📍 Karavali Maruta
  • LOGIN
  • BREAKING
    ‘ಮೇಡ್ ಇನ್ ಮಂಗಳೂರು’ ಹಡಗು ಜರ್ಮನ್ ಸಂಸ್ಥೆಯ ತೆಕ್ಕೆಗೆ; ವಿಶ್ವದ ಗಮನ ಸೆಳೆದ ಚೌಗುಲೆ ಶಿಪ್‌ಯಾರ್ಡ್! ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಸಿಎಂ ಕುರ್ಚಿಯನ್ನು, ಡಿಕೆಗೆ ಮಗ್ಗಲ ಮುಳ್ಳನ್ನಾಗಿಸಲು ಸಕಲ ತಯಾರಿ

    ಇನ್ನೂ ಮುಖ್ಯಮಂತ್ರಿ ಸ್ಥಾನಕ್ಕೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿಲ್ಲ, ಇಂದು ಸಂಜೆಯ ಹೊತ್ತಿಗೆ ಅವರು ರಾಜೀನಾಮೆ ನೀಡುವುದು ಬಹುತೇಕ ಖಚಿತವಾಗಿದೆ. ಆದರೆ, ನಿಯೋಜಿತ ಮುಖ್ಯಮಂತ್ರಿ ಎಂದೇ ಹೇಳಲಾಗುವ ಡಿಕೆ ಶಿವಕುಮಾರ್ ಗೆ ಆ ಕುರ್ಚಿ ವಿಪರೀತ ಕಷ್ಟವನ್ನುಂಟುಮಾಡಲಿದೆ ಅನ್ನುವುದಂತೂ ಪಕ್ಕಾ ಆಗಿದೆ.

    ಈಗಾಗಲೇ, ಮುಂದೆ ಏನು ಮಾಡಬೇಕೆನ್ನುವುದರ ಪ್ಲಾನುಗಳು ತಯಾರಾಗುತ್ತಿವೆ. ಡಿಕೆ ಶಿವಕುಮಾರ್ ಶುಕ್ರವಾರ ಅಥವಾ ಭಾನುವಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವುದು ಬಹುತೇಕ ನಿಘಂಟಾಗಿದೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಡಿಕೆ ಶಿವಕುಮಾರ್ಗೆ ಮುಖ್ಯಮಂತ್ರಿ ಮಾಡಬೇಡಿ ಅಂತ ರಾಹುಲ್ ಗಾಂಧಿಯ ಮುಂದೆ ಬೇಡಿಕೆ ಇಟ್ಟಿದ್ದರು. ಆದರೆ ರಾಹುಲ್ ಗಾಂಧಿ, ಅವರ ಬೇಡಿಕೆಗೆ ಒಪ್ಪಲು ಸಾಧ್ಯವೇ ಇರಲಿಲ್ಲ. ಸೋನಿಯಾ ಗಾಂಧಿ ಹಾಗೂ ಪ್ರಿಯಂಕಾ ಗಾಂಧಿ ಇಬ್ಬರು ಡಿಕೆ ಶಿವಕುಮಾರ್ ಪರವಾಗಿ ಗಟ್ಟಿಯಾಗಿ ನಿಂತಿದ್ದರು. ರಾಹುಲ್ ಗಾಂಧಿ ಈ ವಿಚಾರದಲ್ಲಿ ಸಿದ್ದರಾಮಯ್ಯಗೆ ಸಹಕರಿಸಲು ಸಾಧ್ಯವಿರಲಿಲ್ಲ. ಹಾಗಾಗಿಯೇ ರಾಹುಲ್ ಗಾಂಧಿ ಸಿದ್ದರಾಮಯ್ಯಗೆ ಬೇರೆಯದೇ ಆದ ದೊಡ್ಡ  ಅಸ್ತ್ರವನ್ನು ಕೊಟ್ಟಿದ್ದಾರೆ. ಮುಂದಿನ ಸಚಿವ ಸಂಪುಟದಲ್ಲಿ ನಿಮಗೆ ಬೇಕಾದವರಿಗೆ 20 ಸಚಿವ ಸ್ಥಾನವಿರುತ್ತದೆ. ಆಸ್ಥಾನವನ್ನು ನೀವು ಯಾರಿಗೆ ಬೇಕಾದರೂ ನೀಡಬಹುದು ಎಂಬ ಅಸ್ತ್ರವನ್ನು ಸಿದ್ದರಾಮಯ್ಯರಿಗೆ ನೀಡಿದ್ದಾರೆ. ಹಾಗೆಯೇ, ನಾಲ್ಕು ಡಿಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಬೇಡಿಕೆ ಇಟ್ಟಿದ್ದರು. ಇದಕ್ಕೆ ಡಿಕೆ ಶಿವಕುಮಾರ್ ಪ್ರಬಲ ವಿರೋಧವನ್ನು ಒಡ್ಡಿದ್ದಾರೆ. ಸಿದ್ದರಾಮಯ್ಯ ಸರ್ಕಾರದಲ್ಲಿ ನಾನೊಬ್ಬನೇ ಡಿಸಿಎಂ ಆಗಿದ್ದೆ. ಈಗಲೂ ಡಿಸಿಎಂ ಒಬ್ಬರೇ ಆಗಿರಬೇಕು ಅನ್ನುವುದು ಡಿಕೆಶಿ ಪ್ರತಿಪಾದನೆ. ಅದೇ ರೀತಿ, ಸಿದ್ದರಾಮಯ್ಯರಿಗೆ ಈ ಮೂರು ವರ್ಷಗಳ ಕಾಲ ಎಷ್ಟು ಸ್ವಾತಂತ್ರ್ಯವಿತ್ತೋ ಅಷ್ಟೇ ಸ್ವಾತಂತ್ರ್ಯ ನನಗಿರಬೇಕು ಅನ್ನುವ ಬೇಡಿಕೆಯನ್ನು ರಾಹುಲ್ ಗಾಂಧಿ ಮುಂದೆ ಡಿಕೆಶಿ ಇಟ್ಟಿದ್ದಾರೆ. ಎರಡುವರೆ ವರ್ಷ ಆಡಳಿತದ ನಂತರ ಕೊಡಬೇಕಿದ್ದ ಅಧಿಕಾರವನ್ನು 3 ವರ್ಷದವರೆಗೆ ಸಿದ್ದರಾಮಯ್ಯನವರು ಅನುಭವಿಸಿದ್ದಾರೆ. ಮತ್ತೆ ಈಗ, ನನ್ನ ಅಧಿಕಾರದ ಅವಧಿಯಲ್ಲಿ ಪದೇ ಪದೇ ಬಂದು ಅಧಿಕಾರ ಚಲಾಯಿಸುವುದು ನನಗೆ ಸುತಾರಾಮ್ ಇಷ್ಟವಿಲ್ಲ ಎಂದು ಡಿಕೆಶಿ ಖಡಕ್ಕಾಗಿ ಹೇಳಿದ್ದರೂ, ರಾಹುಲ್ ಗಾಂಧಿ ಆ ವಿಚಾರದಲ್ಲಿ ಮೌನರಾಗಿದ್ದಾರೆಂದು ತಿಳಿದು ಬಂದಿದೆ. 

