📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಸಾಲದ ಹಣ ಕೇಳಿದ ವಿಚಾರಕ್ಕೆ ಚೂರಿಯಿಂದ ಕೊಲೆ ಯತ್ನ..

ಪಡುಬಿದ್ರಿ ಸಮೀಪ ಸಾಲದ ಹಣ ಕೇಳಿದ ವಿಚಾರಕ್ಕೆ ಯುವಕನ ಮೇಲೆ ಚೂರಿಯಿಂದ ದಾಳಿ ನಡೆಸಿ ಕೊಲೆ ಮಾಡಲು ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಜಗೋಳಿ ಅಂಚೆ, ಕಾರ್ಕಳದ ಸುಮಿತ್ ಎಸ್. ಸುವರ್ಣ (29) ಹಾಗೂ ಧೀರಜ್ ಇಬ್ಬರೂ ಸ್ನೇಹಿತರಾಗಿದ್ದರು. ಸುಮಾರು ಎರಡು ವರ್ಷಗಳ ಹಿಂದೆ ಸುಮಿತ್ ಅವರು ಧೀರಜ್‌ಗೆ ₹2 ಲಕ್ಷ ಸಾಲವಾಗಿ ನೀಡಿದ್ದರು. ಆ ಹಣವನ್ನು ಆರು ತಿಂಗಳಲ್ಲಿ ಹಿಂತಿರುಗಿಸುವುದಾಗಿ ಧೀರಜ್ ಹೇಳಿದ್ದರೂ ಇದುವರೆಗೆ ಹಣವನ್ನು ನೀಡಿರಲಿಲ್ಲ.

ಮಾರ್ಚ್ 13ರಂದು ರಾತ್ರಿ ಸುಮಿತ್ ಅವರು ಕಾಪು ತಾಲೂಕಿನ ಹೆಜಮಾಡಿ ಗ್ರಾಮದ ಹೆಜಮಾಡಿ ಸ್ಟೇಡಿಯಂ ಬಳಿ ಧೀರಜ್ ಅವರನ್ನು ಭೇಟಿಯಾಗಿ ಸಾಲದ ಹಣವನ್ನು ಕೇಳಿದರು. ಈ ವೇಳೆ ಕೋಪಗೊಂಡ ಧೀರಜ್ “ಹಣ ಕೊಡುವುದಿಲ್ಲ” ಎಂದು ಹೇಳಿ ಸುಮಿತ್ ಮೇಲೆ ಕೈಯಿಂದ ಹಲ್ಲೆ ನಡೆಸಿದ್ದಾನೆ.

ನಂತರ ಹಣವನ್ನು ಮನೆಯಲ್ಲಿ ಕೊಡುತ್ತೇನೆ ಎಂದು ಹೇಳಿ ಸುಮಿತ್ ಅವರನ್ನು ತನ್ನ ದ್ವಿಚಕ್ರ ವಾಹನದಲ್ಲಿ ಕೂರಿಸಿಕೊಂಡು ಕರೆದುಕೊಂಡು ಹೋಗಿದ್ದಾನೆ. ಸ್ಟೇಡಿಯಂನಿಂದ ಸುಮಾರು 1 ಕಿ.ಮೀ ದೂರದಲ್ಲಿರುವ ಬಬ್ಬು ಸ್ವಾಮಿ ದೇವಸ್ಥಾನದ ಬಳಿ ರಾತ್ರಿ ಸುಮಾರು 11:50ಕ್ಕೆ ವಾಹನ ನಿಲ್ಲಿಸಿ, ಸುಮಿತ್ ಅವರನ್ನು ಇಳಿಸಿ ಚೂರಿಯಿಂದ ಹೊಟ್ಟೆಗೆ ತಿವಿದು ಕೊಲೆ ಮಾಡಲು ಯತ್ನಿಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಗಾಯಗೊಂಡ ಸುಮಿತ್ ಅವರನ್ನು ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 32/2026ರಡಿ BNS ಕಾಯ್ದೆಯ 115(1), 351(2), 352 ಮತ್ತು 109 ಕಲಂಗಳಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

