📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಸಾಲದ ಹಣ ಕೇಳಿದ ವಿಚಾರಕ್ಕೆ ಚೂರಿಯಿಂದ ಕೊಲೆ ಯತ್ನ..

ಪಡುಬಿದ್ರಿ ಸಮೀಪ ಸಾಲದ ಹಣ ಕೇಳಿದ ವಿಚಾರಕ್ಕೆ ಯುವಕನ ಮೇಲೆ ಚೂರಿಯಿಂದ ದಾಳಿ ನಡೆಸಿ ಕೊಲೆ ಮಾಡಲು ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಜಗೋಳಿ ಅಂಚೆ, ಕಾರ್ಕಳದ ಸುಮಿತ್ ಎಸ್. ಸುವರ್ಣ (29) ಹಾಗೂ ಧೀರಜ್ ಇಬ್ಬರೂ ಸ್ನೇಹಿತರಾಗಿದ್ದರು. ಸುಮಾರು ಎರಡು ವರ್ಷಗಳ ಹಿಂದೆ ಸುಮಿತ್ ಅವರು ಧೀರಜ್‌ಗೆ ₹2 ಲಕ್ಷ ಸಾಲವಾಗಿ ನೀಡಿದ್ದರು. ಆ ಹಣವನ್ನು ಆರು ತಿಂಗಳಲ್ಲಿ ಹಿಂತಿರುಗಿಸುವುದಾಗಿ ಧೀರಜ್ ಹೇಳಿದ್ದರೂ ಇದುವರೆಗೆ ಹಣವನ್ನು ನೀಡಿರಲಿಲ್ಲ.

ಮಾರ್ಚ್ 13ರಂದು ರಾತ್ರಿ ಸುಮಿತ್ ಅವರು ಕಾಪು ತಾಲೂಕಿನ ಹೆಜಮಾಡಿ ಗ್ರಾಮದ ಹೆಜಮಾಡಿ ಸ್ಟೇಡಿಯಂ ಬಳಿ ಧೀರಜ್ ಅವರನ್ನು ಭೇಟಿಯಾಗಿ ಸಾಲದ ಹಣವನ್ನು ಕೇಳಿದರು. ಈ ವೇಳೆ ಕೋಪಗೊಂಡ ಧೀರಜ್ “ಹಣ ಕೊಡುವುದಿಲ್ಲ” ಎಂದು ಹೇಳಿ ಸುಮಿತ್ ಮೇಲೆ ಕೈಯಿಂದ ಹಲ್ಲೆ ನಡೆಸಿದ್ದಾನೆ.

ನಂತರ ಹಣವನ್ನು ಮನೆಯಲ್ಲಿ ಕೊಡುತ್ತೇನೆ ಎಂದು ಹೇಳಿ ಸುಮಿತ್ ಅವರನ್ನು ತನ್ನ ದ್ವಿಚಕ್ರ ವಾಹನದಲ್ಲಿ ಕೂರಿಸಿಕೊಂಡು ಕರೆದುಕೊಂಡು ಹೋಗಿದ್ದಾನೆ. ಸ್ಟೇಡಿಯಂನಿಂದ ಸುಮಾರು 1 ಕಿ.ಮೀ ದೂರದಲ್ಲಿರುವ ಬಬ್ಬು ಸ್ವಾಮಿ ದೇವಸ್ಥಾನದ ಬಳಿ ರಾತ್ರಿ ಸುಮಾರು 11:50ಕ್ಕೆ ವಾಹನ ನಿಲ್ಲಿಸಿ, ಸುಮಿತ್ ಅವರನ್ನು ಇಳಿಸಿ ಚೂರಿಯಿಂದ ಹೊಟ್ಟೆಗೆ ತಿವಿದು ಕೊಲೆ ಮಾಡಲು ಯತ್ನಿಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಗಾಯಗೊಂಡ ಸುಮಿತ್ ಅವರನ್ನು ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 32/2026ರಡಿ BNS ಕಾಯ್ದೆಯ 115(1), 351(2), 352 ಮತ್ತು 109 ಕಲಂಗಳಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