    ಇಂದು ಬೆಳಗ್ಗಿನ ಬ್ರೇಕ್ ಫಾಸ್ಟ್ ಮೀಟಿಂಗ್ ಮುಗಿದಿದೆ. ಆಪ್ತ ಶಾಸಕರು ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ ಆಪ್ತ ಸಮಾಲೋಚನೆ ಮಾಡಿದ್ದಾರೆ. ಗೃಹ ಸಚಿವ ಪರಮೇಶ್ವರ್ ಹಾಗೂ ಇಂಧನ ಸಚಿವ ಜಾರ್ಜ್ ಇಬ್ಬರು ಮುಂದಿನ ಸಂಪುಟದಲ್ಲಿ ತಾವು ಇರುವುದಿಲ್ಲ ಅಂತ ಹೇಳಿಕೊಳ್ಳುತ್ತಿದ್ದಾರೆ. ಈಗಾಗಲೇ ಅವರಿಗೆ ಮಾಹಿತಿ ಹೋಗಿದೆ. ಡಿಕೆ ಸಂಪುಟದಲ್ಲಿ ಯುವ ಮುಖಗಳಿಗೆ ಹೆಚ್ಚಿನ ಆದ್ಯತೆ ನೀಡುವ ಸಾಧ್ಯತೆ ಇರುವುದರಿಂದ, ತಮಗೆ ಸ್ಥಾನ ಸಿಗುವುದು ಡೌಟ್ . ಹಾಗಾಗಿಯೇ ತಾವಾಗಿಯೇ ತಾವು ಡಿಕೆಶಿ ಸಂಪುಟದಲ್ಲಿ ಸಚಿವರಾಗುವುದಿಲ್ಲ ಅಂತ ಹೇಳುವ ಮೂಲಕ ಹೊಸ ದಾಳ ಉರುಳಿಸಲು ತಯಾರಿ ನಡೆಸಿದಂತಿದೆ. ಒಟ್ಟಿನಲ್ಲಿ ಇಂದು ಸಿಎಂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದು ಖಚಿತ, ರಾಜ್ಯಪಾಲರು ಊರಿನಲ್ಲಿಲ್ಲದ ಕಾರಣ ಅವರ ರಾಜೀನಾಮೆಯನ್ನು ಪರಿಶೀಲಿಸಿ ಅಕ್ಸೆಪ್ಟ್ ಮಾಡುವುದು ಯಾವಾಗ? ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುವುದು ಯಾವಾಗ ಅನ್ನುವುದು ರಾಜ್ಯಪಾಲರು ಆಗಮಿಸಿದ ನಂತರವೇ ಗೊತ್ತಾಗಲಿದೆ?

    ಒಂದಂತೂ ಸತ್ಯ, ಡಿಕೆಶಿಗೆ ಸಿಎಂ ಕುರ್ಚಿಯನ್ನು ಮಗ್ಗಲು ಮುಳ್ಳನ್ನಾಗಿಸಲು ಏನೆಲ್ಲ ಮಾಡಬೇಕು ಅದೆಲ್ಲವನ್ನು ಸಿಎಂ ಸಿದ್ದರಾಮಯ್ಯ ಹಾಗೂ ಅವರ ತಂಡ ಮುಂದಿನ ದಿನದಲ್ಲಿ ಹಂತ ಹಂತವಾಗಿ ಮಾಡಲಿದೆ. ಇದಕ್ಕೆ ಡಿಕೆ ಶಿವಕುಮಾರ್ ಹೇಗೆ ಎದುರಿಸುತ್ತಾರೆ, ಪ್ರತ್ಯುತ್ತರ ನೀಡುತ್ತಾರೆ ಎನ್ನುವುದು ನಿಗೂಢ ವಿಚಾರ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆಯ ಕ್ರೆಡಿಟ್ ಪಡೆದುಕೊಳ್ಳಲು ಶುರುವಾಯಿತು ಫೈಟ್
    book ಮಾಡಿದ ನಿಮ್ಮ ಹೊಸ ಕಾರು-ಬೈಕ್ ಇನ್ನೂ ಬಂದಿಲ್ವಾ?ಪಶ್ಚಿಮ ಏಷ್ಯಾ ಯುದ್ಧದಿಂದ ಸರಬರಾಜು ವಿಳಂಬ…!
    ಲಂಚದ ವಿರುದ್ಧ ದೂರು ನೀಡಿದ್ದಕ್ಕೆ ರೈತನ ಮಗನ ವೃಷಣಗಳನ್ನೇ ಒಡೆದ ಪೊಲೀಸ್ ಕ್ರೌರ್ಯ!
    ಪರಸ್ತ್ರೀ ಹುಂಡಿಗೆ  ಒಂದುವರೆ ಕೋಟಿ ಅಪಾರ್ಟ್ಮೆಂಟ್, ಮಾಜಿ ಶಾಸಕನ ರಂಗಿನಾಟ 
    ನಿರ್ಮಾಣ ಹಂತ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು-  ಶಣೈ ಮೇಲೆ ಕೇಸು
    ತಮಿಳುನಾಡು ರಾಜಕೀಯದಲ್ಲಿ ದಿನಕ್ಕೊಂದು ಟ್ವಿಸ್ಟ್ -TVK wave ಎಷ್ಟು ದೂರ ಸಾಗುತ್ತದೆ?