#civil violence#crime#humnaity

COMMENTS

Login with Gmail to comment

ಇನ್ನಷ್ಟು ಸುದ್ದಿ

ಕಂದಾಯ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ
ಉದ್ಯಮಿ, ಕಾಲೇಜ್ topper,  ಕೋಟ್ಯದೀಶರೇ…ಕಠಿಣ ಜೈನ ಸನ್ಯಾಸದತ್ತ…!
ಆಮಾದ್ಮಿ ಪಕ್ಷದ ಏಳು ಸಂಸದರು ಬಿಜೆಪಿಯ ತೆಕ್ಕೆಗೆ ರೈಟೋ?  ರಾಂಗೋ?
ಗುರು ಬ್ರಹ್ಮ – ಗುರು ವಿಷ್ಣು ಅನ್ನುವ ಕಾಲ ಮುಗಿದು ಹೋಯ್ತೇ?
ಆಸಿಡ್ ದಾಳಿಗೊಳಗಾದ ಮಹಿಳೆಯರಿಗೆ ₹50 ಸಾವಿರ ಮಾಸಾಶನ: ಆಸಿಡ್ ಮಾರಾಟಕ್ಕೆ ಕಡಿವಾಣ ಹಾಕಲು ಸರ್ಕಾರ ಕ್ರಮ
ಉಂಡ ಮನೆಗೇ ಕನ್ನ ಹಾಕಿದ ದ್ರೋಹಿಗಳು 
ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ – 10 ರೋಗಿಗಳ ದುರ್ಮರಣ-11 ಸಿಬ್ಬಂದಿಗೆ ಗಾಯ
🚨 ಬ್ರೇಕಿಂಗ್ ‼️ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ: ಜುಲೈ 2 (ಗುರುವಾರ) ರಜೆ ಘೋಷಣೆ
ಗೃಹಲಕ್ಷ್ಮಿ ಹಣ ಉಳಿಸಿ ದೇವಿಗೆ ₹17 ಲಕ್ಷ ದೇಣಿಗೆ!
ಹಾರ್ಮುಜ್ ಬಳಿ ಹಡಗುಗಳ ಹಿಂತಿರುಗುವ ಸರಣಿ!ಜಾಗತಿಕ ತೈಲ ಸರಬರಾಜಿಗೆ ಶಾಕ್ ⚠️
ಬಂಗಾಳದ ಸಿಂಹಾಸನಕ್ಕೆ ಸುವೇಂದು ಏರಿಕೆ — 15 ವರ್ಷದ ಮಮತಾ ಯುಗಕ್ಕೆ ಬ್ರೇಕ್!ಟಿಎಂಸಿ ಕೋಟೆ ಕುಸಿತ…
ಪತ್ರಿಕೋದ್ಯಮವೇ? ಪ್ರಚೋದನೆಯೇ? ಸುಳ್ಳು ಸುದ್ದಿಗೆ ಕೋಮು ಬಣ್ಣ ಆರೋಪದಲ್ಲಿ 7 ಮಾಧ್ಯಮಗಳ ವಿರುದ್ಧ FIR…!
30ಕ್ಕೂ ಹೆಚ್ಚು ರಾಕ್ಷಸರ ಕಪಿಮುಷ್ಟಿಯಲ್ಲಿ ನಲುಗಿದ 13 ವರ್ಷದ ಮಗು!-ಶ್ರೀಗಂಗಾನಗರದ ಪೈಶಾಚಿಕ ಕೃತ್ಯ
ತೈಲ ಟ್ಯಾಂಕರ್ ಮೇಲೆ ಇರಾನ್ ಆತ್ಮಹತ್ಯಾ ದೋಣಿ ದಾಳಿ – ಭಾರತೀಯ ನಾವಿಕ ಸಾವು
ಇರಾನ್ ಸಚಿವ ಅಬ್ಬಾಸ್ ಅರಾಘ್ಚಿ ಭಾರತಕ್ಕೆ… ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ BRICS ಸಭೆ ಮೇಲೆ ವಿಶ್ವದ ಗಮನ!ಜಾಗತಿಕ ಉದ್ವಿಗ್ನತೆಯ ನಡುವೆ ದೆಹಲಿ ರಾಜತಾಂತ್ರಿಕ ಕೇಂದ್ರಬಿಂದು!…
ಧೂಮಪಾನ ಮಾಡುತ್ತಿದ್ದೀರಾ? ನಿಮ್ಮ ಮುಖ ನಿಧಾನವಾಗಿ ನಾಶವಾಗುತ್ತಿದೆ…
