂಗಳೂರಲ್ಲಿ Bowring Hospital ಬಳಿ ಗೋಡೆ ಕುಸಿತ ಮನ ಕಲುಕುವ ಘಟನೆ ಬಿಸಿಲಿನಿಂದ ತಪ್ಪಿಸಿಕೊಳ್ಳಲು ನಿಂತವರು… ಏಳು ಮಂದಿಯ ದುರಂತ ಅಂತ್ಯ.!
    “ವಕೀಲರೇ ಎಚ್ಚರ! ಕೋರ್ಟ್‌ನಲ್ಲಿ ನಕಲಿ AI ರೆಫರೆನ್ಸ್ ನೀಡಿದರೆ ಕಠಿಣ ಶಿಸ್ತು ಕ್ರಮ: BCIಗೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ದೇಶನ”
    ಮಧ್ಯಪ್ರಾಚ್ಯದಲ್ಲಿ ರೆಡ್ ಅಲರ್ಟ್!3 ತಿಂಗಳ ಯುದ್ಧಕ್ಕೆ ಮಹಾ ಟ್ವಿಸ್ಟ್ ಇರಾನ್ ಸೇನಾ ನೆಲೆಗಳನ್ನು ಧೂಳೀಪಟ ಮಾಡಿದ ಅಮೆರಿಕ!
    ಕರ್ನಾಟಕ ಸೇರಿ 16 ರಾಜ್ಯಗಳಲ್ಲಿ SIR ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಅಳಿಸಬಹುದಾ? ಈಗಲೇ ಎಚ್ಚರ!
    ಜಬಲ್ಪುರ್ ದುರಂತಕ್ಕೆ ಹೊಣೆ ಯಾರು? ಕ್ರಮ ಏನು?
    ಬೆಳ್ತಂಗಡಿಯಲ್ಲಿ ಮಧುಮಗ ಜೈಲಿಗೆ-ಅಪ್ರಾಪ್ತೆಯ ಮೇಲೆ ದೌರ್ಜನ್ಯ – ಇಬ್ಬರು ಆರೋಪಿಗಳ ಬಂಧನ..!
    ವಿಷ ಸೇವನೆ ಸ್ವಯಂ ಆಗಿತ್ತೇ ಅಥವಾ ಪ್ರಚೋದನೆ ಕಾರಣವೇ ….?!
    ದ್ವಿತೀಯ ಪಿ.ಯು.ಸಿ ಪರೀಕ್ಷಾ ಹಾಜರಾತಿ
    ತಮಿಳುನಾಡು ರಾಜಕೀಯದಲ್ಲಿ ದಿನಕ್ಕೊಂದು ಟ್ವಿಸ್ಟ್ -TVK wave ಎಷ್ಟು ದೂರ ಸಾಗುತ್ತದೆ?
    ಪಶ್ಚಿಮ ಬಂಗಾಳದಲ್ಲಿ ಗುಂಡಾಗಿರಿ ಮುಂದುವರಿಕೆ
    ED ₹2,178 ಕೋಟಿ ಆಸ್ತಿ ಜಪ್ತಿ ನಿರವ್ ಮೋದಿ–ವಿಜಯ್ ಮಲ್ಯ ಸೇರಿ 21 ಜನರ ಆರ್ಥಿಕ ಅಪರಾಧಿಗಳ ವಿರುದ್ಧ ದೊಡ್ಡ ಮಟ್ಟದ ಕ್ರಮ
    19 ವರ್ಷದ ಆಯಾನ್ ಅಹ್ಮದ್ ತನ್ವೀರ್ ಅಹ್ಮದ್ ವಿರುದ್ಧ ಗಂಭೀರ ಸೈಬರ್ ಲೈಂಗಿಕ ಶೋಷಣೆ ..!ಅಮರಾವತಿ ಭೀಕರ ಪ್ರಕರಣ-
    ಕಾಂಗೋದಲ್ಲಿ ಎಬೋಲಾ ಅಟ್ಟಹಾಸ:ಜಗತ್ತಿಗೆ ಮತ್ತೆ ಸಾಂಕ್ರಾಮಿಕ ಭೀತಿಯ ಗಂಟೆ..!
    ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಕಮೆಂಟ್ ಗಳನ್ನು ಹಾಕಿದ ಆರೋಪಿಯ ಬಂಧನ
    ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಹೊರಟ್ಟಿ  ಕೊನೆಗೂ ರಾಜೀನಾಮೆ
    ಖಾಸಗಿ ಆಸ್ಪತ್ರೆಯ ಜೊತೆಗಿನ ಒಪ್ಪಂದ ರದ್ದುಪಡಿಸಲು ಆಗ್ರಹಿಸಿ ಪ್ರತಿಭಟನೆ
    ನಾಸಿಕ್‌ನ Tata Consultancy Services ಕಚೇರಿಯಲ್ಲಿ ಗಂಭೀರ ಆರೋಪಗಳ ನಡುವೆ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ — ಸುರಕ್ಷತೆಗೆ ಮೊದಲ ಆದ್ಯತೆ.