    ಮೋದಿ ಅವರ ನಿರ್ಧಾರಗಳು“ದೀರ್ಘಕಾಲೀನ ಅಭಿವೃದ್ಧಿಗೆ ಜವಾಬ್ದಾರಿಯುತ ನೀತಿಗಳು” ಆತಂಕದ ಸೂಚನೆ ಅಲ್ಲ-ಎಸ್.ಎಸ್. ನಾಯಕ್
    ಕಮ್ ಬ್ಯಾಕ್ ಮಾಡಿದ ಮುಂಬೈ ಇಂಡಿಯನ್, ಕ್ಯಾಪ್ಟನ್ ಪ್ರೇರಣೆಗೆ ವರ್ಮಾ ಬ್ಯಾಟಿನಿಂದ  ಮೊದಲ ಸೆಂಚುರಿ
    ಅಗತ್ಯ ಮಾಹಿತಿ ಇಲ್ಲಿದೆ ಓದಿ..!“ಎಲ್‌ಪಿಜಿ ಬುಕಿಂಗ್‌ಗೆ ಹೊಸ ನಂಬರ್‌ಗಳು: ಆತಂಕ ಬೇಡ, ಸರಬರಾಜು ಶೀಘ್ರ ಸಾಮಾನ್ಯಕ್ಕೆ!”
    ಪಶ್ಚಿಮ ಘಟ್ಟದ ಕಸ್ತೂರಿರಂಗನ್ ವರದಿಗೆ ಬ್ರೇಕ್?…ವಿಶೇಷ ಅಧಿವೇಶನಕ್ಕೆ ಸರ್ಕಾರ ಸಿದ್ಧತೆ
    Pahalgam ದಾಳಿಗೆ ಪ್ರತೀಕಾರ ತೀರಿಸಿದ್ದ ‘ಆಪರೇಷನ್ ಸಿಂದೂರ್’: ವರ್ಷದ ಬಳಿಕ ಹುತಾತ್ಮ ಯೋಧರ ವಿವರ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ…
    ಶೈಕ್ಷಣಿಕ ವರ್ಷ ಆರಂಭ, ನೋಟ್‌ಬುಕ್‌ನಿಂದ ಆಟೋವರೆಗೆ ಎಲ್ಲ ಖರ್ಚು ಗಗನಕ್ಕೆ….ಪೋಷಕರಿಗೆ ದುಬಾರಿ ಹೊರೆ
    ಬಿಡದಿ “ಸಮಗ್ರ ಉಪನಗರ” ಯೋಜನೆ ಕೈಬಿಡಿ: ಸಿಎಂ ಡಿಕೆ ಶಿಗೆ ಎಚ್.ಡಿ. ದೇವೇಗೌಡ ಪತ್ರ
    ಡಾನ್ ಹೇಮಂತ್ ಪೂಜಾರಿ ಸಹೋದರ ವಶಕ್ಕೆ?!?
    ಮಂಗಳೂರು ಶಾಲಾ ದಾಖಲಾತಿ ಅಂದೋಲನ-ಎಲ್ಲ ಮಕ್ಕಳಿಗೂ ಶಾಲೆಯ ಹಕ್ಕು …
    ದೇಶಕ್ಕಾಗಿ ಹಾರಿದ ಯುವ ಪೈಲಟ್: ಅಸ್ಸಾಂ ದುರಂತದಲ್ಲಿ ಐಎಎಫ್ ಅಧಿಕಾರಿ ವೀರಮರಣ
    “ಜೆನ್‌ ಜಿಯ ಧ್ವನಿ ದೇಶದ್ರೋಹವಲ್ಲ” – ಶಿಕ್ಷಣ ಸುಧಾರಣೆಗೆ ಎದ್ದ ಯುವ ಆಕ್ರೋಶಕ್ಕೆ RSS ಮೋಹನ್ ಭಾಗವತ್ ಬೆಂಬಲ…..