ನಿಮ್ಮ ಮಾತು ಕೇಳಿ ರಾಜೀನಾಮೆ ನೀಡಿದ್ದೇನೆ. ಈಗ ನನ್ನ ಬೇಡಿಕೆ ಈಡೇರಿಸುವುದು ನಿಮ್ಮ ಸರದಿ  ಎಂದ ಸಿದ್ದರಾಮಯ್ಯ
“ಬರ್ಕಾಸ್ತು ಘಟಕಕ್ಕೆ ‘ಬೋಗಸ್ ನಾಯಕತ್ವ’ – ಕರವೇ ಮಹಿಳಾ ಘಟಕದಲ್ಲಿ ಭಿನ್ನಮತ ಸ್ಫೋಟ!”
ಬಂಗಾಳ ರಾಜಕೀಯದಲ್ಲಿ ಭಾರಿ ಟ್ವಿಸ್ಟ್ ಮೇಲೆ ಟ್ವಿಸ್ಟ್..! ಸುವೇಂದು ಪ್ರಮಾಣವಚನಕ್ಕೂ ಬ್ರೇಕ್ ಬೀಳುತ್ತಾ?ಸುಪ್ರೀಂ ಕೋರ್ಟ್ ಎಂಟ್ರಿ ಆಗುತ್ತಾ?
ಮುಂಬೈ ಬೀದಿಯಲ್ಲಿ ನಾರಿ ಶಕ್ತಿಯ ಸಿಡಿಲು!ಜನರ ಬದುಕು ಅಡ್ಡಗಟ್ಟಿದರೆ ಎದುರಿಸುವವರು ಹೀಗೆ ಒಬ್ಬೊಬ್ಬರೇ ಇನ್ನೂ ಹುಟ್ಟುತ್ತಾರೆ..
ಬರ್ಗಿ ಅಣೆಕಟ್ಟಿನಲ್ಲಿ ಭೀಕರ ದುರಂತ-ಕರುಳು ಹಿಂಡುವ ದೃಶ್ಯ ಅಮ್ಮ-ಮಗು ಅಪ್ಪಿಕೊಂಡೇ ಜಲಸಮಾದಿ ಸಂತೋಷದ ಪ್ರವಾಸದಿಂದ ಶೋಕದ ಸಾಗರಕ್ಕೆ
ಉಡುಪಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕಾನೂನುಬಾಹಿರ ಚಟುವಟಿಕೆ
ಮಂಗಳೂರು ಬಸ್‌ನಲ್ಲಿ ಗುಪ್ತಾಂಗ ತೋರಿಸಿ ಕಂಡಕ್ಟರ್ ವಿಕೃತ ವರ್ತನೆ: ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ಬಂಧನ
717 ಮದ್ಯದಂಗಡಿಗಳಿಗೆ ವಿಜಯ್ ಬ್ರೇಕ್‌! ತಮಿಳುನಾಡು ಖಜಾನೆಗೆ ಸಾವಿರಾರು ಕೋಟಿ ಶಾಕ್!
ಕುತ್ತಾರಿನಲ್ಲಿ ಸ್ಪೀಕರ್‌ನ್ನೇ ಜನರು ಸುತ್ತುವರಿದ ಶಾಕಿಂಗ್ ದೃಶ್ಯ! ಏನಾಯ್ತು ನಿಜವಾಗಿಯೂ?ಸಾಮಾಜಿಕ ಮಾಧ್ಯಮದಲ್ಲಿ ಸದ್ದು ಮಾಡುತ್ತಿರುವ ಕುತ್ತಾರು ವಾದವಿವಾದ!
ದೆಹಲಿ: ₹21.40 ಕೋಟಿ ಮೌಲ್ಯದ 15 ಕೆ.ಜಿ. ಚಿನ್ನ ವಶ ಅಂತರರಾಷ್ಟ್ರೀಯ ಕಳ್ಳಸಾಗಣೆ ಜಾಲ ಭೇದಿಸಿದ DR
ಹೊಸ ರಾಜಕೀಯ ಕ್ರಾಂತಿ! ಅಸ್ಸಾಂ ಕುದಿಯುತ್ತಿದೆ…ಹಿಂದುತ್ವ vs ಗುರುತು ರಾಜಕೀಯ…!
ಫ್ರಿಡ್ಜ್ ರಿಪೇರಿಗೆ ಬಂದವ ಮನೆ ಲೂಟಿ ಪರಾರಿ…!ಬಿ ಅಲರ್ಟ್ ‼️
2027ರಲ್ಲಿ ರಸ್ತೆಗಿಳಿಯಲಿರುವ EV ಕಾರ್ Avinya X ನೋಡಿದರೆ ಸಾಮಾನ್ಯ SUVಗಳನ್ನೇ ಮರೆತುಬಿಡುತ್ತಿರಾ…ಬರುತ್ತಿದೆ ಟಾಟಾದ ಅತ್ಯಂತ ದುಬಾರಿ ಕನಸು!
“ಧುರಂಧರ್ “ಸಿನಿಮಾವನ್ನೂ ಮೀರಿದ ಪಾಕ್ ಸಂಚನ್ನ ಭೇದಿಸಿದ ಕೇಂದ್ರ ಗುಪ್ತಚರ ಇಲಾಖೆ ಮತ್ತು ಕರ್ನಾಟಕ ಖಾಕಿ..