#civil violence#crime#humnaity

COMMENTS

Login with Gmail to comment

ಇನ್ನಷ್ಟು ಸುದ್ದಿ

ಕಂದಾಯ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ
Top 5, ಹೆಚ್ಚು ಅನುದಾನ ಪಡೆದ ಇಲಾಖೆಗಳು ಯಾವವು ಗೊತ್ತಾ?
ಪೆಟ್ರೋಲ್ ಡೀಸೆಲ್ ದರ ಏರಿಕೆ ತಡೆಯಲು ಕೇಂದ್ರದ ಮಹತ್ವದ ಕ್ರಮ 
ಬಿಜೆಪಿಯನ್ನು ಹಿಂದಿಕ್ಕಿದ   ಜಿರಳೆ ಪಕ್ಷ..”ಕಾಕ್ರೋಚ್ ಜನತಾ ಪಾರ್ಟಿ”
ಮಾಜಿ ಮುಖ್ಯಮಂತ್ರಿಯ ಮೇಲೆ ಗುಂಡಿನ ದಾಳಿ,- Z+ ಭದ್ರತೆಯ ನಡುವೆ ದಾಳಿಕೋರ ಹೇಗೆ  ಬಂದ?
ಆಮಾದ್ಮಿ ಪಕ್ಷದ ಏಳು ಸಂಸದರು ಬಿಜೆಪಿಯ ತೆಕ್ಕೆಗೆ ರೈಟೋ?  ರಾಂಗೋ?
ನನ್ನನ್ನು ದುರ್ಬಲ ವ್ಯಕ್ತಿ ಅಂದುಕೊಳ್ಳಬೇಡಿ- U.T ಖಾದರ್
“ಅಪ್ರಾಪ್ತ ಅತ್ಯಾಚಾರ ಸಂತ್ರಸ್ತರಿಗೆ ಅಬಾರ್ಷನ್ ಮಾಡಲು ಆದ್ಯತೆ ,ಕಾನೂನು ತಿದ್ದುಪಡಿ”- ಸುಪ್ರೀಂ ಕೋರ್ಟ್
ಘೋರ ಭಾನುವಾರ, ಒಂದೇ ಕುಟುಂಬದ ಎಂಟು ಮಹಿಳೆಯರ ದುರ್ಮರಣ
ಚಿಕ್ಕಸ್ವಾಮಿ-ದೊಡ್ಡಸ್ವಾಮಿ ಭಕ್ತರ ಮಿಲನ! ಕಾಶಿಮಠ ವಿವಾದಕ್ಕೆ ಸಂಯಮೇ೦ದ್ರ ಮದ್ದು
ತಮಿಳುನಾಡು ಮುಖ್ಯಮಂತ್ರಿ ವಿಜಯ್, ಚಧುರಂಗದಾಟದಲ್ಲಿ ಲಾಂಗ್ ಟೈಮ್ ಉಳಿಯುವರೇ?
“ವಾಹನ ಮಾರಾಟ-RC ಬದಲಾವಣೆ  ಅಗತ್ಯ.. ಇಲ್ಲವಾದರೆ ಕಾನೂನು ಸಮಸ್ಯೆಗಳು ತಪ್ಪಿದ್ದಲ್ಲ..!” ಹೈಕೋರ್ಟ್
“ಮಂಗಳೂರಲ್ಲಿ ಡ್ರೈ ಡೇ ಘೋಷಣೆ -ಎರಡು ದಿನ ಬಾರ್‌ಗಳಿಗೆ ಲಾಕ್ ..!” ದಕ್ಷಿಣ ಕನ್ನಡದಲ್ಲಿ ಕಟ್ಟುನಿಟ್ಟಿನ ಆದೇಶ
ಅಕ್ರಮ ಡಿಸೇಲ್ ದಾಸ್ತಾನು ಪ್ರಕರಣ: 4,175 ಲೀಟರ್ ಡಿಸೇಲ್ ಕಂದಾಯ ಇಲಾಖೆಯಿಂದ ಹರಾಜು – ₹2.35 ಲಕ್ಷಕ್ಕೆ ಮಾರಾಟ!
ಮುದ್ದಾದ ಅವಳಿ ಹೆಣ್ಣು ಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ಅಪ್ಪ
ಅಮಾವಾಸ್ಯೆ ಬೈಲ್ ಪೊಲೀಸ್ ಠಾಣೆಯಲ್ಲಿ ಜೀವ ಬೆದರಿಕೆ ಹಾಗೂ ನಿಂದನೆಯ ಪ್ರಕರಣ ದಾಖಲು
ಮಂಗಳೂರು ಏರ್‌ಪೋರ್ಟ್ ಬಳಿ ಬರ್ತಿದೆ ಲಕ್ಸುರಿ ಇಂಟರ್‌ನ್ಯಾಷನಲ್ ಹೋಟೆಲ್!
ಗಂಜಿಮಠದತ್ತಿರ ಕಣ್ಣಿಗೆ ಖಾರದ ಪುಡಿ ಎರಚಿ ಹಣ ದೋಚಿ ಪರಾರಿಯಾದ ಆರೋಪಿಗಳು ರಸ್ತೆ ಮಧ್ಯೆ ಯೋಜಿತ ದರೋಡೆ …!
“ಪ್ರಜಾಪ್ರಭುತ್ವದ ಮೇಲೆ ದಾಳಿ”ಸುಪ್ರೀಂ ಕೋರ್ಟ್ ಕಿಡಿ: ಇದು ಪ್ರತಿಭಟನೆ ಅಲ್ಲ, ಸಂಚು!”
165 ಹೆಣ್ಮಕ್ಕಳು ತಮ್ಮದಲ್ಲದ ತಪ್ಪಿಗೆ ಹತ್ಯೆಗೆ ಒಳಗಾದರು 
ಸಿಐಡಿ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್: ವಂಚಕರ ಬಲೆಯಿಂದ ಜಸ್ಟ್ ಎಸ್ಕೇಪ್
ಸ್ಟೇಟ್ ಬ್ಯಾಂಕ್ ಮೀನು ಮಾರುಕಟ್ಟೆಗೆ ಭೇಟಿ ನೀಡಿದ ಡಾ. ನಾಗಲಕ್ಷ್ಮಿ ಚೌಧರಿ – ಮಹಿಳಾ ಮೀನುಗಾರರ ಸಮಸ್ಯೆ ಆಲಿಕೆ
ಅಕ್ರಮ ಪ್ರವೇಶ, ದೌರ್ಜನ್ಯ, ಹಾಗೂ ಕೃಷಿ ಚಟುವಟಿಕೆಗೆ ತಡೆಯ ಬಗ್ಗೆ ದೂರು ದಾಖಲು
ಉಡುಪಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕಾನೂನುಬಾಹಿರ ಚಟುವಟಿಕೆ
ಕೊನೆಗೂ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಿತೀಶ್ ಕುಮಾರ್
ಕರ್ನಾಟಕದಲ್ಲಿ 2 ಲಕ್ಷಕ್ಕೂ ಹೆಚ್ಚು ನಾಯಿ ಕಚ್ಚಿದ ಪ್ರಕರಣಗಳು …!ನಗರಗಳಲ್ಲಿ ‘ಸ್ಟ್ರೇ ಡಾಗ್ ಟೆರರ್’ — ಜನರು ಭಯದಲ್ಲಿ ಬದುಕುತ್ತಿದ್ದಾರೆ!
ಸರ್ಕಾರಿ ವೈದ್ಯರ ಅನರ್ದಿಷ್ಟಾವಧಿ ಮುಷ್ಕರ ರದ್ದು
ಭಾರತದ ಹಡಗಿಗೆ ಗ್ರೀನ್ ಸಿಗ್ನಲ್ ನೀಡಿದ ಇರಾನ್ 
ಉಪಚುನಾವಣೆ ಮುಗಿಯುತಿದ್ದಂತೆಯೇ, ವಿದ್ಯುತ್ ದರ ಏರಿಸುತ್ತಿರುವ ರಾಜ್ಯ ಸರ್ಕಾರ
ಗಂಡನ ಮನೆಯಿಂದ ಯುವತಿಯನ್ನು ಎಳೆದೊಯ್ದರು