    ಆಪಲ್‌ಗೆ ಭಾರತದಲ್ಲಿ ದೊಡ್ಡ ಕಾನೂನು ಶಾಕ್? App Store ನಿಯಮಗಳ ಮೇಲೆ ಆಪಲ್ vs ಭಾರತ CCI ಜಟಾಪಟಿ 
    ‘ಸೈಯಾರಾ’ ಶೀರ್ಷಿಕೆ ಗೀತೆಗೆ ಸಿಕ್ಕ ರಾಯಲ್ಟಿ ನಿರಾಶಾದಾಯಕ: ಸಂಗೀತ ಸಂಯೋಜಕ ತನಿಷ್ಕ್ ಬಾಗ್ಚಿ ಬೇಸರ
    ಹೋಟೆಲ್, ಕೆಫೆ ಬಿಸಿ ಬಿಸಿ ಪ್ಲಾಸ್ಟಿಕ್ ಲ್ಲಿ ಪಾರ್ಸೆಲ್‌ಗೆ ಬ್ರೇಕ್ –ಹಾಗೆ 5ರೂ 10ರೂ ಬೀಡಿ ಸಿಗರೇಟ್ ಗುಟ್ಕಾಕ್ಕೆ ₹1000 ದಂಡ ಕಟ್ಟಬೇಕಾದಿತು ಎಚ್ಚರ …!
    ಲಕ್ಷ ಫೀಸ್ ಕೊಟ್ಟರೂ ಸಿಗದ ಶಿಕ್ಷಣ ಇಲ್ಲಿ ಉಚಿತ! 15 ಮಕ್ಕಳ ಪುಟ್ಟ ಶಾಲೆಯ ದೊಡ್ಡ ಸಾಧನೆ
    ಎರಡು ಭೀಕರ ಕ್ಷಣಗಳು!ಒಂದು ರನ್‌ವೇಯಲ್ಲಿ ಸಾವು… ಮತ್ತೊಂದು ರನ್‌ವೇಯಲ್ಲಿ ಅದ್ಭುತ ಪಾರು!
    ಪೊರಕೆ ಹಿಡಿದ ಕೈಯಲ್ಲಿ ಫಾರ್ಚೂನರ್ ಕನಸು! SI ಬೆಳ್ಳಿಯಪ್ಪ ,ಸೇಸಪ್ಪನ ಬದುಕಿಗೆ ಹೊಸ ತಿರುವು….?!!!
    ವೆಟ್-ವೆಲ್‌ಗಳ ಕಳಪೆ ನಿರ್ವಹಣೆಚರಂಡಿ-ಬಾವಿಗಳಿಗೆ ಡ್ರೈನೇಜ್ ನೀರು..
    ಸೂರ್ಯನ ತಾಪಕ್ಕೆ ಜೋಗ ಜಲಪಾತ ದೊಡ್ಡ ಬಂಡೆಯೇ ಒಡೆಯಿತು..ಮಾನವನಿಗೆ ಅಪಾಯ ಇನ್ನಷ್ಟು!
    ಬಿಹಾರ ದೇವಸ್ಥಾನದಲ್ಲಿ ಭೀಕರ ಕಾಲ್ತುಳಿತ: 7 ಭಕ್ತರು ಸಾವು
    ಪರಮೇಶ್ವರ ವಿರುದ್ಧ FIR-₹500 ಬೆಟ್ಟಿಂಗ್ ಹೇಳಿಕೆಗೆ ಕಾನೂನು ಕ್ರಮ.
    ಹಂತಕರ ಹಿಂದೆ ಯಾರಿದ್ದಾರೆ? ಉಡುಪಿ ಪೊಲೀಸರ ನೆಕ್ಸ್ಟ್ ಟಾರ್ಗೆಟ್…?
    ಕಸ ಎಸೆದರೆ ದುಪ್ಪಟ್ಟು ದಂಡ: ಬೆಂಗಳೂರು ಶುರು ಮಾಡಿದೆ, ಮಂಗಳೂರು ಯಾವಾಗ? ಈಗ ಮಾತಲ್ಲ, ಕಠಿಣ ಕಾರ್ಯಾಚರಣೆ ಬೇಕು,ಕಟ್ಟುನಿಟ್ಟಿನ ಕ್ರಮಗಳಾಗ್ಬೆಕ್ ..
    ಬಾಗಲಕೋಟೆ ಜಿಲ್ಲೆ ಕೆರೂರು ಠಾಣೆಯಲ್ಲಿ ಪಿಎಸ್ಐ & ಪೇದೆ ₹1.70 ಲಕ್ಷ ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ!